ಒಟ್ಟು 12 ಕಡೆಗಳಲ್ಲಿ , 9 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರೆ ವಿಜಯೆ ಜಯಮಂಗಳಂ ಪ ಸಾರಸದಳಹಿತೆ ಸಾರಸಮಹಿತೆ ಮಂಗಳಂ1 ಇಂದು ಸುಮಾಕರೆ ಸಹೋದರಿ ಸುಂದರ ಕಬರಿ ಮಂಗಳಂ 2 ರಾಜರಾಜಾರ್ಚಿತೆ ರಾಜಮುಖಾಂಚಿತೆ ರಾಜಗೃಹಾರ್ಚಿತೆ ರಾಜಿತ ವನಿತೆ ಮಂಗಳಂ 3 ಮಾನವ ವಂದಿತೆ ಧೇನುನಗರ ಹರಿಮಾನಿನಿ ಜನನಿ ಮಂಗಳಂ 4
--------------
ಬೇಟೆರಾಯ ದೀಕ್ಷಿತರು
ಕಂಡೆನೆನ್ನ ದೊರೆಯ ಲಕುಮಿಯ | ಗಂಡನೆನಿಪ ಹರಿಯ ಪ ಕುಂಡಲಿಶಯನನಿರುವ ಪರಿಯ | ಪದ ಪುಂಡಲೀಕ ಸೇವಿಪ ಪರಿಯ ಅ.ಪ. ಸಿರಿರಂಗ ಪುರಿಗೆ ಬಂದು | ವಿರಜಯೆನಿಪ ವರ ಕಾವೇರಿಯೊಳು ಮಿಂದು ನಿರುಪಮ ರಂಗಮಂದಿರದಿ ನಿಂದು | ನಮ್ಮ ಸಿರಿ ರಂಗರಾಜನ ಕಂಡೆನಿಂದು 1 ಇಂದೆನ್ನ ಭಾಗ್ಯಕೆಣೆಯಿಲ್ಲ ಈ ಮಂದಸ್ಮಿತನ ಕಂಡೆನಲ್ಲ ಹಿಂದಿನ ಪುಣ್ಯ ಫಲಿಸಿತಲ್ಲ ಇನ್ನು ಮುಂದಕೆ ಬಹು ಸಾಧನವಾಯಿತಲ್ಲ 2 ವಾಸುಕಿಶಯನನಾಗಿರುವ | ಬಲು ಸೋಸಿನಿಂದ ಗರುಡನೇರಿ ಮೆರೆವ ದೋಷರಾಶಿಗಳ ತರಿವ | ತನ್ನ ದಾಸರ ಪ್ರೀತಿಯಲಿ ಪೊರೆವ 3 ಇಂದಿರೆ ರಮಣನಂದನ ಕಂದ | ತಾನು ಇಂದೆನಗೆ ಒಲಿದು ದಯದಿಂದ ಸಂದರುಶನವಿತ್ತು ಆನಂದಾಮಿಗೆ ಪೊಂದಿಸಿ ದಾಟಿಸಿದ ಭವದಿಂದ4 ಸಂದು ಹೋದವಘಗಳೆಲ್ಲವೆಂದ | ಇನ್ನು ಮುಂದೆನಗೆ ಭಯವಿಲ್ಲವೆಂದ ಸುಂದರ ರಂಗೇಶವಿಠಲ ಬಂದ | ಮನ ಮಂದಿರದಿ ನೆಲೆಯಾಗಿ ನಿಂದ 5
--------------
ರಂಗೇಶವಿಠಲದಾಸರು
ಗೋಕುಲಕ್ಹೋಗು ನೀ ಶೋಕವಿನಾಶಿನಿ ಲೋಕೇಶ ಪಾರ್ವತಿ ಶ್ರೀಕರೆ ಶ್ರೀಮತಿ ಪ. ದೇವಕೀಗರ್ಭದ ಕೇವಲೆಂಟಂಶದ ದೇವಶೇಷಾಖ್ಯನ ದೇವಿಗೈ ದರ್ಶನ 1 ಶಶಿಮುಖಿ ರೋಹಿಣಿ ಬಸುರೊಳಗಿಡು ನೀ ಬಿಸರುಹಲೋಚನಿ2 ಸುಂದರಿ ದೇವಕೀ ಕಂದನಾಗುವೆ ಸುಮುಖಿ ನಂದನ ನಂದಿನಿಯೆಂದೆನಿಸು ಭವಾನಿ 3 ಜಗದಂಬಿಕೆ ಜಯೆ ಸುಗುಣೆ ವೈಷ್ಣವಿ ವಿಜಯೆ ಜಗದೊಳು ನಿನ್ನ ಪೂಜೆ ಅಗಲದ ಗೈವರಗಜೆ 4 ಲಕುಮಿನಾರಾಯಣನ ಯುಕುತಿಯಂತಾಕ್ಷಣ ಸುಖದೆ ಗೈದಳು ಶಿವಸಖಿ ತಾನೆಲ್ಲವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಗೋಕುಲಕ್ಹೋಗು ನೀ ಶೋಕವಿನಾಶಿನಿ ಲೋಕೇಶ ಪಾರ್ವತಿ ಶ್ರೀಕರೆ ಶ್ರೀಮತಿ ಪ. ದೇವಕೀಗರ್ಭದ ಕೇವಲೆಂಟಂಶದ ದೇವಶೇಷಾಖ್ಯನ ದೇವಿಗೈ ದರ್ಶನ 1 ಶಶಿಮುಖಿ ರೋಹಿಣಿ ಬಸುರೊಳಗಿಡು ನೀ ಬಿಸರುಹಲೋಚನಿ 2 ಸುಂದರಿ ದೇವಕೀ ಕಂದನಾಗುವೆ ಸುಮುಖಿ ನಂದನ ನಂದಿನಿಯೆಂದೆನಿಸು ಭವಾನಿ 3 ಜಗದಂಬಿಕೆ ಜಯೆ ಸುಗುಣೆ ವೈಷ್ಣವಿ ವಿಜಯೆ ಜಗದೊಳು ನಿನ್ನ ಪೂಜೆ ಅಗಲದ ಗೈವರಗಜೆ4 ಲಕುಮಿನಾರಾಯಣನ ಯುಕುತಿಯಂತಾಕ್ಷಣ ಸುಖದೆ ಗೈದಳು ಶಿವಸಖಿ ತಾನೆಲ್ಲವ5
--------------
ತುಪಾಕಿ ವೆಂಕಟರಮಣಾಚಾರ್ಯ
ಪತಿ ಎನಿಸಿ | ವೀಣೆಯನು ಪಿಡಿಯುತ್ತಲೀ ||ಕ್ಷೋಣಿ ಬೆಳಗಾವಿ ಬ್ರಾಹ್ಮಣ | ಶ್ರೇಣಿಯಲಿ ನೀ ನಿಂತೆಯೋ ||ಕಾಣೆನೊ ನಿನಗೆಣೆಯ | ಕಾಣೆ ಕರುಣಿಗಳರಸ ಜ್ಞಾನಿ ಜನ ಮನೊವಾಂಛಿತಾ |ಮಾಣದಲೆ ನೀ ನೀವೆ | ಪ್ರಾಣ ಪದಕನೆ ಹನುಮಜ್ಞಾನ ಭಕುತಿಯ ಬೇಡುವೇ 1 ವಾತ ವ್ರಾತ ಕಿನ್ನಣೆಯುಂಟೆಮಾತುಳಾರಿಯ ದೂತ ಜಯೆ ಜಾತಾ ||ಸೋತು ಬಲು ಭವದೊಳಗೆ | ಆರ್ತನಾಗುತ ನಿನ್ನ ಕಾತುರೆತಲಿಂ ಪ್ರಾರ್ಥಿಪೇ 2 ವೃಂದಾವನಾರ್ಯರಿಂದ್ವಂದಿತವು ಎಂದೆನಿಪ ವೃಂದಾವನಿಲ್ಲಿ ಇಹುದೂ |ವೃಂದಾರ ಕೇಂದ್ರ ಜನ | ಬಂದಿಲ್ಲಿ ರಾಜರ |ವೃಂದಾವನರ್ಚಿಸುವರೋ |ನಂದನನು ದಶರಥಗೆ | ನಂದನನು ದೇವಕಿಗೆ | ನಂದನನು ಸತ್ಯವತಿಗೇ |ಒಂದೊಂದು ಹಯಶೀರ್ಷ | ಅಂದರೂಪಗಳಿಂದ ನಂದನನು ಭಕ್ತ ಜನಕೇ 3 ಜೀವಾಂತರಂಗದಲಿ | ಜೀವಾಂತರಾತ್ಮನನ ದ್ವೈವಿಧ್ಯ ರೂಪ ಸೇವಾ |ತಾವಕದಿ ನೀ ಮಾತರಿಶ್ವಾಖ್ಯನೆಂದೆನಿಸಿ ಸೇವಿಸುವೆ ಘರ್ಮೋಕ್ತದಿ ||ಜೀವ ಸಕಲೋತ್ತಮನೆ | ದಾವ ಶಿಖಿ ಭವವನಕೆದೇವ ಬಲಿಭುಜ ಮಾರುತೀ |ದೇವಾದಿ ವಂದ್ಯ ಗುರು | ಗೋವಿಂದ ವಿಠ್ಠಲನಭಾವದಲಿ ತೋರಿ ಪೊರೆಯೊ 4
--------------
ಗುರುಗೋವಿಂದವಿಠಲರು
ಪರಮದಯಾಕರೆ ಪೊರೆಯೆನ್ನನು ಜನನಿ ಪ. ಪಂಕಜಾಕ್ಷಿ ಪಂಕಜಾಸ್ಯೆ ಪಂಕಜಾಶ್ರಯೆ ಪಂಕಜೋದ್ಭವಾದಿಜನನಿ ಪಂಕಜಾಲಯೇ 1 ಪಾಕಶಾಸನಾದಿವಿನುತೆ ಲೋಕವಿಶ್ರುತೇ ಶೋಕಹರಣೆ ಸಾಕುಯೆಮ್ಮ ಕೋಕಿಲರವೇ 2 ಇಂದು ಸೋದರಿ ಮಂದಹಾಸಿನಿ ಕುಂದರದನೆ ವಂದಿಸುವೆನು ಮಂದಗಾಮಿನೀ 3 ಪೊಡವಿಯಣುಗಿ ಪೊಡಮಡುವೆ ನಿನ್ನಡಿಯೊಳೀಪರಿ ಕಡುನೇಹದೆ ಪಿಡಿದುಕರವ ಬಿಡದಿರೌ ಸಿರಿ4 ದೋಷರಹಿತ ಶೇಷಗಿರಿಯ ವಾಸನರಸಿಯೆ ಶೇಷಭೂಷಣ ನಮಿತಚರಣೆ ಪೋಷಿಸೌ ಜಯೆ5
--------------
ನಂಜನಗೂಡು ತಿರುಮಲಾಂಬಾ
ಪರಮಶಿವಶಂಕರಿಯೆ ಪ ಕರುಣಿಸು ಮಂಗಳೆಯೆ ಅ.ಪ. ಪಂಕಜನಾಭಿಯೆ ಪಂಕಜಪಾಣಿಯೆ ಪಂಕಜಲೋಚನೆಯೆ ಪಂಕಜಗಂಧಿಯೆ ಪಂಕಜವದನೆಯೆ ಶಂಕರಸುಂದರಿಯೆ 1 ಗೌರಿಯೆ ಗಿರಿಜೆಯೆ ಕಾತ್ಯಾಯನಿಯೆ ಹೈಮವತೀಶ್ವರಿಯೆ ಪಾರ್ವತಿ ಶಿವೆ ಪರಮೇಶ್ವರಿ ಶಂಕರಿ ಕಾಳಿಯೆ ಶಾಂಭವಿಯೆ 2 ಮಾಧವ ಸೋದರಿಯೆ ಭೂಧರವಾಸೆಯೆ ಶ್ರೀ ಲಲಿತಾಂಬೆಯೆ ರಾಜರಾಜೇಶ್ವರಿಯೆ 3 ನಿತ್ಯ ಕಲ್ಯಾಣಿಯೆ ಭಕ್ತವತ್ಸಲೆ ವಿಜಯೆ ನಿತ್ಯ ಸುಮಂಗಳೆಯೆ 4 ದಾನವ ಭಂಜಿನಿ ಮೌನಿಸುರಂಜಿನಿ ಭಾನುಮಂಡಲ ರುಚಿರೆ ಮಾನಿನಿ ಪಾಲಯಮಾಂ 5
--------------
ಬೇಟೆರಾಯ ದೀಕ್ಷಿತರು
ಬಂದ-ಬಂದ _ ಇಂದಿರೇಶ ನಂದನಂದನಾ ನಿಖಿಳ ಜನಕ ಕಂಧರಾಶ್ರಯಾ ಪ ಬಂದ ಬಂದ ಭಜಕ ಬಂಧು ಮಂದರಾದ್ರಿಧರ ಅರ- ವಿಂದನಯನ ಸುಂದರಾಂಗ ಸಿಂಧುಶಯನ ನಳಿನನಾಭ ಅ.ಪ. ನೀಲಮೇಘ ಶ್ಯಾಮಸುಂದರಾತನಿಗೆ ಮೇಲುಸಮರು ಇಲ್ಲವೆನಿಸಿದ ಲೀಲೆಯಿಂದ ಜಗವ ಸೃಜಿಸಿ ಪಾಲಿಸುತ್ತ ಮತ್ತೆ ಅಳಿಸಿ ಆಲದೆಲೆಯಮೇಲೆ ಸಿರಿ ಲೋಲನಾಗಿ ಮೆರೆವ ಕೃಷ್ಣ 1 ಐದು ರೂಪದಿಂದ ಕ್ರೀಡಿಪಾ ಪ್ರಕೃತಿ ಬೋಧ್ಯ ಸಿರಿಗುನಾಥ ನಾಯಕಾ ಆದಿಮಧ್ಯ ಅಂತ್ಯ ಶೂನ್ಯ ಮೋದಪೂರ್ಣ ಜ್ಞಾನಕಾಯ ಮೋದ ಮುನಿಯ ಹೃದಯಸದನ ಗೋಧರಾತಪತ್ರ ಶ್ರೀಪ 2 ಆದಾನಾದಿ ಕರ್ತ ಬ್ರಹ್ಮನೂ ದಿವಿಜ ಸಾಧುಸಂಘ ಸೇವೆ ಗೊಂಬನೂ ವೇದವೇದ್ಯ ವೇದ ವಿನುತ ವೇದ ಭಾಗಗೈದು ಪೊರೆದ ಛೇದ ಭೇದರಹಿತ ಗಾತ್ರ ಸಾಧು ಪ್ರಾಪ್ಯ ಬಾದರಾಯಣ 3 ದಾಸಜನಕೆ ಮುಕ್ತಿನೀಡುವ ಮಹಿ- ದಾಸಕಪಿಲ ಪೂರ್ಣ ಕಾಮನೂ ದೋಷ ದೂರ ನಾಶರಹಿತ ವಾಸುದೇವ ಕ್ಲೇಶವಿದೂರ ಈಶವಿಧಿಗಳನ್ನು ಕುಣಿಪ ಕೇಶವಾದ್ಯನಂತ ರೂಪ4 ಮೊತ್ತಜಗಕೆ ಸತ್ತೆನೀಡುವಾ ನಿಖಿಳ ಸತ್ಯ ಜಗದ ಚೇಷ್ಟೆನಡೆಸುವಾ ಮೊತ್ತಶಬ್ದ ಘೋಷವರ್ಣ ಮತ್ತೆ ಪ್ರಣವ ಮಂತ್ರಗಣದಿ ನಿಖಿಳ ಯಜ್ಞ ಭೋಕ್ತನಾಥ ಅಂಗಭೂತ 5 ಜಿಷ್ಣುಸೂತ ಕೃಷ್ಣೆಕಾಯ್ದವಾ ಸ್ವರತ ವಿಷ್ಣು ಪುರುಷಸೂಕ್ತ ಸುಮೇಯಾ ವಿಶ್ವಕರ್ತ ವಿಶ್ವಭೋಕ್ತ ವಿಶ್ವರೂಪ ವಿಶ್ವಭಿನ್ನ ವಿಶ್ವವ್ಯಾಪ್ತ ಶಶ್ವದೇಕ ತೈಜಸ ಪ್ರಾಜ್ಞತುರ್ಯ 6 ಸತ್ಯಧರ್ಮಗಳನು ಕಾಯುವಾ ದುಷ್ಟ ದೈತ್ಯತತಿಯ ದಮನಗೈಯ್ಯುವಾ ಮತ್ಸ್ಯಕೂರ್ಮ ಕೋಲ ಚರಿತ ಭೃತ್ಯಭಾಗ್ಯ ನಾರಸಿಂಹ ಸತ್ಯಶೀಲ ಬಲಿಯವರದ ಕ್ಷಿತಿಪದಮನ ಕ್ಷಾತ್ರವೈರಿ ಪರಶುಧಾರಿ7 ವಿಶ್ವ ಬಿಂಬನು ರಾ ಜೀವಪೀಠನನ್ನು ಪಡೆದನೂ ರಾವಣಾರಿ ಕೃಷ್ಣ ಬುದ್ಧ ಭಾವಿಕಲ್ಕಿ ನಿತ್ಯಮಹಿಮ ಭಾವಜಾರಿ ಪ್ರೀಯ ಸಖನು 8 ಹಯಗ್ರೀವ ದತ್ತ ಋಷಭನೂ ಅಪ್ರ- ಮೇಯ ಹಂಸ ಶಿಂಶುಮಾರನು ಜಯಮುನೀಂದ್ರ ವಾಯುಹೃಸ್ಥ ಜಯೆಯ ರಮಣ ಕೃಷ್ಣವಿಠಲ ದಯದಿ ಪೊರೆಯಲೆಮ್ಮನೀಗ ಜಯವು ಎನುತ ನಲಿದು ನಲಿದು 9
--------------
ಕೃಷ್ಣವಿಠಲದಾಸರು
ಮತವೆ ಒಳ್ಳೆಯದು ಭಾಗವತವು - ನಮ್ಮಯತಿ ರಾಮಾನುಜಯೆಂಬ ಬೇರೆ ಮನಸಿನ ಮತವೆ ಒಳ್ಳೆಯದು ಪ ಹರಿದಾಸ ಸರ್ವೇಶತೆಗೆ ನಿಮ್ಮ ವೇಷತೊರೆಯಿರಿ ನಿಮ್ಮ ದೋಷವರ ತೀರ್ಥ ಪ್ರಸಾದವೇಪರಗತಿ ಎಂಬ ದಾಸ1 ಕಣಿಯೇ ಶಿಕ್ಷಾ ರ-ಮಣಿಯೇ ಮೋಕ್ಷದರಗಿಣಿಯೇ ನಿಮ್ಮ ಶ್ರೀಮಣಿ ತಿರುಮಂತ್ರವೇ ಗತಿ ಎಂಬ ದಾಸ2 ಹರಿದಾರಿ ತಿರುಕಾವಳೂರಿನಪರಮ ಪದವಿಯೆಂಬ ಪಟ್ಟಣಸೇರಿ ನಮ್ಮ ನೆಲೆಯಾದಿಕೇಶವಸಿರಿ ರಂಗ ಪರರುಪಕಾರಿ 3
--------------
ಕನಕದಾಸ
ಸುಮ್ಮನೆ ಹೋಗುತಾದಲ್ಲೋ ಇಷ್ಟಾರ್ಥಪಡಿದೇ ಸುಮ್ಮನೆ ಹೋಗುತಾದಲ್ಲೋ ಪ ಸುಮ್ಮನೆ ಹೋಗುತಾದೆ ಹೆಮ್ಮಾರಿಗೀಡಾಗಿ ಮರ್ಮವರಿತು ಪರಬ್ರಹ್ಮನ ಕೂಡದೆ ಅ.ಪ ಎಷ್ಟೋ ಸುಕೃತವಡೆದು ಈ ನರಜನ್ಮ ತೊಟ್ಟು ಸೃಷ್ಟಿಗೆ ಇಳಿದು ಹುಟ್ಟಿ ಬಂದಂಥ ಕಾರ್ಯ ಬಿಟ್ಟು ಮರವೆಗೂಡಿ ಕೆಟ್ಟು ಹೋಗ್ಯಾದೋ ವಯ ಕೃಷ್ಣಾರ್ಪಣೆನದೆ ಸುಟ್ಟು 1 ವಯವೆಂಬ ಧನ ಪಡೆದು ಈ ಮಹದನು ಭವದ ಸಂತೆಗೆ ಇಳಿದು ಭವದ ಜಯೆಂಬ ಅನುಭವದ ವ್ಯಾಪಾರ ಮಾಡಿ ಭವಹರನ ಕಾಣದೆ ಜವನಗೀಡಾಗಿ ತಾನು 2 ಅರಿವಿನಾಲಯ ಪೊಕ್ಕು ಸಂಸಾರವೆಂಬ ಮರೆವಿನ ಬಲೆಯೊಳ್ ಸಿಕ್ಕು ಪರಮಪುರುಷ ಸಿರಿಯರಸ ಶ್ರೀರಾಮನ ಚರಣಕಮಲಕ್ಕೆ ಸಲ್ವ ವರಮೋಕ್ಷ ಪಡೆಯದೆ ಲ
--------------
ರಾಮದಾಸರು