ಒಟ್ಟು 6 ಕಡೆಗಳಲ್ಲಿ , 6 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಮದ್ರಾಮಾಯಣ ಮಂಗಳಂ ಮಂಗಳಂ ಮಹಾನುಭಾವಗೆ ಮಂಗಳಂ ಲೋಕಮಾತೆ ಸೀತೆಗೆ ಮಂಗಳಂ ಶತ್ರುಘ್ನ ಭರತಗೆ ಮಂಗಳಂ ಸೌಮಿತ್ರಿರಾಮಗೆ ಪ ದಶರಥನ ಉದರದಲಿ ಜನಿಸುವೆನೆಂದು ವರವನಿತ್ತ ರಾಮಚಂದ್ರಗೆ 1 ಭರತಸಹವಾಗಿ ಜನಿಸಿದ ರಾಮಚಂದ್ರಗೆ 2 ಜಾತಕರ್ಮವು ನಾಮಕರಣವು ಚೌಲ ಉಪನಯನಗಳ ಮಾಡಿ ವಿಶ್ವಾ ಮಿತ್ರರೊಡನೆ ಸಕಲ ವಿದ್ಯವ ಕಲಿಯೆ ಪೊರಟ ರಾಮಗೆ3 ಬಲ ಅತಿಬಲವೆಂಬ ವಿದ್ಯವ ವಿಶ್ವಾಮಿತ್ರರೊಡನೆ ಕಲಿತು ಅಶ್ವಿನಿದೇವತೆಗಳಂದದಿ ಬಂದ ಸೌಮಿತ್ರಿರಾಮ್ರಗೆ 4 ಭರದಲಿ ಅನಂಗನಾಶ್ರಮವನು ಪೊಕ್ಕು ಸರಯು ನದಿಯನು ದಾಟಿ ಬರದೂಷಣಜಾ ದೇಶದೊಳಗುಳ್ಳ ತಾಟಕಾಂತಕ ರಾಮಚಂದ್ರಗೆ 5 ಅಸ್ತ್ರವನ್ನು ಗ್ರಹಿಸಿ ಬೇಗನೆ ಸಿದ್ಧಾಶ್ರಮಕ್ಕೆ ನಡೆತಂದು ಸುಭಾಹುವ ನು ಸಂಹರಿಸಿ ಭರದಿ ಮಾರೀಚನ ಹಾರಿಸಿದ ರಾಮಗೆ 6 ವಿಶ್ವಾಮಿತ್ರರ ಯಜ್ಞ ಪಾಲಿಸಿ ಕುಶನ ವಂಶವಿಸ್ತಾರವ ಕೇಳಿ ಆಸರ [ಯು]ನದಿಯ ದಾಟಿ ಭರದದಿತಿಯಾಶ್ರಮಕೆ ಬಂದ ರಾಮಗೆ 7 ಮರುತ್ತ ಜನ್ಮವ ಕೇಳಿ ಅಹಲ್ಯೆಯನ್ನು ಪಾವನ ಮಾಡಿ ಬಂದ ರಾಮಗೆ 8 ಜನಕ ವಂದಿಸಿ ಧನ್ಯನೆನ್ನಲು ವಿಶ್ವಾಮಿತ್ರರು ವೃತ್ತಾಂತ ಹೇಳಿ ಧನುವ ತರಿಸಲು ನೋಡಿ ಕ್ಷಣದಿಮುರಿದಾ ರಾಮಚಂದ್ರಗೆ 9 ಕರವ ಪಿಡಿದು ಪೊರಟ ರಾಮಗೆ 10 [ಬೇಗ]ಮಾತಾಪಿತರ ಮಾತನಡೆಸಿ ಪ್ರೀತಿತೋರಿದ ಸೀತಾರಾಮಗೆ 11 ಕಂಡವರ ಮನದಲ್ಲಿ ರಮಿಸುವ ಪುಂಡರೀಕಾಕ್ಷನಿಗೆ ರಾಜ್ಯವ ಕೊಡುವೆನೆ[ನುತ] ದಶರಥ ವ್ರತವನಾಚರಿಸಿದ ರಾಮಚಂದ್ರಗೆ 12 ಕೈಕೆ ಪೂರ್ವದ ವರವ ಸ್ಮರಿಸಿ ಭರತನಿಗೆ ರಾಜ್ಯವನು ಬೇಡಿ ರಾಮನರ ಣ್ಯಕ್ಕೆ ಪೋಗೆನೆ ಬೇಗ ಪೊರಟ ಶ್ರೀರಾಮಚಂದ್ರಗೆ 13 ಮಾತೆಯನು ಬಹುವಿಧದಿ ಮನ್ನಿಸಿ ಪಿತನ ಪ್ರತಿಜ್ಞೆಯನು ಪಾಲಿಸಿ ಸೀತೆಲಕ್ಷ್ಮಣರೊಡನೆ ವನವಾಸಕ್ಕೆ ಪೊರಟ ರಾಮಚಂದ್ರಗೆ 14 ಪುರದ ಜನರನು ಸಂತವಿಟ್ಟು ಗುಹನ ಸಖ್ಯದಿ ನದಿಯ ದಾಟಿ ಭರದಿ ಭಾರದ್ವಾಜರ ಕಂಡು ಚಿತ್ರಕೂಟಕ್ಕೆ ಬಂದ ರಾಮಗೆ 15 ಅರಸು ಸ್ವರ್ಗವನೈದೆ ಭರತನಕರಸಿ ಕರ್ಮವನೆಲ್ಲ ಕಳೆದು [ವರ] ಮಾತೆಗೆ ಭಾಷೆ ಕೊಟ್ಟು ತಮ್ಮನಾಲಿಂಗಿಸಿದ ರಾಮಗೆ 16 ಭರತನಂಕದೊಳಿಟ್ಟು ಪ್ರೇಮದಿ ಮನ್ನಸಿ ಮೃದುವಾಕ್ಯದಿಂದ ಗುರುಗಳನುಮತದಿಂದ ಪಾದುಕೆಯಿತ್ತು ಕಳುಹಿದ ರಾಮಚಂದ್ರಗೆ 17 ಬೇಗನೆ ಚಿತ್ರಕೂಟವ ಬಿಟ್ಟು ಅತ್ರಿ ಯಾಶ್ರಮಕೆ ಬಂದು ಅಂಗರಾಗಾರ್ಪಣವನೆಲ್ಲ ಅಂಗೀಕರಿಸಿದ ರಾಮಚಂದ್ರಗೆ 18 ದಂಡಕಾರಣ್ಯವನ್ನು ಪೊಕ್ಕು ಉದ್ದಂಡವಿರಾಧನ್ನ ಕೊಂದು ಕಂಡು ಇಂದ್ರನ ಶರಭಂಗರಿಗೆ ಮುಕ್ತಿಯನಿತ್ತ ಶ್ರೀರಾಮಚಂದ್ರಗೆ 19 ಋಷಿಗಳಿಗೆ ಅಭಯವನು ಇತ್ತು ಲೋಕಮಾತೆಯ ನುಡಿಯ ಕೇಳಿ ಋಷಿಮಂಡಲವನು ಪೊಕ್ಕು ಬಂದು ಸುತೀಕ್ಷ್ಣರ ಕಂಡ ರಾಮಗೆ 20 ಅಸ್ತ್ರವನು ಕೊಡಲು ಗ್ರಹಿಸಿ ಪಂಚವಟಿಗೆ ಬಂದ ರಾಮಗೆ 21 ಶೂರ್ಪನಖಿ ರಘುಪತಿಯ ಮೋಹಿಸೆ ಕರ್ಣನಾಸಿಕವನ್ನು ಛೇದಿಸಿ ದುರುಳ ಖರದೂಷಣರ ಕೊಂದು ಸತಿಯನಾಲಿಂಗಿಸಿದ ರಾಮಗೆ 22 ದುರುಳ ಖಳನು ಜಾನಕಿಯ ಕದ್ದೊಯ್ಯೆ ಮಾರಿಚನ್ನ ಕೊಂದು ಬರುತ ಮಾರ್ಗದಿ ಗೃಧ್ರರಾಜಗೆ ಮುಕ್ತಿಯಿತ್ತ ಶ್ರೀರಾಮಚಂದ್ರಗೆ 23 ಕಬಂಧನಾ ವಾಕ್ಯವನು ಕೇಳಿ ಮಾರ್ಗದಲಿ ಅಯಮುಖಿಯ ಭಂಗಿಸಿ ಶಬರಿ ಭಕ್ತಿಯೊಳಿತ್ತ ಫಲವನು ಸವಿದು ಮುಕ್ತಿಯನಿತ್ತ ರಾಮಗೆ 24 ಸೀತೆಯರಸುತ ಮಾರ್ಗದಲಿ ಋಷ್ಯಮೂಕಪರ್ವತವ ಸೇರಿ ಪಂ ಪಾತೀರದಿ ತಮ್ಮನೊ[ಂದಿ]ಗೆ ನಿಂತ ಶ್ರೀರಘುರಾಮಚಂದ್ರಗೆ 25 ಪಂಪಾಪುಳಿನದ ವನವಕಂಡು ಪಂಕಜಾಕ್ಷಿಯ ನೆನೆದು ವಿರಹ [ತಾಪದರೆ] ಬಂದ ಆಂಜನೇಯಗೆ ಸಖ್ಯ ನೀಡಿದ ರಾಮಚಂದ್ರಗೆ 26 ಅಭಯವನು ಇತ್ತು ರವಿಜಗೆ ಏಳು ತಾಳೇಮರವ ಛೇದಿಸಿ ದುಂ ದುಭಿಯ ಕಾಯವನು ಒಗೆದ ಇಂದಿರಾಪತಿ ರಾಮಚಂದ್ರಗೆ 27 ಇಂದ್ರಸುತನು ರವಿಜನೊಡನೆ ದ್ವಂದ್ವಯುದ್ಧವ ಮಾಡುತಿರಲು ಒಂದುಬಾಣದಿಂದ ವಾಲಿಯ ಕೊಂದು ಕೆಡಹಿದ ರಾಮಚಂದ್ರಗೆ 28 ಮುದ್ರೆಯುಂಗುರವಿತ್ತು [ಅ]ಸಾಧ್ಯ ಇವನೆಂತೆಂದ ರಾಮಗೆ 29 ಬೆಳೆದ ಹನುಮಗೆ 30 ಶತ್ರುಪಟ್ಟಣವ ಕಂಡು ಛಾಯೆಯ ಕುಟ್ಟಿ ಸುರಚಿಯುಪಾಯದಿಮನ್ನಿ ಸುತ್ತ ಮೈನಕನ ಭರದಲಿ ಲಂಕಿಣಿಯನಡಗಿಸಿದ ಹನುಮಗೆ 31 [ವೀರ] ಹನುಮಗೆ 32 ದುರುಳ ರಾ ವಣನ ನಿಂದಿಸಿ ಪುರವಸುಟ್ಟಾ ವೀರಹನುಮಗೆ 33 ಸೀತೆಯೊಡನೆ ಗುರುತಕೇಳಿ ಸಮುದ್ರತೀರಕೆ ಬಂದು ಬೇಗನೆ ಜಾಂಬ ವಂತ ಅಂಗದರ ಕೂಡಿ ಮಧುವನವ ಭಂಗಿಸಿದ ಹನುಮಗೆ 34 ಕಂಡೆ ಲೋಕಮಾತೆಯನನ್ನೆನ್ನುತ ಬಂದು ಮುದದಿ ವಂದಿಸಿ ಇತ್ತ ಹನುಮನನಾಲಿಂಗಿಸಿದವಗೆ 35 ಬಂದ ರಾಮಗೆ 36 [ಭಕ್ತ] ವಿಭೀಷಣಗೆ ಅಭಯವನಿತ್ತು ಶರಧಿಗೆ ಸೇತುವೆಯನ್ನು ಬಂಧಿಸಿ ಮುತ್ತಿ ಲಂಕಾಪುರವ ಸಂಧಿಗೆ ಅಂಗದನ ಕಳುಹಿಸಿದ ರಾಮಗೆ 37 ಇಂದ್ರ[ಜಿತ್ತು]ವೊಡನೆ ಕಾದಿ ಸರ್ಪಾಸ್ತ್ರದಿಂದ ಬಿಡಿಸಿಕೊಂಡು [ಆ]ದುರುಳ ರಾವಣನ ನಡುಗಿಸಿ ಕಿರೀಟವನು ಭಂಗಿಸಿದ ರಾಮಗೆ 38 ಕುಂಭಕರ್ಣನ ತುಂಡುತುಂಡಾಗಿ ಕೊಂದುಕೆಡಹಿದ ರಾಮಚಂದ್ರಗೆ 39 ಕೊಂದು ವಜ್ರದಂಷ್ಟ್ರ ಆಕಂಪ ದೇವಾಂತಕ ನರಾಂತಕರನ್ನು ಮ ಹೋದರ ಮಹಾಪಾಶ್ರ್ವ ಅತಿಕಾಯ ತ್ರಿಶಿರಸ್ಸನ್ನು ಕೊಂದ ರಾಮಗೆ 40 ಮಾಯೆಯುದ್ಧದಿ ಮೇಘನಾಥನು [ಅನುಜನ] ಬ್ರಹ್ಮಾಸ್ತ್ರದಲಿ ಕಟ್ಟಲು ವಾಯುನಂದನನಿಂದ ಸಂಜೀವನವ ತರಿಸಿದ ರಾಮಚಂದ್ರಗೆ 41 ಮಾಯಾಸೀತೆಯ ಶಿರವನರಿಯಲು ವಿಭೀಷಣನ ಉ ಪಾಯದಿಂದ ಇಂದ್ರಜಿತ್ತು ಶಿರವಕಡಿದ ತಮ್ಮನಾಲಂಗಿಸಿದ ರಾಮಗೆ 42 ಮೂಲಬಲವನು ಕಡಿದು ರಾವಣನೊಡನೆ ಯುದ್ಧವ ಯೋಚಿಸೆ ಕಡಿದ ರಾಮಗೆ 43 ರಾವಣಾನೆಂಬ ಗಂಧಹಸ್ತಿಯ ರಾಮಕೇಸರಿ ಬಂದು ಮುರಿಯಲು ಸುರರು ಶಿರದಿ ಧರಿಸಿದ ರಾಮಚಂದ್ರಗೆ 44 ವಿಭೀಷಣಗೆ ಪಟ್ಟವನು ಕಟ್ಟಿ ಸೀತೆಯೊಡನೆ ಪ್ರತಿಜ್ಞೆ ಮಾಡಿ ರೆ ಬ್ರಹ್ಮರುದ್ರಾದಿಗಳು ಸ್ತುತಿಸಲು ತಂದೆಗೆರಗಿದ ರಾಮಚಂದ್ರಗೆ 45 ಸೀತೆಯಂಕದೊಳಿಟ್ಟು ಕಪಿಗಳಸಹಿತ ಪುಷ್ಪಕವೇರಿ ಭರದಿ [ಬ ರುತ್ತ] ಭಾರದ್ವಾಜರಿಗೆರಗಿ ಭರತನ ಮನ್ನಿಸಿದ ರಾಮಗೆ 46 ಕೈಕೆಸುತ ಕೈಮುಗಿದು ಕಿಶೋರ ಭಾರವ ತಾಳಲಾಗದೆಂದಾ ಳುತ [ಲಾ]ಯಿತ್ತ ರಾಜ್ಯವನ್ನು ಕೊಡಲು ಗ್ರಹಿಸಿದ ರಾಮಚಂದ್ರಗೆ 47 ಉಟ್ಟ ಮಡಿಯ ಜಟೆಯನುತಾ ಶೋಧಿಸೆ ಸೀತೆ ಸಕಲಾಭರಣ ತೊಟ್ಟು ಸುಗ್ರೀವ ಸಕಲರೊಡನೆ ರಥವನೇರಿದ ರಾಮಚಂದ್ರಗೆ 48 ಸರಮೆಪತಿ ಸೌಮಿತ್ರಿ ಚಾಮರ ಪಿಡಿಯೆ ಶತ್ರುಘ್ನ ಛತ್ರಿಯನು ಭರತ ಸಾರಥ್ಯವನು ಮಾಡಲು ಪುರಕೆತೆರಳಿದ ರಾಮಚಂದ್ರಗೆ 49 ರಾಜಗೃಹವನು ತೋರಿ ರವಿಜಗೆ ಶರಧಿಯುದಕಗಳೆಲ್ಲ ತರಿಸಿ [ವಿ ರಾಜಿಸಿ] ಪೀಠದಿ ಸೀತೆಯೊಡನೆ ವೊಪ್ಪಿದಾ ರಘುರಾಮಚಂದ್ರಗೆ 50 ವಸಿಷ್ಠ ಮೊದಲಾದ ಸಪ್ತ ಋಷಿಗಳು ಲಕ್ಷ್ಮೀಪತಿಗಭಿಷೇಕ ಮಾಡಲು ರಾಮಚಂದ್ರಗೆ 51 ಪಾದ ಪಿಡಿದಿಹ ರಾಮಚಂದ್ರಗೆ
--------------
ಯದುಗಿರಿಯಮ್ಮ
ಅಧ್ಯಾಯ ಎರಡು ಪದ:ರಾಗ:ಯರಕಲಕಾಂಬೋದಿ ತಾಳ:ಬಿಲಂದಿ, ಸ್ವರ ಷಡ್ಜ ದೇವಕಿಯಲಿ ಅವತರಿಸಿದ ದೇವಾಧೀಶನ ಕಂಡು ಆ ವಸುದೇವನು ಸ್ತುತಿಸಿದ ಕೇವಲ ಭಕುತಿಯಲಿ | ಲಾವಣ್ಯಾಂಬುಧಿಯನಿಸುವ ಭಯದಿಂದ || 1 ಲೋಕಾಧೀಶನೆ ನಿನ್ನ ಅತೌಕಿಕ ರೂಪಾವು ಕಂಡು ಆ ಕಂಸನ ಭಯದಲ್ಲಿ ನಾ ವ್ಯಾಕುಲಳಾಗಿರುವೆ| ಸಾಕೀಕಾಲಕ ಈ ಅಪ್ರಾಕೃತರೂಪವು ಎÀÀನಲು ಶ್ರೀಕಾಂತನು ಆಕ್ಷಣದಲಿ ಪ್ರಾಕೃತ ಶಿಶುವಾದಾ|| 2 ಆ ಕಾಲದಲ್ಯಾದುರ್ಗಾ ತಾ ಕಾಲವ ಕಳಿಯದಲೆ ಗೋಕುಲದಲ್ಲಿ ಪುರುಷೆಂದಾಕಿಯು ತಿಳಿಯದೆ ನಿದ್ರಿಲಯಲ್ಯಾಕ್ರಾಂತಾದಳು ಹುಟ್ಟಿರುವಾಕಿಯ ಮಹಿಮೆ ಇದು|| 3 ಪಟ್ಟಣದಲಿ ಸರ್ವರು ಭಯಬಿಟ್ಟು ನಡರಾತ್ರಿಯೋಳ್ ತಟ್ಟಲು ಬಹುನಿದ್ರಿ ಸೃತಿಗೆಟ್ಟು ಮಲಗಿರಲು | ಹÀುಟ್ಟಿದ ಬಾಲಕನ ನಾ ಬಚ್ಚಿಟ್ಟು ಬರುವೆನೆಂದ ಥಟ್ಟನೆ ನಡದನು ಕೃಷ್ಣನ ಘಡ್ದ್ಹಡದು ಶೌರಿ|| 4 ಕಾಲೊಳಗಿನ ಬೇಡಿಯು ತತ್ಕಾಲಕ ಕಡದಿತು ಬಾಗಿಲಕೀಲಿಗಳೆಲ್ಲಾ ಸಾಲ್ಹಿಡದಿಂದ್ಗರಂತೆ| ಬೈಲಾದವು ಬಾಗಿಲಗಳಾ ಕಾಲದಿ ಹೀಂಗಾದದ್ದು ಬಾಲಕ ಹರಿ ಬದಿಲಿದ್ದ ಮ್ಯಾಲೇನಾಶ್ಚರ್ಯ 5 ವಾಸದ ವೃಷ್ಟಿಯ ಮಾಡಲು ಶೇಷನು ಬೆನ್ನಿಲೆ ಬಂದು ಸೂಸಿ ಬಾಹುವ ಯಮುನಿ ವಾಸುದೇವನ ಕಂಡು ಘಾಸಿಯು ಮಾಡದೆ ಕೂಟ್ಟಳು ಅಸಮಯಕೆ ಹಾದಿ 6 ಗೋಕುಲಕ್ಹೋಗುತ ಶೌರಿಯು ಶ್ರೀ ಕೃಷ್ಣನ ಅಲ್ಲಿಟ್ಟು ಆ ಕನ್ನಿಕೆಯ ತಂದು ತನ್ನಕಿಯ ಬದಿಲಿಟ್ಟಾ| ಆ ಕಾಲಕ ಆ ಬೇಡಿಯ ತಾಕಾಲಗಳಲ್ಲಿತಟ್ಟು|| ಶ್ರೀ ಕಾಂತನ ಸ್ಮರಿಸುತಲೆ ಏಕಾಂತದಲ್ಲಿರುವಾ|| 7 ಬಾಗಿಲುಗಳು ಎಲ್ಲಾ ಮತ್ಥಾಂಗೆ ಕೀಲಿಗಳ್ಯಲ್ಲಾ ಬ್ಯಾಗನೆ ಆದವು ಮುಂಚಿನ್ಹಾಂಗೆ ತಿಳಿಗೂಡದೆ| ಆಗಾ ಕೂಸಿನ ಧ್ವನಿ ಛಂದಾಗಿ ಕಿವಿಯಲಿ ಬೀಳಲು ಬಾಗಿಲಕಾಯುವ ಭೃತ್ಯರು ಬ್ಯಾಗನೆದ್ದರು ಭಯದಿ|| 8 ಗಡಿಬಿಡಿಯಿಂದಲ್ಯವರು ಯಡವುತ ಮುಗ್ಗುತ ತ್ಯೋಡುತ ನಡಿದರು ನಿಂದಿರದಲೆ ಬಹುಸಡಗರದರಮನಿಗೆ| ಒಡಿಯಾನಂತಾದ್ರೀಶನ ಖಡುದ್ವೇಷ ಆಸವಗೆ ನುಡಿದರು ದೇವಕಿದೇವಿಯು ಹಡಿದಾಳೆಂತೆಂದು|| 9 ಪದ್ಯ ನುಡಿಯ ಕೇಳೀಪರಿಯ ಖಡುಪಾಪಿ ಕಂಸ ಗಡವಡಿಸಿ ಕೊಂಡೆದ್ದು ಭಯ ಬಡುವತಲೆ ಶ್ವಾಸವನು ಬಿಡುವುತಲೆ ಭರದಿಂದ ಎಡವುತಲೆ ಮುಗ್ಗುತಲೆ ನಡದನಾ ದೇವಕಿಗೆ ಕುಡು ಕೂಸು ಎಂತ್ಯಂದು ನುಡಿಕೇಳಿ ಮನದಲ್ಲಿ ಮಿಡುಕುತಲೆ ದೇವಕಿಯು ದೃಢವಾಗಿ ಕೈಯೊಳಗೆ ಹಿಡಿದು ಆಕೂಸಿನಾ ಕುಡದೆ ಕಂಸನ ಮುಂದೆ ನುಡಿದಳೀ ಪರಿಯು|| 1 ಪದ:ರಾಗ:ನೀಲಾಂಬರಿ ತಾಳ:ತ್ರಿವಿಡಿ ಕುಡಲಾರೆ ಕೂಸಿನ್ನನಾ ನಿನಗೆ || ಅಣ್ಣ ಕುಡಲಾರೆ ಒಡ್ಡಿ ಬೇಡುವೆ ಕಡಿ ಹುಟ್ಟ ಹೆಣ್ಣದು|| ಪ ಸೂಸಿಯು ನಿನಗೆ ಈಕಿ ತಿಳಿ ನೀನು | ಮತ್ತು ಹಸಗೂಸು ಎಂಬುವದರಿಯೇನು | ಇಂಥಾ ಶಿಶುವಿನಳಿದಾರೆ ಪಾಪ ಬರದೇನು| ವಸುಧಿ ಒಳಗೆ ಬಹು ಹೆಸರಾದವನೋ ನೀನು|| 1 ಹಿರಿಯಣ್ಣನಲ್ಲೇನೊ ನೀ ಎನಗೆ | ಸ್ವಲ್ಪ ಕರುಣಾವಿಲ್ಲವೋ ಎನ್ನೊಳು ನಿನಗೆ|| ಮಕ್ಕಳಿರಧಾಂಗ ಮಾಡಿದಿ ಮನಿಯೋಳಗೆ ಗುರುತಕ್ಕಿದು ಒಂದು ನೋಡಿ ಮರೆತೆನ್ಹಿಂದಿನ ದುಃಖ|| 2 ನಾ ಏನು ನಿನಗೆ ಮಾಡಿದೆ ಪೇಳು | ಬಹು ಬಾಯಿತಗುವೆ ಕೋಪವು ತಾಳು| ಇಂಥಾ ಮಾಯಾ ಮೋಹತಳಿಗಿ|| 3 ಪದ್ಯ ಅಪ್ಪ ಕುಡಲಾರೆಂದು ತಪ್ಪದಲೆ ಆ ಕೂಸಿನಪ್ಪಿಕೊಂಡಳುವಾಗ ಕಲ್ಲ ಮ್ಯಾಲಪ್ಪಳಿಸಲಾಕೂಸು ತಪ್ಪನ್ಹಾರಿತು ಮ್ಯಾಲೆ ಅಷ್ಟು ಚಿನ್ಹಿಗಳಂದ ಉಟ್ಟ ಪೀತಾಂಬರದಿ ತೊಟ್ಟ ಹೀಂಗೆ ಸ್ಪಷ್ಟಪೇಳಿದಳು| ಪದ ರಾಗ:ತೋಡಿ ತಾಳ ಬಿಲಂದಿ ಮಂದ ಮತಿಯೇ ಕಂದರನ್ನ ಕೂಂದರೇನು ಫಲವೂ| ಇಂದು ಎನ್ನ ಕೂಂದ ವ್ಯೂಲ ಮುಂದೆ ಬರುವದೇನು| 1 ವೈರಿ ಅನ್ಯರಲ್ಲಿ ಇನ್ನ ಬೆಳೆವುತಿಹನೊ| ಮುನ್ನ ಬಂದು ತನ್ನ ಬಲದಿ ನಿನ್ನ ಕೊಲ್ಲುವೊನು 2 ಅಂತಕನ್ನ ನಿಂತು ಕೊಲ್ಲುವ ಭ್ರಾಂತಿ ಬಿಡೆಲೊ ನೀನು| ಅನಂತಾನಂತಾದ್ರೀಶನಂತು ತಿಳುವದೇನೇ|| 3 ಪದ್ಯ ಆ ಮಹಾ ಪಾಪಿ ಗ್ಯಾಡೀ ಮಾತು ದೇವಿ ತಾ ಭೂಮಿಯಲಿ ಬಂದು ಬಹುಗ್ರಾಮದಲೆ ನಿಂತು ಬಹುನಾವು ಉಳ್ಳವಳಾಗಿ ಕಾಮಿತಾರ್ಥಗಳನ್ನೂ ಪ್ರೇಮದಲಿ ಕುಡುತಿಹಳು ನೇಮದಿಂದಾ|| ಆ ಮಾಯಿ ವಚÀನವನು ಪಾಮರನು ತಾ ಕೇಳಿ ರೋಮಾಂಚಗಳು ಉಬ್ಬಿ ನಾ ಮಾಡಿದಲ್ಲೆಂದು ನೇಮದಲಿ ಇಬ್ಬರಿಗೆ ನೇಮಿಸಿದ ಬೇಡಿಯನು ತಾ ಮೋಚನವು ಮಾಡಿ ಪ್ರೇಮದಿ ನುಡದಾ|| 1 ಪದ:ರಾಗ :ಸಾರಂಗ ಅದಿತಾಳ ಸ್ವರ ಮಧ್ಯಮ ಎಲೆ ತಂಗಿಯೆ ಎಲೊ ಶಾಲಕ ಬಲು ಪಾಪಿಯು ನಾನು| ಬಲು ಮಂದಿ ಮಕ್ಕಳನ ಛಲದಿಂದ ಕೊಂದೆ| ತಿಳಿಯದೆ ನಾ ಇಂಥ ಕೆಲಸಕ್ಕೆ ತೊಡಕಿ ಪರಿ ಪಾಪದ ಫಲ ಭೋಗಿಯು ಆದೆ|| 1 ಅಶರೀರದ ವಾಣಿಯು ಹುಸಿ ಅಯಿತು ಇಂದು ವಸುಧಿಯೋಳಿರುವಾ ಮಾನುಷರಾ ಪಾಡೇನು|| ಶಶಿಮುಖಿ ನಾನಿಮ್ಮ ಶಿಶುಗಳ ಕೂಂದೆ||2 ಅಮಿತಾ ಅಪರಾಧಾಯಿತು ಕ್ಷಮಾ ಮಾಡಿರಿ ನೀವು|| ವಿಮಲ ಮನಸಿನಿಂದ ನಮಿಸಿದೆ ನಿಮಗೆ|| ಕಮಲೋದ್ಭವ ಬರದಂಥಾ ಕ್ರಮ ತಪ್ಪದು ಎಂದು ಶ್ರಮಯಾತಕ ಸುಖದುಃಖವ ಸಮಮಾಡಿರಿ ನೀವು|| 3 ತಿಳಗೇಡಿಯು ಆ ಕಂಸ ತಿಳಿಹೇಳಿಪರಿಯು ಸ್ಥಳಬಿಟ್ಟು ತಾ ತನ್ನ ಸ್ಥಳಕ್ಹೋದನು ಬ್ಯಾಗೆ\ ಬ್ಯಳಗಾಗಲು ಎಲ್ಲಾರಿಗೆ ತಿಳಿಸೀದನು ಆಗೆ ಹೊಳುವಾ ದೇವಿಯ ಮಾತುಗಳನೆಲ್ಲ ಬಿಡದೆ || 4 ಖಳರಂದರು ನಾವಿನ್ನ ಇಳಿಯೊಳ್ಹುಟ್ದರುವಾ| ಉಳದಾ ಬಾಲಕೃಷ್ಣಕರನ್ನ ಕೊಲ್ಲು ವುದ ಸತ್ಯಾ| ತಿಳದೀಪರಿ ಅವರನ್ನ ಕಳಸೀದ ಕಂಸಾ ಚಲುವಾನಂತಾದ್ರೀಶನ ಕೊಲ್ಲವೊದು ಎಂದು|| 5 ಪದ್ಯ ಮುಂದ ಗೋಕುಲದಲ್ಲಿ ನಂದಗೋಪನು ತನ್ನ ಕಂದನಾ ಮುಖವನ್ನು ಛಂದದಲಿ ನೋಡಿ ಆನಂದ ಹಿಡಿಸದೆ ತಾನು ಬಂದ ಬಂದವರಿಗ್ಯಾನಂದ ಬಡಸಿದ ಮನಕ ಬಂದದ್ದು ಕೂಟ್ಟು| ನಂದನಂದನನ ವದನೇಂದು ದರ್ಶನಕಾಗಿ ಬಂಧು ಬಾಂಧವರೆಲ್ಲ ಬಂದು ಒದಗಿದರಲ್ಲೆ ದುಂದುಬಿಯು ಮೊದಲಾದ ಛಂದಾದ ವಾದ್ಯಗಳು ಒಂದಾಗಿ ನುಡದÀವಾನಂದದಿಂದಾ| ಗೀತ ಬಲ್ಲವರು ಸಂಗೀತವನು ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ತಾತನವ ತನ್ನಲ್ಲೆ ಜಾತನಾಥಂಥವಗೆ ಜಾತಕರ್ಮವು ಮಾಡಿ ಪ್ರೀತನಾದಾ| ಪ್ರೀತಗೋಕುಲದಲ್ಲಿ ನೂತನೈಶ್ವರ್ಯಗಳು ಜಾತವಾದವು ಸರ್ವಜಾತಿಗಳಿಗ್ಯಾದರೂ ಯಾತಕ್ಕೂ ಕಡಿಮಿಲ್ಲ ಸೋತಂಥ ದಾರಿದ್ರ್ಯ ಯಾತಕಿರುವದು ರಮಾನಾಥ ಇರಲು|| 1 ಸ್ಥಿರ ಮನಸಿನಿಂದಲ್ಲೆ ಸ್ಥಿರವಾಗಿ ಕುಳಿತು ಈ ಚರಿತವನು ಕೇಳಿದವರ ಪರಿಪರಿಯ ಅಭಿಲಾಷ ಪರಿಪೂರ್ಣವಾಗುವದು ಚರಿಸದಲೆ ಅವರಲ್ಲಿ ಸ್ಥಿರಳಾಗಿ ಇರುವವಳು ವರಮಹಾಲಕ್ಷ್ಮೀ| ಧರಿಯೊಳಗ ಇರುವಂಥ ವರಕವೀಶ್ವರರಂತೆ ಸ್ಥಿರವಲ್ಲ ಗೋಕುಲದಲ್ಲಿ ತ್ವರ ಅವನೇ ಮುಗಿಸಿದಿಲ್ಯರಡು ಅಧ್ಯಾಯಾ|| 2 “ಶ್ರೀ ಕೃಷ್ಣಾರ್ಪಣ ಮಸ್ತು” ಎರಡನೆಯ ಅಧ್ಯಾಯವು ಸಂಪೂರ್ಣವು”
--------------
ಅನಂತಾದ್ರೀಶ - ಕಥನಕಾವ್ಯಗಳು
ದೇವ ದೇವತೆಗಳ ಸ್ತುತಿ ಆವ ಕಾರ್ಯಕೂ ಮುಂಚಿನ ಪೂಜೆ ನಿಮ್ಮತಾಯಿ ತಂದೆಯು ಕಲಿಸಿದ ಪೂಜೆ ಪ ಜಾತಕರ್ಮಕೆ ನಾಮಕರಣಕೆ ಚೌಲಕೆಸಾತಿಶಯಾಕ್ಷರ ಪ್ರಾರಂಭಕೆನೂತನ ವಿದ್ಯಾರಂಭಕೆ ಮುಂಜಿಗೆಯಾತಕೂ ಶ್ರೀ ಗಣಪತಿ ಜಯ ಜಯವೆಂದೂ 1 ಮದುವೆಗೆ ಋತುಶಾಂತಿಗೆ ಸೀಮಂತಕೆಮುದದಿಂದ ಜನನವ ಬರೆವುದಕೆಸದಮಲ ಯಜ್ಞಾರಂಭಕೆ ಸಮರಕೆಮೊದಲೇ ಶ್ರೀ ವಿಘ್ನೇಶ್ವರ ಜಯ ಜಯವೆಂದೂ2 ಪರ ಉಪಕಾರಕೆಜ್ಞಾನಮಾರ್ಗಕೆ ಗಾನಕೆ ಗೀತೆಗೆನಾನಾವಿಧ ಸುವ್ರತ ತೀರ್ಥಯಾತ್ರೆಗೆನೀನೆ ಗತಿ ಗಣಪತಿ ಜಯ ಜಯವೆಂದೂ 3 ಕೆರೆ ಕಾಲುವೆ ಕೂಪಗಳ ವಿಸ್ತಾರಕೆಸುರಗೃಹ ರಥ ಉತ್ಸವ ಪೂಜೆಗೆಸರಸ ಸರೋವರಗಳ ನಿರ್ಮಾಣಕೆಸಿರಿ ಗಣಪತಿ ಪಾವನಮೂರ್ತಿ ಜಯವೆಂದೂ 4 ಹರ ನಿಮ್ಮ ಪೂಜಿಸಿ ಪುರಮೂರ ಜಯಿಸಿದಗರುಡಗೆ ಅಮೃತವು ಸಿದ್ಧಿಸಿತುವರರಾಮಚಂದ್ರ ನಿಮ್ಮಡಿಯ ಪೂಜಿಸಿ ದಶಶಿರನ ಗೆಲಿದನೆನೆ ಗಣಪತಿ ಜಯವೆಂದೂ 5 ದ್ವಾಪರಯುಗದಲಿ ಧರ್ಮರಾಯನು ನಿಮ್ಮನೇ ಪೂಜಿಸಿ ಕೌರವರ ಗೆಲಿದಾಭೂಪರ ಜೈಸಿ ತುರಗವ ತಂದ ಸಾಂಬನುಶ್ರೀಪತಿನುತ ಗಣಪತಿ ಜಯ ಜಯವೆಂದೂ6 ವರದಾನದಿಯ ತೀರವಾಸ ಶ್ರೀ ಕೆಳದಿಯಪುರವರಾಧೀಶ ರಾಮೇಶ್ವರನಪರಮಮೋಹದ ಪುತ್ರ ಪಾವನತರಗಾತ್ರವರದ ಶ್ರೀ ಗಣಪತಿ ಜಯ ಜಯ ಜಯವೆಂದೂ 7
--------------
ಕೆಳದಿ ವೆಂಕಣ್ಣ ಕವಿ
ನೊಂದೆ ನಾ ಹರಿಯೆನ್ನದೆ ಪ ವೈರಿ ಷಡ್ವರ್ಗದಾಟಗಳಿಂದ ನೊಂದೆ ನಾ ಹರಿಯೆನ್ನದೆ ಅ ಮಾಸ ತಾಯುದರದಲಿಸಂದೇಹವಿಲ್ಲ ನವಮಾಸ ಮಲ ಮೂತ್ರದೊಳುಒಂದಾಗಿ ನಿಂದು ಕುದಿಕುದಿದು ಹುಟ್ಟಿಬಂದೆ ಎಂಬತ್ತು ನಾಲುಕು ಲಕ್ಷ ಯೋನಿಯೊಳುನೊಂದೆ ಮುನ್ನೂರ ಅರವತ್ತು ಬೇನೆಗಳಿಂದಒಂದು ಕ್ಷಣವೂ ಯಮನ ಬಾಧೆ ತಾಳಲಾರೆನುಹಿಂದೆಗೆಯದಿರು ಇಂಬಿತ್ತು ಕಾಯೊ ಮುರಾರಿ 1 ಎಲುವುಗಳ ಗಳ ಮಾಡಿ ಬಲು ನರಂಗಳ ಬಿಗಿದುಚೆಲುವ ತೊಗಲಂ ಪೊದಿಸಿ ಮಜ್ಜೆ ಮಾಂಸವ ತುಂಬಿಹೊಲೆ ಗೂಡಿನೊಳು ಪೊಗಿಸಿ ತಲೆ ಹುಳಕ ನಾಯಂತೆಅಲೆದು ಮನೆಮನೆಯೆದುರು ಉಚ್ಚಿಷ್ಟವನು ತಿಂದುಕಳವು ಹಾದರ ಪಂಚಪಾತಕಂಗಳ ಮಾಡಿನೆಲೆಯಿಲ್ಲದಧಿಕತರ ನರಕದೊಳಗಾಳ್ದೆನೈಒಲಿದು ಬಂದು ರಕ್ಷಿಸು ನಾಗವೈರಿ ವಾಹನನೆನಳಿನ ಲೋಚನನೆ ನೀ ಎನ್ನ ಕೈ ಬಿಡದೆ 2 ಹುಟ್ಟುವಾಗಲೆ ಜಾತಕರ್ಮ ಷೋಡಶವೆಂಬಕಟ್ಟಳೆಯ ದಿವಸದಲಿ ನಂಟರಿಷ್ಟರು ಕೂಡಿಕಟ್ಟಿ ಮುಂಜಿಯ, ಹರುಷದಲಿ ಮದುವೆ ಮಾಡಿ ಉಂ-ಡುಟ್ಟು ಹಾಡಿ ಹರಸಿದರು ನೂರ್ಕಾಲ ಬದುಕೆಂದುಬಿಟ್ಟು ಪ್ರಾಣಂ ಪೋಗೆ ಪೆಣನೆಂದು ಮೂಲೆಯೊಳುಕಟ್ಟಿ ಕುಳ್ಳಿರಿಸಿ ಹೊಟ್ಟೆಯ ಹೊಯ್ದುಕೊಂಡಳುತಸುಟ್ಟು ಸುಡುಗಾಡಿನಲಿ ಪಿಂಡಗಳನಿಕ್ಕಿ ಬಲುಕಟ್ಟಳೆಯ ಕಾಣಿಸಿದರಯ್ಯ ಹರಿಯೆ 3 ಹಲವು ಜನುಮದಿ ತಾಯಿ ಎನಗಿತ್ತ ಮೊಲೆಹಾಲುನಲಿನಲಿದು ಉಂಬಾಗ ನೆಲಕೆ ಬಿದ್ದುದ ಕೂಡಿಅಳೆದು ನೋಡಿದರೆ ಕ್ಷೀರಾಂಬುಧಿಗೆ ಎರಡು ಮಡಿಹಲವಾರು ಸಲ ಅತ್ತ ಅಶ್ರುಜಲವನು ಕೂಡಿಅಳೆದು ನೋಡಿದರೆ ಲವಣಾರ್ಣವಕೆ ಮೂರು ಮಡಿಎಲುವುಗಳ ಕೂಡಿದರೆ ಮೇರುವಿಗೆ ನಾಲ್ಕು ಮಡಿಸುಲಿದು ಚರ್ಮವ ಹಾಸಿದರೆ ಧರೆಗೆ ಐದು ಮಡಿನೆಲೆ ಯಾವುದೀ ದೇಹಕೆ ನರಹರಿಯೆ4 ಸತಿ ಇಂದು ಕಾಯ್ವರದಾರುದಂದುಗವನಿದನೆಲ್ಲ ನೀಬಲ್ಲೆ ನಾನರಿಯೆತಂದೆ ನೆಲೆಯಾದಿಕೇಶವನೆ ನಿನ್ನಯ ಪಾದದ್ವಂದ್ವವನು ಎಂದಿಗೂ ಬಿಡೆನು ಬಿಡೆನೊ 5
--------------
ಕನಕದಾಸ
ಪ್ರಳಯಜಲದಲಿ ನೀನಾಲದೆಲೆಯ ಮ್ಯಾಲೆ ಹಲವು ಜೀವರು ನಿನ್ನ ಹೃದಯದೊಳಿರಲು ಕೆಲವುದಿನದಿ ಯೋಗನಿದ್ರೆಯೊಳಿರೆ ಒಲವಿಂದ ಸೃಜಿಸುವೆನೆಂದು ನೇಮಿಸುವೆ1 ಪ್ರಕೃತಿಯ ಮೂಲಕಾರಣವನು ಮಾಡಿ ಸಕಲತತ್ವಗಳ ಸಮ್ಮೋಹದಿ ಕೂಡಿ ವಿಕಳಿಸದಂತೆ ತನ್ಮಾತ್ರೆಯ ಕೂಡಿ ಅಖಿಳೇಶ ಮಹತತ್ವಗಳ ನಿರ್ಮಿಸಿದೆ 2 ಮಹತತ್ವದಿಂದಹಂಕಾರವ ಪುಟ್ಟಿಸಿ ಅಹಂಕಾರದಿಂದ ವೈಕಾರಿಕ ಮೊದಲಾದ ತ್ರಿವಿಧತತ್ವಗಳ ನಿರ್ಮಾಣವÀ ಮಾಡ್ದೆ ಮಹಮಹಿಮೆಯ ಮೆರೆದೆ ಜಗವರಿಯೆ 3 ಇಪ್ಪತ್ತುನಾಲ್ಕು ಅಯಿದಾರುತತ್ವಗಳಿಂದ ತÀಪ್ಪದೆ ಬೊಮ್ಮಾಂಡವ ನಿರ್ಮಿಸಿದೆ ಸರ್ಪಶಯನನಾಗಿ ನಾಭಿಕಮಲದಿಂದ ಅಪ್ಪಬ್ರಹ್ಮನ ಪ್ರಸವಿಸಿದೆ ನೀನೆಂದು 4 ಒಂದು ಮೂರುತಿಯಿಂದ ಸೃಷ್ಟಿಯ ಮಾಡಿ ಮತ್ತೊಂದು ಮೂರುತಿಯಿಂದ ಪಾಲನೆ ಮಾಡಿ ಒಂದು ಮೂರುತಿಯಿಂದ ಸಂಹರನೆ ಮಾಡಿ ಒಂದೊಂದು ಮಹಿಮೆಯು ಅನಂತಾದ್ಭುತವು 5 ಒಂದು ರೋಮಕೂಪದಲಿ ಬ್ರಹ್ಮಾಂಡ ಇಂದಿರೆ ಅನಂತಕೋಟಿ ನಾಮಗಳಲ್ಲಿ ಬಂದು ಗೋಕುಲದಲ್ಲಿ ಶಿಶುವಾಗಿ ತೋರಿದೆ ಆ- ಸುರರು 6 ಜನನಮರಣ ಭಯದಿಂದ ದೇವತೆಗಳು ಅನುದಿನ ನಿನ್ನ ಪೂಜೆಯ [ಮಾಡೇವೆನಲು] ಪುನರಾವೃತ್ತಿ ರಹಿತವಾದ ಫಲವೆತ್ತಿ ಮನುಜನಂತೆ ತೋರುವುದೇನುಚಿತವೊ 7 ಒಮ್ಮೆಕಾಣಲು ಸಿರಿರಮ್ಮೆ ಚೆಲುವನ ಒಮ್ಮನದಿಂದ ನೋಡೇನೆಂಬ ಭಯದಿಂದ ರಮ್ಮೆ ಮೊಗವ ತಗ್ಗಿಸಿ ನಾಚಿಸಿದಳೆ 8 ದÀಶದಿಕ್ಕು ನೋಡುತ್ತ ಭಯದಿಂದ ಕಮಲಜ ಶಶಿನಾಳದೊಳಗಿದ್ದ ದಾರಿಯ ಕಾಣದೆ ದಶಶತವರುಷ ನಿಮ್ಮನು ಧ್ಯಾನಿಸುತಿರೆ ವಸುಧೀಶ ನಿಮ್ಮ ನಿಜವ ತೋರಿದಿರಿ 9 ಆಲೋಚನೆಯಿಂದ ಸರ್ವ ವಿಷಯದಿಂದ ಲೀಲೆಯಿಂದ ಪಾಡಿ ಕಮಲಸಂಭವನ ವೋಳು ಮಾಡದಂತೆ ಒಳಿತಾಗಿ ತಲೆವಾಗೆ ಮೂಲ್ಲೋಕವ ಕೃಪೆಯಿಂದ ಪಾಲಿಸಿದೆ 10 ನಂದ ಯಶೋದೆ ವಸುದೇವ ದೇವಕಿಯರು ಸುಕೃತ ಫಲವಾಯಿತೆಂದು ಬಂದ ಬ್ರಾಹ್ಮಣರ ದ್ರವ್ಯದಿ ದಣಿಸಿದರು 11 ಜಾತಕರ್ಮವ ಮಾಡಿ ಮಧುವ ಬಾಯೊಳಗಿಟ್ಟು ಒತ್ತುಮೊರನ ಗೊಟ್ಟಿನಲಿ ಮಲಗಿದ್ದು ಸಾ- ಕ್ಷಾತ್ ಶ್ರೀ ನಾರಾಯಣನ ಅವತಾರವೆಂದು ಮಾತೆಯ ಮೊಲೆವಾಲನುಂಡ ಬೇಗದಲಿ 12 ವಾರುಣಿ ಶ- ಚಿ ರತಿ ಮೊದಲಾದ ಸತಿಯರು ನಾರಾಯಣ ಪರದೇವತೆಯೆಂದು ನಾರಿಯರೆಲ್ಲ ಪಾಡಿದರತಿ ಹರುಷದಲಿ 13 ನಾಮಕರಣ ದಿವಸ ಬ್ರಹ್ಮಾದಿ ಸುರರು ಈ ಮಹಾಶಿಶುವ ನೋಡೇವೆಂಬ ಭರದಿಂದ ಆ ಮಹಾಸ್ತೋಮವೆಲ್ಲ ಕೂಡಿಬರ- ಲೀ ಮಹಾಶಿಶುವ ನೋಡಿದರೆ ಅರ್ಥಿಯಲಿ 14 ವ್ಯಾಸ ಧೌಮ್ಯಾಚಾರ್ಯರೊಲಿದು ಮಂತ್ರಗಳಿಂದ ಸಾಸಿರಕೋಟ್ಯನಂತ ನಾಮಗಳುಳ್ಳ ವಾಸುದೇವ ಕೃಷ್ಣನೆಂಬ ನಾಮಗಳಿಟ್ಟು ಸೂಸಿದರಕ್ಷತೆ ಸುಮೂಹೂರ್ತದಲಿ 15 ಕ್ಷೀರಾಂಬುಧಿಯನ್ನೆ ತೊಟ್ಟಿಲು ಮಾಡಿ ಓರಂತೆ ನಾಲ್ಕುವೇದಗಳ ನೇಣನೆ ಮಾಡಿ ಧೀರಶೇಷನು ಬಂದು ಹಾಸಿಕೆ ಹಾಕಲು ನಾರಿಯರೊಡನೆ ಮಲಗಿದೆಯೊ ಹಯವದನ 16
--------------
ವಾದಿರಾಜ
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ