ನಂಬು ನಂಬು ಶ್ರೀನರಹರಿ ಪಾದವÀ ನರನೇ ಪಾಮರನೆ
ಪಾತಕ ಕೃಷ್ಣಾ ಮೂರ್ತಿಯನ್ನೇ ಪ
ಸಾಧು ಸಜ್ಜನ ಸಂತರ ಸಲಹುವ ಸಕಲ ಲೋಕ ಕರ್ತನಾ
ಮೇದಿನಿ ಭಕ್ತರ ಮನದಲಿ ಚರಿಸುವ ಮಂಗಳ ಮಹಿಮನ
ಆದಿಮೂರುತಿ ಆನೇಕ ಚರಿತಾ ಅನಂತ ಅವತಾರನಾ
ಅನುದಿನ ಮರೆಯದೆ ನೀ ಯಿನ್ನಾ 1
ಶ್ರೀನಿವಾಸ ಆಶ್ರಿತ ಜನಪೋಷಕ ಶಾಶ್ವತನಾಗಿಹನಾ
ಗಾನಲೋಲ ಶ್ರೀವೇಣುನಾದನ ಕರಿರಾಜ ವರದನ
ದಾನವಾಂತಕನ ದಶರಥತನಯನ ದೇವಾದಿದೇವನ್ನ
ಮಾನವ ಮದನ ಜನಕನಾದನಾ 2
ಭೂಸುರ ನಾಯಕನ
ಮಾಧವ ಗೋವಿಂದನ
ಮುಕ್ಕುಂದನಾದ ಅವನಾ
'ಹೆನ್ನೆವಿಠ್ಠಲನಾ’ 3