ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾರ್ವತೀದೇವಿಯ ಸ್ತುತಿ (ಮಂಗಳೂರು ಮಂಗಳಾದೇವಿ) ಮಹಾಮಾಯೆ ದಯದೋರೆಲೆ ತಾಯೆ ಪ. ಸದರದೊಳೆಬ್ಬಿಸುತಿದಿರಾದ ಮದನಾಂಬಾ ಮುದ ದಾಯಿ ಶುಭಪದದಾಯಿ 1 ದೇವತೆಗಳ ಸೇರಿರುವಾ ಮನೋಹರ ತನುವಾಗಿ ನಿಕರ ಮಹಿಷಾಸುರನಾ ಮೃಗಪತಿಗಮನಾ 2 ಖಂಡ್ಯಧಾರೆಯೊಳ್ದಿಂಡರಿದೂ ಖಂಡಿಸುತಾ ರಣ ಮಂಡಲದಿ ಬ್ರಹ್ಮಾಂಡ ನಿದಾನಿ 3 ತ್ರಿಗುಣಜಮಲವು ದಾನವಾರಿಗಳ ಮಾನಿಸಿ ದಿತಿಜರ ಹಾನಿಗೊಳಿಸುವದು ಹರಿಪರವು ಮಹಭರವು ಮನದಿರವೂ 4 ರಕ್ಷಿಸು ಪುರುಕರುಣಿ ಕ್ಷಮೆಯಿಂದಂ ಭರಣಿ ಖೂಳ ವೈರಿಗಳನೇಳದಂತೆ ಪಾತಾಳಕೆ ಕೆಡಹಿಸು ಮಮ ಜನನಿನೀಲ ಮೇಘ ನಿಭ ವೆಂಕಟರಾಜನ ಲೋಲಕಟಾಕ್ಷಸದಾಕರುಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲಾಲಿ ಪಾಡಿರೆ ಮುದ್ದು ಬಾಲಕಂದನಿಗೆ ಬಾಲಬ್ರಹ್ಮಚಾರಿಯಾದ ಕಪಿವರಗೆ ಪ. ಅಂಜನೆಯ ಸುತನಾಗಿ ಅಂಬರಕೆ ಹಾರಿ ಕಂಜಸಖನಿಗೆ ತುಡುಕಿ ವಜ್ರತನುವಾಗಿ ಸಂಜೀವ ತಂದು ಕಪಿಪುಂಜಗಳ ಸಲಹಿ ಮಂಜುಭಾಷಣ ರಾಮಪಾದ ದಾಸನಿಗೆ 1 ಪುಟ್ಟಿ ಕುಂತಿಯ ಉದರದಲಿ ಗಿರಿ ಒಡೆದು ದುಷ್ಟ ಕೀಚಕ ಬಕಾದಿಗಳ ಸಂಹರಿಸಿ ಕುಟ್ಟಿ ಕೌರವರ ಕುಲ ದ್ರೌಪದಿಯ ಕೂಡಿ ಪಟ್ಟವಾಳಿದ ಕೃಷ್ಣ ಪಾದಸೇವಕಗೆ 2 ಶ್ರೀಪತಿಯ ಆಜ್ಞೆಯಲಿ ವಿಪ್ರಸುತನಾಗಿ ಪಾಪಿ ದುರ್ಮತಗಳನು ತರಿದು ಮುರಿದೊಟ್ಟಿ ಸ್ಥಾಪಿಸುತ ಸಚ್ಛಾಸ್ತ್ರ ಯತಿಯಾಗಿ ಚರಿಸಿ ಗೋಪಾಲಕೃಷ್ಣವಿಠ್ಠಲನ ಮೆರೆಸಿದಗೆ 3
--------------
ಅಂಬಾಬಾಯಿ