ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರಿತು ಭಜಿಪರ್ಯಾರಯ್ಯ ರಂಗಯ್ಯ ನಿನ್ನ ಪ ಸಿರಿದೇವಿಯು ಕಿರುಬೆರಳಲ್ಲಿರುವ ಸೊಬಗನ್ನುಅರಿಯಲಾರಳೊ ದೇವಅ ಇಂದಿರಾದೇವಿಯು ಅರಿಯಲಾರಳು ದೇವಬೃಂದಾರಕರೆಲ್ಲ ನಿಂದು ಯೋಚಿಪರುನಂದತೀರ್ಥರ ಮತದೊಳಗೆ ಬಂದವರೆಲ್ಲಎಂದಿಗಾದರು ಪರಮಾನಂದ ಪೊಂದುವರು1 ಮಾನವರು ಹೀನಮಾರ್ಗದೊಳು ಮುಳುಗಿಹರುಜ್ಞಾನಿಗಳು ನಿಂದು ಧ್ಯಾನಿಪರು ನಿನ್ನನೀನೆ ದಯಮಾಡಿ ಸಲಹೊ ಎನ್ನನು ಕೃಷ್ಣಕಾನನದೊಳು ಕಣ್ಣುಮುಚ್ಚಿ ಬಿಟ್ಟಿಹರೊ 2 ಜಲದೊಳಗಿನ ಕಪ್ಪೆ ಜಲದ ಸವಿಯರಿಯದುಜಲದ ಸುಗಂಧವ ಜಲವರಿಯದುನೆಲೆಯ ಕಂಡವರ್ಯಾರು ನೆಲೆಯಾದಿಕೇಶವನೆಸುಲಲಿತ ತತ್ತ್ವವನು ಸುಲಭ ಮಾರ್ಗದಿ ತೋರೊ 3
--------------
ಕನಕದಾಸ
ಸಿದ್ಧಾಂತವಿದು ನೋಡಿ ಸದ್ಗುರುವಿನ ಕೃಪೆಯು ಬುದ್ಧಿವಂತರು ಬಲ್ಲರಾಧ್ಯಾತ್ಮ ಸುಖವು ಧ್ರುವ ಕಾಲಿಲ್ಲದಾಕಳವು ಬಾಲಮುಖದಲಿ ಬಂದು ಕಾಳರೂಪದ ಹುಲಿಯನೆ ನುಂಗಿತು ಮೇಲವರಿಯಲಿ ಬಂದು ಜಲದೊಳಗಿನ ಕಪ್ಪೆ ಮೂಲ ಸರ್ಪದ ಹೆಡೆಯ ನುಂಗಿದದು ನೋಡಿ 1 ಬಾಲ ಇಲ್ಲದ ಇಲಿಯು ಜಾಲಹಾಕುತ ಬಂದು ಸ್ಥೂಲ ಬೆಕ್ಕಿನ ತಲೆಯನೆ ಮುರಿಯಿತು ನಾಲಿಗಿಲ್ಲದ ಮೊಲವು ನಿಲುಕಿ ಜಪವ ಹಾಕಿ ಭಲೆ ಶ್ವಾನನ ಗಂಟಲ್ಹಿಡದಿಹುದು ನೋಡಿ2 ದಿವ್ಯ ಯೋಗದ ಮಾತು ಕಿವಿ ಇಲ್ಲದವಕೇಳಿ ಕಣ್ಣಿಲ್ಲದವ ಕಂಡು ಬೆರಗಾದನು ಕೌತುಕವು ಕಂಡು ಮಹಿಪತಿಯು ತನ್ನೊಳು ತಾನು ತ್ರಾಹಿ ತ್ರಾಹಿಯಿಂದ ಮನದೊಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು