ಒಟ್ಟು 33 ಕಡೆಗಳಲ್ಲಿ , 21 ದಾಸರು , 30 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಇವರೆವೆ ಧನ್ಯರಲ್ಲವೆ ಈ ಶರಣರು | ಈ ಶರಣರು | ಇವರೆವೆ ಧನ್ಯರಲ್ಲವೆ ಅವನಿಲಿ ಶರಣರು ಪ ಕರುಣಾನಂದವ ಪಡೆದು | ತರಣೋಪಾಯವನರಿದು | ಜರಿವನ್ಯ ಹಂಬಲವ ಬೆರೆದು | ಭಕ್ತಿರಸದೊಳು | ನಿರಪೇಕ್ಷ ವೃತ್ತಿಯಿಂದಾ | ಚರರಿಸುತಿಹ ಶರಣರು 1 ಭವ ಕಾನನವನೆ ತೊರೆವಾ | ನಿತ್ಯ ತಾನಾರೆಂಬುದು ನರಿವಾ | ಸ್ವಾನಂದಬೋಧವನು ಮಾನ | ನೀಗಿ ಶ್ರವಣದಿ | ಸಾನುರಾಗದಲಿಂದ ತಾನುಂಬ ಶರಣರು 2 ಹರಿಯಲ್ಲರೊಳಗರಿದು | ಶರೀರ ಭಾವನೆ ಮರೆದು | ಹರುಷದ ಗುಡಿಗಟ್ಟಿಬರುವ | ನಯನೋದಕದಿ | ಗುರುಮಹಿಪತಿಸ್ವಾಮಿ ಚರಣದ ಶರಣರು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಳು ಚೆನ್ನಿಗರಾಯ ನನ್ನೀನಾಗರ ಏಳು ಪ. ಏಳೆನ್ನ ಕಣ್ಮಣಿಯೇ ಕಾಳಿಮರ್ಧನಕೃಷ್ಣ ಅ.ಪ. ಮಾರನೆಯ ದಿನದಲ್ಲಿ ನೀ ಹಾರುತ್ಯಾರುತ ಬಂದು ಸೀರೆ ಸೆರಗನು ಪಿಡಿದು ಬೆಲ್ಲವನು ಬೇಡಲು ಕೇಳಿಕೊಳ್ಳವುದೇಕೆ ಹಗಲುಗಳ್ಳನೆ ಹೋಗು ಒಳಿತು ಚೋರರಿಗೆಲ್ಲ ಕೇಳಿ ಕೊಳಲೆಂದೆ 1 ಚೋರ ನೀನೆಂದುದಕ್ಕೆ ಈ ಸೀರೆಯನು ಜರಿವರೇ ಚೋರನಲ್ಲವೇ ನೀನು ಮಧ್ವರ ಹೃದಯ ಕದ್ದ 2 ಜಾರ ನೀನೆಂದುದಕೆ ಕರೆಕರೆಗೊಳಿಸುವರೆ ಜಾರೆಯಾಸಹುದು ನೀನಲ್ಲ ಜಾರರಮಣ 3 ಕಂಡದನು ಆಡಿದರೆ ಕಡುಕೋಪವ್ಯಾತಕೆ ಹಿಂಡು ಗೋವಳಲೊಡೆಯ ಪುಂಡನೀನಹುದು 4 ಮಜ್ಜನವ ಮಾಡಿಸುವೆ ಸುಳಿಗುರುಳ ತಿದ್ದುವೆ ಸಜ್ಜಾದ ಚಂದನದ ಚಂದ್ರಮನ ಫಣಿಯಲಿಡುವೆ 5 ಗೊಲ್ಲಬಾಲರು ಈಗ ಕರೆಯಲು ಬರುವರು ಮೆಲ್ಲಗೆ ಎದ್ದು ನೀ ಬೆಲ್ಲವನು ಮೆಲ್ವ ಬಾಲಕೃಷ್ಣ 6 ಮಧ್ವೇಶ ನೀನೇಳು ಮುದ್ದು ಮೊಗದವನೆ ಏಳು ಹದ್ದುವಾಹನ ಏಳೂ ಹಾಲಕುಡಿಯೇಳು 7 ಹಾಲು ಬೆಲ್ಲವ ಸವೆದು ಸುಧೆಯನು ಸುರಿಸೇಳೋ ಪಾಲಗಡಲ ಶಯನ ಶಯನದಿಂದೇಳೋ 8 ಮುನಿಸು ಏಕೇಕೆ ರಮಣ ಮುಸುಕನು ತೆಗೆದೇಳು ತಿನಿಸು ತಿಂಡಿಯ ಕೊಡುವೆ ತನಿವಣ್ಣ ಕೊಡುವೆ 9 ಚಿನ್ನದಾ ಒಂಟೆಳೆಯ ರನ್ನಧಾಭರಣ ಭಿನ್ನ ಭಿನ್ನವಾದ ಆಭರಣಗಳಿಡುವೆ ಕೃಷ್ಣ 10 ಹೆಚ್ಚೇನು ಪೇಳಲಿ ಮಗಸಾಮ್ರಾಜ್ಯದ ದೊರೆತನವು ನಿನ್ನದೊ ಸ್ವಚ್ಚಾಗಿ ಹೇಳುವೆನು ಫಲಿಸೇಳು ಕೃಷ್ಣಾ 11 ಬಾಧಿಸದೆ ಜಾಗವನು ಬಿಟ್ಟೇಳೊ 12 ಏನು ಬಯಸಿದ ಕೊಡುವೆ ಮನಬಯಕೆ ಪೂರೈಸೊ ಮನದನ್ನನೇ ಎನ್ನ ಕಾಳಿಮರ್ಧನಕೃಷ್ಣ 13
--------------
ಕಳಸದ ಸುಂದರಮ್ಮ
ಕಂಡೆ ಕನಸಿನಲಿ ಕಾರುಣ್ಯ ಮೂರುತಿ ಹರಿಯ ಪ ಪುಂಡರೀಕಾಕ್ಷ ಪುರುಷೋತ್ತಮನ ಸಿರಿಯ ಅ.ಪ ಚಂಡು ರನ್ನದ ತಾಯ್ತಿ ಮಲುಕು ಅರಳೆಲೆ ಹೊನ್ನಗೊಂಡೆಗಳ ಬಿಗಿದ ಶಿಖಿ ದಾರದೆಡೆಯದುಂಡು ಮಲ್ಲಿಗೆಯ ಪರಿಮಳವು ಘಮಘಮಿಪ ಅಳಿ-ವಿಂಡುಗಳ ಜರಿವಂಥ ಸುಳಿಗುರುಳಿನಿರವ1 ಸಿರಿ ನಾಮ ಕಸ್ತೂರಿ ತಿಲಕದಎಸೆವ ಕುಡಿ ಹುಬ್ಬುಗಳ ಕುಂಡಲದ ಕಾಂತಿಗಳದÉಸೆದೆಸೆಗೆ ಬೆಳಗುತಿಹ ವರದೀಪ್ತಿಗಳನು 2 ಕೆತ್ತನೆಯ ಪದಕೆ ಕೆಲಬಲಕೆ ಒಲಿದಾಡುತಿಹಮುತ್ತು ಮಾಣಿಕದ ಹುಲಿಯುಗುರು ಸರದ ಮಣಿ ಒತ್ತಿನಲಿ ಶಿರಿವತ್ಸ ವೈಯಾರದಿರವ 3 ತÉೂೀಳ ಬಳೆ ತಾಯ್ತಿ ಕಡಗ್ಹವಳ ಕಂಕಣವಾಕು ನೀಲ ಮಾಣಿಕ್ಯದ ಬೆರಳುಂಗುರಗಳ ಸಾಲು ಗಂಟೆಗಳ ರಂಜಿಸುವ ಕಾಂತಿಗಳ ಈ- ರೇಳು ಭುವನಗಳ ಧರಿಸಿದ ಉದರವನು 4 ಬಟ್ಟದೊಡೆಗಳಿಗೆ ಬಿಗಿದುಟ್ಟ ಚಲ್ಲಣ ಮೈಯ ತೊಟ್ಟ ಜರತಾರದಂಗಿಯ ಚರಣದಿ ಕಾಲ ಕಡಗಗಳ ದಟ್ಟಡಿಯನಿಡುತ ಬಹ ಪುಟ್ಟ ಗೋಪಾಲಕನ 5 ಬಾಲಕನು ಕರೆಯೆ ಬಹು ಕಂಬದಲಿ ಬಂದೊಡೆದು ಬಾಲಕನ ತರಿದು ಸಾಂದೀಪಗಿತ್ತ ಬಾಲೆ ಚೀರಿದರೆ ಅಕ್ಷಯವಿತ್ತ ದೇವಕಿಯ ಬಾಲಕನ ಬಹು ಬಗೆಯ ಲೀಲೆಗಳನೆಲ್ಲ 6 ಪೊಗಳಲೆನ್ನಳವಲ್ಲ ಪೊಸಬಗೆಯ ಮಹಿಮೆಗಳ ಅಘಹರನ ಅಗಣಿತದ ಗುಣ ಗಣಗಳ ನಿಗಮ ನಿಕರಕೆ ಮೈಯಗೊಡದ ಉಡುಪಿನ ಕೃಷ್ಣ ನೊಗುಮಿಗೆಯ ಉನ್ನತದ ವೈಯಾರಗಳನು 7
--------------
ವ್ಯಾಸರಾಯರು
ಕಂಸಾರಿನಿಜಪಾದ ಮರೆಯದಿರೆಲೆ ಮನವೆ ಸಂಸಾರಸುಖ ನೆಚ್ಚಿ ಭ್ರಮೆಯೊಳಗೆ ಬಿದ್ದು ಪ ಜನನಿಜನಕರುವನಿತೆತನುಜನುಜರಿವರೆಲ್ಲ ನಿನಗ್ಹಿತದಶತ್ರೆಂದು ನೆನೆಸಿಕೊಳ್ಳದಲೆ ಅನುದಿನವು ದುಡಿದುಡಿದು ತನುಮನಧನವನಿತು ಬಿನುಗರಿಗೆ ಸಲಿಸಿ ನರಕಕುಣಿಯೊಳಗೆ ಬಿದ್ದು 1 ಹೊಲಸುಕಿಲ್ಬಿಷಮಾಂಸ ಮೇಲೆ ಚರ್ಮದ ಹೊದಿಕೆ ಬಲವಾಗಿ ಬಿಗಿದ ನರ ಎಲುವಿನ್ಹಂದರವು ತೊಳೆಯದಿರ್ದರೆ ನಿಮಿಷ ಹೊಲಸುನಾರುವ ಮಹ ಮಲಭಾಂಡಕ್ಕೊಲಿದು ಬಲು ಸಿಲುಕಿ ಬಂಧದೊಳು 2 ಜಡದಮೇಲಣ ಲಿಪಿಯು ಒಡನೆ ಮಾಯಪ್ಪಂತೆ ಪೊಡವಿಯ ಸುಖ ನಿಮಿಷದಡಗಿ ಪೋಗುವುದು ಅಡಿಗಡಿಗೆ ಎಡೆಬಿಡದೆ ಒಡೆಯ ಶ್ರೀರಾಮನಲಿ ದೃಢವಾಗಿ ನೆರೆನಂಬಿ ಪಡಕೋ ನಿಜಸುಖವ 3
--------------
ರಾಮದಾಸರು
ಕೇಳು ನಾ ಪೇಳ್ವದೊಂದಾ ನಿತ್ಯಾನಂದಾ ಪ. ಕೇಳು ನಾ ಪೇಳ್ವದೊಂದಾ ಕಂಸಾದ್ಯಸುರವೃಂದ ಸೀಳಿ ಶೀಘ್ರಾದಿ ಪರಿಹರಿಸಿದಿ ಪಿತೃ ಬಂಧ ಅ.ಪ. ನಿಗಮ ತತಿಗಳು ನಿಶ್ಯೇಷ ತಿಳಿಯದ ಸುಗುಣವಾರಿಧಿ ಸುಖಬೋಧ ದೇಹ ಸ್ವಗತ ಖೇದೊಝ್ಝಿತ ಸರ್ವ ನಿಯಾಮಕ ಖಗಪತಿವಾಹನ ಕಾಮಿತ ಭಾವನ ಪಾಲನ ಪರಾತ್ಪರ ಸ್ವಗತಿ ನಿಯತಿ ಜ್ಞಾನ ದಾಯಕ ತ್ರಿಗುಣ ವರ್ಜಿತ ತ್ರಿಭುವನೇಶ್ವರ ಮಗುವು ನುಡಿವುದ ಮಾತೆಯಂದದಿ 1 ಮೊದಲಿನ ಭವಗಳ ಹದನ ಒಂದರಿಯೆನು ಪಾದ ಪದುಮಗಳ ಸದರದಿ ಸೇವಿಸಲಧಿಕ ಸಾಧನ ಮಾನು ಷ್ಯದಿ ಬಂದು ವೈಷ್ಣವ ಬುಧರಾ ಸೇವೆಯ ಬಿಟ್ಟು ವಿಧವಿಧ ಮೋಹಾಂಧಕಾರಗ- ಳುದಿಸಲದರೊಳು ಸಿಲುಕಿ ನಿರುಪದಿ ಬಧಿರ ಮೂಕ ಜಡಾಂಧನಾದೆನು ಸದಯ ಇನ್ನಾದರೂ ಕಟಾಕ್ಷದಿ 2 ತಾಪತ್ರಯೋನ್ಮೂಲನೇಶಾ ಕೌಸ್ತುಭಭೂಷ ಸುಜನ ಗಣೈಕ ಪೋಷಾ ಈಪರಿಯೊಳಗೆನ್ನ ಜರಿವದುಚಿತವೇನೊ ಕಾಪುರುಷರ ಸಂಗ ಕಡಿದು ಕರುಣವಿಟ್ಟು ಶ್ರೀ ಪಯೋಜ ಭವೇಂದ್ರ ವಂದ್ಯ ಪ್ರ- ದೀಪ ಸತ್ಸಿದ್ಧಾಂತ ತಿಳಿಸಿ ಪ- ದೇ ಪದೇ ಕಾಪಾಡು ವೆಂಕಟ ಭೂಪ ನೀ ಗತಿಯೆಂದು ನಂಬಿದೆ ಕೇಳು 3
--------------
ತುಪಾಕಿ ವೆಂಕಟರಮಣಾಚಾರ್ಯ
ಕೊಡವನು ಹೊರಲಾರೆನೆ ಅಕ್ಕಕೊಡವನು ಹೊರಲಾರೆನೆಕೊಡವನು ಹೊರಲಾರೆ ಕಷ್ಟಪಡಲಾರೆಕೊಡವನು ಒಡೆದರೆ ಕಡೆಹಾಯುವೆನೆ ಪ ನಿತ್ಯ ಶುಚಿಯಾಗದ ಕೊಡನೆ1 ರೂಪು ದಿನದಲಿ ಮಾಸಿಹ ಕೊಡನೆಆಪತ್ತಿನಿಂದ ನರಳುವ ಕೊಡನೆಪಾಪದ ಪುಂಜದ ಪಡಿಶಂಟು ಕೊಡನೆಜೋಪಾನ ಮಾಡಲು ಜರಿವಾ ಕೊಡನೆ 2 ಎಲ್ಲಿಂದ ಬಂದಿತೋ ಎನಗೀ ಕೊಡವುಎಲ್ಲಿಯ ಪಾಪಿಯು ಮಾಡಿದ ಕೊಡವುಬಲ್ಲ ಚಿದಾನಂದನ ಮರೆಸುವ ಕೊಡವುಬಾಳನು ಕೊಡಿಸುವ ಸತಿಯೆಂಬ ಕೊಡವು 3
--------------
ಚಿದಾನಂದ ಅವಧೂತರು
ಗಾಡಿಯೆತ್ತಲಿಂದ ಬಂದುದೇ ಮಾತ ನಾಡಲರಿಯದಿಪ್ಪ ಹೊಚ್ಚಹೊಸ ಹರೆಯದ ಮುಗುದೆಗೀ ಪ ಬಳುಕೆ ಸಿಂಹಮಧ್ಯ ಬಟ್ಟ ಮೊಲೆಗಳದುರೆ ತೋರವಾದ ಬಳಲುಮುಡಿಯೊಳಲರು ಒಯ್ಯನಿಳೆಯೊಳುದುರಲೂ ಜಲಜಮುಖದಿ ಬೆವರುದೋರೆ ವಲಯತೋರಹಾರ ಉರದಿ ಘಲಿರು ಘಲಿರನುಲಿವ ಕುಲುಕಿ ಕುಲಕಿ ನಡೆವ ಯೀ 1 ಮಿಸುಪ ಮಂದಹಾಸ ಮುಖದಿ ಮಸಗಿದಂತ ಕಾಂತಿ ಲಜ್ಜೆ ಮುಸುಕೆ ಮಿಸುಪ ಕದಪಿನಲ್ಲಿ ಎಸೆವ ಓಲೆ ಢಾಳಿಸೆ ಸಸಿನೆ ತಿದ್ದಿ ಉರದಿ ಜರಿವ ವಸನವನ್ನು ಸಂತವಿಸುತ ಉಸುರಿಲಿಂದ ಗಂಧವನ್ನು ಎಸಸಿಬಿಡುವ ನಡೆವ ಯೀ 2 ಕರವನೊಯ್ಯನೊಲಿದು ರೋಜಗಿರಿಯ ಮೇಲೆ ಬಾಲಚಂದ್ರ ನಿರಲುಸೆರಗಮರೆಯಮಾಡಿ ಮರಳಿಮರಳಿನೋಡುತಾ ಸ್ಮರನತಾತ ಸುರನಗರ ದೆರೆಯ ಲಕ್ಷ್ಮಿಯರಸನೊಡನೆ ನೆರೆದಪರಿಯ ಸಿರಿಯ ಗರುವಗಮನದಾ ಯೀ 3
--------------
ಕವಿ ಲಕ್ಷ್ಮೀಶ
ಗುಮ್ಮ ಬಂದನೆಲೊ ದುರ್ಜನ ಬೇಡಸುಮ್ಮನಿರೆಲೊ ರಂಗಯ್ಯ ಪ ನಿತ್ಯ 1 ಕಡಗ ಕಂಕಣ ಬಾಹುಪುರಿ ಭುಜಕೀರ್ತಿಯುಉರದಲ್ಲಿ ಧರಿಸಿದ ರುಂಡಮಾಲೆಯು ತನ್ನಸಿರದ ಜಟಾಜೂಟೆಯು ತಾಂ ಧರಿಸಿದ ಉರಗನಾ-ಭರಣಗಳು ಪರಮ ಮೂರುತಿ ನಿಮ್ಮ ಚರಣಸೇವೆಗೆ ನಿತ್ಯ2 ಕಾಮನ ರೂಪಕ್ಕೆ ಜರಿವಾ ಚೆನ್ನಿಗನಾಗಿಕೋಮಲಾಂಗೇರು ಭಿಕ್ಷವ ನೀಡಲು ಪ್ರೇಮದಿಂದವರಿಗೆಲ್ಲಮುಕ್ತಿಯನೀವ ಸೋಮಶೇಖರನ ಚೆಲ್ವರಾಮನಾ ಭಾವ ಮೃದುವಾಕ್ಯವಿದು ಮುದ್ದು 3 ಕೋಟಿ ಸೂರ್ಯರ ಕಾಂತಿ ನೇಟಾದ ತನುವಿನಪೂಸಿದ ಭಸ್ಮವು ನೊಸಲ ಮುಕ್ಕಣ್ಣಿನ ನೋಟದಕಿಡಿಯುದುರೆ ಭೂತಗಣಂಗಳು ಕುಟಕಿಚ್ಛಕ ಬೆದರೆನಾಟ್ಯವನಾಡುತ ನಗುತ ಮೋಹನ ಮುದ್ದು 4 ನಿಮ್ಮ ಚರಣ ಸೇವೆಗೆ ನಿತ್ಯಾ5
--------------
ಶ್ರೀಪಾದರಾಜರು
ಗುರು ಹಿರಿಯರ ಸೇವಿಸಿಹರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿಕೊಳ್ಳಿರೊ ಪ ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದೆರಕ್ಕಸಾರಿಯ ಭಕ್ತರೊಳು ಸೇರಿ ನೀವು ಸೆರೆಯಿಕ್ಕದಂಥವನ ಮೊರೆ ಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆಲ್ಲತುಂಬಿರುವ ಸುಖವೆಲ್ಲ ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವನುಂಬ ಭ್ರಮರಕೆ ಸರಿಗಾಣೆನೊ 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಬಿಕ್ಕುಗಳು ಬಂದು ಬೈವಾಗಇಕ್ಕಿ ಪೊರೆವುದಕೆ ಗತಿಯಿಲ್ಲದಾ ದರಿದ್ರರಿಗೆಸೌಖ್ಯವೆತ್ತಣದೊ ಮನುಜರಿಗೆ 3 ತಾಯ ಮಾರಿ ತೊತ್ತನು ಕೊಂಬ ಪಾಮರರಂತೆಹೇಯ ಕುಜನರಾ ಚರಣಕೆರಗಿಮಾಯಾಪತಿಯಂಘ್ರಿಗಳ ನೆನೆಯಲೊಲ್ಲದ ನರನಆಯುಷ್ಯ ಬರಿದೆ ಹೋಯಿತಲ್ಲ 4 ಅಯಿವರಿತ್ತೊಡವೆಯ ಅವರವರೊಯ್ಯುವರು ಮ-ತ್ತಯಿವರೆಂಬುವರು ತೊಲಗುವರುಮೈಯ ನೆತ್ತರು ಕೂಡ ಹರಿದು ಹೋಹುದು ನಿಮ್ಮಕೈಯ ಪಿಡಿದೆತ್ತುವರ ನಾನು ಕಾಣೆ 5 ಬಲಗುಂದಿ ನೆಲ ಹಿಡಿಯೆ ರೋಗರುಜಿನಗಳೆಂಬಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖ ಗಂಟಲೊಳಗಣನಾಲಗೆಯ ನಾದ ಎಲ್ಲಿಹುದೊ 6 ಆಗಲೇ ಹರಿನಾಮ ನಾದದಿಂದೆಚ್ಚತ್ತುನಾಗಶಯನನ ಪುರದ ಪಥವಆಗಮಜ್ಞರ ಕೇಳಿ ತಿಳಿದುಕೊಳ್ಳಿರೊ ನಿಮಗೆಈ ಗಾಳಿ ದೀಪ ಸ್ಥಿರವಲ್ಲ 7 ಜರೆಯೆಂದು ಕಡೆಯಲ್ಲಿ ಗೊರಗೊರನೆ ಉಸಿರಾಡೆಶರೀರದ ಸಂಬಂಧಗಳಕಟಾತರುಣಿಯರ ಮ್ಯಾಲಾಸೆ ತಮ್ಮ ಹಿತವನರಿಯದೆಬರಿದೆ ಭವದಲ್ಲಿ ಬಳಲುವಿರಿ 8 ಸರಕು ಇಲ್ಲಮಾಧವನ ಪೂಜೆ ಒಮ್ಮೆಯೂ ಮಾಡಿಲ್ಲ ಹರಿಪಾದ ತೀರ್ಥದಾ ವ್ರತಗಳಿಲ್ಲ 9 ಊಧ್ರ್ವಪುಂಡ್ರಗಳಿಲ್ಲ ಹರಿಯ ಲಾಂಛನವಿಲ್ಲಪದ್ಮ ತುಳಸಿಯಾ ಸರಗಳಿಲ್ಲಸದ್ಧರ್ಮ ಪಥವೆತ್ತ ವಿಷಯಾಂಧ ಕೂಪದೊಳುಬಿದ್ದು ಪೊರಳುವ ಮರುಳಿದೆತ್ತ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕ ವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ11 ಸಕ್ತಿಯಿಂ ಹರಿಯ ಪೊಗಳಿ ಅಡಿಯಲುರುಳಿ ಶುಷ್ಕಭುಕ್ತಿಗಳ ಮೇಲುಗುಳಿ ದೂರ ನಿಲ್ಲಿಭಕ್ತಿ ಜ್ಞಾನಗಳಿರಲಿ ಮತ್ರ್ಯ ಪಥದಿಂ ಮರಳಿಮುಕ್ತಿ ಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆ ಕೆಡಹುವ ಮುನ್ನಕಳ್ಳರೈವರ ಕಾರಣದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭನ ಅಡಿಗೆ ಮೊರೆ ಹೋಗಿರೊ13 ಪಾದ ಸೇರಿರೋ 14 ಒಂಬತ್ತು ರಂಧ್ರಗಳ ತನುವೆಂಬ ಮನೆಯಲ್ಲಿತುಂಬಿರುವ ವಾಯು ಸ್ಥಿರವಲ್ಲನಂಬಿದರ ಪೊರೆವ ನೆಲೆಯಾದಿಕೇಶವನ ಪಾದಾಂಬುಜವನು ಸೇರಿ ಬದುಕಿರೊ 15
--------------
ಕನಕದಾಸ
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ತಪ್ಪ ಪಾಲಿಸಿಕೊಳ್ಳೊ ಜೀಯಾ ತಿಮ್ಮಪ್ಪ ವೆಂಕಟಗಿರಿರಾಯ ಪ. ಬಪ್ಪ ತನ್ನಯ ಭಕ್ತ ಜನರ ಬವಣೆಗಳ ನೊಪ್ಪನೆಂಬ ಬಿರುದಿಪ್ಪ ಭಾಸುರಕಾಯ ಅ.ಪ. ಅರವಿಂದ ಸಖನುದಯಿಸಲು ಅಜ ಗರನಂತೆ ಬೀಳುವ ತಪ್ಪು ಗುರು ಹಿರಿಯರ ಜರಿವಂಥ ತಪ್ಪು ನಿನ್ನ ಸ್ಮರಣೆಯ ಮಾಡದ ತಪ್ಪು ನಿತ್ಯ ಕರ್ಮಗಳ ಬಿಡುವ ತಪ್ಪು ಸ್ಥಿರ ಚಿತ್ತದಲಿ ನಿನ್ನ ಚರಣಾರಾಧಿಸದಂಥ 1 ಸಂಧ್ಯಾ ಕೃತ್ಯಗಳ ಕಾಲದಲಿ ಪರ ನಿಂದೆಯ ಮಾಡುವ ತಪ್ಪು ದಿವ್ಯ ಶ್ರೀ ಗಂಧ ಶ್ರೀ ತುಳಸಿ ಪುಷ್ಪಗಳ ತಾನೆ ತಂದಿರಿಸದ ಮಹಾ ತಪ್ಪು ಮಿಂದು ಮಡಿಯೊಳಿದ್ದು ಮರುಳನಾಗಿ ನಿಜ ಮಂದಗಮನೆಯಳ ಮಾತನಾಲಿಸುವಂಥ 2 ಮನ ವಚನಾದಿಗಳಿಂದ ಪರ ವನಿತೇರ ಸ್ಮರಿಸುವ ತಪ್ಪು ಪುಣ್ಯ ದಿನಗಳ ತ್ಯಜಿಸುವ ತಪ್ಪು ಪರ ಧನಾಭಿಲಾಶಿಯ ತಪ್ಪು ಕನಸಿಲಾದರು ನಿನ್ನ ನೆನೆಯದೆ ಸತಿಸುತ ತನುವೆನ್ನದೆಂಬ ಚಿಂತನೆಯಿಂದ ಬಳಲುವ 3 ನೇಮ ವ್ರತಗಳೆಲ್ಲ ಮರತು ಸೌಖ್ಯ ಕಾಮುಕನಾಗಿಹ ತಪ್ಪು ಬಹು ಪಾಮರವೃತ್ತಿಯ ತಪ್ಪು ನಿನ್ನ ದಯ ಶೋಭಿಸದಂಥ ತಪ್ಪು ಆ ಮಹಾ ಮಂತ್ರಗಳ ಜಪಿಸದ ತಪ್ಪು ಕಾಮಿನಿಯರ ಮೋಹಕ್ಕೊಳಗಾಗಿ ಬಳಲುವ 4 ನರಗುರಿಯಾದೆನ್ನ ತಪ್ಪ ನೋಡೆ ಹುರುಳು ಗಾಣುವುದುಂಟೆನಪ್ಪ ಸರ್ವ ಸ್ಥಿರ ಚರಾದಿಗಳೊಳಗಿಪ್ಪ ಲಕ್ಷ್ಮೀ ವರನಿತ್ಯ ಸತ್ಯ ಸಂಕಲ್ಪ ಪರಮ ಪಾವನ ಶ್ರೀಮದುರಗೇಂದ್ರ ಗಿರಿವಾಸ ಕರುಣದಿಂದೆನ್ನನುದ್ಧರಿಸಿ ರಕ್ಷಿಸು ಬೇಗ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಾಟಕವಿದು ಹಳೆ ನಾಟಕ ನೋಟಕೆ ಇದು ಬಲು ನೂತನ ಪ ನಾಟಕ ಮಂದಿರ ಜಗವೆಲ್ಲ ಕಂಡಿರ ನೋಟವು ಯಾರದೊ ಆಟವು ಯಾರದೊ ಅ.ಪ ಇರುಳೊಳು ರಾಜಾಧಿರಾಜನಿವ ಹಗಲಲಿ ಭಿಕ್ಷಕೆ ಹಾಜರಿವ ಮುಗಿವುದು ಎನ್ನಯ ಪಾತ್ರವೆನ್ನುವುದೆ ಹಗಲಿನತನಕವು ಕಾಣನಿವ 1 ಯುದ್ಧವು ದಿನವೊ ಈ ನಾಟಕದಿ ಗೆದ್ದವರೊಬ್ಬರ ತೋರಿಸಿ ಯುದ್ಧದಗೋಚಿಗೆ ಹೋಗದೆ ಶಾಂತಿಯೊ ಳಿದ್ದ ಜನರೆ ಗೆದ್ದವರಿಲ್ಲಿ 2 ಕಲಿಪುರುಷನ ದೊಡ್ಡ ಸಭೆಯಲ್ಲಿ ಕುಳಿತು ಮಾತಾಡುವರಾರು ಜನ ಕಳುಹಿಸಲೊಬ್ಬನು ಇಳೆಯೊಳಗೊಬ್ಬರ ಉಳಿಸದೆ ಗೆಲುವೆನು ನೋಡು ಪ್ರಭು 3 ಶೌರ್ಯ ಸಾಹಸ ಕಾಪಟ್ಯಗಳಾ ಶ್ಚರ್ಯವು ಒಂದೊಂದು ದೃಶ್ಯದಲೂ ಯಾರ್ಯರೆಂಬುದ ಕಾಣದೆ ವೇಷದ ಮರ್ಯಾದೆಯು ವರ್ಣಿಪುದೆಂತು 4 ಕುಣಿವರು ಒಂದೆಡೆ ದಣಿವರು ಒಂದೆಡೆ ಕೊನೆ ಮೊದಲಿಲ್ಲವೀ ನಾಟಕಕೆ ಪ್ರಣಯಹನನ ದೃಶ್ಯಗಳನು ಒಂದೇ ಕ್ಷಣದಲಿ ತೋರುವ ಅಸದೃಶ್ಯದ 5 ಹೊಸ ಹೊಸ ದೃಶ್ಯವು ಹೊಸ ಹೊಸ ಪಾತ್ರವು ಪುಸಿಯಲ್ಲವು ಈ ನಾಟಕವು ಶಶಿಕುಲದರಸ ಪ್ರಸನ್ನನಾಗಿ ತಾ ಮುಸಿ ಮುಸಿ ನಗುತಲಿ ನೋಡುತಿಹ 6
--------------
ವಿದ್ಯಾಪ್ರಸನ್ನತೀರ್ಥರು
ನಿನ್ನೊಳಗೆ ನೀ ತಿಳಿದುನೋಡು ನಿರ್ಮಲನಾಗಿ ಪ ನಿನ್ನೊಳಗೆ ನೀ ತಿಳಿದುನೋಡು ಚೆನ್ನಾಗಿ ಗುರುಭಕ್ತಿಯ ಮಾಡು ಭಿನ್ನಪದಾರ್ಥಗಳನ್ನು ಬಯಸದೆ ಅನನ್ಯಭಾವದಿ ನಿಜವನ್ನು ನಿತ್ಯಾತ್ಮನ ನರದೇಹದಿಂದಧಿಕವಿಲ್ಲಾ ಸ್ಥಿರವಾಗಿ ನಿಂದಿರುವುದಲ್ಲಾ ಬರಿದೆ ಕೆಡಿಸುವುದು ಸಲ್ಲಾ ಗುರುತಿಗೆ ಬೆರೆಸಲು ಬಲ್ಲಾ ಗುರುನಾಥನಿಂದುಪದೇಶವಾ ಕೈಕೊಂಡು ಇ ತರ ಪರಿಕರಂಗಳ ಆಶಾಪಾಶವಾ ವರ್ಜಿಸಿ ನಿನ್ನ ದುರಿತ ದುಃಖ ವಿನಾಶವಾಮಾಡಲು ಭವ ಶರಧಿಯ ದಾಟುವಾ ಆಯಾಸವಾ ನಿಲ್ಲುವದಿನ್ನು ಕುರಿತುಮನದಲಿ ತಿಳಿದುನೋಡು ಕಾಂಡುವ ಆರು ಅರಿಗಳ ವಿಚ್ಛೇಧನ ಮಾಡು ಅವಿದ್ಯೆಯನ್ನು ಶರಗು ಹಿಡಿದು ಹೊರಗೆ ದೂಡು ಹಮ್ಮಿನಹಲ್ಲು ಮುರಿದು ನಿನ್ನೊಳಗೆ ಕೂಡು ಹರಿಚರಣದೊಳಾಡು ಗುರುಮಂತ್ರವನುಚ್ಚರಿಸಿ ಕರ್ಪೂರವನು ಜಗದೊಳಿರುವುದೆಲ್ಲ ನಶ್ವರಸಂತೆ ನೋಡೆ ಬರುವದೆಲ್ಲ ಬಯಲಿನ ಭ್ರಾಂತಿ ಅರಿತಮಹಾತ್ಮರ ಚರಣನರಸಿಜಕೆ ಎರಗಿ ತತ್ವಾನಂದ ಭರಿತನೆಂದೆನಿಸುವ ನಿನ್ನೊಳಗೆ1 ವಾದಿಸಿ ಶುದ್ಧತತ್ವದ ಹಾದಿಯ ಬಲ್ಲವರಾದ ಸಾದು ಸತ್ಪುರುಷರಪಾದ ಕೊಡಿ ಶ್ರೀ ಗುರುಪ್ರಸಾದ ಸಾಧಿಸಿ ಸವಿಯನು ಬೇಡಿಕೊ ಬ್ರಹ್ಮಾನಂದದ ಬೋಧೆಯಿಂದ ನೀ ಲೋಲಾಡಿಕೊ ನಿತ್ಯನಿರ್ಮಲವಾದ ವಸ್ತು ನೀ ದೃಢಮಾಡಿಕೊ ಅಂತರಾತ್ಮನ ಶೋಧಿಸಿ ಸಜ್ಜಾಗಿ ನೋಡಿಕೊ ಅಷ್ಟರಮೇಲೆ ಹಾ ಧನ್ಯಧನ್ಯನೆನಿಸಿ ಮೆರೆವ ವರ್ಣಾಶ್ರಮದ ಭೇದವಳಿದು ಮಾಯೆಯ ಜರಿವೆ ನಿತ್ಯಾನಂದವಿನೋದಕೆ ಮಹಾತ್ಮರನು ಕರಿವೆ ನೋಡಲು ದ್ವೈತವಾದ ಮಿಥ್ಯವೆಂಬುದನರಿವೆ ಮಧ್ಯಾಂತ ಶ್ರೀ ಗುರುದೇವಾ ಬಹುಆದರವಿಡಿದು ಶಿಷ್ಯರಕಾವಾ ಸಂಪಾದಿಸಿಕೊಡುವಾ ಮುಕ್ತಿಯಠಾವಾ ನಿತ್ಯಾರಾಧಕರಿಗೆ ಸದ್ಗತಿಗಳನೀವಾ ತ್ರಿಮೂರ್ತಿಗಳಾದರೆಂತೆಂಬುದ ನಿನ್ನೊಳಗೆ 2 ನಿತ್ಯನಿರ್ಮಲದೊಳಗಾಡಿ ಪ್ರತ್ಯುಗಾತುಮನ ನೋಡಿ ಇತ್ತಣದ ಹಂಬಲವ ಬಿಡಬೇಕು ತನುಮನಧನ ಜೊತ್ತಾಗಿ ಶ್ರೀ ಗುರುವಿಗೆ ಕೊಡಬೇಕು ಕರುಣದವಜ್ರ ಕೆತ್ತಿದ ಕವಚವನು ತೊಡಬೇಕು ಬಿಡಬೇಕು ಇಂತಾಗಿ ಬಿಡದೆ ಮತ್ತಿ ತಾತ್ವರ್ಥವ ತಿಳಿದು ಕಾಣುಕಾಣದರೊಳು ಪ್ರತ್ಯಕ್ಷ ಹೊಳದಾಡುವ ಚಿದ್ಭಾನು ಪ್ರಕಾಶವನ್ನು ಅತ್ಯಧಿಕತೆಯಿಂದಲೀವನು ಜ್ಞಾನಿಗಳೊಳು ವಿಸ್ತಾರ ವಸ್ತು ವಿಚಾರವನು ಮಾಡಿ ನೋಡಿದರೆ ಕತ್ತಲೆ ಬೆಳಕೆರಡಿಲ್ಲದು ಸ್ವಯದಲಿ ಎತ್ತನೋಡಿದರು ಪ್ರಜ್ವಲಿಸುವುದು ತಾಂ ಉತ್ತಮಾನಂದದಿ ಸಲಿಸುವುದು ಗುರು ಭಕ್ತರ ನಿಜದಲಿ ನಿಲಿಸುವದು ಸುತ್ತು ಮುತ್ತು ಸುಳಿದು ತಾನೆ ಬಯಸುವದು ನೆತ್ತಿಯೊಳಗೆ ಹೊಳೆಯುತ್ತಿಹ ಜ್ಯೋತಿಯು ಎತ್ತಿತೋರಿತು ವಿಮಲಾನಂದ ಬ್ರಹ್ಮನ ನಿನ್ನೊಳಗೆ 3
--------------
ಭಟಕಳ ಅಪ್ಪಯ್ಯ
ಪರಿ ಬಹಳ ನಿಷ್ಠುರದ ವಚನಗಳನಾಡುವರು ಜನರು ಪ ಎಷ್ಟು ತಪವನೆ ಮಾಡಿ ಪಡೆದೆನೊ ನಾನಿನ್ನ ಕಷ್ಟವಾಯಿತು ನಿಂದೆ ನುಡಿಯ ಕೇಳುವುದು ಅ.ಪ ಕೊಂಡು ಪೋಗಲಿ ಬೆಣ್ಣೆ ಪಾಲು ಧದಿ ಭಾಂಡಗಳ ದುಂಡು ನಗುಮೊಗ ಚೆಲುವ ನಿನ್ನ ಮಗನು ಕಂಡರೆಮ್ಮನು ಮೋರೆ ತಿರುಗಲೇಕೆ ಇಂಥಾ ಪುಂಡು ಹುಡುಗನೆ ನಿನ್ನ ಮಗನೆಂದು ದೂರುವರು 1 ಮುರಳಿ ನಾದವ ಕೇಳಿ ಮರೆತು ಮೇವನು ಎಮ್ಮ ತುರುಕರುಗಳೆಲ್ಲ ಬಲು ಕೃಶವಾದವಮ್ಮ ಹರಿವ ಯಮುನಾಜಲದೊಳ್ ಆದ ಅವಿವೇಕವನು ಅರುಹಲೆಮ್ಮಯ ಮನವು ಜರಿವುದೆಂದಾಡುವರು 2 ಸಂಸಾರ ಮೋಹವನು ತೊರೆದು ಎನ್ನಲಿ ಮನದ ಸಂಶಯವ ಬಿಡಿ ಬಿಡಿ ಪ್ರಸನ್ನರಾಗಿರಿ ಎಂದ ಧ್ವಂಸವಾಯಿತು ಎಮ್ಮ ಅಭಿಮಾನ ಇವ ಚಂದ್ರ ವಂಶಕೆಂತಹ ಕೀರ್ತಿ ತಂದನೆಂದಾಡುವರು 3
--------------
ವಿದ್ಯಾಪ್ರಸನ್ನತೀರ್ಥರು