ಪೋಷಿಸೆನ್ನ ವೆಂಕಟೇಶ ಶ್ರೀಶ ಶ್ರೀನಿವಾಸ
ಶೇಷಗಿರಿನಿಲಯ ಶ್ರೀ ಇಂದಿರೇಶ ಈಶ ಪ
ಹೇಸಿಯಿವನೆಂದೆನುತ ದೂಷಣೆಯ ಮಾಡದಿರು
ದೋಷದೂರನೆ ನಿನ್ನ ದಾಸ ನಾನಭವ
ದಾಸಜನರ ಮನದುಲ್ಲಾಸದೇವರು ನೀನು
ದಾಸನ ಆಸೆಯನು ಪೂರೈಸಿ ಸಲಹಯ್ಯ 1
ಕುನ್ನಿಕುಲದಲಿ ಜನಿಸಿ ಬನ್ನಬಡಲಾರದೆ
ಉನ್ನತೋನ್ನತಮಹಿಮ ನಿನ್ನ ಬೆನ್ನು ಬಿದ್ದೆ
ಭಿನ್ನತಾರದೆ ಎನಗೆ ನಿನ್ನ ದರ್ಶನವಿತ್ತು
ಉನ್ನತಮತಿ ನೀಡಿ ಮನ್ನಿಸಿ ಸಲಹು 2
ನಿತ್ಯ ತವ
ಶರಣಜನರುಂಡು ಮಿಕ್ಕ ಪರಮಪ್ರಸಾದ
ಶರಣೆಂದು ಚರಣಕ್ಕೆ ಮರೆವೊಕ್ಕೆ ನೆರೆನಂಬಿ
ತಿರುಪತೀಶನೆ ಭಕ್ತ ಕರುಣಿ ಶ್ರೀರಾಮ 3