ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರಾಧನೆ ಪರಮಾನಂದ ಪ ತಾರಾನಾಥ ಕುಲೋದ್ಭವ ಕೃಷ್ಣನ ಅ.ಪ ಘೋರವು ಈ ಸಂಸಾರವೆನ್ನುವುದು ದೂರಿನ ನುಡಿಯಿದು ಬಾಳುವಗೆ ನೂರು ವರುಷಗಳ ಮೀರಿ ಜೀವಿಸಲು ಕೋರಿಕೆ ಬರುವುದು ಧೀರ ಜನರಿಗೆ 1 ನಿರ್ಮಲ ದೇಹವು ನಿರ್ಮಲ ಹೃದಯವು ನಿರ್ಮಲ ನಡೆನುಡಿ ಕರ್ಮಗಳು ಮರ್ಮಜ್ಞರ ಮಾರ್ಗಗಳಲಿ ಸ್ವೋಚಿತ ಧರ್ಮಗಳಲಿ ವಿಶ್ವಾಸವಿರುವವರಿಗೆ 2 ಅನ್ನವಿರುವವರಿಗೆ ತಿನ್ನಲಾಗದು ತಿನ್ನಬಲ್ಲವರಿಗೆ ಅನ್ನವು ಸಿಗದು ಘನ್ನ ಮಹಿಮನ ಪ್ರಸನ್ನತೆಯಿಂದಲಿ ಅನ್ನ ಪಡೆದು ತಿನ್ನಲು ಬಲ್ಲವರಿಗೆ 3
--------------
ವಿದ್ಯಾಪ್ರಸನ್ನತೀರ್ಥರು
ಬರಬಾರದಾಗಿತ್ತು ಬಂದೆನಯ್ಯಾ ಪ ಕರೆತರಲು ಬಂದುದಕೆ ಫಲವೇನೊ ದೇವಾಅ.ಪ ತರಳತನದಲ್ಲಿ ಎನ್ನ ಕರಣಗಳು ಮಾಡಿದ ಪರಿಪರಿಯ ಕ್ರೀಡೆಗಳ ಫಲವೇನೊ ಎನಗೆ ದುರುಳ ಸಂಗದೊಳಿದ್ದು ಹರುಷದಿಂದಲಿ ಎನ್ನ ಆಯುವನು ಕಳೆದೆ1 ಸತಿಸುತರು ಹಿತರಿವರು ಎನಗೆಂದು ಉಬ್ಬುಬ್ಬಿ ಮಿತಿ ಇಲ್ಲದಾ ಕಾರ್ಯಗಳನೆ ಮಾಡೀ ಗತಿಯೇನು ಮುಂದು ಹಿತವು ಯಾವುದು ಎಂದು ಮತಿಗೆಟ್ಟಮೇಲೆನಗೆ ಗೊತ್ತಾಗುವುದೆಂತೋ 2 ಶ್ವಾನ ಸೂಕರಗಳು ಸ್ವೇಚ್ಛೆಯಿಂದಲಿ ಚರಿಸಿ ತನ್ನ ಪರಿವಾರವನೆ ತಾ ಪೊರೆಯುತಿಹವೋ ಎನ್ನ ಸತಿಸುತರುಗಳ ಉದರಪೋಷಣೆಗಾಗಿ ಹೀನಸೇವೆಯಿಂದ ಉಪಜೀವಿಸಲು ಬಹುದೆ 3 ತನುಬಲವು ಇದ್ದಾಗ ಕೋಣನಂದದಿ ತಿರುಗಿ ಜ್ಞಾನ ಕರ್ಮಗಳನ್ನು ಆಚರಿಸದೇವೆ ಧನ ವನಿತೆ ಮೋಹಕೆ ಕೊನೆಮೊದಲು ಇಲ್ಲದೆ ಮನವೆಲ್ಲವನು ನಾನು ಹೊಲೆಗೆಡಿಸಿದಮೇಲೆ4 ವಿಕಳಮತಿಯನು ಹರಿಪ ಅಕಳಂಕ ಹರಿಭಕ್ತ- ರಕುಟಿಲಾಂತಃತರಣ ದೊರೆತು ಎನ್ನ ಸಕಲಾಪರಾಧಗಳ ಕ್ಷಮಿಸುವರ ಸಂಗ ನೀ ಕರುಣಿಸದಿದ್ದ ಮೇಲೆ ಶ್ರೀ ವೇಂಕಟೇಶಾ 5
--------------
ಉರಗಾದ್ರಿವಾಸವಿಠಲದಾಸರು
ಸಾಕು ಸ್ವಾಮಿ ಲೋಕವಾಸವು ಪ ಬೇಕು ನಿಮ್ಮ ಚರಣಸೇವೆ ಲೋಕದಿಂದ ಪಾರು ಮಾಡೆನ್ನ ಅ.ಪ ಕಷ್ಟದಿಂದಿನ್ನು ಜೀವಿಸಲು ನಾ ನೆಷ್ಟು ಪಾಪವ ಮಾಡುವೆನೊ ಇಷ್ಟೆ ಸಾಕಯ್ಯ ಕಷ್ಟನಿವಾರ ಸೃಷ್ಟಿಯಿಂದೆನ್ನ ಪಾರುಮಾಡೊ 1 ಹಲವು ಭ್ರಾಂತಿಗಳಲಿ ನಾನು ತೊಳಲಿಬಳಲಿ ಚಲನೆಗೆಡುತ ದುರಿತ ಸಾಕೈ ಇಳೆಯಿಂದೆನ್ನನು ಗೆಲಿಸು ದೇವ 2 ಸಕಲವಿಧದಿ ದು:ಖರೂಪ ಕಾಕುಸಂಸಾರ ಬಲು ತಾಪ ಭಕುತಜನಪ್ರಿಯ ಮುಕ್ತಿಸೋಮ ಮುಕುತಿ ಕರುಣಿಸು ನಿರುತ ಶ್ರೀರಾಮ 3
--------------
ರಾಮದಾಸರು
ಸತ್ಸಂಗವಿಡಿದು ಸರ್ವೋತ್ತಮನೆ ಗತಿಯೆಂದುನೆಚ್ಚಿ ಅರ್ಚಿಸು ಗಡ ಮನುಜ ಪ.ವಿರಹ ಶಬ್ದಗಳ ಮೈಯ್ಯೊಲಿದೊಲಿದುಕೇಳಿಸತಿಯರ ಧ್ವನಿಗೆ ಮಗುಳೆ ಮೋಹಿಸುತಹರಿಣ ಘಂಟಾರವಕೆ ಬಲೆ ಬೀಳುವಂತಾಗದಿರುಹರಿಕಥೆಯಕೇಳಿಬಾಳು1ಅರಿಯದರ್ಭಕನು ಕೆಂಡವ ಮುಟ್ಟಿ ಅಳುವಂತೆಪರಸ್ತ್ರೀಯ ಸರಸಕೊಳಗಾಗಿನರಕದೊಳು ಬೀಳ್ವ ಪಾಮರನೆ ಹರಿಚರಣಾಬ್ಜಸ್ಪರುಶ ದೊರಕುವುದೆಂತೊ ನಿನಗೆ 2ದೀಪ ಕಾಶಕೆ ಪತಂಗವು ಕೆಡೆವ ಪರಿಯು ಸಲ್ಲಾಪವು ಪರಸತಿಯರೊಡನೆಶ್ರೀಪತಿಯ ಮೂರುತಿಯ ಕಂಡೆರಗು ಮೂಢಮತಿಪಾಪ ಬುದ್ಧಿಗಳನ್ನುಜರಿದು3ಶಸ್ತ್ರ್ತಧಾರೆಯ ಮಧುವ ಬಯಸುವಂತನ್ಯೋತ್ತಮ ಸ್ತ್ರೀಯರಧರಸುಧೆಬಯಸಿಚಿತ್ತವ್ಯಸ್ತವ ಮಾಣದೊಮ್ಮೆಗಾದರೆಹರಿಭಕ್ತಿರಸವೀಂಟಿ ಸುಖಿಯಾಗು 4ವನಜವನವಂ ಬಿಟ್ಟು ಅಳಿವೃಂದ ಚಂಪಕದನನೆಗೈದಿ ಪ್ರಾಣ ಬಿಡುವಂತೆವನಿತೆಯರ ವಾಸನೆಯೆ ನಿರಯದೌತಣವೆಂದುವನಜಾಕ್ಷ ನಿರ್ಮಾಲ್ಯ ಸೂಡು 5ಇಂತೆಂಬ ಪಂಚಭೌತಿಕದೇಹದಾಸೆಯೊಳುಸಂತತದಿಲಂಪಟನೀನಾಗಿಅಂತ್ಯದೊಳುಜರೆಕಾಡುವಾಗ ಕಫ ವಾತವೆಮುಂತಾದ ವ್ಯಥೆ ಬೆನ್ನ ಬಿಡವು 6ಭಸ್ಮಕ್ರಿಮಿಕೀಟವಾಗಿ ಪೋಪ ಕಾಯಕೆ ನಂಬಿವಿಸ್ಮರಣೆ ಬೇಡ ಹರಿಪದಕೆಕಶ್ಮಲಾನ್ವಿತವಾದ ಯೋನಿಗಳ ಬರವರಿತುವಿಸ್ಮರಣೆ ಬೇಡ ಹರಿಪದಕೆ 7ಬಲ್ಲಿದರ ಸಿರಿಯ ಸೈರಿಸಲಾರೆನೆಂದೆಂಬಕ್ಷುಲ್ಲಕರ ನುಡಿಯನಾಡದಿರುಎಲ್ಲಿ ಭಾಗವತರ ನಿಕೇತನಾಜೆÕಯ ಕೇಳೆಅಲ್ಲಿ ಮಧುಕರವೃತ್ತಿತಾಳು8ಹರಿದಾಸರ ವಿಲಾಸವೆ ಎನ್ನ ಸಿರಿಯೆಂದುಹರಿದಾಸರಡಿಗೆ ಮಗುಳೆರಗಿಹರಿದಾಡುವ ಮನಕೆ ಸೆರಯಿಕ್ಕಿ ಹರಿಯನೆ ನೆನೆದುಹರುಷ ಪುಳಕಿತನಾಗಿ ಬಾಳು 9ದಶಇಂದ್ರಿಯಂಗಳಿಗೆ ವಶವಾಗದಿರು ಏಕಾದಶಿ ವ್ರತಕೆ ವಿಮುಖವಾಗದಿರುದಶಶಿರಾರಿಯ ನಾಮದಶನವೆಭುಂಜಿಸುದಿಶೆಯರಿತೂ ಕಾಣನಾಗದಿರು 10ಪದ್ಮನಾಭನ ಪಾದಪದ್ಮವೆ ಗತಿಯೆಂದುಪದ್ಮಜನ ಪದಕೆ ಪೋಗುವನಪದ್ಧತಿಯವಿಡಿದುವರಪದ್ಮಪತಿ ವಾಸ ತ್ರೈಸದ್ಮನಿಗೆ ಉದ್ಯೋಗಮಾಡು11ಕಡು ಬಂಧುಬಳಗ ಸತಿಸುತರುಂಟು ವೃತ್ತಿಯೊಳುಕಡಿಮಿಲ್ಲವೆಂಬ ಪಾಶವನುಕಡಿದು ಕಡಲೊಡೆಯನೆ ಸಲಹೆಂದು ಗರ್ಜಿಸಲುಕಡೆಹಾಯಿಸಬಲ್ಲದಿದು ನಿನಗೆ 12ಆವಾಗೆ ಜಗಕೆ ಸರ್ವೋತ್ತಮನೆ ಹರಿಯೆಂದುಜೀವೋತ್ತಮನೆ ವಾಯುವೆಂದುಭಾವಶುದ್ಧಿಗಳಿಂದ ಬಯಲುಡಂಬಕಬಿಟ್ಟುಜೀವಿಸಲು ಸ್ವರೂಪ ಸುಖವಾಹುದು 13ವರಊಧ್ರ್ವಪುಂಡ್ರಹರಿಮುದ್ರೆಯನಲಂಕರಿಸುಶಿರಿ ತುಲಸಿ ಪದ್ಮಸರ ಧರಿಸುಸ್ಮರನ ಶರಕಂಜದರಿಯಾರುವರ್ಗವನೊದೆದುಹರಿದು ಬಹ ದುರಿತಗಳ ಸದೆದು 14ಏಸುಜನ್ಮದಿ ಬಂದು ನೊಂದೆ ಭವಾಟವಿಯೊಳುಮೋಸ ಹೋಗದಿರಿನ್ನು ತಿಳಿದುಬೇಸರದೆ ಉರಗಾದ್ರಿವರದ ಪ್ರಸನ್ವೆಂಕಟೇಶನಂಘ್ರಿಯ ಬಿಡದೆ ಭಜಿಸು 15
--------------
ಪ್ರಸನ್ನವೆಂಕಟದಾಸರು