ಒಟ್ಟು 4 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿದ್ದರೀ ಕೊಂಪೆ ಎನಗೆ ನಂಬಿಕೆಯಿಲ್ಲ ಪ ಮುಂದರಿತು ಶ್ರೀಹರಿಯ ಭಜಿಸುವುದು ಲೇಸುಅ ಎಲುವುಗಳು ತೊಲೆಜಂತೆ ನರಗಳವು ಬಿಗಿದಂತೆಬಲಿದ ಚರ್ಮವು ಮೇಲು ಹೊದಿಕೆಯಂತೆಗಳಗಳನೆ ನುಡಿವ ನಾಲಗೆ ಗಂಟೆಯುಲಿಯಂತೆಕೆಲಕಾಲಕೀ ಕೊಂಪೆ ಕಡೆಗಾಹುದಂತೆ 1 ಕಂಡಿಗಳು ಒಂಬತ್ತು ಕಳಬಂಟರೈವರುಅಂಡಲೆವುದೊತ್ತಿನಲಿ ಷಡುವರ್ಗವುಮಂಡಲಕೆ ಹೊಸಪರಿಯ ಮನ್ಮಥನ ಠಾಣ್ಯವಿದುಮಂಡೆ ಹೋಗುವುದನ್ನು ಅರಿಯದೀ ಕೊಂಪೆ2 ಕೊಂಪೆಯಲಿ ಶೃಂಗಾರ ಕೊಂಡಾಡಲಳವಲ್ಲಕೆಂಪು ಬಣ್ಣಗಳಿಂದ ಚೆನ್ನಾಯಿತುಇಂಪಿನಲಿ ಕಾಗಿನೆಲೆಯಾದಿಕೇಶವನನ್ನುಸೊಂಪಿನಲಿ ನೆನೆನೆನೆದು ಸುಖಿಯಾಗು ಮನುಜಾ 3
--------------
ಕನಕದಾಸ
ಕೇಳೆ ಯಶೋದೆ ನಿನ್ನ ಮಗನ ಲೂಟಿಯಪ ತಾಳಲಾರೆವೆ ನಾವು ತರಳನ ದುಡುಕುಪೇಳಬಾರದೆ ಗೋಪಾಲಕೃಷ್ಣಗೆ ಬುದ್ಧಿಅಮ್ಮಾ-ಇದು ಚೆನ್ನಾಯಿತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ ಅ.ಪ. ಬಾಲಕನೆಂದು ಲಾಲಿಸಿ ಕರೆದರೆಮೂಲೆ ಮನೆಯೊಳಗೆ ಪೊಕ್ಕುಪಾಲು ಮೊಸರು ಬೆಣ್ಣೆಗಳ ಮೆದ್ದುಕೋಲಲಿ ನೀರ ಕೊಡಗಳೊಡೆದನೀಲವರ್ಣದ ದಿಟ್ಟ ನಿತ್ಯವೀ ಹೋರಾಟಬಾಲೆಯರಲ್ಲಿ ನೋಟ ಬಹಳ ಬಗೆಯಲ್ಲಿತಿಳಿದೆವೆಂದರೆ ಮೇಲೆ ಎಂಜಲುಗುಳಿ ಪೋದಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 1 ಮತ್ತೆ ಭಾಮಿನಿಯರೆಲ್ಲರು ಕೂಡಿಮಡುವಿನೊಳು ಜಲಕ್ರೀಡೆಯನಾಡಲುಚಿತ್ತಚೋರ ನಮ್ಮ ಸೀರೆಗಳೆಲ್ಲವಹೊತ್ತು ಕೊಂಡು ಮರವನೇರಿದಬತ್ತಲೆ ಭಾಮೆಯರೆಲ್ಲ ಬೇಡಿದರೆ ಕೊಡನಲ್ಲಯುಕ್ತಿ ಬಹುಬಲ್ಲ ಹತ್ತಿಲಿ ಬಂದು ಕರವೆತ್ತಿ ಮುಗಿದರೆ ವಸ್ತ್ರ ಕೊಡುವೆನೆಂದಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 2 ಸದ್ದು ಮಾಡದೆ ಸರಿ ಹೊತ್ತಿಲಿನಿದ್ದೆಗಣ್ಣಿಲಿ ನಾನಿರಲುಮುದ್ದು ಕೃಷ್ಣ ನಮ್ಮ ಮನೆಯವರಂತೆಮುದದಿಂದಲೆನ್ನನು ತಾ ಕೂಡಿದಎದ್ದು ನೋಡುವೆನಲ್ಲ ಆಹ ಏನೆಂಬುವರೆಲ್ಲಬುದ್ಧಿ ಮೋಸ ಬಂತಲ್ಲ ಪೊದ್ದಿ ಸಲ್ಲಿಸಿದೆಬುದ್ಧಿವಂತನೆಂದರೆ ಪರಿಹಾಸ್ಯ ಮಾಡಿ ನಗುವಅಮ್ಮಾ ಇದು ಚೆನ್ನಾಯ್ತು ತಿಳಿದವನಲ್ಲವೆನೀ ಕೇಳೆ ಯಶೋದೆ ನಿನ್ನ ಮಗನ ಲೂಟಿಯ 3
--------------
ವ್ಯಾಸರಾಯರು
ನಿನ್ನ ಮಗನ ಲೀಲೆಯ ತಾಳಲಾರೆವೆ ನಾವುತರಳನ ದುಡುಕು ಹೇಳಬಾರದೆ ಗೋಪಾಲಕೃಷ್ಣಗೆಬುದ್ಧಿ ಅಮ್ಮ ಪ ಇಂದು ಚೆನ್ನಾಯಿತು ತಿಳಿದವನಲ್ಲವೆನೀ ಕೇಳೇ ಯಶೋದೆ ಅ.ಪ. ಬಾಲಕನೆಂದು ಲಾಲಿಸಿ ಕರೆದರೆಮೂಲೆ ಮನೆಯೊಳಗೆ ಪೊಕ್ಕು ಪಾಲು ಬೆಣ್ಣೆ ಮೊಸರೆಲ್ಲವ ಮೆದ್ದುಕೋಲಲ್ಲಿ ನೀರ ಕೊಡವ ಒಡೆದನೇಅಸಲ ವರ್ಣನವ ದಿಟ್ಟ ನಿತ್ಯಾ ಇವನ ಹೋರಾಟಹೆಬ್ಬಾಲೆಯರಲ್ಲಿ ನೋಟ ಬಹಳ ಬಗೆಯಲಿಪಿಡಿದೇವೆಂದರೆ ಮೇಲಿಯಂಜಲುಗಳವೋಡಿದಾಅಮ್ಮ ಇದು ಚೆನ್ನಾಯಿತು 1 ಮತ್ತೆ ಭಾಮಿನಿಯರೆಲ್ಲರು ಕೂಡಿಮಡುವಿನಲಿ ಜಲಕ್ರೀಡೆಯಾಡಲುಚಿತ್ತಚೋರ ಸೀರೆಗಳನೆಲ್ಲವ-ನೆತ್ತಿಕೊಂಡು ಮರವನೇರಿದನವ್ವಾಬೆತ್ತಲೆ ಭಾಮೆಯರೆಲ್ಲ ಬೇಡಿದರೆ ಕೊಡನಲ್ಲಈ ಯುಕ್ತಿಗಳೇ ಬಹುಬಲ್ಲಹತ್ತಿಲಿ ಬಂದು ಕರವೆತ್ತಿ ಮುಗಿದರೆವಸ್ತ್ರಗಳೆಲ್ಲವ ಕೊಡುವೆನೆಂದನೇ ಅಮ್ಮ 2 ಜಾರ ನೀನೆಂದರೆಪರಿಹಾಸ್ಯವ ಮಾಡಿದ ರಂಗವಿಠಲನ ಅಮ್ಮ3
--------------
ಶ್ರೀಪಾದರಾಜರು