ಒಟ್ಟು 10 ಕಡೆಗಳಲ್ಲಿ , 6 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು
ನನಗಾವ ಬಲವಿಲ್ಲ ನಿರುಪಮನೆ ಹೇಳೈಯ ವನಜ ಸಂಭವ ಜನಕ ತವ ಚರಣ ವಲ್ಲದಲೆ ಪ ಮಣಿದು ಬೇಡುವೆನೈಯ ಪ್ರಣತಾರ್ಥಿ ಹರಕೃಷ್ಣ ಜನುಮಗಳ ಹರಿಸುತಲಿ ಭವಬಂಧ ಬಿಡಿಸೈಯಅ.ಪ ನರರ ನಂಬಿದೆ ನೈಯ ಸಿರಿಯುರಿಗೆ ಬಾಯ್ಬಿಟ್ಟೆ ಅರಿಯದೆಲೆ ತವ ಮಹಿಮೆ ಬರಿದೆ ಬಳಲಿದೆಭವದಿ ಧೊರೆ ತನವು ಸವಿಯಹುದೆ ತವ ಸವಿಯ ಕಂಡವಗೆ ಜರಿಯ ದಲೆ ಬಡವನನು ಕರೆದು ಪಾಲಿಸು ತಂದೆ 1 ಹಣ ವನಿತೆ ಭೂ ವಿಷಯ ಉಂಡುಂಡು ಬೆಂಡಾದೆ ತನುಜ ಕರಣಗಳಿನ್ನು ಶತ್ರುಗಳ ಸಮವಿಹವು ಗುಣ, ಪೂರ್ಣ ಬಿಂಬನನು ನೆನೆಯ ಗೊಡದಲೆ ನಿತ್ಯ ಇನಸುತನ ಪುರದೆಡೆಗೆ ಸೆಳೆಯುತಿಹವೋ ಸ್ವಾಮಿ 2 ಸುರರು ಸುರರಿಗಾಶ್ರಯ ನೀರ ಮರುತಗಾಶ್ರಯ ಸಿರಿಯು ಸಿರಿರಮಣನೀನಿರಲು ಚರಣ ಸೇವಕ ನೆನ್ನ ನರರಿಗೊಡ್ಡುವರೇನೊ ಸರ್ವೇಶ ಅಕ್ಷರನೆ ಮೊರೆ ಹೊಕ್ಕೆ ಸಲಹೈಯ 3 ದೇವ ದೇವರ ದೇವ ದೇವತ್ವ ನೀಡುವನೆ ಕಾವ ಜೀವರ ನಿಚಯ ಸಾರ್ವಭೌಮನು ನೀನು ನೀವಲಿದು ಪೊರೆಯದಿರೆ ಆಗುವುದೆ ಸುಖಮುಕ್ತಿ ನಾವಿಕನು ನೀನೆಂದು ನಂಬಿದೆನು ಕೈಪಿಡಿಯೊ 4 ಅಗಲಿ ಬದುಕಿರಲಾರೆ ಗೋಪ ಪುರುಷನೆ ನಿನ್ನ ಸುಗಮ ಮಾಡಿಸು ಪಥವ ಸರ್ವಜ್ಞ ತವಪುರಕೆ ನಗವೈರಿ ಜಯತೀರ್ಥ ವಾಯು ವಂತರದಿರ್ಪನಗೆ ಮೊಗದ ಶ್ರೀಕಾಂತ ಕೃಷ್ಣವಿಠಲನೆ ಬೇಗ 5
--------------
ಕೃಷ್ಣವಿಠಲದಾಸರು
ಪಂಡರಿಯ ಪುರನಾಥ | ಭಕುತರ ದಾತಾ | ಅಂಡಲೆದು ಜನುಮಗಳ | ಬೆಂಡಾದೆ ಹರಿಯೇ ಪ ಸೂಕರ ಖರದ | ಹೇನು ಹಕ್ಕಿಯ ಮೃಗದಯೋನಿ ಯೋನಿಯ ಚರಿಸಿ | ಬೇನೆಗ್ವೊಳಗಾದೇಮಾನನಿಧಿ ಕಾರುಣ್ಯ | ವೇನ ಬಣ್ಣಿಪೆನಯ್ಯಮಾನವನ ಮಾಡೆನ್ನ | ನೀನಾಗಿ ಪೊರೆದೇ 1 ಕರ್ಮ ಕೋಟಿಗಳಲ್ಲಿ | ಮರ್ಮಗಳ ಮರೆತಲ್ಲಿಒಮ್ಮನದಿ ಸೂತ್ರಗಳ ತದ್ಭಾಷ್ಯಂಗಳಾ ||ಪೇರ್ಮೆಯಲಿ ನೋಡದಲೆ | ಕರ್ಮಚರಿಸಿದೆನಲ್ಲೆಭರ್ಮ ಗರ್ಭನನಯ್ಯ | ನಿರ್ಮಮನ ಮಾಡಯ್ಯ 2 ಸಕಲ ಶಾಸ್ತ್ರಾರ್ಥಗಳ | ಸಕಲ ಸಾರನೆ ಅಖಳಭಕುತ ಜನ ಸಂಸೇವ್ಯ | ಮಧ್ವಮುನಿ ವಂದ್ಯ ||ಸಕಲಾತ್ಮಕನೆ ಗುರು | ಗೋವಿಂದ ವಿಠಲಯ್ಯಸಕಲಕೂ ನೀನೇ ಚೇ | ಷ್ಟಕನೆಂದು ತಿಳಿಸೊ3
--------------
ಗುರುಗೋವಿಂದವಿಠಲರು
ಪರಸಿರಿಗೆ ಕರಗುತಿಹುದು ಸರಿಯೇ ಯೋಚಿಸು ಪ ಹರಿಯು ಕರುಣದಿಂದ ಕೊಟ್ಟ ಸಿರಿಗೆ ತೃಪ್ತನಾಗದÀಂತೆ ಅ.ಪ ಉರಗನ ನೆರಳಲ್ಲಿ ಕಪ್ಪೆಯು ಚಿರಕಾಲ ಜೀವಿಸುವುದೇ ಧರೆತಲದಲಿ ನರರ ಸಿರಿಯು ಸ್ಥಿರವಲ್ಲವೆಂದರಿಯದಂತೆ 1 ಹಲವು ಜನುಮಗಳ ಕರ್ಮದ ಫಲವನರಿತು ಮೋಸವಿಲ್ಲದೆ ನಳಿನನಾಭ ನಾರಾಯಣನೊಲಿದು ಕೊಡುವನೆಂದರಿಯದೆ 2 ಎನ್ನದೆಂದು ನಿನ್ನದೆಂದು ಖಿನ್ನನಾಗುವುದು ಸರಿಯೆ ಸನ್ನುತ ಪ್ರಸನ್ನ ಹರಿಯು ತನ್ನ ಭಾಗ್ಯವನರಿತು ನೀಡಲು 3
--------------
ವಿದ್ಯಾಪ್ರಸನ್ನತೀರ್ಥರು
ಬನ್ನಿರಿ ಬನ್ನಿರಿ ಪುರಜನರೆಲ್ಲರು ಕೃಷ್ಣನ ದರುಶನಕೆ ಪೋಗುವ ಪ ಕೃಷ್ಣನು ಜನಿಸಿದ ಈ ದಿನ ಇಷ್ಟವ ಪ್ರಾರ್ಥಿಸಲು ಪೋಗುವಅ.ಪ ದುಂದುಭಿ ನಾದವು ಕೇಳುತಿದೆ ಬಲು ಮಂದಿಯ ತಂಡವು ಹೋಗುತಿದೆ ಕಂದನ ರೂಪದಿ ಬಂದಿಹ ಆನಕ ದುಂದುಭಿ ಕುವರನ ಸಂಭ್ರಮ ನೋಡಲು 1 ಪೇಳಿರಿ ನಿಮ್ಮಯ ಕೊರತೆಗಳೆÀಲ್ಲವ ಕೇಳಿರಿ ವರಗಳ ಧೈರ್ಯದಲಿ ಬಾಲನು ಸುಲಭದಿ ಒಲಿಯುವ ಒಳ್ಳೆಯ ಕಾಲವಿದೆಲ್ಲರಿಗೆ ಬೇಗನೆ 2 ಜನುಮ ಜನುಮಗಳ ಪುಣ್ಯದ ರಾಶಿಯು ಜನುಮಾಷ್ಟಮಿ ದಿನದಿ ಲೋಕಕೆ ಜನುಮಾದ್ಯಷ್ಟಕದಾತನ ದರುಶನ ಮನಕೆ ಪ್ರಸನ್ನತೆ ಕೊಡುವುದು ಪೋಗುವ 3
--------------
ವಿದ್ಯಾಪ್ರಸನ್ನತೀರ್ಥರು
ಮಾರಮಣಾ ಹರಿ ಗೋವಿಂದಾ ಬಾರೋ ಕೊಂಡಾಡಿ ಪಡೆವೆನಾನಂದ ಪ ನಾರದಾದಿ ಮುನಿ ಬೃಂದಾನಂದ ಬಾರೋ ಭಕ್ತಕುಮುದೇಂದು ಮುಕುಂದಾ ಅ.ಪ ನಾನಾ ಜನುಮಗಳೊಳಗುದಿಸಿದೆವಯ್ಯ ಏನೆಂದು ಪೇಳಲಿ ನಿನಗೆ ಜೀಯ ನೀನೆನಗಿತ್ತಾ ತನುಗಳನಳೆಯಲು ಏನಪೇಳಲೈ ಭೂಮಿಗೆ ನಾಲ್ಮಡಿ ಸಾನುರಾಗದಿ ಜನನಿಯಿತ್ತಾ ಘೃತ ಪಾನಕ್ಷೀರ ವಾರಿಧಿಗಿಮ್ಮಡಿಯೋಳ್ ಬಾ 1 ನೋಡಿ | ಮನಕರಗದೆ ರುಕುಮಿಣಿ ರಮಣಾ ಮೃಡ ವಂದಿತ ಸರಸಿಜ ಚರಣಾ ಪಾಡೀ ಕೊಂಡಾಡುತಿರ ದೇಕೆ ನಿಷ್ಕರುಣಾ ಬೇಡಿದರ್ಗೆ ಕೈನೀಡುತೆ ದಾನವ ಮಾಡಲಿಲ್ಲವದರಿಂದ ದರಿದ್ರತೆ ಪೀಡಿಸವೈ ನಾ [ಮಾಡಿದ] ಪಾತಕವಾರ್ಜಿಸಿ ಜನುಮಂಗಳ ಪಡೆದೆನೊ ಬಾ 2 ಸುನಾಮ ನಮಿಸುವೆ ಸುಗುಣ ವಿರಾಮ ಸನ್ನುತ ವರಮಾಧವ ಕೋಮಲಾಂಗ ಸೋಮಶೇಖರಾಧಿಪ ಸುಮಚರಣವ ನೋಳ್ಪೆನೋ ಬಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಂದಿಸುವೆನನವರತ ಇಂದಿರೇಶಾ ಪ ನೊಂದು ಬಳಲಿದೆನಯ್ಯ ಸಲಹೋ ಶ್ರೀಶಾ ಅ.ಪ ಇಂದು ನರಜನುಮದೊಳು ನೊಂದೆನಯ್ಯ ಮುಂದಿನಾ ಜನುಮಗಳ ಸಂದಣಿಗಳೊಳು ನಿನ್ನ ಸುಂದರ ಪಾದಾಂಬುಜವನೆಂದೆಂದು ತೋರೆಂದು1 ನರಜನ್ಮ ಹಿರಿದೆಂದು ಅರಿತವರು ಪೇಳುವರು ನರನಾಗಿ ನಾ ಜನಿಸಿ ಗರುವದಿಂದಾ ಸಿರಿಯಾಸೆಯಿಂದ ಮದ ಪರವೈರ ಲೋಭಗಳ ದುರಿತಗಳನಾರ್ಜಿಸಿದೆ ಪೊರೆಯೊ ದೇವ 2 ಕಡುಪಾಪ ಕೂಪದೊಳಗಡಗಿರ್ಪೆನೈ ಹರಿಯೆ ಅಡಿಗಳಿಗೆ ಎಡೆಯಿಲ್ಲ ನುಡಿವರಿಲ್ಲಾ ಪಿಡಿವುದಕೆ ತೃಣವಿಲ್ಲ ದಡಕೆ ದಾರಿಯು ಇಲ್ಲ ತಡವೇಕೆ ಎನ್ನ ಕೈಪಿಡಿಯೊ ಗೋಪಾಲ 3 ಖಗರಾಜ ಪೊತ್ತಿಹನು ಸುಗತಿದಾಯಕನೆಂದು ಹೊಗುಳುವವು ಶೃತಿ ಶಾಸ್ತ್ರ ನಗಧರನೆ ನಿನ್ನತಾ ನಗಪುತ್ರಿ ನುತಿಸಿಹಳು ನಗಬೇಡವೈ ಪಾದಯುಗಗಳನು ತೋರೆಂದು4 ನಿನ್ನ ನಾಮದ ಭಜನೆ ಎನ್ನ ರಸನೆಯೊಳಿರಲಿ ಮುನ್ನಿಗಿಂತೆಂಟುಮಡಿ ಜನುಮ ಬರಲಿ ಮುನ್ನ ನಾವಾರ್ಜಿಸಿದ ಘನಪಾಪನಶಿಸಲಿ ಚೆನ್ನ ಮಾಂಗಿರಿವಾಸ ನನ್ನ ಹೃದಯದೊಳಿರಲಿ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ವರದ ಗೋಪಾಲ | ವಿಠಲ ಪ್ರಾರ್ಥಿಪೆ ನಿನ್ನದೇವ ತವ ದಾಸ್ಯವನು | ಬವಿಕಾಂಕ್ಷಿಪನ ಪ ನೀವೊಲೀದಿವನ | ಸ್ವೀಕರಿಸುವುದಯ್ಯಪಾವಮಾನಿ ಪ್ರಿಯ ಶು | ಭಾವಹ ಪ್ರದನೇ ಅ.ಪ. ವಿಶ್ವ ವ್ಯಾಪಕ ಹರಿಯೆ | ಅಶ್ವಮೊಗ ನಿನ್ನಂಘ್ರಿಸುಸ್ವರದಿ ಕೀರ್ತಿಸುವೆ | ಶಾಶ್ವತಾನಂದಾನಶ್ವರ ಜಿಹಾಸೆಯನು | ವಿಶ್ವಾಸದಿಂದಿತ್ತುವಿಶ್ವಕುಟುಂಬಿಕನೆ | ಹ್ರಸ್ವಗೈ ಕರ್ಮಾ 1 ಅನುವಂಶಿಕವಾಗಿ | ಗಾನಕಲೆ ಇವನೀಗೆನೀನೇವೆ ಕರುಣಿಸಿಹೆ | ವೇಣುಗೋಪಾಲಮಾನನಿಧಿ ಮಧ್ವ ಕಾ | ರುಣ್ಯ ಪಾತ್ರನು ಎನಿಸಿಜ್ಞಾನ ಭಕ್ತ್ಯಭಿವೃದ್ಧಿ | ಮಾಣದಲೆ ಗೈಯ್ಯೋ 2 ಏಸೇಸೋ ಜನುಮಗಳ | ರಾಶಿ ಪುಣ್ಯದ ಫಲವುಕೈಸೇರಿ ಆಶಿಸುವ | ದಾಸದೀಕ್ಷೆಯನುಲೇಸಾಗಿ ತೈಜಸನ | ಆಶಿಷವ ಕೈಕೊಂಡುಮೀಸಲ ಮನದಿ ಉಪ | ದೇಶವಿತ್ತಿಹನೋ 3 ತೃಕ್ಷಾದಿ ದಿವಿಜೇಡ್ಯ | ಪಕ್ಷಿವಹ ಕೃಷ್ಣ ಹೃ-ತ್ಕುಕ್ಷಿಯೊಳು ತವರೂಪ | ಈಕ್ಷಿಸುವ ಭಾಗ್ಯಭಿಕ್ಷೆಯನು ಇತ್ತು ಉ | ಪೇಕ್ಷಿಸದೆ ಪೊರೆ ಇವನಅಕ್ಷೀಣ ದಯಸಾಂದ್ರ | ಲಕ್ಷುಮಿಯ ರಮಣ 4 ಭಾವದ್ರವ್ಯ ಕ್ರಿಯವು | ಈ ವಿಧಾದ್ವೆತತ್ರಯ ಆವ ಸುಜ್ಞಾನವನು | ಈವುದಿವನೀಗೆ |ದೇವದೇವೇಶ ಗುರು | ಗೋವಿಂದ ವಿಠಲನೆಈ ವಿದಧ ಭಿನ್ನಪವ | ನೀ ವೊಲಿದು ಸಲಿಸೋ5
--------------
ಗುರುಗೋವಿಂದವಿಠಲರು
ಶ್ರೀನಾಥ ವಿಠಲ ಹರಿ | ನೀನೆ ಪೊರೆ ಇವನಾ ಪ ಮಾನನಿಧಿ ಮಧ್ವಾಖ್ಯ | ವಂದಿತ ಸಂಚರಣಾ ಅ.ಪ. ಯೋನಿ ಆನೇಕದಲಿ | ಜನುಮಗಳ ತಾಪೊತ್ತುಮೌನಿ ಜನ ಸಂಯೋಗ | ಸತ್ಸಂಗಗಳ ಪಡೆದೂಧ್ಯಾನ ಸಾಧನಕಾಗಿ | ಮೌನಿರಾಯರ ಸೇವೆಸಾನುರಾಗದಿ ಗೈಯ್ಯೆ | ಶ್ರೀನಾಥ ಒಲಿದೇ 1 ದಾಸ ಸತ್ಪಂಥಾನು | ವಾಸಿಪೆನು ಎಂದೆನುತವಿೂೀಸಲದ ಸನ್ಮನದಿ | ಪ್ರಾರ್ಥಿಸುತ್ತಿಹಗೇಲೇಸು ತೈಜಸನಾಜ್ಞೆ | ಪೋಷಿಸುತ ವಿಠಲನ ಸಸೂಸಿ ಸೇವಿಸಿ ಇತ್ತೆ | ಅಂಕಿತವನಿವಗೇ 2 ಮಾರಾರಿ ಸದ್ವಿನುತ | ತಾರತಮ್ಯವ ತಿಳಿಸಿಮಾರೆರಡು ಭೇಧಗಳ | ಅರಹುತಲಿ ಇವಗೇಪಾರಗಾಣಿಸು ಭವವ | ನೀರೋಜೋದ್ಭವನಯ್ಯಕಾರುಣಿಕ ಶ್ರೀಹರಿಯೆ | ಕಾರುಣ್ಯ ಮೂರ್ತೇ 3 ಸಖನಾಗಿ ಇವನಲ್ಲಿ | ಸುಖ ಕವನ ಪೇಳಿಸುತ ಪ್ರಕಟ ಗೈ ತವರೂಪ | ನಿಕಟ ಹೃದ್ಗುಹದೀವಿಖನಸಾಂಡದ ಓಡೆಯ | ಸಕಲ ಪ್ರೇರಕ ನಿನ್ನಅಕುಟಿಲದೆ ಮನದಿಂದ | ಪ್ರಾರ್ಥಿಸುವೆ ಹರಿಯೇ 4 ಸಿರಿ ಭೂಮಿ ರಮಣನೇಅರಹಲೇನಿಹುದಿನ್ನು | ಸರ್ವಜ್ಞ ಮಾರ್ತೇಕರುಣ ದೃಷ್ಟಿಲಿ ನೋಡಿ | ಪರಿಹರಿಸೊ ದುಷ್ಕರ್ಮಹರಿಯೆ ಗುರು ಗೋವಿಂದ | ವಿಠಲ ಮಾರುತಿಯೆ 5
--------------
ಗುರುಗೋವಿಂದವಿಠಲರು
ಷಡ್ವರ್ಗ ಸುಳಾದಿಝಂಪೆತಾಳಧನಧಾನ್ಯ ಗೃಹಕ್ಷೇತ್ರ ವನಿತೆ ಪುತ್ರಾದಿತರನೆನವಿನಲಿ ಜನುಮಗಳ ತಂದೀವ ಕಾಮಕನಕಗಿರಿ ಕೈಸಾರ್ದಡಂಪರಸುದೊರೆದಡಂಇನಿತು ತೃಪುತಿಯೈದದೆನ್ನ ಮನೋಕಾಮಜನಪರ ಸಿರಿಬಯಕೆ ಜಾಣೆಯರ ಸಂಗತಿಯಕನಸಿನೊಳಗಾದಡಂ ಬಿಡದಿಹುದು ಕಾಮತನಗಲ್ಲದ್ಹವಣದಿಹ ಕಾಮಕಾಮಿನಿಭೂತಕೆನಿತಶನ ಸಾಲದಾಯಿತೈ ಪೂರ್ಣಕಾಮಮುನಿನಾರಿಯಳ ಕಲ್ಲಮೈಯನೆತ್ತಿದಪಾದವನು ಎನ್ನ ದುರ್ವಿಷಯ ಕಾಮದಲ್ಲಿಟ್ಟು ನಿನ್ನಜ್ಞಾನ ಭಕುತಿ ವೈರಾಗ್ಯ ಕಾಮವನೀಯೊದಿನಕರಕುಲೋದ್ದಾಮ ಪ್ರಸನ್ವೆಂಕಟ ರಾಮ1ಮಠ್ಯತಾಳಗುರುಹಿರಿಯರಿಗಂಜದೆ ನಿಕ್ಕರ ನುಡಿಸುವ ಕ್ರೋಧಬರಿಯಹಂಕಾರದಿ ಬೆರತಘರಾಶಿಯನೆರಹಿಸಿ ನಿರಯವನುಣಿಸುವ ಕ್ರೋಧಮರುಳನ ದುರುಳನ ಮಾಡುವ ಕ್ರೋಧಗುರುಹಿರಿಯರಿಗಂಜದೆ ಉರುಕೋಪದಲೆದ್ದ ಕಾಳುರಗನ ಪೆಡೆದುಳಿದಾ ಸಿರಿಚರಣವ ಕ್ರೋಧಾಹಿಶಿರದ ಮ್ಯಾಲಿಡು ಗಡ ಗರುಡಾದಿ ಪ್ರಸನ್ವೆಂಕಟ ತಾಂಡವ ಕೃಷ್ಣ 2ರೂಪಕತಾಳಹೀನ ಧರ್ಮನ ಮಾಡಿಸುರಋಷಿಪಿತೃ ಋಣವೇನು ಕಳಿಯಲಿಲ್ಲವೆನ್ನ ಲೋಭಜೇನನೊಣನ ವೋಲು ತಾನುಣ್ಣನೊದಗಿಸಿನಾನಾಲಾಭದಲಿ ತುಂಬದು ಲೋಭಭಾಂಡದಾನವ ಬೇಡಿಳೆಯಾಜಾಂಡವನೊಡೆದಶ್ರೀನುತಾಂಘ್ರಿಯಲೊದ್ದು ಲೋಭದ ಕೋಶವನುನೀನೆ ಸೂರೆಯ ಮಾಡೊ ಪ್ರಸನ್ವೆಂಕಟ ವಾಮನ್ನ ಉದಾರಿಶಿಖಾಮಣಿಭಾಗ್ರ್ವಾ3ಪಂಚಘಾತ ಮಠ್ಯಅನ್ನಕೆ ಉಬ್ಬಿ ಯೌವನ ರೂಪಕೆ ಕೊಬ್ಬಿಧÀನ್ನಕೆ ಮೊಬ್ಬೇರಿಸಿತೆನ್ನ ಮದವುಎನ್ನ ಸವಿಸುವ ಪರಿವಾರ ಭುಜಬಲೆಂಬುನ್ನತಿಯಿಂದುನ್ಮತ್ತನ ಮಾಳ್ಪ ಮದವುದಾನವೇಂದ್ರನ ಮೌಳಿಯನ್ನು ತುಳಿದ ಪದದಿಎನ್ನ ಮದರಾಜನ ಮೆಟ್ಟಿಯಾಳೆಲೆ ದೇವನಿನ್ನ ಧ್ಯಾನವಿರತಿ ಮದದಿಂದ ಕೊಬ್ಬಿಸು ಪ್ರಸನ್ವೆಂಕಟ ಉರುಕ್ರಮ ಧನ್ಯರೊಡೆಯ 4ತ್ರಿವಿಡಿತಾಳಉತ್ತಮರ ಅವಗುಣವೆಣಿಸುತಹೊತ್ತು ಯಮಪುರಕೊಯ್ವ ಮತ್ಸರಮತ್ತೆ ಪರಸೌಖ್ಯಕ್ಕೆ ಕುದಿಕುದಿಸಿತು ಮತ್ಸರವುಚಿತ್ತಜನ ಶರ ಮತ್ಸರಿಸುತಿರೆಮೊತ್ತ ಗೋಪೇರ ಕುಚದ ಪೀಠದಿಒತ್ತಿ ಸುಖವಿತ್ತ ಪದವೆನ್ನೆದೆಲಿಡು ಪ್ರಸನ್ವೆಂಕಟ ಕೃಷ್ಣ 5ಅಟ್ಟತಾಳಇಂದುಮುಖಿಯರ ಕಂಡಂದಗೆಡಿಪ ಮೋಹಕಂದಗಳಾಡಿಸಿ ಕರುಣ ಉಕ್ಕಿಪ ಮೋಹತಂದೆ ತಾಯಿ ಬಂಧುವರ್ಗದ ಮೋಹಮುಂದಣಗತಿಗೆ ಮೂರ್ಛೆಯನಿತ್ತ ಮೋಹಕಂದರ್ಪನ ಗೆದ್ದಯೋಗಿಜನರ ಹೃದಯಾಂಧಕಾರವ ಗೆದ್ದು ತವಪಾದನಖಪೂರ್ಣಚಂದ್ರ ಚಂದ್ರಿಕೆದೋರಿ ಅಭಿಜÕನ ಮಾಡೆನ್ನ ದಯಾಸಿಂಧುಪ್ರಸನ್ನವೆಂಕಟ ಮುನಿಜನವಂದ್ಯ6ಏಕತಾಳಎನ್ನ ಕಾಮವೆಂಬ ಗಿರಿಗ್ವಜ್ರಾಂಕಿತ ಪದಎನ್ನ ಕ್ರೋಧವೆಂಬಾಹಿಗೆ ಧ್ವಜದಂಡಾನ್ವಿತ ಪದಎನ್ನ ಮದವೆಂಬ ಗಜಕಂಕುಶಾಂಕಿತ ಪದಎನ್ನ ಮತ್ಸರಾನ್ವಯಕೆ ಗಂಗಾನ್ವಿತ ಪದಎನ್ನ ಲೋಭ ಗೆದ್ದ ಮನೋಳಿಗೆ ಅಬ್ಜಯುತ ಪದಎನ್ನ ಮೋಹಧ್ವಾಂತ ಪೂರ್ಣೇಂದು ನಖದ ಪದಎನ್ನ ಮನೋರಥ ಸಿದ್ಧಿಯನು ಕರೆದೀವ ಪ್ರಸನ್ನವೆಂಕಟನ ದಿವ್ಯಪಾದಪಾಂಕಿತ ಪದಜತೆಇಂತು ಬಾಧಿಪ ಷಡ್ವರ್ಗದಂಬನೆ ಕಿತ್ತು ಸಂತತ ಶ್ರೀಚರಣ ಸ್ಮರಣೆಮುಂತಾದೌಷಧವನಿತ್ತೆನ್ನ ರಕ್ಷಿಸು ಧನ್ವಂತರಿ ಪ್ರಸನ್ನವೆಂಕಟ ನರಹರಿಯೆ
--------------
ಪ್ರಸನ್ನವೆಂಕಟದಾಸರು