ಒಟ್ಟು 10 ಕಡೆಗಳಲ್ಲಿ , 10 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಯವದನಾ ಪಾಲಿಸೋ | ಹಯ ದೈತ್ಯ ನಿಧನಾ ಪ ಭಯಕೃತು ಭಯಹರ | ದಯದೃಶ ತೋರಯ್ಯ ಅ.ಪ. ಅಜ ಜನಕನೆ ಹರಿ | ದ್ವಿಜವರ ವಂದ್ಯನೆನಿಜಪದ ಹೃದಯಾಂ | ಬುಜದಲಿ ತೋರುತ1 ಕರ ಆದರದಲಿ ಪಿಡಿ | ದಾದರಿಸಿದನೇ 2 ಅರಿದರ ವರ ಗ್ರಂಥ ಜಪಸರ ಧರವರ ಉರಗಾತಪ | ಧರಿಸಿಹೆ ಶಿರಿಯನು 3 ಕೌಸ್ತುಭ ಕರ ಪಾದ | ಶತ ಪತ್ರ ನೇತ್ರಾ 4 ಭಾವಕೆ ಒಲಿವನೆ | ಭಾವದೊಳಗೆ ನಿಲ್ಲುಗೋವಿದಾಂಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಆರತಿ ಬೆಳಗಿರೆ ಶಾರದೆಗೆ | ಗುಣ ವಾರಿಧಿ ಕರುಣಾ ನೀರಧಿಗೆ ಪ ನತ ಗೀ- ಜಾಣೆಗೆ ತ್ರಿಭುವನ ತ್ರಾಣೆಗೆ ಜಪಸರ ಧಾ- ಶುಭ ರೂಪಿಣಿಗೆ 1 ಶಾರದ ಚಂದ್ರನ ಕಿರಣನ ಪೋಲುವ ಚಾರು ಶುಕ್ಲಾಂಬರದಿಂದಲಿ ಪೊಳೆವ ಹಾರ ಮಕುಟ ಪದ ನೂಪುರ ಕಂಕಣ ಅಘ ಹಾರಿಣಿಗೆ 2 ಸಕಲಾಗಮಗಳನಾಂತಿಹ ಗಣಿಗೆ ನಿಖಿಲ ಕಲೆಗಳನು ಕಾದಿಹ ಫಣಿಗೆ ಭಕುತರ ಪಾಲಿನ ಚಿಂತಾಮಣಿಗೆ ಶ್ರೀಕಾಂತನಾತ್ಮಜನರಗಿಣಿಗೆ 3
--------------
ಲಕ್ಷ್ಮೀನಾರಯಣರಾಯರು
ಮಣಿಹಾರಮಂ ತೊರೆದು ದನುಜೇಶನಾಕರುಳ - ನಣಿಯ ರದಿ ಧರಿಸಿರ್ಪನÀನಘನಿವಗೆ ವರರತ್ನಹಾರಮಂ ಹರಿಸದಿಂದಳವಡಿಪೆ ನರಹರಿಯ ಕಂಧರಂ ಮೆರೆಯಲರರೆ ಜಪಸರವನಾಂತೆಸೆವ ಸುಪವಿತ್ರಗಿಂದಿಡುವೆ ವಿಪುಲ ಮುಕ್ತಾಸರವನುಪಮೆಮೀರೆ ಕಮನೀಯಗಾತ್ರಂಗೆ ರಮಣೀಯ ಶ್ಯಾಮಲಗೆ ಕಮಲಮಾಲೆಯನಲಂಕರಿಪೆನಿಂದು ಧುರಧೀರನಂ ವೀರ ಶೌರ್ಯನಿಧಿಯ ಸುರಾಳಿ ಸಮ್ಮೋದಕರನ ಶರಣಾಗತರಕ್ಷನ ನಮಿತಬಲನ ವರಶೇಷಗಿರೀಶನಂ ನಮಿಪೆನಿನ್ನು
--------------
ನಂಜನಗೂಡು ತಿರುಮಲಾಂಬಾ
ಮನಮುಟ್ಟಿ ಮಾಡುವದೆ ಭಕ್ತಿಗಳು ಶ್ರುತದೃಷ್ಟನು ಮನದಿಂದ ಮಾಡುವ ನೇಮನಿತ್ಯಗಳು ಮಹಾ ಧರ್ಮಶಾಸ್ತ್ರಗಳು ಯತಿ ಕುಲದೀಪಗಳು 1 ತ್ರಿವೇಣಿ ಸಂಗಮ ಸ್ನಾನಗಳು ಮಹಾದಿವ್ಯ ಮಡಿಯಗಳು ಇಟ್ಟಿಹ ದ್ವಾದಶ ನಾಮಗಳು ಮನಗಂಡಿಹದೇ ಶ್ರೀಮುದ್ರೆಗಳು 2 ಸ್ಮರಣೆಯೊಳಿಹುದೆ ಸಂಧ್ಯಾನಗಳು ಜಪಸರ ಮಾಲೆಗಳು ಜಪತಪ ಧ್ಯಾನವೆ ಮೌನಗಳು ನಿರ್ಧಾರದಿ ಗುರುಪಾದ ನಿಶ್ಚೈಸಿಹ ವ್ರತ ಆಚಾರವೇ ನಿಷ್ಠೆಗಳು 3 ಮಾಡುವುದೇ ದೇವಪೂಜೆಗಳು ಅಂತ:ಕರಣದಿ ಗುರುಚರಣದ ಅಭಿಷೇಕಜ್ಞಾನ ಭಾಗೀರಥಿ ತೀರ್ಥಗಳು ಚಿತ್ತಚಿಂತನದಿ ದಿವ್ಯ ವಸ್ತ್ರಗಳು ಪರಿಮಳಪುಷ್ಪಗಳು 4 ಅನಿಮಿಷ ನೇತ್ರದಿ ನೋಡುವ ಘನ ಚಿತ್ಪ್ರಕಾಶವೆ ಸದಾನಂದದ ಮೊದಲಾದ ಸತ್ವರಜತಮ ಏಕಾರ್ತಿಗಳು ಸದ್ಭಾವನಿ ತಾಂಬೂಲಗಳಿಂದಲಿ ರತಿಮನ ಘನ ಮಂಗಳಾರ್ಚನಿ ಪಂಚ ಪ್ರಕಾಶಗಳು 5 ಶ್ರೀಗುರು ಸೇವೆ ಸತ್ಕಾರಗಳು ಜಯ ಲಕ್ಷ್ಮಿಯ ಷೋಡಶ ಉಪಚಾರಗಳಿಂದಲಿ ಮಹಾದಿವ್ಯ ಪೂಜೆಗಳು ತಲ್ಲೀನವು ಅಗಿಹ ಗುರುಪಾದದಿ ಪ್ರದಕ್ಷಿಣೆವೆ ಗುರುನಾಮವೇ ಸದ್ಗತಿ ಮುಕ್ತಿಗಳು 6 ಆತ್ಮಾನುಭವ ಗುರುದಾಸರಿಗಲ್ಲದೆ ಬಲ್ಲವೇನು ಪಶುಪ್ರಾಣಿಗಳು ಸಾಕ್ಷಾತ್ಕಾರಗಳು ಭಾಸ್ಕರ ಸ್ವಾಮಿಗಳು ತ್ರಾಹಿ ಜೀವನಮುಕ್ತಿಗಳು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯಾತಕಯ್ಯ ತೀರ್ಥಕ್ಷೇತ್ರಗಳುಶ್ರೀ ತುಲಸಿಯ ಸೇವಿಪ ಸುಜನರಿಗೆ ಪ. ಅಮೃತವ ಕೊಡುವ ಹರುಷದೊಳಿರ್ದಕಮಲೆಯರಸನಕ್ಷಿಗಳಿಂದಪ್ರಮೋದಾಶ್ರು ಸುರಿಯೆ ಕ್ಷೀರಾಬ್ಧ್ದಿಯೊಳುಆ ಮಹಾತುಲಸಿ ಅಂದುದಿಸಿದಳು 1 ಪರಿಮಳಿಸುವ ಮಾಲೆಯ ನೆವದಿ ಹರಿಯುದರದಲ್ಲಿಸಿರಿಯೊಲಿಹಳುತÀರುಣಿ ತುಲಸಿ ತಪ್ಪದೆಯವನಚರಣವ ರಮೆ ಭಜಿಸೆ ಭಜಿಪಳು2 ಪೂಜಿಸುವರ ಶಿರದಿ ನಿರ್ಮಾಲ್ಯಗಳವ್ಯಾಜದಿಂದ ಲಕ್ಷ್ಮಿಯ ಕೂಡೆ ಬಹಳುಈ ಜಗದೊಳು ತಾವಿಬ್ಬರಿದ್ದಲ್ಲಿಆ ಜನಾರ್ದನನಾಕ್ಷಣ ತಹಳು 3 ಒಂದು ಪ್ರದಕ್ಷಿಣವನು ಮಾಡಿದವರಹೊಂದಿಪ್ಪುದು ಭೂಪ್ರದಕ್ಷಿಣ ಪುಣ್ಯಎಂದೆಂದಿವಳ ಸೇವಿಸುವ ನರರಿಗೆಇಂದಿರೆಯರಸ ಕೈವಲ್ಯವೀವ 4 ತುಲಸಿಯ ನೆಟ್ಟವನು ಮತ್ತೆ ತನಗೆ ಇಳೆಯೊಳು ಪುಟ್ಟುವ ವಾರ್ತೆಯ ಕಳೆವಜಲವೆÀರೆದು ಬೆಳೆಸಿದ ಮನುಜರಕುಲದವರ ಬೆಳೆಸು ವೈಕುಂಠದಲ್ಲಿ 5 ತುಲಸಿಯೆ ನಿನ್ನ ಪೋಲುವರಾರುಮೂಲದಲ್ಲಿ ಸರ್ವತೀರ್ಥಂಗಳಿಹವುದಳದಲ್ಲಿ ದೇವರ್ಕಳ ಸನ್ನಿಧಾನಚೆಲುವಾಗ್ರದಿ ಸಕಲ ವೇದಗಳು 6 ತುಲಸಿ ಮಂಜರಿಯೆ ಬೇಕಚ್ಚುತಂಗೆದಳಮಾತ್ರ ದೊರಕಲು ಸಾಕವಗೆಸಲುವುದು ಕಾಷ್ಠಮೂಲ ಮೃತ್ತಿಕೆಯುಫಲವೀವನಿವಳ ಪೆಸರ್ಗೊಳಲು 7 ಕೊರಳಲ್ಲಿ ಸರ ಜಪಸರಗಳನ್ನುವರ ತುಲಸಿಯ ಮಣಿಯಿಂದ ಮಾಡಿಗುರುಮಂತ್ರವ ಜಪಿಸುವ ನರರುಹರಿಶರಣರ ನೆಲೆಗೆ ಸಾರುವರು8 ಎಲ್ಲಿ ತುಲಸಿಯ ಬನದಲ್ಲಿ ಲಕ್ಷುಮೀ-ವಲ್ಲಭನು ಸರ್ವಸನ್ನಿಹಿತನಾಗಿನೆಲಸಿಹನಿವಳೆಸಳೊಂದಿಲ್ಲದಿರೆಸಲ್ಲದವಂಗನ್ಯಕುಸುಮದ ಪೂಜೆ 9 ಎಲ್ಲ ಪಾಪಂಗಳೊಮ್ಮೊಮ್ಮೆ ಕೈಮುಗಿಯೆಎಲ್ಲಿ ಪೋಪುದು ದೇಶದೇಶಂಗಳಿಗೆನೆಲ್ಲಿ ಮಲ್ಲಿಗೆ ಮೊದಲಾದ ಸೈನ್ಯಅಲ್ಲೀಗಲು ನಮ್ಮ ಬನದಲೊಪ್ಪಿಹಳು 10 ಹರಿಪಾದಕೆ ಶ್ರೀತುಲಸಿಯೇರಿಸಿದನರರನು ಪರಮ ಪದಕೇರಿಸುವುದುನಿರುತದಿ ತುಲಸಿಯ ಕಂಡರವಗೆನರಕಗಳ ದರುಶನ ಮತ್ತಿಲ್ಲ 11 ಪಡಿ ಆಯಿತು ಗಡನ್ನಿವಳ ವೃಂದಾವನದಲ್ಲಿ ನೆಟ್ಟುಮನೆಮನೆ ಮನ್ನಿಸದವನ್ಯಾವ12 ಕನಸಿನಲಿ ಕಂಡಂತೆ ಇನ್ನೊಂದುಕೊನೆವೆರಸಿದ ಪುಷ್ಪದಿ ಜಪಿಸಿಅನುದಿನ ಹಯವದನನ್ನ ತೀರ್ಥವನು ಕೊಂಡು ನಾ ಧನ್ಯನಾದೆನು 13
--------------
ವಾದಿರಾಜ
ಯೋಗಿ ವೇಷ ನೀಚನಾಯಿ ನಿನಗ್ಯಾತಕೆ ತತ್ವ ಭಾಷಾ ಹುಚ್ಚನಾಯಿ ನಿನಗೇತಕೆ ವಸ್ತ್ರ ಕಾಷಾ ಮುರುಕುನಾಯಿ ನಿನಗೇತಕೆ ಗುರುಪಾದವಾಸ ಹೊಲಸ ಪ ಕೊರಳಿಗೆ ಕಪನಿ ತೊಟ್ಟು ಜಪಸರವನೆ ಮುಂಗೈಯಲಿಟ್ಟು ತತ್ವಬರಿನುಡಿ ಸಾಲು ಸಾಲಿಟ್ಟು ಕಾಲಕೆರವನೆ ಇವನ ಬಾಯೊಳಗೆ ವಷಟ್ಟು ಭ್ರಷ್ಟಾ1 ನೀರೊಳಗೆ ನೆರಳನೆ ನೋಡಿ ಹಣೆಗೆಗೀರುವೆ ಗಂಧವ ತೀಡಿ ಪೋರಪೋರರ ಜೋಡನೆ ಕೂಡಿ ನಿನ್ನಮೋರೆಯ ಮೇಲೆ ಹುಯ್ಯಬೇಕು ಕಸ ಪುಡಿಕೆ ಕಡುಗ 2 ಅತ್ತ ಸಂಸಾರ ಕೆಟ್ಟುಮತ್ತಿತ್ತ ಗುರುಪಾದವ ಬಿಟ್ಟು ನೀನತ್ತತ್ತ ಉಭಯ ಭ್ರಷ್ಟಾ ನಿನಗೆಸತ್ತಿಹರು ಅರಮನೆಯ ಗೌಡೆಯರೆಷ್ಟು ಜಾಣ3 ಕಂಡ ಕಂಡಲ್ಲಿಯೇ ಉಂಡುದೊಡ್ಡ ಹೊಟ್ಟೆಯ ಬೆಳೆಸಿಕೊಂಡುಬಾಡದಂಡೆಯ ಮನೆಗಂಟಿಕೊಂಡು ನಿನ್ನಮಂಡೆಯ ಹೊಡಿಬೇಕು ಪಾಪಾರಿಕೊಂಡು ಹೊಲೆಯ 4 ಇಂದು ಕೆಟ್ಟಾ5
--------------
ಚಿದಾನಂದ ಅವಧೂತರು
ವೃಂದಾವನ ಪ್ರವೇಶಿಸಿದಂದವ ಚಂದದಿ ಪೇಳುವೆ ಪಾಲಿಪುದು ಪ ಇಂದಿರೆಯರಸನ ಪ್ರೇರಣೆಯಿಂದ ಯತಿ ವೃಂದ ತಿಲಕ ರಾಘವೇಂದ್ರರಾನಂದದಿ ಅ.ಪ ಒಂದು ದಿನವು ಶ್ರೀ ರಾಯರು ಶಿಷ್ಯರ ವೃಂದಕೆ ಪಾಠವ ಹೇಳುತಿರೆ ಅಂದು ವಿಮಾನದಿ ಕೃಷ್ಣದ್ವೈಪಾಯನ ಪ ರಂಧಾಮಕೈದಲು ನೋಡಿ ಕೈ ಮುಗಿದು 1 ಎಷ್ಟು ದಿನವು ನಾವಿಲ್ಲಿರಬೇಕೆಂದು ಶಿಷ್ಟ ಗುರುವರರು ಕೇಳಿದೊಡೆ ಕೃಷ್ಣದ್ವೈಪಾಯನರೆರಡು ಬೆಳಗುಳ ಗಟ್ಟಿಯಾಗಿ ಬೀಸಿ ತೋರಿಸಿ ಪೊರಟರು 2 ನೆರೆದ ಶಿಷ್ಯರದರರ್ಥವೇನೆನುತ ಗುರುಗಳನ್ನು ತಾವ್ ಕೇಳಿದೊಡೆ ಎರೆಡು ವರ್ಷ ತಿಂಗಳು ದಿನವೆರಡೆರಡು ಇರುವುದು ಧರೆಯೊಳಗೆಂದರು ರಾಯರು 3 ಆದವಾನಿಗೆ ಗುರು ಸಂಚಾರ ಪೋಗಿರೆ ಆ ದಿವಾನ ವೆಂಕಣ್ಣ ಬಲು ಆದರಿಸಿದ ಬಳಿ ತಾ ನವಾಬನಿಂದ ಮೋದದಿ ಕೊಡಿಸಿದ ಮಂಚಾಲೆಯನು 4 ಹಿಂದೆ ಪ್ರಹ್ಲಾದರು ಯಾಗವ ರಚಿಸಿದ ಸುಂದರ ಕ್ಷೇತ್ರವಿದೆಂಬುದನು ತಂದು ಮನಕೆ ಗುರುರಾಯರೀ ಕ್ಷೇತ್ರವ ನಂದು ಪಡೆದು ತಾವಿಲ್ಲಿಯೇ ನಿಂತರು 5 ಉತ್ತಮ ನೀಲವರ್ಣದ ಶಿಲೆಯಪಳಿರಿಸಿ ಕೆತ್ತಿಸಿ ವೃಂದಾವನತರಿಸಿ ಕ್ಷೇತ್ರರಕ್ಷಣೆಯಗಷ್ಟ ದಿಕ್ಕುಗಳಲಿ ದೇವ ಮೂರ್ತಿಗಳನು ಸ್ಥಾಪಿಸಿ ನಿಲಿಸಿದರು 6 ವೃಂದಾವನದಲಿ ಸ್ಥಾಪಿಸಲೇಳ್ನೂರು ಚಂದದ ಸಾಲಿಗಾಮಗಳ ತಂದಿಟ್ಟರೆ ಸಿದ್ಧತೆಗಳು ಸಕಲವು ಕುಂದಿಲ್ಲದಂದೆ ನಡೆದಿರಲಾಗಲೆ 7 ಮುಂದಕೆ ತಮ್ಮ ಸಂಸ್ಥಾನವ ವಹಿಸಿ ಯೋ ಗೀಂದ್ರರೆಂಬ ಪ್ರಿಯ ಶಿಷ್ಯರಿಗೆ ಸಂದಿಪ ವಿರಹದಿ ನೊಂದಿದ ಶಿಷ್ಯರ ವೃಂದವ ಬಲು ಸಂತೈಸಿದರಾಗಲೇ8 ನಲವತ್ತೇಳು ಸಂವತ್ಸರ ನಾಲ್ಕು ತಿಂ ಗಳು ಇಪ್ಪತ್ತೊಂಭತ್ತು ದಿನಕಾಲ ನಲವಿನಿಂದ ವೇದಾಂತ ಸಾಮ್ರಾಜ್ಯವ ಸಲಹಿ ಸುಕೀರ್ತಿಯ ಗಳಿಸಿದ ಬಳಿಕ 9 ಸಾವಿರದೈನೂರು ತೊಂಭತ್ಮೂರನೆ ಕ್ರತು ಸಂವತ್ಸರದ ಶ್ರಾವಣ ಕೃಷ್ಣ ದ್ವಿತೀಯದ ಗುರುವಾರ ವಾಸರ ಮುಹೂರ್ತದಿ ಗುರುವರ 10 ಹಸ್ತದಿ ಜಪಮಾಲೆ ಪಿಡಿದು ಯೋಗೀಂದ್ರರ ಹಸ್ತಲಾಘವವ ಸ್ವೀಕರಿಸಿ ಸ್ವಸ್ತಿವಾಚನಗಳ್ ವಿಪ್ರರು ಪೇಳುತಿರೆ ಅರ್ಥಿಯಲಿ ವೃಂದಾವನವ ಪ್ರವೇಶಿಸಿ 11 ಪದ್ಮಾಸನದಲಿ ಮಂಡಿಸಿ ಎದುರಲಿ ಮುದ್ದುಪ್ರಾಣೇಶನ ನೋಡುತಲಿ ಪದ್ಮನಾಭನ ಧ್ಯಾನದೊಳಿರೆ ಜಪಸರ ಬಿದ್ದು ಬಿಡಲು ಮುಚ್ಚಳಿಕೆಯನಿಡಲು 12 ನೆರೆದಿಹ ವಿಪ್ರರು ಜಯ ಜಯವೆನ್ನುತ ಪರಿಪರಿ ರಾಯರ ಪೊಗಳಿದರು ಕರಿಗಿರೀಶನ ಕರುಣ ಪಡೆದ ನಮ್ಮ ಗುರುಸಾರ್ವಭೌಮನ ಸರಿಯಾರಿಹರು 13
--------------
ವರಾವಾಣಿರಾಮರಾಯದಾಸರು
ಸರಸ್ವತಿದೇವಿ ಫಣಿ ವೇಣಿ ನಮಿಪೆ ನಿನ್ನ ಮನಶುಕವಾಣಿ ಸುಮನಸರೊಡೆಯನ ಗಮನದೊಳಿಡುತೆ ಪವನ ಮತದಲಿಡು ತಾಯೆ ಕಾಯೆ ಪ. ವಾಣಿ ಬ್ರಹ್ಮನ ರಾಣಿಯೆನೀ ಗಾಣಿಸು ಮನದಿ ಸುವಾಣಿಯನು ಮಾಣದೆ ಜಪಸರ ಕಲ್ಯಾಣಿಯು ನೀನು ಸತಿ ಜಾಣೆ ಭಾರತಿಯೆ 1 ವಾರಿಜಭವ ಸತಿಮತಿ ತೋರುತ ಮನದಿ ನೀರೆ ಎನ್ನ ಮನ ಸೂರೆಗೊಳುತಲಿ ಸಾರುತ ಹರಿನಾಮಾಮೃತವನು ಕೊಡು ಮಾರಮಣ ಸ್ತುತಿ ಮಾಡಿಸುತ 2 ಅಸುರ ಮರ್ದನ ಹರಿ ನಿನವಶದಲ್ಲಿಹನೆ ಸುಸ್ವರದ ಮಧುರದಿ ಪಾಡುತಲಿರುವೆ ವಶವಲ್ಲದಲಾನಂದದಿಂದ ಶ್ರೀ ಶ್ರೀನಿವಾಸನ ಕುಸುಮಶರನಪಿತನ್ವಶದಲಿ ನಿಲಿಸೆ 3
--------------
ಸರಸ್ವತಿ ಬಾಯಿ
ಹಿಂಗಾಯಿತಲ್ಲಾ ಏನಿದು ಹರಿಹರಿಪ ಮಂಗನ ತೆರ ಈ ಅಂಗವ ವಿಷಯತ ರಂಗೆ ವಡ್ಡುತ ರಂಗನ ಮರೆತಿಹೆ ಅ.ಪ. ಬರಿದೆಯೆ ಹೋಗುತ್ತಿರುವುದು ಹೊತ್ತು ಹರಿಧ್ಯಾನಕೆ ಸಾಲದು ಪುರಸೊತ್ತು ತಿರುಗಲು ಮನೆಮನೆ ಸಾಲದು ಹೊತ್ತು ಸರಸಿಜನಾಭನೆ ಇದಕ್ಕೇನು ಮದ್ದು 1 ಶ್ರೀ ಕಮಲೇಶನ ಪೂಜೆಯ ಮಾಡನೆ ಆಕಳಿಸುತ ಮೈ ಕೈ ಮುರಿಯುವೆನು ಸ್ವೀಕರಿಸಲು ಸವಿ ಪಾನೀಯಂಗಳ ಮುಖಸಹತೊಳೆಯದೆನೂಕುತ ಮುಖ ಪ್ರಕ್ಷಾಳನೆ ಬಿಡುವೆ2 ಸ್ನಾನವ ಮಾಡೆನು ಸಂಧ್ಯಾ ತಿಳಿಯೆನು ಧ್ಯಾನವು ಯೆಂತೆನೆ ಕೂಳಿನ ಚಿಂತೆಯು ಆನನ ಮುಸುಕುತ ಬರಿಪಿಚಿಯೆಂದು ನಿ ಧಾನದಿ ಜಪಸರ ನೂಕುವೆನಲ್ಲಾ 3 ಮಂತ್ರವು ಬಾರದು ಸ್ತ್ರೋತವು ಬಾರದು ತಂತ್ರದಿ ನೂಕುವೆ ದೇವರ ಪೂಜೆಯ ವಿಧಿಗಳ ಮೌನದಿ ಕರ್ಮಗಳೆಲ್ಲವ ಮಂತ್ರಿಯ ಮಡಿದಿಯು ಪೇಳಿದ ತೆರದೂಳು ಯಂತ್ರ ವಿಧಾನದಿ ನುಡಿಯುವೆ ದಿನವಹಿ4 ಹೀನಕ ವೃತ್ತಿಗಳಿಂದಲಿ ಜೀವನ ವರ್ಣವಿವೇಕವ ನಡಿಸಲಸಾಧ್ಯವು ಜನ್ಮದಿ ವಿಪ್ರನು ನಾನಿಹೆ ಬರಿಸರಿ ತಿನ್ನುತ ಕುಡಿಯುತ ತಳ್ಳುವೆ ಆಯುಷ್ಯ5 ಊಟದ ಚಪಲವು ತಿಂಡಿಯ ಚಪಲವು ನೋಟದ ಚಪಲವು ಚಪಲ ಕಂದರ್ಪನ ಕಾಟದಿ ಸಿಲುಕಿಹೆ ಕೈಟಭಮರ್ದನ ದಾಟುವೆದೆಂತೋ ಭವವನು ಕಾಣೇ 6 ಏರಿದೆ ಬಹುನಿತ್ರಾಣವು ಗಾತ್ರದಿ ಮೀರಿದವಯ ಶಾಸ್ತ್ರಾಭ್ಯಾಸಕೆ ಕಾರುವರೈ ವಿಷ ಬಾಂಧವರೆಲ್ಲರು ಆ ರವಿಸುತನಾಳ್ಗಳಗು ನಾನಿಹೆ 7 ಮಡದೀ ಮಕ್ಕಳ ಪಾಶದಿ ಬಿದ್ದಿಹೆ ದುಡಿಯದ ಕಾರಣ ದುಗುಡವ ತೋರ್ಪರು ನಡೆಯದು ತುಸನನ್ನ ಮಾತೇನಿಲ್ಲ ಮಿಡುಕುತ ಮಿಡುಕುವೆ ಮುಪ್ಪಿನ ಹಿಡಿತದಿ 8 ತೋಡಿದರೂ ಎದೆ ಕಾಣೆನು ಭಕ್ತಿಯ ಕಾಡನು ಸೇರಲೊ ಬಾವಿಗೆ ಬೀಳಲೋ ಜೋಡಿಯು ಆಗಲೊ ಜೋಳಿಗೆ ಪಿಡಿಯಲೊ ಓಡದು ಬುದ್ಧಿಯು ತೋರಿಸು ಹಾದಿ 9 ಕರುಣಾಮಯ ನೀನೆಂಬುವ ಬಿರುದನು ಹಿರಿಯರ ಮುಖದಿಂ ಕೇಳಿಹೆ ಸ್ವಾಮಿಯೆ ಭರವಸೆ ಎನಗಿಹದೊಂದೇ ನಿಶ್ಚಯ ಶರಣನ ಬಿಡದಿರು ಆಪದ್ಬಾಂಧವ 10 ಪಾಮರ ನಿಹೆಬಹು ಕಲುಷಿತ ಚಿತ್ತನು ಭೀಮಾರ್ಚಿತ ಪದಯಗ ನಂಬಿಹೆ ಪ್ರೇಮವ ಸುರಿಸುತ ಕಾಯೈ ಬೇಗನೆ ಸಾಮನೆ ಶರಣೈ “ಶ್ರೀ ಕೃಷ್ಣವಿಠಲಾ” 11
--------------
ಕೃಷ್ಣವಿಠಲದಾಸರು
ಪೃಕ್ಷದಶ್ವ ಪಾಲಿಪುದೆನ್ನ ಈ ದು |ರ್ವಿಷಯ ತ್ಯಜಿಸಿ ಶ್ರೀ ಕೃಷ್ಣನ್ನ ||ಅಸಮ ಪಾದಾಬ್ಜ ಭಜಿಸುವಂತೆ ಪ್ರತಿದಿನ |ಹಸನಾದ ಜ್ಞಾನ ಪ್ರೇರಿಸೊ ಭಕ್ತ ಸುರತರು ಪಪರಿಸರ ಕೃಷ್ಣೇಶ ಗಂಧ ವಹಸಿರಿವಲ್ಲಭ ಪದಾರವಿಂದಭೃಂಗ|ಪುರುಹೂತಮುಖ ಸುರವೃಂದ ವಂದ್ಯ |ಗಿರಿಜಾ ಪಾಲಕ ಶತಾನಂದ||ಆಹಾ||ಎರಡು ಹತ್ತೊಂದು ಸಾವಿರದಾರುನೂರ್ಜಪಸರುವ ಜೀವರೊಳಗೆ ಇರುಳು ಹಗಲು ಮಾಳ್ಪ 1ನಾಗಾದಿ ದಶರೂಪ ಧರ ತಲೆಬಾಗುವೆ ನಿನಗೆ ಉದಾರ ವಿಕ್ರ-ಮಾಘಕಾನನವೈಶ್ವಾನರ, ಹೇ ಸ-ದಾಗತಿ ಕುಜನ ಕುಠಾರಾ ||ಆಹಾ||ಮಾಗಧರಿಪುಹೊತ್ತು ಹೋಗುತಲಿದೆ ಈಗ |ಭಾಗವತರ ಸಂಗಜಾಗುಮಾಡದಲೀಯೋ 2ದೀನವತ್ಸಲ ಶ್ರೀ ಮಾರುತ ಯಾತುಧಾನ ಸಂಹರನೆ ಹೇಮಾತರಿಶ್ವ|ಪ್ರಾಣೇಶ ವಿಠಲನ ದೂತ ಚತು-ರಾನನ ಪದಯೋಗ್ಯವಾತ||ಆಹಾ||ಕ್ಷೋಣಿಯೊಳೆನ್ನಂಥ ಹೀನರಿಲ್ಲವೊ ಪಾಪ |ಕ್ಷೀಣಿಸಿ ಸಲಹೋ ಸುಶೇಣಾದಿಸೂದನ 3
--------------
ಪ್ರಾಣೇಶದಾಸರು