ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಂದಾಸ್ತುತಿಗಳು ಎನ್ನ ಕೈಬಿಡುವೆಯೇನೋ ಪ ನಿನ್ನ ನಂಬಿದೆನಯ್ಯ ಭಕ್ತವತ್ಸಲನೆಂದು ಭಾರ ನಿನಗಿರೆ ಅ.ಪ ತಾಪಸಿಯಂತೆ ನಿನ್ನ ವಕ್ಷವನೊದ್ದು ತಾಪವನು ತೋರ್ಪಿದೆನೇನೋ ಗೋಪಿಯಂದದೆ ನಿನ್ನ ಒರಳಿಗೆ ಬಿಗಿದೆನೇ ಭೂಪ ಶಿಶುಪಾಲನಂದದೆ ಬೈದೆನೇ [ಚಾಪವಿಟ್ಟು] ಭೀಷ್ಮನಂದದೆ ಕಾದಿಪೆನೇನೋ ಶ್ರೀಪತಿ ನೀನೆನ್ನ ದೂರ ಮಾಡುವೆಯಲ್ಲ 1 ಜಾರಚೋರನು ನೀನೆಂದು ಯಶೋದಗೆ ದೂರು ಹೇಳದೆನೇ ಕೌರವನಂತೆ ಕಂಬಕೆ ಕಟ್ಟಿರೆಂದೆನೆ ಸಾರಿದೆನೇನೋ ಸತ್ರಾಜಿತನಂತೆ ಚಾರುರತ್ನವ ಕದ್ದ ಅಪರಾಧಿ ನೀನೆಂದು ಆ ರುಕ್ಮನಂತೆ ನಾರಿಚೋರನೆಂದೆನೆ 2 ಪುರುಹೂತನಂತೆ ನಾನು ಮಳೆಯಕರೆದು ಗಿರಿಯನ್ನು ಹೊರಿಸಿದೆನೇ ಧರಣಿಯ ಬಲಿ[ಯಿಂದ ಬೇಡುತಲಿರುವಾಗ ವರಮುನಿಯಂತೆ ಕಿಂಡಿಯ ಮುಚ್ಚಿದೆನೆ] ನರನಂತೆ ರಥವ ನಡಸೆಂದು ಹೇಳಿದೆನೇನೋ ಉರಗನಂತೆ ಕಟ್ಟಿದೆನೇ ಮಾಂಗಿರಿರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೊರೆಗಳಿಗೆ ಯದುಪತಿ ಗರವು ಹಮ್ಮನೆ ಬಿಟ್ಟುಬರಬೇಕು ಎಂದು ಹಸೆಮೇಲೆಹಸೆಮೇಲೆ ಹರುಷದಲೆಮುದದಿ ಪಾಂಡವರು ಬರಬೇಕು ಪ.ನೂರು ಸೂರ್ಯನ ಬೆಳಕಿನಥೋರ ಮುತ್ತಿನ ಹಸೆಗೆವೀರಪಾಂಡವರು ಬರಬೇಕುಬರಬೇಕು ಎನುತಲೆನಾರಿ ರುಕ್ಮಿಣಿಯು ಕರೆದಳು 1ಮತ್ತೆ ಸೂರ್ಯನ ಬೆಳಕಿಲಿವಿಸ್ತರಿಸಿದಹಸೆಮ್ಯಾಲೆಚಿತ್ತೈಸಬೇಕು ಐವರುಚಿತ್ತೈಸಬೇಕು ಐವರು ಎನುತಲಿಸತ್ಯಭಾಮೆಯು ಕರೆದಳು 2ಥೋರ ಮುತ್ತಿನ ಹಸೆಗೆಚಾರುರತ್ನವ ರಚಿಸಿವೀರ ಪಾಂಡವರÀ ಕರೆದರುವೀರ ಪಾಂಡವರÀ ಕರೆದರುಆರು ನಾರಿಯರು ಹರುಷದಿ 3ಹದಿನಾರು ಸಾವಿರ ಚದುರೆಯರುಹರುಷದಿ ಅದ್ಬುತವಾಗಿಬೆಳಗೋಹಸೆ ಮೇಲೆಅದ್ಬುತ ಬೆಳಗೊ ಹಸೆಮೇಲೆಮುದದಿ ಪಾಂಡವರ ಕರೆದರು 4ವೀರ ರಾಮೇಶನ ತಂಗಿಯರುಪೋರಬುದ್ಧಿಯಬಿಟ್ಟುನಾರಿಯರು ಬನ್ನಿರಿಹಸೆಮ್ಯಾಲೆಹಸೆಮ್ಯಾಲೆ ಹರುಷದಿನೂರು ನಾರಿಯರು ಕರೆದರು 5
--------------
ಗಲಗಲಿಅವ್ವನವರು