ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಾ ಪೊಂದಿರೆ ಕೊರತೆಗಳುಂಟೆ ಶ್ರೀ ನರಹರಿಯ ಪ ನರಿಗಳ ಕೂಗಿಗೆ ಹುಲಿಯಂಜುವುದೆ ಬಿರುಗಾಳಿಗೆ ದೊಡ್ಡ ಗಿರಿ ನಡುಗುವುದೆ ಅ.ಪ ನಾನು ತಾನೆಂದು ಕುಣಿಯುತಲಿದ್ದ ಮಾನವರನು ಜರಿದು ನೀನೆ ಸೇವೆಯನು ಮಾಡೆಂದೆನುತ ತಾನೊಲಿಯುತಲಿ ಹೀನ ಜನರು ಅಪಮಾನವ ಬಯಸಲು ನಾನಿಹೆನೆನ್ನುವ ಜಾನಕಿನಾಥನ 1 ಬಂಧುಗಳೆನ್ನ ನಿಂದಿಸುತಿಹರು ಒಂದನೂ ಕೊಡೆಯೆಂದು ಹಿಂದು ಮುಂದೆನಗೆ ಕುಂದು ಕೋರುವರು ಒಂದನರಿಯರು ಮುಂದೆ ಎನಗೆ ಬಲು ತೊಂದರೆಗಳಿರುವು ವೆಂದು ಪೇಳುವರು ಮಂದರಧರನ 2 ಧನಿಕನಲ್ಲೆಂದು ಅಲ್ಲಗೆಳೆಯುವರು ಧನವಿಲ್ಲದಿರಲು ಘನತೆ ಎಂತೆಂದು ಜರಿಯುತಲಿಹರು ಮನವನರಿಯರು ಧನ ಪಿಶಾಚಿಯನು ಮನದಿಂದ ತೊಲಗಿಸಿ ಮನದಲಿ ನೆಲಸಿಹ ವನರುಹ ನಯನನ 3 ನಂಬಿದರೆಮ್ಮ ಧನಕನಕಗಳ ತುಂಬುವೆವೆಂಬ ಜಂಭದ ಮಾತ ನಂಬದೆ ಇರಲು ಹಂಬಲಿಸುವರು ನಂಬುವ ಭಕುತರ ಹಿಂಬಾಲಿಸುತಲಿ ಬೆಂಬಲಿವೀಯುತವ ಅಂಬುಜನಾಭನ 4 ಚತುರನಲ್ಲೆಂದು ಅತಿದೂರುವರು ಹಿತರಂತೆ ನಟಿಸಿ ಮಿತಿಮೀರಿ ಎನಗೆ ಬೋಧಿಸುತಿಹರು ಮನ್ಮತಿಯನರಿಯರು ರತಿಪತಿಯೆನ್ನನು ಪ್ರಸನ್ನನಾಗಿ ದಿವ್ಯ ಗತಿ ತೋರುತಲಿರೆ ಚತುರತೆಯೇತಕೆ 5
--------------
ವಿದ್ಯಾಪ್ರಸನ್ನತೀರ್ಥರು
ಗಾನಕೆ ಅತಿ ಸುಲಭ ಪ ದೀನಜನಕೆ ಬಲು ಸಾನುರಾಗನಾದ ಜಾನಕಿನಾಥನ ದಿವ್ಯನಾಮವು ಅ.ಪ ತಾಳ ತಂಬೂರಿ ಮೃದಂಗಗಳಿಂದಲಿ ಪೇಳುವವರಿಗೆ ರಫುಮೌಳಿಯ ನಾಮವು 1 ಘೋರ ಕಲುಷಗಳ ಪಾರಗಾಣಿಸಿ ಮನ ಕೋರಿಕೆಗಳನೀವ ತಾರಕ ನಾಮವು 2 ತಾಪಸ ಸತಿಯಳ ಶಾಪವ ಬಿಡಿಸಿದ ಭೂಪ ದಾಶರಥಿ ದಿವ್ಯನಾಮವು 3 ಲಂಕೆಯ ಪೊಕ್ಕು ನಿಶಾಚರನೆ ಕೊಂದು ಪಂಕಜಾಕ್ಷಿ ಆತಂಕ ಕಳೆದ ನಾಮ 4 ಎನ್ನವರೆಲ್ಲರು ಬನ್ನಿರಿ ಎನ್ನುತ ತನ್ನೊಡನೊಯ್ದು ಪ್ರಸನ್ನರಾಮನ ನಾಮ 5
--------------
ವಿದ್ಯಾಪ್ರಸನ್ನತೀರ್ಥರು