ಒಟ್ಟು 17 ಕಡೆಗಳಲ್ಲಿ , 14 ದಾಸರು , 17 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನುಜ ಭಾವಿ ಮುಖ್ಯಪ್ರಾಣನೆ ಪ ಚರಣಭಕ್ತರಲ್ಲಿ ಮುನ್ನ ಇರಿಸಿ ಸಲಹೊ ಕರುಣಶರಧಿಯೆ ಅ.ಪ. ಹರಿಯಮುಂದೆ ನಿಂದು ಸೇರಿ ಸ್ತುತಿಸೆ ದಿವಿಜವೃಂದ ಧೀರ ಲಾತವ್ಯ ಬಂದೆ ಹಾ ಚಾರು ಯುಕ್ತಿಮಲ್ಲಿಕಾದಿ ಸಾರಗ್ರಂಥರಾಶಿ ಇತ್ತು ಈರಮತವ ಮೆರೆಸಿ ಮೆರೆದ ಶೂರ ನಿನ್ನ ಪೊಗಳಬಲ್ಲೆವೆ 1 ಎರಡು ಹತ್ತು ಮೇಲೆ ನೂರುವರುಷ ಪೊರೆದು ಶಿಷ್ಯಸಂಘ ಕಾಯ ಕುಳಿತೆ ಭರದಿ ವೃಂದಾವನದಲೀ ತೊರೆಯಲಾಗದೇನೆ ನಿನ್ನ ತುರಗವದನ ರಾಮಕೃಷ್ಣ ಅರವಿದೂರ ವೇದವ್ಯಾಸ ಪೊರೆವರೆಲ್ಲ ಸೇವೆಕೊಳ್ಳುತಾ 2 ಸುರರು ಎಲ್ಲ ಮಣಿದು ಕುಣಿದು ನಿನ್ನ ಸಹಿತ ಮಣಿದು ಹರಿಯ ಭಜಿಸುತಿಹರು ತನುವ ಕೆಡಹಿ ರಾಗದಿಂದ ನೆನೆದು ನಿನ್ನ ನೋಡೆಸದನ ಜನುಮ ಜನುಮ ದೋಷ ಕಳೆವ ಘನ ಮಹಾತ್ಮೇಗೀಡುಕಾಣೆ 3 ಎರಡು ಕಮ್ಮಿ ಎರಡುನೂರು ವರವಿರಂಚಿ ಕಲ್ಪಗಳಲಿ ನಿಮ್ಮ ಮಹಿಮೆಗೇನೆಂಬೆ ಸುರರು ವಿವಿಧ ಬಲಿಗಳಿತ್ತು ಚರಣ ಪಿಡಿದು ನಡೆವರೆನಲು ನರನು ಪೊಗಳಬಲ್ಲನೇನು ಹರನಗುರುವೆ ಶಿರವ ಬಾಗುವೆ 4 ವರವಿಮಾನದಲ್ಲಿ ಕುಳಿತು ಚರಿಸುತಿರಲು ಒಮ್ಮೆಯೇನೆ ಸುರರು ಎಲ್ಲ ಕರೆಯೆನಿನ್ನ ಧರಿಸಿ ರೂಪ ನಿಚಯ ನಡೆದೆಯಾ ವರವಿಶೇಷಪೂಜೆಕೊಂಡು ಸ್ಥಿರವಗೈದು ಪದವಿಗಳನು ಕರೆದು ಹರುಷ ದಿವಿಜಗಣಕೆ ಪೊರೆದ ನಿನಗೆ ತುಲ್ಯ ಕಾಣೆವೈ5 ಸಿರಿಯಪತ್ರ ಹರಿಗೆ ಇತ್ತು ಮರುತನಂತೆ ಪಡೆದು ವರವ ಕೊಂಡು ಭುವಿಯಲಿ ಧರಿಸಿನಿಂದು ದಂಡ ಕಾಷ್ಠ ದುರುಳವಾದಿಗಜಗಳಳಿದು ಚರಿಸಿ ದೇಶವೆಲ್ಲ ಕೊನೆಗೆ ಕುರುಹು ತೋರಿನಿಂತ ಸ್ವಾದಿಲಿ6 ಏನು ನಿಮ್ಮ ಮಹಿಮೆ ಗುರುವೆ ತಾನೆ ಬಂದು ವಾಜಿವದನ ಸಾನುರಾಗದಿಂದ ಕೊಂಬ ಹೂರ್ಣಭಕ್ಷ್ಯವೆಲ್ಲ ಪೂರ್ಣ ಪೂರ್ಣನೀನು ಜೀವಗಣದಿ ಪೂರ್ಣತನ್ನ ಕಂದನೆಂದು ದಾನಗೈದ ನಿನ್ನ ಸತಿಗೆ ಜ್ಞಾನಪೂರ್ಣಬಲನು ನೀನ ಹೋ 7 ಚಾರು ಭ್ರಾತೃನಿನ್ನ ಬದಿಲಿ ಮೀರಿ ಇಹುದು ಯಾವುದಿಲ್ಲ ಮೂರುಜಗದಿ ಸತ್ಯಸತ್ಯವೋ ಮೂರುಕಣ್ಣಿನಾತ ಮುಂದೆ ಭಾರಿಭೂತರಾಜ ನಿಮ್ಮ ಸಾರ ಚರಣ ಪಿಡಿದು ಭಜಿಪ ಯಾರು ಸಾಟಿ ಇಲ್ಲ ಸಾರುವೆ8 ಗಂಗೆಮೊದಲು ಎಲ್ಲ ತೀರ್ಥ ತಂಗಿ ಧವಳಗಂಗೆಯಲ್ಲಿ ತುಂಗ ಮಹಿಮ ನಿನ್ನ ಯಜಿಸಿ ಹಿಂಗಿಸುವರು ತಮ್ಮ ಶಮಲ ಭಂಗ ಸತ್ಯಸರ್ವಪಾಪ ಸುರರು ಕೈವಶ 9 ನಿನ್ನ ನಿಲಯ ಸುತ್ತ ನೃತ್ಯ ವನ್ನು ಗೈದು ಭಜಿಸೆ ಹರಿಯ ಘನ್ನ ಜ್ಞಾನ ಚೆನ್ನ ಪಡೆದು ಸನ್ನು ತಾಂಗ ನೆಡೆಯಕಾಣುವ ಅನ್ನಸತ್ರ ನಿನ್ನ ಕ್ಷೇತ್ರ ಅನ್ನಪತಿಯ ತೋರ್ಪನಿನಗೆ ಇನ್ನು ಸರಿಯೆ ಕಾಮಧೇನು ಚಿಣ್ಣನೆಂದು ಪಿಡಿಯೊ ಶರಣನ 10 ಹತ್ತು ಐದು ನಾಲ್ಕು ಆರು ಹತ್ತು ಐದು ಸಹಿತ ಒಂದು ಹತ್ತು ಹತ್ತು ಮತ್ತೆ ಒಂದು ಹತ್ತುನೂರು ಹಾಗನಂತ ನಿತ್ಯ ನಿತ್ಯನುತಿಪೆ ಬೃಹತಿಯಿಂದ ಸತ್ಯಪದವಿಸಿದ್ಧ ನಿನಗೆಲೈ 11 ಗಿರಿಗಳರಸು ಮಗಳ ಸಹಿತ ಕರೆದು ನಿಮ್ಮ ರತ್ನರಾಶಿ ಸುರಿದು ಶಿರದಿ ಪೂಜೆಗೈದು ಪರಮ ಧನ್ಯನಾದ ತಾನಹೋ ತರಣಿ ಜನರು ಮಾರ್ಜನಾದಿ ಪರವಿಶೇಷ ಸೇವೆಗೈದು ಕೊಡುವೆ ಕಾಮಿತಾರ್ಥವ 12 ದೀಪಸಾಲು ಹಚ್ಚಿ ಭಜಿಸೆ ಪೋಪುದೈಯ್ಯ ಭವದ ತಾಪ ಆ ಪರೇಶ ಒಲಿದು ಜ್ಞಾನ ದೀಪ ವಿಡುವ ಹೃದಯಕಮಲದಿ ತಾಪ ದೂರನಾಗಿ ಶ್ರೀಪತಿಯ ದಾಸನಾಗಿ ಕೂಪ ದಾಟ ಪೋಪ ಬೇಗಹೋ13 ಯಮನ ಪುರವ ಸಾರಿ ನೀನು ವಿಮಲರೂಪ ತೋರಿ ಹಾಗೆ ಅಮರ ಜ್ಞಾನ ಬೋಧೆಯಿತ್ತು ಯಮನ ರಾಜ್ಯ ಬರಿದುಗೈದೆಹೊ ಕಮಲೆಕಂದ ಕಾಮಕೊರಗಿ ನಮಿಪ ನಿನ್ನ ರೂಪ ನೋಡಿ ಶ್ರಮವು ಆಯ್ತುಕಾಮನಿಂದ ಅಮರಸ್ತ್ರೀವೃಂದಕ್ಕೆಲ್ಲ ವೈ14 ದುಃಖಕೊಡದ ನಿನ್ನ ಅಸ್ಥಿ ಶಂಖಚಕ್ರ ಮಯವು ಹೌದು ಪಂಕಜಾಕ್ಷ ಅಂಗದಲ್ಲೆ ಅಂಕೆರಹಿತ ಸುಖವು ನುಂಬೆಹೊ ಸೂತ್ರ ತಾನು ಕಿಂಕಿಣೀ ಸುರಾವದಿಂದ ಶಂಕೆ ಕೊಡದೆ ಸಾರುತಿಹನು ಬಿಂಕವಾಗಿ ಪದವಿಬರ್ಪುದ15 ಮೇರುಗಿರಿಯ ಶಿಖರದಲ್ಲಿ ಕ್ರೂರಮದನ ತಾಪದಿಂದ ಚಾರುಕನ್ಯೆಯೊಬ್ಬಳಿನ್ನು ತೋರೆ ಸ್ವಾಂಗ ನಿನ್ನ ಬಯಸುತ ಧೀರನೀನು ಕದಲದಿರಲು ಕ್ರೂರ ತಪದಿ ಹರಿಯ ಒಲಿಸಿ ನೀರೆ ಪಡೆದ ಲೈಯ ನಿನ್ನ ಸೇರಿ ಸುಖಿಪ ಭಾಗ್ಯಮುಂದಕೆ 16 ಗರುಡನೇರಿ ನಿನ್ನ ಸಹಿತ ಹರಿಯು ತೋರಿಸಕಲಲೋಕ ಅಮೃತ ಕರದಿ ಕುಡಿಸಿ ಅರವಿ ದೂರ ನಿನ್ನ ತಬ್ಬಿದ ಮರುತನಂತೆ ವ್ಯಾಜರಹಿತ ಚರಣಭಜರ ನಿನಗೆ ತಾನೆ ಕರೆದು ಕೊಟ್ಟ ವಾಯುಪದವಿ ತುರಗವದನ ಪ್ರಥಮ ಭಕ್ತಹೋ17 ಗೆದ್ದು ವೀರಶೈವಗುರುವ ಗದ್ದುಗೆಯನು ಏರಿ ಮೆರೆದೆ ಮೆದ್ದು ಗರವ ಸುಖದಿ ನಿಂದೆ ತಿದ್ದಪಾಟು ತೋರ್ದೆ ಉಡುಪಿಲಿ ಬದ್ಧನಾದ ವಿಠಲ ನಿನಗೆ ಬಿದ್ದ ನೃಪನ ಗೇಸಿ ಕಾಯ್ದೆ ಶುದ್ಧ ವಿಷ್ಣುಭಕಿÀ್ತ ತೋರಿ ಮಧ್ವಸುತರ ಪೊರೆದ ದಾನಿಹೋ 18 ನೂರುನೂರು ಆನೆಮೀರಿ ಭಾರಿಬಲದ ಮೆರೆವ ಶಕ್ತ ನೇರನಿಲಿಸಿ ಧ್ವಜದಸ್ತಂಭ ದೂರಗೈದೆ ಶಿಷ್ಯಕಳವಳ ಭಾರ ಹೌರ ಸ್ಥೂಲಸೂಕ್ಷ್ಮ ತೋರಬಲ್ಲೆ ಇಚ್ಛೆಯಂತೆ ಮೇರೆ ಇರದ ಮಹಿಮನೆಂದು ಸಾರಿಸಾರಿ ನುತಿಪೆ ಜೀಯನೆ 19 ಗಂಗೆಪಡೆದ ರಂಗನನ್ನು ಅಂಗನಿಂದ ತರಿಸಿ ನೆಟ್ಟು ತುಂಗವಿಭವದಿಂದ ಯಜಿಸಿ ಕಂಗಳಿಂದ ನೋಡಿ ಉತ್ಸವ ಅಂಗಮರೆತು ನಂದ ಕುಡಿದೆ ಸಂಗದಿಂದ ಕಂಡ ಜನಕೆ ಭಂಗವಾಯ್ತು ಸಕಲ ಬಂಧ ಕೊಂಗಿ ಖಳರ ಬಿಟ್ಟು ಸತ್ಯವೈ 20 ಬರಿಯ ಕವನವಲ್ಲ ಕೇಳಿ, ಗುರುವೆ ದ್ವಿಜನ ಸ್ವಪ್ನದಲ್ಲಿ ಅರುಹಿ ತನ್ನ ಚರಿತೆಯನ್ನು ಬರೆಸಿ ಇಹನು ಪೊರೆಯೆ ಶಿಷ್ಯರ ಅರಸಿ ನೋಡಿ ಧನ್ಯರಾಗಿ ಒರೆಸಿ ಕಾಮಕ್ರೋಧವೆಲ್ಲ ಚರಣಪಿಡಿಯೆ ಭಕ್ತಿಯಿಂದ ಗುರುವು ಬಿಡನು ನಿಮ್ಮನೆಂದಿಗು 21 ಸುಧೆಯ ಕರ್ತ ಜಯಮುನೀಂದ್ರ ಹೃದಯವಾಸಿ ವಾಯುವಂದ್ಯ ಪದುಮೆ ರಮಣ ಕೃಷ್ಣವಿಠಲ ಸದರದಿಂದ ಮುಕ್ತಿ ನೀಡುವ ಸದನ ವಾಜಿವಕ್ತ್ರಗೆರಗಿ ಬದರಿನಿಲಯ ನನ್ನ ನೆನೆದು ಪದವನಿದನು ಪಠಿಪ ಭಕ್ತಗೆ22
--------------
ಕೃಷ್ಣವಿಠಲದಾಸರು
ಋಣವ ಮಾಡಿದ ಪತಿತನು ನಾನು ಸ್ಮøತಿಧನವ ಪಾಲಿಸು ಸೀತಾರಾಮ ನೀನು ಪ'ರಿಯರ ಮಾತನು 'ಂದುಗಳೆದು ಮುಂದೆಬರುವ ದುಃಖಗಳ ಬಗೆಗೊಳದೆದುರುದುಂಬಿತನದಿಂದ ದುಷ್ಟಸಂಗತಿಗೈದುಪರರ ಮೆಚ್ಚಿಸಿ ಬಾಳ್ವ ಪೌರುಷ್ಯವನು ನೀಗಿ 1ಹೆಮ್ಮೆಯ ಬಲು'ಷ ಹೆಡತಲೆಗೇರಿರೆಸುಮ್ಮಾನಬಡುತತಿಸುಖ'ದೆಂದುಉಮ್ಮಳಿಪರ ಠಕ್ಕಿಗುಬ್ಬಿ ುೀ ಪರಮಾತಿಗೊಮ್ಮೆಯು ಮನಗೊಡದೊರಟುಮಾರ್ಗವ ಸಾರಿ 2ಕಾಶಿಯೊಳ್ಮರಣವ ಕಾ'ುಸಿದರೆಯುಸನ್ಯಾಸವ ಮಾಡ್ದರು ಸನ್ಮುಕ್ತಿಯುತಾ ಸೋಕದು ಋಣತಗು'ದ್ದವನನೆನ್ನು'ೀ ಸೊಲ್ಲ 'ರಿಯರು ಸಾರಿದರೆಯು 'ುೀರಿ 3ಗೋವ ಕೊಂದವನಿಗೆ ಗಂಗೆಯ ಹಳಿದಗೆಭಾವೆ ಭೂಸುರರನು ಬಡಿದವಗೆಯಾವದು ಗತಿಯದು ನಿಷ್ಕøತಿ ಋಣಿಗಿಲ್ಲೆಂದುಭಾವಜ್ಞರರು'ದ ಭಯವನು ಗಣಿಸದೆ4ಬಡ್ಡಿಯ ಹೆಚ್ಚಿಸಿ ಬಹು ಧನವನು ತಂದುಕಡ್ಡಿಗೆ ಸರಿಮಾಡಿಕೊಟ್ಟವರಾಅಡ್ಡಿಯ ತೋರಿಸುತ ಸುಲಭ ಮುಳುಗಿಸಿದುಡ್ಡು ದುಗ್ಗಾಣಿಯ ತಿರಿದುಂಬ ರೀತಿಗೆ 5ಋಣಕರ್ತೃ ಪಿತೃಶತ್ರು ಧನಕರ್ತೃ ಪಿತೃ ಸಖಯೆನುವ ಗ್ರಂಥಾರ್ಥಗಳನು ಕೇಳಿಯೂಗಣಿಸದೆ ಸತಿ ಸುತರ್ಕೊರಗಿದರೆಯು ಕೆಟ್ಟುತೃಣಕಿಂತ ಕಡೆಯಾಗಿ ತಬ್ಬಿಬ್ಬನಾಡುತ್ತ6ಸಾಲವ ಕೊಟ್ಟವ ಸಾರಿ ಸಾರಿಗೆಕೇಳಿದರವನಿಗೆ ಕದ್ದೋಡುತಾಬೇಳುವೆ ಮರಣವ ಬಾಯಲಾಡುತ ಬುದ್ಧಿಜಾಳಾಗುವಂದದಿ ಜಡಿದು ಹೆದರಿಸುತ 7
--------------
ತಿಮ್ಮಪ್ಪದಾಸರು
ಏಕೆ ಮರೆದಿದ್ದೆನಯ್ಯಾ ಎನ್ನೊಳು ನಾ ಗೋಪಾಲಶ್ರೀಕಾಂತ ನಿನ್ನ ಪಾದದ ಚಿಂತೆಯ ಬಿಟ್ಟಜ್ಞನಾಗಿ ಪಕಾಯವೆ ಸತ್ಯವಿದೆಂದು ಕಾಣದೆ ನಾನಿಲ್ಲಿ ಬಂದುಮಾಯೆಗೊಳಗಾಗಿ ನಿಂದು ಮತ್ತರ ಸಂಗದಿನೊಂದುಜಾಯೆ ಸುತರ್ಗತಿಯೆಂದು ಧ್ಯಾನಿಸಿ ದುಃಖದಿನೊಂದುಬಾಯ ಬಡುಕರೊಳ್ನಿಂದು ಬನ್ನಬಟ್ಟುಳಿಸೆಂದು 1ಆಶೆಗಳಿಗೊಳಗಾಗಿ ಆನಂದಮಾರ್ಗವ ನೀಗಿವಾಸನೆಗಳಿಂದ ಪೋಗಿ ವಾದಿಸುತಲಿ ಚೆನ್ನಾಗಿಮೋಸಹೋಗಿ ಮುಖಬಾಗಿ ಘಾಸಿಯಾಗಿ ಗುಣಪೋಗಿಕಾಸು ವೀಸಾ ಧಾನ್ಯಕಾಗಿ ದಾಸನಾಗಿ ಪರರಿಗೆ 2ಎಲ್ಲರೊಳುವಾದಗಳವಾಡಿ ಬಲ್ಲವನಂದದಿ ಕಾಡಿಖುಲ್ಲರಾ ಮಾರ್ಗವ ಕೂಡಿ ಕೂಳಿಲ್ಲದಿಲ್ಲಿಗೆ ಬಾಡಿತಲ್ಲಣದೊಳಗೋಲಾಡಿ ತಬ್ಬಿಬ್ಬೊ ಕರ್ಮವ ಮಾಡಿಕಲ್ಲೆದೆಯನನೆನ್ನನು ಕಾಯಬೇಕು ಗೋಪಾಲಾರ್ಯ 3
--------------
ಗೋಪಾಲಾರ್ಯರು
ಏತಕೀ ಭಯ ನೀತಿಯೇನಯ್ಯ ಪ ಮಾತುಕೇಳು ತಾಮನದಲ್ಲಿನೊಂದು ಅ.ಪ ತಬ್ಬಿಕೊಂಡಿರ್ಪ ಪ್ರಾರಬ್ದ ಬಿಡುವುದೆ ಅಬ್ಜನಾಭನಿರುವ ನಮ್ಮರಕ್ಷಿಸಲು 1 ಬೊಬ್ಬೆರೋಗ ಬಂತೆಂದಬ್ಬರ ಜನಗೈಯ್ಯೆ ಉಬ್ಬಿಉಬ್ಬಿನೀ ಊರಬಿಟ್ಟೋಡಲು 2 ಹುಲಿಗಳಂಥನರರು ಇಲಿಯ ನೋಡಿ ಬೆದರಿ ಕಳೆದುಕೊಂಬರು ತಮ್ಮ ಸರ್ವಸ್ವವ 3 ಛಳಿ ಮಳೆಯು ಬಿಸಿಲು ಗಾಳಿಯೊಳು ಬಳಲುವುದ್ಯಾಕೆ ಬುದ್ಧಿಯಿಲ್ಲದೆ 4 ಕುನ್ನಿ ನಿನ್ನಂಥವರೆಷ್ಟುಮಂದಿ ಪೋದರು ಘನ್ನಗುರುರಾಮವಿಠಲನ್ನ ನಂಬು5
--------------
ಗುರುರಾಮವಿಠಲ
ಜಯ ಜಯ ನಿಮಗೆ ಜಯವಣ್ಣ ಭಯವಿಲ್ಲೀನುಡಿ ಕೇಳ್ ಚಿಣ್ಣ ಪ ಶ್ರೀ ಮನೋಹರನ ಲೀಲೆಯಿದು ಸು ಕ್ಷೇಮವಹುದು ಸತ್ಪುರುಷರಿಗೆ1 ಈ ಜಗತ್ತನೂ ಈಶ್ವರನೂ ತಾ ರಾಜನಾಗಿ ಕಾಪಾಡುವನು 2 ಕುರುಡರು ತಾವ್ ಕೆಡುವರು ಕೊನೆಗೆ 3 ಇದರೊಳುಂಟು ಬಹುವಿಧ ಭೇದ ವದರುತಿಪ್ಪದು ಸಕಲವೇದ4 ಅಂತ್ಯವಿಲ್ಲದಿಹ ಕಾರಣದಿ ಅ ನಂತ್ಯವೆಂದು ಪೇಳ್ವರು ಭರದಿ 5 ಮನುಜ ಜನ್ಮ ಬಹುದುರ್ಲಭವು ಮನನಶೀಲರಿಗಹುದು ಶುಭವು 6 ಮರೆಯಬೇಡಿ ಜನರೆ ನೀವು ಅರಿತು ಅರಿಯದವರಿಗೆ ನೋವು 7 ಕತ್ತಲೆ ಕೊನೆಯಿಲ್ಲದ ಘೋರ 8 ವುಳಿಯದು ನಿಮಗದು ಕೇಳ್ ಜನರೆ 6 ಧರ್ಮವೆಂಬ ಮೂಟೆಯ ಕಟ್ಟೆ ಬಟ್ಟೆ 10 ಗುರುವಾಜ್ಞೆಯ ಮೀರುವುದು ಸಲ್ಲ ಈ ದುರುಳತನ ನಿಮಗೆ ಸರಿಯಲ್ಲ 11 ನಾನೇ ಶ್ರೇಷ್ಠನೆಂಬುವ ಮಾತು ಶಾನೆ ವಡಕು ಗಡಿಗೆಯು ತೂತು 12 ಹಿಂದಿನವರ ಕಷ್ಟವ ನೋಡಿ ಮುಂದಕೆ ಸತ್ ಸಾಧನೆ ಮಾಡಿ 13 ಮೂರು ಕರಣ ಶುದ್ಧಿಯು ಬೇಕು ಧೀರ ಜನರಿಗಿಷ್ಟೇ ಸಾಕು 14 ಜನರ ನೋಡಿ ನಡೆಯಲಿಬೇಡಿ ಕೊನೆಗೆ ನಿಮಗೆ ಕಾಲಿಗೆ ಬೇಡಿ 15 ಹೆಚ್ಚಪೇಕ್ಷಿಸೆ ಬರುವುದಿಲ್ಲ ಮೆಚ್ಚನು ನಿಮಗೆ ಸಿರಿಯನಲ್ಲ 16 ನಿರ್ಮಲ ಮಾರ್ಗ ಹುಡುಕಿದಿರಾ 17 ಜ್ಞಾನರತ್ನ ಸಂಪಾದನೆಯು ಹೀನ ಜನರಿಗಾಗದು ಕೊನೆಯು 18 ದುರಾಸೆಯಲಿ ಕೆಡುವರು ಕೆಲರು ನರಾಧಮರು ಎಂದೆನಿಸುವರು 19 ಪರಿಯಂತ ತಂ ತಮ್ಮಟ್ಟಿಗಿಹುದು ಅಂತ 20 ಗೂಡಿನ ಮೇಲೆ ದುರಭಿಮಾನ ಮಾಡಿ ಮಾಡಿ ಕೆಡುತಿಹರು ಜನ 21 ಯೀಗೂಡಿಗೆವೊಂದಾಧಾರ ಯೋಗಿಗಳರಿವರಿದರಸಾರ 22 ವರ ರಸಗಳು ನಾಲ್ಕು ತೊಗರು 23 ಹಂಚೇಳರಿಂ ಮಾಡಿಹದೇವ 24 ಘಟಿಸಿರುವುದು ಪತ್ತಲೆಯಿದರೊಳ್ 25 ಮರನಿದೆಂದು ಶಾಸ್ತ್ರದ ಮೂಲ ಅರಿಯದೆ ನಾನೆಂಬೆನು ಬಾಲ 26 ಪಕ್ಷಿಗಳೆರಡೀ ಮರದಲ್ಲಿ ಸಾಕ್ಷಿ ಒಂದು ಒಂದಕೆ ಅಲ್ಲಿ 27 ಮರದ ಪಣ್ಣು ತಿಂಬುವದೊಂದು ನಿರುತವು ನೋಡುತಿರುವದೊಂದು 28 ದ್ವಾಸುಪರ್ಣ ಶೃತಿ ಇದರರ್ಥ ದಾಸನಾಗದಿರುವನು ವ್ಯರ್ಥ 29 ಅಧ್ಯಾತ್ಮ ವಿದ್ಯದಲಿ ತೋರುವುದೇ 30 ಜೀವನಾಮ ಆತ್ಮನಿಗುಂಟು ದೇವತಾನು ತಬ್ಬಿದ ಗಂಟು 31 ಅಭೇದ ಶೃತಿಗಳೇನಕ ವಿಧ ಸ್ವಭಾವದಿರುನಡೆ ತೋರುವದ32 ಸುರರುತ್ತಮರು ನರರಾನಿತ್ಯ ಸುರೇತರರು ನೀಚರು ಸತ್ಯ 33 ನೂರು ವರುಷ ಬದುಕುವರೆಂದು ಮೀರಿ ಮನದಿ ಯೋಚಿಸಿ ಮುಂದು 34 ಬಹು ಧನಾರ್ಜನೆಯ ವೂಹೆಯಲಿ 35 ಮೊದಲು ಅನ್ನಕಿಲ್ಲೆಂದು ಮತಿ ವಿಧ ವಿಧ ವಸ್ತ್ರಗಳಲಿ ಪ್ರೀತಿ 36 ನಾಬಡವನು ಎಂದಗಲಿರುಳು 37 ತನಗೆ ಬೇಕಂತ ಚಿಂತೆಯೊಳು 38 ಇತರರ ನೋಡಿ ತನಗಪೇಕ್ಷೆ ಗತಿ ಇಲ್ಲದೆ ಇರುವುದೆ ಶಿಕ್ಷೆ 39 ತಾವ್ ಸಮಂಜಸದಿ ಪೇಳಿದರು 40 ಪ್ರವೃತ್ತಿ ಮಾರ್ಗದ ಸಂಪತ್ತು ಭವಾಂಬುಧಿ ಸುಳಿಯು ವಿಪತ್ತು 41 ಫಲವ ಕೋರಿ ಕರ್ಮವ ಮಾಡಿ ಹಲವು ಯೋನಿಗಳೊಳೋಡಾಡಿ42 ಮರಳಿ ಮರಳಿ ಜನನ ಮರಣದೆ ದರಿಯ ಕಾಂಬ ಬಗೆ ದಾರಿಯದೆ 43 ಇದುವೆ ದೊಡ್ಡ ಸಂಸೃತಿ ವೃಕ್ಷ ತುದಿ ಮೊದಲಿಗು ದೊರಕದು ಮೋಕ್ಷ 44 ಇನ್ನು ಅಕ್ಕ ತಂಗಿಯು ಮೊದಲು 45 ಸತಿ ಸುತರು ಬಳಗಗಳು 46 ಇವರು ತನ್ನವರಿತರರಲ್ಲ ಭವ ಜಲಧಿಯ ಜಂತುಗಳೆಲ್ಲ 47 ಕೊಡದಿದ್ದರೆ ಕೋಪವು ಬಹಳ 48 ವಿತ್ತವಿರಲು ಬಂಧುಗಳೆಲ್ಲ ಹತ್ತಿ ಇವನ ಬಾಧಿಪರೆಲ್ಲ 49 ಸುಳ್ಳುಹೇಳಿದರೆ ಬಹುನಂಬಿಕೆ 50 ಹಿತೋಪದೇಶದಿ ಬಹುಕೋಪ ಪತಿತ ಜನರಿಗೆ ಇದು ಪಾಪ 51 ಒಬ್ಬ ದೈವಲೋಕಕೆ ಸತ್ಯ ಹಬ್ಬವವನ ಭಜಿಪುದಗತ್ಯ 52 ಕಾಮುಕರಿಗೆ ಕಡೆಗೂ ದುಃಖ ನೇಮವದಕೆ ಮೂಲವುರೊಕ್ಕ 53 ಸ್ಪøಹದಿಂದಲೆ ಕೋಪವು ಬಹುದು ವಿಹಿತವೆಂದು ನಗುವನೆ ಸಾಧು 54 ಲೋಭದಿಂದ ಮೂಲಕೆ ನಾಶ ಸ್ವಾಭಾವ್ಯದಿ ದುರ್ಜನಕಾಶಾ 55 ರಾಶಿ ಧನವ ಕೊಳ್ಳೆಯು ಕೊಡುವ 56 ದಾನಕೆಂದರಿಲ್ಲವು ಕಾಸು ದಂಡಕೊಡುವುದಕೆ ಬಹುಲೇಸು 57 ನಷ್ಟವಾದರೂ ಮನಕಿಷ್ಟ ದುಷ್ಟಾತ್ಮರು ಪಡುವರು ಕಷ್ಟ 58 ಆರ್ಯರುಕ್ತಿ ಕೇಳುವುದಿಲ್ಲ ಕಾರ್ಯದಲಿ ವಿಘಾತವೆ ಎಲ್ಲ 59 ಧನವಿದ್ದರು ಸೌಖ್ಯವು ಕಾಣೆ ಘನದುರಾಸೆ ಕುಜನರಿಗೆ ಆಣೆ 60 ಭೂಮಿ ಉಂಟು ತನಗೆಂಬುವರು ನೇಮದಿ ದಂಡವ ತೆರುತಿಹರು 61 ಮಳೆಬೆಳೆಯನು ನಿಂದಿಪರು ಕೆಲರು ಖಳರು ಸುಮನಸರ ದೂಷಿಪರು62 ಮೊದಲು ತುದಿಯಲಿ ದುರಭಿಮಾನ 63 ವ್ಯಾಪಾರದಿ ಧನ ಕಳಕೊಂಡು ಕೋಪ ವ್ಯಾಜ್ಯಕೆಳೆವದೆ ಫಂಡು 64 ಬಲುಧನವ ಕೂಡಿಸುತಲಿ ಮುಂದು 65 ಮುಖದಾಕ್ಷಿಣ್ಯದಿ ಮಾತಾಡಿ ವಿಕಲರನರ ಸ್ನೇಹದಿ ಕೂಡಿ66 ದೊಡ್ಡದಾಗಿ ಮನೆಯನು ಕಟ್ಟಿ ದುಷ್ಟತನದಿ ವಾದಿಸಿ ಬಿಟ್ಟಿ 67 ಕೂಲಿಯವರ ಹೊಟ್ಟೆಗೆ ಕೊಡದೆ ಲೋಲನಾಗಿ ವಂಚನೆ ಬಿಡದೆ 68 ಸಂಸಾರವಿದೆ ಸ್ಥಿರವೆಂದು ಹಿಂಸೆಪಡುತಲಿ ಸದಾನೊಂದು 69 ಚತುರ ಶೀತಿ ಲಕ್ಷಯೋನಿಗಳೊಳ್ ಮತಿಹೀನರಾಗಿ ಜನಿಸುತಲೂ 70 ಭದ್ರವು ತಮಗೆಂದು ಪ್ರಾಣಿಗಳು 71 ಇದಕ್ಕಾಗಿ ಪರಾಧೀನದಲಿ ಪದೇ ಪದೆಗೆ ತಾವು ನೋಯುತಲಿ 72 ಮನುಜ ಜನ್ಮ ಬರುವುದೆ ಕಷ್ಟ ಮಾನಿತನಾದವನೆ ಅತಿ ಶ್ರೇಷ್ಠ 73 ಭೋಧಿಸುವಾತನೆ ಶುಭತಮನು 74 ಸುಜನರಿಲ್ಲವವರದೆ ಪಂಥ 75 ಕರ್ಮಾರ್ಥ ಶೃತಿ ಗಹನದಲಿ ನಿರ್ಮಲರಾಗದೆ ಚಿಂತೆಯಲಿ&ಟಿbsಠಿ
--------------
ಗುರುರಾಮವಿಠಲ
ಜೋ ಜೋ ಜೋ ಗುಂಡ ಪರಮಪ್ರಚಂಡ ಜೋ ಜೋ ಜೋ ಗುಂಡ ಸುರಚಿರದಂಡ ಪ ಜೋ ಜೋ ಜೋ ದೊಡ್ಡ ಕರಿಯಕಲ್ಗುಂಡ ಜೋ ಜೋ ಜೋ ಮದ್ದನರೆಯಚ್ಚಗುಂಡ ಅ.ಪ ದುಂಡು ಮಲ್ಲಿಗೆಗಿಂತ ಮೃದುವಾದ ಗುಂಡಾ ಕೆಂಡ ಸಂಪಿಗೆಗಿಂತ ಚೆಲುವಾದ ಗುಂಡಾ ಪುಂಡರೀಕಕ್ಕಿಂತ ಚೆಲುವಾದ ಗುಂಡಾ ಮೊಂಡ ಮೂಕರಕಯ್ಯ ಕೋದಂಡಗುಂಡಾ 1 ಒಬ್ಬಿಟ್ಟು ಹೂರಣವರೆಯುವ ಗುಂಡಾ ತಬ್ಬಿಬ್ಬಾಡುವರನು ಕಡುಗುವಾ ಗುಂಡಾ ರುಬ್ಬಿ ರುಬ್ಬಿ ದೋಸೆ ಯೀಯುವಾ ಗುಂಡಾ ಕೊಬ್ಬಿದ ಜನವನು ದಬ್ಬುವಾ ಗುಂಡಾ 2 ಪರಿಪರಿ ಬಂಧನವರಿಯದ ಗುಂಡಾ ಉರುಳಿಸಿದಲ್ಲಿಯೇ ನಿದ್ರಿಪ ಗುಂಡಾ [ವರಭಕ್ತಾವಳಿಗೆ ಸುಖವೀವಗುಂಡಾ] 3 ನೀನಿಲ್ಲದಿರುವ ಮನೆಗಳಿಲ್ಲ ಗುಂಡಾ ನೀನಿರುವಲ್ಲಿ ತಿಂಡಿಗಳುಂಟು ಗುಂಡಾ ಕಾನನದೊಳಗಿದ್ದು ಕರಗದ ಗುಂಡಾ ಮಾನವ ಗಣಕ್ಕೆಲ್ಲಾ ಬೇಕಾದ ಗುಂಡಾ4 ಒರಳುಕಲ್ಲಿನ ಮೇಲೆ ನೇಯುವಾ ಗುಂಡಾ ತರುಣಿಯ ಕರದೊಳು ನಲಿಯುವಾ ಗುಂಡಾ ವರ ದುಕೂಲಂಗಳ ಬಯಸದ ಗುಂಡಾ ವರದ ಮಾಂಗಿರಿರಂಗನೆನಿಸುವ ಗುಂಡಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜೋ ಜೋ ಸುಖಸಾರ ಪ ಜೋ ಜೋ ಜೋಜೋ ದೋಷ ವಿದೂರ ಅ.ಪ ಸುಮ್ಮನೆ ಸಾಗೆಲೊ ಮುಂದೆ ನಮ್ಮ ಮಗುವು ತಾ ಮಲಗಿಹನಿಂದು ನಿಮ್ಮ ಮಂದಿಗೆ ಈ ಶಿಶುವು ಬೊಮ್ಮನು ಫಣಿಯಲಿ ಬರೆದಿಹನೇನೊ 1 ನಿದ್ರೆಯ ಸುದ್ದಿಯ ಕಾಣದ ನಾನು ನಿದ್ರೆಯ ಮಾಡುವ ಸಡಗರವೇನು ಮುದ್ದು ಮಾತುಗಳಲಿ ಫಲವೇನು ನಿದ್ರೆ ನಾ ಮಾಡಲು ಎದ್ದಿರುವರ್ಯಾರು2 ನಿದ್ರೆ ಮಾಡುವುದೆಂತು ಬೇಕಾದ ಜೋಗುಳ ಪಾಡುವೇನೊ ಏಕಮನದಿ ನೀ ಪ್ರಾಜ್ಞನ ಕೂಡೊ ದಧಿ ಕ್ಷೀರಗಳು ನಾಕು ನಿಮಿಷದಲಿ ಜೀರ್ಣವಾಗುವುವೊ 3 ಕಣ್ಣನು ಮುಚ್ಚಿದೆ ಪ್ರಾಜ್ಞ ನಾನು ಚನ್ನಾಗಿ ತಬ್ಬಿದೆ ನೋಡಮ್ಮ ಎನ್ನಯ ಕುಕ್ಷಿಯು ಬರಿದಾಯ್ತು ಇನ್ನು ಪ್ರಸನ್ನಳಾಗುಣಬಡಿಸಮ್ಮ 4
--------------
ವಿದ್ಯಾಪ್ರಸನ್ನತೀರ್ಥರು
ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ ಪ ಎನ್ನ ಪುಣ್ಯಗಳಿಂದ ಈ ಪರಿಯುಂಟೇನೊ ನಿನ್ನದೆ ಸಕಲ ಸಂಪತ್ತು ಅ.ಪ ಒಬ್ಬ ಹೆಂಗಸಿನ ಹೊಟ್ಟೆಗೆ ಹಾಕುವುದಕಿನ್ನು ತಬ್ಬಿಬ್ಬುಗೊಂಡನೊ ಹಿಂದೆ ನಿಬ್ಬರದಿಂದಲಿ ಸರ್ವರ ಕೂಡುಂಬೊ ಹಬ್ಬವನುಣಿಸುವಿ ಹರಿಯೆ 1 ಸಂಜೆತನಕವಿದ್ದು ಸಣ್ಣ ಸೌಟಿನ ತುಂಬ ಗಂಜಿ ಕಾಣದೆ ಬಳಲಿದೆನೋ ವ್ಯಂಜನ ಮೊದಲಾದ ನಾನಾ ರಸಂಗಳು ಭುಂಜಿಸುವುದು ಮತ್ತೇನೊ2 ಜೀರ್ಣ ಮಲಿನ ವಸ್ತ್ರ ಕಾಣದ ನರನಿಗೆ ಊರ್ಣ ವಿಚಿತ್ರ ಸುವಸನ ವರ್ಣವರ್ಣದಿಂದ ಬಾಹೋದದೇನೊ ಸಂ ಪೂರ್ಣಗುಣಾರ್ಣವ ದೇವ 3 ನೀಚೋಚ್ಚ ತಿಳಿಯದೆ ಸರ್ವರ ಚರಣಕ್ಕೆ ಚಾಚಿದೆ ನೊಸಲ ಹಸ್ತಗಳ ಯೋಚಿಸಿ ನೋಡಲು ಸೋಜಿಗವಾಗಿದೆ ವಾಚಕ್ಕೆ ನಿಲುಕದು ಹರಿಯೆ 4 ಮಧ್ಯಾಹ್ನ ಕಾಲಕ್ಕೆ ಅತಿಥಿಗಳಿಗೆ ಅನ್ನ ಮೆದ್ದೆನೆಂದರೆ ಈಯಗಾಣೆ ಸತ್ಪಾತ್ರ ಕೂಡುಂಬೊ ಪದ್ಧತಿ ನೋಡೊ ಪುಣ್ಯಾತ್ಮ 5 ಮನೆ ಮನೆ ತಿರಿದರು ಕಾಸು ಪುಟ್ಟದೆ ಸು ಮ್ಮನೆ ಚಾಲ್ವರಿದು ಬಳಲಿದೆನೊ ಹಣ ಹೊನ್ನು ದ್ರವ್ಯಂಗಳಿದ್ದಲ್ಲಿಗೆ ತನಗೆ ತಾನೆ ಪ್ರಾಪ್ತಿ ನೋಡೊ ಜೀಯಾ 6 ವೈದಿಕ ಪದವಿಯನೀವಗೆ ಲೌಕಿಕ ಐದಿಸುವುದು ಬಹು ಖ್ಯಾತೆ ಮೈದುನಗೊಲಿದ ಶ್ರೀ ವಿಜಯವಿಠ್ಠಲನ ನಿನ್ನ ಪಾದಸಾಕ್ಷಿಯನುಭವವೊ 7
--------------
ವಿಜಯದಾಸ
ನಿನಗೆ ನಾ ಬ್ಯಾಡಾದನೆ ಘನಕೃಷ್ಣ ಮಾನಿನಿಯ ಕಿಂತ ಕೊನೆಯೆ ಪ ಎನ್ನ ಕಣ್ಣಿಗೆ ತೋರದೆ ಬೆನ್ನಲ್ಲಿ ಮಾನಿನಿಗೆ ನೀ ತೋರಿದ್ಯಾ ಮನ್ನಿಸುವ ನಿತ್ಯದಲಿ ಮುನ್ನ ನಿನಗೆ ನಾ ದ್ವೇಷಿಯಲ್ಲವೋ 1 ಒಳಗೆ ನೀನಿರುವಿ ಎಂದೂ ತಿಳಿದು ಬಲು ತೊಳಲಿ ಶರಣು ಬಂದರೆ ಪೊಳೆಯದಲೆ ಮನಸಿನೊಳಗೆ ಕೊಳಲು ಕರೆ ಬಾಲೇಗೆ ನೀ ತೋರಿದ್ಯಾ 2 ಸುಳ್ಳು ಇದು ಎಂದ್ಹೇಳಲು ಸಲ್ಲದೆಲೊ ಕಳ್ಳ ನೀನೆಂದು ಬಂದೆ ಪುಲ್ಲನಾಭನೆ ತೋರೆಲೊ ಮಲ್ಲನೆ ಗಲ್ಲ ಪಿಡಿದು ಮುದ್ದಿಪೆ 3 ನೀರದಸಮ ಕಾಂತಿಯ ನಾರಿಮಣಿ ಬೀರಿದಳೊ ಶ್ರೀಕೃಷ್ಣನೆ ಕರುಣಸಾಗರನೆಂಬೊದು ಮರೆತು ನೀ ದೂರ್ಹೋಗಿ ನಿಲ್ವರೇನೊ 4 ಮೂರು ವಯಸೆಂದ್ಹೇಳರೊ ಚಾರುತರಾಭರಣ ಇಟ್ಟಿಹನೆಂಬುರೊ ಈ ರೀತಿ ಅಬಲೆಯರು ನಿರುತದಲಿ ಧರೆಯೊಳಗೆ ಪೇಳ್ವುದರಿಯಾ5 ಎಂದಿಗಾದರು ನಿನ್ನನು ಪೊಂದದೆಲೆ ಇಂದಿರಾಧವ ಬಿಡುವನೆ ತಂದೆ ಶ್ರೀ ಮಧ್ವರಾಯ ಛಂದದಲಿ ಮುಂದೆ ತಂದೆಳೆವ ನಿನ್ನ 6 ನೀ ಬಿಟ್ಟರೇ ಕೆಡುವೆನೆ ಶ್ರೀ ಭೀಮನೊಬ್ಬ ಬಲ ಸಾಕೆಲೊ ಅಪಾರ ದೈವ ನಿನ್ನ ಕೊಬ್ಬುತ ತಬ್ಬಿ ನಾ ನಿನ್ನೊಲಿಸುವೆ7 ಮಾನದಿಂದಲಿ ತೋರೆಲೊ ನಿನಗಿದು ಘನತೆಯಲ್ಲವೊ ಜೀಯನೆ ಮುನ್ನ ಮಾಡ್ದುಪಕೃತಿ ಮರೆತೆಯಾ8 ಇನಿತು ವಂಚಿಸಿ ಪೋದರೆ ನಾ ನಿನ್ನ ಹೀನ ಗುಣದವನೆನ್ನುವೆ ಮನ್ನಿಸಿ ಸಲಹೋ ಬ್ಯಾಗ ಶ್ರೀ ನರಹರಿಯೆ ನಾ ಭಿನ್ನೈಸುವೆ9
--------------
ಪ್ರದ್ಯುಮ್ನತೀರ್ಥರು
ಪ್ರಸನ್ನ ಶ್ರೀ ಬುದ್ಧ ಜ್ಞಾನಸುಖ ಬಲಪೂರ್ಣ ಅನಘ ಲಕ್ಷ್ಮೀರಮಣ ಅನುಪಮಾದ್ಭುತ ಶಿಶುರೂಪ ನಿರವಧಿಕ ಅಮಿತ ಕಲ್ಯಾಣಗುಣಧಾಮ ಬುದ್ಧ ಶರಣು ಮಾಂಪಾಹಿ ಪ ಮಾಧವ ಗೋವಿಂದ ಶ್ರೀಶ ವಿಷ್ಣೋ ಮಧುಸೂಧನ ತ್ರಿವಿಕ್ರಮ ಈಶ ವಾಮನ ಶ್ರೀಧರ ಹೃಷಿಕೇಶ ಪದ್ಮನಾಭ ದಾಮೋದರ1 ವಾಸುದೇವ ಪ್ರದ್ಯುಮ್ನ ನಮೋ ಅನಿರುದ್ಧ ಪುರುಷೋತ್ತಮ ಅಧೋಕ್ಷಜ ನರಸಿಂಹ ಅಚ್ಯುತ ಶ್ರೀಕರ ಜನಾರ್ಧನ ಉಪೇಂದ್ರ ಹರಿ ಕೃಷ್ಣ 2 ಈಜಿ ನಿಂತು ಪೊತ್ತು ಮಣ್ಣೆತ್ತಿ ಎಲ್ಲರನು ಅಂಜಿಸಿ ಬೇಡಿ ಸುತ್ತಾಡಿ ಕಡಲ್‍ದಾಟಿ ರಂಜಿಸಿ ಮೋಹಿಸಿ ಬೋಧಿಸಿದ ವಿಪ್ರಸುತ ತ್ರಿಜಗದೀಶನೇ ಶ್ರೀಶ ಶರಣು ಮಾಂಪಾಹಿ 3 ವಿಶ್ವ ವಿಷ್ಣು ವಷಟ್ಕಾರ ಈಶಾವಾಸ್ಯವು ಸರ್ವ ಈ ಹದಿನಾಲ್ಕು ಭುವನಂಗಳು ಶ್ರೀವರನೇ ನೀ ಪರಮ ಮುಖ್ಯ ನಿಯಾಮಕನು ಸರ್ವದಾ ಅಚಿತ್ ವಸ್ತುಗಳಿಗೆ 4 ಜೀವರುಗಳ ಸತ್ತಾ ಪ್ರವೃತ್ತಿ ಪ್ರತೀತಿಗಳು ಸರ್ವೇಶ್ವರ ನಿನ್ನ ಅಧೀನವು ಸ್ವಾಮಿ ಸರ್ವಪಾಲಕತ್ವ ಗುಣ ನಿನ್ನದೇ ಆದುದರಿಂದ ಸರ್ವಜೀವರುಗಳ ಸ್ವರೂಪ ರಕ್ಷಿಸುತಿ 5 ಜೀವನ ಸ್ವರೂಪಾನುಸಾರದಿ ಮೂರು ವಿಧವು ಸರ್ವ ಹರಿಭಕ್ತರು ಮುಕ್ತಿಸುಖ ಯೋಗ್ಯರು ಸರ್ವ ಹರಿದ್ವೇಷಿಗಳು ತಮೋ ದುಃಖ ಯೋಗ್ಯರು ಸರ್ವದಾ ಸುಖದುಃಖ ಮಿಶ್ರ ಸಂಸಾರಿಗಳು 6 ಬೇವಿನ ಬೀಜಕ್ಕೆ ಸಕ್ಕರೆ ಲೇಪಿಸಲು ಬೇವು ದ್ರಾಕ್ಷಿಗೆ ಸಮ ಆಗುವುದು ಇಲ್ಲ ಬೇವು ಬೀಜವ ಸಕ್ಕರೆ ಪಾತ್ರೆಯಲಿ ಕಂಡ ಯಾವನೂ ಸ್ವೀಕರಿಸ ಎತ್ತಿ ಎಸೆವ 7 ತ್ರಯೀಪುರ ಬೇವುಗಳು ಸತ್ಯಧರ್ಮ ಸಕ್ಕರೆ - ಯೋಳೂ ಪೊಕ್ಕು ದ್ರಾಕ್ಷಿಯಾ ಪೋಲು ಇರೆ ಕಂಡು ಶ್ರೀಪ ನಿನ್ನ ಪಾಲಸಾಗರತಟ ಬಂದು ಶಂಭು ಶಿವ ಶಕ್ರಾದಿಗಳು ಪ್ರಾರ್ಥಿಸಿದರು 8 ಅದ್ರಿ ಚಾಪವನಿತ್ತಿ ತ್ರಿಪುರವ ಸುಟ್ಟ ಸನ್ನುತ ಇವಗೆ ನೀ ಪ್ರಭಂಜನ ಸಹ ಸಹಾಯ ಮಾಡಿದಿಯೋ 9 ಅಂದು ಭಸ್ಮವು ಆದ ತ್ರಿಪುರ ದೈತ್ಯರುಗಳು ಬಂದು ಪುನರ್‍ಜನಿಸಿ ವೈದಿಕ ಸದ್ಧರ್ಮದಲ್ಲಿ ಮುಕ್ತಿ ಯೋಗ್ಯರು ತಿಳಿವ ಬ್ರಹ್ಮ ವಿದ್ಯೆಯ ಕಲಿಯೆ ಸುರರು ನಿನ್ನಲ್ಲಿ ಪೇಳಿದರು 10 ಕಲಿಯುಗದಿ ಈ ತಮೋಯೋಗ್ಯ ದೈತ್ಯರಿಗೆ ಬೆಳೆಯುವುದು ಮೋಹವು ದ್ವೇಷ ಪರಿಪಾಕ ಮಿಳಿತವಾಗಲಿ ಕೂಡದು ಮುಕ್ತಿ ಯೋಗ್ಯರ ಸಹ ಒಳ್ಳೇ ಮುತ್ತಿನ ಸರದೋಳ್ ಮುಳ್ಳ ಬೀಜಗಳೇ ? 11 ಆ ತ್ರಿಪುರ ದೈತ್ಯರ ಪ್ರಮುಖನೂ ತಮೋಯೋಗ್ಯ ಧಾತ್ರಿಯಲಿ ಸೌದ್ಧೋದನ ಜಿನನೆಂದು ಪರಿವಾರ ಸಹ ಜನಿಸಿ ಮುಕ್ತಿಯೋಗ್ಯರ ತೆರದಿ ಚರಿಸಿದರು ಸ್ವಸ್ವ ಯೋಗ್ಯತೆ ಅತಿಕ್ರಮಿಸಿ 12 ದೇವವೃಂದದ ಪ್ರಾರ್ಥನೆ ಅರಿಕೆಯನು ಕೇಳಿ ದೇವವರೇಣ್ಯ ನೀ ಅಭಯವನಿತ್ತಿ ದಿವ್ಯ ಶಿಶುರೂಪವ ಪ್ರಕಟಿಸಿ ಆಗಲೇ ತ್ವರಿತ ಪೋದೆಯೋ ಆ ಜಿನನ ಮಂದಿರಕೆ 13 ಆಗಲೇ ಜಿನನಿಗೆ ಮಗು ಒಂದು ಹುಟ್ಟಿತ್ತು ಪೋಗಿ ನೀ ಆ ಮಗುವ ಮರೆಯಾಗಿಸಲು ಬೇಗನೆ ತೊಟ್ಟಿಲಲಿ ಮಲಗಿದಿಯೋ ವಿಭುವೇ ಜಗನ್ಮೋಹನ ಶಿಶುರೂಪ ಚಿನ್ಮಾತ್ರ 14 ಇದನ್ನರಿಯದೇ ಜಿನಾದಿಗಳು ನಿನ್ನನ್ನೇ ಜಾತವಾದ ತಮ್ಮ ಮಗುವೆಂದು ನೆನೆದು ಬಂಧು ಮಿತ್ರರ ಗುಂಪು ಸ್ತ್ರೀಯರೂ ಪುರುಷರೂ ಮುದದಿ ಕೊಂಡಾಡಿದರು ಪುತ್ರೋತ್ಸವವ 15 ಕದಳೀ ತೆಂಗು ಪೂಗಿ ಮಾವು ತೋರಣವು ವಾದ್ಯಂಗಳ ಅರ್ಭಟ ವೇದ ಘೋಷಗಳು ದೈತ್ಯ ವಿದ್ವಾಂಸರ ವಾದ ಮೀಮಾಂಸವು ಸುಧ್ವನಿಯಲಿ ಪಕಪಕಾ ಎಂದು ನಕ್ಕಿ ನೀನು 16 ಆಶ್ಚರ್ಯ ಏನಿದು ಹಸಿಮಗು ನಗುತಿದೆ ಹೇ ಚಿನ್ನ ನೀನ್ಯಾಕೆ ನಗುತಿ ಎಂದು ಕೇಳೆ ಬುದ್ಧ ನಿನ್ನ ಹೆಸರೆಂದು ಮೆಚ್ಚಲಾರೆನು ವೈದಿಕಕರ್ಮ ಎಂದಿ 17 ವೇದ ಅಪ್ರಾಮಣ್ಯ ಬೋಧಕವೆಂದು ತೋರುವ ಬೌದ್ಧಮತ ಪೇಳಿದಿ ದೈತ್ಯರ ಮೋಹಿಸಲು ಬೋಧಿಸಿದ ಮೋಹಕ ಮಾತು ಜಿನಾದಿಗಳು ಅದರಿಸದಿರೆ ಹರೇ ನೀ ಸುರರನ್ನ ಕರೆದಿ 18 ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ನೀನು ವೇದೋಕ್ತ ಸುರರನ್ನ ಸ್ಮರಿಸಿದಾಕ್ಷಣವೇ ಬಂದರು ಆ ಜಿನಾದಿಗಳಿಗೆ ಕಾಣಿಸುತ ಯುದ್ದಕ್ಕೆ ನಿಂತರು ನೀನು ಪ್ರೇರಿಸಲು 19 ವೇದ ವಿರುದ್ಧ ಮಾತುಗಳಾಡುತ ನೀನು ವೇದ ಅಪ್ರಾಮಣ್ಯ ವಾದಿಸುತ್ತಿ ಸದೆದು ಹಾಕುವೆವು ಎಂದು ಕೂಗುತ್ತ ಆಯುಧಗಳ ಪ್ರಯೋಗಿಸಿದರು ವಿಡಂಬನದಿ 20 ಮೋದಮಯ ಶಿಶುರೂಪ ಅಚ್ಯುತನೇ ನೀನು ಆ ದೇವತೆಗಳು ಪ್ರಯೋಗಿಸಿದ ಆಯುಧ ಒಂದನ್ನೂ ಬಿಡದೇ ನುಂಗಿ ನಗುತ ಎಲ್ಲಿ ಮಧುಸೂಧನ ವಿಷ್ಣು ಬರಲೀ ಅವ ಎಂದಿ 21 ಲೀಲಾ ವಿನೋದದಿ ಮತ್ತೊಂದು ರೂಪದಿ ನೀ ಪೊಳೆವ ಚಕ್ರವ ಪಿಡಿದು ಬಂದು ನಿಲ್ಲೆ ಸೊಲ್ಲು ಹೆಚ್ಚಾಡದೆ ಚಕ್ರವ ಕಿತ್ತುಗೊಂಡು ಒಳ್ಳೆ ಆಸನವೆಂದು ಅದರಮೇಲ್ ಕುಳಿತಿ22 ಸ್ವತಂತ್ರ ಪರಮಾತ್ಮ ನೀ ಸ್ವಸ್ವಯೋಗ್ಯ ಸಾಧನ ಪ್ರವರ್ತಕ ದೈತ್ಯರ ಮೋಹಕ್ಕೆ ಈ ಲೀಲೆ ಸಾಧು ನೀ ಪೇಳಿದ ಶಾಸ್ತ್ರ ಎನ್ನುತ ನಮಿಸಿ ಸುರರು ತಮ್ಮ ತಮ್ಮ ಸ್ಥಳಕೆ 23 ಎಲ್ಲೂ ಕಂಡಿಲ್ಲವು ಇಂಥಾ ಮಹಾತ್ಮನ ಎಲ್ಲ ದೇವತೆಗಳು ಸೋತು ಓಡಿ ಹೋದರು ಬಲಿಷ್ಟ ತತ್ವವು ಶಿಶುರೂಪ ಬುದ್ಧನದೇ ಎಲ್ಲ ದೈತ್ಯರು ಹೀಗೆ ನಿಶ್ಚೈಯಿಸಿಕೊಂಡರು 24 ಅಭಾವ ಕ್ಷಣಿಕ ಶೂನ್ಯವಾದ ಮೋಹಿತರಾಗಿ ಸ್ವಭಾವ ಯೋಗ್ಯತೆಯಂತೆ ವೈದಿಕವ ತೊರೆದು ಬುದ್ಧ ಆ ಜಿನಾದಿ ದೈತ್ಯರ ಸಮೂಹವು ತಬ್ಬಿಕೊಂಡರು ತಮಸ್ ಸಾಧನ ಮತಿಯ 25 ಜಿನಾದಿ ದೈತ್ಯರು ಮೇಲ್ವಾರಿ ಅರ್ಥವ ಮನದಲ್ಲಿ ನಿಶ್ಚಯಿಸಿ ಮೋಹ ವಶರಾಗೇ ನಿನ್ನಲ್ಲಿ ಸ್ವರೂಪತಹ ಭಕ್ತಿಯುತ ಸುರರು ಧನ್ಯರಾದರು ಕೇಳಿ ಯಥಾರ್ಥ ತಿಳಕೊಂಡು 26 ಏನೆಂದು ವರ್ಣಿಪೆ ಪ್ರಶಾಂತ ವಿದ್ಯೆಯ ಸೊಬಗು ಆನಂದ ಸೌಭಾಗ್ಯ ಸಮೃದ್ಧಿ ಸಿದ್ಧಿಪುದು ಮನ ಪುಳಕವಾಗುತ್ತೆ ಜ್ಞಾನ ತೇಜಃಪುಂಜ ನಿನ್ನ ದಯದಿಂದ ಸುಖ ಅನುಭವಕೆ ಸುಲಭ 27 ಅದೋಷನು ನೀನು ದೋಷ ಅಭಾವವಾನ್ ಸದಾ ನೀನು ಭಿನ್ನನು ಜಡ ಜೀವರಿಂದ ಮೋದಮಯ ಅನಂತಕಲ್ಯಾಣಗುಣಪೂರ್ಣ ನೀ ಆದುದರಿಂ ಅ ಎಂದು ನೀನೇವೇ ಜÉ್ಞೀಯ 28 ಭವ್ಯವಾಗಿರುವುದು 'ಅ' ಯಿಂದ ಜಗತ್ತು ಭವ್ಯ ಎಂದರೆ ಉತ್ಪಾದ್ಯ ಎಂಬುವುದು ಅ ಎಂಬ ನಿನ್ನಿಂದ ಉತ್ಪಾದ್ಯ ಜಗತ್ತನ್ನ ಅಭಾವವೆಂದಿ ವಿಭುವೇ ಸತ್ಯಜ್ಞಾನ 29 ಕಾಲ ಅವಯವ ಕ್ಷಣಕ್ಕೆ ಕ್ಷೋಣಿಯು ಸ್ಥಿರವಾಗಿ ಇರುತಿದೆ ಅದರೂ ಕ್ಷಣ ಸ್ಥಾಯಿಯಾಗಿರುವ ಕ್ಷಣದ ಸಂ¨ಂಧದಿ ಜಗತ್ ಕ್ಷಣಿಕವು ಎಂದು ನೀ ಪೇಳಿದಿಯೋ ಧೀರ 30 ಶಂ ಎಂದರೆ ಸುಖವು ಉ ಉತ್ತಮತ್ವವು ಶಂ ಸಹ ಉ ಸೇರಿ ಶೂ ಆಯಿತು ಶೂ ಎಂಬ ಸುಖರೂಪ ಅನುತ್ತಮೋತ್ತಮ ನೀನೇ ಶೂ ವಾಚ್ಯ ನೀನೇವೇ ಅನ್ಯರು ಅಲ್ಲ 31 ಶೂನ್ಯ ಎಂಬುವರು ಜ್ಞಾನವಂತರು ಹೀಗೆ ವಿಗ್ರಹ ಮಾಡುವರು ಆನಂದಮಯನಾದ ಅನುತ್ತಮೋತ್ತಮ ನಿನ್ನ ಅನುಗ್ರಹದಿಂದ ಜಗತ್ ರಕ್ಷಣೆ ನಿಯಮನವು 32 ಜ್ಞಾನಪೂರಿತ ಅರ್ಥ ಪೇಳಿದ ನಿನಗೆ ನಮೋ ಅನ್ಯ ವಸ್ತುಗಳಿಗಿಂತ ಅತ್ಯಂತ ಪ್ರಿಯತಮನೇ ಜನ್ಮಾದಿಕರ್ತನೇ ಪೂಷ ಪೋಷಕನೇ ನಮಸ್ತೇ 33 ದೇವವೃಂದಕ್ಕೆ ನೀ ಪ್ರಶಾಂತವಿದ್ಯೆಯ ಪೇಳಿ ಅವರುಗಳ ಸಹ ನಿಂತು ಮತ್ತೊಂದು ರೂಪದಿಂದ ದಿವಪರ ಸ್ವಸ್ಥಾನ ಸೇರಿದಿಯೋ ಸುಖಮಯನೇ ಭಾವಕರು ಸ್ಮರಿಸೆ ಸರ್ವವಿಧದಲಿ ಒಲಿವಿ 34 ಬುದ್ಧಾವತಾರ ಪರಮಾತ್ಮ ಚಿದಾನಂದಮಯ ಶ್ರೀಶ ದೇವತಾ ವೃಂದಕ್ಕೆ ಸುಬೋಧ ಮಾಡಿದ್ದು ಸಾಕಲ್ಯ ತಿಳಿಯಲಸಖ್ಯ ಶ್ರೀವೇದವ್ಯಾಸ ಶ್ರೀಶ ಶ್ರೀಮಧ್ವ ಆನಂದತೀರ್ಥರ ಅನುಗ್ರಹದಿಂದಲೇ ಯಥಾಯೋಗ್ಯ ತಿಳುವಳಿಕೆ ಉಂಟಾಗುವುದು 35 ವೇದಾರ್ಥ ನಿರ್ಣಾಯಕ ಸೂತ್ರಗಳ ಮಾಡಿ ಇತಿಹಾಸ ಪುರಾಣಾದಿಗಳ ನಮಗಿತ್ತ ವೇದವ್ಯಾಸ ಸುಹೃತ್ ಬುದ್ಧನು ನೀನೇವೇ ಸತ್ಯಧರ್ಮರಿಗೆ ಸೌಭಾಗ್ಯ ಸುಖದಾತ 36 ಜ್ಞಾನಭಕ್ತ ಆಯುರಾರೋಗ್ಯ ಐಶ್ವರ್ಯ ಶ್ರೀಮಧ್ವ ಹನುಮಸ್ಥ ವನಜಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ನಮೋ ಅನಿಮಿತ್ತ ಬಂಧು ಹರೇ ಕೃಷ್ಣ ರಾಮ ವೇದವ್ಯಾಸ ಬುದ್ಧಾವತಾರ ಮೋದಮಯ ಕರುಣಾಳು 37 -ಇತಿ ಶ್ರೀ ಬುಧ್ಧ ಪ್ರಾದುರ್ಭಾವ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
ಮೂರನೆಯ ಸಂಧಿ ಪತ್ರವನೋದಿಕೊಂಡು ಪದ್ಮನಾಭನ ಕಿಂಕರಗೆ ವಿಷಯೆ ವಿಶಾಲದಿ ಸಖಿಯರು ಕೂಡಿ ಆಲಯದಿಂದಲಿ ಹೊರಟರು ವಸಂತಕಾಲ ಬಂದಿರೆ ನಂದನಕೆ 1 ವಚ್ಚೇರೆಗಂಗಳ ವಾರಿಜಮುಖಿಯರು ನಿಚ್ಚಳಾಂಗದ ನೀರೆಯರು ಹೆಚ್ಚ ಹಿರಿಯ ಹೆಂಗಳ ರನ್ನೇರು ಬೆಚ್ಚದೆ ಬೆರೆದು ನಡೆದರು 2 ಚೆಲ್ಲೆಗಂಗಳ ಚೆಲ್ವೆಯರು ಎಲ್ಲರೈದಿದರು ನಂದನಕೆ 3 ಕಳಸಕುಚದೋರು ಕಂಬುಕಂಧರೆಯರು ಕುಂತಳಕಾಗಿ ನಡೆದರು4 ಚೆಂದುಟಿ ಚೆಲುವಿನ ಬಾಲೆಯರು ನಟನೆಯಿಂದೆಲ್ಲ ನಡೆದರು 5 ತಬ್ಬುತ ತಾಗೊಲವುತಲಿ ಕಬ್ಬುವಿಲ್ಲನ ಕೋಲಾಹಲ ಉಲ್ಲಸದಿ ತಬ್ಬಿ ನಡೆದರು ನಂದನಕೆ 6 ಕಕ್ಕಸ ನಕ್ಕುನಲಿದು ನಾನಾ ಚೇಷ್ಟೆಗಳಿಂದ ಹೊಕ್ಕರು ನಂದನವನವ7 ಸರೋವರವಿಳಿದು ಮಾಡಿದರ್ ಕೈಚಳಕವ ಜಲಕ್ರೀಡೆಯನಾಡಿದರತಿ ಹರುಷದಲಿ 8 ಕೆಂದಾವರೆ ಮೊಗ್ಗು ಕಂಡು ಹರುಷದಿ9 ಕೋಮಲೆಯರ ನೀರಾಟದ ರಭಸಕ್ಕೆ ತಾವರೆಗಳು ಬೆರಗಾಗೆ ಹೇವದಿ ತಲೆಯ ತಗ್ಗಿದವು10 ಸಮನಾಗಿ ತೋರುತಲಿಹವು 11 ದಿವ್ಯಾಂಗ ತೋರುತಲಿ ಹೆರೆಯ ಕೂರಂಬಿನಂದದಲಿ12 ಸಡಿಲಿದಾಭರಣವನಿಟ್ಟು ಮುಡಿದರು ತುದಿವೆಣ್ಣೆಗಂಟು 13 ಕಣ್ಣಿಗೆ ಅಂಜನ ಹಚ್ಚಿ ಸಂಪಿಗೆ ಮಕರಂದ ಪತ್ರಿಕೆಯನಿಟ್ಟು ಲಲನೆಯರೆಲ್ಲ ಶೃಂಗಾರದಿ 14 ಮಾನಿನಿಯರು ತೆರಳಿದರು 15 ಕಂದರ್ಪನ ಮದದಾನೆಯಂತೆ ಕರ್ಪುರ ವೀಳ್ಯವ ಕರದಲ್ಲಿ ಪಿಡಿದು ಗುಪ್ಪವಡೆದರು ನಾರಿಯರು 16 ಘನರಾಗದಿಂದ ಪಾಡುತಲಿ ತಮ್ಮ ಮನಬಂದ ಫಲ ಪುಷ್ಪಂಗಳ 17 ಉದ್ದಂಡತನದಲಾಡುತಿಹರು 18 ಬೆರಸಿಕೊಂಡಾಡುತಲಿಹರು ಹರುಷದಿಂದಲಿ ಮಂತ್ರಿ ತನುಜೆ 19 ಚಿಕ್ಕ ಪ್ರಾಯದ ಕೋಮಲಾಂಗಿಯು ಹೆಮ್ಮಕ್ಕಳನಗಲಿ ತಾ ಚೂತ ಬೆಕ್ಕಸ ಬೆರಗಾಗಿ ನಿಂದಳ್ 20 ಮತಿಭ್ರಮೆಯಿಂದ ನೋಡಿದಳು 21 ಪಾರ್ವತಿಪತಿಯೆಂಬೆನೆ ಪಣೆಗಣ್ಣಿಲ್ಲ ವಾರಿಜೋದ್ಭವನಿವನಲ್ಲ ನಾರಾಯಣನೆಂಬೆನೆ ಶಂಖಚಕ್ರವು ತೋರುವುದಿಲ್ಲ ಕೈಯೊಳಗೆ 22 ಇಂದ್ರನೆಂಬೆನೆ ಬಿಳಿಯಾನೆ ಕೆಲದಲಿಲ್ಲ ಚಂದ್ರನೆಂಬೆನೆ ಮೃಗವಿಲ್ಲ ಬಂದಿಳಿದನೊ ಭೂತಳಕೆ 23 ಕುಸುಮ ಬಾಣವು ಕೈಯೊಳಿಲ್ಲ ವಿಷಯೆ 24 ಹತ್ತಿರೆ ಬಂದು ನಿಲ್ಲುವಳು ಹೊತ್ತಲ್ಲವೆಂದು ಸಾರುವಳು 25 ಮುಟ್ಟುವೆನೆಂದು ನಿಲ್ಲುವಳು ಥಟ್ಟನೆ ಕಡೆಗೆ ಸಾರುವಳು 26 ಲಜ್ಜೆಹೋದರು ಹೋಗಲಿ ಎನುತ ಭೇದಿಸಿ ನೋಡಿದಳವನ 27 ಚೊಗೆಯ ಕುಪ್ಪಸದ ಕೊನೆಯಲ್ಲಿ ಮಂತ್ರಿ ತನುಜೆ 28 ಹೊದ್ದಿದ್ದ ಲಜ್ಜೆ ಭಾವದಲಿ ಸಾರ್ದುಮುದ್ರೆಯೊಡೆದಳಂಬುಜಾಕ್ಷಿ 29 ಮೋಡಿಯ ಬರೆದ ಬರಹನು ಮಾಡಿದ ಸುಕೃತದ ಫಲದಿ 30 ನೇಮಿಸಿ ಕಳುಹಿದ ಕಾರ್ಯ ವಿಷವ ಕೊಡುವುದುತ್ತಮವು 31 ಭಾವಿಸಿ ನಿನ್ನ ಮನದಿ ಮುಂದಕ್ಕೆ ಲೇಸುಂಟು ನಮಗೆ 32 ಕೈತಪ್ಪೆಂದು ಮನದಲ್ಲಿ ತಿಳಿದು 33 ವಾಕಾರವನೆ ಚೆಳ್ಳುಗುರಿಂದಲಿ ತಿದ್ದಿ ಯೇಕಾರವನೆ ಮಾಡಿದಳು ಮರುಗಿದಳು 34 ಕಟ್ಟಿದ ಭರದಿಂದ ತಲೆಯನು ಎತ್ತಿ 35 ನಿಂದೊಮ್ಮೆ ನೋಡುವಳು ಕಂದಿ ಕಾತರಿಸುತಲಿಹಳು 36 ಬೆದರಿದ ಹುಲ್ಲೆಯಂದದಲಿ ಹೃದಯ ಸಂಚಲಿಸುತಲಿಹಳು 37 ಹುಸಿ ನುಡಿಗಳನು ಉಟ್ಟ ದೇವಾಂಗ 38 ಪರಿಮಳ ಮಾಜುವುದೆ
--------------
ಹೆಳವನಕಟ್ಟೆ ಗಿರಿಯಮ್ಮ
ಶ್ರೀ ಶ್ರೀನಿವಾಸ ಕಲ್ಯಾಣ ಲಾವಣಿ ಮಾಧವ ಪ ಮುದಮೋದ ಘನ ಸುಖ ಭಕ್ತರಿಗೀಯಲು ಅ.ಪ. ದೇವ ದೇವೇಶನು ಯಾರೆಂತೆಂದು ಕೋವಿದ ಭೃಗುಮುನಿ ಹುಡುಕುತ ಬಂದು ಪಾರ್ವತಿ ಪತಿಹರ ವಿಧಿಗಳ ಜರಿದು ಧಾವಿಸಿ ಹರಿಯೆಡೆ ಬರ್ಪುದ ಕಂಡು ಭಾವಜ ಪಿತರತಿ ಸೋಗನು ಹಾಕೆ ದೇವನ ಮಾಯೆಯು ಮುಸುಕಲು ಮುನಿಗೆ ಈ ವಿಧ ಸಲ್ಲದು ಹರಿಗೆಂತೆಂದು ಪಾವನ ನೆದೆಯನು ವದ್ದನು ದುಡುಕಿ1 ಮಾಧವ ಚರಣವ ತೊಳೆದು ಹರಿಸುತ ದುಗುಡವ ಭಕ್ತನಿಗಂದು ಕರದಿಂ ದೊತ್ತುತ ಚರಣದ ಕಣ್ಣು ತರಿಯಲು ಹೆಚ್ಚಿನ ಸಾಧನೆ ಮುನಿಗೆ ಹರುಷದಿ ತೆರಳಿದ ಋಷಿವರ ತಾನು ಅರಿಯುತ ಕಾಂತನ ಮನವಂ ಸಿರಿಯು ಸರಸರ ಕೋಪವ ನಟಿಸುತ ತಾನು ಬಿರುಸಿನ ನುಡಿಗಳ ಆಡಿದಳಂದು 2 ಏನಿದು ಮುನಿ ವಿಪರೀತವು ಥರವೆ ನಾನಿಹ ಸ್ಥಳವನು ವದೆಯುವದೆಂದು ಮಾನಿನಿ ಗೌರವ ಕಾಯದೆ ಕ್ಷಮಿಸಿಹೆ ನಾನಿಹೆ ಬರಿಸತಿ ಭಕ್ತರೆ ಹೆಚ್ಚು ಕಾನನ ಸೇರುವೆ ನನಗೇಕೀ ಮನೆ ಮಾನವು ಹೊಯಿತು ಯನ್ನಲು ಸತಿಯು ಮೌನವ ಧರಿಸಲು ಗಂಡನು ನಗುತ ದೀನರ ಪೊರೆಯಲು ಬಂದಳು ಭುವಿಗೆ 3 ಗಂಡನ ಬಿಡುವಳೆ ಲಕ್ಷ್ಮೀದೇವಿ ಪುಂಡರ ಮಾತಿದು ನಂಬಿಲುಬೇಡಿ ಗಂಡನ ಮನತೆರ ನಟಿಸಿದಳಷ್ಟೆ ಗಂಡನು ಹಾಗೆಯೆ ತೊರೆಯುತ ಧಾಮ ಕುಂಡಿಲಿ ಗಿಳಿಯುತ ಅಲೆಯುತ ಹೊರಟ ಕಂಡಲ ಗಿರಿಯೆಡೆ ನಡೆತಾತಂದ ಕಂಡನು ಹುತ್ತವ ಒಂದೆಡೆ ತಾನು ಕುಂಡಲಿಗೊಡೆಯನು ನೆಲಸಿದನಲ್ಲಿ 4 ಪಾವನ ಗಿರಿಯದು ಕೇಳಿರಿ ಎಲ್ಲ ದೇವನ ಖಗಮೃಗ ಬಳ್ಳಿಗಳಾಗಿ ದೇವ ಸಮೂಹವು ಸೇವಿಪರಲ್ಲಿ ಕೋವಿದ ಋಷಿಗಳು ಧ್ಯಾನಿಪರೈಯ ಭಾವಸು ಭಕ್ತಿಲಿ ನೋಡಲು ಗಿರಿಯ ಜೀವರ ಪಾಪಗಲೆಲ್ಲಾ ನಾಶ ನೋವನು ಕಾಣರು ಹರಿಕೃಪೆ ಮುಂದೆ ದೇವನು ಇರೆ ಇದೆ ಭೂವೈಕುಂಠ 5 ಕೃತಯುಗದಲ್ಲಿದು ವೃಷಭಾಚಲವು ಗತಿಸಿದ ರಕ್ಕಸ ಹರಿಯಿಂತೆಂದು ಸುತನಂ ಪಡೆಯಲು ಅಂಜಿಲಿದೇವಿ ಅತಿ ತಪಗೈದಳು ತ್ರೇತೆಯಲೆಂದು ಉತ್ತಮ ನೆಂಬುವ ಗರ್ವವ ನೀಗಿ ಸ್ತುತಿಸಿದ ಶ್ವಾಸನ ಶೇಷನು ಎಂದು ಇತ್ತರು ಮೂರಲಿ ಶೇಷನ ನಾಮ 6 ವೆಂಕಟ ಗಿರಿಯಿದು ಕಲಿಯುಗದಲ್ಲಿ ಸಂಕಟ ನೀಗಿದ ಮಾಧವನಿಲ್ಲಿ ಸಂಕಟ ನೀಡುವ ಪಾಪಗಳನ್ನು ಶಂಕರ ಹರಿತಾ ಕಡಿಯುವನೆಂದು ವೆಂಕಟ ನೆನಿಸುತ ಮೆರೆಯುವ ನಿಲ್ಲಿ ಶಂಕೆಯ ಮಾಡದೆ ಶರಣೆಂದಲ್ಲಿ ಪಂಕಜ ನೇತ್ರನು ಪೊರೆಯುವನಿಲ್ಲಿ ಮಂಕುಗಳಾಗದೆ ಭಜಿಸಿರಿ ಬೇಗ 7 ಇಂದಿರೆ ಕೆರಳೆ ತಂದೆಯು ತೊರೆದನೆ ನಿಜ ವೈಕುಂಠ ಪೊಂದಿಹ ಹುತ್ತವ ಏನಿದು ಛಂದ ಕಂದನು ನಾನಿಹೆಎನ್ನುತ ಬೊಮ್ಮ ತಂದೆಗೆ ಕ್ಷೀರವ ಕರೆಯಲುನಿತ್ಯ ಛಂದದ ಗೋತನು ಧರಿಸುತ ಶಿವನ ಕಂದನ ಗೈಯುತ ಮಾತೆಯ ಸಹಿತ ಬಂದನು ಚೋಳನ ಅರಮನೆಯೆಡೆಗೆ 8 ಕೊಳ್ಳಲು ರಾಣಿಯು ಸೇರುತ ಗೋಷ್ಠಿ ನಲ್ಲಗೆ ಪ್ರತಿದಿನ ಕ್ಷೀರವ ಸುರಿಸೆ ಇಲ್ಲವೆ ಆಗಲು ರಾಣಿಗೆ ಹಾಲು ಗೊಲ್ಲನ ಶಿಕ್ಷಿಸಿ ಬೈಯಲು ಬಹಳ ಗೊಲ್ಲನು ಪತ್ತೆಯ ಹಚ್ಚುತ ಚರ್ಯೆ ಕೊಲ್ಲಲು ಗೋವನು ಕೊಡಲಿಯನೆತ್ತೆ ಬಲ್ಲಿದ ತಡೆಯಲು ಶಿರವನು ಒಡ್ಡೆ ನಿಲ್ಲದೆ ಗಗನದಿ ಚಿಮ್ಮಿತು ರಕ್ತ 9 ನೋಡುತ ಮಡಿಯಲು ಗೊಲ್ಲನು ಅಲ್ಲೆ ಓಡುತ ಗೋಗಣ ಹಟ್ಟಿಯ ಸೇರೆ ಜಾಡನು ಪಿಡಿಯುತ ಚೋಳನು ಬರಲು ಕೇಡಿಗ ನೃಪನೆ ಪಿಚಾಚಿಯು ಆಗೆನೆ ಬೇಡಲು ಕ್ಷಮೆಯನು ಬಹುಪರಿಹರಿಯ ನೀಡಿವಿಶಾಪವ ವೆಂಕಟ ಕರುಣಿ ಆಡಲು ತೊಡಗಿದ ಈ ವಿಧ ಮುಂದೆ 10 ಆದುದು ಆಯಿತು ಚೋಳನೆ ಕೇಳು ಭುಂಜಿಸು ಕರ್ಮ ಪದ್ಮಾವತಿ ಯೆಂಬಾಕೆಯ ಮುಂದೆ ಮೋದದಿ ಮುದುವೆಯ ನಾಗುವೆ ಆಗ ಭೂಧವ ಮಾವನು ನೀಡುತ ಮಕುಟ ಕವಿ ವಾರ ನಾಧರಿಸುವಾಗಿಲ್ಲದೆ ಬಾಧೆ ಪೊಂದುವಿ ಕಲಿಕೊನೆ ಪೂರ್ವಾವಸ್ಥೆ 11 ಪೇಳತ ಲೀಪರಿ ಚೋಳಗೆ ದೇವ ಲೀಲೆಯ ತೊರಲು ಘಾಯವ ಪಿಡಿದು ಕೇಳಲು ಔಷಧ ಗುರುವನು ಸ್ಮರಿಸಿ ಆಲಸ್ಯಗೈಯದೆ ಬಂದವ ನುಡಿಯೆ ಮೂಲಿಕೆ ಹುಡುಕುತ ಗಿರಿಯಲಿ ಅಲೆಯೆ ಶೈಲದ ಸ್ವಾಮಿ ವರಾಹನು ಸಿಗುತ ಕೇಳಲು ವೆಂಕಟ ಕಥೆ ವಿಸ್ತಾರ ಪೇಳಲು ತಬ್ಬಿದ ಕ್ರೋಡನ ಚತುರ 12 ಏನಿದು ಬಹು ವಿಪರೀತವು ಪೇಳಿ ಸತಿ ಬಿಟ್ಟಲೆಯುವುದೆಂತು ಪೂರ್ಣಾನಂದಗೆ ಗೊಲ್ಲನ ಪೆಟ್ಟೆ ಚಿನ್ಮಯ ನೆತ್ತರು ಚಿಮ್ಮುವದುಂಟೆ ಕ್ಷುಧೆ ತೃಷೆ ದೂರಗೆ ಹಾಲು ಅನ್ಯರು ವೈದ್ಯರೆ ಧನ್ವಂತ್ರೀಗೆ ಕಾಣನೆ ಔಷಧಿ ಪೂರ್ಣಪ್ರಜ್ಞ ತಾನಿರೆ ವೆಂಕಟ ತಿಳಿಯನೆ ಕ್ರೋಡ 13 ಲೀಲೆ ಇದೆಲ್ಲವು ಕೊಡುವದವಗೆ ಬೀಳಿಸಿ ಮೋಹದಿ ಕುಜನರ ತರಿವ ಪಾಲಿಪ ಸುಜನರ ಬೀರುತ ಜ್ಞಾನ ಲೀಲಾಮಯನವ ಸರಿಯೆಂತೆನ್ನಿ ಕೇಳಲು ಕ್ರೋಡನ ವಾಸಿಸೆ ಜಾಗ ಕೇಳುವರಾರೈ ನೀನಿರೆ ಯನ್ನ ಬೀಳುವರೆಲ್ಲರು ನಿನ್ನಡಿಭರದಿ ಧಾಳಿಯೆ ನನ್ನಯ ಪ್ರಭುತನವೆಂದ 14 ಮುಂದೆಯೆ ನೀನಿರು ನಾಹಿಂದಿರುವೆ ಬಂದವರೆಲ್ಲರು ನಿನಗೊಂದಿಸುತ ವಂದಿಸಲೆನ್ನದು ವಲಿಯುವೆನಾಗ ಮುಂದಿಹ ನಿನಗೇ ಮೊದಲಲಿ ಪೂಜೆ ಛಂದದಿ ಶಾಸನ ಹೀಗೇ ಬರದು ಮಂದಿರ ಕೆಡೆ ಕೊಡು ಎನ್ನಲು ನಗುತ ನಂದದಿ ನೀಡುತ ಹಾಗೆಯೆ ಎಲ್ಲ ಕಂದನ ಸೇವಿಸೆ ಬಕುಳೆಯ ಕೊಟ್ಟ 15 ತಗ್ಗಿರೆ ಸಾಧನ ವೆಗ್ಗಳಗೈವ ವೆಗ್ಗಳ ಸಾಧನೆ ತಗ್ಗಿಪ ದೈವ ಹಗ್ಗವು ಸರಿಇವ ನಿಚ್ಚೆಯು ಕೇಳಿ ಅಗ್ಗದ ಪ್ರಭುವರ ಇವತಾನಲ್ಲ ತಗ್ಗಿಸಿ ವಿಷಯ ಬಗ್ಗಿಸಿ ಮನವನು ಹಿಗ್ಗುತ ಭಜಿಸಲು ಚರಣ ಸರೋಜವ ತಗ್ಗದ ಸೌಖ್ಯವ ನೀಡುತ ಕಾವ ಮುಗ್ಗದೆ ಭವದಲಿ ಭಜಿಸಿರಿ ಬೇಗ 16 ಬಕುಳೆ ಯಶೋದೆಯು ಪೂರ್ವದಿ ಕೇಳಿ ರುಕ್ಮಿಣಿ ಮುದುವೆಯ ನೋಡದಲಾಕೆ ಉಕ್ಕಿದ ಮೋಹದಿ ಬಯಸಲು ನೋಡೆ ಭಕ್ತಳ ಬಯಕೆಯ ಸಿದ್ಧಿಸೆ ದೇವ ಬಕುಳೆಯ ಜನ್ಮದಿ ನಿಂದಿಹಳೆಂದು ಅಕ್ಕರೆಯಿಂದಲಿ ತಾ ಕರತಂದು ಚೊಕ್ಕಸುಕಂದನ ತೆರದಲಿ ನಿಂದ ಭಕ್ತಿಲಿ ಸೇವೆಯ ಗೈದಳು ಬಕುಳೆ 17 ನಾರಾಯಣ ಪುರ ನಾಮದ ನಗರಕೆ ದೊರೆಯೆನಿಸಿದ್ದನು ಆಕಾಶರಾಯ ಕೊರಗುತ ಬಹುದಿನ ಸುತರಿಲ್ಲೆಂದು ಧರಣಿಯ ಶೋಧಿಸೆ ಯಾಗಕ್ಕೆಂದು ದೊರಕಲು ಕಮಲವು ದೊಡ್ಡದು ಒಂದು ತೆರೆಯುತ ನೋಡಲು ಶಿಶು ತಾನೊಂದು ಬೀರುತ ಕಾಂತಿಯ ಕಾಣಿಸಲಂದು ದೊರಕಿತು ಕನ್ಯಾಮಣಿಯೆಂತೆಂದು 18 ಅರಮನೆ ಗಾ ಶಿಶು ಹರುಷದಿ ತಂದು ಸರಸಿಜಮುಖಿ ಪದ್ಮಾವತಿಯೆಂದು ಕರೆಯುತ ರಾಣಿಯು ಸಾಕುತ ಬಂದು ವರುಷಗಳುರುಳಲು ಕಾಲದಿ ಕನ್ಯೆ ಸಿರಿತೆರ ಲಕ್ಷಣ ಗಣದಿಂ ಬೆಳೆಯೆ ವರಿಸಲು ಈಕೆಯ ನರರಿಂದಾಗದು ಹರಿಯೇ ಸರಿವರವೆನ್ನುತ ಮನದಿ ಅರಸುತ ವರನಂ ಬಳಲಿದ ಧೊರೆಯು 19 ವೇದವತೀ ಈಕೆಯು ತ್ರೇತೆಯಲೆನ್ನಿ ಮಾಧವ ಮನತೆರ ತೆರಳುವ ಸೀತೆ ಮೋದದಿ ಸೇರಲ್ ಗಿರಿ ಕೈಲಾಸ ಖÉೀದಗಳುಣ್ಣುತ ಲಂಕೆಯಲಿದ್ದು ಸಾಧಿಸಿ ಖಳರವಿನಾಶವನಲ್ಲಿ ಮೇದಿನಿ ಸುತೆಯಳ ಸೇವಿಸಿ ಬಹಳ ಮೋದದಲಾಗಲಿಯಂದಳು ಸೀತೆ 20 ಶಕ್ರನು ಶಿಖಿಸಹ ಇದ್ದಹಾಗೆ ಲೋಕಕೆ ತೋರಲು ಸೀತೆಯ ರಾಮ ಚೊಕ್ಕ ಪರೀಕ್ಷೆಯ ನಡಿಸಲು ಶಿಖಿಯಲಿ ತಕ್ಕಣ ಬಂದರು ಸೀತೆಯರಿಬ್ಬರು ಅಕ್ಕರೆಯಿಂದಲಿ ನುಡಿಯುತ ಕಥೆಯು ಸಕ್ಕದಿ ನಿಂತಿಹ ಈಕೆಯ ನೀನು ಈಕ್ಷಿಸಿ ಪಿಡಿಕೈಯೆನ್ನಲು ಸೀತೆ ರಕ್ಕಸ ವೈರಿಯು ಮಡದಿಗೆ ನುಡಿದ 21 ಒಂದೇ ಬಾಣವು ಒಂದೇ ವಚನವು ಒಂದೇ ನಡತೆಯು ಒಬ್ಬಳುಮಡದಿ ಇಂದೆನಗೆಂಬುದು ತಿಳಿಯದೆ ನಿನಗೆ ಛಂದದಿ ಕಲಿಯಲಿ ನಡಿಸುವೆ ಬಯಕೆ ಇಂದ್ರನು ಅಗ್ನಿಯ ಪುಟ್ಟಲಿ ವಡಲಲಿ ಇಂದಿನ ಯುಗದಲಿಯನ್ನಲು ರಾಮ ವಂದಿಸಿ ನಡೆದರು ಎಲ್ಲರು ಆಗ ಹಿಂದಿನ ವರತೆರ ಬಂದಿಹಳೀಗ 22 ಭೂಸುರ ಪೊಟ್ಟಿಲಿ ಪುಟ್ಟುತ ಹಿಂದೆ ಶ್ರೀಶನ ಮಡದಿಯ ತಪದಿಂ ಮೆಚ್ಚಿಸಿ ಭಾಷೆಯ ಪಡದಿರೆ ಸವತಿಯ ಪಟ್ಟಕೆ ಘಾಸಿಯ ನೀಡುತ ರಾವಣ ಬಂದು ಆಶಿಸಿ ಸಂಗವ ದುಡುಕುತ ನುಡಿಯೆ ರೋಷದಿ ಶಾಪವ ನೀಡಿದಳೀಕೆ ನಾಶಕೆ ಕಾರಣಳಾಗುವೆ ನಾನೆ ಭ್ರಷ್ಟನೆಯೆನ್ನುತ ಶಿಖಿ ಸೇರಿದಳು 23 ಲಕ್ಷ್ಮೀ ವಿಭೂತಿಯೆ ಇವಳೆಂತೆನ್ನಿ ಲಕ್ಷಣ ನಿಭಿಡಿತಳಾಗಿಹ ಕನ್ಯೆ ಕುಕ್ಷಿಯು ತೆಳ್ಳಗೆ ಸಿಂಹಸುಮಧ್ಯಮೆ ಪಂಕಜ ನೇತ್ರೆಯು ಪಂಕಜವದನೆಯು ಪಂಕಜ ಗಂಧಿ ಭುಜಂಗ ಸುವೇಣಿ ಶಂಕರ ನಗೆನುಡಿ ಗುರುಲಾವಣ್ಯ ಶಂಖ ಸುಪದ್ಮಾರೇಖೆಗಳಿಂದ ಲಂಕೃತ ಅಂಗೈ ಪಾದಗಳ್ಹಾಗೆ 24 ಕಾಮನ ಬಿಲ್ಲನು ಹಳಿಯುವ ಹುಬ್ಬು ಸೋಮನ ಮೀರಿಪ ಯುಗಯುಗ ಕಾಂತಿ ಸಾಮಜಗಮನೆ ರಂಭೋರುಗಳು ಕೋಮಲ ಚಂಪಕ ನಾಶಿಕ ತುಟಿಗಳು ಕಾಮದ ಪೀವರ ಕುಚಯುಗಹಾಗೆ ಸು ನೇಮದಿ ಬೆಳದಿಹ ಪಲ್ಗಳ ರಾಜಿ ವಾಮನಿತಂಬಜಘನದ್ವಯವ ಭಾಮೆ ಸಫಾಲದಿ ಮೆರೆದಳು ತಾನು 25 ಈಕೆಯು ಕಮಲೆಯ ತೆರೆದಿಂ ಬೆಳೆದು ಸಾಕಲು ಕರೆದಳು ಕನಕಸುವೃಷ್ಟಿ ಕಾಕನು ಕಾಣದೆ ರಾಜನು ಮೆರೆದ ನಾಕವೆ ಎನಿಸಿತು ರಾಜನಮನೆಯು ಜೋಕೆಯಲೊಂದಿನ ಸಖಿಯರ ಕೂಡಿ ಈಕ್ಷಿಸೆ ಪುರವುದ್ಯಾನವ ಕುವರಿ ಸೌಖ್ಯದಿ ತೆರಳುತೆಯಿರುತಿರುವಲ್ಲಿ ನಾಕದ ನಾರದ ವದಗಿದನಲ್ಲಿ 26 ಹರಿಕಾರ್ಯಾಂಗನು ಬಂದನು ಎನ್ನುತ ಗುರು ಸತ್ಕಾರಂಗಳಗೈದು-ಆ ತುರ ತೋರಲು ತಿಳಿಯೆ ಭವಿಷ್ಯ ಕರಗಳ ನೋಡುತ ತೂಗುತ ತಲೆಯು ಸಿರಿತೆರ ಲಕ್ಷಣ ಕಾಣುವೆನಮ್ಮ ಹರಿಯೇ ಸರಿ ವರಿಸಲ್ ನಿನ್ನ ಅರಸುತ ಬರುವನು ತಾನೆ ನಿನ್ನ ಬರಿ ಮಾತಲ್ಲವು ನೋಡೆಂತೆಂದ 27 ಪರಿ ಹೊರಡಲ್ ಮುನಿಯು ಲಾಲಿಸಿ ª
--------------
ಕೃಷ್ಣವಿಠಲದಾಸರು
ಸರ್ಪಶಯನನೆಂಬೊ ದಿವ್ಯಕಲ್ಪತರು ಸೇರಿದ ದರ್ಪವೆಷ್ಷನಿಮ್ಮಿಬ್ಬರ ಧಿಮಾಕುಭಾಳೆ ನಾರಿ ಪ. ನಿರತ ದಾಸಿ ನಾನೆಂಬೋದು ಸರಸಿಜಾಕ್ಷತಾನೆ ಬಲ್ಲಅರಸು ಅರಸನ ಹುಡುಕುತಅರಸು ಅರಸರನ ಹುಡುಕುತಲೆ ಹೋಗುವದುಸರಸ ತೋರುವುದೆ ಐವರಿಗೆ ಕೇಳನಾರಿ1 ಒಬ್ಬ ರುಕ್ಮಿಣಿ ನಿನ್ನ ಮುಂದೆ ಗುಬ್ಬಿಕಾಗೆ ಹಿಂಡುಕಬ್ಬೆಕ್ಕು ಕೋಳಿ ನೆರೆದಾವಕಬ್ಬೆಕ್ಕು ಕೋಳಿ ನೆರೆದಾವ ಶ್ರೀಕೃಷ್ಣತಬ್ಬಿಬ್ಬುಕೊಂಡು ನಗುತಾನ ಕೇಳ ನಾರಿ 2 ಅತ್ತಿಗೆ ನಿನ್ನ ಮೈಗೆ ಹತ್ಯಾವ ರುದ್ರಾಕ್ಷಿನೆತ್ತಿಯ ಮ್ಯಾ¯ ಜಡದಾವ ನೆತ್ತಿಯ ಮ್ಯಾ¯ ಜಡದಾವ ಅತ್ತಿಗೆ ನಿನ್ನಹತ್ತಿಲಿದ್ದವರು ನಗುತಾರೆ ಕೇಳನಾರಿ3 ಜಾಣೆ ನಿನ್ನಂಥವಳ ಕಾಣೆ ನಾ ಜಗದೊಳುಕೋಣನ ಹೊಡೆವ ಕೌಶಲ್ಯಕೋಣನ ಹೊಡೆವೊÀ ಕೌಶಲ್ಯಕ್ಕೆ ಬೆರಗಾಗಿಸುರನಾರಿಯರು ಬಹಳೆ ನಗುತಾರೆ ಕೇಳ ನಾರಿ4 ನಿತ್ಯ ಪ್ರಕಾಶನ ಉತ್ತಮೋತ್ತಮ ಗುಣವಅತ್ಯಂತ ನೋಡಿ ಸುಖಿಸದೆಅತ್ಯಂತ ನೋಡಿ ಸುಖಿಸದೆ ಎಲೆಭಾವೆಕತ್ತಲೆಗೈದ ಬಗಿಹೇಳ ಕೇಳನಾರಿ5 ಕತ್ತಲೆಂಬುದು ನಿನ್ನ ಸುತ್ತುಮುತ್ತಲಾಗಿರೆಎತ್ತನೋಡಿದರು ಜನರಿಲ್ಲಎತ್ತನೋಡಿದರು ಜನರಿಲ್ಲ ಅವರೊಳು ಚಿತ್ತ ಸ್ವಾಸ್ಥ್ಯದ ಬಗಿ ಹೇಳ ಕೇಳನಾರಿ6 ಹರಿ ಬಲು ಪ್ರೀತಿಯಿಂದ ಉರದೊಳು ಸ್ಥಳಕೊಟ್ಟಇರಬಾರದೇನೆ ವಿನಯದಿಇರಬಾರದೇನೆ ವಿನಯದಿ ಜಗಳಾಡಿಉರಿಯ ಹೊಗುವರೆ ಉನ್ಮತ್ತೆ ಕೇಳನಾರಿ 7 ಮೂಡಲಗಿರಿಪತಿಗೆ ಜೋಡೆಂದು ನೀವಿಬ್ಬರುಮಾಡಿ ಸಹವಾಸ ಎಡಬಲಮಾಡಿ ಸಹವಾಸ ಎಡಬಲ ಹಿಡಿದಿರಿ ನೋಡಿದವರೆಲ್ಲ ನಗುವಂತೆ ಕೇಳನಾರಿ8 ಕರಿ ಮಣಿಯು ಹೋಲುವುದೆಹರಿಯ ಚಲ್ವಿಕೆಗೆ ಹವಣಿಸಿಹರಿಯ ಚಲ್ವಿಕೆಗೆ ಹವಣಿಸಿ ರಾಮೇಶಗೆಸರಿಯಾಗುವೆ ಏನೆ ಬಿಡು ಬಿಡು ಕೇಳ ನಾರಿ 9
--------------
ಗಲಗಲಿಅವ್ವನವರು
ಏನು ಭ್ರಮೆ ಮನುಜ ನಿನಗ್ಯಾಕೆ ಹರಿಭಟರಹಗೆಪರಮಾನಿನಿಯ ಸಂಗ ನರಕದೊಳು ಬಲುಭಂಗಪ.ಮಬ್ಬು ಮುಸುಕಿದ ಪರಿಯ ನಿಜಸತಿಯ ನೋಡದೆ ಮತ್ತೊಬ್ಬಳ ಕುಚಕೆ ಕಮಲವ ಹೋಲಿಸಿಕೊಬ್ಬು ಮೈಯವಳ ಸಖವಿಡಿದರದು ಮಹಾಶೋಕತಬ್ಬಿಬ್ಬುಗೊಳುತ ನಿರಯಂಗಳುಂಬೆ 1ಇಂದುಮುಖಿಯಳ ಸಂಗ ಎನಗಿಂದು ಕೈಗೂಡಲೆಂದೊಬ್ಬ ಕುಂಟಣಿಗೆ ಧನವಿತ್ತೆ ನಿನ್ನಸಂದುಗಳ ಕಡಿದು ವೈತರಣಿ ಸಲಿಲದಿ ದೇಹಹೊಂದಿಸುವರುಂಟು ಕಾಲನ ಕುಂಟಣಿಗರು 2ಚಿಕ್ಕಬಲೆಯರ ಕಂಡು ಚಂಚಲಿತನಾಗ್ಯವರವಕ್ರನೋಟದಿ ಹಲವು ಸನ್ನೆಯಿಂದತರ್ಕೈಸಬೇಕೆಂಬ ಲಂಪಟದಿ ತಪ್ತಾದಶರ್ಕರಾಯಸ ಸ್ತಂಭವಪ್ಪಿ ಪೊರಳೇಳುವೆ 3ಹರಿದಾಸರಾಚಾರ ಕೇಳಲಸಿ ಪಳಿದೊರೆದುಒರಟು ಮಾತಿನ ಸರಕಲಾಯುಗಳಿದೆವಿರತಿಜ್ಞಾನಾನ್ವಿತರ ವೆರಸದಂಧಕನಾದೆತರಣಿಯೊಳು ಹೊಂಬುಳವು ಗರುವಿಸಿದ ತೆರದಿ 4ಜಂಬುಕವು ಹರಿಯೊಡನೆ ಸರಸವಾಡಿದ ಪರಿಯೊಳಂಬುಜಾಕ್ಷನ ದಾಸನಿಂದೆ ಮಾಡಸಲ್ಲಕುಂಭಿಪಾಕಿನಿಯಲ್ಲಿ ಮರಳಿಸುವ ಭಯವರಿತುನಂಬು ಪ್ರಸನ್ವೆಂಕಟೇಶನಂಘ್ರಿಯ 5
--------------
ಪ್ರಸನ್ನವೆಂಕಟದಾಸರು