ಒಟ್ಟು 15 ಕಡೆಗಳಲ್ಲಿ , 5 ದಾಸರು , 12 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಆ) ಮಹಾಲಕ್ಷ್ಮೀ ಸ್ತುತಿಗಳು ಅರಿತು ಸಿಂಗರಮಾಡಿ ಅರಿತು ಸಿಂಗರ ಮಾಡಿ ಪ ಗರುವ ಚೆನ್ನಿಗರಾಯ ಬರುತಿಹನೆ ಬೇಗಾ ಅ.ಪ ಅಳಿಕುಂತಳೆಗೆ ನೋಡಲಲರ್ದ ಸಂಪಿಗೆ ಯೇಕೆ ಚೆಲುವ ಜಾಜಿಯ ಕಮ್ಮಲರ ತುರುಬಿರಮ್ಮಾ ಹೊಳೆವ ಚಂದಿರಮುಖಿಗೆ ವಳಿನವೇತಕೆ ಕೈಗೆ ಅಲರ್ದ ನೈದಿಲೆ ಕುಸುಮವನೆ ಕೊಡಿರೆಯಮ್ಮಾ 1 ಕೀರವಾಣಿಗದೇಕೆ ಜವ್ವಾಜಿ ಪರಿಮಳವು ಚಾರುಕತ್ತುರಿ ಹದನ ಮಾಡಿರಲು ಮುನ್ನಾ ತೋರ ಕುಚಗಿರಿಗಳಿಗೆ ವಜ್ರಭೂಷಣವೇಕೆ ಹಾರವಿದೆ ತಂದಿರಿಸಿ ಮಂಜುಳವಿದೆನಿಸೀ 2 ಲಾವಣ್ಯನಿಧಿಯೀಕೆ ಬೇರೆ ಸಿಂಗರವೇಕೆ ತೀವಿದಂಗದಕಾಂತಿ ನಯನ ವಿಶ್ರಾಂತೀ ಶ್ರೀವೇಲಪುರದಲ್ಲಿ ನೆಲಸಿಹ ಕರುಣದಿಂದ ದೇವ ವೈಕುಂಠಕೇಶವನರಸಿಯೀಕೇ 3
--------------
ಬೇಲೂರು ವೈಕುಂಠದಾಸರು
(ಊ) ಕ್ಷೇತ್ರ ವರ್ಣನೆ 1. ಬೇಲೂರು ಚನ್ನಕೇಶವರಾಯ ಚೆಲುವ ಚೆನ್ನಿಗರಾಯಾ ನಿನ್ನ ಕಾಣದೇ ನಿಲ್ಲಲಾರೆ ಬೇಲೂರ ಪ ವಜ್ರ ಪದುಮ ಪತಾಕಾಂಕುಶಗಳು ನಿಜಸತಿ ಲಕುಮಿದೇವಿಯರಾ ಭುಜ ಕುಚ ಕುಂಕುಮಾಂಕಿತ ಧರಾಂಕಿತ ಭಜಕರ ಭಾಗ್ಯೋದಯ ಪಾದಯುಗಳದಾ 1 ಸುರ ವೈರಿಗಳೆದೆ ಥಲ್ಲಣವೆನಿಸುವಾ ಬಿರುದಿನ ಖಡ್ಡೆಯಪ್ಪ ಚರಣಂಗಳಾ ಗರುಡನ ಹೆಗಲೇರಿ ಉದರದಿ ವಿರಿಂಚಿಯು ಉದುಭವಿಸಿದ ವರನಾಭಿಯ ಚೆಲುವಿನಾ 2 ಪೊಂಬಟ್ಟೆಯಿಂದೆಸೆವ ಪೀತಾಂಬರ ಚೆಂಬೊನ್ನದ ಕಾಂಚಿಯದಾಮದಾ ಅಂಬುಜ ಕೌಮೋದಕಿ ಸುದರುಶನ ಕಂಬುವ ಧರಿಸಿಹ ಚತುರುಭುಜಂಗಳಾ 3 ಶ್ರೀಯಾಲಿಂಗಿಸಿ ಸುಖವ ಕಾಮಿನಿಯರ ಶ್ರೀಯೋಗವ ತೋರಿಸೆನಗೊಮ್ಮೆ ಹಾಯೆಂದು ಬಿಗಿದಪ್ಪಿ ನಂಬಿಸಿ ಚುಂಬಿಸಿ ಬಾಯ ತಂಬುಲವಿತ್ತು ಬಂದೆನ್ನ ನೆರೆಯಾ 4 ಕರೆವೆನ್ನ ಮನದಲ್ಲಿ ಕರೆವ ನಾಲಿಗೆಯಲ್ಲಿ ಕರೆವೆನ್ನ ಕಣ್ಣುಸನ್ನೆಯಲೀ ಕರೆವೆ ನೆರೆವೆ ನಿನ್ನ ಚರಣಕೆರಗುವೆ ನಾ ವರವೈಕುಂಠಕೇಶವ ಬೇಲೂರ 5
--------------
ಬೇಲೂರು ವೈಕುಂಠದಾಸರು
ಏನುಕಾರಣ ಯೆನಗೆ ತಿಳಿಯದಿದೇಕೋ ನೀನುದ್ಧರಿಸುವುದಕೋ ಕೆಡಿಸುವುದಕೋ ಕೃಷ್ಣ ಪ ಸುರರು ಹಬ್ಬವ ಕೆಡಿಸೆ ಸುರಪತಿಯು ಕೋಪದಲಿ ಭರದಿಂದ ಕಲ್ಲು ಮಳೆಯನು ಕರೆಯಲಾಗ ಕಿರುವೆರಳ ತುದಿಯಲ್ಲಿ ಗಿರಿಯ ನೀನಾಂತು ಹಗ ಲಿರುಳೇಳು ದಿನ ಬೋವಿಗಳಂತೆ ಕೊಡೆವಿಡಿದ 1 ಭವ ತಿಮಿರ ಶರಧಿಯದಾಂಟಿಸುವ ವೋಲು ಸುರಿವ ಮಳೆಗತ್ತಲೆಗೆ ಬೋವಿಯಾಗಿ ಕರದಲ್ಲಿ ಕೊಡೆ ದೀವಟಿಗೆಯ ಪಿಡಿದೆನ್ನ ಮನೆ ಪರಿಯಂತ ಕಳುಹಿ ಕ್ಷುಧೆಯಾಯಿತೆಂಬುದೇನು 2 ಕೊಟ್ಟ ಕಜ್ಜಾಯಂಗಳಿಗೆ ನೀ ಸೆರಗೊಡ್ಡಿ ಕಟ್ಟಿ ಕೊಂಡೊಯ್ದು ಲಕ್ಷ್ಮಿಯ ಬಳಿಯೊಳು ಇಟ್ಟರ್ಧವನು ಎನ್ನ ಸಂತತಿಗೆ ನೀಕರುಣಿಸಿದೆ ಇಷ್ಟರೊಳಗೆ ವೈಕುಂಠಪತಿ ಚೆನ್ನಿಗರಾಯಾ 3
--------------
ಬೇಲೂರು ವೈಕುಂಠದಾಸರು
ಏಳು ಚೆನ್ನಿಗರಾಯ ನನ್ನೀನಾಗರ ಏಳು ಪ. ಏಳೆನ್ನ ಕಣ್ಮಣಿಯೇ ಕಾಳಿಮರ್ಧನಕೃಷ್ಣ ಅ.ಪ. ಮಾರನೆಯ ದಿನದಲ್ಲಿ ನೀ ಹಾರುತ್ಯಾರುತ ಬಂದು ಸೀರೆ ಸೆರಗನು ಪಿಡಿದು ಬೆಲ್ಲವನು ಬೇಡಲು ಕೇಳಿಕೊಳ್ಳವುದೇಕೆ ಹಗಲುಗಳ್ಳನೆ ಹೋಗು ಒಳಿತು ಚೋರರಿಗೆಲ್ಲ ಕೇಳಿ ಕೊಳಲೆಂದೆ 1 ಚೋರ ನೀನೆಂದುದಕ್ಕೆ ಈ ಸೀರೆಯನು ಜರಿವರೇ ಚೋರನಲ್ಲವೇ ನೀನು ಮಧ್ವರ ಹೃದಯ ಕದ್ದ 2 ಜಾರ ನೀನೆಂದುದಕೆ ಕರೆಕರೆಗೊಳಿಸುವರೆ ಜಾರೆಯಾಸಹುದು ನೀನಲ್ಲ ಜಾರರಮಣ 3 ಕಂಡದನು ಆಡಿದರೆ ಕಡುಕೋಪವ್ಯಾತಕೆ ಹಿಂಡು ಗೋವಳಲೊಡೆಯ ಪುಂಡನೀನಹುದು 4 ಮಜ್ಜನವ ಮಾಡಿಸುವೆ ಸುಳಿಗುರುಳ ತಿದ್ದುವೆ ಸಜ್ಜಾದ ಚಂದನದ ಚಂದ್ರಮನ ಫಣಿಯಲಿಡುವೆ 5 ಗೊಲ್ಲಬಾಲರು ಈಗ ಕರೆಯಲು ಬರುವರು ಮೆಲ್ಲಗೆ ಎದ್ದು ನೀ ಬೆಲ್ಲವನು ಮೆಲ್ವ ಬಾಲಕೃಷ್ಣ 6 ಮಧ್ವೇಶ ನೀನೇಳು ಮುದ್ದು ಮೊಗದವನೆ ಏಳು ಹದ್ದುವಾಹನ ಏಳೂ ಹಾಲಕುಡಿಯೇಳು 7 ಹಾಲು ಬೆಲ್ಲವ ಸವೆದು ಸುಧೆಯನು ಸುರಿಸೇಳೋ ಪಾಲಗಡಲ ಶಯನ ಶಯನದಿಂದೇಳೋ 8 ಮುನಿಸು ಏಕೇಕೆ ರಮಣ ಮುಸುಕನು ತೆಗೆದೇಳು ತಿನಿಸು ತಿಂಡಿಯ ಕೊಡುವೆ ತನಿವಣ್ಣ ಕೊಡುವೆ 9 ಚಿನ್ನದಾ ಒಂಟೆಳೆಯ ರನ್ನಧಾಭರಣ ಭಿನ್ನ ಭಿನ್ನವಾದ ಆಭರಣಗಳಿಡುವೆ ಕೃಷ್ಣ 10 ಹೆಚ್ಚೇನು ಪೇಳಲಿ ಮಗಸಾಮ್ರಾಜ್ಯದ ದೊರೆತನವು ನಿನ್ನದೊ ಸ್ವಚ್ಚಾಗಿ ಹೇಳುವೆನು ಫಲಿಸೇಳು ಕೃಷ್ಣಾ 11 ಬಾಧಿಸದೆ ಜಾಗವನು ಬಿಟ್ಟೇಳೊ 12 ಏನು ಬಯಸಿದ ಕೊಡುವೆ ಮನಬಯಕೆ ಪೂರೈಸೊ ಮನದನ್ನನೇ ಎನ್ನ ಕಾಳಿಮರ್ಧನಕೃಷ್ಣ 13
--------------
ಕಳಸದ ಸುಂದರಮ್ಮ
ಕಂಸಾರಿ ಪ. ಶೌರಿ ಸುರ ನರವಂದಿತ ಚರಣವ ಕೋರಿ ಪರಿಪರಿ ಬೇಡುವೆ ನಿನ್ನೆಡೆ ಸಾರಿ ಅರಿಯದ ಕಂದನ ಪೊರೆ ದಯೆತೋರಿ ಅರಿಯೆನದಾರನು ಮರೆಯೆನು ನಿನ್ನನು ಕರುಣಾಕರನೆಂಬೀ ಬಿರುದುಳಿಸಿನ್ನು 1 ಮನ್ಮಥಪಿತ ಬಾ ಸುಂದರಕಾಯ ಮನ್ನಿಸು ಎನ್ನಪರಾಧವ ಜೀಯ ಚಿನ್ಮಯರೂಪನೆ ಚೆನ್ನಿಗರಾಯ ಅನ್ಯರ ನೆರೆಯೆನು ನೀ ಕೇಳಯ್ಯ ಎನ್ನೊಳಗೀಪರಿ ಛಲವೇಕಯ್ಯ ಇನ್ನಾದರು ಕೈಪಿಡಿ ದಮ್ಮಯ್ಯ 2 ಮಂದರಗಿರಿಧರ ಗೋವಿಂದನೆ ಬಾ ನಂದಕುಮಾರನೆ ತಡೆಯದೆ ನೀ ಬಾ ನಂದಿನಿಗೊಲಿದಾನಂದವ ಕೊಡು ಬಾ ವೃಂದಾವನ ವಿಹಾರನೇ ಬಾ ಬಾ ಇಂದಿರೆಯರಸನೆ ಶೇಷಗಿರೀಶನೆ ಇಂದೆನಗೊಲಿದೈ ತಂದೆಯೆ ಭಳಿರೆನೆ 3
--------------
ನಂಜನಗೂಡು ತಿರುಮಲಾಂಬಾ
ನೀನೇ ಶ್ರಾದ್ಧದನ್ನವನುಂಡವಾ ನಾನರಿಯದಂತೆ ಯೆನ್ನ ಗೃಹದೊಳು ಶ್ರೀವೈಷ್ಣವನಾಗಿ ಪ ಬಾಣಸಿಗಾದವರು ನೀನೋ ನಾರಾಯಣಿಯೋ ಕ್ಷೋಣಿಯೊ ರವಿಯೋ ಜಾಹ್ನವಿಯೊ ರತಿಯೋ ವಾಣಿಯೋ ಸುರಧೇನುವೋ ಬಂದಾತಧನಂಜಯನೂ ತಾನೆ ಎನ್ನ ಆದ್ದಾಗಾಯ ತೆಲೆದೇವಾ1 ತಿಳಿದೆ ನಾನೀಗ ನಿನ್ನನು ಕೂಡೆ ಬಂದಿದ್ರ್ದ ಬಿಳಿಯ ಚುಟ್ಟಿನ ಯೆಣ್ಣೆಗೆಂಪಿನವನೂ ಕುಳಿತವನು ಕೈಯಪುಸ್ತುಕದವನು ಕಂಕುಳೊಳ ಗಿಳಿದ ಮಡಿಗಡೆಯವರಾರು ಪೇಳೆಲೆ ದೇವಾ 2 ಆವಾವ ಸ್ಥಾನಕಾರಾರ ನೇಮಿಸಿದೆ ನೀ ದೇವಾ ಉಪಾಧ್ಯರಾರಭಿಶ್ರವಣವನು ಪೇಳ್ದ ಕೋವಿದರಾರು ಶ್ರೀವೈಷ್ಣವರಾರೆಲೆದೇವ 3 ಜನನ ಸ್ಥಿತಿಲಯಕೆ ಕಾರಣಭೂತನೋರ್ವ ನೀ ನೆನುತ ವೇದಾಂತಗಳು ಪೊಗಳುತಿರಲೂ ಇನಿತಕ್ಕೆ ಯೆಂದನ್ನದಗಳು ಕುಡಿತೇಪಾಲ್ಗೇ ಮನವ ಸೋತುದ ಬಿಡುವೆಯಾ ನಿತ್ಯತೃಪ್ತಾ 4 ಗುರುಗಳಂದದಲಿ ಶ್ರೀವೈಷ್ಣವ ನೀನಾಗಿ ಶರಣನಾ ಪಿತೃಗಳಿಗೇ ಶ್ರಾಧ್ಧವನುಂಡುದದೂ ಪಿರಿಯದಾಯ್ತು ಎನ್ನ ನೂರೂಂದು ಕುಲಕೆಲ್ಲಾ ಪರಮಪದವಾಯ್ತು ವೈಕುಂಠಚೆನ್ನಿಗರಾಯಾ 5
--------------
ಬೇಲೂರು ವೈಕುಂಠದಾಸರು
ನೊಂದೆ ನಾನಾವಿಧದಲೀ ಬಂದ ಜನ್ಮಾವಧಿಯಲಿ ತಂದೆ ತಾಯಿ ಬಂಧು ಬಳಗ ಎಲ್ಲರೂ ನೀನೇ ಪ ಮಂದರಧರನೇ ಬೇಲೂರ ಚೆನ್ನಿಗರಾಯ ಹಿಂದಿಟ್ಟುಕೊ ಮುರಹರ ಸ್ವಾಮೀ ಅ.ಪ ಕುಕ್ಷಿಯೊಳೀರೇಳು ಲೋಕವನು ತಾಳ್ದನೇ ಪಕ್ಷಿವಾಹನಮೂರ್ತಿ ಮತ್ಸ್ಯಾವತಾರನೇ ಅಕ್ಷಯಾಗೆಂದು ದ್ರೌಪದಿಯ ಅಭಿಮಾನವನು ರಕ್ಷಿಸಿದ ಕೃಷ್ಣ ನೀನೆ ಸ್ವಾಮಿ 1 ಚಿಕ್ಕಂದು ಮೊದಲು ನಿನ್ನನು ನೆನೆವ ಬಾಲಕನಾ ಕಕ್ಕಸದ ಬಾಧೆಯಲಿ ಮೂದಲಿಪ ಹಿರಣ್ಯಕನಾ ಸೊಕ್ಕುಗಳ ಮುರಿದವನ ಕರುಳ ಮಾಲೆಯನಿಟ್ಟ ¨Àಕ್ತವತ್ಸಲನು ನೀನೇ ಸ್ವಾಮಿ 2 ಕರಿಕಂಠ ಹರನು ದಾನವನ ತಪಸಿಗೆ ಮೆಚ್ಚಿ ಅರಿತು ಅರಿಯದ ತೆರದಿ ಉರಿಹಸ್ತವನು ಕೊಡಲು ತರುಣಿ ರೂಪಿಲಿ ಪರಿಹರಿಸಿ ಭಸ್ಮಾಸುರನಾ [ಉರಿಸಿ]ಗೆಲಿದ ದೇವರದೇವಾ ಸ್ವಾಮಿ3 ಅಂದು ಮರೆಹೊಕ್ಕ ವಿಭೀಷಣಗೆ ರಾಜ್ಯವನು ಸಂದೇಹವಿಲ್ಲದಂದದಲಿ ಪಾಲಿಸಿ ನರನಾ ಮುಂದೆ ಸಾರಥಿಯಾಗಿ ರಥವ ನಡಸಿದ ಗೋ ವಿಂದ ಸಲಹಯ್ಯ ಯೆನ್ನನೂ [ಸ್ವಾಮಿ] 4 ದೇಶದೇಶದೊಳತ್ಯಧಿಕ ಕಾಶಿಗಿಂ ಮಿಗಿಲು ಭೂಸ್ವರ್ಗವೆನಿಪ ವೇಲಾಪುರವಾಸಾ ಕೇಶವ ಶ್ರೀವೈಕುಂಠ ಚೆನ್ನಿಗರಾಯಾ ಶೇಷಶಯನನೇ ಕರುಣಿಸೈ ಸ್ವಾಮೀ 5
--------------
ಬೇಲೂರು ವೈಕುಂಠದಾಸರು
ಬಿಟ್ಟನ್ಯಭಜನೆಯ ಕಂಡು ಪ ಹೊಚ್ಚಿ ಸುಳಿದಟ್ಟಿ ಸುಡುವ ಅಡವಿಗಿಚ್ಚಿನ ಭಯಕೆ ಬೆಚ್ಚಿ ಅರಗಿನ ಮನೆಯ ಹೊಗುವವನಂತೆ ಅಚ್ಚರಿಯೆನಿಸೆ ದಹಿಪ ತಾಪತ್ರಯಕ್ಕಳುಕಿ ತುಚ್ಛ ದೈವಗಳ ಮರೆಯೊಗುವ ಮನುಜರಕಂಡು 1 ಉರಿಯ ಮಳೆಗರೆಯುತಿರೆ ತೃಣಗೇಹವನು ಹೊಕ್ಕು ಹರಣವನುಳುಹಿಕೊಂಬೆನೆಂಬಂತೇ ಉರುಬೆ ನಾನಾ ರೋಗಗಳುಳುಹಲು ಹಲವು ದೈವಗಳಿ ಗೆರಗಿ ಜೀವನಕೆ ಕಳಕಳಿಪ ಮನುಜರ ಕಂಡೂ 2 ಮುಗಿಲಗಲ ಧರೆ ಜರಿಯುತಿರೆ ಹುಲ್ಲಿನಣಬೆಯೊಡ್ಡಿ ಮಿಗೆ ಬಾಳ್ವೆನೆಂಬ ಮರುಳನಂದದೀ ಉಗಿದಸಿಯ ಮೃತ್ಯುವಿನ ಭಯಕೆ ನಾನಾದೇವ ತೆಗಳಮರೆಯೊಗುವ ಮನುಜರ ಕಂಡು 3 ಘುಡು ಘುಡಿಸಿ ಸಿಡಿಲೆರಗುತಿರೆ ತನ್ನ ಕೈ ವಿಡಿದ ಕೊಡೆಯ ಮರೆಗೊಂಡುಳಿವೆನೆಂಬಂತೇ ಮುಡಿವಿಡಿದೆಳೆವ ಕಾಲನ ಭಯಕೆ ನಾನಾದೈವ ದಡಿವಿಡಿದೆರಗಿ ಹಲು ಬಿಡುವ ಮನುಜರ ಕಂಡು 4 ಯಾತಮುಳಿದರೆ ಜಗದಲುಳಿದವರಾರು ಮ ತ್ತೀತನುಳುಹಿದನನು ಕೊಂದವನಾವ ಇ ದೇತಕರಿಯರೋ ನರರು ಅಕಟಕಟ ವೈಕುಂಠ ನಾಥ ಪರಿಪೂತನ ಪದಕಮಲವ ಭಜಿಸರೆಂದು 5 ನೀರಡಿಸಿ ಜಾಹ್ನವಿಯ ತೀರದಲಿ ಭಾವಿಯಾ ನೀರ ಕುಡಿವ ಮಾನವನ ತೆರದೀ ಹರಿಯ ಚರಣವಿರಲು ಭೂರಿದೈವಂಗಳಿನ್ನೇಕೆ ಭಜಿಸುವೆ ಮನುಜ ಹರಿ ಕಾರುಣ್ಯನಿಧಿ ವೈಕುಂಠವಲ್ಲಭ ಬೇಲೂರ ಚೆನ್ನಿಗರಾಯ ಕೃಪಾನಿಧಿಯಿರಲು 6
--------------
ಬೇಲೂರು ವೈಕುಂಠದಾಸರು
ಯಾದವಗಿರಿವಾಸನಹುದೋ ಶ್ರೀ ನಾರಸಿಂಹಆದಿನಾರಾಯಣ ಅಚ್ಯುತನಹುದೊ ಪ ಪಾವಕ ಮೂರ್ತಿಕಳ್ಳ ದೈತ್ಯರ ಸಂಹಾರವ ಮಾಡಿದೆನಳಿನೋದ್ಭವನಯ್ಯ ಅಮರ ಚೆನ್ನಿಗರಾಯ 1 ಕಾಯ ಬೇಕೆಂದುನಟಿಸಿ ಕಂಬದಿ ಮೂಡಿ ನಗುವ ಭಕ್ತನ ನೋಡಿಸಟೆಯಲ್ಲ ಅಜಾಂಡಗಳೊಡೆವಂತೆ ಘರ್ಜಿಸೆಕುಟಿಲ ದಾನವನೋಡುವುದ ಕಂಡು ಎಳೆತಂದುಚಿಟಿಚಿಟಿ ಚಿಟಿರೆನ್ನಲು ಉಗುರಲಿ ಸೀಳಿಪುಟನೆಗೆದ ಪಾದದಲಿ ಬಲಿಯ ತಲೆಯನು ಮೆಟ್ಟಿ ನಟನೆಯಾಡುವ ವಿದ್ಯೆಯನೆಲ್ಲಿ ಕಲಿತೆಯೊ ಕಪಟನಾಟಕ ಸೂತ್ರಧಾರಿ ನೀನಹುದು ಕ್ಷತ್ರಿಯರಚಟುಲ ಛಲದಿ ಒಗೆದು ಕರುಳ ಬಗೆದು ತುಳಿದ-ದಟರನು ಸಂಹರಿಸಿದ ಚೆಲುವರಾಯ 2 ಅಂದು ಕೌಸಲ್ಯಾ ಗರ್ಭ ಚಂದ್ರಮನಾಗಿ ಬೆಳಗಿಕೊಂದೆ ರಾವಣ ಕುಂಭಕರ್ಣಾದಿಗಳನೆಲ್ಲಇಂದಿರೇಶನೆ ನಿನ್ನ ನಂಬಿದ ವಿಭೀಷಣನಿಗೆಎಂದಿಗೂ ಪಾರವಿಲ್ಲದ ಪದವಿಯನಿತ್ತೆಕಂದನಾಗಿ ಜನಿಸಿ ವಸುದೇವ ದೇವಕಿಯರಿಗೆನಂದಗೋಕುಲದೊಳು ನಿಂದ ಕಂಸನ ಕೊಂದೆಚಂದಿರನ ನೆರೆಪೋಲ್ವ ಉನ್ನತೋನ್ನತನಾಗಿಕೊಂದು ತ್ರಿಪುರಾಸುರರ ಅವರ ಸತಿಯರ ಕೆಡೆಸಿಒಂದೆ ನೆಗೆತಕೆ ನೆಗೆವ ಅಶ್ವವನೇರಿದೆ ವ-ಸುಂಧರೆಯ ಮೇಲೆ ಲೀಲೆಯಾಡುತ ಕೃತಯುಗದಿನಿಂದು ಯಾದವಗಿರಿಯ ಮೇಲೆ ತ್ರೇತಾಯುಗದಿಬಂದು ರಾಮನೆನಿಸಿಕೊಂಡೆ ದ್ವಾಪರ ಯುಗದಿಬಂದು ಕೃಷ್ಣನೆನಸಿಕೊಂಡೆ ಕಲಿಯುಗದೊಳುನಿಂದು ಚೆಲುವ ಚೆನ್ನಿಗರಾಯನಾದೆ ವರನಂದಿಯ ಚಂದದಿಂ ರಕ್ಷಿಸಿದೆ ಎನ್ನ ಕಾಯೊಇಂದಿರಾಪ್ರಿಯ ಬಾಡದಾದಿಕೇಶವ ರಾಯ3
--------------
ಕನಕದಾಸ
ಶೃಂಗಾರ ಬೇಕಾಯಿತೆ ಶ್ರೀಕಾಂತ ನಿನಗೆ ಶೃಂಗಾರವಾರ್ಧಿ ವೇಲಾಪುರದ ಚೆನ್ನಾ ಪ ಕರದಲ್ಲಿ ದಂಡ ಕೋಲು ಕಮಂಡಲನೀವ ಪರಿ ಹೇಗೆ ದಾಸಾನುದಾಸನಲ್ಲ ಇರಲಿಯಂತದುವೆ ಶ್ರೀಧರನೆಂಬ ಪೆಸರು ಬಿ ಟ್ಟುರದ ಲಕ್ಷ್ಮಿಯನು ಕಡೆಗಿರಿಸು ನೋಡುವೆನೊಮ್ಮೆ 1 ಎನ್ನ ಬಿನ್ನಪವೊಂದುಂಟು ಕೇಳೆಲೊ ಸ್ವಾಮಿ ನಿನ್ನ ಬಾಲಬ್ರಹ್ಮಚಾರಿಯೆಂದು ಸನ್ನುತಿಸುತಿದೆ ವೇದ ಶಾಸ್ತ್ರಾಗಮಗಳೆಲ್ಲ ಇನ್ನದಕುಪಾಯವೇನಯ್ಯ ಚೆನ್ನಿಗರಾಯ 2 ಶೃಂಗಾರಗಳನು ತತ್ವಂಗಳನು ಪೇಳುವಡೆ ಗುಂಗುರುಹಿನೊಳಲ್ಪ ಮನುಜನಲ್ಲ ಮಂಗಳಾತ್ಮಕನೆ ಆಡಿಸಿದೊಡಾಡುವೆ ಎನಗೆ ಭಂಗವೇಕಯ್ಯ ವೈಕುಂಠ ಚೆನ್ನಿಗರಾಯ 3
--------------
ಬೇಲೂರು ವೈಕುಂಠದಾಸರು
161ಆರಿಗೆ ವಧುವಾದೆ - ಅಂಬುಜಾಕ್ಷಿ |ಕ್ಷೀರಾಬ್ಧಿ ಕನ್ನಿಕೆ - ಶ್ರೀ ಮಹಾಲಕುಮೀ ಪಶರಧಿಬಂಧನ ರಾಮಚಂದ್ರ ಮೂರುತಿಗೊ |ಪರಮಾತ್ಮ ಸಿರಿಯನಂತ ಪದ್ಮನಾಭನಿಗೋ ||ಸರಸಿಜಭವ ಜನಾರ್ದನ ಮೂರುತಿಗೋ |ಎರಡು ಹೊಳೆಯ ರಂಗಪಟ್ಟಣವಾಸಗೊ 1ಚೆಲುವ ಬೇಲೂರು ಚೆನ್ನಿಗರಾಯನಿಗೊ |ಕೆಳದಿ ಹೇಳುಡುಪಿಯ ಕೃಷ್ಣರಾಯನಿಗೊ ||ಇಳೆಯೊಳು ಪಂಢರಪುರ ವಿಠಲೇಶಗೊ ||ನಳಿನಾಕ್ಷಿ ಹೇಳು ಬದರೀನಾರಾಯಣನಿಗೊ 2ಮಲಯಜಗಂಧಿ, ಬಿಂದುಮಾಧವರಾಯಗೊ |ಸುಲಭದೇವ ಪುರುಷೋತ್ತಮಗೊ ||ಫಲದಾಯಕನಿತ್ಯಮಂಗಳನಾಯಕಗೊ |ಚೆಲುವೆ ನಾಚದೆ ಪೇಳು ಶ್ರೀವೆಂಕಟೇಶಗೋ 3ವಾಸವಾರ್ಚಿತ ಕಂಚೀವರದರಾಜ ಮೂರುತಿಗೊ |ಆ ಸುರವಂದ್ಯ ಶ್ರೀಮುಷ್ಣದಾದಿ ವರಹನಿಗೊ ||ಶೇಷಶಾಯಿಯಾದ ಶ್ರೀ ರಂಗನಾಯಕಗೊ |ಸಾಸಿರ ನಾಮದೊಡೆಯ ಅಳಗಿರಿಯೀಶಗೋ 4ಶರಣಾಗತರನು ಪೊರೆವ ಶಾರ್ಙಪಾಣಿಗೊ |ವರಗಳನೀವ ಶ್ರೀನಿವಾಸ ಮೂರುತಿಗೋ |ಕುರುಕುಲಾಂತಕ ರಾಜಗೋಪಾಲ ಮೂರುತಿಗೊ |ಸ್ಥಿರವಾದ ಪುರಂದರವಿಠಲರಾಯನಿಗೊ 5
--------------
ಪುರಂದರದಾಸರು
ಎಂಥ ಗಾಡಿಕಾರನೆ-ಕೃಷ್ಣಯ್ಯ ಇ - |ನ್ನೆಂಥ ಗಾಡಿಕಾರನೆ? ಪಕಂತುಪಿತನು ಬೇಲಾಪುರದ ಚೆನ್ನಿಗರಾಯ ಅ.ಪಹಿಂಡುಕೂಡಿರುವ ಮಕ್ಕಳನೆಲ್ಲ ಬಡಿವರೆಲಂಡನೇನೆ-ಅಮ್ಮ |ಉಂಡು ಹಾಲು ಬೆಣ್ಣೆ ಬೆಕ್ಕಿಗಿಕ್ಕುವರೆ ಪ್ರಚಂಡನೇನೆ? 1ಹೆಚ್ಚು ಹೇಳುವುದೇನು ಬಿಚ್ಚಿ ಉರೋಜವ ತೋರುವನೆ-ಅಮ್ಮ |ಮುಚ್ಚು ಮರೆಯೇತಕೆ ಮನೆಮನೆಗಳಲಿ ಪೋಗುವನೆ 2ವಸುಧೆಯೊಳಗೆ ನಂದಗೋಕುಲದೊಳಗೆ ತಾ ಬಂದ ಕಾಣೆ-ಅಮ್ಮ |ಹಸು ಮಗನಾದ ನೀ ಪುರಂದರವಿಠಲರಾಯ ಕಾಣೆ 3
--------------
ಪುರಂದರದಾಸರು