ಒಟ್ಟು 5 ಕಡೆಗಳಲ್ಲಿ , 1 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೆಟ್ಟ ಕೇಡನೇನ ಹೇಳಲಿ ಎನ್ನ-ದೃಷ್ಟದಿ ಪಡೆದಿದ್ದ ಫಲವಷ್ಟೇ ಅಮ್ಮ ಪ ಸತಿಯ ಸಂಗ ಕೆಟ್ಟೆ ಸಕಲ ವರ್ತನೆಗೆಟ್ಟೆಸುತರು ಬೇಕೆಂಬ ಸಂತಸಗೆಟ್ಟೆಮತಿಯ ವಿಚಾರಗೆಟ್ಟೆ ಮನದ ವಾಸನೆಗೆಟ್ಟೆಖತಿಯು ಎಂಬುದ ಕೆಟ್ಟೆ ಕಾಮಗೆ ಮೊದಲು ಕೆಟ್ಟೆ 1 ಮನೆವಾರ ನೇಮಗೆಟ್ಟೆ ಮನೆ ತಾಪತ್ರಯ ಕೆಟ್ಟೆಘನಭೋಗ್ಯ ಭಾಗ್ಯ ಕೆಟ್ಟೆ ಸರ್ವವ ಕೆಟ್ಟೆತನು ತಾನೆಂಬುದು ಕೆಟ್ಟೆ ತಳ್ಳಿ ತಗಾದೆ ಕೆಟ್ಟೆಜನರ ಕೂಡಿ ಕೆಟ್ಟೆ ಜಡ ಜೀವ ಕೆಟ್ಟೆ2 ವಿಧಿ ನಿಷೇಧ ಕೆಟ್ಟೆಫಲದ ತೋರಿಕೆಗೆಟ್ಟೆ ಪರರ ನಿಂದ್ಯ ಕೆಟ್ಟೆ3 ಭಂಗ ಕೆಟ್ಟೆಅಹಿತತ್ವವನು ಕೆಟ್ಟೆ ಅಂಗಡಿಯನು ಕೆಟ್ಟೆಮಹಿಮೆ ಎಂಬುದ ಕೆಟ್ಟೆ ಮಹಾ ಸುಖ ದುಃಖ ಕೆಟ್ಟೆ 4 ನಿತ್ಯ ಪ್ರಧಾನ ಕೆಟ್ಟೆಜೀಯ ಚಿದಾನಂದನಾಗಿ ಜನ್ಮಗೆಟ್ಟೆ 5
--------------
ಚಿದಾನಂದ ಅವಧೂತರು
ಮಡಿಯಾಗಿ ತಂಗಿ ಮಹಾಲಿಂಗ ಪೂಜೆ ಮಾಡೆಮುಕ್ತಿ ಸದನಕೇರುವೆ ನೋಡೇಪದೇಹವೆಂಬ ಮನೆಯ ಸಾರಿಸೆಮೋಹವೆಂಬ ತಂಗಳ ಮಡಕೆ ಹೊರಗಿರಿಸೆಸೋಹಂ ಎಂಬ ರಂಗವಲ್ಲಿಯನಿಡೆಜ್ಯೋತಿಯನು ಬೆಳಗಿಸೆ ನೀನು1ನಾನಾವಾಸನೆಯ ಮೈಲಿಗೆಯನು ಬಿಡೆಮನಮೈಲಿಗೆಯನು ತೊಳೆಸ್ವಾನುಭವದ ಪೀತಾಂಬರವನುಡೆನಾನು ಎಂಬ ಕಸವನು ಗುಡಿಸೆನಾದದ ಸುಖವನು ಅನುಭವಿಸೆ ನೀನು2ಧ್ಯಾನ ಮನನೆನಪಿಲ್ಲದಾಗಿಸ್ವಸ್ಥಾನದಲ್ಲಿ ಭಾನುವೀಗ ಬೆಳಗಿದಂತಾಗಿ ನೀನುನಾನು ಎಂಬುದು ಅಳಿದು ನೀನೆಚಿದಾನಂದನಾಗಿ ಪೂಜಿಸು3
--------------
ಚಿದಾನಂದ ಅವಧೂತರು
ಯೋಗಿಬಿಟ್ಟರೆ ಬಿಡದು ನಾದವುಯೋಗಿಬಿಟ್ಟರೆ ಬಿಡದು ನಾದವುಕೂಗುತಿಹುದು ಸರ್ವಕಾಲದಿಜಾಗಟೆ ಕೊಳಲು, ತಮ್ಮಟೆಚಂಗು ಕೊಂಬು ತಾಳರವಗಳಿಂದಪಮಲಗೆ ಕುಳಿತರೆ ಕೂಗುತಿಹುದುನಿಲಲು ನಡೆಯೆ ಕೂಗುತಿಹುದುಒಲಿದು ಮಾತುಗಳಿರಲಿಕೆಬಲಿದು ಧುಂಧುಂ ಎಂದು ಭೇರಿಯ ಶಬ್ದರವಗಳಿಂದನಿಲದೆ ಮುರಿದು ಮದವಸುಲಭ ಸುಖವ ಸುರಿಸುತ1ಕಣ್ಣು ಮುಚ್ಚಲು ಕೂಗುತಿಹುದುಕಣ್ಣು ತೆರೆಯೆ ಕೂಗುತಿಹುದುಉಣ್ಣುತಲಿ ತಾನು ಇರಲಿಕೆಘಣ್ಣ ಘಣ್ಣ ಘಣ್ಣಲು ಎಂದು ಘಂಟೆ ಶಬ್ದದ ರವಗಳಿಂದಮಣ್ಣಗೂಡಿಸಿಶೋಕಮೋಹವಪುಣ್ಯರವವ ಬೀರುತ2ಸುಮ್ಮನಿರಲು ಕೂಗುತಿಹುದು ಸುಳಿದಾಡೆ ಕೂಗುತಿಹುದುಬಮ್ಮನೊಮ್ಮೆ ಮರೆತು ಇರಲಿಕೆಘಮ್ಮ ಘಮ್ಮ ಘಮ್ಮ ಎಂದು ಶಂಖ ಶಬ್ದದ ರವಗಳಿಂದಹಮ್ಮುವಾಸನ ಕ್ಷಯವಮಾಡಿನಿರ್ಮಲತ್ವವ ತೋರುತ3ಅರುಣಕಾಲದಿ ಅಸ್ತಕಾಲದಿ ಅವಸ್ಥಾತ್ರಯ ಕಾಲದಿಅರಗಳಿಗೆ ಕ್ಷಣ ಮೂಹೂರ್ತದಿಸರಿಗರಿ ಗಮಪ ಎಂದು ಸ್ವರಮಂಡಲರವಗಳಿಂದತರಿದು ಜನನ ಮರಣವನ್ನುತೇಜಬಿಂದು ಸುರಿವುತ4ಇಂತುನಿತ್ಯಕಾಲದಿ ಬಿಡದೆಸಂತತದಲಿ ಹಾಡಿಪಾಡಿನಿಂತು ಚಾಕರಿಯನೆ ಮಾಡುತಚಿಂತಕರನುತಾ ಚಿದಾನಂದನಾಗಿ ತೋರ್ಪ ಯೋಗಿಯನ್ನುಅಂತ್ಯವಿಲ್ಲದಾನಂದಪಡಿಸಿ ಆಶೀರ್ವಾದವ ಪಡೆಯುತ5
--------------
ಚಿದಾನಂದ ಅವಧೂತರು
ಸಂಸಾರ ದುಷ್ಟೆಂದು ತಿಳಿದ ಮಹಾತ್ಮರಸಂಸಾರ ಮಾಡುವುದು ಹ್ಯಾಗೆಸಂಸಾರದೊಳಗಿದ್ದು ಇಲ್ಲದ ವಿವರವಬರೆದೆನು ದೃಷ್ಟಾಂತವಾಗೆಪನಾರಿ ಪುತ್ರರೊಳಗೆ ತಾವು ಕಲೆತಿದ್ದುನಾಸ್ತಿಯಾಗಿಹರದು ಹ್ಯಾಗೆವಾರಿಯೊಳಗೆ ತಾವರೆಕರ್ಣ ತಾನಿರ್ದುನೀರಿಗೆ ಅಂಟದ ಹಾಗೆ1ಎಲ್ಲ ಪ್ರಪಂಚವ ಮಾಡುತ್ತ ನಿತ್ಯದಿಎರಡು ಆಗಿಹರದು ಹಾಗೆಹಲ್ಲೊಳಗೆ ನಾಲಗೆ ತಾನು ಇರುತಿರ್ದುಹಲ್ಲ ಬುಡಕೆ ಬೀಳದ್ಹಾಗೆ2ಶಿಷ್ಯ ಚಿದಾನಂದನಾಗಿ ಸಂಸಾರವಮುಟ್ಟಿಮುಟ್ಟದಿರು ಹ್ಯಾಗೆಹುಟ್ಟು ನಾನಾಕಾರಗಳನು ತೊಳಸಿಯೆಹುಟ್ಟು ರುಚಿಯ ಅರಿಯದ್ಹಾಗೆ3
--------------
ಚಿದಾನಂದ ಅವಧೂತರು
ಸಾರ್ಥಕವು ಸಾರ್ಥಕವು ಸಾರ್ಥಕವುದೇಹಕ್ಕೆಗತಿಕಂಡರೆಪಸಂಸಾರತೃಷೆಎಂದರಿದರೆಸಂಸಾರಕೆ ಹತ್ತದಿದ್ದರೆಅಂಶವಿದು ಜಗ ಬ್ರಹ್ಮವೆಂದರೆಸಂಶಯ ಮೂಲವನೆ ಕಳೆದರೆ1ತನುವಿನ ಅಭಿಮಾನ ಬಿಟ್ಟರೇಮನದ ಧಾವಾಂತ ನೀಗಿದರೆಘನದುರ್ಗುಣಗಳಕುಡಿಚೂಡಿದರೆಕನಕವು ನರಕವು ಸರಿಯೆಂದಾದರೆ2ಗುರುಪಾದಕ್ಕೆ ಮೊರೆ ಹೊಕ್ಕರೆಗುರುವಿಂದ ತನ್ನನು ತಿಳಿದರೆಗುರುವಾಗಿಯೇ ತನ್ನನು ಕಂಡರೆಗುರುಚಿದಾನಂದನಾಗಿಯೆ ನಿಂತರೆ3
--------------
ಚಿದಾನಂದ ಅವಧೂತರು