ಒಟ್ಟು 7 ಕಡೆಗಳಲ್ಲಿ , 7 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯಾ ಜಯಾ ಪ ಈ ಮುದ್ದುಮುಖವೊ ಮತ್ತೆ ತನುವಿನ ಕಾಂತಿ ಈ ಬಿಲ್ಲು ಈ ಬಾಣ ನಿಂತಭಾವ 1 ಬಂಟ ಈ ಭಾಗ್ಯ ಆವ ದೇವರಿಗುಂಟು ಮೂಲೋಕದೊಳಗೆ 2 ಜಯ ಇನಕುಲೋದ್ಧರಣ ಜಯ ಮುನಿಕೃತ ಶರಣ ಜಯ ದನುಜವಿದಾರಣ ಜಯ ತಮಹರಣ 3 ಧರೆಯೊಳತಿಭಾರವನು ಇಳುಹಿ ಕಮಲಜ ಮುಖ್ಯ ಸುರರ ಮೊರೆಯನು ಕೇಳ್ದು ನರರೂಪ ತಾಳ್ದು 4 ದಶರಥನ ಗರ್ಭದಲಿ ಜನಿಸಿ ಮುನ್ನ ಮುನಿ ಮನೋರಥ ಕಾಯಿದ ಪುಣ್ಯಚರಿತ್ರ5 ಅಸುರರನು ಅಳಿದು ಅಹಲ್ಯಳಿಗಿತ್ತ ವರವಿತ್ತು ಮಿಥಿಳ ಪುರದಿ ಹರನ ಧನುವನುರೆ ಮುರಿದು 6 ಅತುಳ ಬಲದಲಿ ಸೀತೆಯ ಒಲಿಸಿದ ಭಾರ್ಗವ ಮ- ಹಿತÀಳ ಬಲವಂತ ದೇವೋತ್ತುಂಗ ಜಯತು 7 ಭರದಿಂದಲಯೋಧ್ಯಾಪುರವನು ಶೃಂಗರಿಸೆ ಹರುಷತನದಲಿ ರಾಮಗರಸುತನವೆನಲು 8 ಕಿರಿಯ ಮಾತೆಯು ಬಂದು ಭರತನಿಗೆ ಪಟ್ಟವೆನೆ ಸಿರಿಸಹಿತ ಹೊರಹೊಂಟ ಕರುಣಾಳು ಜಯತು 9 ಅನುಜ ಅವನಿಜೆ ಸಹಿತ ವನವಾಸವ ಮಾಡಿ ವನಜಾಕ್ಷ ಪತಿಯಾಗೆಂದು ರಾಕ್ಷಸಿಯು ಬರಲು 10 ಅನುವಾಯಿತೆಂದು ನಾಸಿಕವ ಹರಿದು ಭಂಗಿಸಿದೆ ಬಿನುಗು ಹೊಮ್ಮøಗವೆಚ್ಚ ಘನಮಹಿಮ ಜಯತು 11 ಜಕ್ಕಿದ ವಾಲಿಯನು ಕೊಂದು ಕುಲಸೈನ್ಯ ಸಹವಾಗಿ ನಿಲ್ಲದೆ ಸೇತುವೆಗಟ್ಟಿ ಅಸುರರೊಡಗೂಡಿ 12 ಖುಲ್ಲ ದಾನವ ಕುಂಭಕರ್ಣ ರಣಮುಟ್ಟಿ ಎಲ್ಲರನು ತರಿದಂಥ ಬಲ್ಲಿದನೆ ಜಯತು 13 ದÉೀವಕ್ಕಳು ಹರುಷದಲ್ಲಿ ಪೂಮಳೆಗರೆಯೆ ಭೂಮಿಜೆಯ ಸಹಿತ ಸೌಮಿತ್ರಿಯೊಡಗೂಡಿ 14 ಕ್ಷೇಮದಿಂದಯೋಧ್ಯಪುರದಿ ಸುಖದಲ್ಲಿರ್ದ ಸ್ವಾಮಿ ಶ್ರೀಹಯವದನ ರಘುಕುಲತಿಲಕನಲ್ಲವೆ 15
--------------
ವಾದಿರಾಜ
ಪಾದ ಕಂಡೆ ಕಂಡೆನು ಕೇಶವಾ ಪ ಪದ್ಮದಳಾಕೃತಿಯಲ್ಲಿರುತಿರುವಂಥ ನಿತ್ಯ ನಿಲಿದಾಡುವಂಥ ಪದ್ಮಾಕ್ಷಿ ಶ್ರೀದೇವಿ ಸೇವಿಸುತಿರುವಂಥ ಮೋದದಿ ಹೃದಯದಿ ನೆಲೆಸಿರುವಂಥ 1 ದುಷ್ಟರ ತಲೆಯನ್ನು ಪಿಡಿದೊತ್ತಿ ತರಿದಂಥ ಭ್ರಷ್ಟರ ಯೆದೆ ಮೇಲಿಟ್ಟುರುವಂಥ ನಿತ್ಯ ಪೂಜಿಸುತಿರುವಂಥ ಶಿಷ್ಟರ ಕಷ್ಟವ ಸಿಗಿದೊಗೆವಂಥ 2 ಅಂಧಕಾರವ ಬೇಗ ಹರಿದು ಪಾಲಿಸುವಂಥ ಸೂನು ಇಚ್ಛಿಸಿದಂಥ ಚಂದದಿ ಬಲಿಯ ಪಾತಾಳಕ್ಕೆ ತುಳಿದಂಥ ಅಂದದಿ ನರನ ಸಾರಥಿಗೊಪ್ಪುವಂಥ 3 ಸುರರು ಕಿಂನರರು ಕಿಂಪುರುಷರೇ ಮೊದಲಾದ ಸುರಗಣ ಸೇವಿಪ ಭಜಿಪ ಪಾದವನು ಸರಸದಿ ಭಕ್ತರ ಸಲಹೆ ರಕ್ಕಸರನ್ನು ತರಿದ ಶ್ರೀ ಚನ್ನಕೇಶವನ ಪಾದವನು 4
--------------
ಕರ್ಕಿ ಕೇಶವದಾಸ
ಮಾರುತಿಪಾದವ ಸ್ಮರಿಸಿರೋ ಸಾರದುರಿತ ಪರಹರಿಸ್ಪೊರೆಯುವ ಧೀರ ಪ ದುರುಳದಾನವನ ವರನಗರುರುಹಿತಾ ಪರತರ ವಿಭೀಷಣನೊರ ಕರುಣದಿ ಕಾಯ್ದ 1 ಬುವಿಯಂ ಕೈಲಾಸಕ್ಕೆ ಜವದಿ ಜಿಗಿದು ವೀರ ಭವಭಯಹರ ವರ ಶಿವನ ಚಿತ್ತರಿದಂಥ 2 ಭಕ್ತವತ್ಸಲ ವರ ಮುಕ್ತಿಕರ್ತ ಗುರು ದತ್ತ ಶ್ರೀರಾಮನ ಭೃತ್ಯನೆನಿಸಿಕೊಂಡ 3
--------------
ರಾಮದಾಸರು
ಮೂಲನಾರಾಯಣ ವಟಪತ್ರಶಾಯಿ ಕಾಲಕಾಲಕೆ ವೊದಗಿ ನೀಯೆನ್ನ ಕಾಯೋ ಪ. ಎಂದೆಂದಿಗೂ ಎನಗೆ ತಂದೆ ನೀ ದೇವಾ ಯಿಂದೆನ್ನ ಕರಪಿಡಿಯೋ ಬಿಂದುಮಾಧವಾ ಅ.ಪ. ಸ್ವಚ್ಛ ಮನವಮಾಡು ಮತ್ಸರೂಪಕನೆ ತುಚ್ಛ ಮನಕೊಂದ ವಿಶ್ವವ್ಯಾಪಕನೆ 1 ಮುಂದೆನ್ನ ಉದ್ಧರಿಸು ಮಂಧರೋದ್ದರನೆ ಇಂದ್ರಾದಿ ಸುರರಿಂದ ವಂದ್ಯಾಸುರವರನೆ 2 ಹಿರಣ್ಯಾಕ್ಷನ ತರಿದಂಥ ಧೀರ ಭರಧಿ ವೇದವ ತಂದ ಮಹಿಮೆ ಅಪಾರ 3 ತರಳ ಪ್ರಹ್ಲಾದನ ತಲೆಗಾಯ್ದ ರೂಪ ಸರಳ ಮತಿಯನಿತ್ತು ಪಾಲಿಸು ಶ್ರೀಶ 4 ಬಲಿಯ ಸಿಕ್ಕನು ಮುರಿದೆ ಪ್ರಬು ನಿನ್ನ ಕೀರ್ತಿ ಯೊಳ ಎನ್ನ ಮನವಿಡು ವಾಮನಮೂರ್ತಿ 5 ಕ್ಷತ್ರಿಯ ಕುಂಭವ ಸವರಿದ ರಾಮ ಶತಷಟ್ಯಂದರ ಬಡಿದ ದಿವ್ಯ ನಾಮ 6 ದಾನವ ಕುಲಕುಟಾರ ಶ್ರೀ ರಾಮ ಮಾನಾಭಿಮಾನವು ನಿನ್ನದೋ ರಮ 7 ಮಲ್ಲರ ಗೆದ್ದಂಥ ದೂಕುಳ ವೈರಿ ಗೊಲ್ಲಬಾಲಕರ ಕೂಡಾಡಿದ ಶೌರಿ ಶೌರಿ 8 ತ್ರಿಪುರರ ಸ್ತ್ರೀಯರ ವ್ರತ ಕೆಡಿಸಿದ ಜಾಣ ಉಪಗಮನ ವೀಯೋ ವಿಶ್ವೇಶ ಸುಜ್ಞಾನ 9 ಕಲಿಮುಖದೈತ್ಯರ ಅಳಿಯುವ ಕಲ್ಕಿ ಸಲಹೋ ಬಳಲುವೆ ನಾನು ಭವದಿಂ ಶಿಲ್ಕಿ10 ಗುರು ಕಾಳೀಮರ್ಧನಕೃಷ್ಣ ಯಾವಾಗ್ಯು ಶರಣುಜನರಪಾಲ ಏನು ಬಂದಾಗ್ಯು 11
--------------
ಕಳಸದ ಸುಂದರಮ್ಮ
ಹನುಮ-ಭೀಮ-ಮಧ್ವ ಇದು ಏನೊ ಚರಿತ ಯಂತ್ರೋದ್ಧಾರ ಪ. ಇದು ಏನೊ ಚರಿತ ಶ್ರೀಪದುಮನಾಭನ ದೂತಸದಾ ಕಾಲದಲಿ ಸರ್ವರ ಹೃದಯಾಂತರ್ಗತ ಅ.ಪ. ವಾರಿಧಿ ಗೋಷ್ಪಾದನೀರಂತೆ ದಾಟಿದಧೀರ ಯೋಗಾಸನಧಾರಿಯಾಗಿಪ್ಪೊದು 1 ದುರುಳ ಕೌರವರನ್ನು ವರಗದೆಯಲಿ ಕೊಂದಕರದಲ್ಲಿ ಜಪಮಾಲೆ ಧರಿಸಿ ಎಣಿಸುವುದು2 ಹೀನ ಮತಗಳನ್ನು ವಾಣಿಲಿ ತರಿದಂಥಜ್ಞಾನವಂತನೆ ಹೀಗೆ ಮೌನವ ಧರಿಸಿದ್ದು 3 ಸರ್ವವ್ಯಾಪಕ ನೀನು ಪೂರ್ವಿಕ ದೇವನೆಶರ್ವನಪಿತ ಬಂದೀ ಪರ್ವತ ಸೇರಿದ್ದು 4 ಪರಿ ಕುಳಿತದ್ದು 5
--------------
ಗೋಪಾಲದಾಸರು
ಹನುಮಂತಾ | ಮದ್ಗುರುವೆ | ಹನುಮಂತ ಪ ಹನುಮಂತ - ಗುಣಗಣ ನಿಲಯ | ಮುನಿಸನಕಾದಿ ಜನ ಮನಾಲಯ | ಆಹಮನ ಆದೀಂದ್ರಿಯ ನಿಯ | ಮನವನೆ ಮಾಡುತ್ತಅನುನಯದಿಂದಲಿ | ಪಾಲಿಪೆ ಸರ್ವರ ಅ.ಪ. ಅಂಜನೆ ಕುವರನೆ ಹನುಮ | ಚಿಣ್ಣಕಂಜ ಸಖಗೆ ಹಾರ್ದನಮ್ಮಾ | ಇಂದ್ರಸಂಜಯನನ ಹೊಡೆದನಮ್ಮಾ | ಶಿಶುಅಂಜಲಿಲ್ಲವು ನೀ ನೋಡಮ್ಮಾ | ಆಹಸಂಜಯಪಿತ ತನ್ನ | ಶ್ವಾಸ ನಿರೋಧಿಸೆಅಂಜಲು ಮೂರ್ಜಗ | ಕಂಜಾಕ್ಷ ಸಲಹೀದ 1 ರಾಮರ ಭಂಟ ಧೀಮಂತಾ | ಬಲಭೀಮ ಭಯಂಕರ ಅಮಿತಾ | ರೂಪನಾಮಗಳ್ ಪೊಂದುವ ಸತತಾ | ನೋಡುಕಾಮನಯ್ಯನ ಕಾಣ್ವ ನಿರತಾ | ಆಹಭೀಮ ಪ್ರಾಣಾನಂದ | ಮುನಿಯೆಂದು ಕರೆಸುತ್ತಬೊಮ್ಮನ ಪದವಿಯ | ಸಮ್ಮುದದಿ ಪಡೆವಂಥ 2 ಹರಿಯೆ ನೀನು ಪ್ರತಿಬಿಂಬಾ | ಪುರಹರಿಗೆ ನೀನು ಗುರು ಬಿಂಬಾ | ಸುರಾಸುರರ ನೀದಂಡಿಪಾ ಡಿಂಬಾ | ನಿನ್ನವರಣ ವರ್ಣಿಸುವುದು ಗುಂಭಾ | ಆಹಹರ ಮುಖಾದ್ಯರು ನಿನ್ನ | ನಿರುತದಿ ಸುತ್ತಿಸುತ್ತಪರಿಪರಿ ಗುಣರೂಪ | ಕ್ರಿಯೆಗಳ ನೋಳ್ಪರು 3 ನಿನಗೆಣೆ ಯಾರೊ ಸಮೀರ | ಮಹವನಧಿಯ ದಾಟಿದ ಧೀರ | ದೈತ್ಯಜನರ ನೀ ಸವರಿದ್ಯೋ ವೀರ | ದಶಾನನನ ನೀ ಸದದೆಯಾ ಶೂರ | ಆಹಜನಕಜ ರಮಣನ | ನೆನೆ ನೆನೆ ನೆನೆಯುತಅನುಗಾಲ ಕಿಂಪುರುಷ | ಖಂಡದಲಿರುವಂಥ 4 ಕುರುಕುಲ ವನಕೆ ಕುಠಾರ | ದುಷ್ಟಜರೆಯ ಸುತನ ಸೀಳ್ದ ಧೀರ | ಸತಿತರಳೆ ದ್ರೌಪದಿ ಕಾಯ್ದ ವೀರ | ದುರುಳದುರ್ಯೋಧನನ ಅಸು ಹರ | ಆಹಕುರುವಂಶಕನಳನೆ | ಧರಣಿ ಭಾರವ ನಿಳುಹನರಮೃಗ ಲೀಲೆಯಂ | ದರಿಗಳ ತರಿದಂಥ 5 ಯತಿಕುಲ ಕುಮುದಕೆ ಸೋಮ | ದಶಮತಿಯೆ ಮಾಯ್ಗಳ ತರಿದ ಭೀಮ | ಅಹಂಮತಿಯ ಕಳೆ ಸಾರ್ವಭೌಮ | ಜಗತ್ಪತಿಗೆ ನೀ ಸುಪವಿತ್ರ ಧಾಮಾ | ಆಹವಿತತ ಶ್ರೀ ಹರಿಯೆ ಸ | ರ್ವೋತ್ತಮನೆಂಬಂಥಸೂತ್ರಾರ್ಥ ರಚಿಸಿ ಸ | ಚ್ಛಾಸ್ತ್ರವನರುಹಿದ 6 ಪವಮಾನ ಪೊಗಳುವೆ ನಿನ್ನ | ಭವಭವಣೆಯ ಪಡಲಾರೆ ಘನ್ನ | ಗುರುಗೋವಿಂದ ವಿಠಲಾನ | ಚರಣ | ತೋರೊತವಕದಿ ನಿನ್ನೊಳು ಪವನ | ಆಹನವ ವಿಧ ಭಕುತಿಗೆ | ನೆಲೆಯು ನೀನಾಗಿಹೆತವಕೀರ್ತಿ ಪೊಗಳಲು | ಶಿವನಿಗು ಅಳವಲ್ಲ 7
--------------
ಗುರುಗೋವಿಂದವಿಠಲರು
139-5ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಠ್ಠಲನ ಮಂದಿರದಿ ತಪ್ಪದೇ ಪ್ರತಿದಿನಪಠಿಸಿ ಅರ್ಪಿಸುತ್ತಿದ್ದವಿಶ್ವವಿಷ್ಣುವಷಟ್ಕಾರ ಮೊದಲಾದ ಸಹಸ್ರನಾಮಗಳದಿಟ ಜ್ಞಾನ ಭಕ್ತಿಯಿಂ ಮಾರ್ಗದಿ ಸ್ಮರಿಸಿದರು 1ತನ್ನ ಹೊರ ಒಳಗೆ ಶ್ರೀಹರಿಯ ತಿಳಿಯುತ್ತಕಾಣುವುದು ಎಲ್ಲವೂ ಅನಘಹರಿ ಆವಾಸ್ಯತನಗೆ ಯದೃಚ್ಛದಿ ಲಭಿಸುವುವು ಹರಿಕೊಡುವುವುಎನ್ನುತ ಅನಪೇಕ್ಷಿ ನಿರ್ಭಯದಿ ನಡೆದರು 2ಮಾರ್ಗಸ್ಥ ಅಕ್ಷೋಭ್ಯ ಜಯಮುನಿಗಳಲಿಪೋಗಿ ಬಾಗಿ ಶಿರಸ್ಸಾಷ್ಠಾಂಗ ನಮಸÀ್ಕರಿಸಿ ಮುಂದುಪೋಗಿ ಕೃಷ್ಣಾ ತೀರ ಹನುಮನ್ನ ವಂದಿಸಿಚೀಕಲಪರಿವಿಗೆ ನಮಿಸಿ ಕರಮುಗಿದರು 3ಗುರುಗುಣಸ್ತವನಾದಿ ಗ್ರಂಥಗಳ ರಚಿಸಿರುವಸೂರಿವಾದೀಂದ್ರರ ನಮಿಸಿ ಅಪ್ಪಣೆಯಿಂಶ್ರೀರಾಘವೇಂದ್ರ ತೀರ್ಥರ ನಮಿಸಿ ಶರಣಾಗಿಸ್ತೋತ್ರ ಅರ್ಪಿಸಿದರು ಕವಿತಾರೂಪದಲಿ 4ಹರಿಶಿರಿ ಹನುಮ ಶಿವಗುರು ಅನುಗ್ರಹಕೊಂಡುದಾರಿಯಲ್ಲಿರುವಂಥ ಕ್ಷೇತ್ರ ಮೂರ್ತಿಗಳದರುಶನ ಮಾಡಿ ಗೋಪಾಲ ದಾಸಾರ್ಯರುಇರುವ ಸ್ಥಳ ಸೇರಿದರು ಜಗನ್ನಾಥದಾಸರು 5ಗುರುಗಳ ನೋಡಿ ಆನಂದ ಬಾಷ್ಪವ ಸುರಿಸಿಚರಣಪದ್ಮಗಳಲ್ಲಿ ನಮಿಸಿ ಶರಣಾಗಿಘೋರವ್ಯಾಧಿಹರಿಸಿ ಅಪಮೃತ್ಯು ತರಿದಂಥಕಾರುಣ್ಯ ನಿಧಿ ಉದ್ಧಾರಕರು ಎಂದರು 6ರಾಜೀವಾಲಯಪತಿವಿಜಯಗೋಪಾಲನುಭಜತರ ರಕ್ಷಿಸುವ ಕರುಣಾಸಮುದ್ರಈ ಜಗನ್ನಾಥನೇ ನಿನಗೆ ಒಲಿದಿಹನುಭುಜಗಾದ್ರಿವಾಸ ಫಂಡರಿ ವಿಠ್ಠಲ 7ನಿಜಭಕ್ತಾಗ್ರಣಿ ಗೋಪಾಲ ದಾಸಾರ್ಯರುನಿಜಭಾವದಲಿ ಈ ರೀತಿಯಲಿ ಹೇಳೆಐಜೀ ಮಹಾತ್ಮರು ಸೂಚಿಸಿದರು ಹರಿಯಭೋಜನ ಜಗನ್ನಾಥದಾಸಗೆ ಮಾಡಿಸಿದ್ದು 8ಜಗನ್ನಾಥದಾಸರು ನಡೆದ ವೃತ್ತಾಂತವಮುಗಿದು ಕರಗದ್ಗದ ಕಂಠದಲಿ ಪೇಳೆಚಕಿತರಾದರು ಅಲ್ಲಿ ನೆರೆದಿದ್ದ ಸಜ್ಜನರುಉದ್ಘೊಷ ಜಯ ಜಯ ಶಬ್ದ ಮಾಡಿದರು 9ಉತ್ತನೂರಿಗೆವೇಣಿಸೋಮಪುರದಿಂ ಪೋಗಿಮತ್ತೂವೇಣಿಸೋಮಪುರವನ್ನು ಯೈದಿಸತ್ತತ್ವ ಬ್ರಹ್ಮ ಜಿಜ್ಞಾಸವೂ ಭಾಗ -ವತ ಧರ್ಮ ಆಚರಿಸಿದರು ಮುದದಿಂದ 10ಗೋಪಾಲಕೃಷ್ಣ ಪ್ರಿಯ ಐಜೀಮಹಂತರುಗೋಪಾಲದಾಸಾರ್ಯ ªರದ ಗುರುತಂಗೋಪಾಲ ದಾಸಾರ್ಯರುಗಳ ಸಮೇತದಿಭೂಪಾಲ ಪ್ರಮುಖರು ಸಾಧುಜನಗುಂಪು 11ಶಿರಿವಾಸುದೇವಪ್ರಿಯವಾಸತತ್ವಜÕರಗುರುಗಳು ಗೋಪಾಲದಾಸರ ಅನುಗ್ರಹದಿವರದ ಗುರುತಂದೆ ಗೋಪಾಲರು ಮತ್ತೆಲ್ಲರಿಗೂಕರಮುಗಿದು ಹೊರಟರು ಅಪ್ಪಣೆಕೊಂಡು 12ಗದ್ವಾಲ ಮಾರ್ಗದಿ ಮಂತ್ರಾಲಯ ಪೋಗಿಮಧ್ವಮತ ದುಗ್ಧಾಬ್ಧಿ ಚಂದ್ರ ಶ್ರೀ ರಾಘವೇಂದ್ರ ವಾದೀಂದ್ರರ ನಮಿಸಿ ಅಲ್ಲಿಂದಯೈದಿಹರು ಪರಮಗುರುಗಳು ಇದ್ದ ಸ್ಥಳವ 13ಪರಮಗುರುಗಳು ವಿಜಯವಿಠ್ಠಲ ದಾಸಾರ್ಯರಚರಣಾರವಿಂದದಿ ಶರಣಾಗಿಅವರಕರದಿಂದ ನರಸಿಂಹ ವಿಜಯವಿಠ್ಠಲನಸುಪ್ರಸಾದವ ಕೊಂಡು ಮಾನವಿಗೆ ಹೋದರು 14ಮನುತೀರ್ಥ ತಟದಲಿ ಮನೆಯಲ್ಲಿ ವಾಸಿಸುತಹನುಮಂತಸ್ಥ ನರಹರಿ ಜಗನ್ನಾಥನ್ನಹನುಮನ್ನ ಪೂಜಿಸುತ ಗುರುಗಳ ಸ್ಮರಿಸುತ್ತಜ್ಞಾನಾರ್ಥಿ ವಿದ್ಯಾರ್ಥಿಗಳಿಗೆ ಒದಗಿಹರು 15ಇಷ್ಟರಲ್ಲೇ ಜಗನ್ನಾಥದಾಸರ ಕೀರ್ತಿಅಷ್ಟದಿಕ್ಕಲ್ಲು ಪ್ರಖ್ಯಾತಿಯ ಹೊಂದಿಇಷ್ಟಾರ್ಥ ಸಿದ್ಧಿಗೆ ಬರುವರಾದರು ಜನರುಕೃಷ್ಣನ ಒಲಿಮೆ ಈ ದಾಸರಲಿ ಪೂರ್ಣ 16ಮಾಧ್ವ ಮೂಲಗ್ರಂಥ ಟೀಕಾಟಿಪ್ಪಣಿಗಳುಸಾಧು ಹರಿದಾಸರ ಕೀರ್ತನೆಗಳುವೇದವ್ಯಾಸೋದಿತ ಪುರಾಣ ಇತಿಹಾಸವಿದ್ಯಾರ್ಥಿಗಳಿಗೆಲ್ಲ ಪಾಠ ಪ್ರವಚನವು 17ಯೋಗಿವರ ಪ್ರಾಣೇಶವಿಠ್ಠಲ ದಾಸಾರ್ಯರುಭಾಗವತವರಶ್ರೀಶ ವಿಠ್ಠಲದಾಸಾರ್ಯನಿಗಮವೇದ್ಯನ ಭಕ್ತಜನರು ಬಹುಮಂದಿಯುಬಾಗಿ ದಾಸಾರ್ಯರಿಗೆ ಶಿಷ್ಯ ಜನರಾದರು 18ಪ್ರಾಣೇಶ ದಾಸರಿಗೆ ಶರಣಾದೆ ಎಂದೆಂದುಪ್ರಾಣದೇವನು ಇವರೊಳ್ ಪ್ರಸನ್ನನಾಗಿಹನುಪ್ರಾಣದೇವಾಂತಸ್ಥ ಶ್ರಿಹರಿ ಕೇಶವನಕಾಣುತ ಭಜಿಸುವ ಭಾಗವತರೆಂದು 19ಜಗನ್ನಾಥದಾಸರ ಶಿಷ್ಯ ಸಜ್ಜನರಿಗೆಭಾಗವತವರಶ್ರೀಶ ಶ್ರೀದವಿಠ್ಠಲಾದಿಭಗವದ್ದಾಸರಿಗೆ ನಮಿಪೆ ಶ್ರೀ ಹರಿವಾಯುಝಗಝಗಿಪ ಇವರುಗಳೊಳ್ ಸಂತತ ಎಂದು 20ನೋಡಬೇಕಾಗಿದ್ದ ಕ್ಷೇತ್ರಗಳಿಗೆ ಪೋಗಿನಾಡಿನಲಿಭಾಗವತಧರ್ಮವ ಬೆಳೆಸೆಬೇಡುವ ಯೋಗ್ಯರಿಗೆ ಉಪದೇಶ ಕೊಡೆ ಶಿಷ್ಯರೊಡಗೂಡಿ ಹೊರಟರು ಜಗನ್ನಾಥದಾಸರು 21ಕರ್ಜಗಿ ಕ್ಷೇತ್ರದಲ್ಲಿ ಇರುವ ವರದಾ ನದಿಯುಸಜ್ಜನ ಸಮೂಹವು ಬಹಳ ಅಲ್ಲುಂಟುಶ್ರೀ ಜಗನ್ನಾಥನ್ನ ಭಜಿಸುತ್ತ ದಾಸರುಕರ್ಜಗಿ ಜಮೀನ್ದಾರ ಮನೆಯಲ್ಲಿ ಕುಳಿತರು 22ಸಾಧ್ವಿ ಶಿರೋಮಣಿ ಆ ಗೃಹಸ್ಥನ ಪತ್ನಿಪಾದನಮಿಸಿ ಪತಿಗೆ ಬಿನ್ನಹ ಮಾಡಿದಳುಇಂದುಲೌಕಿಕ ವಿಷಯಲಾಂಪಟ್ಯ ನಿಲ್ಲಿಸಿವಂದಿಸಿ ದಾಸರಿಗೆ ಪೂಜೆ ನೋಡೆಂದು 23ಅಹರ ಆರಾಧಿಸುವ ಕ್ರಮದಿ ದಾಸಾರ್ಯರುಸಾಯಾಹ್ನ ಸಾಮವಾಪ್ರತಿಪಾದ್ಯ ನರಸಿಂಹನವಿಹಿತದಿ ಅರ್ಚಿಸಿ ಕೀರ್ತನೆಗಳರ್ಪಿಸಿಮಹಾಹರ್ವ ಭಜಿಸುವರು ಶಿಷ್ಯರ ಸಮೇತ 24ಅಂದು ಈ ಗೃಹಸ್ಥನು ಹೆಂಡತಿ ಕೋರಿಕೆಯಂತೆಬಂದು ಕುಳಿತನು ದಾಸಾರ್ಯರ ಮುಂದೆಅಂದೇ ಆ ವಿಪ್ರನ ಅನಿಷ್ಠ ಪ್ರಾರಬ್ಧವುಚಂದದಿ ಪೋಪುವದೆಂದರಿತರು ದಾಸಾರ್ಯ 25ಪೂಜಾ ಆರಂಭ ಆಗಲಿಕೆ ಇರುವಾಗ ಆದ್ವಿಜನ ನೋಡಿ ಪ್ರಾಣೇಶ ದಾಸಾರ್ಯಗರ್ಜಿಸಿದರು ಇನ್ನಾದರೂ ಒಳ್ಳೆಋಜುಮಾರ್ಗ ಹಿಡಿ ಹರಿಯ ಒಲಿಸಿಕೊಳ್ಳೆಂದು 26ವಾಗ್ವಜ್ರಧಾರೆಯು ಪರಿಣಮಿಸಿ ವಿಪ್ರನತೀವ್ರ ಆ ಕ್ಷಣದಲ್ಲೆ ಮನಕಲುಷಕಳೆದುಶ್ರೀವರನ ಪ್ರಿಯತರ ಜಗನ್ನಾಥದಾಸರಿಗೆಸುವಿನಯದಿ ನಮಿಸಿ ಉದ್ಧರಿಸಿ ಎಂದ 27ಪ್ರಾಣೇಶ ದಾಸರಿಗು ಜಗನ್ನಾಥದಾಸರಿಗುತನ್ನ ಕೃತಜÕತೆಯನ್ನು ಚೆನ್ನಾಗಿ ತಿಳಿಸಿಮನ ಶುದ್ಧಿ ಭಕ್ತಿಯಿಂದಲಿ ಪೂಜೆ ನೋಡಲುಹನುಮಂತ ದೇವರು ಕುಳಿತಿದ್ದು ಕಂಡ 28ಶ್ರದ್ಧೆ ಭಕ್ತಿಯಿಂದ ಗೃಹಸ್ಥನುದಾಸರಪಾದಕೆರಗಿ ತನ್ನನ್ನು ಹರಿದಾಸವೃಂದದಲಿ ಸೇರಿಸಬೇಕೆಂದು ಪ್ರಾರ್ಥಿಸಿಶ್ರೀದವಿಠ್ಠಲನಾಮ ಅಂಕಿತವಕೊಂಡ29ಜಗನ್ನಾಥದಾಸಾರ್ಯಪರಮದಯಮಾಡಿಆ ಗೃಹಸ್ಥಗೆ ಶ್ರೀದವಿಠ್ಠಲಾಂಕಿತವುಭಕುತ ಜನರಿಗೆ ಫಲಮಂತ್ರಾಕ್ಷತೆ ಕೊಟ್ಟುಶ್ರೀಕರನ ಸ್ಮರಿಸಿ ಸವಣೂರಿಗೆ ಹೊರಟರು 30ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 31- ಇತಿ ಷಷ್ಠ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು