ಒಟ್ಟು 72 ಕಡೆಗಳಲ್ಲಿ , 22 ದಾಸರು , 71 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಣೆಕಲ್ಲಾಡಿದಳೇ ಆನಂದದಲಿ ಬಗಳೆಸೆಣಸುವ ವೈರಿಗಳ ಶಿರಗಳ ಪಿಡಿದು ಪ ಮೊಂಡ ಮೂಕರ ತಲೆಯ ಮೂಳ ಮೂಸರ ತಲೆಯಭಂಡತನದಿ ಬಗುಳುವ ಪಾಪಿಯಚಂಡಾಲರ ತಲೆಯ ಚರಿಗೇಡಿಯ ತಲೆಯಪುಂಡರ ತಲೆಯನಂದು ಎನ್ನ ಕಣ್ಣಮುಂದೆ ತಾನು 1 ಒಂದೊಂದು ಎರಡು ಎಂದುಮುಂದೆ ಮೂರು ನಾಲ್ಕು ಎಂದುಹಿಂದೆ ಆದುದು ತಪ್ಪಿತು ಥೂ ಥೂ ಎಂದುಇಂದಿದು ಸದ್ಗುರು ರಾಯನ ಗುಸ್ತೆಂದುಚೆಂದದಿ ಆಡಿದಳೆ ಎನ್ನ ಕಣ್ಣ ಮುಂದೆ ತಾನು 2 ನಾನು ಎಲ್ಲಿದ್ದರೆ ತಾನಲ್ಲಿದ್ದಾಡುತಧ್ಯಾನವೆನ್ನಯ ಮೇಲೆ ಇಟ್ಟುಕೊಂಡುಮಾನನಿಧಿ ಚಿದಾನಂದ ರಾಣಿ ಬಗಳೆಏನ ಹೇಳಲಿ ನಿದ್ರೆ ನೀರಡಿಕೆಯಿಲ್ಲದೆ ಎನ್ನ ಕಾಯುತ
--------------
ಚಿದಾನಂದ ಅವಧೂತರು
ಗಜಮುಖ ಗಣಪನಂಬುಜಪಾದಕ್ಕೆರಗುವೆ ನಿಜವಾದ ವರವ ನಾ ಬೇಡಿಕೊಂಬೆ ಅಜನರಸಿಗೆ ಅತಿ ಭಕ್ತಿಂದೆ ಭಜಿಸುವೆ ತ್ರಿಜಗವಂದಿತನ ಕತೆಯ ಪೇಳ್ವೆನು 1 ಗೋಕುಲದೊಳಗೆಲ್ಲ ಗೋಪಾಂಗನೇರು ಕೂಡಿ ಏಕವಾಗಿ ಮಾತನಾಡಿಕೊಂಡು ತಾವು ಅ- ನೇಕ ಸಂಭ್ರಮದಿಂದ ಆಡಿ ನೀರಾಟವ ಬೇಕಾದೂಟವನುಂಡು ಬರುವೋಣೆಂದು 2 ಘೃತ ಪರಮಾನ್ನವು ಚಕ್ಕುಲಿ ಗಿಲುಗಂಜಿ ಗುಳ್ಳೋರಿಗೆ ಬುಂದ್ಯ ಭಕ್ಷ್ಯ ಮಂಡಿಗೆ ಫೇಣಿ ಬುತ್ತಿ ಚಿತ್ರಾನ್ನ ಹಪ್ಪಳ ಸಂಡಿಗಂಬೋಡುಪ್ಪಿನಕಾಯಿಗಳು 3 ಕೇಸರಿ ಕುಂಕುಮರಿಷಿಣ ಅಚ್ಚಮಲ್ಲಿಗೆ ಶಾವಂತಿಗೆ ಸರವು ದಿವ್ಯ ಕರ್ಪೂರದಡಿಕೆ ಯಾಲಕ್ಕಿ ಎಲೆಯ ಸುಣ್ಣ ಪತ್ರೆ ಲವಂಗ ತಬಕಿಲೆ ತಂದರು 4 ಹೆರಳು ಬಂಗಾರ ರಾಗಟೆ ಗೊಂಡ್ಯ ಕ್ಯಾದಿಗೆ ಅರಳು ಮಲ್ಲಿಗೆ ಸಂಪಿಗೆ ಮುಡಿದು ದಿವ್ಯ ಕೊರಳ ಕಟ್ಟಾಣಿ ಸರಿಗೆ ಚಂದ್ರಹಾರ ಪು- ತ್ಥಳಿ ಪಚ್ಚಪದಕಗಳ್ಹೊಳೆಯುತಲಿ 5 ಕಡಗ ಕಂಕಣ ದ್ವಾರ್ಯ ನಾಗಮುರಿಗೆ ವಂಕಿ ಬಿಡಿಮುತ್ತಿನ ಗೊಂಡ್ಯ ಬಾಜುಬಂದು ದೊಡ್ಡ ವಾಲೆ ಸರಪಳಿ ಮುತ್ತು ಬು- ಗುಡಿ ಚಂದರ ಬಾಳ್ಯ ಹೊಳೆಯುತಲಿ 6 ಮುದ್ದು ಮೋರೆಗೆ ತಕ್ಕ ಮುಕುರ್ಯ ಬುಲಾಕನಿಟ್ಟ ವ- ಜ್ರದ್ಹರಳು ಬಲಮೂಗಿನಲಿ ದಿವ್ಯ ತಿದ್ದಿ ಮುಂಗುರುಳು ಮುತ್ತಿನ ಬೊಟ್ಟು ಕುಂಕುಮ ಪದ್ಮದ್ಹೂವಿನ ಕುಬುಸಗಳ ತೊಟ್ಟು 7 ಹರದಿಯರೆಲ್ಲರು ಪರಮ ಸುಭ್ರಮದಿಂದ ಜರದ ಪೀತಾಂಬರ್ವಜ್ಜರದ ಪಟ್ಟಿನಿಟ್ಟು ಪರಿ ಬಣ್ಣ ಸೀರೆಗಳುಟ್ಟು ಕಾಲ- ಲಿ ರುಳಿ ಕಾಲುಂಗರ ಗೆಜ್ಜೆ ಪೈಜಣವು 8 ಚೆಲ್ವೆಯರೆಲ್ಲರು ಉಲ್ಲಾಸದಿಂದಲಿ ಘುಲ್ಲು ಘಲ್ಲೆಂದು ಹೆಜ್ಜನಿಡುತ ತಾವು ಮಲ್ಲೆ ಮಲ್ಲಿಗೆ ಪುನ್ನಾಗ ಸಂಪಿಗೆ ತೋಟ ಅಲ್ಲಲ್ಲೆ ನಿಂತು ನೋಡುತ ಬಂದರು 9 ಕುಂದ ಮಂದಾರ ಸುಗಂಧಿಕ ದವನವು ಬಂಗಾರದಂಥ ಕ್ಯಾದಿಗೆಯಮಲ ಚೊಕ್ಕ ದುಂಡುಮಲ್ಲಿಗೆ ಪಾರಿಜಾತ ತಾವರೆಮೊಗ್ಗು ಚೆಂದ ಚೆಂದದ ಶಾವಂತಿಗೆ ವನವು 10 ಹತ್ತಿ ಆಲದ ಮರ ಅಡಕೆ ತೆಂಗಿನ ಮರ ಅ- ಶ್ವತ್ಥ ಕಪಿತ್ಥ ಕಿತ್ತಳೆ ಹಲಸು ನೋಡು- ತ್ತತ್ತಿ ದ್ರಾಕ್ಷಿ ನೀರಲ ನಿಂಬೆ ದಾಳಿಂಬ್ರ ಪಕ್ವಾದ ಜಂಬು ಸೀತಾಫಲವು 11 ಎಲೆದೋಟದೊಳಗೆ ಯಾಲಕ್ಕಿಗೊನೆಯು ನೋಡೆ ಕಳಿತ ಮಾವಿನ ಹಣ್ಣು ಕದಳೀ ಫಲ ಬೋರೆ ಶ್ರೀತುಳಸಿ ವನಗಳಲ್ಲೆ ಅರಿಷಿಣಂಜೂರಿ ಔದುಂಬ್ರ ಫಲ 12 ಚಕೋರ ಚಾತಕ ಗಿಳಿ ಚಕ್ರವಾಕ ಪಕ್ಷಿ ಗಿಳಿಹಿಂಡು ಗಂಡೆರಳೆ ಗರುಡ ಹಂಸವು ನೋಡೆ ಹರಿ ಬ್ರಹ್ಮ ತಂದೆ ಮಕ್ಕಳು ಏರೋವಾಹನವು 13 ಕಸ್ತೂರಿಮೃಗ ಪುನುಗಿನ ಬೆಕ್ಕು ಪಾರ್ವಾಳ ಜಕ್ವಕ್ಕಿ ಕೊಳಲ್ಹಕ್ಕಿ ಸಾರಂಗವು ಚಾರಿ ಕುಕ್ಕುಟ ಭೈರುಂಡ ಎಡಖಗ ಬಲಕ್ಕಾಗಿ ಕೊಟ್ಟವು ಶಕುನ ಜಲಕ್ರೀಡೆಗೆ 14 ಕಾಳಿಮರ್ದನ ಕೃಷ್ಣ ಹಾರಿದ ಮಡುವಿದು ಕಾಳಿಂಗನೋಡಿಸಿ ಕಳೆದ ವಿಷ ಕೆಟ್ಟ ನೋಡೆ ಅಮೃತಕೆ ಮಿಗಿಲಾಗಿದೆ ಈ ಜಲ ಏನು ಪುಣ್ಯ ಮಾಡಿದ್ದಳೊ ಯಮುನಾ 15 ನೀಲ ಮಾಣಿಕ್ಯ ಮುತ್ತು ಕೂಡಿಸಿದಂತೆ ತ್ರಿವೇಣಿ ಆ- ದಳು ತಾ ಪ್ರಯಾಗದಲಿ ತ್ರಿವೇಣಿ ಭಾಗೀರಥಿ ಸರಸ್ವತಿ ಕೂಡಿ ಸಂಗಮಳಾಗಿ ಪೋಗೋಳು ಕಾಶಿ ಪಟ್ಟಣಕೆ 16 ಕಮಲಸಖನ ಪುತ್ರಿ ಕಾಮಿತ ಫಲಕೊಟ್ಟು ವರುಣನರ್ಧಾಂಗಿ ನೀ ವರವ ಕೊಡೆ ತಾಯೆ ಯಮಧರ್ಮರಾಯನ ಭಗಿನಿ ನಿಮ್ಮ ಸ್ನಾನ- ಫಲಕೊಟ್ಟು ಪಾಲಿಸೀಗೆಂದೆನುತ 17 ನೋಡುತ ನಗುತ ಮಾತಾಡುತ ನಿಂತರು ಓಡುತಾವೆ ಜಲ ಸೆಳವಿನಿಂದ ಆಹ ಮಾಡುವೋಣ್ಹ್ಯಾಗೆ ಸ್ನಾನವ ನಾವು ಎನುತಲಿ ಜೋಡಿಸಿ ತಮ್ಮ ್ಹಸ್ತ ಮುಗಿದರಾಗ 18 ಉಟ್ಟ ಸೀರೆಗಳನು ಬಿಟ್ಟು ಕುಪ್ಪಸ ಕಟ್ಟಿ ಇಟ್ಟರು ಉಸುಕಿನ ಮಿಟ್ಟಿಯಲ್ಲೇ ತಾವು ಮಿತ್ರೆಯರೆಲ್ಲ ತಮ್ಮ ಸ್ತನಗಳ್ಹಿಡಕೊಂಡು ಥಟ್ಟನೆ ಇಳಿದರು ನದಿಯೊಳಗೆ 19 ವಾರಿಗೆ ಗೆಳೆತೇರು ವರ ಮೋಹನಾಂಗೇರು ಮೋರೆಗೆ ಅರಿಷಿಣ ಕುಂಕುಮ್ಹಚ್ಚಿ ತಮ್ಮ ನೀರಜಾಕ್ಷಿಯರೆಲ್ಲ ನಿರ್ಮಲವಾಗಿದ್ದ ನೀರೊಳು ನಿಂತು ಮೈ ತೊಳೆದರಾಗ 20 ಭಾರಿ ಸೆಳವಿನೊಳು ಬತ್ತಲೋಲ್ಯಾಡುತ ಸಾರಸಮುಖಿಯರು ಸರಸದಿಂದ ಚೆಲ್ಲೆ ದ್ವಾರ್ಯ ಕಂಕಣಕರ ಬೊಗಸೆಲಿಂದ ನೀರು ತುಂಬಿ ಚೆಲ್ಲ್ಯಾಡುತಲಿ 21 ಸರ್ಪನಂಥ ಹೆರಳೊಲಿವುತ ನೀರೊಳು ಮುತ್ತಿನ ಸರಪದಕ್ಹೊಳೆಯುತಲಿ ಬುಕ್ಕ್ಹಿಟ್ಟು ಗಂಧ ಮಲ್ಲಿಗೆ ಪಾರಿಜಾತವು ತೆಪ್ಪದಂದದಲಿ ತೇಲಾಡುತಿರೆ22 ಅಂಬುಜಮುಖಿಯರು ಸಂಭ್ರಮದಿಂದಲಿ
--------------
ಹರಪನಹಳ್ಳಿಭೀಮವ್ವ
ವಾರಿಜನಾಭನ ವನಜಾಂಘ್ರಿಗಳಿಗೆ ಕರವ ಕೊಂಡಾಡುವೆ ಪದವ 1 ದೇವದೈತ್ಯರು ಕೂಡಿ ಪಾಲಾಂಬುಧಿಯಲ್ಲಿ ಮೇರು ಮಂದರವ ಕಡೆಗೋಲು ಮಾಡಿದರು2 ವಾಸುಕಿ ಶರಧಿ ಮಧ್ಯದಲಿ ಹರಿ ಕೂರುಮನಾಗಿ ಮಂದರವನೆತ್ತಿದನು3 ಕಾಲಕೂಟ ವಿಷವಾಯು ಪಾನಮಾಡುತಲಿ ಮಹದೇವ ಕೋಪದಿ ನುಂಗಿ ನೀಲಕಂಠೆನಿಸೆ 4 ಕೌಸ್ತುಭ ಕಾಮಧೇನು ಸುರತರುವು ಹಸ್ತಿ ತೇಜಿಯು ಕಲ್ಪವೃಕ್ಷ ಸುಧೆ ಉದಿಸೆ 5 ಸಿಂಧು ಮಥನವ ಮಾಡಲು ಶ್ರೀದೇವಿ ಜನಿಸೆ ಮಂದಾರಮಾಲೆ ಕೈಯಿಂದಲಿ ಪಿಡಿದು 6 ಅರ್ಕಚಂದ್ರರ ಕಾಂತಿಗಧಿಕಾದ ಮುಖವು ದಿಕ್ಕು ದಿಕ್ಕಿಗೆ ಮಿಂಚಿನಂತೆ ಹೊಳೆಯುತಲಿ 7 ವಜ್ರಾಭರಣವು ಕಾಲಗೆಜ್ಜೆ ಸರಪಳಿಯು ಮಲ್ಲಿಗೆ ಕುಸುಮಗಳೊಂದೊಂದ್ಹೆಜ್ಜೆಗುದುರುತಲಿ 8 ಕುಡಿಹುಬ್ಬು ಕಡೆಗಣ್ಣ ನೋಡುತಲಿ ನಡೆದು ಬಂದಳು ತಾ ಬಡನಡುವಿನ ಒಯ್ಯಾರಿ 9 ಅತಿಹಾಸ್ಯಗಳಿಂದ ದೇವತೆಗಳ ಮಧ್ಯೆ ಈ ಪತಿ ಎಲ್ಲಿಹನೋ ತಾ 10 ಅರ್ಕನ್ವಲ್ಲೆನೆ ಅಗ್ನಿಯಂತೆ ಸುಡುತಿರುವನ ಶಕ್ರನ ಒಲ್ಲೆ ಮೈಯೆಲ್ಲ ಕಣ್ಣವಗೆ 11 ಸೋಮನ ಒಲ್ಲೆ ಕಳೆಗುಂದಿ ತಿರುಗುವನ ಪಾವನ ನಮ್ಮ ಗಾಳಿರೂಪದವನ12 ರುದ್ರನ್ವಲ್ಲೆನೆ ರುಂಡಮಾಲೆ ಹಾಕುವನ ಮುದಿಹದ್ದಿನಂದದಲಿ ಗರುಡ ಹಾರ್ಯಾಡುವನಲ್ಲೆ 13 ಶೇಷನ ಒಲ್ಲೆ ವಿಷದ ದೇಹದವನ ಗ- ಣೇಶನ್ವಲ್ಲೆನೆ ಡೊಳ್ಳು ಹೊಟ್ಟೆ ಗಜಮುಖನ 14 ಬ್ರಹ್ಮ ನಾಲಕು ಮೋರೆಗುಮ್ಮನಂತಿರುವ ಯಮ- ಧರ್ಮನ ಒಲ್ಲೆ ನಿಷ್ಕರುಣ ಘಾತಕನ 15 ಸುರಜನರ ನೋಡಿ ಗಾಬರ್ಯಾಗುವೆನು 16 ಮಂದ ಹಾಸ್ಯಗಳಿಂದ ಮಾತನಾಡುತಲಿ ಇಂದಿರೆಪತಿ ಪಾದಾರವಿಂದ ನೋಡುತಲಿ 17 ಗುಣದಲಿ ಗಂಭೀರ ಮಣಿಕೋಟಿತೇಜ ಎಣಿಕಿಲ್ಲದ ಚೆಲುವ ನೋಡೆನ್ನ ಪ್ರಾಣನಾಥ 18 ಹದಿನಾಲ್ಕು ಲೋಕ ತನ್ನುದರದಲ್ಲಿರುವ ಪದುಮಾಕ್ಷಗ್ವನಮಾಲೆ ಮುದದಿಂದ್ಹಾಕುವೆನು 19 ಕರ ವೈಜಯಂತಿ ಸರ ಮಣಿ ನಾ ಇರುತಿರೆ ವಕ್ಷಸ್ಥಳವು 20 ಶ್ಯಾಮವರ್ಣನ ಮುದ್ದು ಕಾಮನಜನಕ ಪ್ರೇಮದಿಂದ್ವೊಲಿವೆ ನಾ ಕಾಮಿಸಿ ಹರಿಯ 21 ಕಮಲಮುಖಿ ಬ್ಯಾಗ ಕಮಲಾಕ್ಷನ್ನ ನೋಡಿ ಕಮಲಮಾಲೆಯ ತಾ ಕಂದರದಲ್ಹಾಕಿದಳು 22 ಅಂಗನೆ ರಚಿಸಿ ತಾ ನಿಂತಳು ನಗುತ 23 ರತ್ನ ಮಂಟಪ ಚಿನ್ನ ಚಿತ್ರ ಪೀಠದಲಿ ಲಕ್ಷ್ಮೀನಾರಾಯಣರು ಒಪ್ಪಿ ಕುಳಿತಿರಲು 24 ಸಾಗರರಾಜ ತನ್ನ ಭಾಗೀರಥಿ ಕೂಡಿ ಸಿರಿ ಧಾರೆಯನೆರೆದ 25 ಅಚ್ಚುತ ಲಕುಮಿಗೆ ಕಟ್ಟಿದ ನಗುತ 26 ಮೇಲು ಕರಿಮಣಿ ಮಂಗಳ ಸೂತ್ರವ ಪಿಡಿದು ಶ್ರೀ ಲೋಲ ಲಕುಮಿಗೆ ತಾ ಕಟ್ಟಿದ ನಗುತ 27 ವಂಕಿ ಕಂಕಣ ಮುತ್ತಿನ ಪಂಚಾಳಿಪದಕ ಪಂಕಜಮುಖಿಗೆ ಅಲಂಕರಿಸಿದರು 28 ಸರಿಗೆ ಸರಗಳು ನಾಗಮುರಿಗೆ ಕಟ್ಟಾಣಿ ವರಮಾಲಕ್ಷುಮಿಯ ಸಿರಿಮುಡಿಗೆ ಮಲ್ಲಿಗೆಯ 29 ನಡುವಿನ್ವೊಡ್ಯಾಣ ಹೊಸ ಬಿಡಿಮುತ್ತಿನ ದಂಡೆ ಸಿರಿ ಪರಮಾತ್ಮನ ತೊಡೆಯಲ್ಲೊಪ್ಪಿರಲು 30 ಇಂದಿರೆ ಮುಖವ ಆ- ನಂದ ಬಾಷ್ಪಗಳು ಕಣ್ಣಿಂದಲುದುರಿದವು 31 ರಂಗನ ಕಂಗಳ ಬಿಂದು ಮಾತ್ರದಲಿ ಅಂಗನೆ ತುಳಸಿ ತಾನವತರಿಸಿದಳು32 ಪಚ್ಚದಂತ್ಹೊಳೆವೊ ಶ್ರೀ ತುಳಸಿ ದೇವಿಯರ ಅಚ್ಚುತ ತನ್ನಂಕದಲ್ಲಿ ಧರಿಸಿದನು 33 ಮಂಗಳಾಷ್ಟಕ ಹೇಳುತ ಇಂದ್ರಾದಿ ಸುರರು ರಂಗ ಲಕ್ಷುಮಿಗೆ ಲಗ್ನವ ಮಾಡಿಸಿದರು 34 ಅಂತರಿಕ್ಷದಿ ಭೇರಿನಾದ ಸುರತರುವು ನಿಂತು ಕರೆದಿತು ದಿವ್ಯ ಸಂಪಿಗೆ ಮಳೆಯ 35 ಲಾಜಾಹೋಮವ ಮಾಡಿ ಭೂಮವನುಂಡು ನಾಗಶಯನಗೆ ನಾಗೋಲಿ ಮಾಡಿದರು 36 ಸಿಂಧುರಾಜನ ರಾಣಿಗೆ ಸಿಂಧೂಪವನಿತ್ತು ಗಜ ಚೆಂದದಿ ಬರೆದು 37 ಚೆಲುವೆ ನೀ ಬೇಕಾದರೆ ಹಿಡಿಯೆಂದನು ರಂಗ 38 ಅಚ್ಚುತ ಎನ್ನಾನೆ ಲೆಕ್ಕಿಲ್ಲದ್ಹಣವ ಕೊಟ್ಟರೆ ಕೊಡುವೆನೆಂದಳು ಲಕ್ಷುಮಿ ನಗುತ 39 ತುಂಬಿ ಮರದ ಬಾಗಿನವ ಸಿರಿ ತಾ ಋಷಿಪತ್ನೇರನೆ ಕರೆದು40 ತುಂಬಿ ಮರದ ಬಾಗಿನವ ಹರದಿ ಕೊಟ್ಟಳು ತಾ ಋಷಿಪತ್ನೇರನೆ ಕರೆದು 41 ಕುಂದಣದ್ಹೊನ್ನಕೂಸಿನ ತೊಟ್ಟಿಲೊಳಿಟ್ಟು ಕಂದನಾಡಿಸಿ ಜೋಜೋ ಎಂದು ಪಾಡಿದರು42 ಕರಿ ಎಂದನು ರಂಗ 43 ಸುರದೇವತೆಗಳಿಗೆ ಸುಧೆ ಎರೆಯಬೇಕಿನ್ನು ಕರಿ ಎಂದಳು ಲಕ್ಷ್ಮಿ 44 ಹೆಣ್ಣನೊಪ್ಪಿಸಿಕೊಟ್ಟು ಚಿನ್ನದಾರತಿಯ ಕರ್ನೆ(ನ್ಯ?) ಸರಸ್ವತಿ ಭಾರತಿ ಬೆಳಗಿದರಾಗ 45 ಈರೇಳು ಲೋಕದೊಡೆಯನು ನೀನಾಗೆಂದು ಬಹುಜನರ್ಹರಸ್ಯೆರೆದರು ಮಂತ್ರಾಕ್ಷತೆಯ 46 ಪೀತಾಂಬರಧಾರಿ ತನ್ನ ಪ್ರೀತ್ಯುಳ್ಳಜನಕೆ ಮಾತುಳಾಂತಕ ಮಾಮನೆ ಪ್ರಸ್ತ ಮಾಡಿದನು 47 ಸಾಲು ಕುಡಿಎಲೆ ಹಾಕಿ ಮೇಲು ಮಂಡಿಗೆಯ ಹಾಲು ಸಕ್ಕರೆ ಶಾಖ ಪಾಕ ಬಡಿಸಿದರು 48 ಎಣ್ಣೋರಿಗೆ ಫೇಣಿ ಪರಮಾನ್ನ ಶಾಲ್ಯಾನ್ನ ಸಣ್ಣಶ್ಯಾವಿಗೆ ತುಪ್ಪವನ್ನು ಬಡಿಸಿದರು 49 ಏಕಾಪೋಶನ ಹಾಕಿದ ಶೀಕಾಂತಾಮೃತವ ಆ ಕಾಲದಿ ಸುರರುಂಡು ತೃಪ್ತರಾಗಿಹರು 50 ಅಮೃತ ಮಥನವ ಕೇಳಿದ ಜನಕೆ
--------------
ಹರಪನಹಳ್ಳಿಭೀಮವ್ವ
(ಇ) ಶ್ರೀಕೃಷ್ಣಲೀಲೆ ಅಂಗಜನೈಯನು ಗೋಕುಲ ಪೋಗುವಾಗಕಂಗಳ್ಹಬ್ಬದ ಉಬ್ಬಿನೇನ ಬಣ್ಣಿಪೆನಾ ಪ ಎಳೆಗರುಗಳ ಝುಂಗುಗಳನ್ನು ಮತ್ತೆಮಲೆವ ಗೂಳಿಗಳ ಗೂರಾಟವನ್ನುಒಲಿವಾವಿನ ಕೆಚ್ಚಲು ಸಂದಣಿಯಲ್ಲಿನಲಿವ ಮರಿಗರುಗಳ ನೋಡುತಲಿ 1 ಆಡಿಸುವ ಮೊಗ ಬದಿಗಳ ತುರಿಸುತ್ತಝಾಡಿಸುವಾಕಾರ ಬೆದರು ನೋಟಏಡಿಸುವ ಹುಬ್ಬಿನ ಗೋವಳರಕೋಡಂಗಿ ಆಟಕ್ಕೆ ಕುಲುಕಿ ನಗುತ 2 ಒಂದು ಹುಬ್ಬೊಂದು ಕಿವಿಯನಲಗಿಸುತಮುಂದಣ ಚಂಡಿಕೆ ತಾಳದ ಗತಿಗೆಚಂದದಿ ಕುಣಿಸುವ ಭೃಂಗಿ ಆಟಕೆ ಗೋಪಸಂದೋಹಕೆ ಮೆಚ್ಚಿ ಬಲಗೆ ತೋರಿಸುತ 3 ಕೆಲರು ಕೋಗಿಲೆಯಂತೆ ಕೆಲರು ನವಿಲಿನಂತೆಕೆಲರು ಹಂಸದಂತೆ ಸಾರಸದಂತೆಗಳರವದಿಂ ಗೋಪರು ಕೂಗೆ ಋತುಗಳುನಳಿನಾಕ್ಷನ ಸೇವೆಗೆ ಕೂಡಿದಂತಿರೆ 4 ಒಂದೊಂದು ತಾಳಕ್ಕೆ ಒಂದೊಂದು ಪದಗತಿಒಂದೊಂದು ರಸಕ್ಕೆ ಮತ್ತೊಂದು ಕೈಗತಿಒಂದೊಂದು ಭಾವಕ್ಕೆ ಒಂದೊಂದು ನೇತ್ರವಾನಂದದಿ ಗೋವರ್ಧನ ನಾಟ್ಯವಾಡೆ 5 ಕಿನ್ನರ ಗಾನ ಗೋಪರ ಗೀತ ದೇವಕನ್ಯೇರ ನಾಟ್ಯ ಗೋಪರನಾಟ್ಯಚೆನ್ನಾರ ಕುಣಿಸುವ ಚಿಣ್ಣರ ಕಣ್ಣುಸನ್ನೆ ಝೇಂಕರಿಸುವ ಗೋಪರ ನೋಡುತ6 ನಾರಂದನ ವೀಣೆ ಗೋಪರ ಕಿನ್ನರಿಗೀರ್ವಾಣದುಂದುಭಿ ಗೋಪರ ಮುರಜಆ ರಂಭೆಯರಾಟ ಗೋಪರ ತಾಂಡವಕ್ಷೀರೋದಕದಂತೆ ಕಲೆಸಿ ಬೆರೆಸಿರೆ 7 ರಸತುಂಬಿ ತುಳುಕುವ ಕೊಳಲ ರವಂಗಳುಹಸುಗಳ ಕೊರಳ ಘಂಟೆಗಳ ನಿನಾದಎಸೆವೆಳಗಂದಿಯ ಅಂಬಾರವಂಗಳು ಪಸರಿಸೆ ಗೋವಳೆಯರು ಸಡಗರಿಸಿ8 ಜಂಗುಳಿ ಗತಿಯರ ಮುಖ ಕನ್ನಡಿ ಊರೋ-ಜಂಗಳೆ ಮಂಗಳ ಪೂರ್ಣ ಕುಂಭಗಳುಕಂಗಳೆ ನೀಲೋತ್ಪಲಂಗಳು ಕರಗಳೆತುಂಗ ಪಲ್ಲವ ತೋರಣದಂತೆಸೆಯೆ 9 ಚೆಂದದ ನೋಟವು ಮಂಗಳಾರತಿಯಾಗೆಮಂದಹಾಸವು ಪೂಮಳೆಯಾಗೆ ಆನಂದ ಪುಳಕಗÀಳೆ ಕೋಡಿಯಾಗೆ ಗೋಪವೃಂದವಿದಿರುಗೊಳ್ಳ ಬಂದರೊಲವಿಲಿ 10 ಕಂಗಳ ಕುಡಿ ನೋಟಂಗಳಿÀಂ ಸೆಳೆದುರಂಗನ ತಮ್ಮಂತರಂಗದೊಳಿಟ್ಟುಹಿಂಗದಾಲಂಗಿಸಿ ಸುಖಾಂಬುಧಿಯ ತ-ರಂಗದಿ ಗೋಪಾಂಗನೆಯರು ಮುಳುಗಿ11 ಗೋಪಿಜನರು ರಂಗಗೆ ಮರುಳಾಗಿರೆನೂಪುರ ಮರಕತ ಪ್ರಭೆ ಸಾರಳೆಯಾಗೆಆ ಪದ್ಮರಾಗವೆ ಕೆಂಪು ಕಾರಳೆಯಾಗೆಶ್ರೀಪದನಖ ಕಾಂತಿ ರಂಗವಲ್ಲಿಯಾಗೆ 12 ಬೃಂದಾರಕರು ಪೂಮಳೆಗರೆಯಲು ಬೇಗಬಂದಾಳಿಗಳು ಬೃಂದಾವನದಲ್ಲಿ ಮಕರಂದವನುಂಡು ಸ್ವರ್ಗವ ಹಳಿದಿಳೆಗೆಬಂದಳಿಂದಿರೆಯೆಂಬ ಸಂಭ್ರಮದಿಂದ 13 ತುರುಗಾತಿಯರ ನೋಟದ ಬೇಟಂಗಳುಹರಿಮುಖೇಂದವಿನಲ್ಲಿ ಚಕೋರಗಳುಹರಿನಾಭಿಸರೋವರದಲ್ಲಿ ಮೀನ್ಗಳುಹರಿಪಾದಪದುಮದಿ ತುಂಬಿಗಳಾಗೆ14 ಇತ್ತ ಗೋವಳರಾಟಕೆ ತಲೆದೂಗುತಅತ್ತ ದೇವತೆಗಳ ಸ್ತುತಿ ಕೇಳುತ್ತಇತ್ತ ಗೋವಳೆಯರ ನಗಿಸುತ್ತ ನಗುತ್ತಅತ್ತಿತ್ತ ಮುನಿಗಳ ಸ್ತುತಿ ಕೇಳುತ್ತ 15 ಕಂಜಾಸನ ನಮಿಸಲು ಕೈಹಿಡಿದೆತ್ತಿ ಮೃ-ತÀ್ಯುಂಜಯ ವಂದಿಸೆ ಬಾ ಯೆನ್ನುತ್ತಅಂಜಲಿ ಪುಂಜದ ಇಂದ್ರಾದಿಗಳನ್ನುಕಂಜನೇತ್ರಗಳ ಸನ್ನೆಯಲಿ ಮನ್ನಿಸುತ16 ಸಿರಿ ವನಿತೆಗೆ ವನಮಾಲೆ ಉಯ್ಯಾಲೆಮೊರೆವಳಿಕುಲಗಳ ರವ ಸಂಗೀತ ವರ ಮುತ್ತಿನ ಹಾರ ಚಾಮರ ಶ್ರೀಕೃಷ್ಣ-ನುರಮಧ್ಯವೆ ಮಂಟಪವಾಗೆಸೆಯೆ 17
--------------
ವ್ಯಾಸರಾಯರು
ಆಪೋಶನವ ಹಾಕೆ ಒ(ವೈ?) ಯ್ಯಾರಿ ಲೋಕಸುಂದರಿ ಶ್ರೀಪತಿಯ ಕರದಲ್ಲಿ ಘೃತಧಾರೆ ಲೋ- ಕಂಸಾರಿ ಕೈಯಲ್ಲಿ ತ್ರಿಧಾರೆ ಪ ಕೊಳಲನೂದುತಾಕಳನೆ ಕಾಯುತ್ತ ದಧಿಚೋರನಾಗಿ ಕಳಲಗಡಿಗೆಯನೊಡೆದು ಪೋಗುತ್ತ ಸೆಳೆದು ಗೋಪೇರ ಸೀರೆಗಳ ಮರಕೆ ಕಟ್ಟಿದ್ದ ಕರಕೆ 1 ವಾರಿಜಾಕ್ಷಗೆ ಒಲಿದು ನಲಿಯುತ್ತ ವರ ಮೋಹನಾಂಗಿ ಸಾರಸಮುಖಿ ಸರಸವಾಡುತ್ತ ಮಾರಜನಕನ ಮನವ ಮೋಹಿಸುತ ಮುಖನೋಡಿ ನಗುತ2 ನಂದನಂದನ ನರನ ಸಾರಥಿಯೊ ಭೀಮೇಶಕೃಷ್ಣ ಕೊಂಡಾಪೋಶನ ಕುಳಿತ ಸತಿಜೊತೆಗೆ ಚೆಂದದಿಂದಲಿ ಬೆಳಗಲಾರತಿಯ ಪಾಡಿ ಕೀರುತಿಯ 3
--------------
ಹರಪನಹಳ್ಳಿಭೀಮವ್ವ
ಆರೋಗಣೆಯ ಮಾಡು ಸಾರಸುಖದೊಡೆಯ ಪ. ಸತ್ಯವಾದ ಜಗಕೆ ಕರ್ತುಕಾರಣ ನೀನೆ ಮುಕ್ತಿದಾಯಕ ನಿತ್ಯತೃಪ್ತನಹುದೈ ಸತ್ಯವಾದವತಾರ ಸಕಲಗುಣ ಪರಿಪೂರ್ಣ ಸಿರಿ ಪರಮ ದಯಾಳು1 ಅಣುರೋಮಕೂಪದಲಿ ಅಂಡಜಾಂಡಗಳಿರಲು ಘನಕೃಪಾಂಬುಧಿ ನಿಮ್ಮ ಪೊಗಳಲಳವೆ ಫಣಿಶಾಯಿಯಾಗಿದ್ದ ಭುವನವ್ಯಾಪಕ ಹರಿಯ ಘನಭಕುತಿಲ್ಯಜಭವರು ಪೂಜೆಮಾಡುವರು 2 ಗಂಗೆಗೋದಾವರಿ ತುಂಗಭದ್ರೆ ಯಮುನೆ ರÀಂಗಸನ್ನಿಧಿಯಾದ ಕಾವೇರಿಯು ಮಂಗಳ ಭೀಮರಥಿ ನಿಮಗೆ ಮಜ್ಜನಕೆ ಅಣಿಮಾಡಿ ಅಂಗಜನಯ್ಯ ಭಾಪೆಂದು ಪೊಗಳೆ 3 ರನ್ನಮಯವಾಗಿರ್ದ ಹೊನ್ನಮಂಟಪದೊಳಗೆ ಸ್ವರ್ಣಪಾತ್ರೆಗಳಲ್ಲಿ ಸ್ವಯಂಪಾಕವು ನಿನ್ನ ಸೊಸೆ ವಾಣಿ ಭಾರತಿದೇವಿ ಕಡುಜಾಣೆ ಚೆನ್ನಾಗಿ ನೈವೇದ್ಯವನ್ನೆ ಮಾಡುವರು 4 ಗಂಧ ಕಸ್ತೂರಿ ಪುನುಗು[ಚಂದನ] ಜವ್ವಾಜಿ ಮುಂದೆ ಕುಂಕುಮದ ಕೇಸರಿಯ ಲೇಪ ಚೆಂದದ ಕೇದಿಗೆ ಮುಡಿವಾಳ ಸಂಪಿಗೆ ಕಂದರ್ಪನಯ್ಯಗೊಪ್ಪಿತು ಮಲ್ಲಿಗೆ 5 ದೆಸೆದೆಸೆಗೆ ಪರಿಮಳಿಪ ಕುಶಲದ ಚಿತ್ರಾನ್ನ ಬಿಸಿದೋಸೆಗೆ ಬೆಣ್ಣೆ ಲೇಹ್ಯಪೇಯ ಬಸಿರೊಳಗೆ ಈರೇಳು ಜಗವನಿಂಬಿಟ್ಟವಗೆ ನಸುನಗುತ ಇಂದಿರಾದೇವಿ ಬಡಿಸೆ 6 ನೂರು ಯೋಜನದಗಲ ಸರಸಿಜ ಬ್ರಹ್ಮಾಂಡ ಹದಿ ನಾರು ಬಣ್ಣದ ಚಿನ್ನದ್ಹರಿವಾಣವು ಸಾರೆಯಲಿ ಪೊಂಬಟ್ಟಲೆಂಬ ಸಾಗರದೊಳಗೆ ಮೇರುಗಿರಿಯೆಂಬೊ ದೀಪಗಳು ಬೆಳಗೆ 7 ಘೃತ ಸೂಪ ಲೋಕಪತಿಗನುವಾದ ದಿವ್ಯಾನ್ನವು ಬೇಕಾದ ಪಂಚಭಕ್ಷ್ಯ ರಸಾಯನವ ಏಕಾಂತದಲ್ಲಿ ನಿಮ್ಮ ದೇವಿ ಬಡಿಸೆ 8 ಖಳರಕುಲವೈರಿಗೆ ತಿಳಿನೀರುಮಜ್ಜಿಗೆ ಎಳನೀರು ಪಾನಕ ಸೀತಳುದಕ ಬಳಲಿದಿರಿ ಬಳಲಿದಿರಿ ಎನುತ ಹಯವದನಗೆ ನಳಿನಾಕ್ಷಿ ಕರ್ಪೂರವೀಳ್ಯವನೆ ಕೊಡಲು 9
--------------
ವಾದಿರಾಜ
ಇಂದಿರೇಶನು ಮಣಿನಂದಿನೀ ತೀರದಿ ಚೆಂದದಿ ಕೊಳಲೂದುತಿರಲು ಹರಿ ಆ- ನಂದದಿ ಕೊಳಲೂದುತಿರಲು ಅಂಬುಜಾಕ್ಷಿಯರು ಕೇಳತಿ ಮೋಹತನದಿ ಗೋ- ವಿಂದನಿದ್ದಲ್ಲೆ ನಡೆದರು 1 ಕರ ಸಡಿಲ ಬೀಳುತಲಿರೆ ಪರವಶವಾಗಿ ನಾರಿಯರು ದೇಹ ಪರವಶವಾಗಿ ನಾರಿಯರು ಕರುಗಳ ತೊಟ್ಟಿಲೊಳಗೆಯಿಟ್ಟು ಪಾಡುತ ಭರದಿಂದ ತೂಗಿ ನಡೆದರು 2 ಉಕ್ಕುವೊ ಹಾಲಿಗೆ ಉರಿ ಮಾಡಿ ಮತ್ತಿಷ್ಟು ಮಕ್ಕಳ ಕಣ್ಣಿಗೆ ಬಿಗಿದು ಅಳುವೊ ಕೃಷ್ಣನಿದ್ದಲ್ಲೆ ನಡೆದರು 3 ಕುಂಭಿಣಿಪತಿ ನೋಡೋ ಸಂಭ್ರಮದಿಂದಲಿ ಅಂಬರವನೆ ಬಿಟ್ಟು ಕೆಲರು ತಾವು (ಉ) ಟ್ಟಂಬರವನೆ ಬಿಟ್ಟು ಕೆಲರು ಕಂಚುಕ ಕಬರಕ್ಕೆ ಸುತ್ತಿ ನಡೆದರು 4 ಪಂಚಭಕ್ಷ ಪರಮಾನ್ನ ಘೃತವು ಕ್ಷೀರ ಪತಿಸುತರಿಗೆ ಉಣ ಬಡಿಸಿ ತಮ್ಮ ಮತಿಭ್ರಾಂತರಾಗಿ ಮ್ಯಾಲೆಡೆಗಳನಿಕ್ಕದೆ ಸತಿಯರು ಸಾಗಿ ನಡೆದರು 5 ಪಂಚರತ್ನದ ಹಾರಪದಕ ಕಠಾಣಿಯ ಟೊಂಕಕ್ಕೆ ಸುತ್ತಿ ನಾರಿಯರು ಸರವ ಟೊಂಕಕ್ಕೆ ಸುತ್ತಿ ನಾರಿಯರು ಪಂಚಮುಖದ ಪಟ್ಟಿ ಕಂಠದಲ್ಲಿಟ್ಟರು ವೈ- ಕುಂಠಪತಿಯ ನೋಡೋ ಭರದಿ 6 ಕಂಕಣ ಬಳೆ(ಡೋ)ರ್ಯ ಕಾಲಿನಲ್ಲೇರಿಸಿ ಕಿಂಕಿಣಿ ಕಿರುಗೆಜ್ಜೆ ರುಳಿಯು ಕಾಲ ಕಿಂಕಿಣಿ ಕಿರುಗೆಜ್ಜೆ ರುಳಿಯು ಪಂಕಜಾಕ್ಷೇರು ನಳಿತÉೂೀಳಿನಲ್ಲೇರಿಸಿ ಅ- ಲಂಕಾರವಾಗಿ ನಡೆದರು 7 ಮುತ್ತಿನ ಬಟ್ಟರಳಲೆ ಚಂದ್ರರಾಗಟೆ ಕಟ್ಟಿದರೊಂದೊಂದು ಕಿವಿಗೆ ಚೌರಿ ಅರಳು ಮಲ್ಲಿಗೆ ಮಾಲೆ ದಿಕ್ಕಿ ಗೊಂದೊಂದುದುರುತಲಿ 8 ವಾಲೆ ಮೂಗುತಿ ವೈಯಾರದ ಬಾವುಲಿ ಕೂ- ದಲಿಗೊಂದೊಂದು ಸಿಗಿಸಿ ತಮ್ಮ ಕೂ- ದಲಿಗೊಂದೊಂದು ಸಿಗಿಸಿ ಮಾರನಯ್ಯನ ಮೋರೆ ನೋಡಲು ಮದ- ವೇರಿದ ಗಜದಂತೆ ನಡೆದರು 9 ಹಲ್ಲಿಗೆ ಕುಂಕುಮ ಗಲ್ಲಕ್ಕೆ ಕಾಡಿಗೆ ಚೆಲ್ವ ಹಣೆಗೆ ಅರಿಷಿಣವ ತೀಡಿ ಚೆಲ್ವ ಹಣೆಗೆ ಅರಿಷಿಣವ ಫುಲ್ಲಾಕ್ಷದಲ್ಲಿ ಕಸ್ತೂರಿ ತಿಲಕವನ್ನಿಟ್ಟು ಗೊಲ್ಲ ಸತಿಯರು ನಡೆದರು 10 ಭಕ್ತಿಭಾವದಿ ಚಿತ್ತ ಪರವಶವಾಗಿದ್ದ ಮಿತ್ರೆಯರನೆ ನೋಡಿ ನಗುತ ಬರುವೊ ಮಿತ್ರೆಯರನೆ ನೋಡಿ ನಗುತ ಕತ್ತಲೊಳಗೆ ದಿಟ್ಟತನದಿಂದ ಬರುವುದಿ- ದಾಶ್ಚರ್ಯವೆಂದ ಶ್ರೀಕೃಷ್ಣ 11 ಏನು ಕಾರಣ ನೀವು ಬಂದಿರಿ ವನಕಿನ್ನು ಭಾನು ತಾ ಉದಿಸದ ಮುಂದೆ ಅರುಣ ಮಾನದಿಂದಲಿ ಮನೆಗಳಿಗೆ ಹೋಗಿರಿ ಎಂದು ದಾನವಾಂತಕ ಕೃಷ್ಣ ನುಡಿದ 12 ದೇವಾಧಿದೇವ ದೇವಕ್ಕಿ ಸುತನೆ ಕೃಷ್ಣ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಕೇಳೊ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಮಾನವೆಲ್ಲಿಹುದ್ಹೇಳೊ ಮಾವನಾಂತಕನಾದ ಶ್ರೀನಾಥ ರಕ್ಷಿಸೊ ನಮ್ಮ 13 ರಂಗನೆ ನಿನ್ನಂಗಸಂಗವ ಬೇಡುವ ಅಂಗನೇರಿಗೆ ದಯ ಮಾಡೊ ನೀ ಗೋ- ಪಾಂಗನೇರಿಗೆ ದಯ ಮಾಡೊ ಕಂಗಳ ತೆರೆದು ಕಟಾಕ್ಷದಿ ನೋಡುತ ಇಂದೀ ಜಲಕ್ರೀಡೆನಾಡೊ 14 ಭಂಗಾರಾಭರಣದಿ ಕುಂದಣವಿಟ್ಟಂತೆ ಚಂದ್ರ ತಾರದಲ್ಲಿದ್ದಂತೆ ಹರಿ ತಾ ಚಂದ್ರ ತಾರದಲ್ಲಿದ್ದಂತೆ ಮಂದಗಮನೆಯರ ಮಧ್ಯ ಆಡುತ ಗೋಪೀ ಕಂದ ದೃಷ್ಟಿಗೆ ಮರೆಯಾದ 15 ಜಾಜಿ ಮಲ್ಲಿಗೆ ಸಂಪಿಗೆ ಶಾವಂತಿಗೆ ಕಮಲ ಕ್ಯಾದಿಗೆಯೆ ಕಮಲ ಕ್ಯಾದಿಗೆಯೆ ನೀವಿಲ್ಲೆ ಕಂಡಿರ ಯಾದವ ಕೃಷ್ಣನ ತೋರೆ ತೋರೆಂದ್ವೊದರುತಲಿ 16 ಕೆಂದಾವರೆ ಕೆಲದಲ್ಲಿದ್ದ ತಾವರೆ ಕುಂದಕುಸುಮ ಎಳೆ ತುಳಸಿ ತೋರೆ ಕುಂದಕುಸುಮ ಎಳೆ ತುಳಸಿ ಅಂಬುಜನಾಭನಾಲ್ಪರಿದುಡುಕುತಲಿರೆ ಕಂಡರ್ವೊಂದರವಿಂದ ನಖವ 17 ವಂಚಿತಳಾಗಿದ್ದ ವನಿತೆಯ ಮುಖ ನೋಡಿ ಚಂಚಲಾಕ್ಷನ ಸುದ್ದಿ ಕೇಳಿ ತಾವು ಚಂಚಲಾಕ್ಷನ ಸುದ್ದಿ ಕೇಳಿ ಭ್ರಾಂತರಾಗ್ವನದಿ ಶ್ರೀಕಾಂತನ ಸ್ತುತಿಸಲು ನಿಂತ ಮನ್ಮಥನಂತೆ ಬಂದು 18 ಸೂರ್ಯ ಮಧ್ಯ ಮೇಘವು ಪೊಳೆದಂತೆ ಕಾಂತೆಯರನೆ ಕೂಡ್ಯಾಡಿ ಹರಿ ತಾ ಕಾಂತೆಯರನೆ ಕೂಡ್ಯಾಡಿ ಅಂತರಂಗದಿ ನಿಶ್ಚಂಚಲ ಭಕ್ತಿಗೆ ಸಂತೋಷ ಬಡಿಸಿದ ಕೃಷ್ಣ&ಟಿb
--------------
ಹರಪನಹಳ್ಳಿಭೀಮವ್ವ
ಈ ಧರಣಿಯೊಳ್ ಹದಿನಾರು ಸಾವಿರ ಮಂದಿ ಆಳುತ ದ್ವಾರಕೆಯಲ್ಲಿ ವಿನೋದದಿ ಕುಳಿತಿದ್ದ ಹರಿಯು 1 ಅಂಬುಜೋದ್ಭವನ ಅಂಕದಲುದಿಸಿದ ಸುತ ಚೆಂದ ಚೆಂದ ವೀಣೆ ಪಿಡಿದು ಕಂದರ್ಪಪಿತ (ನಲ್ಲಿಗೆ) ನಲಿನಲಿದಾಡುತ ಬಂದ ನಾರಂದ ಹರುಷದಲಿ2 ಬಂದ ನಾರಂದನ ಕಂಡು ಕಮಲನಾಭ ಚೆಂದದಿಂದಲಿ ಅಘ್ರ್ಯ ಪಾದಪೂಜೆಯ ಮಾಡಿ ನಾ- ರಂದಗೆ ಎರಗಿದನಾಗ3 ದೇವಾಧಿದೇವನೆ ದೇವಲೋಕದಿ ಸುತ್ತಿ ಈ ಪಾರಿಜಾತವ ತಂದೆ ದೇವಿ ರುಕ್ಮಿಣಿಗೀಗ ಮುಡಿಸೆಂದು ನಾರಂದ ಸ್ವಾಮಿಯ ಚರಣಕ್ಕರ್ಪಿಸಿದ 4 ತಕ್ಷಣದಿ ಜಗನ್ಮಾತೆ ಮಾಲಕ್ಷುಮಿ ಸಾಕ್ಷಾತ ಶ್ರೀನಾರಾಯಣನು ವಕ್ಷಸ್ಥಳದಲಿ ಹೊಂದಿರುವ ರುಕ್ಮಿಣಿಯನು ಸ್ತೋತ್ರ ಮಾಡಿದನು ನಾರದನು 5 ಕಡಲಶಯನ ಕಡೆಗಣ್ಣ ನೋಟಗಳಿಂದ ಕಡುಮುದ್ದು ಸುರಿವೊ ರುಕ್ಮಿಣಿಯ ಬಡನಡುವಿನ ಭಾಮಿನಿರನ್ನೆ ಬಾರೆಂದು ತೊಡೆಯ ಮ್ಯಾಲಿಟ್ಟ ಶ್ರೀಕೃಷ್ಣ 6 ದುಂಡುಮಲ್ಲಿಗೆ ಗೊಂಡ್ಯ ಚೌರಿ ರಾಗಟೆ ಜಡೆ- ಅಂಗನೆ ರುಗ್ಮಿಯಾಲಿಂಗನೆ ಮಾಡುತ ರಂಗ ತಾ ಮುಡಿಸಿದ ಸತಿಗೆ 7 ಸರಿಸವತೇರ ಬಿಟ್ಟು ಸುರಪಾರಿಜಾತವ ಗರುವಿಕೆಯಿಂದ ನೀ ಮುಡಿದೆ ಹರದಿ ಸತ್ಯಭಾಮೆ ಕೇಳಿ ಮುನಿದರಿನ್ನು ಅರಿಯೆನು ನಾ ಇದಕೆ ಉಪಾಯ 8 ಗಾಡಿಕಾರನು ಕೃಷ್ಣ ಆಡುವೊ ಮಾತನು ಕೇಳಿ ರುಕ್ಮಿಣಿ ನಗುತಿರಲು ಓಡುತ ಬಂದು ನಾರದ ಸತ್ಯಭಾಮೆ- ಗಲ್ಲದ ವಾರ್ತೆಗಳರುಹಿದನು 9 ಅಲ್ಲಿಂದ ದೇವಲೋಕವ ಸುತ್ತಿ ತಂದೇನೆ ಚೆಲ್ವೆನಗೆ ತಕ್ಕ ಕುಸುಮ ಗೊಲ್ಲ ಕೃಷ್ಣನ ಕೈಯಲ್ಲಿ ಕೊಟ್ಟರೆ ತನ್ನ ನಲ್ಲೆ ರುಕ್ಮಿಣಿಗೆ ಮುಡಿಸಿದನು 10 ಕೇಳುತ ಭಾಮೆ ತಲ್ಲಣಿಸಿ ಕೋಪಗಳಿಂದ ಹೇಮಮಾಣಿಕ್ಯದ್ವಜ್ರಾಭರಣ ಹಾರ ಪದಕ ಕಠಾಣಿಮುತ್ತನೆ ಚೆಲ್ಲಿ ಭೂಮಿಲಿ ಬಿದ್ದೊ ್ಹರಳಿದಳು 11 ಮಲ್ಲಿಗೆ ದವನ ಕ್ಯಾದಿಗೆ ಶಾವಂತಿಗೆ ಬಿಟ್ಟು ಒಲ್ಲೆನೆಂದೊರೆಸಿ ಕಸ್ತೂರಿಯ ವಲ್ಲಭನೊಲ್ಲದೀ ಸೊಗಸ್ಯಾತಕೆನುತಲಿ ಗಲ್ಲದ್ವಿಳ್ಯವನುಗುಳಿದಳು 12 ಸರ್ಪನಂದದಿ ಉಸುರ್ಹಾಕುತ ಭಾಮೆ ತಾ ನೇತ್ರದಿ ಜಲವ ಸುರಿಸುತಲಿ ಸರ್ಪಶಯನನೊಲ್ಲದೀ ದೇಹವ್ಯಾಕೆಂದು ಪಟ್ಟೆ ಮಂಚದಲೊರಗಿದಳು 13 ನಿಂತು ನೋಡುತ ಸತ್ಯಭಾಮೆ ಮಾಡುವೊದು ಇ- ನ್ನೆಂತು ಮಾಡಲಿಯಿದಕೆಂದು ಅಂತರಂಗದಲಿ ಯೋಚನೆ ಮಾಡಿ ನಾರಂದ ಶ್ರೀ- ಕಾಂತನ ಮನೆಮಾರ್ಗ ಹಿಡಿದ 14 ತಿರುಗಿ ಬಂದ್ಹರಿಯ ಮುಂದರುಹಿದ ನಾರಂದ ತೊರೆವೋಳು ತನ್ನ ಪ್ರಾಣವನು ಮರುಗುತ ಸೊರಗಿ ಬಿದ್ದಿರುವೊ ಭಾಮೆಯ ನೋಡಿ ಕರುಣವಿಲ್ಲೇನೊ ಶ್ರೀ ಕೃಷ್ಣ 15 ಮುನಿಯ ಮಾತನು ಕೇಳಿ ಮುಗುಳು ನಗೆಯ ನಕ್ಕು ಪರಿ ಬವಣೆಗೆ ಒಳಗಾದೆ ಧರೆಯ ಒಳಗೆ ಇಬ್ಬರ್ಹೆಂಡರಾಳುವೋರಿನ್ನು ಪರಮ ಮೂರ್ಖರು ಅವರೆಂದ 16 ಹೊದ್ದ ಪೀತಾಂಬರ ಅಲೆಯುತ ಶ್ರೀಕೃಷ್ಣ ಹದ್ದನೇರದೆ ನಡೆಯುತಲಿ ಮುದ್ದು ರುಕ್ಮಿಣಿಯ ಮುಂದಕೆ ಕರೆದ್ಹೇಳದೆ ಎದ್ದು ಬಂದನು ಭಾಮೆಮನೆಗೆ 17 ಅರ್ಕನಂತ್ಹೊಳೆಯುತ ಹೊಕ್ಕ ತನ್ನರಮನೆ ಕಕ್ಕಬಿಕ್ಕ್ಯಾಗಿ ನೋಡುತಲಿ ದಿಕ್ಕು ದಿಕ್ಕಿಗೆ ಬಿದ್ದಾಭರಣವಾರಿಸಿ ರತ್ನ ದೆಕ್ಕಿಲೇ(?) ಬಂದು ತಾ ಕುಳಿತ 18 ಮಿಂಚು ಸೂರ್ಯಗೆ ಮಿಗಿಲಾಗಿದ್ದ ಮುಖ ಬಾಡಿ ಸಂಪಿಗೆ ಸರವ ಈಡ್ಯಾಡಿ ಚಿಂತೆಮಾಡುವರೆ ಚಿನ್ನದ ಗೊಂಬೆ ಏಳೆಂದು ಮಂಚದ ಮ್ಯಾಲೆ ತಾ ಕುಳಿತ 19 ಬೆವರಿದ್ದ ಮುಖವ ಮುಂಜೆರಗಿಲಿಂದೊರೆಸುತ ಹ- ರವಿದ ಹಾರ ಹಾಕುತಲಿ ಪರಮ ಪ್ರೀತಿಲಿ ತನ್ನ ಕರಗಳಿಂದ್ಹಿಡಿದೆತ್ತೆ- ನ್ನರಗಿಳಿ ಏಳೆಂದೆಬ್ಬಿಸಿದ 20 ಸಿಟ್ಟಿಲಿಂದೆದ್ದು ಶ್ರೀ ಕೃಷ್ಣನ ಒಳೆಯಿಕ್ಕೆ ಬಿಟ್ಟವರಾರು ಈಗೆನುತ ದೃಷ್ಟಿ ತೆಗೆದು ಕೋಟಿಸೂರ್ಯ ಪ್ರಕಾಶನ ಇ- ಕ್ಕದ್ಹಾಗೆವೆಯ ನೋಡಿದಳು 21 ಇಷ್ಟು ಕ್ರೋಧಗಳ್ಯಾತಕೀ ಚಾಡಿ ನಾರಂದ ಹಚ್ಚಿ ಹೋದನೆ ಕದನವನು <ಈಔಓಖಿ size=
--------------
ಹರಪನಹಳ್ಳಿಭೀಮವ್ವ
ಎಲ್ಲಿ ಮಾಯಾವಾದನೆ ರಂಗಯ್ಯನುಎಲ್ಲಿ ಮಾಯಾವಾದನೆಪ ಎಲ್ಲಿ ಮಾಯಾವಾದ ಫುಲ್ಲನಾಭಕೃಷ್ಣಚೆಲ್ಲೆ ಗಂಗಳೆಯರು ಹುಡುಕ ಹೋಗುವ ಬನ್ನಿ ಅ.ಪ. ಮಂದ ಗಮನೆಯರೆಲ್ಲ ಕೃಷ್ಣನ ಕೂಡೆಚೆಂದದಿ ಇದ್ದೆವಲ್ಲಕಂದರ್ಪ ಬಾಧೆಗೆ ಗುರಿಯ ಮಾಡಿದನಲ್ಲಮಂದಮತಿ ನಮಗೆ ಬಂದು ಒದಗಿತಲ್ಲ 1 ಸರಸಿಜಾಕ್ಷಿಯರು ಕೂಡಿ ಕೃಷ್ಣನ ಕೂಡೆಸರಸವಾಡುತಲಿದ್ದೆವೆಕರೆಕರೆಗೊಳಿಸಿ ಮನ್ಮಥ ಬಾಧೆಗೊಪ್ಪಿಸಿಚರಣ ಸೇವಕರಾದ ತರಳೆಯರನು ಬಿಟ್ಟು 2 ಭಕ್ತವತ್ಸಲ ದೇವನು ತನ್ನವರನ್ನುಅಕ್ಕರದಲಿ ಪೊರೆವನುಸಿಕ್ಕದೆ ಹೋಗನು ಹುಡುಕುತ್ತ ಹೋಗುವಅಕ್ಕಯ್ಯ ಬನ್ನಿರೆ ಉಡುಪಿ ಶ್ರೀಕೃಷ್ಣನು 3
--------------
ವ್ಯಾಸರಾಯರು
ಕಡಲಶಯನ ಹರಿಯ ತೊಡೆಯಲ್ಲಿ ಮಡದ್ಯೇರಿಬ್ಬರು ಕುಳಿತು ಪ ಪನ್ನಂಗಶಯನ ಕೇಳೆ ಸ್ವಾಮಿ ನೀ ಎನ್ನ ಮನೆಗೆ ಏಳೊ ನಿನ್ನ ಪಾದಕ್ಕೆ ಎರಗುವೆನೆಂದು ಭಾಮೆ ಕೈ- ಯನ್ನು ಮುಗಿದಳಾಗ 1 ಎನ್ನ ಮನೆಯಲ್ಲಿದ್ದ ಶ್ರೀಹರಿ- ಯನ್ನು ಕರೆಯಲವರ ಕಣ್ಣೇಸೆನುತಲಿ ಕರ್ಣಿ(ನ್ಯೆ?) ರುಕ್ಮಿಣಿ ಕೋಪ- ವನ್ನು ಧರಿಸಲಾಗ 2 ಎಷ್ಟು ಹಣವ ನೀನು ಕೃಷ್ಣಗೆ ಕೊಟ್ಟು ಕೊಂಡಿ ಹೇಳೆ ದಿಟ್ಟತನದ ಮಾತಾಡೋ ರುಕ್ಮಿಣಿ ನಿನ್ನ ಶ್ರೇಷ್ಠತನವೇನ್ಹೇಳೆ 3 ಹತ್ತು ಆರು ಸಾವಿರದಷ್ಟ ಭಾರ್ಯೇರವೊಳಗೆ ಸತ್ಯಭಾಮೆ ಉತ್ಕøಷ್ಟ ಚೆಲುವೆಯೆಂದು ಕೃಷ್ಣ ನಿನ್ನಲ್ಲಿಹನೆ4 ಹದಿನಾಲ್ಕು ಲೋಕದಲಿ ಹರಿ ಪಾದಾಂಬುಜವ ಕಾಂಬುವೋರಿಲ್ಲೆ ಯದುನಾಥನ ಎದೆ ಮ್ಯಾಲ್ಹತ್ತಿರುವೋದು ಇದು ಸೋಜಿಗವಲ್ಲೆ 5 ಇಷ್ಟೆ ಸೋಜಿಗವೆಂದು ಆಡಲು ದಿಟ್ಟೆ ನಿನಗೆ ಅರಿದೆ ಅಷ್ಟದಿಕ್ಪಾಲಕರನೆ ಓಡಿಸಿ ವೃಕ್ಷ ಕಿತ್ತು ಒದರು(ರುವು?) ದಲ್ಲೆ 6 ಜಲಪ್ರಳಯ ಕಾಲದಲಿ ಜನರಿಲ್ಲದ ಅಂಧಕಾರದಲಿ ಎಲೆಯಾಗಾ ಪರಮಾತ್ಮನ ಮನವ ನೀ ಮೊ- ದಲೆ ಒಲಿಸಿಕೊಂಡೆ 7 ಕಾದು ಸೇವಿಸೆ ಹರಿಯ ಪಾದದ- ಲ್ಲಾದರವಿಲ್ಲದಲೆ ದಾನ ಮಾಡುತ ಮುನಿಹಿಂದಟ್ಟಿದರ್ಹರಿ ಹ್ಯಾಗೆ ಬರುವನ್ಹೇಳೆ 8 ಮೂರು ಲೋಕದ ದೊರೆಯ ಮೂರೆಲೆ ತುಳಸಿ- ಸರಿಯ ಮಾಡಿ ಮುಕುತಿದಾಯಕ ಕೈವಶವಾ- ಗಿರಲು ನೀ ಸಕಲ ಮಾಯವ ಬಲ್ಲೆ 9 ಪಟ್ಟದ್ವೊಲ್ಲಭೆ ನಾನು ಕೃಷ್ಣಗೆ ಮೆಚ್ಚಿ ಬಂದೆಯೆ ನೀನು ಅಚ್ಚುತ ತಾ ಪರಮಾನುಗ್ರ(ಹ)ವ ಮಾಡಿ ಬಂ- ದಿಚ್ಛೆಲಿರುವ ತಾನು10 ಮಾತಾಪಿತರು ಅನುಜನನ್ವಂಚಿಸಿ ಈತಗ್ವಾಲೆಯ ಬರೆದು ಯಾತಕಂಜಿಕೆ ವಲಿಸ್ಯೋಡಿ ಬಂದವಳೆಂದು ಕೀರ್ಹೊಗಳುವುದಲ್ಲೆ 11 ತಂದು ಕೊಡಲು ಮಣಿಯ ಸಭೆಯೊಳು ಅಂದು ತಗ್ಗಿಸಿ ತಲೆಯ ನಿಂದ್ಯದ ಮಾತಿಗೆ ತಂದು ನಿಮ್ಮಯ್ಯ ಮುಂದಿಟ್ಟು ಪೋದನೆ ನಿನ್ನ 12 ಕೇಳೊ ಕೇಳೊ ನುಡಿಯ ನೀನೀ- ರೇಳು ಲೋಕದ ಒಡೆಯ ಹೇಳೋ ಬುದ್ಧಿ ನಿನ್ನಯ ವಲ್ಲಭೆ ಮಾತಾ- ಡೋಳೊ ನಿರ್ಭಿಡೆಯ 13 ರಕ್ಕಸಾಂತಕ ಕೇಳೊ ನಿನ್ನ ಚಿಕ್ಕವಲ್ಲಭೆ ಮ(ಹಿ)ಮೆ ಉಕ್ಕಿ ಉಕ್ಕಿ ಎನ್ನ ಮ್ಯಾಲೆ ಬರಲು ನಿನ- ಗಕ್ಕರ ತೋರುವುದೆ 14 ಆರ್ಯಳೆಂದು ನಾನು ತಾಳಿದೆ- ನಕ್ಕ ರುಕ್ಮಿಣಿ ಮಾತ ಏರಿ ಏರಿ ಏನ್ನಮ್ಯಾಲೆ ಬರಲು ಇದು ನ್ಯಾಯವೇನೊ ನಿನಗೆ 15 ನಾಲ್ಕು ತೋಳಿನಿಂದ ಆಲಿಂಗಿಸಿ ಕಾಂತೆಯರಿಬ್ಬರನು ಯಾತಕಿಂಥ ಕದನವು ಘನವಾಯಿತು ಸಾಕು ಸಾಕುಯೆನುತ16 ವಾರಿಜಾಕ್ಷ ಕೇಳೋ ನಾರದ- ರ್ಹೂಡಿದರೀ ಜಗಳ ಪಾರಿಜಾತ ಸರಿಸವತಿಗೆ ಕೊಟ್ಟ- ರಿನ್ಯಾರು ಸೈರಿಸೋರ್ಹೇಳೊ 17 ನಂದನವನ ತರುವ ನಾ ತಂದಿಟ್ಟೆನಂಗಳದಲ್ಲೆ ಅಂದಿಬ್ಬರನಾನಂದವ ಬಡಿಸಿದ ಚೆಂದದಿಂದಲಿ ನಗುತ 18 ಭಾಮೆ ರುಕ್ಮಿಣಿ ಸಹಿತ ನಡುವೆ ಭೀಮೇಶ ಕೃಷ್ಣನು ಕುಳಿತ ಕಾಮನಯ್ಯನ ಚರಿತ್ರೆಯ ಪಾಡ- ಲಮೃತ ಪಾನವು ನಿರುತ 19
--------------
ಹರಪನಹಳ್ಳಿಭೀಮವ್ವ
ಕಂತುಪಿತನೆ ನಿನ್ನ ಎಂತು ವರ್ಣಿಪೆ ಲಕ್ಷ್ಮೀ -ಕಾಂತ ಪಾಲಿಸೆನ್ನನು ನಿರಂತರದಲಿ ಪ ಕುಂತಿಪುತ್ರಗೆ ನೀನತ್ಯಂತ ಸಾರಥಿತ್ವವ ಮಾಡಿನಿಂತು ದುರ್ಯೋಧನನ ಶಿರವ ಅಂತಕನಿಗೊಪ್ಪಸಿದ ಧೀರ ಅ.ಪ ಸುಂದರವದನ ನಿನ್ನ ಕಂದ ಭಜಿಸಲು ಮುದದಿಂದ ಕಂಬದೊಳ್ಬಂದೆ ಮಂದರೋದ್ಧರಸಿಂಧುಶಾಯಿ ರಕ್ಕಸನ ಕೊಂದು ಕರುಳ ಮಾಲೆಯನ್ನುಚೆಂದದಿಂ ಕಂಧರದೊಳ್ಧರಿಸಿದಾನಂದಮೂರ್ತಿ ಇಂದಿರೇಶ1 ಕದಂಬ ಪೂಜಿತಾಂಘ್ರಿಯುಗಳನಂಬಿದ ಭಕ್ತರ ಕಾಯ್ವ ಅಂಬುಜನೇತ್ರಅಂಬರೀಷ ದ್ವಾದಶಿ ವ್ರತವ ಸಂಭ್ರಮದಿ ಮಾಡುತಿರೆಡೊಂಬಿಯಿಂ ದೂರ್ವಾಸ ಶಪಿಸೆ ಬೆಂಬಿಡದೆ ಚಕ್ರದಿ ಸಲಹಿದ2 ಗಂಗೆಯ ಜನಕ ನಿನ್ನ ಅಂಗನೆ ದ್ರೌಪದಿದೇವಿಭಂಗಬಿಡಿಸೆಂದು ಕೂಗೆ ಮಂಗಳಾಂಗನೆಸಾಂಗದಿಂದ ವಸ್ತ್ರಂಗಳ ಹಿಂಗದೆ ಪಾಲಿಸಿದಂಥರಂಗವಿಠಲ ಪಾಲಿಸೀಗ ತುಂಗ ವಿಕ್ರಮ ಎನ್ನ ಮಾತ 3
--------------
ಶ್ರೀಪಾದರಾಜರು
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ
ಗಿಣಿಯೆ ನಿನಗೇನು ಬೇಕದನೀವೆ ಹಯವದನ-ನೆನಿಪ ಹರಿಯನು ಕರೆತಾರೆ ಗಿಣಿಯೆಮುನಿ ವಾದಿರಾಜನಿಗೆ ವರವೀವ ದೇವನವನೆನೆವವರ ಬಿಡನೆಲೆ ಗಿಣಿಯೆ ಪ. ವೃಂದಾವನದಿ ಚಂದ್ರನಂತೆಸೆವ ಗೋವಿಂದಚಂದದಿ ನಿನ್ನ ಮಾತ ಮನ್ನಿಸುವನಂದಗೋಪಿಯ ಮುದ್ದುಕಂದನೆನಿಪ ಮುಕುಂದನ-ನಿಂದಿರುಳು ತಂದು ತೋರು ಗಿಣಿಯೆ 1 ಮೂರು ಬಣ್ಣದ ಕೊರಳ ತಿರಿಯುಳ್ಳ ಗಿಣಿ ನೀನುಮೂರು ಬಣ್ಣದ ಚಾರುನಯನಮಾರನನುಚರ ನೀನು ಮಾರನ ಜನಕನವನುಮೀರ ನಿನ್ನ ಬಿನ್ನಪವ ಗಿಣಿಯೆ 2 ಸತತ ಸಿರಿದೇವಿಯರ ಸುತನೆನಿಪ ಕಾಮನಿಗೆರಥವಾಗಿ ಮೆರೆವೆ ನೀ ಗಿಣಿಯೆಕೃತಕೃತ್ಯನಾದರೂ ಅದರಿಂದ ನಿನ್ನ ಮಾತಪ್ರತಿಪಾಲಿಸುವನೆÉಲೆ ಗಿಣಿಯೆ 3 ಎಲ್ಲರು ಭುಂಜಿಸುವ ಮೊದಲೆ ಭುಂಜಿಸುವ ನಮ್ಮಿನಿಯಬಲ್ಲಿದಾತನ ಬಿರುದ ನಿನಗಿತ್ತಚೆಲುವ ಸಸಿಗಳ ತೆನೆಯ ತಂದು ತಂದು ಮೆಲುವೆ ಗಡಸಲುವುದು ಮೋಹನದ ಗಿಣಿಯೆ 4 ಪಚ್ಚೆಯ ಬಣ್ಣದ ಗರಿಯ ಸಿರಿಯುಳ್ಳ ಗಿಣಿ ನೀನುಪಚ್ಚೆಯ ಬಣ್ಣದ ವ್ಯಾಸನವನುಎಚ್ಚರಿಸಿ ಕೊಡುತಿದೆ ನಿನ್ನ ಕಂಡರಾ ಮುನಿಯಮೆಚ್ಚಿದೆ ನಾನವನ ತಂದು ತೋರು ಗಿಣಿಯೆ 5 ಕೆಂದಾವರೆಯ ಪೋಲ್ವ ನಿನ್ನ ಚರಣ ಹರಿಯ ಪದದÀಂದವನು[ತಂದುತೋರು]ಗಿಣಿಯೆಚೆಂದದ ಅವನ ಚೆಂದುಟಿಯಂತೆ ನಿನ್ನ ಚೆಲುವ ಮುಖ ಕೆಂಪುತÀಂದು ಮುಂದಿರಿಸು ನೀ ಗಿಣಿಯೆ6 ಅವನ ವಾಹನನೆನಿಪ ಗರುಡನ ಕುಲದಲುದ್ಭವಿಸಿ-ದವ ನೀನೆಲೆ ಗಿಣಿಯೆಅವನ ಮುದ್ದು ನುಡಿಯ ಬಲ್ಲರೆ ನೀನು ಜಗದೊಳಗೆಸವಿಮಾತುಗಳ ನುಡಿವೆ ಗಿಣಿಯೆ 7 ಗಮನ ನಿನಗೆಸೊಗಸುನುಡಿಯಿಂದವನ ಪದಕೆ ಬಿನ್ನಹ ಮಾಡಿಸುಗುಣನ ಕರೆತಾರೆ ಗಿಣಿಯೆ8 ತಮ್ಮ ತಮ್ಮ ಮನೆಗಳಲ್ಲಿ ರಮೆಯರಸ ಕೃಷ್ಣನ-ನು ಮನದಲ್ಲಿ ಅರ್ಚಿಸಿ [ಪೂಜಿಸುವರು]ಸುಮುಖನೆಂದು ನಿನ್ನ ಮನೆಯ ಚಾವಡಿಯಲಿ ಇಹ-ನ ಮನ್ನಿಪರೆಲೆ ಗಿಣಿಯೆ 9 ಉರದಲ್ಲಿ ಸಿರಿವತ್ಸಯೆಂಬ ಕುರುಹುಂಟವಗೆಕರಗಳಲಿ ಶಂಖಚಕ್ರಗಳು ಕೊರಳಲ್ಲಿ ಕೌಸ್ತುಭಮಣಿಯಿಹ ಹಯವದನ ನ-ಮ್ಮರಸನೆಂದರಿತುಕೊ ಗಿಣಿಯೆ 10
--------------
ವಾದಿರಾಜ
ಗೋಪಾಲ ಬಾಲಾ ತ್ರಿಭುವನ ಪಾಲಾ ಕರುಣಾಲವಾಲ ಗೋಪಾಲ ಬಾಲಾ ಗೋಪೀ ಬಾಲಾ ಭಕುತಾನುಕೂಲ ಪ ಪಾಪಕುಲಾನಲ ತಾಪಸ ಸಂಕುಲ ಶ್ರೀಪತೆ ಮಾಂಗಿರಿನಿಲಯ ಶುಭಾಕುಲ ತಾಪತ್ರಯ ಕುಲಜಾಲ ನಿರ್ಮೂಲ ಗೋಪಗೋಪಿಕಾನಂದದುಕೂಲಾಅ.ಪ ಮುರಳೀಧರ ಘನಸುಂದರ ಭಾವ ದೇವಾದಿದೇವ ಸರಸೀರುಹದಳನಯನ ಸ್ವಭಾವಾ ಜೀವಾದಿಜೀವ ವರದಾಯಕ ಶರಣರ ಸಂಜೀವಾ ಮೃದುಮಧುರಸ್ವಭಾವ ಸ್ವರನಾದದಿ ಘಲು ಘಲ್ಲೆನುತಿರುವಾ ವರನೂಪುರದುಂಗುರ ಝಣ ಝಣರವ ಹರುಷದೊಳೆಲ್ಲೆಡೆಯೊಳು ನಲಿನಲಿದಾಡುವ 1 ಮುದ್ದಾಡಿ ನಲಿಯಳೆ ನಿನ್ನ ಯಶೋದಾ ಅಘರೂಪವಾದ ಮುದ್ದೆ ಬೆಣ್ಣೆಯ ಮೆಲುವಾತುರದಿಂದ ಕರಯುಗಗಳಿಂದ ಕದ್ದು ನೀ ನೋಡುವುದೇ ಅತಿಚೆಂದ ಭಕ್ತರಾನಂದಾ ಮದ್ದುಣಿಸಿದಳ ಒದ್ದು ಸಂಹರಿಸಿದ ಮೆದ್ದು ಉದ್ಧರಿಸೊ ಗೋವಿಂದ ನಂದನಕಂದ 2 ಅಕ್ಕೋ ಬೃಂದಾವನದಾನಂದ ಹೊಂಗೊಳಲಿಂದಾ ಇಕ್ಕೋ ಚೆಂದದ ಗಾನಾನಂದ ಕಿರುನಗೆಯಿಂದ ಕಕ್ಕುಲತೆಯ ಮದದಿಕ್ಕೆಗೆ ಸಿಲುಕದ ಠಕ್ಕುಗಾರ ಸೊಬಗಿಂದ ರಾಧೆಗೆ ಮುದ ವಿಕ್ಕಿ ಮಡುವ ಧುಮ್ಮಿಕ್ಕಿ ನರ್ತನಗೈದ 3 ವೈರಿ ಕಂಸಾರಿ ಶೌರಿ ಬಾ ಬಾರೋ ಪಾಂಡವ ಪಕ್ಷ ವಿಹಾರೀ ಶಿಶುಪಾಲ ಸಂಹಾರೀ ಭವ ಬಂಧನ ಪರಿಹಾರಿ ಶರಣರಿಗುಪಕಾರೀ ಇಭಕುಲಕೇಸರಿ ಘನ ಗಿರಿಧಾರೀ ಅಭಯಪ್ರದ ಹರಿ ಗೂಢಸಂಚಾರಿ ನಭಚರಹರಿ ಮಾಂಗಿರಿ ಸುವಿಹಾರೀ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಪಿ | ತೋರಿಸೇ || ಅವನ ದೂರಿಂದ ಸಾಕಾರ | ನೋಡುವೆ ಜೋಗಿಯಾ ಪ ಚಿಕ್ಕ ಮಕ್ಕಳು ಅಂಜಿ | ಪಕ್ಕನೆ ಒಳಮನೆ || ಪೊಕ್ಕರು ನೋಡುತಾ || ಮುಕ್ಕಣ್ಣಿನವನ 1 ಎಂದ ಮುದ್ದಿನ ನುಡಿ | ಚೆಂದದಿ ಕೇಳುತ || ಕಂದನೆತ್ತಿಕೊಂಡು | ಬಂದಳೆಶೋದಾ 2 ಇಂದು ಮೌಳಿಯ ನೋಡಿ | ಮಂದಹಾಸದಲಿಂದಾ | ನಂದವ ನಿತ್ತನು | ಬಂದ ಮಹೇಶಗೆ || 3 ಶುಭ | ಚರಣಕೆ ಎರಗುತ || ತೆರಳಿದ ಸಾಂಬನು | ಹರಷದಲಿಂದ 4 ಅನುದಿನ | ಧರೆಯೊಳು ಕಾಂಬುವರ | ಸುಕ್ರತವೆಂತೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು