ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಉ) ಲೋಕನೀತಿ ಕುರಿತ ಕೀರ್ತನೆಗಳು ಏಳಿಸು ನಂಜನನೂ ಬೇಗದೊಳೇಳಿಸು ನಂಜನನೂ ಬಾಳುವ ಮಗನನು ಕೋಳುವಿಡಿದುದು ಯಮನ ನಾಳಿದೊಡೆಯ ವೇಲಾಪುರದರಸಾ ಪ ಪತಿಯನು ನೀಗಿದ ಸತಿಮಾದಮ್ಮನು ಸುತನಿಂ ಬದುಕುವೆನೆಂದೀ ಊರೊಳು ಅತಿ ತಿರಿತಂದೋವುತಲಿದ್ದಳು ಸುತ ಅಚ್ಯುತ ಸಲಹಯ್ಯಾ 1 ಉರಿಯೊಳು ಬಿದ್ದಂತೊರಲಿ ಪೊರಲಿ ವೋ ಹರಿ ಹರಿ ಹರಿ ಯೆಂದುರುಳಿ ಬಡಿದುಕೊಳ್ಳೇ ದುರಿಯಶ ವೊಡೆಯಗೆ ಬರುವುದೆಂದು ನರ ಹರಿ ರಕ್ಷಿಪನೆಂದೊರೆದೆನು ಹರಿಯೆ 2 ಸತ್ತಮಗನ ನೀ ತಂದಿತ್ತುದಿಲ್ಲವೇ ಹೇ ಕತರ್ುೃವೆ ಸಾಂದೀಪೋತ್ತಮನಿಗೆ ಅಂದು ಉತ್ತರೆಯೊಡಲೊಳು ಅತ್ತು ಶಿಶುವು ಸಾ ವುತ್ತಿರಲುಳುಹಿದೆ ಚಿತ್ತಜನಯ್ಯಾ 3 ಇರಿದಪಮೃತ್ಯು ಪೊತ್ತಿರಿದಪವಾದವು ಉರುಳಿದೆ ನೋಡುತ್ತಿರುವರೆ ಸುಮ್ಮನೆ ಅರಿಯದಂತಿರ್ದಡೆ ಪರಿಪಾಲಿಪರಾರು ವರಮೃತ್ಯುಂಜಯ ಕರುಣಾಕರನೇ 4 ಮರಣವನೈದಿದ ತರಳ ನಂಜುಂಡನ ಕರುಣಿಸದಿರ್ದಡೆ ಶಿರವನರಿದು ನಾ ಚರಣದೊಳಿಡುವೆನು ದುರಿತಬಾಹುದು ನಿನ ಗರಿಯದೆ ವೈಕುಂಠವಿಠಲ ಚೆನ್ನಿಗನೇ 5
--------------
ಬೇಲೂರು ವೈಕುಂಠದಾಸರು
ಬಿನ್ನಪವ ಕೇಳು ಜೀಯಾ ಬನ್ನಬಡಿಸುವ ಮಾಯಾ ಬೆನ್ನು ಬೀಳದಂತೆ ಮಾಡು ಎನ್ನ ಕೂಡಾಡು ಪ ಹತ್ತದ ಜನಕೆ ನೀನು ಹತ್ತಿಲಿ ಇದ್ದರೆ ಏನು ಉತ್ತರ ಲಾಲಿಸದಿಪ್ಪ ಉತ್ತಮ ಶ್ಲೋಕಾ ತತ್ವ ಬಲ್ಲವಂಗೆ ದೂರತ್ತಲಿದ್ದರೇನು ಅವನ ಪತ್ತಿಗೆ ಬಂದೊದಗುವ ಚಿತ್ತಜನಯ್ಯಾ 1 ಇಂದೆ ಕೈವಲ್ಯವ ಕೊಡುವೆ ಒಂದು ಕ್ಷಣ ಮಾಯಿಗಳ ಮಂದಿರದಲ್ಲಿ ಜನಿಸಿ ಎಂದು ನುಡಿದಡೆ ಮಂದರಧರನೆ ಕೇಳು ಎಂದೆಂದಿಗೆ ಎನ್ನ ನರಕ ಬಂಧನದಲ್ಲಿಡು ಅಲ್ಲಿ ಪೊಂದುವರಾರೊ 2 ಸೂಕರ ಗಾರ್ಧಭ ನಾನಾ ಕೆಟ್ಟ ಜಾತಿಯವರ ಯೋನಿಯೊಳು ಕಟ್ಟಿಹಾಕಿ ಹೀನಾಯ ಉಣಸೀ ಅನಂತ ಕಲ್ಪಕ್ಕೆ ಪವಮಾನ ಮತ ಪೊಂದಿಸಿ ನಿರ್ವಾಣವೀವೆನೆಂದರಾಗೆ ನಾನಾದಿ ಬಯಿಪೆ 3 ಗುರುಪ್ರಸಾದದಿಂದಲಿ ಪರಮ ಸದ್ಗತಿ ಎನ ಗರಿದಲ್ಲ್ಯಾವಾಗಾದರು ಸ್ಥಿರವೆ ಸಿದ್ಧ ನಿರಯ ದುರಾತ್ಮಗಿಲ್ಲ ಕರವ ಮುಗಿದು ಒಂದು ವರ ಬೇಡುವೆ 4 ಭಾಗವತರ ಸಹವಾಸ ಭಾಗವತರ ಕಥಾಗುಣ ಭಾಗ ಗುಣಿಸುವ ಮತಿ ಭಾಗೀರಥಿ ಯಾತ್ರೆ ಭಾಗ್ಯವೆ ಪಾಲಿಸು ದುಷ್ಟ ಭಾಗಾದಿಯರೋಡಿಸಿ ಕಡೆ ಭಾಗಕ್ಕೆ ಎನ್ನೆಡಬಲ ಭಾಗದಲಿ ಸುಳಿಯೊ 5 ಕಾಣಿಕಾಣೆ ಙÁ್ಞನವಿಲ್ಲ ತುತಿಪುದಕ್ಕೆ ಧ್ಯಾನವÀರಿಯೆ ನಿನ್ನನೆ ನಿದಾನಿಸಲಿಕ್ಕೆ ನಾನಾಪರಾಧವ ಮಾಡಿದ ಮಾನವನೋ ದೀನಬಂಧೊ ನೀನೊಲಿದು ಎನ್ನ ಮನಕೆ ಆನಂದ ತೋರೋ 6 ರಜತಪೀಠ ಪುರನಿವಾಸಾ ರಜನಿಪತಿ ಸಂಕಾಶಾ ರಜನಿಚರ ವಿನಾಶಾ ಸುಜನಮಾನಸಹಂಸ ರಜದೂರ ಮಂದಹಾಸಾ ವಿಜಯವಿಠ್ಠಲ ಶ್ರೀಶಾ ಭಜಿಪೆ ಲೇಶಾ 7
--------------
ವಿಜಯದಾಸ