ಒಟ್ಟು 57 ಕಡೆಗಳಲ್ಲಿ , 30 ದಾಸರು , 53 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೃಂದಾವನಿ ಜನನಿ ವಂದಿಸುವೆ ಸತತ ಜ ಲಂಧರನ ರಾಣಿ ಕಲ್ಯಾಣಿ | ಕಲ್ಯಾಣಿ ಶ್ರೀ ತುಲಸಿ ನಿಜ ಮಂದಿರೆ ಎನಗೆ ದಯವಾಗೆ 1 ಜಲಜಾಕ್ಷನಮಲ ಕಜ್ಜಲ ಬಿಂದು ಪೀಯೂಷ ಕಲಶದಲಿ ಬೀಳೆ ಜನಿಸಿದಿ | ಜನಿಸಿದಿ ಹರಿಯಿಂದ ಶ್ರೀ ತುಲಸಿ ನೀನೆಂದು ಕರೆಸೀದಿ2 ಶ್ರೀ ತರುಣಿವಲ್ಲಭನ ಪ್ರೀತಿ ವಿಷಯಳೆ ನಿನ್ನ ಕೈ ಮುಗಿವೆ ಎನ್ನಯ ಮಹ ಪಾತಕವ ಕಳೆದು ಪೊರೆಯಮ್ಮ 3 ತುಲಸಿ ನಿನ್ನಡಿಗೆ ನಾ ತಲೆವಾಗಿ ಬಿನ್ನೈಪೆ ಕಲುಷ ಕರ್ಮಗಳ ಎಣಿಸದೆ | ಎಣಿಸದೆ ಸಂಸಾರ ಜಲಧಿಯಿಂದೆಮ್ಮ ಕಡೆ ಹಾಯ್ಸು 4 ದುರಿತ ಈಡಾಡಿದವ ನಿನ್ನ ಕೊಂ ನಿತ್ಯ ಹರಿಪಾದ | ಹರಿಪಾದ ಕಮಲಗಳ ಕೂಡಿಸುವೆ ಸತ್ಯವೆಂದೆಂದು 5 ನಿಂದಿಸಿದವರೆಲ್ಲ ನಿಂದ್ಯರಾಗುವರು ಅಭಿ ವಂದಿಸಿದ ಜನರು ಸುರರಿಂದ | ಸುರರಿಂದ ನರರಿಂದ ವಂದ್ಯರಾಗುವರು ಎಂದೆಂದು 6 ಕಲುಷವರ್ಜಿತ ನಿನ್ನ ದಳಗಳಿಂದಲಿ ಲಕ್ಷ್ಮೀ ಪೂಜಿಪರಿಗೆ ಪರಮಮಂ ಗಳದ ಪದವಿತ್ತು ಸಲಹೂವಿ 7 ಶ್ರೀ ತುಲಸಿದೇವಿ ಮನ್ಮಾತೆ ಲಾಲಿಸು ಜಗ ಎನ್ನ ಹೃತ್ಪದ್ಮದಲಿ ನೀ ತೋರೆ ಕೃಪೆಯಿಂದ 8
--------------
ಜಗನ್ನಾಥದಾಸರು
ಅಧ್ಯಾಯ ಮೂರು ಪೂತನಾ ಅಸುಹಾರಿಣಿ ನಮಃ ಪದ್ಯ ಪೊಡವಿಯಲಿ ಎಲ್ಲರಿಗೆ ಒಡಿಯನಾಗಿರುವಂಥ ಖಡು ಪಾಪಿ ಕಂಸಗೆ ಬಿಡದೆ ಪ್ರತಿವರ್ಷಕ್ಕೆ ಕೊಡತಕ್ಕ ಕಪ್ಪವನು ಕುಡಬೇಕು ಎಂತ್ಯೆಂದು ನಡದು ತಾ ಮಥುರೆಯಲಿ ಖಡುನಂದಗೋಪಾ| ಒಡಿಯನಪ್ಪಣಿಯಿಂದ ಗಡಬಡಿಸೆ ಪೂತನಿಯು ಹುಡುಗರನ್ನು ಹುಡುಕುತಲೆ ಬಡಿವಾರ ತೋರುತಲೆ ನÀಡದು ಬಂದುಳು ಹಾದಿ ಹಿಡಿದು ಗೋಕುಳಕೆ|| 1 ಧಡಿಯ ದಿವ್ಯಾಂಬರವು ಶಡಗರದಿ ಉಟ್ಟಿಹಳು ಕಿಡಿಯಂಥ ಕುಪ್ಪುಸವು ದೃಢ ಬಿಗಿದು ತೊಟ್ಟಿಹಳು| ಬಿಡÀದೆ ಸರ್ವಾಭರಣ ಜಡದಿಹಳು ತಾ ಮಿಂಚು ಹೊಡದಂತೆ ತೋರುವಳು ಉಡುರಾಜ ಮುಖಿಯು| ಎಡಬಾರಿ ದುರಬಿನಲಿ ದೃಢವಾಗಿ ಮಲ್ಲಿಗಿಯು ಮುಡಿದಿಹಳು ಉರದಲ್ಲಿ ದೃಢವಾದ ಕುಚವೆರಡು ನಡವುದಾ ಕಾಲಕ್ಕೆ ನಡಗುತಿಹವು 2 ಬಿಂಬೋಷ್ಟಿ ಮಾಯ ಅವಲಂಬಿಸುತ ಗೋಕುಲದ ತುಂಬ ಬೆಳಕವು ಮಾಡಿ ಜಂಭದಲಿ ಬರುತಿಹಳು ಗಂಭೀರಳಾಗಿ ತನಗುಂಭ ತಿಳಿಗುಡದೆ ಕುಚ ಕುಂಭಗಳವಳಗ ವಿಷ ತುಂಬಿಟ್ಟು ಕೊಂಡು ಅಂಬುಜಾಕ್ಷಿಯ ಕಂಡು ಸಂಭ್ರಮದಿ ಗೋಕುಲದ ಜಗದಂಬಿಯೊ ಎಂದೂ 3 ಮುಂದ ಆ ಪೂತನಿಯು ನಂದಗೋಪನ ಮನಿಗೆ ಬಂದು ದೇವೇಚ್ಛಿಯಲಿ ನಂದನಂದನನ ಕಣ್ಣಿಂದ ನೋಡಿದಳಾಗ ಛಂದದ್ಹಾಸಿಕೆಯಲಿ ಛಂದಾದ ಲೌಕೀಕದ ಕಂದನಂತೆ| ಮುಂದವನ ತೊಡಿಯ ಮ್ಯಾಲೆ ಛಂದಾಗಿ ಧರಿಸಿದಳು ಕಂದರ್ಪನೈಯನೆ ಕಂದನಾಗಿರುವನೆಂತ್ಯೆಂದು ತಿಳಿಯದೆ ನಿದ್ರಿ ಯಿಂದಿರುವ ಸರ್ಪ ಕರದಿಂದ್ಹಿಡಪರಿ ರಜ್ಜು ಎಂದುಬ್ಯಾಗೆ 4 ಶ್ರೀನಿವಾಸನ ಜನನಿ ಮೌನ ಹಿಡಿದಳು ಕಪಟತನ ತಿಳಿಯದೆ ಬುದ್ಧಿಹೀನ ಪೂತನಿಯು ಸ್ತನಪಾನ ಮಾಡಿಸಿದಳಾ ದಾನವಾರಿಗೆ ಅವನು ಪ್ರಾಣಸಹಿತಾಗಿ ವಿಷಪಾನ ಮಾಡಿದನು| ದ್ರೂಣನಾಗಿರುವವನ ಪಾಣಿಯಲಿ ಸಿಕ್ಕು ಗತಿಗಾಣದಲೆ ಉತ್ಕøಷ್ಟ ವಾಣಿಯಿಂದಲೆ ಒದರಿ ಭ್ರೂಣಹನನಕ ಬಹಳ ಜಾಣಿ ಎಂತ್ಯೆನಿಸುವಳು ಪ್ರಾಣ್ಹೋಗಿಬಿದ್ದಳಾ ಪ್ರಾಣಿ ಪೂತನಿಯು. ಪದ:ರಾಗ :ಶಂಕರಾಭರಣ ಅಟತಾಳ, ಸ್ವರಷಡ್ಜ ಬಿದ್ದಾಳು ಪ್ರಾಣ ಹೋಗಿ ಪೂತನಿ ಜನ್ಮಗೆದ್ದಾಳು ಬಾಲಕ ಘಾತಿನಿ| ಬಂತುದೆವಾಯಿತು ಮತ್ತಲ್ಲೆ|| 1 ಗಿರಿಯಂತೆ ಆ ದೇಹ ಇರುವೋದು ಆರು ಹರದಾರಿ ಪರಿಯಂತೆ ಬಿದ್ದಿಹದು| ಕರಚರಣಗಳ್ಹರವಿ ಇರವದು ಅಲ್ಲಿ ಇರವೂ ವೃಕ್ಷಗಳೆಲ್ಲಾ ಮುರದಿಹದು|| 2 ಎರಡು ಕಣ್ಣುಗಳು| ದಾಡುವರಲ್ಲೆ ನದಿಗಳು|| 3 ಭಾವಿಯಪರಿ ತೋರುವುದು ಹೇಳುವದಿನ್ನು ಉಳದಿಹುದು ದಾನವಾರಿಯಕೊಂಡು ಕರದಿಂದ ವಿಷಪಾನ ಮಾಡಿಸಿದ ಕಾರಣಿದಿಂದ | ಹಾನಿತನಗೆ ಬಂತು ತ್ವರದಿಂದ| ಅಚುತಾನಂತಾದ್ರೀಶ ಕರದಿಂದ|5 ಪದ್ಯ ಬಾಲಕಾಕಿಯ ಎದಿಯಮ್ಯಾಲೆ ನಿರ್ಭಯದಿಂದ ಲೀತಿಯನ ಮಾಡುತಿಹ ಬಾಲಿಯರು ಬ್ಯಾಗ ಆ ಬಾಲಕನ ಕರಕೊಂಡು ಮ್ಯಾಲೆ ಗೋಮೂತ್ರದಲಿ ಬಾಲಗ್ಯರದರು ಅವರು ಭಾಳ ಸಂಭ್ರಮದಿ| ಕಾಲ ಆ ಕಾಲಕಿಟ್ಟರು ನಂದ ಬಾಲಕರನೆನಿಸುವ ಜಗತ್ಪಾಲಕಗ ರಕ್ಷಾ|| 1 ಬಾಲ ನಿನ್ನನ್ನು ಜಗತ್ಪಾಲಕನು ರಕ್ಷಿಸಲಿ| ಪದಾಗಳು ಆ ಮೂರು ಪಾದದವ ರಕ್ಷಿಸುತಾ ಜಂಘವನು ಮತ್ತ ಶ್ರೀರಂಗ ತಾ ರಕ್ಷಿಸಲಿ ಜಾನುವನು ರಕ್ಷಿಸಿ ಜಾನ್ಹವಿಜನಕಾ | ಉರುಗಳಾ ರಕ್ಷಿಸಲಿ ಉರ್ವೀಶ ಹರಿತಾನು ನಾಭಿಯನು ಶ್ರೀಪದ್ಮನಾಭ ಸಂರಕ್ಷಿಸಲಿ ಹೃದಯಗತ ಶ್ರೀ ಹರಿಯು ಭುಜಗಳನು ರಕ್ಷಿಸಲಿ ಭುಜಗಶಯನಾ||2 ಕಂಠವನು ಮತ್ತ ವೈಕುಂಠಪತಿ ರಕ್ಷಿಸಲಿ ಮುಬವನ್ನು ರಕ್ಷಿಸಲಿ ಮುಕುಟವರ್ಧನ ಹರಿಯು| ಶಿರವನ್ನು ರಕ್ಷಿಸಲಿ ಶಿರಿಯರಮಣನನು ತಾನು ಅಂಗಜನ ಜನಕ ಸರ್ವಾಂಗ ರಕ್ಷಿಸಲಿ| ಜಲಜಾಕ್ಷಿಯರು ಹೀಂಗ ಹಲವು ದೇವತಿಗಳನ ಬಲಗೊಂಡು ಮತ್ತವರ ಬಲದಿ ರಕ್ಷೆಯ ನೀಡಲು| ಜಲಜಮುಖಿ ಜನನಿ ತನ್ನ ಚಲುವ ಬಾಲಕಗ ತಾ ಮೊಲಿಕೊಟ್ಟು ಮಂಚದಲಿ ಮಲಗಿಸಿದಳವನಾ| ಖಳಕಂಸಗಾ ಕಪ್ಪುಗಳ ಕೊಟ್ಟು ನಂದ ತಾ ಇಳದ ಮನಿಯಲಿ ಇರಲು ತಿಳದು ಆ ಸುದ್ದಿ ತನ್ನ ಸ್ಥಳವನ್ನು ಬಿಟ್ಟು ಆ ಸ್ಥಳಕ ಬಂದನು ಪರಮ ಗೆಳೆಯ ವಸುದೇವ ಮನದೊಳಗ ಹಿಗ್ಗುತಲೆ|| 3 ಆರ್ಯಾ ಜಾಣನು ಆತನ ಕಾಣುತಲ್ಯದ್ದನು ಪ್ರಾಣಬರಲು ದೇಹದ ಪರಿಯು| ಪ್ರಣಾಮಮಾಡಿ ಆ ಪ್ರಾಣಯನಪ್ಪಿದ ಪಾಣಿಹಿಡಿದು ಗೋಕುಲ ಧೊರಿಯು|| 1 ಆಮ್ಯಾಲಿಬ್ಬರು ಪ್ರೇಮದಿ ಕುಳಿತರು ಕ್ಷೇಮವಿಚಾರ ಮಾಡುತಲೆ| ಆಮ್ಯಾಲ ಶೌರಿಯು ಕೋಮಲ ಹೃದಯದಿ ತಾ ಮಾತಾಡಿದ ಪ್ರೇಮದಲೆ|| 2 ಪದ:ರಾಗ:ಶಂಕರಾಭರಣ ತಾಳ:ಭಿಲಂದಿ ಸ್ವರ:ಪಂಚಮ ಸಕಲ ಜನರು ನಂದಗೋಪ ಸುಖದಲಿರುವರೆ ಸಖನೆ ನಿನ್ನ ಮನಿಗೆ ಭಾವುಕರು ಬರುವರೆ|| ಪ ದೃಷ್ಟ ವಿಷಯನಾದಿ ನೀ ಅದೃಷ್ಟಯೋಗದಿ| ವೃಷ್ಟಿ ಮಾಡಿದಿ|| 1 ನಿನಗ ಪುತ್ರನಾದ ಸುದ್ದಿ ಎನಗ ಮುಟ್ಟಿತು | ನನಗೆ ಕಡೆಯ ಪುತ್ರನವನೆ ನಿನಗೆ ಒಪ್ಪಿತು|| 2 ಸಕಲರಿಂದ ಕೂಡಿ ಅವನು ಸುಖದಲಿರುವನೆ ಸಕಲ ಜನರಿಗ್ಯವನು ಪ್ರಾಣಸಖನು ಆದನೆ|| 3 ಅಲ್ಯೆ ಗೋಗಳೆಲ್ಲ ರೋಗ ಇಲ್ಲದಿರುವವೆ| ಹುಲ್ಲು ನೀರಿನಿಂದ ಸೌಖ್ಯದಲ್ಲಿ ಇರುವವೆ|| 4 ಚನ್ನಿ ಗಾನಂತಾದ್ರೀಶನ್ನ ನೆನುವರೆ 5 ಆರ್ಯಾ ಛಂದಾಗ್ಯವ ಹೀಗೆಂದ ಮಾತು ಆನಂದಗೋಪ ತಾ ಕೇಳುತಲೆ| ಮುಂದಾ ಶೌರಿಯಮುಂದ ನುಡದನು ಮಂದಹಾಸ್ಯದಲಿ ನಗುವುತಲೆ|| 1 ಪದ, ರಾಗ :ಮುಖರಿ ತಾಳ :ಆದಿ ದುಃಖವು ಸುಖಕಾರಿಯೆ ಪ ಎನಗೆ ತಿಳಿನೀನು|| 1 ಹಿಂದಿನ ದುಃಖ ಹಿಂದೆ ಹೋಯಿತು | ತಿಳಿ ಮುಂದ ನಿನಗೆ ಸೌಖ್ಯವಾದೀತು|| 2 ಚಿಂತಿಮಾಡಲಿ ಬ್ಯಾಡಾ ವಸುದೇವಾ| ಚಲುವಾನಂತಾದ್ರೀಶನೆ ದಯ ಮಾಡಿರುವಾ|| 3 ಆರ್ಯಾ ನಂದ ಗೋಪನಾನಂದ ವಚನಗಳ ಛಂದದಿ ಕೇಳುತ ವಸುದೇವಾ | ಮುಂದ ನುಡದ ಹೀಗಂದು ಮತ್ತ ತ್ವರದಿಂದ ತನ್ನ ಹೃದ್ಗತ ಭಾವಾ || 1 ಪದ ರಾಗ:ಸಾರಂಗ ಆದಿತಾಳ ಸ್ವರ:ಷಡ್ಜ ಭಿಡಯಾ ಬಿಟ್ಟ ಹೇಳುವೆ ಎನ್ನ ನುಡಿಯು ಲಾಲಿಸಿ|| ಪ ಉತ್ತಮ ಕೇಳಿನ್ನಾಮಗನಾ ಉತ್ಪತ್ತಿ ಕಿವಿಯಿಂದ ಕೇಳಿ| ಉತ್ಪನ್ನವಾದಾವು ಬಹಳ ಉತ್ಪಾತಗಳು|| 1 ಕಂಸನ ಅಂಜಿಕೆಯಿಂದ ಸಂಶಯ ಬಿಡುವÀಲ್ಲದಿನ್ನು| ಸಂಸಾರದೋಳ್ಸುಖವು ಸ್ವಲ್ಪಾ ಸಂಶಯವೆ ಭಾಳಾ||2 ಮುಟ್ಟಿತು ಕಂಸಗ ಕಪ್ಪ ಭೆಟ್ಟಿ ಆಯಿತು ನಿಮ್ಮನು| ಘಡ್ಯಾಗಿ ಅನಂತಾದ್ರೀಶನ ಮುಡ್ಡಿ ಭಜಿಸುತ|| 3 ಪದ್ಯ ಯಾದವನ ಮಾತಿಗ್ಯನು ಮೋದವನು ಬಟ್ಟು ನಂದಾದಿಗಳು ಗೋಕುಲದ ಹಾದಿಯನು ಹಿಡಿದು ಪರಮಾದರದಿ ನಡದರು. ಅಗಾಧವಾಗಿಹ ದೇಹ ಹಾದಿಯಲಿ ಬಿದ್ದಿಹುದು ಹಾದಿಯನು ಕಟ್ಟಿ| ಆ ದೇಹ ನೋಡುತ ಅಗಾಧ ಬಟ್ಟವರು ಅಲ್ಯಾದದ್ದು ಮನದಲ್ಲಿ ಶೋಧಿಸ್ಯಂದರು ಹೀಗೆ | ಸಾಧು ವಸುದೇವ ಹುಸಿ ಆದದ್ದು ಉಂಟೇ| 1 ಪರಿ ಅವರು ಕೊಡಲಿಯನು ಕೊಂಡು ಕಡಕಡದು ಈ ದೇಹವನು ಸುಡಲು ದೂರದಲಿಟ್ಟು ಕಡೆ ಬಿಡದೆ ಆಕಾಶಕ್ಕೆ ಅಡರಿತಾಗೆ| ಖಡುಪಾಪಿ ಪೂತನಿಯು ಕುಡಲು ವಿಷ ಮೊಲಿಯನ್ನು ಕುಡುದು ಸದ್ಗತಿಕೊಟ್ಟ ತಡವಿಲ್ಲದಲೆ ಹರಿಯು ದೃಢಭಕ್ತಿಯಿಂದಲೆ ಕಡಿಗೆ ಕ್ಷೀರಾದಿಗಳು ಕೊಡಲು ಸದ್ಗತಿಯನ್ನು ಕುಡವದೇನÀದು|| 2 ಶೌರಿಸಖನಂದ ಪರಿವಾರ ಸಹಿತಾಗಿ ತಾ ಈ ರೀತಿ ಉತ್ಪಾತ ಮೀರಿ ಮನಿಯಲಿ ಬಂದು ಪೂರ್ವದಲಿ ಆಗಿಹ ಅಪೂರ್ವ ವೃತಾಂತವನು ಪೂರ ಕೇಳ್ಯಾಶ್ಚರ್ಯ ಪೂರಿತನು ಆಗಿ ವೈರಿ ಪೂತನಿಯ ಸಂಹಾರಿಯಾ ಕರಕೊಂಡು| ಚಾರುಮುಖ ನೋಡಿ ಸುಖಪೂರನಾದಾ | ಈ ರೀತಿ ಚರಿತವನು ಆರು ಕೇಳುವರು ಅವರ ಘೋರ ದುರ್ಷಟವೆಲ್ಲ ದೂರಾಗಿ ಹೋಗುವದು ಶುಭಚನ್ಹ ಚಾರ್ವನಂತಾದ್ರೀಶ ಮೂರುತಿಯು ಮುಗಿಸಿದಿದು ಭಾಗವತ ದಶಮಸ್ಕಂಧ 3 ಪೂತನಾದಧೋ ನಾಮ ತೃತಿಯೋಧ್ಯಾಯಃ| || ಶ್ರೀ ಕೃಷ್ಣಾರ್ಪಣಮಸ್ತು|| || ಮೂರನೆಯ ಅಧ್ಯಾಯವು ಸಂಪೂರ್ಣ||
--------------
ಅನಂತಾದ್ರೀಶ - ಕಥನಕಾವ್ಯಗಳು
ಆಪದ್ಭಾಂಧವ ವಿಠಲ | ಕಾಪಾಡೊ ಇವಳಾ ಪ ಶ್ರೀಪತಿ ಶೀರಂಗ ಸ | ಮೀಪಗನೆ ಹರಿಯೇ ಅ.ಪ. ದುರಿತ ರಾಶಿಗಳಳಿದು | ಹರಿನಾಮ ಸುಧೆ ಸವಿಯೆವರಮಾರ್ಗ ತೋರಿ ಪೊರೆ | ಶ್ರೀದ ನರಹರಿಯೇ |ತರುಣಿಮಣಿ ಹರಿದಾಸ್ಯ | ನೆರೆಸುಕಾಂಕ್ಷಿಸಲಾಗಿವಿರಚಿಸಿಹೆ ಉಪದೇಶ | ಪರಿಪಾಲಿಸಿವಳಾ 1 ತಾರತಮ್ಯಾಂತರದಿ | ಹರಿಯ ಉತ್ಕರ್ಷತ್ವಸುರಸಾದಿ ಸುರರೆಲ್ಲ | ಹರಿದಾಸರೆಂಬಾ |ಎರಡು ಮೂರ್ಭೇದ ಸಹ | ವರ ಜಗದ ಸತ್ಯತೆಯಅರುಹಿ ಪಾಲಿಸು ಇವಳ | ಕರಿವರದ ಹರಿಯೇ2 ಸೀಮೆ ಮೀರಿದ ಮಹಿಮ | ಭೂಮ ಗುಣ ಸಂಪೂರ್ಣಕಾಮಾರಿ ಸಖಕೃಷ್ಣ | ಕಾಮಿತಾರ್ಥದನೇನೇಮ ನಿಷ್ಠೆಗಳಿತ್ತು | ಸಾಧನಗಳಳವಡಿಸಿಕಾಮಿನಿಯ ಪೊರೆಯೊ ಹರಿ ಸ್ವಾಮಿ ಭೂವರಹಾ 3 ಜಲಜಾಕ್ಷನಮಲ ಗುಣ | ತಿಳಿಯಲ್ಕೆ ಸಾಧನವುಕಲಿಯುಗದಿ ಸತ್ಸಂಗಾ | ಬಲ ಉಳ್ಳದೋಹಲವು ಮಾತೇಕೆ ನಿನ್ನ | ಮಲಗುಣ ನಾಮಗಳತಿಳಿಸಿ ಪೊರೆ ಇವಳನ್ನು | ಕಲಿಮಲಧ್ವಂಸೀ 4 ಪಾವ ಮಾನಿಯ ಪ್ರೀಯ ದೇವ ದೇವೋತ್ತಮನೆಭಾವುಕಳ ಪೊರೆಯಲ್ಕೆ | ತೀವ್ರ ಭಿನ್ನವಿಪೇಕಾವ ಕರುಣಾಳು ಗುರು | ಗೋವಿಂದ ವಿಠ್ಠಲನೆಈ ವಿಧದ ಭಿನ್ನಪವ | ನೀ ವೊಲಿದು ಸಲಿಸೋ5
--------------
ಗುರುಗೋವಿಂದವಿಠಲರು
ಆವ ಭಯವಿಲ್ಲ ಪರಾವರೇಶನ ಸಕಲ ಪ ಭಾವಜ್ಞ ಜನರಿಗಿನ್ನು ಅ.ಪ. ದೇಶಕಾಲೋಚಿತ ಧರ್ಮ ಗಿರ್ಮಗಳು ಸ ನ್ಯಾಸ ಮೊದಲಾದಾಶ್ರಮೋಚಿತ ಸುಕರ್ಮಗಳು ಮಾಸೋಪವಾಸ ವ್ರತ ನೇಮ ಗೀಮಗಳು ಸದ್ ಪ್ರದೋಷನ ಧ್ಯಾಯಗೀಯ ಶ್ವಾಸ ಬಂಧನ ಉಪನ್ಯಾಸ ತೀರ್ಥಾಟನೆ ರ ಮೇಶನ ಗುಣಗಳಟ್ಟಹಾಸದಲಿ ನೆನೆವುತ ನಿ ರಾಶೆಯಿಂದಿಪ್ಪ ಹರಿದಾಸ ದಾಸರಿಗೆ 1 ಸ್ನಾನ ಜಪ ದೇವತಾರ್ಚನೆ ವೈಶ್ಯದೇವ ಬಲಿ ವಿಧಿ ನಿಷೇಧಗಳು ವಿ ಸಂಹನನ ವೈರಾಗ್ಯ ಶಕ್ತಿ ಶ್ರೀನಿವಾಸನ ಪರಮ ವಿಮಲ ಲೋಕೈಕ ಕ ಲ್ಯಾಣ ಗುಣ ರೂಪ ಕ್ರಿಯೆಗಳನು ಜಡ ಚೇತನದಿ ಧೇನಿಸುತ ಮನದಿ ಹಿಗ್ಗುತ ತುತಿಸಿ ನಲಿವ ಸುಮ ಹಾನು ಭಾವರಿಗೆ ಈರೇಳು ಲೋಕದೊಳು ಇನ್ನು2 ಮಲಿನರಾಗಿಹರು ನೋಳ್ಪರಿಗೆ ಪ್ರತಿ ದಿನದಲ್ಲಿ ಸುಲಭರಂತಿಹರು ದುರ್ಗಮರಾಗಿ ತೋರುವರು ಅಳುವರೊಮ್ಮೊಮ್ಮೆ ಪರವಶರಾಗಿ ಮೈ ಮರೆದು ನಲಿವರೊಮ್ಮೊಮ್ಮೆ ನಗುತಾ ಜಲಜಾಕ್ಷನಮಲ ಮಂಗಳ ಗುಣವ ಕೇಳಿ ಗಂ ಟಲ ಶಿರಗಳುಬ್ಬಿ ಚಪ್ಪಳೆಗಳಂ ಬಾರಿಸುತ ಮುಳುಗಿ ಸುಖ ವನಧಿಯೊಳು ತನು ಪುಳಕೋತ್ಪವದಿ ಇಳೆಯೊಳಗೆ ಸಂಚರಿಪ ಕಲುಷವರ್ಜಿತಂಗೆ 3 ನೋಡುವುದೆ ಹರಿಮೂರ್ತಿ ಕೇಳುವುದೆ ಹರಿಕೀರ್ತಿ ಆಡುವುದೆ ಹರಿವಾರ್ತೆ ಮಾಡುವುದೆ ಹರಿಪೂಜೆ ನೀಡುವುದೆ ಅವಧಾನ ಬೇಡುವುದೆ ಪುರುಷಾರ್ಥ ಕೂಡುವುದೆ ಸಾಯುಜ್ಯವು ದಾಡಿಯಿಂದಲಿ ದನುಜರಳಿದು ಧರಣಿಯನು ತಂದ ಕ್ರೋಢರೂಪನೆ ಲೋಕಕ್ಕೆಲ್ಲ ಆನಂದ ನಾಡಾಡ ದೈವದಂತಿವನಲ್ಲವೆಂದು ಕೊಂ ಡಾಡುತವನಿಯೊಳು ಸಂಚರಿಸುವ ವಿಪಶ್ಚಿತರಿಗೆ 4 ಕುಟಿಲರಹಿತನು ಧರ್ಮಾರ್ಥ ಮುಕುತಿ ಸಂ ಸುರನದಿ ಮುಖ್ಯ ತೀರ್ಥ ವೆಂ ಕಟ ಶೈಲ ಮೊದಲಾದ ಕ್ಷೇತ್ರದಲಿ ಸತ್ಕರ್ಮ ಹಟದಿಂದ ಮಾಳ್ಪರೆಲ್ಲಾ ವಟ ಪತ್ರಶಯನನೊಲುಮೆಯನೆ ಬಯಸುವ ಜಾಂಡ ಕಟಹದ್ಭಹಿವ್ರ್ಯಾಪ್ತನಾದ ಶ್ರೀ ಜಗನ್ನಾಥ ವಿಠಲನಾವ ದೇಶದಿ ಕಾಲದಲ್ಲಿ ಪಾ ಸಟೆಯಿಲ್ಲವೆನುತ ಲಾಲಿಸುತಿಪ್ಪರಿಗೆ5
--------------
ಜಗನ್ನಾಥದಾಸರು
ಎಂದೆಂದೆನ್ನ ಮನದಿಂದ ಅಗಲದಿರೋನಂದ ನಂದನನೆ ಆನಂದ ಮೂರುತಿಯೆ ಪ ಬಹುಕಾಲ ನಿನ್ನ ಶ್ರವಣವೆಂಬ ಹೊನ್ನೋಲೆಯಬಹುಮಾನದಿಂದೆನ್ನ ಕಿವಿಯೊಳಿಟ್ಟುಮಹಿತ ಮಂಗಳಸೂತ್ರವೆಂಬೊ ದಾಸ್ಯವನ್ನು ಮಹದಾನಂದದಿ ಎನ್ನ ಕೊರಳೊಳ್ ಕಟ್ಟಿದೆಯಾಗಿ1 ಸುಲಲಿತ ಸೈರಣೆಯೆಂಬ ಭೂಷಣವಿತ್ತುಸಲಹಿದೆ ಬಹು ಪ್ರೀತಿ ಸಖಿಯೆಂದೆನ್ನಬೆಲೆಯಿಲ್ಲದ ಸುಜ್ಞಾನ ನಿಧಿಯನಿತ್ತುಜಲಜಾಕ್ಷ ಎನ್ನನು ಒಲಿದು ಆಳಿದೆಯಾಗಿ 2 ಎಲ್ಲಿ ನೀ ನಿಲಿಸಿದರೆನಗೇನು ಭಯವಿಲ್ಲಬಲ್ಲೆನೊ ವಿಶ್ವವ್ಯಾಪಕನೆಂಬುದಸಲ್ಲದೊ ಈ ಮುನಿಸೆನ್ನೊಳು ಸಿರಿಕೃಷ್ಣಒಲ್ಲದಿದ್ದರೆ ನಿನ್ನ ಸೆರಗಪಿಡಿದೆಳೆವೆ 3
--------------
ವ್ಯಾಸರಾಯರು
ಎಲೆ ಮನವೆ ಚಲಿಸದಿರು ಕಂಡಕಡೆಗೆ ನಿಲು ನೀನು ಸ್ಥಿರವಾಗಿ ಧ್ಯಾನ ಮಂಟಪದೊಳಗೆ ಪ ಕಲುಷಪೂರಿತವಾದ ಬಲೆಯ ದೂರಕೆ ದೂಡು ಒಲಿದು ರಕ್ಷಿಪುದೆಂದು ಜಲಜಾಕ್ಷನನು ಬೇಡು ಅ.ಪ ಆರು ಮಂತ್ರಿಗಳುಂಟು ಮೂರು ದುರ್ಗಗಳುಂಟು ಮೂರು ಮತ್ತೆರಡಶ್ವ ಸಹಿತ ನೀನು ದೂರ ದೂರದ ಸಿರಿಯ ತರುವೆ ನಾನೆಂದೆನುವೆ ಧೀರ ನೀನೇ ಎಂಬೆ ಮರುಳತನದಿಂದೆ 1 ನಡೆಯೆ ಸತ್ಪಥವೆಂಬೆ ನುಡಿಧರ್ಮವೆಂದೆಂಬೆ ಕುಡುಕನಂತತ್ತಿತ್ತ ಅಲೆಯುತಿರುವೆ ಸಿಡಿಲು ಬಡಿವುದ ಮರೆತು ದುಡುಕಿ ನಿರ್ದಯವಾಂತು ಕೆಡಬೇಡ ಮಾಂಗಿರಿಯ ಅಡಿವಿಡಿದು ಸುಖಿಯಾಗು2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎಲ್ಲಿ ಭಯಗಳು ಹರಿಯ ಭಕುತರಿಗೆ ಇಲ್ಲ ಪ ಇಲ್ಲವೋ ಕಾಣೋ ಎಂದಿಗಾದರು ಮರುಳೆ ಅ.ಪ ಹುಲಿ ಇಲಿಯಾಗುವುದು ತೋಳ ಕೋಳ್ಯಾಗುವುದು | ಕಲಿ ಬಂದು ಹಿತ್ತಲನ್ನೀಗ ಬಳಿವ ಜಲಜಾಕ್ಷನ ಕೃಪೆಯ ಪಡೆದ ದಾಸರಿಗೆ 1 ಕರಡಿ ಕರುವಾಗುವುದು ಉರಿ ಮಂಜು ಆಗುವುದು | ಕರಿ ನಾಯಿಯಾಗುವುದು ಕಂಡವರಿಗೆ | ಭರದಿಂದ ಸುರಿವ ಮಳೆ ನಿಲ್ಲೆನಲು ನಿಲ್ಲುವುದು | ನರಹರಿಯ ನಾಮಗಳ ನಂಬಿ ಭಜಿಪರಿಗೆ 2 ಫಣಿ ಸರಿವೆಯಾಗುವುದು ದಣುವಾಗುತಿಹ ಮಾರ್ಗ | ಕ್ಷಣದೊಳಗೆ ಪೋದಂತೆ ಕಾಣಿಸುವುದು | ಘನ ಪಾಷಾಣಗಳು ತೃಣಸಮವು ಎನಿಸುವುವು | ವನಜಾಕ್ಷನ ಕೃಪೆಯ ಪಡೆದ ದಾಸರಿಗೆ 3 ಕ್ಷುಧೆ ತೃಷೆಯಾಗುದು ಕ್ಷುದ್ರ ಸಂಗವಾಗದು | ಪದೆಪದೆಗೆ ರೋಗಗಳು ಬೆನ್ನಟ್ಟವು | ಉದಯಾಸ್ತಮಾನಗಳೆಂಬ ಭಯ ಸುಳಿಯದು | ಪದಮನಾಭನ ಕೃಪೆಯ ಪಡೆದ ದಾಸರಿಗೆ 4 ಬಾರವು ಭಯಗಳು ಬಂದರೂ ನಿಲ್ಲವು | ಹಾರಿ ಹೋಗುವುವು ದಶ ದಿಕ್ಕುಗಳಿಗೆ | ಘೋರ ದುರಿತಾರಿ ಶ್ರೀ ವಿಜಯವಿಠ್ಠಲನಂಘ್ರಿ | ಸೇರಿದ ಜನರಿಗೆ ಇನಿತು ಭಯವುಂಟೆ5
--------------
ವಿಜಯದಾಸ
ಏನೆಲೆ ಸಖಿ ವಾನರ ಮುಖಿ ನೀನು ಒಳ ಒಳಗೆ ಮಾಡಿದ ಯೋಚನೆ ಪ ಹಳೆಯ ಜೌಳಿಗಳು ಘಳಿಲನೆ ತಂದಿಟ್ಟು ಘನವ ಪೇಳಿಕೊಂಬೆ 1 ಭಕ್ಷ್ಯ ಭೋಜ್ಯ ನಿನ್ನ ಕುಕ್ಷಿ ತುಂಬಿದಾರು ಲಕ್ಷ್ಯವಿಲ್ಲದೆ ನಮ್ಮಾ- ನಾಕ್ಷೇಪಿಸುತ್ತಿರುವೆ 2 ಹಪ್ಪಳಾವು ಹತ್ತು ಹೋಳಿಗೆ ಇಪ್ಪತ್ತು ತಪ್ಲೇಲಿ ತಿಳಿ ತುಪ್ಪ ತಪ್ಪದೆ ಮಾಯವಾಯ್ತು 3 ಬಡವರಮ್ಮ ನಾವು ಬಡಿವಾರವೆಮಗಿಲ್ಲ ನಡುಬೀದಿಗೆ ಕಾಲ- ಚಾಚದಿರತ್ತಿಗೆ 4 ಜಲಜಾಕ್ಷ ಗುರುರಾಮ | ವಿ- ಠಲನಾ ಸ್ಮರಿಸುತ್ತಾ ಕಲಹಕಾರಿ ನೀನು ಎಲೆಯ ನೋಡಿವುಣ್ಣೆ 5
--------------
ಗುರುರಾಮವಿಠಲ
ಏಳಯ್ಯ ಶ್ರೀ ಲಕ್ಷ್ಮೀರಮಣ ಸುರನÀುತ ಚರಣ ಏಳು ಶ್ರೀ ನೀಲಕಂಠನ ಮಿತ್ರ ಸುಚರಿತ್ರ ಏಳು ಶ್ರೀ ಭಾಗೀರಥೀ ಪಿತನೆ ಮತಿಯುತನೆ ಏಳು ಶ್ರೀ ಕೃಷ್ಣರಾಯ ಸ್ವಾಮಿ ಏಳಯ್ಯ ಬೆಳಗಾಯಿತು ಪ ನಸುಗೆಂಪಾಗಿ ತಾರಕಿಗಳಡುಗುತಿದೆ ಬೊಂಪು ಹರಿದೋಡುತಿದೆಕೋ ಸೊಂಪಡಗುತಿದೆ ಕುಮುದ ಕಮಲವರಳುತಿದೆ ನಾಗ ಸಂಪಿಗೆಯ ಬನದಿ ಸ್ವರ ಗೈಯುತಿದೆ ಮರಿದುಂಬಿ ಸಂಪತ್ತು ಬಡವಗೆ ಬರುವಂತೆ ರವಿ ಬಿಂಬ ಸೊಂಪಿ ನಿಂದೆಸೆಯುತಿದೆಕೋ ||ಸ್ವಾಮಿ|| 1 ಹಲವುಮೃಗ ಜಾತಿಗಳು ಹಳುವನಡ ಹಾಯುತಿವೆ ಫಲ ಪುಷ್ಪಚಯವು ಪಲ್ಲವಿಸಿ ಪಸರಿಸುತಲಿವೆ ಗಿಳಿ ವಿಂಡು ನಲಿಯುತಿದೆ ನವಿಲು ಜೇಂಕರಿಸುತಿವೆ ಹೊಲ ಮನೆಗಳೆಲ್ಲ ಹಸನಾಗಿ ಕಾಣಿಸುತಲಿವೆ ಸುಳಿಗಾಳಿ ಸುಳಿಯುತಿದೆ ಜಲಜಾಕ್ಷನುಪ್ಪವಡಿಸಾ ||ಸ್ವಾಮಿ|| 2 ಹಕ್ಕಿಗಳು ಹಾರುತಿದೆ ಕುಕ್ಕುಟವು ಕೂಗುತಿದೆ ನಕ್ಷತ್ರ ಪತಿಯ ಪ್ರಭೆ ಮಾಸುತಿದೆ ಸುರಭಿ ಬಲು ರಕ್ಕಸಾಂತರನೆವಳು ಮನೆಮನೆ ಬಿಡದೆ ಅಮ್ಮಿಯನು ಹುಡುಕುತಿವೆ ಚೊಕ್ಕ ಬೆಳಗಾಯಿತಿದೆ ಕೋ ||ಕೃಷ್ಣ || 3 ಪತಿವ್ರತೆಯರೆದ್ದು ಪುರುಷನ ಚರಣಕ್ಕೆರಗಿ ಚಮ ತ್ಕøತಿಯಿಂದ ಮುಖ ಮಜ್ಜನವಮಾಡಿ ಪಣೆಗಿಟ್ಟು ದಧಿ ಮಥಕನುವಾಗಿ ಕುಳಿತು ಅತಿಶಯ ದೊಳಗೆಲ್ಲ ಮನೆವಾರ್ತೆಯನು ಮುಗಿಸಿ ನಿಜ ಮತ ವಿಡದು ಭಕ್ತಿಯಲಿ ಗಿಂಡಿಲುದಕವ ತುಂಬಿ ನೀನು ಉಪ್ಪವಡಿಸ 4 ಮದ್ದು ಮಂತ್ರವು ಸಿದ್ದಿಸುವ ಕಳವಿನೊಳಗಿರ್ದ ಚೋರರಿ ಗೆದೆಯ ಧೈರ್ಯಗುಂದುವ ಸಮಯ ಉದ್ಯೋಗವಂತರಿಗೆ ಎಚ್ಚರಿಕೆ ಸಮಯ ದರಿದ್ರರಿಗೆ ನಿದ್ದೆ ಸಮಯ ಬುದ್ದಿಯುತರಾದ ಬುಧಬಾಲರಿಗರ್ಥಗ್ರಂಥ ದ್ಯಾನ ಶಾಸ್ತ್ರ ಪುರಾಣಗಳ ಬಹುವಿದ್ಯೆ ಪಠಿಸುವ ಮುದ್ದು ಗೋಪಾಲಕೃಷ್ಣ 5 ವ್ಯಾಸ ವಾಲ್ಮೀಕಿ ಶುಕನಾರದನು ಶೌನಕ ಪರಾಶರ ವಶಿಷ್ಟ ವೈಶಂಪಾಯ ಕಣ್ವ ವಿಶ್ವಾಮಿತ್ರ ಗೌತಮ ಭರದ್ವಾಜ ಸನಕ ದೂರ್ವಾಸ ಕೌಶಿಕ ಕಪಿಲರು ಕೌಶ್ಯಪ ದಧೀಚಿ ಭಾರ್ಗವರಗಸ್ತ್ಯ ಋಷಿ ಈ ಸಮಸ್ತಾದಿ ಹರಿಯೇ || ಸ್ವಾಮಿ || 6 ಜಾಂಬವ ವಿಭೀಷಣಾಶ್ವತ್ಥಾಮ ಹನುಮಂತ ಜಂಭಾರಿಸುತ ಧನಂಜಯ ಬಲಿಷ್ಠಹಲಾದರೆಂಬಸದ್ಭಕ್ತರುಗಳು ಅಂಬುಜೋದ್ಭವ ಮುಖ್ಯರಮರ ಗಂಧರ್ವಾದಿ ತುಂಬುರ ಭುಜಂಗ ಭೂಸುರರೆಲ್ಲರೊಂದಾಗಿ ಬಿಡದ ಹಂಬಲಿಸುತೈದಾರೆ ಹರಿಯೆ || ಸ್ವಾಮಿ || 7 ಗಂಗೆ ಗೋದಾವರಿಯ ಭೀಮರತಿವರದೆ ವರ ತುಂಗ ಭದ್ರೆಯು ಯಮುನೆ ಕಾವೇರಿ ಸಿಂಧು ಅಂಗನೆಯರೆಲ್ಲರೂ ಕೂಡಿ ರಂಗು ಮಾಣಿಕದ ಆಭರಣಗಳಲಂಕರಿಸಿ ಹಿಂಗದೆಲ್ಲರು ನೆರೆದು ಹರಿ ನಿಮ್ಮ ಬಾಗಿಲೋಳು ಮಂಗಳಭಿಷೇಕಕೆಂದು ಸ್ವಾಮಿ 8 ಕರುಗಳನು ಕಾಯ್ದ ಕಾರುಣ್ಯ ಮೂರುತಿ ಏಳು ವರ ಪಾಂಡುರಂಗ ವಿಠಲ ಹರಿಸುತನ ಹಯವರೂಥವ ಹರಿಸಿದವನೆ ಏಳು ಹರಿಸುತನ ಸುತನ ಸುತನ ಕಾಯ್ದವನೆ ಏಳು ಹರಿಸುತನ ಕೋಣೆ ಲಕ್ಷ್ಮೀರಮಣನೆ ಏಳು ಶ್ರೀ ಹರಿಯೆ ನೀನು ಉಪ್ಪವಡಿಸಾ ||ಕೃಷ್ಣ || 9
--------------
ಕವಿ ಪರಮದೇವದಾಸರು
ಒಳಿತಲ್ಲ ನಿನ್ನ ತಳ್ಳಿ ಅಭಿಮಾನದೇವಿ ಎಲೆ ತಾಯೆ ನಮಿಸುವೆನು ದೂರಾಗೆ ಮಾಯಿ ಪ ಬಗೆಗೊಂಡು ಬ್ರಹ್ಮನ ತಲೆಯೊಂದು ಕಳೆದಿಟ್ಟು ಹೆಗಲೇರಿ ಶಿವನ ಸುಡುಗಾಡದಿಳಿಸಿದಿ ಜಗರಕ್ಷಕನನು ಹತ್ತು ಅವತಾರದೆಳಸಿದಿ ನಿಗಯಿಟ್ಟಂದ್ರನ ಮೈ ಛಿದ್ರ ಮಾಡಿಟ್ಟಿ 1 ಸೆರೆಹಿಡಿದು ತಾರಕನ ಆರೆದಿನದವನಿಂ ಕೊಂದಿ ಕರಪಿಡಿದು ಹಿರಣ್ಯನ ಅಸಮವರ ಸುಟ್ಟಿ ನೆರೆಯಾಗಿ ರಾವಣ ಆರುಕೋಟ್ಯಾಯುಷ್ಯ ಉರುತರದ ಸಿರಿಯೆಲ್ಲ ಮಾಯ ಮಾಡಿಟ್ಟಿ 2 ಸೆಳೆಕೊಂಡು ಕುರುಪನ ಕುಲನಾಶ ಮಾಡಿಟ್ಟಿ ಒಲಿದು ಕಲಿಯುವಗೆಲ್ಲ ನುಂಗಲ್ಹತ್ತಿರುವಿ ಸುಲಭದೆನ್ನನು ಬಿಟ್ಟು ಅಗಲದಿರ್ದರೆ ನಿನಗೆ ಜಲಜಾಕ್ಷ ಶ್ರೀರಾಮನೊನರುಹಂಘ್ರ್ಯಾಣೆ 3
--------------
ರಾಮದಾಸರು
ಜಗದ ಜೀವರನುದರದಲಿಟ್ಟು ಕರುಣಾಮೃತದಿ | ಬಗೆಬಗೆಲಿ ಸಲಹುಲೇಹ ತಾಯಿ ನೀನೇ | ಮಗುಳೆ ಮೂಲ ಪ್ರಕೃತಿಯಲಿ ಬೀಜವಿಟ್ಟು ಮೂ | ಜಗವ ಪುಟ್ಟಸುತಿಹ ತಂದೆ ನೀನೇ | ಮಿಗಿಲಾಗಿ ಬಂದ ದುರಿತಂಗಳ ನಿವಾರಿಸುವ | ಭಾಗವತರಿಗೆ ಅನಿಮಿತ್ತ ಬಂಧು ನೀನೇ 1 ಸುಗಮದಧಿ ದೈವತಾ ರೂಪದಲ್ಲಿ ಕರಣೇಂದ್ರಿ- ನಿಗಮಾಗ ಮಗಳಿಂದ ಸ್ತುತಿಸುತ ಸುಜ್ಞಾನ | ದುಗಮದಿರುವ ಗುರುರೂಪ ನೀನೇ | ಭಕುತಿಯಲಿ ವಿಧಿಮರುತ ಶಿವಗರುಡ ಫಣಿಪೇಂದ್ರಾ | ದಿಗಳು ಪೂಜಿಪ ಕುಲದೈವ ನೀನೇ 2 ಹಲವು ಜನುಮದಿ ಸಂಗಡಿಗನಾಗಿ ಸಮತೆಯಲಿ | ಸಲಿಸಿ ಬಯಕೆಯ ಕಾವ ಗೆಳೆಯ ನೀನೇ | ಒಲಿದನ್ನ ವಸ್ತ್ರ ಸಂಪದ ಸಕಲವರ ಪುಣ್ಯ | ಫಲದಂತೆ ನೀಡುತಿಹ ಸ್ವಾಮಿನೀನೇ | ಜಲಜಾಕ್ಷ ಅದುಕಾರಣ ಎನಗೆ ಸಕಲವು ನೀನೇ | ಸಲಹು ಭಕುತಿಯನಿತ್ತು ಗುರು ಮಹಿಪತಿ ಪ್ರಭು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಲಜಾಕ್ಷ ಯಾಚಿಸುವೆ ಚಲುವ ಚರಣ ತೋರೋ ಸುಲಭದಿ ಹಯವದನ ಪ [ಶಶಿಯೊಲಿರುವದರಿಧರ] ಅಕ್ಷ ಸುಬೋಧ ಪುಸ್ತಕಧರ ವಸುಮತಿ ರಮಣನೆ ನಿನ್ನ ಸಾಸಿರ ನಾಮದಲಿ ಸೋಸಿಲಿ ನಾ ಪ್ರಾರ್ಥಿಸುವೆ 1 ವರವಾದಿ ಜಯದ ವಿಮುಕ್ತಿ ಪ್ರದಾತ ಅನುದಿನ ನಿನ್ನ ಆರೆರಡು ಅ ಕ್ಷರದ ಮಂತ್ರವನೂ ಪ್ರೇಮದಿ ನಾ 2 ಮುಖದೊಳ್ ಸಕಲಾಗಮ ವಿದ್ಯಾ ಸುಘೋಷ ಮಾಡಿ ಆ ಕಮಲಜ ಭವಮುಖರಿಂದ ಅಮೃತದಲಿ [ಸ್ತುತಿಸಿಹ ಅಭಿಷಿಕ್ತನೆ] ನೀನೆನಿಸಿ ನರಹರೆ 3
--------------
ಪ್ರದ್ಯುಮ್ನತೀರ್ಥರು
ತಡಿಯೆಲೆ ಮನವೆ ನೀ ಬಡಬಡಿಸುವುದ್ಯಾಕೋ ಕೆಡಕುಯೋಚನೆಬಿಟ್ಟು ಕಡುಶಾಂತನಾಗೊ ಪ ಜಡಮತಿತನನೀಗಿ ಬಿಡದೆ ದೃಢದಿ ಜಗ ದೊಡೆಯನಡಿಯ ಭಜಿಸು ಕೊಡುವನು ನಿಜಸುಖ ಅ.ಪ ವಂಚಕನಾಗದೆ ವಾಂಛಲ್ಯಳಿದು ಮನ ಕಿಂಚಿತ್ತಗಲದೆ ನಿರ್ವಂಚಕ ಚಿತ್ತನಾಗೊ ವಂಚನಿಲ್ಲದೆ ಹರವಿರಂಚಿಗಳ್ನೂತನ ಪ್ರ ಪಂಚದೊಳಗೆ ನಿನ್ನನಚಲ ಸುಖದಿ ಕಾಯ್ವ 1 ನಿಷ್ಠುರನುಡಿ ಬಿಡು ದುಷ್ಟತ್ವ ದೂರಮಾಡು ಬಿಟ್ಟಗಲದೆ ಮಹ ಶಿಷ್ಟರೊಡನಾಡೊ ಅಷ್ಟಮೂರುತಿಪಾದ ನಿಷ್ಠೆಯ ಭಜಿಸು ನಿ ನಿನ್ನಷ್ಟದಖಿಲವರ ಕೊಟ್ಟು ರಕ್ಷಿಸಸನೆಲೊ 2 ಹಲವು ಭ್ರಾಂತಿ ಬಿಡು ಮಲಿನಗುಣವ ದೂಡು ಹೊಲೆಯ ಮನಸಿನ ಮಹ ಕಲ್ಮಷ್ಹಸನಮಾಡು ಜಲಜಾಕ್ಷನಂಘ್ರಿಯಂ ನಿಲದೆ ಭಜಿಸು ನಿನ ಗೊಲಿದು ನಿಜಸುಖವಿತ್ತು ಸಲಹುವ ಶ್ರೀರಾಮ 3
--------------
ರಾಮದಾಸರು
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ
ದೇವಿ ವಿಶಾಲಾಕ್ಷಿ ತಾಯೆ ಪಾವನೆ ಜಲಜಾಕ್ಷಿ ಕಾಯೆ ಪ ಪಾವಕ ನೇತ್ರ ಪ್ರಿಯೆ ಕಾಮಾಕ್ಷಿ ಅ.ಪ ಅನ್ನಪೂರ್ಣೇಶ್ವರಿ ಶಿವಕಾಮೇಶ್ವರಿ ಪನ್ನಗ ಕಬರಿ ರನ್ನೆ ತಳೋದರಿ ಕರುಣಾಲಹರೀ ಸಹೋದರಿ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್