ಒಟ್ಟು 7 ಕಡೆಗಳಲ್ಲಿ , 6 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕವಿ ಮಾತುಗಳ ಕೇಳಿ ಕೆಟ್ಹೋಗಬೇಡಿರಿಕವಿ ನಾಶ ತನವೆಂದು ಹೇಳಲಿಲ್ಲಶಿವನ ತಿಳಿದು ನಿಮ್ಮಶಿವನೆಂದು ಕಂಡರೆ ಸಾಕ್ಷಾತ್ ಬ್ರಹ್ಮನೆ ನೀವೆಯೆಲ್ಲಾ ಪ ಸೋಗೆಗಣ್ಣುಗಳೆಂದು ಹೇಳಿದನಲ್ಲವೇಸೋಗೆಗಣ್ಣಿನ ಸೀಳ ಹೇಳಲಿಲ್ಲಮೂಗನು ಸಂಪಿಗೆ ನನೆಯೆಂದನಲ್ಲವೆಮೂಗಿನ ಸಿಂಬಳ ಹೇಳಲಿಲ್ಲ 1 ಬಾಯಿ ಕರ್ಪೂರದ ಕರಡಿಗೆ ಎಂದನಲ್ಲವೆಬಾಯೊಳಗಣ ಲೊಟ್ಟೆ ಹೇಳಲಿಲ್ಲಕಾಯವು ಕನಕದ ಬಾಳ ಎಂದನಲ್ಲವೆಕಾಯ ದುರ್ಗಂಧವ ಹೇಳಲಿಲ್ಲ 2 ಮಂದಗಮನೆ ಎಂದು ನಡೆಗಂದನಲ್ಲವೆಹಂದಿದುಟಿಯನದ ಹೇಳಲಿಲ್ಲಸುಂದರ ಸರ್ಪವೇಣಿ ಎಂದನಲ್ಲವೆಸಂದಿ ಸಂದಿಯ ಹೇನ ಹೇಳಲಿಲ್ಲ3 ನರದೇಹವನು ಕೊಂಡಾಡಿದನಲ್ಲವೆನರದೇಹ ನರಕವೆಂದ್ಹೇಳಲಿಲ್ಲಗುರು ಚಿದಾನಂದ ಸದ್ಗುರುನಾಥನ ನಂಬಿಶರೀರವ ಕಳೆ ಎಂದು ಹೇಳಲಿಲ್ಲ4
--------------
ಚಿದಾನಂದ ಅವಧೂತರು
ಕೋಲ ಕೋಲೆನ್ನ ಕೋಲ ಕೋಲೆನ್ನ ಕೋಲ ಕೋಲ ಶ್ರೀ ಹರಿಯ ನೆನದೇವ ಕೋಲ ಪ. ನಾರಿಯರಿಬ್ಬರಿಗೆ ಹರಿಯು ಕರೆದು ಮಾತಾಡದ್ಹಾಂಗೆ ನೀರೊಳಗೆ ಹೋಗಿ ಅಡಗಿದ ಕೋಲನೀರೊಳಗೆ ಹೋಗಿ ಅಡಗಿದ ರುಕ್ಮಿಣಿಪೋರತನವೆಂದು ಬಿಡಬೇಕು ಕೋಲ 1 ಕೃಷ್ಣ ನಮ್ಮರಮನೆ ಬಿಟ್ಹೋಗ ಬಾರದೆಂದು ಬೆಟ್ಟವ ಮ್ಯಾಲೆ ಹೊರೆಸಿದ ಕೋಲ ಬೆಟ್ಟವ ಮ್ಯಾಲೆ ಹೊರೆಸಿದ ಸತ್ಯಭಾಮೆಗಟ್ಟಿ ಎದೆಯವಳು ಹೌದು ಹೌದು ಕೋಲ 2 ನೀರಜನಯ್ಯಗೆರಡುಕ್ವಾರಿ ಚಿನ್ಹವ ಮಾಡಿ ಮಾರಿಯ ಗುರುತು ಮರೆಸಿದಿ ಕೋಲ ಮಾರಿಯ ಗುರುತು ಮರೆಸಿದಿ ನೀಲಾದೇವಿಧೈರ್ಯ ವಿನ್ನೆಷ್ಟು ಧಮಕೆಷ್ಟು ಕೋಲ 3 ಹರದೆಯರಿಬ್ಬರು ಹರಿಯ ಕರೆದು ಮಾತಾಡದ್ಹಾಂಗೆ ಉರಿಮಾರಿಮಾಡಿ ನಿಲ್ಲಿಸಿದಿ ಕೋಲಉರಿಮಾರಿ ಮಾಡಿನಿಲ್ಲಿಸಿದಿಭದ್ರಾದೇವಿಸರಿಯವರು ನೋಡಿ ನಗುತಾರೆ ಕೋಲ 4 ಕರ ಕರಿಯೆಂದು ಬಿಡಬೇಕು ಕೋಲ 5 ಮಡದಿಯರಿಬ್ಬರು ಹರಿಯ ಕರೆದು ಮಾತಾಡದ್ಹಾಂಗೆ ಕೊಡಲಿಯ ಕೊಟ್ಟು ಬಡವನೆ ಕೋಲ ಕೊಡಲಿಯ ಕೊಟ್ಟು ಬಡವನೆ ಮಾಡಿದ ಕಿಡಿಗೇಡಿತನವ ಬಿಡು ಕಾಳಿ ಕೋಲ 6 ನಲ್ಲೆಯರಿಬ್ಬರು ಹರಿಯ ಎಲ್ಲೆಲ್ಲೂ ಬಿಡದ್ಹಾಂಗೆ ಬಿಲ್ಲನೆ ಕೊಟ್ಟು ನಿಲ್ಲಿಸಿದಿಬಿಲ್ಲನೆ ಕೊಟ್ಟು ನಿಲ್ಲಿಸಿದಿ ಲಕ್ಷಣಾಕಲ್ಲೆದೆಯವಳು ಹೌದ ಹೌದ ಕೋಲ 7 ಒಳ್ಳೆಗುಣಪೂರ್ಣಗೆ ಕಳ್ಳನಂತೆ ಹೆಸರಿಟ್ಟಿಸುಳ್ಳು ನೋಡಿದರೆ ವಿಪರೀತ ಕೋಲ ಸುಳ್ಳು ನೋಡಿದರೆ ವಿಪರೀತ ಜಾಂಬವಂತಿಕೊಳ್ಳಿಯ ಗುಮ್ಮಗುರುವೇನ ಕೋಲ 8 ಮುದ್ದು ಹದಿನಾರು ಸಾವಿರ ಬುದ್ದಿವಂತರ ಕೂಡಿಹದ್ದೆರ್ದಬೌದ್ಧ ಎನುತಲೆ ಕೋಲ ಹದ್ದೆರ್ದಬೌದ್ಧ ಎನುತಲೆ ಬೆನ್ನ ಹತ್ತಲು ಇದ್ದಜನರೆಲ್ಲ ನಗುತಾರೆ ಕೋಲ 9 ನೂರು ಮಂದಿ ಹರಿಯ ದಾರಿಯ ಕಟ್ಟಲು ಹಾರಿದ ಕೃಷ್ಣ ಕುದರಿಯ ಕೋಲ ಹಾರಿದ ಕೃಷ್ಣ ಕುದುರೆ ಏರಿಕೊಂಡುಮಾರಿ ತೋರದಲೆ ಬರಲಿಲ್ಲ ಕೋಲ10 ಚಲ್ವ ರಾಮೇಶ ಎಲ್ಲ ಲಲನೆಯರಿಗೆ ಅಂಜಿಕೊಂಡುಬಲಿಯ ಮನೆ ಮುಂದೆ ಕುಳಿತಾನೆ ಕೋಲ ಬಲಿಯ ಮನೆ ಮುಂದೆ ಕುಳಿತಾನೆ ರುಕ್ಮಿಣಿಕಲಹವ ಬಿಟ್ಟು ಕರೆತಾರೆ ಕೋಲ 11
--------------
ಗಲಗಲಿಅವ್ವನವರು
ಪಂಚಮಿಯ ದಿನ ವಿಭವ ನಮ್ಮ ಶ್ರೀನಿವಾಸನ ಮಹಾತ್ಮವ ಮಾನಿನಿ ರನ್ನೆ ನೀ ಪೇಳೆ ಭಕ್ತಾ- ಧೀನದ ಚರಣದ ಲೀಲೆ ಭಾನು ಉದಯದಲಿ ವೀಣಾದಿ ಸು- ಗಾನ ವಾದ್ಯ ನಾನಾವಿಧ ರಭಸದಿ1 ಎತ್ತಲು ನೋಡಿದಡತ್ತ ಜನ- ಮೊತ್ತವಿಲಾಸವಿದೆತ್ತ ಚಿತ್ತದಿ ನಲಿನಲಿದಾಡಿ ತೋಷ- ವೆತ್ತಿರುವನು ಒಟ್ಟುಗೂಡಿ ಸುತ್ತುಮುತ್ತು ಒತ್ತೊತ್ತಿಲಿಹರು ವಿ- ಪ್ರೋತ್ತಮ ಶ್ರೀಹರಿಭಕ್ತರ ಮಯವಿದು2 ಚಾಮರ ಛತ್ರ ಸಿಗುರಿಯು ಜನ- ಸ್ತೋಮ ಪತಾಕೆ ತೋರಣವು ಹೇಮದ ಕಂಚುಕಿ ಈಟಿ ಗುಣ- ಧಾಮನ ಬಿರುದುಗಳ್ ಕೋಟಿ ಆ ಮಹಾಭೇರಿ ಪಟಹ ನಿಸ್ಸಾಳಕ ಸಾಮಗಾನ ಸಾಮ್ರಾಜ್ಯವೋಲಿಹುದು3 ಬಾಲರು ವೃದ್ಧ ಯೌವನರು\ಜನ- ಜಾಲವೆಲ್ಲರು ಕೂಡಿಹರು ಲೋಲ ಸ್ರೀಮುಂದ್ರಾಂಕಿತದಿ ಬಹು ವಿ- ಶಾಲ ದ್ವಾದಶನಾಮ ಮುದದಿ ಆಲಯದೊಳಗಿಹ ಬಾಲಕಿಯರು ಸಹ ಸಾಲಂಕೃತ ಸಮ್ಮೇಳದಿ ನಲಿವರು4 ಒಂದು ಭಾಗದಿ ವೇದಘೋಷ ಮ- ತ್ತೊಂದು ಭಾಗದಿ ಜನಘೋಷ ಇಂದಿನ ದಿನದತಿಚೋದ್ಯ ಏ- ನೆಂದು ವರ್ಣಿಸುವದಸಾಧ್ಯ ಚಂದಿರಮುಖಿ ಯಾರೆಂದೆನಗುಸುರೆಲೆ ಮಂದರಧರ ಗೋವಿಂದನ ಮಹಿಮೆಯ5 ಊರ್ವಶಿ : ಕೇಳಿದ್ಯಾ ನಳಿನಾಕ್ಷಿ ಶ್ರೀಹರಿಲೀಲೆ ಪೇಳಲೇನದಾ ಮೂರ್ಲೋಕದೊಳಗೀ ವಿ- ಶಾಲವ ನಾ ಕಾಣೆಪ. ಸೋಜಿಗ ಸೌಭಾಗ್ಯ ಸಂಪದಕಿದು ಬೀಜ ಕಾಣೆಲೆ ರಾಜೀವನಾಭನ ಪೂಜಾವಿನೋದದಿ ರಾಜವದನೆ ವನಭೋಜನದಿಂದಿನ1 ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹ ಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹ ರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು2 ನೂತನವೆಂದು ನೀ ಪೇಳುವಿ ಚಂದಿರ ಮುಖಿ ಜನಸಂದಣಿಗಳು ಮಹಾ ಮಂದಿ ಓಲೈಸುವರಿಂದು ಮುಕುಂದನ3 ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆಪ. ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆ ಕಾಣುವ ಯೋಗಭೋಗ1 ಎನಗತಿ ಮನವು ನಿನಗತಿ ಛಲವು ಜನುಮಾಂತರ ಪುಣ್ಯವೈಸೆ ನೀ2 ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾ ಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾಪ. ಅನವರತದಿಂದ ಬರುವ ಪುರುಷನಲ್ಲ ಮೀನಕೇತನ ಶತರೂಪ ಕಾಣೆ1 ನೂತನ ಪುರುಷನಿವನ್ಯಾರೆಂದರಿಯೆನಮ್ಮಾ ಶಾತಕುಂಭದ ಮಂಟಪವೇರಿ ಬರುವನಮ್ಮಾ2 ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾ ತರತರ ರತ್ನವರದ ಬಾಯೊಳಿರುವದಮ್ಮಾ3 ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾ ಪರಮ ಪುರುಷನಂತೆ ತೋರುವನು ಅಮ್ಮಾ4 ಬಾಲಾರ್ಕನಂತೆ ಮುಖ ಪ್ರಜ್ವಲಿಪುದು ನೀಲಮಾಣಿಕ್ಯ ಕಾಂತಿಯ ಸೋಲಿಪುದು5 ತೋರಲರಿಯೆ ಕಾಲಿಗೆರಗುವೆನು ಪೇಳಬೇಕು ಸಖಿಯೆ6 ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾ ಬೆರಳೊಳು ವಜ್ರದುಂಗುರವನಿಟ್ಟವನಮ್ಮಾ7 ವರರತ್ನಖಚಿತದಾಭರಣದಿಂದ ಮೆರೆವ ಚರಣ ಸರೋಜದೊಳು ರೇಖೆಯಿಂ ಶೋಭಿಸುವ 8 ವಲ್ಲಭೆಯರ ಸಹಿತುಲ್ಲಾಸದಿ ಬರುವ ಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ9 ಬಲ್ಲಿದ ಪುರುಷನಿವನೆಲ್ಲಿಂದ ಬಂದ ಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ10 ಊರ್ವಶಿ : ನೋಡು ನಿತ್ಯಾನಂದಕರನ ಮೂಡಗಿರಿಯಿಂದೋಡಿ ಬಂದನ ನೋಡೆಪ. ಛಪ್ಪನ್ನೈವತ್ತಾರು ದೇಶ ಸರ್ಪಶೈಲ ರಾಜವಾಸ ಚಪ್ಪರ ಶ್ರೀ ಶ್ರೀನಿವಾಸ1 ತಿರುಗುತ್ತಿಪ್ಪಾ ತಿರುಮಲೇಶ ಶರಣ ರಾಮನ ಭಕ್ತಿಪಾಶ ದುರುಳಿನಲಿ ನಿಂದಿರ್ಪಶ್ರೀಶ ತರಿಸುವನು ಕಾಣಿಕೆ ವಿಲಾಸ2 ಪಟ್ಟದರಸನಾದ ದೇವ ಸೃಷ್ಟಿಯಾಳುವಜಾನುಭಾವ ದೃಷ್ಟಿಗೋಚರವಾಗಿ ಕಾಯ್ವ ಇಷ್ಟವೆಲ್ಲವ ಸಲಿಸಿ ಕೊಡುವ 3 ಊರ್ವಶಿ : ಬಂದ ಗೋವಿಂದ ಸಾನಂದದಿ ಭಕ್ತರ ವೃಂದ ನೆರಹಿ ವನಕೆ ಅಂದಣವೇರಿ ಮುಕುಂದನೊಲವಿನಲಿ ಕುಂದಣ ಮಂಟಪವೇರಿ ಮತ್ತೊಬ್ಬನು ಸಂದರುಶನವಂ ನೀಡುತ ಯಿಬ್ಬರು ಒಂದಾಗುತ್ತಾನಂದವ ಬೀರುತ್ತ 1 ಅಕ್ಕ ನೀ ನೋಡು ಬಹುಮಾನದಿ ಸಿಕ್ಕಿದಿ ಬಿರುದು ಪೊತ್ತಾ ಉಕ್ಕುವದತಿ ತೋಷ ಸ್ತುತಿಪಾಠಕ ಜನಗಳ ಮಿಕ್ಕಿ ನೊಡುವ ನೋಟಕೆ ಮನಸಿನೊಳು ಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2 ಪವಿತ್ರ ನಿಶಾನಿಧಾರಣಾ ಪವಿತ್ರಗೈಯುವ ಕಾರಣ ಮಿತ್ರಮಂಡಳವನು ಮೀರಿ ಪೊಳೆವುತಿಹ ರತ್ನಖಚಿತ ಮಂಟಪದಲಿ ಮಂಡಿಸಿ ಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವ ಕೀರ್ತಿಯ ಧರಿಸಿ ಜಗತ್ರಯಪಾವನ 3 ನಿಸ್ಸಾಳ ಪಟಹ ಭೂರಿ ಜನ ಜಾಲ ಕೂಡಿರುವ ಮೇಳವಿಸುತ್ತನುಕೂಲಿಸಿ ಬಹು ಬಿರು ದಾಳಿಗೆ ಸಂಭ್ರಮದೇಳಿಗೆಯಿಂದಲಿ ಕೋಲು ಪಿಡಿದು ಓಹೋಯೆಂಬಂಥ ವಿ- ಶಾಲ ಭಕ್ತರ ಮೇಲು ಸಂತೋಷದಿ 4 ದೇಶದೇಶದ ಜನರು ನಾನಾ ವಿಧ &ಟಿ
--------------
ತುಪಾಕಿ ವೆಂಕಟರಮಣಾಚಾರ್ಯ
ಭೀಮ ಶಾಮ ಕಾಮಿನಿಯಾದನು ಪ ಭೀಮ ಶಾಮ ಕಾಮಿನಿಯಾಗಲು ಪತಿ ಪುಲೋಮ ಜಿತುವಿನ ಕಾಮಿನಿ ಸಕಲ ವಾಮ ಲೋಚನೆಯ- ರಾಮೌಳಿ ಕೂಗುತಲೊಮ್ಮನದಿ ಪಾಡೆಅ.ಪ ದಾಯವಾಡಿ ಸೋತು ರಾಯ ಪಾಂಡವರು ನ್ಯಾಯದಿಂದ ಸ್ವಾಮಿಯ ಸೇವೆಯೆಂದು ಕಾಯದೊಳಗೆ ಅಸೂಯೆಪಡದಲೆ ಮಾಯದಲ್ಲಿ ವನವಾಯಿತೆಂದು ರಾಯ ಮತ್ಸ್ಯನಾಲಯದೊಳು ತಮ್ಮ ಕಾಜು ವಡಗಿಸಿ ಅಯೋನಿಜೆ ದ್ರೌಪ- ದೀಯ ವಡಗೂಡಿ ಆಯಾಸವಿಲ್ಲದೆ ಅಯ್ವರು ಬಿಡದೆ ತಾವಿರಲು 1 ಬಾಚಿ ಹಿಕ್ಕುವ ಪರಿಚಾರತನದಲಾ ಪಾಂಚಾಲಿಗೆ ಮತ್ಸ್ಯನಾ ಚದುರೆಯಲ್ಲಿ ಆಚರಣೆಯಿಂದ ಯಾಚಕರಂದದಿ ವಾಚವಾಡಿ ಕಾಲೋಚಿತಕೆ ನೀಚರಲ್ಲಿಗೆ ಕೀಚಕನಲ್ಲಿಗೆ ಸೂಚಿಸಲು ಆಲೋಚನೆಯಿಂದಲಿ ನಾಚಿಕೆ ತೋರುತಲಾ ಚೆನ್ನೆ ಪೋಗಲು ಕರ ಚಾಚಿದನು 2 ಎಲೆಗೆ ಹೆಣ್ಣೆ ನಿನ್ನೊಲುಮೆಗೆ ಕಾಮನು ಕಳವಳಿಸಿದ ನಾ ಗೆಲಲಾರೆನಿಂದು ವಲಿಸಿಕೊ ಎನ್ನ ಲಲನೆಯ ಕರುಣಾ- ಜಲಧಿಯೆ ನಾರೀ ಕುಲಮಣಿಯೆ ಬಳಲಿಸದಲೆ ನೀ ಸಲಹಿದಡೇ ವೆ- ಗ್ಗಳೆಯಳ ಮಾಡಿಪೆನಿಳೆಯೊಳೆನ್ನೆ-ಆ- ಖಳನಾ ಮಾತಿಗೆ ತಲೆದೂಗುತಲಿ ಅ- ನಿಳಜನೆನ್ನ ನೀ ಸಲಹೆಂದ 3 ಮೌನಿ ದ್ರೌಪದಿ ಮೌನದಲ್ಲಿ ಹೀನನಾಡಿದಾ ಊನ ಪೂರ್ಣಗಳು ಮನೋಭಾವವ ಧೇನಿಸಿ ನೋಡುತ್ತ ಹೀನಕೆ ತಿಳಿದಳು ಮನದಲಿ ದೀನವತ್ಸಲ ಕರುಣವು ಮೀರಿತು ಕಾನನದೊಳ್ಕಣ್ಣು ಕಾಣದಂತಾಯಿತು ಏನು ಮಾಡಲೆಂದು ಜಾಣೆಯು ಚಿಂತಿಸಿ ಅನಿಲಗೆ ಬಂದು ಮ-ಣಿದಳು4 ಚೆಲ್ವೆ ಕಂಗಳೇ ನಿಲ್ಲೆ ನೀ ಘಳಿಗೆ ಸಲ್ಲದೆ ಆತನ ಹಲ್ಲನು ಮುರಿದು ಹಲ್ಲಣವ ಹಾಕಿ ಕೊಲ್ಲುವೆ ನಾನೀಗ ತಲ್ಲಣಿಸದಿರೇ ಗೆಲ್ಲುವೆನೆ ಪುಲ್ಲನಾಭ ಸಿರಿನಲ್ಲನ ದಯವಿ- ದ್ದಲ್ಲಿಗೆ ಬಂದಿತು ಎಲ್ಲ ಕಾರ್ಯಗಳ ಸಲ್ಲಿಸಿ ಕೊಡುವನು ಬಲ್ಲಿದ ನಮಗೆ ಮಲ್ಲಿಗೆ ಮುಡಿಯಾ ವಲ್ಲಭಳೆ 5 ಎಂದ ಮಾತಿಗಾನಂದ ಮಯಳಾಗಿ ಬಂದಳಾ ಖಳನ ಮಂದಿರದೊಳು ನೀ- ನೆಂದ ಮಾತಿಗೆ ನಾನೊಂದನು ಮೀರೆನು ಕಪಟ ಸೈರಂಧಿರಿಯೂ ಕುಂದಧಾಭರಣವ ತಂದು ಕೊಡಲು ಆ- ನಂದದಿಂ ಪತಿಯ ಮುಂದೆ ತಂದಿಟ್ಟಳು ಮಂದರೋದ್ಧರನ ಚಂದದಿ ಪೊಗಳುತ ಇಂದು ಸುದಿನವೆಂದ ಭೀಮ6 ಉಟ್ಟ ಪೀತಾಂಬರ ತೊಟ್ಟ ಕುಪ್ಪಸವು ಇಟ್ಟತಿ ಸಾದಿನ ಬಟ್ಟು ಫಣಿಯಲ್ಲಿ ಕಟ್ಟಿದ ಮುತ್ತಿನ ಪಟ್ಟಿಸ ಕಿವಿಯಲ್ಲಿ ಇಟ್ಟೋಲೆ ತೂಗಲು ಬಟ್ಟ ಕುಚ ಘಟ್ಟಿ ಕಂಕಣ ರ್ಯಾಗಟೆ ಚೌರಿ ಅ- ದಿಟ್ಟಂಥ ಈರೈದು ಬೆಟ್ಟುಗಳುಂಗರ ಮುಟ್ಟೆ ಮಾನೆರಿ ದಟ್ಟಡಿವೊಪ್ಪತಿ ಕಟ್ಟುಗ್ರದ ಜಗ ಜಟ್ಟಿಗನು 7 ತೋರ ಮೌಕ್ತಿಕದ ಹಾರ ಸರಿಗೆ ಕೇ ಯೂರ ಪದಕ ಭಂಗಾರ ಕಾಳಿಸರ ವೀರ ವಿದ್ರುಮದ ಭಾಪುರಿ ಉ- ತ್ತಾರಿಗೆ ವರ ಭುಜಕೀರುತಿಯು ಮೂರೇಖೆಯುಳ್ಳ ಉದಾರ ನಾಭಿವರ ನಾರಿ ನಡು ಉಡುಧಾರ ಕಿಂಕಿಣಿ ಕ- ಸ್ತೂರಿ ಬೆರಸಿದ ಗೀರುಗಂಧವು ಗಂ- ಬೂರ ಲೇಪ ಶೃಂಗಾರದಲಿ8 ವಂಕಿ ದೋರ್ಯವು ಕಂಕಣ ಒಮ್ಮೆಯೀ- ಚಾಪ ಭ್ರೂ ಅಲಂಕಾರ ಭಾವ ಪಂಕಜಮಾಲೆ ಕಳಂಕವಿಲ್ಲದಲೆ ಸಂಕಟ ಕಳೆವ ಪಂಕಜಾಂಘ್ರಿ ಝಂಕಾರಕೆ ಲೋಕ ಶಂಕಿಸೆ ನಾನಾ- ಅಂಕುರ ವೀರ- ಕಂಕಣ ಕಟ್ಟಿದ ಬಿಂಕದಿಂದಲಾ- ತಂಕವಿಲ್ಲದೆಲೆ ಕಂಕಾನುಜ 9 ಕಂಬು ಕೊರಳು ದಾಳಿಂಬ ಬೀಜ ದಂತ ದುಂಬಿಗುರುಳು ನೀಲಾಂಬುದ ಮಿಂಚೆಂ- ದೆಂಬ ತೆರದಲಾ ಅಂಬಕದ ನೋಟ ತುಂಬಿರೆ ಪವಳ ಬಿಂಬಾಧರ ಜಂಬೀರ ವರ್ಣದ ಬೊಂಬೆಯಂತೆಸೆವ ತಾಂಬೂಲ ಗಿಳಿಯೆಂಬ ಗಂಭೀರ ಪುರುಷನು ಹಂಬಲಿಸಿದ ತಾ ಸಂಭ್ರಮದಿ 10 ಸಂಧ್ಯಾದೇವಿಯೊ ಇಂದ್ರನ ರಾಣಿಯೊ ಚಂದ್ರನ ಸತಿಯೋ ಕಂದರ್ಪನಾಕರ- ದಿಂದ ಬಂದ ಅರವಿಂದದ ಮೊಗ್ಗೆಯೊ ಅಂದ ವರ್ಣಿಪರಾರಿಂದಿನಲಿ ಇಂದು ರಾತ್ರಿ ಇದೆ ಎಂದಮರಮುನಿ ಸಂದೋಹ ಕೊಂಡಾಡೆ ಇಂದುಮುಖಿಯೊಡ ನಂದು ತಾ ನಾಟ್ಯದ ಮಂದಿರಕೆ ನಗೆ- ಯಿಂದ ಬಂದ ಕುಂತಿನಂದನನು11 ಭಂಡ ಉಡಿಯಲಿ ಕೆಂಡವೊ ಪರರ ಹೆಂಡರ ಸಂಗ ಭೂಮಂಡಲದೊಳೆನ್ನ ಗಂಡರು ಬಲು ಉದ್ದಂಡರು ನಿನ್ನನು ಕಂಡರೆ ಬಿಡರೋ ಹಂಡಿಪರೋ ಲಂಡ ಬಾಯೆಂದು ಮುಕೊಂಡು ಕೈದುಡುಕಿ ಅಂಡಿಗೆಳೆದು ಅಖಂಡಲನ ಭಾಗ್ಯ ಮಂಡೆ ಮೊಗ ಗಲ್ಲ ಡುಂಡು ಕುಚ ಮುಟ್ಟಿ ಬೆಂಡಾದನು 12 ಸಾರಿಯಲ್ಲ ಮಕಮಾರಿಯಿದೆನುತ ಶ- ರೀರ ವತಿ ಕಠೋರವ ಕಂಡು ಜ- ಝಾರಿತನಾಗಿ ನೀನಾರು ಪೇಳೆಂದು ವಿ- ಕಾರದ್ಯಬ್ಬರಿಸಿ ಕೂರ್ರನಾಗಿ ತೋರು ಕೈಯೆಂದು ಸಮೀರನು ಎದ್ದು ವಿ ಚಾರಿಸಿಕೋ ಎನ್ನ ನಾರಿತನವೆಂದು ವೀರ ಮುಷ್ಟಿಯಿಂದ್ಹಾರಿ ಹೊಡೆಯಲು ಕ್ರೂರನು ರಕ್ತವ ಕಾರಿದನು 13 ಹಾರಿ ಹೊಯ್ಯತಲೆ ಮೋರೆಲಿದ್ದ ಕಳೆ- ಸೂರೆಯಾಯಿತು ಪರನಾರೇರ ಮೋಹಿಸಿ ಪಾರಗಂಡವರುಂಟೆ ಶರೀರದೊಳಿದ್ದ ಮಾರುತೇಶ ಹೊರಸಾರಿ ಬರೆ ಧೀರ ಭೀಮರಾಯ ಭೋರಿಡುತ ಹಾರಿ ಕೋರ ಮೀಸೆಯನೇರಿಸಿ ಹುರಿಮಾಡಿ ನಾರಿಮಣಿ ಯಿತ್ತ ಬಾರೆಂದು ಕರೆದು ಸಾರಿದನು ನಿಜಾಗಾರವನು 14 ಸರಸವು ನಿನಗೆ ವಿರಸವು ಆಯಿತು ಕರೆಸೆಲೊ ಈ ಪುರದರಸಾ ಕಳ್ಳನ ನರಸಿಂಹನ ನಿಜ ಅರಸಿಗೆ ಮನವನು ಮಂದರ ಅರಸನೆ ಅರಸಿ ನೋಡುತಿರೆ ವರೆಸಿದನಾ ಜೀವ ದೊರಸೆಯ ಖೂಳನ ಬೆರೆಸಿ ಸವಾಂಗ ಸಿರಿ ವಿಜಯವಿಠ್ಠಲ ಅರಸಿನ ಲೀಲೆಯ ಸ್ಮರಿಸುತಲಿ 15
--------------
ವಿಜಯದಾಸ
ಯಾಚಕ ಜನ್ಮಾ ಯಾಕೆ ಬರೆದನೊ ಬ್ರಹ್ಮಾ ನಾಚಿಕೆಯಾಗಿ ನಷ್ಟಾಗುವಂತೆ ಸ್ವಧರ್ಮಾ ಪ ಒಡಲಾಶೆಗಾಗಿ ಹೊಲೆಯನ ಹೊಗಳಬೇಕು ಕಡುಲೋಭಿಯಾದ ಅರಸನೋಲಗವೆ ಸಾಕು ಬಡತನವೆಂದು ಪರರ ಸೇರುವದೆ ಸಾಕು ಒಡಲು ಪರಾಕು 1 ತ್ಯಾಗದಿ ಕರ್ಣಾ ಭೋಗದಿ ದೇವೇಂಧ್ರನೆಂದು ಕೊಂಡಾಡಲು ಪೋಗಿ ಬಾ ನಾಳೆ ಎಂದು ಎನುತ ಪೇಳಲಾಗಿ ಬೈದಾಡುತ ಬಂದು ಬಳಲುತಿರಲಾಗ ಚಿತ್ತಕ್ಕೆ ತಂದು 2 ಪರ್ವತವನ್ನು ಕಂಡು ಕೈತಿಕ್ಕಿ ಕೋರಿದೆ ಬರಿದೆ ಇಂಥಾ ಗರ್ವದಿಂದುಕ್ಕಿ ಏರಿದೆ ಗುರುವಿಮಲಾನಂದ ಸರ್ವೋತ್ತಮನ ನೆನೆಯ ಬಾರದೇ 3
--------------
ಭಟಕಳ ಅಪ್ಪಯ್ಯ
ಇವ ಬಲು ಕಳ್ಳ ನಮ್ಮಮಾಧವಬಲು ಸುಳ್ಳನವನವÀ ಗುಣಗಳ ಹಿಡಿಸಿದನ್ಹಳ್ಳ ಪ.ನಿತ್ಯತೃಪ್ತನೆಂಬೊ ಸ್ತುತ್ಯಾರ್ಥ ನಿನ್ನ ಬಿಟ್ಟುಎತ್ತ ಹೋದವಯ್ಯ ನಮಗ್ಹೇಳೊ ಯದುಪತಿಎತ್ತ ಹೋದವಯ್ಯ ನಮಗ್ಹೇಳೊ ಯದುಪತಿತುತ್ತನ್ನ ನಿನಗೆ ಫನವೇನೊ ಯದುಪತಿ 1ಮುನ್ನಶಬರಿ ಎಂಜಲಪನ್ನಿಪಾವನ್ನೊ ನಿನಗೆಅನಸ್ತಾವೆಂಬೊ ಶೃತಿಗಳು ಯದುಪತಿಅನಸ್ತಾವೆಂಬೊ ಶೃತಿಗಳು ಹೊಗಳುತ ನಿನ್ನಲ್ಲೆಹ್ಯಾಂಗ ಇರಬೇಕೊ ಯದುಪತಿ 2ಪಟ್ಟದ ರಾಣಿ ಲಕುಮಿ ಎಷ್ಟು ಗುಣವಂತಳಲ್ಲೊಅಷ್ಟು ಭಾವದಲೆ ಚಲುವಳೊ ಯದುಪತಿಅಷ್ಟು ಭಾವದಲೆ ಚಲುವಳೊಕುಬ್ಜಿಯಂಥಸೊಟ್ಟ ಹೆಣ್ಣಿಗ್ಯಾಕೆ ಮನಸೋತೆÀ್ಯೂ ಯದುಪತಿ 3ಎಷ್ಟು ಸೃಷ್ಟಿಯ ಮಾಡಿಪುಟ್ಟ ಲವಕುಶರ ಪಡೆದಿಸೃಷ್ಟಿ ಮಾಡಿದ್ದು ಮರೆತೆನೊ ಯದುಪತಿಸೃಷ್ಟಿ ಮಾಡಿದ್ದು ಮರೆತೆನೊ ನಾಭಿಯಲ್ಲಿಪುಟ್ಟಿದ ಬೊಮ್ಮನಗುತಾನೊ ಯದುಪತಿ 4ರುದ್ರನ ಭಜನೆ ಮಾಡಿ ಪ್ರದ್ಯುಮ್ನನ ಪಡೆದಿವಿದ್ವಜ್ಜನರೆಲ್ಲ ನಗುತಾರೊ ಯದುಪತಿವಿದ್ವಜ್ಜನರೆಲ್ಲ ನಗುತಾರೊ ಶ್ರೀಧ ಶ್ರೀಧವಿದ್ಯವನೆÀಲ್ಲ ಮರೆತೇನೋ ಯದುಪತಿ 5ಸ್ವರಮಣನೀನೆಂಬೊ ಸ್ವರ ಗೈವ ಶೃತಿಗಳುಹರಿದಾವೇನೊ ಜಲದೊಳುಹರಿದಾವೇನೊ ಜಲದೊಳು ಗೊಲ್ಲತಿಯರ ಬೆರೆದಕಾರಣವ ನಮಗೆ ಹೇಳೊ ಯದುಪತಿ 6ಧೀರ ಗಂಭೀರನೆಂದು ಸಾರುವ ಶೃತಿಗಳುಹಾರಿದವೇನೊ ಮುಗಿಲಿಗೆಹಾರಿದವೇನೊ ಮುಗಿಲಿಗೆ ರಮಿಯರಸುಪೋರತನವೆಂದು ನಗತಾರೊ ಯದುಪತಿ 7
--------------
ಗಲಗಲಿಅವ್ವನವರು
ಪಂಚಮಿಯ ದಿನರಂಭೆs :ಏನಿದು ಇಂದಿನವಿಭವನಮ್ಮಶ್ರೀನಿವಾಸನ ಮಹಾತ್ಮವಮಾನಿನಿರನ್ನೆ ನೀ ಪೇಳೆ ಭಕ್ತಾ-ಧೀನದ ಚರಣದ ಲೀಲೆಭಾನುಉದಯದಲಿ ವೀಣಾದಿ ಸು-ಗಾನ ವಾದ್ಯ ನಾನಾವಿಧ ರಭಸದಿ 1ಎತ್ತಲು ನೋಡಿದಡತ್ತ ಜನ-ಮೊತ್ತವಿಲಾಸವಿದೆತ್ತಚಿತ್ತದಿ ನಲಿನಲಿದಾಡಿ ತೋಷ-ವೆತ್ತಿರುವನು ಒಟ್ಟುಗೂಡಿಸುತ್ತುಮುತ್ತು ಒತ್ತೊತ್ತಿಲಿಹರು ವಿ-ಪ್ರೋತ್ತಮ ಶ್ರೀಹರಿಭಕ್ತರ ಮಯವಿದು 2ಚಾಮರ ಛತ್ರ ಸಿಗುರಿಯು ಜನ-ಸ್ತೋಮಪತಾಕೆ ತೋರಣವುಹೇಮದ ಕಂಚುಕಿ ಈಟಿ ಗುಣ-ಧಾಮನ ಬಿರುದುಗಳ್ ಕೋಟಿಆ ಮಹಾಭೇರಿ ಪಟಹ ನಿಸ್ಸಾಳಕಸಾಮಗಾನ ಸಾಮ್ರಾಜ್ಯವೋಲಿಹುದು 3ಬಾಲರು ವೃದ್ಧ ಯೌವನರು\ಜನ-ಜಾಲವೆಲ್ಲರು ಕೂಡಿಹರುಲೋಲಸ್ರೀಮುಂದ್ರಾಂಕಿತದಿ ಬಹು ವಿ-ಶಾಲ ದ್ವಾದಶನಾಮ ಮುದದಿಆಲಯದೊಳಗಿಹ ಬಾಲಕಿಯರು ಸಹಸಾಲಂಕೃತ ಸಮ್ಮೇಳದಿ ನಲಿವರು 4ಒಂದು ಭಾಗದಿ ವೇದಘೋಷ ಮ-ತ್ತೊಂದು ಭಾಗದಿ ಜನಘೋಷಇಂದಿನ ದಿನದತಿಚೋದ್ಯ ಏ-ನೆಂದು ವರ್ಣಿಸುವದಸಾಧ್ಯಚಂದಿರಮುಖಿ ಯಾರೆಂದೆನಗುಸುರೆಲೆಮಂದರಧರಗೋವಿಂದನ ಮಹಿಮೆಯ5ಪೇಳಲೇನದಾ ಮೂರ್ಲೋಕದೊಳಗೀ ವಿ-ಶಾಲವ ನಾ ಕಾಣೆ ಪ.ಸೋಜಿಗಸೌಭಾಗ್ಯ ಸಂಪದಕಿದು ಬೀಜ ಕಾಣೆಲೆರಾಜೀವನಾಭನ ಪೂಜಾವಿನೋದದಿರಾಜವದನೆ ವನಭೋಜನದಿಂದಿನ 1ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು 2ಇಂದಿನ ದಿನದಂದವನೂತನವೆಂದು ನೀ ಪೇಳುವಿಚಂದಿರ ಮುಖಿ ಜನಸಂದಣಿಗಳು ಮಹಾಮಂದಿ ಓಲೈಸುವರಿಂದು ಮುಕುಂದನ 3ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆ ಪ.ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆಕಾಣುವ ಯೋಗಭೋಗ 1ಎನಗತಿ ಮನವು ನಿನಗತಿ ಛಲವುಜನುಮಾಂತರ ಪುಣ್ಯವೈಸೆ ನೀ 2ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾ ಪ.ಅನವರತದಿಂದ ಬರುವ ಪುರುಷನಲ್ಲಮೀನಕೇತನ ಶತರೂಪ ಕಾಣೆ 1ನೂತನ ಪುರುಷನಿವನ್ಯಾರೆಂದರಿಯೆನಮ್ಮಾಶಾತಕುಂಭದ ಮಂಟಪವೇರಿ ಬರುವನಮ್ಮಾ 2ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾತರತರ ರತ್ನವರದ ಬಾಯೊಳಿರುವದಮ್ಮಾ 3ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾಪರಮಪುರುಷನಂತೆ ತೋರುವನು ಅಮ್ಮಾ4ಬಾಲಾರ್ಕನಂತೆ ಮುಖ ಪ್ರಜ್ವಲಿಪುದುನೀಲಮಾಣಿಕ್ಯ ಕಾಂತಿಯ ಸೋಲಿಪುದು 5ಮೂರ್ಲೋಕದೊಳಗೆ ಸರಿಯುಪಮೆತೋರಲರಿಯೆಕಾಲಿಗೆರಗುವೆನು ಪೇಳಬೇಕು ಸಖಿಯೆ 6ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾಬೆರಳೊಳು ವಜ್ರದುಂಗುರವನಿಟ್ಟವನಮ್ಮಾ 7ವರರತ್ನಖಚಿತದಾಭರಣದಿಂದ ಮೆರೆವಚರಣಸರೋಜದೊಳು ರೇಖೆಯಿಂ ಶೋಭಿಸುವ8ವಲ್ಲಭೆಯರ ಸಹಿತುಲ್ಲಾಸದಿ ಬರುವಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ 9ಬಲ್ಲಿದಪುರುಷನಿವನೆಲ್ಲಿಂದ ಬಂದಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ 10ಊರ್ವಶಿ :ನೋಡುನಿತ್ಯಾನಂದಕರನಮೂಡಗಿರಿಯಿಂದೋಡಿ ಬಂದನ ನೋಡೆ ಪ.ಛಪ್ಪನ್ನೈವತ್ತಾರು ದೇಶಕಪ್ಪಕಾಣಿಕೆಗೊಂಬ ತೋಷಸರ್ಪಶೈಲ ರಾಜವಾಸಚಪ್ಪರ ಶ್ರೀ ಶ್ರೀನಿವಾಸ 1ತಿರುಗುತ್ತಿಪ್ಪಾ ತಿರುಮಲೇಶಶರಣ ರಾಮನ ಭಕ್ತಿಪಾಶದುರುಳಿನಲಿ ನಿಂದಿರ್ಪಶ್ರೀಶತರಿಸುವನುಕಾಣಿಕೆವಿಲಾಸ2ಪಟ್ಟದರಸನಾದ ದೇವಸೃಷ್ಟಿಯಾಳುವಜಾನುಭಾವದೃಷ್ಟಿಗೋಚರವಾಗಿ ಕಾಯ್ವಇಷ್ಟವೆಲ್ಲವ ಸಲಿಸಿ ಕೊಡುವ 3ವೃಂದ ನೆರಹಿ ವನಕೆಅಂದಣವೇರಿ ಮುಕುಂದನೊಲವಿನಲಿಕುಂದಣಮಂಟಪವೇರಿ ಮತ್ತೊಬ್ಬನುಸಂದರುಶನವಂ ನೀಡುತ ಯಿಬ್ಬರುಒಂದಾಗುತ್ತಾನಂದವ ಬೀರುತ್ತ 1ಅಕ್ಕ ನೀನೋಡುಬಹುಮಾನದಿಸಿಕ್ಕಿದಿ ಬಿರುದು ಪೊತ್ತಾತೆಕ್ಕೆಪಕ್ಕೆಯ ವಿಲಾಸ ಮನಸಿನೊಳುಉಕ್ಕುವದತಿ ತೋಷಇಕ್ಕೆಲದಲಿ ಬೀಸುವ ಚಾಮರಗಳ ವಕ್ಕಣಿಸುವಸ್ತುತಿಪಾಠಕ ಜನಗಳಮಿಕ್ಕಿ ನೊಡುವ ನೋಟಕೆ ಮನಸಿನೊಳುಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2ಛತ್ರ ಚಾಮರ ತೋರಣ ಪತಾಕೆಪವಿತ್ರ ನಿಶಾನಿಧಾರಣಾಸುತ್ರಾಮಾರ್ಚಿತ ಚರಣಭಕ್ತರನುಪವಿತ್ರಗೈಯುವ ಕಾರಣಮಿತ್ರಮಂಡಳವನು ಮೀರಿ ಪೊಳೆವುತಿಹರತ್ನಖಚಿತ ಮಂಟಪದಲಿ ಮಂಡಿಸಿಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವಕೀರ್ತಿಯ ಧರಿಸಿ ಜಗತ್ರಯಪಾವನ 3ವಾಲಗಶ್ರುತಿಭೇರಿಡಿಂಡಿಮನಿಸ್ಸಾಳ ಪಟಹಭೂರಿತಾಳ ಮೃದಂಗ ರವದಿಂದಜನಜಾಲಕೂಡಿರುವಮೇಳವಿಸುತ್ತನುಕೂಲಿಸಿ ಬಹು ಬಿರುದಾಳಿಗೆ ಸಂಭ್ರಮದೇಳಿಗೆಯಿಂದಲಿಕೋಲು ಪಿಡಿದು ಓಹೋಯೆಂಬಂಥ ವಿ-ಶಾಲ ಭಕ್ತರ ಮೇಲು ಸಂತೋಷದಿ 4ದೇಶದೇಶದ ಜನರು ನಾನಾ ವಿಧಭಾಷೆ ಪ್ರವರ್ತಕರುಆಶಾಪಾಶರು ಪಾತಕಮಾನಸ-ರೀ ಸಮಯದಿ ಶ್ರೀನಿವಾಸನೆ ಎಮ್ಮಯದೋಷಗಳೆಲ್ಲವ ನಾಸಿಸು ಯೆನುತಭಿ-ಲಾಷೆಯ ಜನಗಳ ಪೈಸರದಿಂದಲಿ 5ವೇದಶಾಸ್ತ್ರಪೌರಾಣಪ್ರಜÕರು ತರ್ಕವಾದಿಪಾಠಕ ಜಾಣಸಾಧು ಕುಶಲದಿ ವಿದ್ಯಾಪ್ರವೀಣವಿನೋದ ಸಿದ್ಧ-ಸಾಧ್ಯ ಸಾದರದಿಂದ ಸರಸಕವಿ ವಾಗೀಂ-ದ್ರಾದಿಗೀರ್ವಾಣಸಮುದಾಯದಿಂದ ಕೃ-ಪೋದಯ ತೋರುತ್ತಾದಿಮೂರುತಿ ಜಯ-ನಾದದಿ ಭಕ್ತರಮೋದಪಡಿಸುತ್ತಾ6ರಂಭೆ : ನಾರಿ ಕೇಳೆ ಶ್ರೀರಮಾಧವಸ್ವಾರಿ ಪೊರಟ ಕಾರಣ ಪೇಳೆ 1ಯಾವ ರಾಜ್ಯದಿ ಪ್ರಭುದೇವಸ್ವಾರಿಯಠೀವಿಯ ಕಾಣೆ ಅಂತರ್ಭಾವವೇನೆ 2ಭೂರಿದೇಶವ ಸಂತತಪ .ವೀರವೈಷ್ಣವ ಭಕ್ತರು ಸದ್ಭಕ್ತಿಯಸಾರದಿ ನಿಲಿಸಿದರುಮಾರಜನಕನಿಗೆ ಮನನಿಲ್ಲದೆ ಸಂ-ಚಾರಕೆ ತಾ ಮೈದೋರಲು ಬೇಕೆಂ-ಬೀ ರೀತಿಗೆ ತಾ ಪೂರ್ವಸ್ಥಾನ ವಿ-ಚಾರಕೆ ಬಂದಿಹ ಕಾರಣವೀಗಲೆ 1ರಾಜ ಬಂದನೆ ಅಮ್ಮಾ ಆಶ್ರಿತಸುರ-ಭೂಜಬಂದನೆ ಅಮ್ಮಾಓಜೆಯಿಂದಲಿ ಕಾಣಿಕೆಯನ್ನು ಒಪ್ಪಿಸಿರಾಜಕದಿವ್ಯಾರತಿಯನು ಎತ್ತುತರಾಜೀವನಾಭನೆ ರಕ್ಷಿಸೆನುತ್ತಲಿಸೋಜಿಗಪಟ್ಟೆಲ್ಲಾಜನವಿರ್ದುದು 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ