ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ಯಾಕೆ ದೇವಿ ಮುನಿಸು ಮಾತಾಡೇ| ನಿನ್ನ ಹಿಡಿದ ಛಲ ಗೆಲಿಸಿದ ಬಳಿಕ ಪ ಘನ ಮಳೆಗರವ ಜೀಮ್ಯೂತಮ್ಯಾಲೇ|ತಾ| ಮುನಿಪ ಕೋಪದಿ ಪೋಗುತಲಿಹ| ಮನ ದೊಳಗಿದ್ದ ಚಾತಕನಂತೆ ನಿನ್ನ ಮ್ಯಾಲೆ| ವನರುಹ ನೇತ್ರ ನಾ ಮುನಿದುದು ಕಾಣೆ 1 ಸಂಗತಿಲ್ಲದೆ ನಿನ್ನಾಂಗ ನಟ್ಟುಳಿಯಿಂದ| ಭಂಗ ಗೊಂಡಿಹುದು| ತುಂಗ ಪಯೋಧರೆನ್ನಂಗ ತೋಷಿಸುವ ತಾ| ಲಿಂಗನ ಗೈಯೆ ನೀ ಮಂಗಳವದನೇ 2 ನಿನ್ನಿಂದಾಗಲಿ ಮತ್ತ ನನ್ನಿಂದಾಗಲಿ ಇನ್ನು ಮುನ್ನಾದ ಮನದ ಗಂಟು ಬಿಟ್ಟು| ಪನ್ನಗವೇಣಿ ಮಾತಾಡೇ ಸದ್ಗುಣದ ಸಂ| ಪನ್ನೇ ಮಹಿಪತಿ ಸುತಗೊಲಿದ ಶ್ರೀದೇವಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧೀಮಂತರ ದಯಪಡೆದು ಮಾಧವನ ಪದ ವಿಡಿದು | ಪ್ರೇಮದಿ ಭಜಿಸೆನ್ನ ಮನವೇ | ಪ ಕಾರ್ಮುಗಿಲದುಗ್ಧರಾಶಿಯನು ಶೃತಿಗೆ ಬೀಳಲ್ಪ | ಯೋರ್ಮನದಿ ಸಂತೋಷಿಪಂತೇ ನಿರ್ಮಳಾಂಗಣ ಕಥೆಯ ಘೋಷವೇನು ಕೇಳಿ ಅತಿ | ಪೆರ್ಮೆಯಿಂದಲೆ ನಲಿದು ಬಾಳು 1 ನೋಡಲಾಕ್ಷಣ ತನ್ನ ಮಾತೆಯನು ಮುದದಲಿಂ | ಲೋಡಿ ಬಪ್ಪುವ ಶಿಶುವಂತೆ | ರೂಢಿಯೊಳು ಸಜ್ಜನರ ಕಂಡಾಕ್ಷಣಕ ತನುವ | ನೀಡಿ ಸಾಷ್ಟಾಂಗದಿಂದೆರಗು 2 ಮಿಗಿಲಾಸೆಯನು ತ್ಯಜಿಸಿ ದಾಗಸದ-ಲಿಂಬರ್ವ | ನಿಗಳುಂಬ ಚಾತಕನ ತೆರದಿ | ಮುಗಳೆ ದಯದಿಂದ ಸಜ್ಜನ ಮುಖದಿ ಬಪ್ಪಬೋ | ಧೆಗಳ್ಪೊತನು-ವಾನುಗ್ರಹಿಸು ಧರಿಸು 3 ಮಣಿ ದೀಪವಾದಂತೆ ಸ | ಪಾದ ಕಮಲಗಳಾ | ಅತ್ಯಧಿಕ ಹರುಷದಿಂ ಹೃದಯದೊಳ್ ಧರಿಸಲ್ಕೆ | ಮೊತ್ತದ ಜ್ಞಾನ ತೊಳಗುವದು 4 ಗರ ಹೊಡೆದು | ಧರಿಯೊಳಗ ಗರ್ವಿಸಲಿ ಬ್ಯಾಡಾ | ಸಿರಿಯು ತೊಲಗಲು ಕುನ್ನಿಯಂತನ್ನ ದಾಸಿಂಗೆ | ಪರರು ಮನವಡಿದು ಬಳಲದಿರು 5 ಕಮಲಜನ ಪದಕ ಕತ್ತದೀವರ ಅನುಮತದ | ವಿಮಲಮಾರ್ಗ ಹೊಲಬ ನರಿದು | ಅಮಲೂಧ್ರ್ಪ ಪೌಂಡ್ರ ಹರಿ ಲಾಂಛನವು ತುಳಸಿ ಸರ ಕ್ರಮದಿಂದ ಧರಿಸಿ ಸುಖಿಯಾಗು 6 ಹರಿಪರದೈವವೆಂದು ಅರಿತು ಭಾವದಿ ನಿಂದು | ಹರಿ ಕೋಟಿ ನಿಭಕ ಮಿಗಿಲೆನಿಸಿ | ಮೆರೆವ ಮಹಿಪತಿ ನಂದನೋಡಿಯ ನಾಮಂಗಳನು | ಸ್ಮರಿಸಿ ಇರಳ್ಹಗಳ ಕೊಂಡಾಡು 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು