ಒಟ್ಟು 7 ಕಡೆಗಳಲ್ಲಿ , 6 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮ ನಿವೇದನೆ ಇಂದು ಪಾವನವಾಗಿರೊ | ಇಂದಿರಾ ರಮಣನ್ನ ದಿನ ವ್ರತವ ಮಾಡಿ ಪ ಅನುಜ ನಿಜಾಂಗನೆ | ತನಯರು ನೆರೆಹೊರೆ ಮನ ಜನಕೆ | ಸಿರಿ | ದಿನ ತ್ರಯವನು ಅನುಸರಿಸಿರೆಂದು 1 ಏಕಾದಶಿದನ ವಿಕೇತನದಲಿ ಪಾಕ ಮಾಡಿದರದು | ಕಾಕಮಾಂಸ ಲೋಕದೊಳಗೆ ಸರಿ | ಲೋಕದೊಳಗೆ ಎಂದು | ತಾ ಕೂಗಿ ಸುಖದಲ್ಲೀ | ವಾದ ಪೇಳುತಲಿದ್ದು ಏಕ ಭಕುತಿಯಲ್ಲೀ2 ಹರಿದಿನದಲ್ಲಿ ನೀರು ಬೆರಳಲಿ ಸುರಿದಾ | ಭೂಸುರನು ಚಾಂಡಾಲನು ನಿರುತದಲೀ | ವರಗೋಮಾಂಸ ನರಕಾ | ನರಿ ನಾಯಿರಾಸ | ಸೂಕರ ಭಕ್ಷಣಿಗಿಂತ | ಪರಮ ಉತ್ತಮನೆಂದು 3 ಪ್ರಾಣತ್ಯಾಗವಾಗಿ ಹಾನಿ ಪ್ರಾಪುತದಿಂದ | ಏನೇನು ಸಂಕಟ ತಾನೊದಗೆ | ಆನಂದ ಮತಿ ಈವಾ ಶ್ರೀನಾಥನ ದಿವಸ | ಧಾನ್ಯದಲಿಟ್ಟು ನಿದಾನಕೆ ಗತಿ ಎಂದು 4 ಇತರ ದಿವಸದಲ್ಲಿ ಅತಿಶಯದಿಂದಲೀ | ಕೃತ ಕರ್ಮಗಳು ವಿಹಿತವಹುದೂ | ರತಿಪತಿಪಿತನ ಅಪ್ರತಿವಾಸರದಲ್ಲೀ | ಅತಿ ಅವಶ್ಯಕವಾ ವರ್ಜಿತ ಮಾಡಿ ಸಜ್ಜನರು 5 ಎಲೆ ಹಾಕದೆ ಜಾಗರವ ಬೇಸರದಲೆ | ಲವಲವಿಕೆಯಿಂದ ಕವಿಗಳೊಡನೆ | ತವಕದಿಂದಲಿ ಪಾಡುತ ಗಾಯನ ಶುದ್ಧಾ | ಶ್ರವಣ ಮಾಡುತ್ತ ಸದಾ | ಪವನ ಮತದೊಳಿದ್ದು6 ದಶಮಿ ವಂದು ಏಕಾದಶಿ ಎಂಟು ತಿಳಿದು | ದ್ವಾದಶಿ ಐದು ಹ | ದಿನಾಲ್ಕು ಎಸವ ಝವಾ | ಪುಶಿಯಲ್ಲ ಇದು ಸಿದ್ಧಾ ಅಸುಯವ ಬಡದಲೇ | ಕುಶಲದಿಂದಲಿ ವ್ರತ ಚರಿಸುತ್ತಲಿ ಚನ್ನಾಗಿ 7 ಏಳೊಂದು ವತ್ಸರದ ಮೇಲೆ | ವತ್ಸರ ಬಿಟ್ಟು ವಾಲಾಯ ಉಳಿದವರು | ನೀಲವರ್ಣನ ವ್ರತವಾ ಲೀಲೆಯಿಂದಲಿ ಚರಿಸಿ 8 ಆವಾದಾದರ ಬಿಡದಿರೀ | ಕೇವಲ ಸಾಧನವೂ | ಈ ವಾರವು ದೇವೇಶ ವಿಜಯವಿಠ್ಠಲಗೆ ಸಮರ್ಪಿಸೆ | ಸೇವಿಯ ಪಾಲಿಸಿ ಕೈವಲ್ಲ್ಯದಲಿ ಇಡುವಾ 9
--------------
ವಿಜಯದಾಸ
ವಿಶೇಷಸಂದರ್ಭಗಳ ಹಾಡುಗಳು ತಿಳುಪಿದೆನು ಪರಮ ದಯದಿಂದ ತಿಳುಪಿದೆನು ಪರಮ ದಯದಿಂದ ಮುಂದಣ ಕಾರ್ಯ ಒಳಿತು ಬಿನ್ನಪವÀ ಲಾಲಿಸಲಿಬಹುದಯ್ಯ ಪ ಸಕಲ ದೇಶ ಕಾಲದಲ್ಲಿಪ್ಪ ಸಜ್ಜನರ ಸಕಲ ಪರಿಯಲಿಂದ ಪೊರೆವ ದಾತ ಅಕಳಂಕ ನರಸಿಂಹ ಹೊರತಿಲ್ಲೆಂದು ಸಕಲರೂ ಪೇಳಲು ಕೇಳ ಬಲ್ಲೆ 1 ಇನ್ನಾರು ತರುವಾಯ ದಶಮತಿಯ ರಾಗಮವ ಚನ್ನಾಗಿ ಪೇಳುವೆನೆಂಬುದೊಂದು ನಿನ್ನ ವಚನಂಗಳು ಪುಸಿಯಾಗಬಾರದು ಮನ್ನದಲ್ಲಿ ನೋಡಿಕೋ ಕರುಣ ಸಿಂಧೋ 2 ಬಡವಗೆ ಮಾತುಗಳು ಕೊಟ್ಟಿನ್ನು ತಾವಾಗಿ ಒಡೆಯರೇ ತಪ್ಪಿದರೆ ಏನಂಬರೊ ಮಡಿಯ ಹೊರಳುವೆ ನಿನ್ನ ಅಡಿಗೆ ಬೀಳುವೆ ಸ್ವಾಮಿ ಕಡೆ ಹಾಯಿಸೊ ರಂಗ ಎನ್ನಂತರಂಗ 3 ಜನನಿ ಕಾಣಳು ಕಣ್ಣು ಕಿವಿಯು ಕೇಳದು ಅಣ್ಣ ತನಯರು ಇಂದಿಗೂ ಜನಿಸಲಿಲ್ಲ ಮನದಲ್ಲಿ ಹಲವು ಹಂಬಲಗಳೋಲ್ಯಾಡುತಿವೆ ಜನಕ ಜನನೀ ತನಯ ನೀ ಎನಗೆ 4 ಆಸು ಲೋಕಗಳೆಲ್ಲ ನಿನ್ನವೆ ಸರಿ ಸ್ವಾಮಿ ವಾಸುದೇವವಿಠಲ ಬಹುಕಾಲದಿ ಭೂಸುರನ ಮಾಡಿ ಪುಟ್ಟಿಸಿದರೆ ಚಿರಕಾಲಈ ಸುಧಾಪಾನ ನೀ ಮಾಡಿಸೆನಗೆ
--------------
ವ್ಯಾಸತತ್ವಜ್ಞದಾಸರು
ಉದಿಸೀದಾ ರವಿಯು ತಾನುದಿಸಿದ ಪ ಉದಿಸಿದ ರವಿಯು ತಾನೆನಿಸೀ | ಗುರುಮುದಮುನಿ ಮತವ ವಿಸ್ತರಿಸೀ | ಆಹಬುಧಜನರಂತಸ್ಥ ಬಹು ವಿಧ ತಿಮಿರವಒದೆದು ಛೇದಿಸುವಂಥ ವಿಜಯಾರ್ಯ ತರಣಿಯು ಅ.ಪ. ಸುರಮುನಿ ಪಾದವ ಭಜಿಸೀ | ಯುಗವೆರಡರೊಳ್ ಸುರಲೀಲ ನೆನಿಸೀ | ಯುಗಮೂರರೊಳ್ ನಿಕಂಪನೆನಿಸೀ | ಯುಗಮೂರೊಂದರಲಿ ಕರುವೆನಿಸೀ | ಆಹಪುರಂದರ ದಾಸರ ಗೃಹದೊಳಗುದಿಸುತ 1 ಕರಣೀಕ ಶೀನಪ್ಪ ತನು | ತನ್ನವರಪ್ರಿಯ ಸತಿಕೂಸಮ್ಮನು | ಬಲುಪರಿಪರಿ ಸೇವಿಸಿ ವರವನು | ಪೊಂದಿಎರಡೊಂದು ತನಯರುಗಳು | ಆಹಪರಿ ಪಾಲಿಸುತ್ತಲಿ ಪರಿಪರಿ ಭವಣೇಲಿಪೊರೆಯವು ಉದರವ ಸರಿಯಿತು ಕಾಲವು 2 ಬಡತನ ಭವಣೇಲಿ ಬಂದೂ | ಒಂದುಕುಡಿತೆ ಗಂಜಿಗಾಗಿ ನೊಂದೂ | ಛಾಗಿಒಡೆಯನ ಮನೆಯೊಳಗಂದೂ | ಮೆದ್ದುಒಡಲ ತುಂಬಿಕೊಂಡು ಬಂದೂ | ಆಹಬಡಗ ದಿಕ್ಕಿನ ಗಂಗೆ ಮಡುವ ಕಾಣುವೆನೆಂದುಸಡಗರದಲಿ ಪೋದ ಬಡ ಕೂಸೀಮಗದಾಸ 3 ವತ್ಸರ ತರಳ | ತನ್ನಹಿರಯರಿಗ್ಹೇಳದೆ ಪೊಳಲ | ಬಿಟ್ಟುತಿರುಗುತ ತೀರ್ಥ ಕ್ಷೇತ್ರಗಳ | ಮಿಂದುಮರಳಿ ತಾ ಮಾತಾ ಪಿತೃಗಳ | ಆಹಬೆರೆದು ಮಾನವರಂತೆ ಸಂಸಾರ ವೃತ್ತಿಲಿಚರಿಸಿದವೆರಡುಂಟು ವರುಷವ ಕಳೆಯುತ 4 ಮತ್ತೆ ತಾ ವೈರಾಗ್ಯದಲ್ಲಿ | ಹರಿಪೆತ್ತ ಗಂಗೆಯ ಸ್ನಾನದಲ್ಲಿ | ಮನತೆತ್ತು ಗಯಾದೇಶದಲ್ಲಿ | ಪಿಂಡವಿತ್ತು ವಾರಣಾಸಿಯಲ್ಲಿ | ಆಹಉತ್ತಮರ ಸಂಗ ನಿತ್ಯಸ್ನಾನ ಸಂಧ್ಯಕೃತ್ಯವನೆಸಗಿ ಸುಚಿತ್ತದಿ ಮಲಗಿರೆ 5 ಸತ್ಯ ಸ್ವಪ್ನದಿ ನರಹರಿಯು | ತನ್ನಪುತ್ರನೆಬ್ಬಿಸಿದಂತೆ ಪರಿಯು | ದಾಸರಂತೆ ರೂಪವ ತಾಳಿ ಹರಿಯು | ತನ್ನಹತ್ತಿರ ಕರೆಯುತ ಧೊರೆಯು | ಆಹಚಿತ್ತಜ ಪಿತ ಪೆತ್ತ ಸರಿತವ ದಾಂಟಿಸಿಉತ್ತಮ ಕಾಶಿಯ ವ್ಯಾಸರ ಕಂಡವ 6 ಪರಿ ಪರಿಯ | ಆಹಅಚ್ಚ ಕವನ ಪೇಳಿ ನೆಚ್ಚಿನ ಮನದವರಸ್ವಚ್ಛತನಕೆ ತಿದ್ದಿ ಅಚ್ಚ್ಯುತಗಿಂತವ 7 ಎರಡೊಂದನೇ ಬಾರಿ ಪೋಗಿ | ಕಾಶಿಪುರದಿ ಗಂಗಾಸ್ನಾನಕಾಗಿ | ಕೂಡೆಸುರನದಿ ಪೆಚ್ಚಿ ಮೇಲಾಗಿ | ಸಿರಿವರದ್ವಿಜಗಭಿಷೇಕವಾಗಿ | ಆಹಸರಿತವು ಮುಂಚಿನ ಪರಿಯಂತೆ ಪ್ರವಹಿಸೆಸುರನರೋರುಗರೆಲ್ಲ ಪರಿಪರಿ ಕೊಂಡಾಡೆ 8 ತುತಿಸುತಲಲ್ಲಿಂದ ಸೇತು | ಸ್ನಾನರತಿಯಿಂದ ಗೈಯ್ಯುತ ಹೊತ್ತು | ಹರಿಕಥೆಗಳ ಪೇಳಿ ಯಾವತ್ತು | ಜನತತಿಗೆ ಸನ್ಮಾರ್ಗವನಿತ್ತು | ಆಹತೀರ್ಥ ಕ್ಷೇತ್ರಂಗಳ ನತಿಸುತ ದಶಮತಿಮತವ ಬೀರಿದನೀತ ಸುಜನರ ಪೊರೆಯಲು 9 ಸಾರ | ಸೊಳ್ಹಾದಿಗಳ್ ಮೊದಲಾದ ಹಾರ | ದಿಂದಭೇದ ವಾದಿಯ ಮತೋದ್ಧಾರ | ಗೈದುಶ್ರೀಶ ಗೊಪ್ಪಿಸೀದ ಧೀರ | ಆಹನಾದ ಮೂರುತಿ ಗುರು ಗೋವಿಂದ ವಿಠಲನಪಾದವ ಸ್ಮರಿಸುತ್ತ ಮೋದವ ಪಡುತ್ತಿದ್ದ 10
--------------
ಗುರುಗೋವಿಂದವಿಠಲರು
ತರತಮದಿ ಶರಣು ಮಾಡುವೆ ನಿಮಗೆ ಕರಣಶುದ್ಧಿಯಲ್ಲಿ ಕರುಣ ಮಾಡಿ ಎನ್ನ ಪರಿಪಾಲಿಸಬೇಕು ನಿರುತ ಬಿಡದೆ ಮನ ಸಿರಿಹರಿ ಚರಣಕ್ಕೆ ಎರಗುವಂತೆ ವರಭಕುತಿಯಲ್ಲಿ ಪ ಪರಮೇಷ್ಠಿ ವಾಯು ಸರಸ್ವತಿ ಭಾರತೀ ಉರಗ ಈಶ ಹರಿ ಸತಿಯರು ಮೂ ರೆರಡು ಜನರು ಆ ತರುವಾಯ ಸೌಪರ್ಣಿ ಸಿರಿ ಗುರು ದಕ್ಷನೆ ಶಚಿ ಮರುತ ಪ್ರವಾಹ ಮೂ ವರು ಸನಕಾದ್ಯರು ದುರಿತಶಾಸನ ಶಶಿ ತರಣಿ ಶತರೂಪ ವರುಣ ನಾರದರ 1 ಮುನಿಗಳ ಶ್ರೇಷ್ಠ ಭೃಗು ಅನಲ ಪ್ರಸೂತಗಾಧಿ ತನುಜ ವಾರಿಜಾಜನ್ನತನಯರು ವೈವಸ್ವತ ಸೂರ್ಯ ದನು ಪ್ರವಾಹವೆಂಬ ಅನಿಲನ್ನ ತಳೋದರಿ ಅನಿಲದೇವಜ ಅಶ್ವಿನಿ ದೇವತೆಗಳು ಅನಳಾಕ್ಷಸುತ ಧನಪತಿ ಪ್ರಹ್ಲಾದ ಗುಣಿಸುವೆ ವಸು ಏ ಳನು ದಶರುದ್ರರು ಇನಿತರೊಳಗೆ ಒಬ್ಬನ ಬಿಟ್ಟನು ದಿನ 2 ದಶ ವಿಶ್ವದೇವತರು ಸ್ವಶನರೊಳಗೆಗೀರ್ವರ ರಸದ್ಯುನವಕೋಟಿ ತ್ರಿದಶರೂಪ ಪಿತ್ರರೂ ಎಸವ ಸೋಮ ಪುನರ್ವಾಪಸರಿಪಶತಸ್ಥರು ನಸುನಗೆ ಕರ್ಮಜ ಋಷಿ ಈರ್ವರು ಮನು ಕುಶಲ ಸಪ್ತ್ತರಿಗೆ ತುತಿಸೆ ಕಾಲಕಾಲದಿ 3 ಮಾಂಧಾತ ಬಲಿ ಶಶಿಬಿಂದುವೆ ಪ್ರಿಯವ್ರತ ಪರೀಕ್ಷಿತ ನಂದ ಕಕುಸ್ಥ ಗಯ ಕುಂದದೆ ಯದುಕುಲದಿಂದ ಬಂದ ಹೈಹಯನು ಚಂದ್ರನ ಮಡದಿ ಏಳೊಂದನೆ ಸೂರ್ಯನು ಮಂದಹಾಸಾಂಬುಜ ಬಾಂಧವನಸತಿ ಕಲದರ್ಪನಸೂಸೆ ವೃಂದಾರಕರಿಗೆ 4 ಸದಮಲ ಸ್ವಾಹಾದೇವಿ ಬುಧಾ ಉಷಾದೇವಿ ಶನಿ ಮುದದಿಂದ ಪುಷ್ಕರ ಸಹೃದಯ ತುಂಬರರಿಂದ ಮೊದಲಾಗಿ ನೂರುಮಂದಿ ತ್ರಿದಶ ಗಂಧರ್ವರು ಚದುರೆ ಊರ್ವಸಿ ರಂಭೆ ಅದಿತಿ ಕಶ್ಯಪದಿತಿ ಹದಿನಾರು ಸಾವಿರ ಬುಧನ ಮಕ್ಕಳು ತಪೋನಿಧಿಗಳು ಎಂಭತ್ತು ತದುಪರಿ ಅಜಾನಜ ತ್ರಿದಶರು ಓಜಸ್ತರೆದರಾಗಿ ನಾನಿಂದು 5 ಹರಿಭಕ್ತರಾದ ಅಪ್ಸರ ಸ್ತ್ರೀಯರು ಕೆಲಕೆಲವು ಮರಳೆ ಚಿರಾಖ್ಯನಾಮದಿರುತಿಪ್ಪ ಪಿತೃಗಳು ಪರಿಪರಿ ನೂರುಕೋಟಿ ಪರಮಋಷಿಗಳಿಗೆ ಸುರ ಗಂಧರ್ವರ ವಿಸ್ತರ ಮನುಜ ಗಂಧರ್ವ ಧರಿಣಿಜಾಕವಿ ಮೇಲರಿದು ಜಯಂತಗೆ ಕರ ಮುಗಿವೆ ಕ್ಷಿತಿಪರನು ಕೊಂಡಾಡುತ ಇರುಳು ಹಗಲು ಉತ್ತಮರ ಮನುಜರ ಪಾಡಿ ನಿರುತ ಜಂಗಮ ಸ್ಥಾವರಗಳ ನೋಡುತ 6 ಭುಜಗಶಯನನಿಂದ ಸೃಜಿಸಿದ್ದ ಸರ್ವರಿಗೆ ನಿಜವಾಗಿ ಶಿರವಾಗಿ ಭಜಿಸುವೆ ಚನ್ನಾಗಿ ತ್ರಿಜಗದೊಳಗೆ ಎನ್ನ ರಜ ತಾಮಸ ಗುಣದ ವೃಜವೆ ಓಡಿಸಿ ನಿತ್ಯಸುಜನ ಮಾರ್ಗವ ತೋರಿ ರಜನಿ ಚರಾಂತಕ ವಿಜಯವಿಠ್ಠಲನ್ನ ಭಜಿಪೆನದಕೆ ನಿಮ್ಮ ನಿಜವ್ಯಾಪಾರದಿ ಸೃಜಿಸಿ ಕೊಡುತ ಧರ್ಮ ವೃಜಗಳೊದಗಿಸುತ್ತ ಕುಜನ ಮತದ ಮೇಲೆ ಧ್ವಜವೆತ್ತಿಸುವುದು 7
--------------
ವಿಜಯದಾಸ
ಸಂಕ್ಷಿಪ್ತ ವಿರಾಟಪರ್ವ ಕೇಳು ಜನಮೇಜಯರಾಜ ಭೂಮಿ- ಪಾಲ ಪಾಂಡವರ ಸತ್ಕಥೆಯಪ. ಭೂರಿ ವ- ನಾಳಿಯನು ಸಂಚರಿಸಿ ಸಜ್ಜನ ಕೇಳಿಯಲಿ ವನವಾಸದವಧಿಯ ಕಾಲವನು ಕಳೆಕಳೆದು ಬಂದರುಅ.ಪ. ದರ್ವೀಧರಹಸ್ತನಾಗಿ ಮಹಾ ಪರ್ವತದಂತುರೆ ಮಸಗಿ ನಿರ್ವಹಿಸಿ ಸೂದತ್ವವನು ಸಲೆ ಗರ್ವಿತಾಧಮ ಕೀಚಕನ ಕುಲ ಸರ್ವವನು ಸಂಹರಿಪ ಭೀಮ ಪೆ- ಸರ್ವಡೆದ ಗುರುವರ್ಯ ಬಂದನು 1 ಕಡುಗಲಿ ಕಲಿಮಲಧ್ವಂಸ ಎದ್ದು ನಡೆದು ಬಂದನು ಪರಮಹಂಸ ನಿಡುಕಿ ಮನದಿ ವಿರಾಟರಾಯನ ಪೊಡವಿಗಿಡೆ ಪದ ಕೀಚಕಾಖ್ಯನ ಎಡದ ಭುಜ ಕಂಪಿಸಿತು ಮೂಜಗ ದೊಡೆಯನುಡುಪತಿಕುಲಶಿಖಾಮಣಿ2 ಗಂಗಾದಿ ನದಿಗಳ ತೀರ ಪಟ್ಟ ಣಂಗಳ ಗೈದ ಸಂಚಾರ ತುಂಗಬಲ ಮಲ್ಲರುಗಳನು ಸಲೆ ಸಂಘಟಿಸಿ ಜೀಮೂತವೀರಪ್ಪ ಸಂಗದಲಿ ವೈರಾಟಪುರ ರಾ ಜಾಂಗಣಕೆ ಭದ್ರಾಂಗ ಬಂದನು3 ಇಂತು ಮಲ್ಲರನೆಲ್ಲ ಸದೆದು ಬಲ ವಂತರಿರಲು ನೃಪಗೊಲಿದು ಸಂತಸವ ಬಡಿಸುತ್ತಲಿರಲ್ವಾ ಕುಂತಿತನಯರು ಹರಿಯ ನಾಮವ ಚಿಂತಿಸುತ ದಶಮಾಸ ಕಳೆದಾ ನಂತರದ ವೃತ್ತಾಂತವೆಲ್ಲವ4 ಕಥೆಯಂತೆ ಹಿಂದೆ ರಾವಣನ ಕೆಟ್ಟ ಗತಿಗನುಚರ ಕೀಚಕನ ಸ್ಥಿತಿಯು ದ್ರುಪದಜೆಗಾದ ಮಾನ ಚ್ಯುತಿಗೆ ಕಾರಣನಾದ ಜಡ ದು- ರ್ಮತಿ ಖಳಾಧಮನೊಂದು ದಿನ ನೃಪ ಸತಿಸಭೆಗೆ ಅತಿ ಹಿತದಿ ಬಂದನು5 ಪಾಪಿ ಕೀಚಕನಿಗಿಂತುಸುರಿ ದ್ರುಪದ ಭೂಪಾಲಕನ ಕಿಶೋರಿ ಶ್ರೀಪತಿಯ ನಾಮವನು ಸ್ಮರಿಸುತ- ಲಾ ಪತಿವ್ರತೆ ತೊಲಗಲಂಗಜ ತಾಪತಪ್ತಾಂತಃಕರಣ ನಾ ಪರಿಯ ಮತಿ ವ್ಯಾಪಿಸಿದನು6 ಲಾಲಿಸಿ ಮಾಲಿನಿವಚನ ತೋಷ ತಾಳಿದ ದುರ್ಗುಣಸದನ ಕಾಲಪಾಶದಿ ಬಿಗಿವಡೆದು ಹೇ- ರಾಳ ಮುದಕೀಲಾಲ ಸಲೆ ಕ- ಲ್ಲೋಲಜಾಲದಿ ಮುಳುಗಿ ನರ್ತನ ಶಾಲೆಗಾಗಿ ಕರಾಳ ಬಂದನು7 ಮಥಿಸಿ ಕೀಚಕನ ಮಂಟಪದಿ ದ್ರುಪದ ಸುತೆಗೆ ತೋರಿಸಲತಿ ಮುದದಿ ಸತಿಶಿರೋಮಣಿ ಕಂಡು ಮನದೊಳ- ಗತುಳ ಹರುಷವನಾಂತು ಸರ್ವೋ ನ್ನತಭುಜನ ಚುಂಬಿಸಿದಳು ಪತಿ ವ್ರತೆಯರ ಶಿರೋರತುನೆ ಪಾವನೆ8 ಇತ್ತ ವಿರಾಟನಗರದ ಸರ್ವ ವೃತ್ತಾಂತವೆಲ್ಲವ ತಿಳಿದ ಧೂರ್ತ ದುರ್ಯೋಧನ ದುರಾಗ್ರಹ ಚಿತ್ತಗ್ರಹಿಸಿದ ಕಾರ್ಯಕಾರಣ ವೃತ್ತಿಯಲ್ಲಿ ಪಾಂಡವರು ನಿಜವೆಂ- ದಾಪ್ತಜನರೊಳು ವಿಸ್ತರಿಸಿದನು9 ಕರ್ಣ ದ್ರೋಣ ಕೃಪಾ ದ್ಯರು ಕೂಡಿ ಕುಜನಪ್ರವೀಣ ಪೊರಟ ಪರಮೋತ್ಸಾಹ ಸಾಹಸ ಭರತಿ ಕೌರವರಾಯ ಮತ್ಸ್ಯನ ಪುರವರ ಸಮೀಪದಿ ಸುಶರ್ಮನ ಕರೆದೊರೆದ ಭೂವರ ನಿರ್ಧರ10 ನುಡಿಯ ಕೇಳುತಲಿ ಸುಶರ್ಮ ನಿಜ ಪಡೆಯ ನೆರಹಿ ವೈರಿವರ್ಮ ದೃಢಕರಿಸಿ ದಿನಮಣಿಯು ಪಶ್ಚಿಮ- ಕಡಲ ಸಾರುವ ಸಮಯ ಗೋವ್ಗಳ ಪಿಡಿದು ಗೋಪರ ಕೆಡಹಿ ಬೊಬ್ಬಿ- ಟ್ಟೊಡನೊಡನೆ ಪಡಿಬಲವನರಸಿದ11 ಹಾರಿಸಿದನು ರಥ ಪಾರ್ಥ ನರ ನಾರಿವೇಷದ ಪುರುಷಾರ್ಥ ತೋರಿಸುವೆನೆಂಬುತ್ಸಾಹದೊಳು ಬ್ಬೇರಿ ಮನದೊಳು ಕೃಷ್ಣನಂಘ್ರಿಸ- ರೋರುಹಕೆ ಮಣಿದುತ್ತರನ ಸಹ ಸೇರಿ ನಗರದ್ವಾರ ದಾಟಿದ12 ಭೀತಿಯ ಬಿಡು ಬಾರೆಂದು ಪುರು ಹೂತಸುತನು ಎಳತಂದು ಘಾತಿಸುವೆ ರಿಪುಬಲವನೆಂದು ವ- ರೂಥದಲಿ ಕುಳ್ಳಿರಿಸಿ ನೃಪತನು ಜಾತಸಹ ಪಿತೃವನದ ಮಧ್ಯ ಶ- ಮೀತರುವಿನೆಡೆಗೋತು ಬಂದರು13 ಇಂತು ತಿಳಿಸುತಲರ್ಜುನನು ಬಲ ವಂತನು ಧನುಶರಗಳನು ತಾಂ ತವಕದಿಂ ಧರಿಸಿ ವಿಜಯ ಮ- ಹಾಂತ ವೀರಾವೇಶಭೂಷಣ ವಾಂತು ಶಂಖನಿನಾದದಿಂ ರಿಪು ತಿಂಥಿಣಿಯ ಭಯಭ್ರಾಂತಗೊಳಿಸಿದ 14 ಹೂಡಿ ಬಾಣವನುರ್ಜುನನು ಚೆಂ- ಡಾಡಿದ ರಿಪುಬಲವನ್ನು ಮೂಢ ದುರ್ಯೋಧನನ ಕಣೆಗಳ ಜೋಡಣೆಗಳಿಂ ಬಿಗಿದು ತನ್ನೋಶ ಮಾಡಿಕೊಂಡನು ಗೋಪಗೋವ್ಗಳ ನಾಡಲೇನದ ಪ್ರೌಢತನವನು15
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಧರ್ಮಪುರಿ ಕ್ಷೇತ್ರ ಪರವಾಸುದೇವ ಸ್ತೋತ್ರ61ಶರಣು ಹೊಕ್ಕೆನೋ ನಿನ್ನ |ಪರವಾಸುದೇವನೇ ಪಾಲಿಸೆನ್ನಲಿ ಕೃಷ್ಣ |ಕರಿರಾಜವರದನೇ ಶರಣ ವತ್ಸಲ ಘನ್ನ |ಭಕ್ತಜನ ಪ್ರಸನ್ನ |ಉರುಗುಣಾರ್ಣವ ವೇದವೇದ್ಯನೆ |ಶಿರಿ ಕರಾಂಬುರುಹಾಚೀತಾಂಘ್ರಿ |ಸರೋಜವಿಧಿಶಿವಾದ್ಯಮರ ವಂದ್ಯನೆ ಸರ್ವಕರ್ತಾಶರಣುಹೊಕ್ಕೆನೋ ನಿನ್ನ|| ಪಮೀನಕೂರ್ಮವರಾಹ| ಚಿನ್ಮಾತ್ರವಪುಷವೀರಭದ್ರ ನೃಸಿಂಹ||ಬಲಿರಾಯಗೊಲಿದು ಕೆಡಹಿದೈತ್ಯ ಸಮೂಹ ||ದುಷ್ಟನೃಪರ ಸೀಳಿ ಬಿಸುಟು ಬ್ರಹ್ಮ | ಕುಲವರವಾಯು ಮಹಾರ್ಹಹನುಮಪ್ರಿಯರವಿ ಸುತ ವಿಭೀಷಣರಿಗೆ ನೀ ಅಭಯನೀಡಿ ಪಾಂಡು -ತನಯರು ದ್ರೌಪದೀ ವಿದುರಉದ್ಧವಇನ್ನುಬಹು ಸಜ್ಜನರಿಗೊಲಿದು ||ಜನಜನೆನಿಸಿದಿ ದೈತ್ಯಮೋಹಕ ಸುರಸುಬೋಧಕ ಬುದ್ಧಶರಣು |ಕ್ಷೋಣಿಯಲ್ಲಿ ಚೋರರಾಜರ ಸದೆದು -ಧರ್ಮಸ್ಥಾಪಿಸಿದಿ ಹೇ ಕಲ್ಕಿ ನಮೋ ನಮೋಪಾಹಿಸಂತತ1ಸರ್ವಗತ ಸರ್ವೇಶ | ಸರ್ವೇಶ್ವರನು ನೀನೇ ಕಾಲವಸ್ತುದೇಶ ||ಸರ್ವತ್ರಒಳಹೊರ ವ್ಯಾಪ್ತನಾಗಿಹ ಶ್ರೀಶ ||ಶ್ರೀತತ್ವ ನಿನ್ನಲಿ ಓತಪ್ರೋತಮಹೇಶ | ಅಕರನೇನಿರ್ದೋಷ ||ಸಚ್ಚಿತ್ ಸುಖಮಯ ಆತ್ಮಾಪ್ರೇದಕ್ಕೂ ಅಮಿತ ಸತ್ಕಲ್ಯಾಣಗುಣನಿಧೇ ||ಸರ್ವಜಗಚ್ಚೇಷ್ಟೆಯನು ಗೈಸುತಿ ಸ್ವಪ್ರಯೋಜನ ರಹಿತಸ್ವಾಮಿಯೇ |ಅಜಿತರುಚಿರಾಂಗದನೇ ಸ್ವಾಸ್ಯನೇ ಸರ್ವಭೂತಾಂತರಾತ್ಮನೇ ||ಅಚ್ಯುತನೇ ಸಂಪೂರ್ಣ ಕಾಮನೇ ಅತಿಜ್ಞಾನ ವೈರಾಗ್ಯ ಸಂಪತ್‍ದಾತಕರುಣಿ | ಗುರುವೇಂಕಟ || ಶರಣು || 2ಧರ್ಮಪುರಿಯಲ್ಲಿರುತ್ತಿ | ಶೇಷಶಯನನೇನಮೋ ಪರವಾಸುದೇವ ಪ್ರಮೋದಿ ||ಮದ್ದೋಷ ಕಳೆದು ಸದ್ಧರ್ಮದಲಿ ಇಡು ದಯದಿ |ವೃಷಾತಪಿಯೇ ಕಪಿತನಾಮಕನಮೋ ಆನಂದಿ ನಂದಾ ನಂದನ ನಂಹಿಜಗದಾಧಾರ ಶ್ರೀಕೂರ್ಮನಭ ಅರ್ಕಾದಿ ಧಾರಕ ಶಿಂಶುಮಾರನೇಸಾಗರವು ಭೂಮಿಯನು ನುಂಗದೇ ಹಿಂದೆ ಸೆಳೆದು ಧರೆಯರಕ್ಷಿಪ ||ಸಾಗರದಲ್ಲಿರುವ ವಡವಾವತ್ತಅಗ್ನಿನೀನು ಸವತ್ರ ಹರವು |ಮುಖ್ಯ ರಕ್ಷಕ ವೇಧತಾತ ಪ್ರಸನ್ನ ಶ್ರೀನಿವಾಸ ಶ್ರೀಪತಿಗರುಡಕೇತನಶರಣು ಹೊಕ್ಕೆನೋನಿನ್ನ 3
--------------
ಪ್ರಸನ್ನ ಶ್ರೀನಿವಾಸದಾಸರು
ಸಂಕ್ಷಿಪ್ತ ವಿರಾಟಪರ್ವಕೇಳು ಜನಮೇಜಯರಾಜ ಭೂಮಿ-ಪಾಲ ಪಾಂಡವರ ಸತ್ಕಥೆಯ ಪ.ಶ್ರೀಲಲಾಮನ ನೆನೆದುಭೂರಿವ-ನಾಳಿಯನು ಸಂಚರಿಸಿ ಸಜ್ಜನಕೇಳಿಯಲಿ ವನವಾಸದವಧಿಯಕಾಲವನು ಕಳೆಕಳೆದು ಬಂದರು ಅ.ಪ.ದರ್ವೀಧರಹಸ್ತನಾಗಿ ಮಹಾಪರ್ವತದಂತುರೆ ಮಸಗಿನಿರ್ವಹಿಸಿ ಸೂದತ್ವವನು ಸಲೆಗರ್ವಿತಾಧಮ ಕೀಚಕನ ಕುಲಸರ್ವವನು ಸಂಹರಿಪ ಭೀಮ ಪೆ-ಸರ್ವಡೆದ ಗುರುವರ್ಯ ಬಂದನು 1ಕಡುಗಲಿ ಕಲಿಮಲಧ್ವಂಸ ಎದ್ದುನಡೆದು ಬಂದನು ಪರಮಹಂಸನಿಡುಕಿ ಮನದಿ ವಿರಾಟರಾಯನಪೊಡವಿಗಿಡೆ ಪದ ಕೀಚಕಾಖ್ಯನಎಡದ ಭುಜ ಕಂಪಿಸಿತು ಮೂಜಗದೊಡೆಯನುಡುಪತಿಕುಲಶಿಖಾಮಣಿ 2ಗಂಗಾದಿ ನದಿಗಳ ತೀರ ಪಟ್ಟಣಂಗಳ ಗೈದ ಸಂಚಾರತುಂಗಬಲ ಮಲ್ಲರುಗಳನು ಸಲೆಸಂಘಟಿಸಿ ಜೀಮೂತವೀರಪ್ಪಸಂಗದಲಿ ವೈರಾಟಪುರ ರಾಜಾಂಗಣಕೆ ಭದ್ರಾಂಗ ಬಂದನು 3ಇಂತು ಮಲ್ಲರನೆಲ್ಲ ಸದೆದು ಬಲವಂತರಿರಲು ನೃಪಗೊಲಿದುಸಂತಸವ ಬಡಿಸುತ್ತಲಿರಲ್ವಾಕುಂತಿತನಯರು ಹರಿಯ ನಾಮವಚಿಂತಿಸುತ ದಶಮಾಸ ಕಳೆದಾನಂತರದ ವೃತ್ತಾಂತವೆಲ್ಲವ 4ಕಥೆಯಂತೆ ಹಿಂದೆ ರಾವಣನ ಕೆಟ್ಟಗತಿಗನುಚರ ಕೀಚಕನಸ್ಥಿತಿಯು ದ್ರುಪದಜೆಗಾದಮಾನಚ್ಯುತಿಗೆ ಕಾರಣನಾದ ಜಡ ದು-ರ್ಮತಿ ಖಳಾಧಮನೊಂದು ದಿನನೃಪಸತಿಸಭೆಗೆ ಅತಿ ಹಿತದಿ ಬಂದನು 5ಪಾಪಿ ಕೀಚಕನಿಗಿಂತುಸುರಿ ದ್ರುಪದಭೂಪಾಲಕನ ಕಿಶೋರಿಶ್ರೀಪತಿಯ ನಾಮವನು ಸ್ಮರಿಸುತ-ಲಾ ಪತಿವ್ರತೆ ತೊಲಗಲಂಗಜತಾಪತಪ್ತಾಂತಃಕರಣನಾ ಪರಿಯ ಮತಿ ವ್ಯಾಪಿಸಿದನು 6ಲಾಲಿಸಿ ಮಾಲಿನಿವಚನ ತೋಷತಾಳಿದ ದುರ್ಗುಣಸದನಕಾಲಪಾಶದಿ ಬಿಗಿವಡೆದು ಹೇ-ರಾಳ ಮುದಕೀಲಾಲ ಸಲೆ ಕ-ಲ್ಲೋಲಜಾಲದಿ ಮುಳುಗಿ ನರ್ತನಶಾಲೆಗಾಗಿ ಕರಾಳ ಬಂದನು 7ಮಥಿಸಿ ಕೀಚಕನ ಮಂಟಪದಿ ದ್ರುಪದಸುತೆಗೆ ತೋರಿಸಲತಿ ಮುದದಿಸತಿಶಿರೋಮಣಿ ಕಂಡು ಮನದೊಳ-ಗತುಳ ಹರುಷವನಾಂತು ಸರ್ವೋನ್ನತಭುಜನ ಚುಂಬಿಸಿದಳುಪತಿವ್ರತೆಯರ ಶಿರೋರತುನೆ ಪಾವನೆ 8ಇತ್ತ ವಿರಾಟನಗರದ ಸರ್ವವೃತ್ತಾಂತವೆಲ್ಲವ ತಿಳಿದಧೂರ್ತದುರ್ಯೋಧನ ದುರಾಗ್ರಹಚಿತ್ತಗ್ರಹಿಸಿದ ಕಾರ್ಯಕಾರಣವೃತ್ತಿಯಲ್ಲಿ ಪಾಂಡವರು ನಿಜವೆಂ-ದಾಪ್ತಜನರೊಳು ವಿಸ್ತರಿಸಿದನು 9ಸುರನದೀಸುತಕರ್ಣದ್ರೋಣ ಕೃಪಾದ್ಯರು ಕೂಡಿ ಕುಜನಪ್ರವೀಣಪೊರಟ ಪರಮೋತ್ಸಾಹ ಸಾಹಸಭರತಿ ಕೌರವರಾಯ ಮತ್ಸ್ಯನಪುರವರ ಸಮೀಪದಿ ಸುಶರ್ಮನಕರೆದೊರೆದ ಭೂವರ ನಿರ್ಧರ 10ನುಡಿಯ ಕೇಳುತಲಿ ಸುಶರ್ಮ ನಿಜಪಡೆಯ ನೆರಹಿ ವೈರಿವರ್ಮದೃಢಕರಿಸಿ ದಿನಮಣಿಯು ಪಶ್ಚಿಮ-ಕಡಲ ಸಾರುವ ಸಮಯ ಗೋವ್ಗಳಪಿಡಿದು ಗೋಪರ ಕೆಡಹಿ ಬೊಬ್ಬಿ-ಟ್ಟೊಡನೊಡನೆ ಪಡಿಬಲವನರಸಿದ 11ಹಾರಿಸಿದನು ರಥ ಪಾರ್ಥನರನಾರಿವೇಷದ ಪುರುಷಾರ್ಥತೋರಿಸುವೆನೆಂಬುತ್ಸಾಹದೊಳುಬ್ಬೇರಿ ಮನದೊಳು ಕೃಷ್ಣನಂಘ್ರಿಸ-ರೋರುಹಕೆ ಮಣಿದುತ್ತರನ ಸಹಸೇರಿ ನಗರದ್ವಾರ ದಾಟಿದ 12ಭೀತಿಯ ಬಿಡು ಬಾರೆಂದು ಪುರುಹೂತಸುತನು ಎಳತಂದುಘಾತಿಸುವೆ ರಿಪುಬಲವನೆಂದು ವ-ರೂಥದಲಿ ಕುಳ್ಳಿರಿಸಿ ನೃಪತನುಜಾತಸಹ ಪಿತೃವನದ ಮಧ್ಯ ಶ-ಮೀತರುವಿನೆಡೆಗೋತು ಬಂದರು 13ಇಂತು ತಿಳಿಸುತಲರ್ಜುನನು ಬಲವಂತನು ಧನುಶರಗಳನುತಾಂ ತವಕದಿಂ ಧರಿಸಿವಿಜಯಮ-ಹಾಂತ ವೀರಾವೇಶಭೂಷಣವಾಂತು ಶಂಖನಿನಾದದಿಂರಿಪುತಿಂಥಿಣಿಯ ಭಯಭ್ರಾಂತಗೊಳಿಸಿದ 14ಹೂಡಿ ಬಾಣವನುರ್ಜುನನು ಚೆಂ-ಡಾಡಿದ ರಿಪುಬಲವನ್ನುಮೂಢ ದುರ್ಯೋಧನನ ಕಣೆಗಳಜೋಡಣೆಗಳಿಂ ಬಿಗಿದು ತನ್ನೋಶಮಾಡಿಕೊಂಡನು ಗೋಪಗೋವ್ಗಳನಾಡಲೇನದ ಪ್ರೌಢತನವನು 15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ