ಒಟ್ಟು 20 ಕಡೆಗಳಲ್ಲಿ , 13 ದಾಸರು , 20 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾತ್ಮದ ವಿದ್ಯ ಅಧ್ಯಕ್ಷಾಗಬೇಕು ಸಾಧ್ಯ ಧ್ರುವ ಕನ್ನಡಿಯೊಳಗಿನ ತಾ ಗಂಟು ಸನ್ನಿಧವಾಗುವದೆ ಕೈಗೊಟ್ಟು ಬಣ್ಣಿಸಬ್ಯಾಡಿ ನಿಜಬಿಟ್ಟು ಕಣ್ಣಾರೆ ಕೆಟ್ಟು 1 ಕನಸಿಲೆ ತಾ ಕಂಡಭಾಗ್ಯ ಅನುಭವಕೆ ಬಹುದೆ ಶ್ಲಾಘ್ಯ ನೆನಸಿಕೊಂಡವ ಅಯೋಗ್ಯಜನದೊಳು ಅಶ್ಲಾಘ್ಯ 2 ಹೊತ್ತಿಗೆಲ್ಹೇಳುವ ಪುರಾಣ ಯಾತಕೆ ಬಾಹುದು ನಿರ್ವಾಣ ಚಿತ್ತಗಾಗುದು ಸಮಾಧಾನ ಹತ್ತಿಲಿ ನಿಜಗಾಣಾ 3 ಬಾಹುದೆ ನಿರ್ವಾಹ ಹೊಗುವರೆ ಹೊಕ್ಕರೆ ಸಹಾ ಹೋಗದು ತೃಷದಾಹ 4 ಸಾಧನ ಮಾಡಿಕೊ ಸಾಧ್ಯಸದ್ಗುರು ಕೃಪೆಯಲಿ ನಿಜ ಅಭೇದ್ಯ ಸಾಧಿಸೊ ಮಹಿಪತಿ ಸಧ್ಯ ಆಧ್ಯಾತ್ಮಸುವಿದ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಸಾಧಿಸಿನೋಡಿ ಮನ ಉನ್ಮನÀಮಾಡಿ ಘನಸುಖ ಭೇಧಿಸಿದರ ಭಾಸುತದೆ ತನ್ನೊಳು ತಾನೆ ಕೌತುಕಧ್ರುವ ನೋಡಿ ನೋಡಿ ಖೂನ ಅರುಹು ಇಲ್ಲದೆ ಜನದೊಳು ಬರುದೆ ಹೇಳ್ಯಾಡುದೇನ ನಿರ್ವಿಕಲ್ಪನ ನಿಜನೆಲೆನಿಭವರಿತು ನೋಡಿ ಸ್ಥಾನ ಸರ್ವಸಾಕ್ಷಿ ಸರ್ವಾತೀತವೆಂಬ ವಸ್ತು ನೋಡಿ ಪೂರ್ಣ 1 ಕಣ್ಣಿನ ಕೊನೆ ಮುಟ್ಟಿ ಕರಗಿ ಮನವು ನೋಡಿ ಪೂರ್ಣ ಬೊಧ ಸಣ್ಣ ದೊಡ್ಡವರೊಳಗಿದೆ ಒಂದು ಸಾರುತಿದೆ ವೇದ ಧನ್ಯ ಧನ್ಯಗೈಸುವ ನಿಜ ಪುಣ್ಯ ಗುರುಪಾದ ಚನ್ನಾಗ್ಯನುಭವದಿಂದ ನೋಡಲಿಕ್ಯಾಗದು ಸ್ವಾದ 2 ಸುರಿಮಳಿಗರೆವುತಲ್ಯದೆ ಸ್ವಸುಖದಾನಂದೊ ಬ್ರಹ್ಮ ತೆರೆತಿಳಿಯಲಿಕ್ಕೆ ಗುರು ಶರಣ ಹೋಗಬೇಕು ಇದೇ ವರ್ಮ ಹರುಷಗೈಸಿದ ನೋಡಿ ಪತಿತಪಾವನ ಸದ್ಗುರು ನಮ್ಮ ತರಳ ಮಹಿಪತಿಗಿದೆ ನಿತ್ಯಭಿನವದ ನೋಡಿ ಸಂಭ್ರಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಒಂದಾನೊಂದು ದಿವಸದಲ್ಲಿ ಗುರುವ್ಯಾಸರಾಯರು | ಪ ಅಂದದಿಂದ ಪುರಂದರದಾಸರಿ | ಗಿಂದು ಭೋಜನಕ್ಕೆ ಬನ್ನಿರೆಂದು ಕರೆದರೂ ಅ.ಪ ಪೇಳಿತೆಂದು ದಾಸರು ಪೋಗಿ ತಾವು ನಿರ್ಮಲ ಸ್ನಾನ ಜಪಮಂತ್ರ ಹರಿಪೂಜೆಯನೆ ಮಾಡಿ || ಧಳಥಳಿಸುವ ವಿಠಲನ ದಿವ್ಯ ಪಾದ ಗಳ ಧ್ಯಾನಿಸಿ ಕುಳಿತರು ಜನಗಳೆಲ್ಲ ಕೇಳಿ 1 ವಿಠಲನ ದಿವ್ಯ ಮೂರ್ತಿಯ ಪಾಡಿ ದೃಷ್ಟಿಯಿಂದಲಿ ನೋಡಿ | ಮುಟ್ಟಿ ಮುಂದೊಲಿದು ಕುಣಿಕುಣಿದಾಡಿ || ಥಟ್ಟನೆ ವೇದಕ್ಕೆ ಸಮನಾದ ಪದಗಳು | ನಿಷ್ಠೆಯಿಂದ್ಹೇಳಿ ಅಭೀಷ್ಟವ ಪಡೆದರು2 ಎಡೆಯೊಳು ಷಡ್ರಸದನ್ನವ ನೀಡೆ | ಕಡು ಮಮತೆಗಳಿಂದ | ಬಿಡದೆ ದಾಸರ ದಾರಿಯ ನೋಡಿ || ಯೆಡ ಬಲದಷ್ಟ ದಿವ್ಯದಿಂಡೆಯರೆಲ್ಲಾ | ಕಡೆಯದೆಶೆ ಧರಿಸಿದರು ದಾಸರಾ 3 ಹಗಲು ಒಂಭತ್ತು ತಾಸಾಗಿರಲು | ಆಗೆದ್ದು ಬೇಗ ಗುರುಗಳ ಸಮೀಪಕ್ಕೆ ಬರಲು || ಮುಗಿದು ಕರಯುಗ್ಮವ ಬಗೆ ಬಗೆ ಸ್ತುತಿಸುತಾ | ಜಗದೊಳು ನಾನಪರಾಧಿಯೆಂದರೂ 4 ಭೋಜನವ ಮಾಡಿ ಗುರುಗಳಂದು ಸಿಂಹಾಸನದಲ್ಲಿ | ರಾಜಿಸುತ್ತ ಬಂದು ಕುಳಿತಿರಲಂದೂ || ಆ ಜನದೊಡಗೀ ದಾಸರು ಕರೆಯಲು | ನೈಜಭಾವದಿಂದು ಬಂದು ಕುಳಿತರೂ 5 ಪದಗಳು ಬರದ ವಹಿಯಕೊಂಡು ಪೋಗಿ | ಮಧ್ವಶಾಸ್ತ್ರದ ಮೇಲೆ ಕುಳ್ಳಿರಲಾಗ || ಅದನರಿಯದೆ ದಿಂಡೆಯನೊಬ್ಬನು ಆ | ಪದವಹಿಯ ತೆಗೆದು ಬಿಸುಟನಾಗಾ 6 ಯೆರಡಾವರ್ತಿ ತೆಗೆಯಲು ಆಗ | ತಿರುತಿರುಗಿ ಬಂದು ವರಪುಸ್ತಕದ ಮ್ಯಾಲೆ ಕುಳ್ಳಿರಲಂದೂ || ಗುರು ವ್ಯಾಸರಾಯರು ನೋಡಿ ಹರುಷದಿಂದ | ಕರೆದು ಬೈದರವಗೆ ಕಡು ಮೂರ್ಖನೆಂದೂ 7 ಪದದೊಹಿ ತೆಗೆದು ಬಿಸಾಡಿದರೆ ತಿರುತಿರು ಗ್ಯದರಮ್ಯಾಲೆ ವರನಾಲ್ಕು ವೇದಾರ್ಥದರೊಳಗುಂಟು || ನರರುತ್ತಮರೆಲ್ಲ ನೋಡಿ ಹರುಷದಿಂದ | ಪುರಂದರ ಉಪನಿಷತ್ತೆಂದರೂ 8 ಗುರುರಾಯರು ದಾಸರ ನೋಡಲಾಗ ಭರದಿಂದ ಯೆದ್ದು | ಅರಿವೆಯ ಕೈಯಿಂದೊರಸಲು ಆಗ || ತ್ವರಿತದಿ ಕೇಳಲು ವಿಠಲನ ಗುಡಿಯೊಳು | ಪಡದಗುರಿ ಹತ್ತವು ವರಿಸಿದೆವೆಂದರು 9 ಹಾಗೆಂದು ನುಡಿದಾಕ್ಷಣದಲಿ ಬೇಗ ಶಿಷ್ಯರಿಗೆ | ಹೋಗಿ ನೋಡಿ ಬಾರೆಂದೆನಲಾಗಿ || ಬೇಗದಿಂದಲಿ ಬಂದು ಕೇಳಲು ಅವರು | ಈಗ ದಾಸರು ಬಂದು ಪರಿಹರಿಸಿದರೆಂದು 10 ಆ ಮಾತು ಕೇಳಿದಾಕ್ಷಣದಿ ಬೇಗ | ಪ್ರೇಮದಿ ಬಂದು ಸ್ವಾಮಿರಾಯರಿಗೆ ಪೇಳಲು ಆಗ || ನಾಮವ ಸ್ಮರಿಸುತ ಪ್ರೇಮಾಲಿಂಗನವಿತ್ತು | ಕಾಮಿತಾರ್ಥ ಫಲವೀವ ಕಲ್ಪತರುವೆಂದರೂ 11 ಇಂತು ಅನುಭವ ಮಾತುಗಳನಾಡಿ ಲಕ್ಷ್ಮೀಕಾಂತನ | ಅಂತರಂಗದಲಿ ಅತಿಮಾನವ ಮಾಡಿ || ಮೂರ್ತಿ | ಶಾಂತತ್ವದಿ ನೋಡುತ ಶರಣು ಮಾಡಿದರೂ 12 ಗಜಪುರದಲ್ಲಿ ಇರುವರು ಕೂಡಿ ವಿಜಯವಿಠ್ಠಲನ್ನ | ಭಜನೆಯಿಂದ ದಿನ ದಿನ ಪೊಗಳಿ || ತ್ರಿಜಗದೊಡೆಯ ಗುರು ಪುರಂದರವಿಠಲನ | ನಿಜ ವೈಕುಂಠದ ಮುಕ್ತಿಯೈದಿದರೂ 13
--------------
ವಿಜಯದಾಸ
ಕೇಳು ಶ್ರೀನಿವಾಸ ಕಷ್ಟವ ತಾಳಲಾರೆ ಶ್ರೀಶ ಕಂಜಜೇಶ ಪ. ಮಾತ ಕೇಳದಿರುವ ಮನ ಬಹು ಕಾತರಗೊಂಡಿರುವ ರೀತಿಯಿಂದ ಬಹು ಸೋತೆನು ಷಡ್ರಿಪು ಜಾತ ಬಂಧಿಸಿರುವ 1 ಕಟ್ಟಿ ಸಹಿಸಲಾರೆ ಮೊದಲ ವಿಠಲ ನೀ ಕೈಬಿಟ್ಟರೆ ಮಾಜದು ಅಟ್ಟಹಾಸ ತೋರೆ 2 ಉದಯ ಮೊದಲುಗೊಂಡು ನಾನಾ ವಿಧದಲಿ ಭ್ರಮೆಗೊಂಡು ಸದಯ ನಿನ್ನ ಪಾದಾಬ್ಜ ನೆನೆಯದೆ ಚದುರೆಯ ಮನಗೊಂಡು 3 ನಿತ್ಯ ಕರ್ಮವೆಲ್ಲ ಕಂಬಳಿ ಬುತ್ತಿಯಾಯಿತಲ್ಲ ಕತ್ತರಿಸಿ ಬ್ರಹ್ಮೆತ್ತಿಯನ್ನು ಪುರು- ಸಿರಿನಲ್ಲ 4 ತಲ್ಲಣಗೊಳಿಸುವುದು ತುದಿಮೋದ- ಲಿಲ್ಲದೆ ದಣಿಸುವುದು ನಿಲ್ಲೆ ನಡೆಯ ಮಲಗೆಲ್ಯು ಬಿಡದು ದೂ- ರೆಲ್ಲು ಪೇಳಗೊಡದು 5 ಮೆಲ್ಲ ಮೆಲ್ಲನೆದ್ದು ನೀ ಮನ ದಲ್ಲಿ ಸೇರುತ್ತಿದ್ದು ನಿಲ್ಲಲು ತೀರಿತಲ್ಲದೆ ಲೋಕ ದೊಳಿಲ್ಲ ಬೇರೆ ಮದ್ದು 6 ನಿತ್ಯ ನಿನ್ನ ಮುಂದೆ ಸೇವಾ ವೃತ್ತಿ ಮಾಳ್ಪದೊಂದೆ ಎತ್ತಾರಕವೆಂದಾಶ್ರಯಿಸದೆ ಮೇ- ಲೊತ್ತಿ ಬೇಗ ತಂದೆ 7 ಭೃತ್ಯರ ಬಿಡನೆಂದು ಶ್ರುತಿ ಶಿರ ವೃತ್ತಿ ವಚನವೆಂದು ಸತ್ಯವೆಂದು ನಂಬಿದ ನೀನರಿಯೆಯ ಔತ್ತರೆಯ ಬಂಧು 8 ವಿಜಯಸೂತನಿಂದ ಪಾದವ ಭಜಿಸಿದ ಮ್ಯಾಲೆನ್ನ ನಿಜ ಜನದೊಳು ಸೇರಿಸುವುದು ಚಿತ ಸಾಮಜ ವರದನೆ ಮುನ್ನ 9 ಭವ ಪರಿಪಾಲ ಪಾಲಿಸು ವ್ರಜ ಯುವತಿ ಲೋಲಾ ಪಾದ ಪಂ- ಕಜ ಕೊಡು ಗೋಪಾಲ 10
--------------
ತುಪಾಕಿ ವೆಂಕಟರಮಣಾಚಾರ್ಯ
ನದಿಗಳು ಭಾಗೀರಥ್ಯಾದಿ ನದಿಗಳ ತಾರತಮ್ಯ ನಿಜ ಭಾಗವತ ತಿಲಕ ನಿಮಿರಾಜಗೊಲಿದು ವಸಿಷ್ಠ ರಾಗದಲಿ ಕೇಳಿ ಜನರಯ್ಯಾ ಪ ಒಂದು ದಿನ ಗೋದಾವರಿಯ ತಟದಿ ನಿಮಿರಾಜ ಸಂದು ಯಜ್ಞವ ಮಾಡುತಿರಲಾಗ ಪರಮೇಷ್ಠಿ ನಂದನೆನಿಪ ವಶಿಷ್ಠ ಮಹಮುನಿ ನಡೆತಂದ ಮೇಧಾಗಾರಕೆ ಬಂದ ಯತಿವರನ ಮಣಿಪೀಠದಲಿ ಕುಳ್ಳಿರಿಸಿ ಸುಂದರಾಧಿಪ ಬೆಸಸಿದಾ 1 ವ್ರತಿಪತಿ ವಶಿಷ್ಠ ವೈಷ್ಣವಕುಲ ಶಿರೋರತುನ ಶ್ರುತಿಶಾಸ್ತ್ರ ಸರ್ವಜ್ಞ ಗಂಗಾದಿ ಪುಣ್ಯತೀ ಮತ್ಪಿತನೆನುತ ಪದಕೆರಗುವಾ ಕ್ಷಿತಿಪನೋಕ್ತಿಯ ಕೇಳುತಾನಂದ ಶರಧಿಯೊಳು ಗತನಾಗಿ ರೋಮ ಲಕ್ಷಣ ಕಳೇವರದಿ ಪುಳ ನೃಪತಿಗಿಂತೆಂದನು 2 ಕೇಳು ಜನನಾಥ ಮಹಭಾಗ ನಿನ್ನಯ ಪ್ರಶ್ನ ದೇಳಿಗೆಗೆ ಎನ್ನ ಸಂತೋಷ ಕಲ್ಪತರು ತ ಶಿಷ್ಯರೊಳು ಮೌಳಿಮಣಿ ನೀನಹುದು ನಿಖಿಳ ನದಿಗೊಳಿಪ್ಪ ಶ್ರೀಲೋಲನ ಸುಮೂರ್ತಿಗಳು ತಾರÀತಮ್ಯ ಸುವಿ ಮಾನವ ಇದನಾಲಿಪುದು ನೀನೆಂದನು 3 ಹರಿಪಾದನಖದ ಸಂಸ್ಪರ್ಶ ಮಾತ್ರದಿಂದಲಿ ಸುರತರಂಗಿಣಿ ಶ್ರೇಷ್ಠಳೆನಿಸುವಳು ನದಿಗಳೊಳು ದೊರೆಮೆನಿಪನಾ ತೀರ್ಥಕೆ ಸರಿತಾಗಗಣ್ಯ ಗೋದಾವರಿ ನಳಿನಿಗಿಂ ಕೊರತೆಯೆನಿಪಳೈ ವತ್ತು ಗುಣದಲಿ ಶಂಖ ಚರಣ ಸುಗದಾಬ್ಜ ಶೋಭಿತ ವೀರನಾರಾಯಣ- ರಸೆನಿಪನಾ ಸಲಿಲಕೆ 4 ಹರಜಟೋದ್ಭವ ಕುಶಾವರ್ತಿಗೆ ಸಹಸ್ರಗುಣ ಚಾರು ಕಂ ಬುರಲಿ ವಾರುಚಿ ಧನುರ್ಧಾರಿ ಯಮನಂದನಲಿ ವಿಹರಿಸುತಿಹನಾಜಲದೊಳು ತುರುಗಾಯ್ದ ದೇವನಂಗಜ ನದಿಗೆ ಈರೈದು ವಾಗ್ದೇವಿ ಶರಧಿಯೊಳು ಪು ಗೋದ ರಂಗನಾಥನೆನಿಪ 5 ಆ ಯಮಳನದಿಗಳಿಗೆರಡು ಗುಣಾಧಮ ಸರಯು ತೋಯಾಧಿಪತಿ ರಾಮ ಸರಯು ನೀರೆಂದು ಗುಣ ವಿಹಾಯ ಸಮಮಣಿತನಯಳೆ ಸ್ಥಾಯಕೆ ಚತುರ್ಬಾಹು ವಿಷ್ಣು ಕಾವೇರಿಗೆ ನಾಯಕ ವರಾಹದೇವಾ6 ಸಿಂಧು ಭವನಾಶಿಗೀರ್ವರು ಸಮರು ಕ್ಷೀರಾಬ್ಧಿ ಮಂದಿರ ನೃಸಿಂಹರಲ್ಲಿಹರು ಭವನಾಶನಿಗೆ ತಂದೆಯೆನಿಪ ತ್ರಿವಿಕ್ರಮ ಒಂದೆನಿಸುವುವು ನಾಲ್ಕು ನದಿಗಳು ಗುಣಗಳಿಂದ ಮುಂದಿಹ ಪದದಿ ಪೇಳ್ವೆ ಪೆಸರು ಹರಿರೂಪ ನೆಲ ತಮ್ಮಿಂದೀರಗಿಂತೆಂದನೂ 7 ವಾಜಿವದನು ಮಂಝರಾನದಿಯೊಳಿಹನು ನವ ರಾಜೀವನಯನ ಶ್ರೀಧರ ಭೀಮರಥಿಯೊಳಿಹ ವಿರಾಜಿಪ ಮಲಾಪಹಾರಿ ಭಾಜನದೊಳಿಪ್ಪ ದುಷ್ಟ ಜನರನು ಮರ್ದಿಸುವ ಶ್ರೀ ಜನಾರ್ದನ ನಾಲ್ಕು ನದಿಗಳು ದ್ವಿಗುಣದಿಂದಾ ನಿತ್ಯ ನೈಜಭಕ್ತಿ ಜ್ಞಾನದಿ 8 ಭೀಮರಥಿ ಸಮ ಪಿನಾಕಿನಿಯೊಳಗೆ ಕೇಶವನು ಭೂಮಿಯೊಳು ಪೃಥಕು ಪೃಥಕು ಸುಖ ಜ್ಞಾನದಿ ಶ್ರೀ ಮನೋರಮ ಕೇಶವಾದಿ ರೂಪಗಳಿಂದ ಸ್ವಾಮಿಯೆನಿಸುವನಲ್ಲ ಸ್ನಾನಾದಿ ಸತ್ಕರ್ಮ ಮೋಕ್ಷ ಗಳೀವನೊ 9 ಈ ನದಿಗಳೆರಡು ಗುಣ ಪುಷ್ಕರಣಿನಿಚಯ ನ್ಯೂನವೆನಿಪವು ಮುಕ್ತಿ ದತ್ತಾತ್ರಯನು ಕೃಷ್ಣ ಮಾನಸ ಸರೋವರದೊಳು ಜ್ಞಾನಾತ್ಮ ವಾಮನನ ಶ್ರೀ ಭೂ ಸಹಿತ ಪ್ರಸ ನ್ನಾನನಾಬ್ಜದಿದರೆ ಜಘನಸ್ಥಿತಾಭಯ ಸು ಧೇನಿಪುದು ಎಂದಾ 10 ದೇವಖಾತಗಳು ಶತಗುಣಕಡಿಮೆ ಮಾನಸ ಸ ರೋವರಕೆ ಇತರ ಪುಷ್ಕರಣಿಗಳಿಗಲ್ಪಗುಣ ಪಾವನವಗೈವ ಕ್ಷುದ್ರಾ ಪ್ರಾವಹಿಗಳೀರೈದು ಗುಣದಿ ಕಡಿಮೆ ಲಕ್ಷ್ಮೀ ದೇವಿಪತಿ ನಾರಾಯಣನ ಚಿಂತಿಸೆಂದು ನೃಪ ಭವನೋವ ಪರಿಹರಿಪುದೆಂದು 11 ಈ ಸಲಿಲತೀರ್ಥಂಗಳೆರಡು ಗುಣದಿ ತಟಾಕ ಶೇಷಪರ್ಯಂಕ ಅಚ್ಯುತನಿಹನು ಸಜ್ಜನರ ವಾಸವಾಗಿಹನು ಚಕ್ರಿ ಘೋಷಗೈವ ಧರಾಂತಕೂಪಗಳೊಳಿರುತಿಹ ನಾ ಕೇಶನದಿಗಳ ತಾರÀತಮ್ಯ ರೂಪಗಳನುಪ ಪಾಸನಗೈವುದೆದೆಂದು 12 ಈ ತೆರದಿ ನಿಮಿರಾಜಗೋಸುಗ ವಶಿಷ್ಠಮುನಿ ತಾ ತಿಳಿದ ಕಥಾತಿಶಯ ಪರಮ ವಿಬುಧರು ಧ ಪ್ರೀತಿಯಿಂದಾಚರಿಸಲು ಶೀತಾಂಶು ಕಮಲಾಪ್ತರುಳ್ಳನಕ ಸುರಪತಿ ನಿ ಕೇತನದಿ ವಿವಿಧ ಭೋಗಗಳಿತ್ತು ಶ್ರೀ ಜಗ ಸಂಪ್ರೀತಿಯಿಂದನುರಾಗದೀ 13
--------------
ಜಗನ್ನಾಥದಾಸರು
ನಿನಗಿಂತ ಅಧಿಕರು ನಿನ್ನಯ ಭಕುತರು ಇದಕೆ ಅನುಮಾನಗೊಳಬೇಡ ಅಂಬುಧಿಶಯನ ಪ ಪದಿನಾಲ್ಕು ಲೋಕಗಳು ಪೊತ್ತೆನೆಂದೆನಬೇಡ ಅದುಸಹಿತ ನಿನ್ನನು ಹೃದಯದೊಳಗೆ ಹುದುಗಿಕೊಂಡಿಪ್ಪರೋ ಪದುಮನಾಭನೆ ಕೇಳೊ ಇದರಿಂದ ಸರಿಮಿಗಿಲು ಆರೊ ಜನದೊಳಗೆ 1 ವನಜಾಂಡಗಳೆಲ್ಲ ಪೊತ್ತೆನೆಂದೆನಬೇಡ ಕೊನೆಯ ನಾಲಿಗೆಯಲ್ಲಿ ನಿನ್ನ ನಿಲಿಸಿ ಭಾರ ಇಲ್ಲದಂತಿಪ್ಪರೊ ಘಣಿಶಯನ ಅಧಿಕಸಮರಾರೊ ಜಗದೊಳಗೆ 2 ಅಣುಮಹತ್ತು ಆದೆನೆಂದೆನೆಬೇಡವೊ ಗಣನೆ ಇಲ್ಲದೆ ನಿನ್ನ ಕರದಿ ಮುಚ್ಚಿ ಘಣಿ ಆಹಾರಗಾಮಿ ನಾ ವಿಜಯವಿಠ್ಠಲ ನಿನಗೆ ಮಣಿದು ಲೆಕ್ಕಿಸರೋ ನಿನ್ನನು ಮೆಚ್ಚಿದಾಳುಗಳು3
--------------
ವಿಜಯದಾಸ
ಬಂದೆಯಾ ಕೃಷ್ಣಯ್ಯಾ ಬಂದೆಯಾ ಪ ಸುಂದರ ನರರೂಪದಿಂದಲೀ ಧರೆಯೊಳು ಅ.ಪ. ಲೋಕೈಕ ದೇವನೆಂದು ಜ್ಞಾನಿಗಳೇಕಾಗಿ ಸಾರ್ವರಿಂದುಆಕಾರ ರಹಿತನ ಲೋಕ ಸಾಮಾನ್ಯರುಸ್ವೀಕರಿಸರು ಎಂದು ಸಾಕಾರನಾಗಿ 1 ಪೂರಾ ವಿಶ್ವದಲ್ಲೆಲ್ಲ ತುಂಬಾ ನಿಂತಿಹ ನಿನ್ನ _ನಾರು ನಂಬರು ಎಂತೆಂಬಕಾರಣ ಜಗಕೆ ತೋರರೆಲ್ಲಾ ಗುಣಸಾರ ಸಂಗ್ರಹಿಸಿ ನೀ ಧೀರ ಮಾನವನಾಗಿ2 ಜಗದೊಳಂದದ್ಭುತ ಶಕ್ತಿ ಇರುವುದೆಂ _ದುಗಮಿಕೆ ಜನದೊಳಾಸಕ್ತಿಜಗದೊಳು ಗದುಗಿನ ವೀರನಾರಾಯಣಬಗೆ ಬಗೆ ಮಹಿಮೆಯ ಸುಗುಣ ಮಾನವನಾಗಿ 3
--------------
ವೀರನಾರಾಯಣ
ಬೇಕೆಂದರೆ ಬಾರದು ಒಲ್ಲೆನೆಂದರೆ ಹೋಗದುಏಕಂಜುವಿ, ಶ್ರೀಹರಿ ಕರುಣಿಸದೆ ಒಂದೂ ಆಗದು ಪ ಸುಖವಾದಡೆ ಕಾಣುತ ಮುಖ ಕಮಲವುವಿಕಸಿತವಾಹುದು ಶ್ರೀಹರಿ ಕರುಣದಿದುಃಖವಾದಡೆ ದುಸ್ಥಿತಿಯಲಿರಲು ಅಂ-ಬಕದಲಿ ಜಲ ಪೋಗುವುದೇಕೊ ?ಸುಖದುಃಖ ದಿವ ರಾತ್ರಿಯ ತೆರವದರಿಂದಲಿ ನರರಂ-ಗಕೆ ಬಾಹುದು, ರಕ್ಷಣೆ ಮಾಡುವ ಕಾಶಿಪೀತಾಂಬರಮಕರ ಕುಂಡಲಾಭರಣನ ನೆನೆ ಮನವೆ1 ಸಿರಿ ಬಂದರೆ ಸಿರಿಗಾನಂದವ ಮಾಡುವಿರೇತಕೆ ಮನ ನಿರ್ಮಳ ಧ್ವನಿಯಲಿದರಿದ್ರವು ಬಂದರೆ ಧಾತುಗೆಟ್ಟು ದೇಹಾ-ತುರ ಹೊಂದುವಿರೇತಕೆ ದುಗುಡದಿಸಿರಿ ದಾರಿದ್ರ್ಯವು ಸುರತತಿಗಡರುವತೆರನೆಂದರಿದದರಿಂದಲಿ ಮಾನ-ವರಿಗೆ ಬಾಹುದು, ಪರಿಹರಿಸುವ ಪರಮಾತ್ಮನೆನಿಪಮುರವೈರಿಯ ಬಿಡದಿರು ಎಲೆ ಮನವೆ 2ಬಿ ಜನನವಾದರೆ ಹಾಡಿ ಹರಸಲೇತಕೆಅನುಗತಿಯನು ಹೇಳಿದರಳಲೇಕೆಜನನಮರಣವದೆಲ್ಲರಿಗೆ ಗತಿಬಾಹುದು ಏಕೆಜನನ ಮರಣವನೊಂದು ಹೊರಗೆ ಮಾಡಿ ಪರಜನದೊಳಗಿರಿಸುವ ಸುಜನೇಶ ಮುನೀಶನೆಂ-ದೆನಿಸುವ ಕಾಗಿನೆಲೆಯಾದಿಕೇಶವರಾಯನಅನುಶ್ರುತಿಯನು ಬಿಡದಿರು ಎಲೆ ಮನವೆ 3
--------------
ಕನಕದಾಸ
ಬೇಟೆಯ ನಾಡಿದನೇ | ಶ್ರೀ ಗುರು | ಬೇಟೆಯ ನಾಡಿದನೇ | ಭವದ ಮ | ಮಹಾಟವಿಯೊಳಗಿದ್ದ ಮನವೆಂಬ ಮೃಗದಾ ಪ ಬೋಧ ಕೊಳಲವ | ಸ್ವಾನಂದದಲಿ ಸುಸ್ವರದಲಿ | ತಾನೂದಿ ನಾದವ ಕಿವಿಯೊಳೂಡಿಸಿ ಸು | ಮ್ಮಾನದೀ ನಿಲುವಂತೆ ಮರುಳು ಮಾಡಿದ ಗುರು 1 ಪರಿ ಸಾಧನದಿಂದಲಿ ನವವಿಧ | ಪರಿಯಾದ ಭಕ್ತಿಯ ಪಾಶವನು | ಕೊರಳಿಗೆ ಸಂದಿಸಿ ದೃಢದಿಂದ ಪುನರಪಿ | ಹರಿದಾಡದಂದದಿ ನೆಲೆಗೊಳಿಸಿ ಗುರು 2 ಭಯದಿಂದ ಬೆದರಿ ಭಜ್ಜರಿಕೆಯ ಹಿಡಿದಿರೆ | ಶ್ರಯ ಸುಖದಾಯಕ ನಿಜ ಕರದೀ | ದಯದಿಂದ ಅಭಯವನಿತ್ತು ಬೋಳೈಸಿ ನಿ| ರ್ಭಯ ಮಾಡಿ ಭ್ರಾಂತಿಯ ಚಿಂತಿ ಹರಿಸಿ ಗುರು3 ಸವಿ ಸವಿ ನಾಮಾಮೃತ ಆಹಾರವನಿಕ್ಕಿ | ಜವದಿಂದ ಹೃದಯ ಭೂ ವನದೊಳಗೆ | ತವಕದಿ ವಿಶ್ರಾಂತಿ ಸ್ಥಳದಲಿ ನಿಲ್ಲಿಸಿ | ಅವನಿಲಿ ಸತ್ವ ಚರನ ಬಳಿಯಲ್ಲಿಟ್ಟು ಗುರು4 ಜನವನ ವಿಜನದೊಳಗ ತಾನೇ ತಾನಾಗಿ | ಅನುಮಾನ ಕಳೆಸಿದಾ ಅಂಜುವನಾ | ಅನುದಿನ ಸುಖದೊಳಿಪ್ಪಂತೆ ಮಾಡಿ | ದನು ನಂದನ ನಿಜ ಸಹಕಾರಿ ಮಹಿಪತಿ ಘನಗುರು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಮುರಲೀಯನೂದುವ ಮುರಹರನ್ಯಾರೇ ಪೇಳಮ್ಮಯ್ಯಾ ಪ ಮಾರನ ಕುಶಲವ ಮೋದದಿ ಬೀರುತ ಮನಮೋಹಗೊಳಿಪ ಮಾರನಯ್ಯ ಕಾಣೆ ಅ.ಪ. ಸುಂದರೀ ಸಖಿ ಸುಕುಮಾರಿ ಇಂದೀನ ವೈಭವ ಭಾರಿನಂದಾವೃಜನದೊಳಗಿಹ ನಾರೀ ವೃಂದಗಳೆಲ್ಲಾ ಪರಿಪರಿ ಸೇರಿ ನಂದನ ಸುತನಾ ಕಂದನ ಬಾಧೆಯ ತಾಳದೆ ತನ್ನೊಳು ಪೊಗಳುವ ಘನಶೌರಿ1 ಮದನಾ ಜನಕನು ಮೌನದಿ ನಿಂತಾಮಾನಿನಿಯರು ಮಾಡುವ ಚಿಂತಾ ಮನವಾತುರಗೊಳಿಪುದು ಶ್ರೀಕಾಂತಾ ಮಾವನರಿಪು ಸುಧೆನುಣಿಸು ಬಾ ಪ್ರಾಣಕಾಂತಾಮಾನರಹಿತಳಾಗಿ ಗಾನ ಮಾಡುವೆ ಘನ ಪ್ರಾಣಮಳಹೋ ಶ್ರೀಕೃಷ್ಣನೆಂದು 2 ಅಂಗದೊಸನವ ತೂರುತ ಮಂದಾಮಾರುತ ಪಡಿಸುವ ಮುಕುಂದಾ ಭಂಗಬಡಲಾರೆವು ಶ್ರೀಗೋವಿಂದಾ ಮದಮುರಿ ಮದಕುಲ ನಂದಾ ತುಂಗಮಹಿಮ ತಾ ಬಂದು ಪೊರೆದ ತಂದೆವರದಗೋಪಾಲವಿಠಲನ ಸಖ 3
--------------
ತಂದೆವರದಗೋಪಾಲವಿಠಲರು
ಶ್ರೀಯದುಕುಲತಿಲಕ ದೇವ ಕಾಯಬೇಕು ನೀ ಕರುಣಾವಾಲ ಪ ಶ್ರೀಯಶೋಧೆಯಮಾಯೆಯತನಯ ರಾಯನೆ ದಯೆದೋರು ಅ.ಪ ದೇವಕೀವಸುದೇವ ಜಾತ ನೀ ವಿನೋದದೆ ನಂದನೊಳಿರುತ ಆವ ಪೂತನಿಶಕಟರಸುವದೇವಹರಿಸಿದೆಭಕ್ತಭಯಹರಶ್ರೀ ಗೋವಕಾಯ್ದ ಗೋವಿಂದ ವಿಧಿಪುರಂದರಾದಿವಂದ್ಯ ಪಾವನ ಯಮನಾನಂದ ಫಣಿತರ ಫಣಿಯೊಳುನಿಂದ 1 ನಳಿನನಾಭಗೋಪಾಲ ಪುಳಿನ ಕ್ರೀಡೆಯಾಡಿಬಾಲ ರೊಳಗೆ ಮೇಲೆನಿಪ ಸುಶೀಲ ತುಳಿದೆ ಬಕ ಆಘಪ್ರಲಂಬಾದಿ ದೈತ್ಯಜಾಲ ಕಳವಳಗೊಳ್ಳುತ ಸೆರೆಯೊಳ್ ಬಳಲುವ ವನಿತಾಜನದೊಳ್ ಒಲಿಯುತ್ತಲಿ ನರಕಾಸುರ ಶಿರವರದಿನೆ ದುರಿತಶಯನ 2 ಬೃಂದಾವನ ಸಂಚಾರ ಬೆಳ್ದಿಂಗಳೊಳು ಗೋಪಿಯರ ಬಂಧುರ ವೇಣುಗಾನತೋರಿ ಹೊಂದುತಾನಂದ ನಿಧಿ ತೋರಿದ ಪರಾತ್ಪರ ತಂದೆ ತಾಯ್ಗಳ ಪೊರೆಯುತ ನಿಂದು ಕಂಸನಕೊಂದು ಅಪ್ರಮೇಯ ಜಾಜೀಶ್ವರ 3
--------------
ಶಾಮಶರ್ಮರು
ಸಂತೆಯ ನೋಡಲು ಬಂದವನಾ | ಭ್ರಾಂತತನವ ನೋಡಿ ಮಾನವನಾ ಪ ಪರಿ ವಾಸನೆಕಾರರು ವಿಷಯದ | ಸರಕಿನ ಚಟ್ಟೆಯ ರಂಗಡಿಯು | ದುರುಳತ ನವಗುಣ ಭೂಸಿನ ರಾಶಿಯು | ನೆರೆದಿಹ ಸಂದಣಿ ಜನದೊಳಗ 1 ಇಂತಿಹ ನರದೇಹ ಪ್ಯಾಟೆಯ ಸಡಗರ | ಪ್ರಾಂತವ ಕಾಣದೆ ಮರುಳಾಗಿ | ನಿಂತಲ್ಲಿ ನಿಲ್ಲದೆ ನೋಡುತ ತಿರುಗುತ | ಕಂಥಿಯ ಕಳೆದನು ಹೆಗಲಿನಾ 2 ಗುರುಮಹೀಪತಿ ಸ್ವಾಮಿಯ ಗಡಚಿನ | ಶರಣಿರವಳಿಹುಗದೆವೆ ಮರೆದು | ಧರಿಯೊಳು ಉಣಲಿಲ್ಲ ಉಡಲಿಲ್ಲ ಬಂದಿವ | ಬರುದೆವೆ ಮುಮ್ಮಳಿ ಘಳಿಸಿದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸನ್ಮಾರ್ಗ ಸನ್ಮಾರ್ಗಯಿದು ಪ ಮನ್ಮಥ ಜನಕನ ಮನದಿ ಭಜಿಸುವುದು ಅ.ಪ ಕರ್ತ ನೀನು ಹರಿಭೃತ್ಯನಾನು ಯೆಂ- ದತ್ಯಂತ ಮನೋಹರುಷದಿ ಕುಣಿವದು 1 ಪದುಮ ನಾಭನಿಗೆ ಪೂಜೆಯೆಂದರಿವುದು 2 ಛಳಿಮಳೆಗಾಳಿ ಬಿಸಿಲುಗಳೊಳಗೆ ಶ್ರೀ ವಿಭೂತಿ ತಿಳಿಯುವುದು 3 ಕರೆಕರೆ ಸಂಸಾರದ ಭಾರದೆ ತಾ ಮರೆಯದೆ ನಿರತವು ಹರಿಗರ್ಪಿಸುವುದು 4 ಪಾಮರಜನದೊಳು ಸೇರದೆ ಶ್ರೀಗುರು- ರಾಮ ವಿಠ್ಠಲನ ನಾಮ ಜಪಿಸುವುದು 5
--------------
ಗುರುರಾಮವಿಠಲ
ಸಾಧಕರೊಳು ಸಿದ್ಧನು | ಹರಿಪಾದಕಮಲ ಕಾಣಬೇಕೆಂದು ಬಯಸುವವ ಪ ಭಕ್ತಿಯ ಹಡಗವ ಸಾರಿ ಭವಾಂಬುಧಿ | ಯುಕ್ತಿಲಿ ದಾಟಿ ಮನೋರಥದಾ | ಮುಕ್ತಿಯ ಪಟ್ಟಣದಲ್ಲಿಹ ನಿಜಘನಾ | ಸಕ್ತಿಲಿ ಪಡಕೊಂಡು ಸುಖದಲಿ ಕುಳಿತಾ 1 ಉಣಲಾಡುವಲ್ಲಿ ಸರ್ವ ಅನುಭವದಲಿ ಹರಿ | ನೆನೆಯದೆ ಅರ್ಪಣೆಯಾಗುವದು | ಜನದೊಳು ಅವರವರಂತೆ ಸೋಪಾಧಿಕ | ಯೋಗಿ 2 ಕ್ಷೀರ ನೀರ ಭೇದ ಮಾಡುವ ಹಂಸ ವಿ | ಚಾರದಿ ಸಾರಾಸಾರವ ತಿಳಿದು | ಪ್ರಾರಬ್ಧ ಗತಿಯಲಿ ಸ್ವಾನಂದದಿಂದಿಹ | ಧಾರುಣಿ ಜನರನು ತಾರಿಸುವಾ 3 ಪುಣ್ಯದ ಫಲದಾಶೆಯಾತಕ ಬಾಲಗ | ಹೊನ್ನ ತಾ ಗುಂಬೆಂಬ ತ್ಯರನಂದದಿ | ಪರಿ | ಚೆನ್ನಾಗಿ ತಿಳಿದಿಹ ನಿದ್ವಂದಿಯೋ 4 ಬಲ್ಲವಿಕೆಯ ದೋರಿ ಸೊಲ್ಲಿಗೆ ಬಾರದೆ | ಬೆಲ್ಲಸವಿದ ಮೂಕನಂದದಲಿ | ಪುಲ್ಲನಾಭನು ಇರುವೆಲ್ಲರೊಳಗೆ ನೋಡಿ | ನಿಲ್ಲವ ಗುರು ಮಹಿಪತಿ ಪ್ರಭು ಶರಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು