ಒಟ್ಟು 7 ಕಡೆಗಳಲ್ಲಿ , 5 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(2) ತುಳಸಿರಾಮದಾಸರ ಅಂತಿಮ ಯಾತ್ರೆ ಬೆಂಗಳೂರಿಗೆ ಹೋಗಿ ಬಂದರೂ ಮೈಸೂರಿಂದಾ ಪ ಬೆಂಗಳೂರಿಗೆ ಹೋಗಿಬಂದ ಜಂಗಮನು ತಾನಾಗಿ ನಿಂದಾ ಕಂಗಳೆರಡರ ಮಧ್ಯ ತಾ ನಿಜ ಲಿಂಗನಾಗಿ ಕಾಣಬಂದಾ ಅ.ಪ ಬಿದಿಗೆ ಪಾಡ್ಯವ ಮಾಡಿ ನೋಡೆಂದಾ ಬಂದಾಗ ಬರದಾ ವಿಧಿಯ ಬರಹವ ತೊಡೆದುಕೊಂಡೆಂದ ಕದಿವ ಕಳ್ಳರ ಕಂಡುಹಿಡಿದು ಮದನಪಿತನಾ ಯುಧದಿ ಹೊಡೆದೂ ನದಿಯ ಸ್ನಾನವ ಮಾಡಿ ನಿಜ ಪದವಿ ತೋರಿದ ನಮ್ಮ ದೇಶಿಕ 1 ಸೃಷ್ಟಿ ತದಿಗೆಯೊಳಿರಲು ಬೇಡೆಂದಾ ಅಲ್ಲಾಗ ತನ್ನ ಇಷ್ಟದೈವದ ಪೂಜೆ ಮಾಡೆಂದಾ ದೃಷ್ಟಿಗೋಚರಮಾದ ಗುರುವು ಸೃಷ್ಟಿಗಧಿಕಾ ತುಲಶಿರಾಮನ ಇಷ್ಟದಿಂದಲಿ ಭಜಿಸಿನೋಡಲು ಸ್ಪಷ್ಟನಾಗಿ ಕಾಣುತೈತೆ 2
--------------
ಚನ್ನಪಟ್ಟಣದ ಅಹೋಬಲದಾಸರು
ಜಂಗಮನು ಇಂತಿವನು ಸರ್ವಸಂಗ ದೂರಾದವನೀಗ ಜಂಗಮ ಪ ತನ್ನ ತಿಳಿದು ತಾನಾದವ ಜಂಗಮ ಜಗವಭಿನ್ನವೆಂದು ಕಾಣದವ ಜಂಗಮಹೊನ್ನು ಹೆಣ್ಣು ಬಿಟ್ಟವನು ಜಂಗಮ ಸಂ-ಪನ್ನ ಸಾಧು ಸಂಗವಿಹ ಜಂಗಮ 1 ಒಳಗೆ ಹೊರಗೆ ಒಂದಾದವ ಜಂಗಮ ಎಲ್ಲಹೊಳೆವುದೊಂದೆ ಜ್ಯೋತಿಯು ಎಂಬುವ ಜಂಗಮಹೊಲೆಯು ಶುದ್ಧವ ಕಳೆದವ ಜಂಗಮ ಎನಗೆಕುಲವು ಛಲವು ಇಲ್ಲವೆಂಬುವ ಜಂಗಮ 2 ಅಂಗ ಲಿಂಗವಾಗಿಹ ಜಂಗಮಲಿಂಗ ಅಂಗ ಏಕವಾಗಿಹ ಜಂಗಮಮಂಗಳವೇ ನಿತ್ಯವಿಹ ಜಂಗಮ ಗುರುಲಿಂಗವಾದ ಚಿದಾನಂದ ಜಂಗಮ 3
--------------
ಚಿದಾನಂದ ಅವಧೂತರು
ತಿಳಿದು ನೋಡಲೆ ಮನವೆ ತೀವ್ರ ತಾಮಸವೇಕೆ ತಿಳಿದುಕೋನಿನ್ನ ನೀನು ತಿಳಿಯೆ ಮಾಯೆಗಳಿಲ್ಲ ತಿಳಿಯೆ ಶಿವನಾಗುತಿಹೆಬಲುಮರವೆ ಯಾಕೆ ಪಾಪಿ ಮನವೆ ಪ ಶೂನ್ಯ ದುರಿತ ಭಂಗತರ ತರಂಗ ಮೂರ್ತಿಜಂಗಮನೆ ನೆಲೆಸಿಹನು ಜನಿಸಿನೀ ನಿನ್ನೊಳಗೆ ಕಣ್ಗಾಣದಿಪ್ಪೆ ಗುರುವ ಮನವೆ 1 ಮಾಯೆ ಮೋಹಕೆ ಸಿಲುಕಿ ಮಗ್ನನಾಗಿರುತಿಹೆ ಕಾಯವಿದು ನಿನಗೆ ಸ್ಥಿರವೇಆಯಾಸಂಬಡಬಹುದೆ ಅಲ್ಪ ಮತಿಗಳ ಕೂಡಿ ನ್ಯಾಯವೆ ನಿನಗೆರಾಯ ನಾನೆಂಬ ಹೆಮ್ಮೆಯ ತಾಳ್ದು ರತಿ ಬಹಳ ಸ್ತ್ರೀಯರಲಿ ಸೊಗಸಬಹುದೇಮಾಯಕಿಂತಕಟ ನೀ ಶಿಲ್ಕಿ ಒಳಗಾಗುವುದುಮಾಯವೋ ಇದು ಮಹಿಮೆಯೋ ಮನವೇ 2 ಎನ್ನ ಸತಿಸುತ ಬಂಧು ಎನ್ನ ಗೃಹವು ಇದೆಂದು ಬನ್ನಬಡುತಿಹೆ ಯಾತಕೆನಿನ್ನೊಳಗೆ ಇಹ ವಸ್ತು ನೀನೆ ಕಾಣದಲಿರೆ ಮನ್ನಿಸಾ ಗುರುಹಿರಿಯರಉನ್ನತ ಕಟಾಕ್ಷದಲಿ ಒಳಗೆ ದೃಷ್ಟಿಸಿ ಕಂಡು ನಿನ್ನೊಳಗೆ ಪುಳಕನಾಗುಚಿನ್ಮಯ ಚಿದಾನಂದ ಚಿದ್ರೂಪ ತಾನೆಂದುನಿನ್ನ ಸಂಶಯ ಕಳೆಯೋ ಮನವೇ 3
--------------
ಚಿದಾನಂದ ಅವಧೂತರು
ಶರಣಾರ್ಥಿ ಶಿವಶರಣಾರ್ಥಿ | ಹರಿಹರ ಎಂದು ಶಿವಪದ ಕಂಡವಗೆ ಪ ಗುರುವಿಗೆರಗೆ ನಿಜ ಗುರುತಕೆ ಬಂದಿನ್ನು | ಧರೆಯೊಳು ಪುಣ್ಯ ಜಂಗಮನೆ ವಾಸಿ | ಅರಹುಮರಹು ಮೀರಿ ಸಹಜಾವಸ್ಥಿಗೆ | ಬೆರದಿಹ ಶರಣಗೆ 1 ಎದೆಸೆಜ್ಜೆಯೊಳಗಿಹ ಘನಲಿಂಗ ಪೂಜಿಸಿ | ಮುದದಿಂದ ಭಕ್ತಿಯ ಪಾವುಡದೀ | ಸದ್ಭಾವ ಸೂತ್ರದಿ ಆವಗುಧರಿಸಿಹ | ವಿದಿತ ಲಿಂಗಾಂಗಿಗೆ 2 ಆಶೆಯಸುಟ್ಟು ವಿಭೂತಿಯ ಹಚ್ಚಿದ | ಧ್ಯಾಸದಂಡ ಕೈಲಿ ಪಿಡಿದು | ಲೇಸಾದ ಸುಗುಣ ರುದ್ರಾಕ್ಷಿಯ ತೊಟ್ಟು | ಭಾಸಿಪ ಸಂತಗೆ 3 ಶಾಂತಿಯ ತೊಡರವ ಕಟ್ಟಿ ವಿವೇಕದ | ಮುಂತಾದ ಕಾಷಾಯ ಪೊದ್ದಿಹನಾ | ಸಂತತ ಗುರುಧರ್ಮ ಭಿಕ್ಷೆಯನುಂಡು | ವಿಶ್ರಾಂತಿಯ ಮಠ ಹಿಡಿದ ವಿರಕ್ತಗೆ 4 ಶರಣನೆನುತಾ ಅನ್ಯರ ಶರಣರ ಮಾಡೀ | ಶರಣ ತಾನೆಂಬ ವೃತ್ತಿಯನುಳಿದು | ದ್ಧರಿಸಿದ ಮೂರ್ತಿಗೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀಶನ ಚರಣದಾಸನಾಗಿರ್ದರೆ ಆಶಾಪಾಶ ನೀಗಿರಬೇಕು ಪ ಈಶನರಿತ ಗುರು ಶಿಷ್ಯನಾಗಿರ್ದರೆ ದೂಷಣ ಭೂಷಣ್ಹೋಗಿರಬೇಕು ಅ.ಪ ಹರಿಸರ್ಮಣಾಮೃತ ಸುರಿವನಾಗಿರ್ದರೆ ಧರೆಯ ಭೋಗ ಮೀರಿರಬೇಕು ಪರತತ್ತ್ವದ ಮೂಲರಿತವನಾದರೆ ಮರವೆ ಮಾಯ ಹಾರಿರಬೇಕು 1 ವೇದ ವೇದಾಂತವ ಸಾಧಕನಾದರೆ ವಾದ ವಾಂಛಲ್ಯವ ತೊಡೆದಿರಬೇಕು ಬೋಧ ಪಡೆದು ನಿಜ ಸಾಧುವಾದರೆ ನಾದಶಬ್ದವಡಗಿರಬೇಕು 2 ಮಾನಸಪೂಜೆಯ ಖೂನ ಬಲ್ಲ್ಯಾದರೆ ತಾನು ತನ್ನನು ಅರಿತಿರಬೇಕು ಧ್ಯಾನವಿಡಿದು ನಿಜಜ್ಞಾನಿಯಾದರೆ ಮಾನಭಿಮಾನಕ್ಹೊರತಿರಬೇಕು 3 ಬೋಗದ್ವಾಸನ್ಹಿಂಗಿ ಭಾಗವತನಾದರೆ ಕೂಗಿನ ನೆಲೆ ತಿಳಿದಿರಬೇಕು ಯೋಗ ಬಲಿಸಿ ಮಹಯೋಗಿಯಾದರೆ ರಾಗರಹಿತನಾಗಿರಬೇಕು 4 ಲಿಂಗವ ಧರಿಸಿ ಜಂಗಮನಾದರೆ ಸಂಗರಹಿತನಾಗಿರಬೇಕು ಅಂಗ ಮೂರು ನೀಗಿ ಲಿಂಗ ತಾನಾದರೆ ಲಿಂಗಾಂಗ ಸಮರಸ ತೋರಬೇಕು 5 ಸತ್ಯವರಿತು ಸತ್ಪುರುಷನಾದರೆ ಸತ್ತಂತೆ ಜಗದೊಳಿರಬೇಕು ಮೃತ್ಯುಗೆಲಿದು ಪರಮಾರ್ಥಿಕನಾದರೆ ಮತ್ರ್ಯರ ಗುಣ ಮರ್ತಿರಬೇಕು 6 ಘೋರ ಭವಾಂಬುಧಿ ಪಾರುಗಂಡಿರ್ದರೆ ಪಾರ ಹಾರೈಕೆ ಅಳೆದಿರಬೇಕು ಸಾರಮೋಕ್ಷ ತನ್ನ ಸೇರಬೇಕಾದರೆ ಧೀರ ಶ್ರೀರಾಮನೊಲಿಸಿರಬೇಕು 7
--------------
ರಾಮದಾಸರು
ಪರಮಪಾವನ ಪರಬ್ರಹ್ಮ ಸದಾಶಿವನಿರುಪಮನಿತ್ಯಮಂಗಲ ಮಹಿಮಾ ||ಸರಸಿಜೋದ್ಭವ ಸುರಮುನಿ ವೃಂದೋವಂದಿತಪರಕೆ ಪರನೆಂದು ಪೊಗಳಿದೆನಲ್ಲದೆ |ತೀರಕ ಜಂಗಮನ ದಸೆಯಿಂದ ಪೊಡ................................. ಬಾಣನ ಕಾಯ್ದ ಸ್ಥಿರದಿ ತಾಳಿದನಂದನ | ಚರಾಚರ | ಗರ್ವಿಗೆ ಗರ್ವಾದನಂದೆನಲ್ಲನಿನಗೆ ತಿರುಕ ಜಂಗಮನೆಂದೆನೆ1xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಎತ್ತ ನೋಡಿದಲತ್ತತ್ತ ಪಿಡಿದಿಹ ಚಿತ್ಪ್ರಭೆಬೆಳಗು ಭಾನವು ಭಾಸವು ಚಿತ್ತಕೆ ಚೈತನ್ಯವಾದಚಿನ್ಮಯ ಶಿವ ಪ್ರತ್ಯಗಾತುಮನೆಂದು ಪೊಗಳಿದೆ-ನಲ್ಲದೆ.......................| ಚಂದ್ರನಕಳೆನೆತ್ತಿಲಿಟ್ಟವನೆಂದೆನೆ |ಗಂಗೆಯ ಜಲಪಾತ ತಾಳಿದನೆಂದೆನೆ |ಕಲ್ಪನೆ ಮನದ ವೃತ್ತಿಗಗೋಚರನಂದೆನಲ್ಲದೆ ನಿನಗೆ2ನಮಃ ನಿಜಘನತೇಜಃ ಪುಂಜ ರೂಪನಾಮದಿನೆ | .....................................ನಾಮ ರೂಪಕನೆಂದೆನೆ || ಕರ್ಮನೇಮ ನೈಷ್ಠಿಕನೆಂದೆನೆಸಿಂಧಾಪುರದ ಸೀಮೆ ಕರ್ಣಿಕನೆಂದೆನೆ | ಗಿರಿಗೆನಿಜಧಾಮದ ಏಕನೆಂದು ಪೊಗಳಿದೆನಲ್ಲದೆ |ನಾಮರೂಪಕನೆಂದೆನೆ3
--------------
ಜಕ್ಕಪ್ಪಯ್ಯನವರು