ಒಟ್ಟು 17 ಕಡೆಗಳಲ್ಲಿ , 11 ದಾಸರು , 16 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇವನ ಕಂಡಿರ್ಯಾ ಕಾವಕರುಣನ ಭಾವ ಭಾವಿಸುವ ಪರಿಯಾಗುವ ದೇವನ ಧ್ರುವ ಸಗುಣಲೀಹ್ಯನಾ ಭಕುತಿಗೊಲಿವನಾ ಸುಗಮದಿಂದ ನಿಗಮನುಳುಹಿ ನಗವ ನೆಗೆದನಾ 1 ಸಿರಿಯ ಲೋಲನಾ ವರಕೃಪಾಲನಾ ಧರಿಯನುಳುಹಿ ತರಳಗೊಲಿದು ಪ್ರಿಯವಾದನಾ2 ವರವ ಬಲಿಗೆ ಇತ್ತು ದೋರಿದ ಭಾರ್ಗವರೂಪನಾ 3 ಪರಮ ಆತ್ಮನಾ ಹರಿಸರ್ವೋತ್ತಮನಾ ಸುರರ ನೆರೆಯ ಬಿಡಿಸಿ ಹೊರಟ ಪಾಂಡವಪ್ರಿಯನಾ 4 ಹೊಳೆವ ತೇಜನಾ ಮೂಲೋಕ ಪಾವನಾ ಹಳಿದು ವ್ರತವ ನೋಡಿ ಹಯವನೇರಿ ಸುಳಿದನಾ 5 ಘನ ಮಹಿಮನಾ ದಯಾ ನಿಸ್ಸೀಮನಾ ದೀನ ಮಹಿಪತಿಸ್ವಾಮಿ ಭಾನುಕೋಟೆ ದೀಪ್ತನಾ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎನ್ನ ಪಾಲಿಸುವದಾಗದೇ|ಸಿರಿ ರಮಣಾ| ಪ್ರಸನ್ನ ವಿಮಲ ಅತುಳ ಶೇಷಗಿರಿಯ ವಾಸಾ ವೆಂಕಟೇಶಾ ಪ ದುರುಳ ದೈತ್ಯನ ಕರುಳ ಬೆರಳ ಸರಳ ಉಗುರಿನಿಂದ ವಿರಳ| ವಿರಳ ಮಾಡಿ ಪೊಸರಂತೆ ಕೊರಳಿಗಾಕಿ ಮರಳೆ| ತರಳಗೊಲಿದು ಹರಣಗಾಯ್ದೆ|ಆದೇಶದಲ್ಲಿ| ಅರಸುತನುವ ಕೊಟ್ಟು ನಿಲಿಸಿದೇ|ಕ್ಷಿತಿಯೊಳಗ| ಪರಮ ನಿಜ ಭಕ್ತನೆನೆಸಿದೇ 1 ನೆಗಳಿ ಬಂಧನ ಬಿಡೆ ಹರಿಗಳರಿಗಳ ಸಂಗಡಿಭಗಳ ಸಮೂ| ಪತಿ ನೀರ್ಗುಡಿಯೆ ಪೋಗಲಾಗಳೆ| ನೆಗಳಿ ಪಿಡಿಯೆ ಶ್ರೀ ಪಾದಗಳ ಯುಗಳ ನೆನಿಯ ಕೇಳದೇ| ಸಕಲ ಪಕ್ಷಿಗಳ ಶ್ರೇಷ್ಠ ನಿಲ್ಲದೊದಸಿದೇ|ಕರುಣದಿಂದ ಸುಗತಿ ಕೊಟ್ಟು ಜನಮ ಹರಿಸಿದೇ2 ಇಳೆಯ ಮದದಿ ದ್ರೌಪತಿಯನು| ತಿಳಿಯದೆಳಿಯೆ ಕಳಿಯೆ ಸೀರೆಯಾ| ಕಳಿಯೆ ಮಾನ ವಿಜಯಗೆಳೆಯ ಇಳೆಯ ಭಾರರ್ಬಳಿಯೆ| ಸುಳಿಯೆ ದಾಟಿಸೆನುತ ನುತಿಸೆ ತ್ವರಿತದೀ|ನೀನು ಸಭೆ| ಯೊಳಗ ಪೊರಯಿಸಿದೇ ವಸ್ತ್ರದೀ|ಮಹಿಪತಿ| ನಂದನೊಡೆಯ ವ್ಯಾಳ್ಯಕ್ಕೊದಗಿದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲ್ಯಾಡಿ ನೀ ಬಂದ್ಯೋ ಹರಿ ಫುಲ್ಲಲೋಚನ ಕೃಷ್ಣ ಧ್ರುವ ಬಲಿ ಮಹಿಮರನೆಲ್ಲ ಸಂರಕ್ಷಿಸಿ ಮಲ್ಲದೈತ್ಯರ ಹಲ್ಲು ಮುರಿದು ನೀ ಬಂದ್ಯೊ 1 ಸುಗಮ ಸುಪಥದೋರಿ ನಿನ್ನ ಉಗಮ ಸಾರಿ ನೀ ಬಂದ್ಯೊ ನಗ ನೆಗಹಿ ನಿಂದು ಜಗದೋದ್ಧಾರವ ಮಾಡಿ ನೀ ಬಂದ್ಯೋ 2 ಶರಣ ರಕ್ಷಕನಾಗಿ ನಿನ್ನ ಕರುಣ ನೀ ಬೀರಿ ಬಂದ್ಯೋ ತರಳಗೊಲಿದು ಧÀರಿ ಮೂರಡಿಯೆನೆ ಮಾಡಿ ಪರಶುಧರನಾಗಿ ಆಡಿ ನೀ ಬಂದ್ಯೊ 3 ಮೊರೆಯ ಹೊಕ್ಕವರಿಗೆ ಪದ ಸ್ಥಿತವನಿತ್ತುನೀ ಬಂದ್ಯೊ ಸುರರ ಸ್ಥಾಪನೆ ಮಾಡಿ ತುರುಗಳ ಕಾಯಿದು ಪರ ನಾರೇರ ವ್ರತವಳಿದು ನೀ ಬಂದ್ಯೋ 4 ನೀನೆ ರಾವುತನಾಗಿ ನಿನ್ನ ಖೂನ ನೀ ದೋರಿ ಬಂದ್ಯೊ ದೀನ ಮಹಿಪತಿ ಸ್ವಾಮಿ ಭಾನುಕೋಟಿ ತೇಜ ನೀನೆ ನೀನಾಗೆನ್ನ ಹೊರಿಯಲು ಬಂದ್ಯೊ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಿಸೆನ್ನೊಳು ದೀನಬಂಧು ಪ. ಕರುಣಿಸೆನ್ನೊಳಿರುವ ಸಕಲದುರಿತಜಾತ ರೋಗಗಳನು ಪರಿಹರಿಸಿ ಪಾದಾರವಿಂದ ಸಿರದೊಳಿರಿಸಿ ಸಲಹು ಬೇಗ ಅ.ಪ. ಮೂರು ವಿಧದಲಿ ಸುತ್ತಿಕೊಂಡ ಘೋರ ತಾಪದಿ ಸೂರೆಗೊಳುವ ಗಹನ ಸಂಸಾರ ಕೂಪದಲ್ಲಿ ಬಿದ್ದು ಚೀರುತಿಹೆನು ಚಿತ್ತದಲ್ಲಿ ತಾರೊ ತರಳಗೊಲಿದ ದೇವ 1 ಆದಿ ಭೌತಿಕಾದೇಹಜನಿತಾಗಾಧ ಮೋಹ ತಾ ಬಾಧೆ ಸಹಿಸಲಾರೆ ಮುನಿಸಮಾಧಿಗಮ್ಯ ನಿನ್ನ ಮರವ ವೇಧೆ ವದಗಿ ಬರುವ ಮೊದಲೆ ಮಾಧವನೆ ಮದೀಯನೆಂದು 2 ಮಂದನಾದೆನು ಮಮತೆಯಿಂದ ಕುಂದಿಹೋದೆನು ಮುಂದುಗಾಣವಂದ ಕಾಣದಿಂದು ನಿನ್ನ ಬೇಡಿಕೊಂಬೆ ಇಂದಿರೇಶ ವೆಂಕಟೇಶ ಎಂದು ನಿನ್ನ ಪದವ ಕಾಂಬೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ದಯವ ಮಾಡೋ ಎನ್ನ ಭಯವ ಬಿಡಿಸೋ ಪ ರಥಾಂಗ ಮಾವಿನಕೆರೆರಂಗಾ ಅ.ಪ ಅನುದಿನ ಭಜಿಪರೋ ತನು ಮನ ಧನಗಳ ನಿನಗೊಪ್ಪಿಸಲು ಘನ ತಪೋಶಕ್ತಿಯಿಂದ ಮನವೊಲಿಸುವರು ನಿನ್ನಾ ಅನಿತನರಿಯದೆನ್ನೊಳು ಸನುಮತದಿಂದಲಿಯೆನ್ನೊಳು 1 ಕಾಮ ಕ್ರೋಧಂಗಳಿಂ ಭ್ರಾಮಕನಾದೆನ್ನ ನೇಮವೊಂದಿಲ್ಲ ನಿನ್ನ ನಾಮಂಗಳುಲಿಯೆ ನಾ ಭೂಮಿಯೊಳನೇಕ ಜನ್ಮನಾಮದಿಂದೆ ಜನಿಸಿ ಪಾಪ ಕರ್ಮವ ತಳೆದೆಂ ರಾಮದಾಸಾರ್ಚಿತನೆ ಯೆನ್ನೊಳು 2 ಕರಿಯ ಪೊರೆದೆ ಹರೀ ತರಳಗೊಲಿದೇ ಶೌರಿ ದುರುಳನ ಪೊರೆದೆ ಉದಾರಿ ಸರಸಿಜಾಕ್ಷ ಮುರಾರಿ ಸುರಪತೆ ರಕ್ಕಸಾರಿ ಕರುಣಿಸೋ ಸೂತ್ರಧಾರಿ ಕರವಪಿಡಿದು ಯೆನ್ನೊಳು 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಮ್ಮ ಕುಲದೈವೀತ ಬೊಮ್ಮನ ಪಡೆದಾತ ಸಾಮಗಾಯನ ಪ್ರೀತ ಸ್ವಾಮಿನೀತ ಧ್ರುವ ವೇದ ಉದ್ಧರನೀತ ಮೇದಿನಿಯ ಪೊತ್ತಾತ ಸಾಧುಜನ ವಂದಿತ ಸದ್ವಸ್ತುನೀತ 1 ಧಾರುಣಿಯ ಗೆದ್ದಾತ ತರಳಗೊಲಿದಹನೀತ ದಾತ ಕರುಣಿ ಈತ 2 ಮೂರು ಪಾದಳಿದಾತ ಪರಶುಧರನಹುದೀತ ಸುರಜನರ ಪೂಜಿತ ಸರ್ವೋತ್ಮನೀತ 3 ಪವನಸುತಗೊಲಿದಾತ ಮಾವನ ಮಡುಹಿದಾತ ಭುವನತ್ರಯಲೀತ ದೇವನೀತ 4 ಬೆತ್ತಲೆಯು ಸುಳಿದಾತ ಉತ್ತಮ ಹಯವನೇರಿದಾತ ಭಕ್ತರಿಗೆ ಹೊರೆವಾತ ಶಕ್ತನೀತ 5 ಅಣುರೇಣುದೊಳೀತ ಅನುಕೂಲವಾದಾತ ಆನಂದೋ ಬ್ರಹ್ಮ ಅನಂತನೀತ 6 ಮಹಾಮಹಿಮನಹುದೀತ ಬಾಹ್ಯಾಂತ್ರಪೂರಿತ ಮಹಿಪತಿಯ ಸಾಕ್ಷಾತ ವಸ್ತುನೀತ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾಗವೇಣಿಯೆ ಕರೆದು ತಾರೆ ನಾಗಶಯನನಾ ಪ ನಗಧರ ಪ್ರಿಯನೆನಿಪ ನಾಗವರದನಾ ಅ.ಪ ಜಲವಪೊಕ್ಕು ತಮ ನಲಿದ ಜಲರುಹಾಕ್ಷನಾ ಜಲಧಿ ಮಥನವನ್ನು ಗೈದ ಚೆಲುವರರಸನಾ 1 ಧರಣಿಪೊಯ್ದ ಖಳನ ಸೀಳ್ದ ನಳಿನನಾಭನಾ ಭರದಿ ಹೊಳೆವ ಕಂಬದಲ್ಲಿ ತರಳಗೊಲಿದನಾ 2 ಧರಣಿ ಈರಡಿಯ ಮಾಡಿ ಸುರರ ಪೊರೆದನಾ ಧರಣಿಪಾಲಕುಲವ ತರಿದ ಪರಶುರಾಮನಾ 3 ಧರಣಿಸುತೆಯನೊಯ್ದ ಖಳನ ಶಿರವನರಿದನಾ ತರಳತನದಿ ವೊರಳನೆಳೆದ ತರಳ ಕೃಷ್ಣನಾ 4 ತರುಣಿಯರ ವ್ರತವನಳಿದು ಪುರವಗೆಲಿದನಾ ಹರುಷದಿಂದ ತುರಗವೇರಿ ನಲಿವ ಸುಗುಣನಾ 5 ಸುರಪುರದಿ ನಲಿವಿನಿಂದ ನೆರೆದು ನಿಂದನಾ ಶರಣರಕ್ಷ ಲಕ್ಷ್ಮಿಯರಸ ಪರಮಪುರುಷನಾ 6
--------------
ಕವಿ ಲಕ್ಷ್ಮೀಶ
ನಾರಸಿಂಹ ನಮಿಪೆ ನಿಮ್ಮ ನತಜನಾಶ್ರಯ ಪ ಘೋರ ದುರಿತದೂರ ಭಕ್ತಕುಮುದಕುಡುರಾಯ ಅ.ಪ ವಿವಿಧಗತಿಯಲಸುರ ಸುತನ ವೇಧೆಪಡಿಸಲು ತವ ಪದಾಂಬುರುಹವ ನೆನೆಯೆ ಒಂದೆ ಕ್ಷಣದೊಳು 1 ಕೋಟಿ ಸಿಡಿಲು ಬಡಿದ ತೆರದಿ ಕೂಗು ಪುಟ್ಟಲು ಚಾಟ ಸ್ತಂಭದೊಳುದಿಸೆ ದನುಜಕೂಟ ಬೆದರಲು 2 ತರಳಗೊಲಿದೆ ಗುರುರಾಮ ವಿಠಲ ನಂಬಿದೆ 3
--------------
ಗುರುರಾಮವಿಠಲ
ನಿಗಮ ತಂದುಸುವುಸಿ ಜಗದೊಳಗೆ ಧ್ರುವ ನಗ ಬೆನ್ನೆಲಿ ತಾಳಿದ ನೀನಾರೋ ಜಗವ ಕದ್ದೊಯಿದಸುರನ ನೀ ಕೊಂಡು ಬಗೆದು ತರಳಗೊಲಿದವ ನೀನಾರೊ 1 ಧರಣಿ ನೀ ಮೂರಡಿಯನೆ ಮಾಡಿ ಹಿರಿಯಳ ಶಿರ ಹರಿಗಡಿದವನಾರೊ ಪರ ದೇವತೆಗಳ ಸೆರೆಯ ಬಿಡಿಸಿ ತುರುಗಳಗಾಯ್ದ ಗೋವಳ ನೀನಾರೊ 2 ನಾರಿಯರ ವ್ರತಗಳನೆ ಹಳಿದು ಏರಿ ಹಯವನು ಸುಳಿವವನಾರೊ ತರಳ ಮಹಿಪತಿ ಮನೋಹರವ ಮಾಡಿ ಗುರುತುತೋರಿದ ಗುರು ಮಹಿಮ ನೀ ಬಾರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿನ್ನ ಕಾಣಬಂದೆನಯ್ಯ ಚೆನ್ನಕೇಶವಾ ನಿನ್ನ ಕಂಡು ನಲಿದೆ ರಮಾರನ್ನ ಮಾಧವಾ ಪ ಜಳದಿ ಮುಳುಗಿ ತೊಳಲಿ ಬಳಲಿ ಬಹಳನೊಂದೆನು ತಳವ ಬಯಸಿ ಬಳಸಿ ಬಳಸಿ ನಡುವೆ ನಿಂದೆನೊ ಬಳಿಯ ಬಳಗವಿಲ್ಲ ನೋವಿನಿಂದ ಬೆಂದೆನೋ ಸುಳಿಗೆ ಸಿಲುಕಿ ಅಳುಕಿ ಬಳುಕಿ ವಿಧಿಯ ಬೈದೆನೋ 1 ಕರವ ಮುಗಿದು ಕರೆವೆ ನಿನ್ನ ಕರುಣದಿ ಬಾರೋ ಮರುಗಿ ಮರುಗಿ ಕೊರಗಿದೆನಗೆ ಚರಣವ ತೋರೋ ಕರಿಯ ಪೊರೆದೆ ತರಳಗೊಲಿದೆ ಮರುಕವ ಬೀರೋ ಶಿರವ ಚರಣಕಿರಿಸುವೆ ಮಾಂಗಿರಿಯರಂಗ ಬಾರೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪರಮ ಪುರುಷ ಹರಿ ಗೋವಿಂದ - ಸಿರಿವರ ನಾರಾಯಣ ಗೋವಿಂದ ಪ ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ 1 ಮಂದರ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ 2 ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ 3 ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ4 ವಾಮನನಾಗಿ ನಿಸ್ಸೀಮ ಬಲಿಯ ಕೈಯಭೂಮಿಯನಳೆಕೊಂಡೆ ಗೋವಿಂದತಾಮರಸ ಪದದಿ ಕನಕ ಗರ್ಭಯೋಗವ್ಯೋಮ ಗಂಗೆಯ ತಂದೆ ಗೋವಿಂದ 5 ಸುರ ಪಶುವಿಗೆ ಋಷಿಯನು ಕೊಂದನ ಬಹುಕರ ಬಲ ಮುರಿದೆಯೊ ಗೋವಿಂದತರ ಹರಿಸದೆ ವಸುಧೆಯ ಒಡೆತನ ಭೂಸುರರಿಗೆ ನೀಡಿದೆ ಗೋವಿಂದ 6 ತ್ರಿಣಯನ ತಾತ್ಪರ್ಯ ರಾವಣನ ಶಿರರಣದೊಳುರುಳಿಸಿದೆ ಗೋವಿಂದಕ್ಷಣಮೆಣಿಸದೆ ಸದ್ಗುಣವಂತ ವಿಭೀ-ಷಣಗಭಯವಿತ್ತೆ ಗೋವಿಂದ 7 ಕ್ರತು ಸಿರಿ ಭೂಭಾರೋತ್ತಾರಣ ಬಲಯುತ ಗೋವಿಂದ 8 ಕಥೆಯನು ನಿರ್ಮಿಸಿ ಪತಿವ್ರತೆಯರ ಘನವ್ರತಗಳ ಕೆಡಿಸಿದೆ ಗೋವಿಂದಜತೆಯಗಲದ ಪುರ ತ್ರಿತಯ ಗೆಲಿದು ದೇ-ವತೆಗಳ ಸಲಹಿದೆ ಗೋವಿಂದ 9 ಜಾಜಿಯ ಮರಕತ ತೇಜಿಯನೇರಿ ವಿ-ರಾಜಿಪ ರಾವುತ ಗೋವಿಂದಸೂಜಿಯ ಬೆನ್ನೊಳು ರಾಜಿಪ ತೆರದಿ ಸ-ಹಜರೊಳಡಗಿರ್ಪ ಗೋವಿಂದ 10 ಮೇದಿನಿಗೋಸುಗ ಕಾದಿ ಕಲಹದಿ ವಿ-ರೋಧಿಗಳ ಕೊಂದೆ ಗೋವಿಂದಸಾಧುಗಳಿಗೆ ಸುಖವೀಯುವ ಬಾಡದಶ್ರೀಧರ ಕೇಶವ ಗೋವಿಂದ 11
--------------
ಕನಕದಾಸ
ಬರಡು ಕಣ್ಗಳಿದ್ದರೇನು ಮನದ ಕಣ್ಣ ತೆರೆಯದ ಪ. ತರಳಗೊಲಿದ ವರದರಾಜದೊರೆಯ ನಿಜವನರಿಯದ ಅ.ಪ. ನಾರದಾದಿ ಮೌನಿವರರು ಸಾರಿಬಂದು ಸೇವಿಸಿ ಸಾರಸಾಕ್ಷನ ಮನವನೊಲಿಸಿ ಸಾರಭೂತರೆನಿಸಿದರು ಮನದ ಕಣ್ಣ ತೆರೆಯದಿಂತು 1 ತರಳಗೊಲಿದು ಕಂಬದಿಂದ ಬಂದು ಹಿರಣ್ಯನುರವ ಬಗೆದು ಕರುಳಮಾಲೆ ಧರಿಸಿ ಮೆರೆವ ನರಹರಿಯ ಕಾಣದ 2 ಈ ಕಳಂಕವೆಲ್ಲ ತೊಳೆದು ಶ್ರೀಕಟಾಕ್ಷಕೆ ಪಾತ್ರನಾಗಲು 3 ಶರಧಿಶಯನ ಪರಮಪಾವನೆ ಶರಣರಕ್ಷಕನೀತನ ವರದ ಶೇಷಶೈಲಧಾಮನ ವರದಿ ಪಡೆವೆ ಮನದಕಣ್ಗಳಂ 4
--------------
ನಂಜನಗೂಡು ತಿರುಮಲಾಂಬಾ
ಯಾಕೆ ಬಾರಯ್ಯ ನೀ ಏಕೋ ದೇವನೆ ಎನ್ನ ಏಕಾಕಾರದಲೆನ್ನ ಹೊರಿಯಲಾರೇನಯ್ಯ ಧ್ರುವ ನೀರ ಥೆರಿಯ ಕಡಿದು ಹೃದಯದಕರ ಚರಣದಿ ಭರದಿ ಮುಣಗಿ ನೀರ ನಡಿಗಿ ದಣದೇನಯ್ಯ 1 ವಾರಿಧಿಮಥನದಿ ಮೇರುಪರ್ವತವನ್ನು ಭಾರ ಬೆನ್ನಲಿ ಪೊತ್ತು ಬೆವರಿ ದಣಿದೇನಯ್ಯ2 ಧರಿಯ ಕದ್ದಸುರನ ಕೋರೆದಾಡಿಂದ ಸೀಳಿ ಭರದಿಂದ ಹೊಯಿದಾಡಿ ಹೋರಿ ದಣಿದೇನಯ್ಯ 3 ತರಳಗೊಲಿದು ಪ್ರಕಟಿಸಿ ದೈತ್ಯನ ಸೀಳಿ ಕರಳೊನಮಾಲಿಯ ಧರಿಸಿ ದಣಿದೇನಯ್ಯ 4 ಧರಿಯು ಮೂರಡಿ ಮಾಡಿ ಎರೆದು ದಾನವ ಬೇಡಿ ನರನ ಪಾತಾಳಕೊತ್ತಿ ಬಳೆದು ದಣಿದೇಯನಯ್ಯ 5 ಹಿರಿಯಳ ಶಿರವನು ಹರಿದು ಕತ್ತರಿಸಿನ್ನು ಕರದಲ್ಲಿ ಪರಶುವ ಪಿಡದು ದಣಿದೇನಯ್ಯ 6 ಶಿರಗಳ ಚೆಂಡಾಡಿ ರಾವಣೀಂದ್ರ ಜಿತನ ಶರದಿ ಕುಂಭಕರ್ಣನ ಎಚ್ಚದು ದಣಿದೇನಯ್ಯ 7 ಷತುರುಗಳ ಕಾಯಿದು ಉರುಗನ ತುಳದಿನ್ನು ಗಿರಿಯ ಬೆರಳಲೆತ್ತಿ ತೋರಿ ದಣಿದೇನಯ್ಯ 8 ಬರಿಯ ಬತ್ತಲೆ ಅಗಿ ಅರಿಯದೆ ತ್ರಿಪುರವ ಸೇರಿ ನಾರೇರ ವ್ರತವಳಿದು ದಣಿದೇನಯ್ಯ 9 ಏರಿ ಕುದುರಿಯ ತಿರುಹು ರಾಹುತನಾಗಿ ಪರಿ ರೂಪವ ತಾಳಿ ದಣಿದೇನಯ್ಯ 10 ಸರ್ವಾಪರಧವು ಕ್ಷಮೆಯಿಂದ ಮಹಿಪತಿಯ ಮನದೊಳು ಬಂದು ನಿಂದು ಹೊರೆದು ರಕ್ಷಿಸಯ್ಯ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯಾರವನು ಹೊರಗೆನಿಂತ ಬಾರಾನ್ಯಾಕವನು ಪ ನೀರಮುಳುಗಿ ಬಂದು ಘೋರಪರ್ವತ ತಂದು ಧಾರುಣಿಯನು ಕದ್ದ ದನುಜನ ಕೊಂದು ನರಹರಿ ರೂಪದಿ ತರಳಗೊಲಿದುಪುಟ್ಟ ಚರಣದಿಂ ಧರಣಿಯನಳೆದ ಮಹಾತ್ಮನೋ 1 ಕೊಡಲಿಯ ಪಿಡಿದು ತಾ ಬಿಡದೆ ಕ್ಷತ್ರಿಯರನ್ನು ಮಡುಹಿ ಬಂದವನಿವನೇನೋ ಮಡದಿಗಾಗಿ ದೊಡ್ಡಅಡವಿಯೊಳು ಮನೆಕಟ್ಟಿ ಬಿಡದೆ ಗೋಕುಲದಲ್ಲಿ ನೆಲೆಸಿರುವಾತನೋ 2 ಬೆತ್ತಲೆ ನಿಂತ್ಹತ್ತಿ ಮತ್ತೆಕುದುರೆಯ ಚಿತ್ತಬಂದಂತೆ ತಾ ತಿರುಗುವನೋ ಉತ್ತಮನಾದ ಶ್ರೀ ಪ್ರಾಣನಾಥವಿಠಲನು ಎತ್ತನೋಡಿದರು ಸುತ್ತುತ್ತಲಿರುವನು 3
--------------
ಬಾಗೇಪಲ್ಲಿ ಶೇಷದಾಸರು
ಶ್ರೀ ನರಸಿಂಹದೇವ ಶರಣ ರಕ್ಷಕನೆ ದಾನವಾರಿ ಸುಭಕ್ತಾಧೀನ ಮೂರುತಿಯೆ ಪ. ಹರಿ ತನ್ನ ದೈವವೆಂದು ಸ್ಮರಿಸುತಿರಲು ಬಾಲ ನಿರವ ಕಾಣದೆ ದುಷ್ಟಹಿರಣ್ಯಕಾಸುರನು ಪರಿ ಹಿಂಸಿಸೆ ಮೊರೆದು ಕೋಪದೊಳೆದ್ದು ತರಳಗೊಲಿದೆ ಬಹು ಕರುಣಾನಿಧಿಯೆ 1 ಛಿಟಿ ಛಿಟಿಲೆಂದಾರ್ಭಟಿಸಿ ಕಂಬವು ಸಿಡಿಯೆ ಕಟಿ ಮಸಿದಗ್ನಿ ನಿಟ್ಟುಸಿರಿನಿಂ ಹಲ್ಗಳ ಕಟಿ ಕಡಿವುತುಬ್ಬಸ ತೋರಿ ನಿಂದ ಕಠಿಣ ಮೂರುತಿಯೆ 2 ಕೊಬ್ಬಿದ ಹಿರಣ್ಯಕನುಬ್ಬ ಮುರಿವೆನೆಂದು ಹೆಬ್ಬಾಗಿಲೊಳು ಸಂಜೆ ಮಬ್ಬಿನಲಿ ಧನುಜನ ಗರ್ಭವ ನಖದಿಂದ ಇಬ್ಭಾಗವನು ಮಾಡಿ ಹಬ್ಬಿದ ಕರುಳನು ಹರುಷದಿ ಧರಿಸಿದೆ 3 ಭೀತರಾದ ಸುರವ್ರಾತ ಪ್ರಾರ್ಥಿಸೆ ಬಹು ಶಾಂತನಾಗಿ ಸಂತೋಷಪಡಿಸಿದ ಅ- ನಾಥ ರಕ್ಷಕನೆ ಕಾತರವಳಿದೆ 4 ಖಳನ ಮರ್ದಿಸಿ ಬಹು ಇಳೆಯ ಪಾಲಿಸಿದೆ ನಳಿನ ಸಂಭವಗೆ ಬಲು ಹರುಷವನಿತ್ತೆ ಹೆಳವನಕಟ್ಟೆ ಶ್ರೀ ರಂಗ ದಾಗಿನಕಟ್ಟೆನೆಲೆವಾಸ ಕಂಬದ ನರಸಿಂಹದೇವ 5
--------------
ಹೆಳವನಕಟ್ಟೆ ಗಿರಿಯಮ್ಮ