ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅ) ಬಾರೋ ವರಶೂರ ಕುಮಾರ ಸುಂದರಾಕಾರ ಪ ಪರಾತ್ಪರ ಕೃಪಾಕರ ಸುರೇಶ್ವರ ಹಿತಕರ ಅ.ಪ ವೇದವ ತಂದಿತ್ತನೆ ಭೂಧರವೆತ್ತಿದನೆ ಮೇದಿನೀ ಸಾಧಕನೆ ಅದ್ಭುತ ವಿಕ್ರಮನೆ 1 ವಾಸವ ವಂದಿತನೆ ಭೂಸುರ ವರದನೆ ಪಾಶೀನುತಮಹಿಮನೆ ಕೇಶವನೆ ದೇರ್ಶಿಕನೆ 2 ವ್ಯಾಕುಲ ಕಳೆವನೆ ಕಾಕೋದರಶಯನನೆ ಸಾಕುವ ಶ್ರೀಕಾಂತನೆ ಏಕಾ ಮೇವಾ ದ್ವಿತೀಯನೆ 3
--------------
ಲಕ್ಷ್ಮೀನಾರಯಣರಾಯರು
* ನೋಡಬಲ್ಲಿರೆ ದಿವ್ಯ ಉಡುಪಿ ಕ್ಷೇತ್ರ ಸತ್ಪಾತ್ರ ಪ. ಶ್ರೇಷ್ಠ ಸದ್ಗುರು ಚರಣ ಕಮಲಗಳಿಗಭಿನಮಿಸಿ ಅಷ್ಟು ದೇವತೆಗಳಿಗೆ ಅಭಿವಂದಿಸಿ ಮುಟ್ಟಿ ಹಿರಿಯರ ಚರಣ ಮಹದಾಜ್ಞೆ ಸ್ವೀಕರಿಸಿ ಪಟ್ಟ ಬ್ರಹ್ಮನ ಪದಕೆ ಸಿರಿಹರಿಗೆ ಎರಗಿ 1 ಎಷ್ಟು ಜನ್ಮದ ಫಲವೊ ಈ ಯಾತ್ರೆ ಕೈಕೊಳಲು ಶ್ರೇಷ್ಠ ಶ್ರೀ ಮಧ್ವಮುನಿ ಮತದಿ ಜನಿಸಿ ದಿಟ್ಟ ವೈಷ್ಣವರಾದ ಭಕ್ತಸಂಗವ ಕೂಡಿ ಬಿಟ್ಟು ಮನ ಕಲ್ಮಷಗಳೆಲ್ಲ ಮುಂದೋಡಿ2 ಭರತಖಂಡದಿ ಪುಟ್ಟಿ ವಾಯುಮತ ಪೊಂದಿದಕೆ ಹರುಷದಲಿ ಈ ಯಾತ್ರೆ ಗೈದಲ್ಲದೆ ಹರಿದು ಪೋಗದು ಜೀವದಜ್ಞಾನದಂಧತೆಯು ಪರಮ ಸುಜ್ಞಾನದಾತನ ನೋಡಬನ್ನಿ 3 ಮಧ್ವರಾಯರ ಕರುಣ ಮುದ್ದು ಕೃಷ್ಣನ ಕತೆಯು ಸದ್ವೈಷ್ಣವರ ಸಂಗ ಸನ್ಮೋದ ಲಾಭ ಹೃದ್ವನಜದಲಿಪ್ಪ ಹರಿಯ ಕಾಣಲು ಮಾರ್ಗ ಗೆದ್ದು ಭವದಬ್ಧಿ ದಾಟುವಿರಿ ನೀವಿನ್ನು 4 ಶ್ರೀ ಪತಿಯು ಬಾಲರೂಪದಿ ಇಲ್ಲಿ ನೆಲಸಿಹನು ಗೋಪಿಕಾಜನಪ್ರಿಯ ಗೋಪಿಬಾಲ ಗೋಪಾಲಕೃಷ್ಣವಿಠ್ಠಲನ ನೋಡುವ ಪುಣ್ಯ ಈ ಪರಮ ಪುರುಷನೇ ತಂದಿತ್ತನೆಂದೂ 5
--------------
ಅಂಬಾಬಾಯಿ
ಎಲ್ಲಿಯ ಮಧುರಾಪುರವು | ಎಲ್ಲಿಯ ತಾ ಬಿಲ್ಲು ಹಬ್ಬ |ಎಲ್ಲಿಯ ಸೋದರಮಾವನೆ ಪಎಲ್ಲಿಯ ಮಲ್ಲರಸಂಗ |ಖುಲ್ಲಕಂಸನು ನಮಗೆ |ಎಲ್ಲಿಯ ಜನ್ಮದ ವೈರಿಯೆ-ಸಖಿಯೆ ಅ.ಪವೃಂದಾವನದೊಳಗಿರುವ ವೃಕ್ಷಜಾತಿಗಳೆಲ್ಲ |ಒಂದೊಂದು ಫಲದಿಂದಲಿ ಸಂದಣಿತವೆ ||ಕುಂದಕುಸುಮದಲಿರುವ ಮಂದಿರದಲಿಚಕೋರ|ಒಂದೊಂದು ಸುಖಭರಿತವೆ ||ಅಂದುಮಾಧವನಮ್ಮ ಹೊಂದಿ ಕರವಿಡಿದ |ನಂದನ ಕಂದನ ಚರಿತವೆ ಸಖಿಯೆ 1ಅಕ್ರೂರ ತಾನೆಲ್ಲ ಅಚ್ಯುತಗೆಎಡೆಮಾಡಿ |ಆ ಕ್ರೂರನೆನಿಸಿದನೆ |ವಕ್ರಮಾರ್ಗವ ಕೂಡಿ ವನಿತೆಯರ ಉಸಿರೆಣಿಸಿ |ಚಕ್ರಧರನಗಲಿಸಿದನೆ ||ಆಕ್ರಮಿಸಿ ಸುರಲೋಕ ಪಾರಿಜಾತವನಂಬು-|ಜಾಕ್ಷಿಗೆ ತಂದಿತ್ತನೆ-ಸಖಿಯೆ 2ನೀರ ಚೆಲ್ಲಾಟದೊಳು ನಿಲಿಸಿ ನಮ್ಮೆಲ್ಲರ |ನಾರಿಯರಿಗೆ ಚಲ್ಲಿದನೆ ||ಮೋರೆ ಮೋರೆ ನೋಡಿ ಅಧರಾಮೃತಗಳ |ಸಾರಿ ಸಾರಿ ಸವಿದುಂಬನೆ ||ದ್ವಾರಕಾಪುರವಾಸ ಪುರಂದರವಿಠಲ |ಸೇರಿ ನಮ್ಮನು ಸಲಹುವನೆ-ಸಖಿಯೆ 3
--------------
ಪುರಂದರದಾಸರು