ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನಾದರೇನು ಗುರು ಪಡದನಕಾ | ತಾನೊಲಿಯನು ಹರಿ ಕಾವನ ಜನಕಾ ಪ ಪರಿಪರಿಸಾಧನದಲಿ ಬಳಲುವರೆ | ಪರಸ ಮುಟ್ಟದೆ ಲೋಹವಾಗುವದೇ ಕನಕಾ1 ಪತಿತೋದ್ಧಾರಗುರು ಸ್ವಸುಖದಾನಿ | ವೃತ ತಪಸಿದ್ಧಿಯ ಬಹು ಸುಖ ಕ್ಷಣಿಕಾ2 ಗುರು ಮಹಿಪತಿಪ್ರಭು ಜ್ಞಾನಾಂಜ ನಿಡದೇ | ಧರೆಯೊಳಾಹನೇ ನರ ಚಿದ್ಘನ ಧನಿಕಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನಾದರೇನು ಗುರುದಯ ಪಡದನಕಾ| ತಾನೊಲಿಯನು ಹರಿ ಕಾವನ ಜನಕಾ ಪ ಪರಿ ಸಾಧನದಲಿ ಬಳಲುವರೇ| ಪರಸ ಮುಟ್ಟದ ಲೋಹವಾಗುವದೇ ಕನಕಾ 1 ಪತೀತೋದ್ದರ ಗುರು ಸ್ವಸುಖದಾನಿ| ವೃತ ತಪದಿ ಸಿದ್ದಿಯ ಬಹ ಸುಖ ಕ್ಷಣಿಕಾ2 ಗುರು ಮಹಿಪತಿ ಪ್ರಭು ಜ್ಞಾನಾಂಜನಿಡದೇ| ಧರಿಯೊಳಾಹನೇ ನರ ಚಿದ್ಬನ ಧನಿಕಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವರದೇಂದ್ರ ದಯಾಂಬುಧೇ ಶರಣಾಗತ ವತ್ಸಲ ಈಶ |ಚರಣಕಮಲಷಟ್ಪದ ಪಾಲಿಸು ಕಾಷಾಯವಸನಭೂಷಾ ಪದುರ್ಮತಭುಜಗಕುಘರ್ಮ ವಿನಾಯಕಕರ್ಮಬದ್ಧವ್ರತಾ |ಶರ್ಮತ್ರಿಧರ ಪ್ರಿಯ ಧರ್ಮಾಸಕ್ತನೆ ನಿರ್ಮಲ ಶುಭಚರಿತಾ ||ಭರ್ಮ ಸಮಾಂಗ ಅಧರ್ಮ ಶಿಕ್ಷಕರಿಚರ್ಮಾಂಬರ ಪ್ರೀತ |ಕಿರ್ಮೀರಾರಿ ಸುಶರ್ಮ ತೀರ್ಥಸಖಕರ್ಮಂದಿಪ ನಾಥ 1ಶ್ರೀ ಮನೋರಮ ಸು ತ್ರಿಧಾಮದೇವ ಶ್ರೀರಾಮ ಪದಾಸಕ್ತಾ |ಕಾಮಿತ ಫಲದಧರಾಮರವಂದಿತ ಸ್ವಾಮಿ ನಮಿಪ ಭಕ್ತ ||ಶ್ರೀಮಂದಾರಅನಾಮಯ ಸದ್ಗುಣಧಾಮನೆ ಸುವಿರಕ್ತಾ |ಪಾಮರದೂರ ಲಲಾಮ ವದಾನ್ಯ ಮಹಾಮಹಿಮನೆ ಶಕ್ತ 2ಮಾನಿ ಪೂಜ್ಯ ಸುಜ್ಞಾನಿ ಧೀರ ಸದ್ಭಾನುಚಂದ್ರ ಭಾಸ |ದೀನ ಪೋಷಕ ನಿಜಾನುಗ ಪಾಲಕ ಕ್ಷೋಣಿಪ ನಿರ್ದೋಷ ||ಸಾನುರಾಗದಲಿ ಪೋಣಿಸುಸನ್ಮತಿಮೌನಿ ಕುಲಾಧೀಶ |ನೀನಲ್ಲದೆ ಶ್ರೀ ಪ್ರಾಣೇಶ ವಿಠ್ಠಲ ತಾನೊಲಿಯನು ಲೇಶ 3
--------------
ಪ್ರಾಣೇಶದಾಸರು