ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಬನ್ನಿ ಇಂದಿರೇಶಾ ಇಂದುವಾರದಲಿ ಬಲು | ಅಂದದಿಂದ ಮೆರೆವನಂದವ ನೋಡಾ ಪ ಮುತ್ತಿನ ಕಿರೀಟ ಮೇಲೆ ಸುತ್ತಿದ ಲತೆ ತಳಲು | ರತ್ನಗಂಬಳಿ ಕಲ್ಲಿಯ ಬುತ್ತಿ ಪೆಗಲೂ || ತೂತ್ತುತೂರಿ ಎಂದು ಸ್ವರ | ವೆತ್ತಿ ಊದುವ ಕೊಳಲು | ಉತ್ತಮ ಶೋಕ್ಲವನು ಮೆರೆಯುತ್ತಲಿಪ್ಪುದು 1 ಉಂಗುರಗೂದಲು ಪುಬ್ಬು ಸಿಂಗಾಡಿ ಅಂದದಿ ಒಪ್ಪೆ | ಅಂಗಾರ ಕಂಕಣ ಮಂಗಳಾಂಗ ನಿಸ್ಸಂಗ | ರಂಗ ತುಂಗ ಮಹಿಮ ತಾರಂಗ ಅಂಗುಲಿಲಿ ರತ್ನ | ದುಂಗುರವ ಯಿಟ್ಟ ಸುಖಂಗಳ ನೋಡಾ 2 ಉಂಗುರವ ನಡು ಮೇಲು ಕಂಗಳ ಕುಡಿನೋಟ | ಗೋಪಾಂಗನೇರ ಮನಕೆ ಮೋಹಂಗಳ ತೋರೆ | ಅಂಗಜನ್ನೆನೆಸಿ ತಾಪಂಗಳು ವೆಗ್ಗಳದಿಂದ | ಹಂಗೀಗರಾಗೆ ನಗುವ ಗಂಗಾಜನಕ 3 ಲೋಕ ಬೆಲೆಗೊಂಬ ಅಲೌಕೀಕ ಮಣಿನಾಸದಲ್ಲಿ | ರಾಕಾಬ್ಜಾನಂದದಿ ಮೊಗಾನೇಕ ಲೋಕೇಳಾ | ನಿತ್ಯ ಬೇಕೆಂದು ಜಪಿಸಲು ದೊರಕದ ದೊಂಬಲು ಬಾ ಯದುಕುಲಾಂಬರಾ4 ಕುಂಡಲ ಕರ್ಣ ಶ್ರೀಗಂಧ ಪೂಸಿದ ವಕ್ಷ | ಪೂಗೊಂಚಲು ಸಣ್ಣನಾಮ ಆ ಗೆಜ್ಜೆಧ್ವನಿ | ಆಗಮನ ಸೋಲಿಸೆ ನಾನಾ ಭೋಗಾದಲ್ಲಿಯಿಪ್ಪ | ಮಧ್ವ | ಯೋಗಿಪ್ರಿಯಾ ವಿಜಯವಿಠ್ಠಲಾ ಗುಣನಿಧಿ 5
--------------
ವಿಜಯದಾಸ
ಸಾಕು ಸಾಕಿನ್ನು ಸಂಸಾರಸುಖವು |ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ ಪಉದಿಸಿದುವು ಪಂಚಭೂತಗಳಿಂದ ಔಷಧಿಗ-|ಳುದಿಸಿದುವು ಔಷಧಿಗಳಿಂದನ್ನವು ||ಉದಿಸಿದುವು ಅನ್ನದಿಂ ಶುಕ್ಲ-ಶೋಣಿತವೆರಡು |ಉದಿಸಿದುವು ಸ್ತ್ರೀ-ಪುರುಷರಲ್ಲಿ ಹರಿಯೆ 1ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆ |ಪತನವಾದಿಂದ್ರಿಯವು ಹೊಲೆ-ರುಧಿರವು ||ಸುದತಿಯುದರದೊಳೆರಡು ಏಕದಲಿ ಸಂಧಿಸಲು |ಬುದಬುದನೆ ಮಾಸಪರ್ಯಂತರದಿ ಹರಿಯೆ 2ಮಾಸವೆರಡರಲಿ ಶಿರಮಾಸಮೂರರಲಂಗ |ಮಾಸನಾಲ್ಕರಲಿ ಚರ್ಮದ ಹೊದಿಕೆಯು ||ಮಾಸವೈದರೊಳುನಖರೋಮ ನವ ರಂಧ್ರಗಳು |ಮಾಸವೇಳಲಿ ಧಾತು ಹಸಿವು ತೃಷೆಯು 3ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳ |ಭಂಗವನು ಪಡಲಾರೆ ಭವಭವದೊಳು ||ಅಂಗನೆಯ ಉದರಕಿನ್ನೆಂದಿಗೂ ಬರೆನೆಂದು |ಹಿಂಗದಲೆ ಧ್ಯಾನಿಸುತ ಕಳೆದೆನೈ ದಿನವ 4ಇನಿತು ಗರ್ಭದೊಳು ನವಮಾಸ ಪರಿಯಂತರದಿ |ತನು ಸಿಲುಕಿ ನರಕದಲಿ ಆಯಾಸಗೊಂಡು ||ಘನಮರುತವೇಗದಿಂ ಅರುಹನಲ್ಲಿಯೆ ಮರೆತುಜನಿಸುವಲಿ ಮೃತಭಾವದೊಳು ನೊಂದೆ ಹರಿಯೆ 5ಧರೆಯಮೇಲುದಿಸಿ ಬಹು ವಿಷ್ಣುಮಾಯೆಗೆ ಸಿಲುಕಿ |ಪರವಶದೊಳಿರಲು ನೀರಡಿಸಲಾಗ ||ಹೊರಳಿ ಗೋಳಿಡುತ ಕಣ್ದೆರೆಯ ಹರಿಯನು ಮರೆವ |ದುರಿತರೂಪದ ತನುವ ಧರಿಸಿದೆನೊ ಹರಿಯೆ 6ಶಿಶುತನದೊಳಿರಲು ನೊಣ ಮುಸುಕಲಂದದಕಳಲು |ಹಸಿದನಿವನೆಂದು ಹಾಲನೆ ಎರೆವರು ||ಹಸು-ತೃಕ್ಷೆಗಳಿಂದಳಲು ಹಾಡಿ ತೂಗುವರಾಗ |ಪಶುವಂತೆ ಶಿಶುತನದೊಳಿರಲಾರೆ ಹರಿಯೆ 7ನಡೆಯಲರಿಯದ ದುಃಖ ಮನಸಿನೊಳು ಬಯಸಿದುದ |ನುಡಿಯಲರಿಯದ ದುಃಖ ವಿಷಮದಿಂದ ||ಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲು-|ನುಡಿಯೊಳಿಹ ಬಾಲ್ಯದೊಳಗಿಲಾರೆ ಹರಿಯೆ 8ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತು |ಗೋಳಿಡುತವಿದ್ಯೆಕರ್ಮಗಳ ಕಲಿತು ||ಮೇಲೆ ಯೌವನದುಬ್ಬಿನೊಳು ಮದುವೆಯಾಗಿ ನಾಬಾಲೆಯರ ಬಯಸಿ ಬಹು ಮರಳಾದೆ ಹರಿಯೆ | 9ಜ್ವರದ ಮೇಲತಿಸಾರ ಬಂದಂತೆ ಯೌವನದಿ |ತರುಣಿಯೊಡನಾಡಿಕೂಡಿದವಿಷಯದಿ ||ತರುಣಿ-ಸುತರ್ಗನ್ನ ವಸ್ತ್ರಾಭರಣವೆಂದೆನುತ |ಪರರ ಸೇವೆಯಲಿ ನಾ ಕಡುನೊಂದೆ ಹರಿಯೆ 10ನೆತ್ತರವು ತೊಗಲು ಮಾಂಸದ ಹುತ್ತು ಜೊತ್ತುಗಳ |ಹತ್ತು ಇಂದ್ರಿಯದ ಬಹುರೋಗದಿಂದ ||ಮತ್ತೆ ಕಾಲನ ಬಾಯತುತ್ತು ಬಹುವಿಧ ಕರ್ಮ-||ಕತ್ತಲೆಯೊಳೀ ದೇಹ ಕರಕಾಯ್ತು ಹರಿಯೆ 11ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರು |ಕಟ್ಟಿಕಾದಿಹರು ಮುಪ್ಪಡಸಲಾಗ ||ತಟ್ಟನೇ ಕೆಟ್ಟನುಡಿಗಳ ಬಯ್ಯುತಳಲುವರು |ಮುಟ್ಟಿನೋಡರು ಸರಕುಮಾಡರೈ ಹರಿಯೆ 12ಎಷ್ಟವಜೆÕಯ ಮಾಡೆ ಮತ್ತವನಿಗಳಲುತಿರೆ |ಕಟ್ಟಳೆಯ ದಿನತುಂಬಿಮೃತನಾಗಲು ||ಕುಟ್ಟಿಕೊಂಡಳುತ ಹೋಯೆನುತ ಬಂಧುಗಳೆಲ್ಲ |ಮುಟ್ಟದಲೆ ಹೆಣನೆಂದು ದೂರದೊಳಗಿಹರು 13ಸತ್ತ ಹೆಣಕಳಲೇತಕೆಂದು ಬಂಧುಗಳೆಲ್ಲ |ಸುತ್ತಿರ್ದು ಹೊತ್ತು ಹೋಯಿತು ಎನ್ನುತ ||ಹೊತ್ತು ಕೊಂಡಗ್ನಿಯಲಿ ತನುವ ಬೀಸಾಡುವರು |ಮತ್ತೆ ಧರಣಿಯಲಿ ನಾ ಜನಿಸಬೇಡವೊ ಹರಿಯೆ 14ಇನ್ನು ಈ ಪರಿಪರಿಯ ಯೋನಿಮುಖದಲಿ ಬಂದು |ಬನ್ನವನು ಪಡಲರೆ ಭವಭವದೊಳು ||ಜನ್ಮ-ಮರಣಾದಿ ಕ್ಲೇಶಗಳನ್ನು ಪರಿಹರಿಸಿ |ಸನ್ಮತಿಯೊಳಿರಿಸೆನ್ನ ಪುರಂದರವಿಠಲ 15
--------------
ಪುರಂದರದಾಸರು