ಒಟ್ಟು 10 ಕಡೆಗಳಲ್ಲಿ , 7 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರು ಸಂಗಡ ಬಾಹೊರೆಲೆ ಮನುಜ ನಿನಗೆ ಹಾರೈಸಿ ಬಳಲುವೆ ಬರಿದೆ ಭವದೊಳಗೆ ಪ ಗುರುಹಿರಿಯರಗ್ನಿಯ ಪರಿಮುಖದಿ ನಿನ್ನಯ ಕರಪಿಡಿದು ಮಾಂಗಲ್ಯ ಧರಿಸಿಕೊಂಡರ್ಧ ಶರೀರವೆನಿಸುವ ಸತಿಯು ಮರಣ ಕಾಲದಿ ನಯನ ತಿರುಗುವುದ ಕಂಡಂಜಿ ತಿರಿಗಿನಿಂತಳುತಿಹ್ಯಳು 1 ತನುಜಮನುಜರಿವರೆಲ್ಲ ನಿನಗತಿಹಿತ ಬಂಧು ಮಣಿದು ಸೇವಿಪರು ನಿನ್ನನುದಿನವು ಬಿಡದೆ ತನುಬಿಟ್ಟ ಕ್ಷಣದಿ ನನನಿನಗೆನುತ ಮನೆಕೀಲಿ ಘನ ಜಗಳ ಕಾಣು ಬಿದ್ದ್ಹೆಣದ ಪರಿವಿಲ್ಲದೆ 2 ಕುಲವಿದ್ಯವ್ಯವಹಾರ ಕಳವುಕೊಲೆ ನೃಪಸೇವೆ ತಲೆ ಬಾಗಿ ಜನರಲ್ಲಿ ಬಲುದೈನ್ಯ ಬಟ್ಟು ಗಳಿಸಿ ಹೂಳಿದ ದ್ರವ್ಯ ಎಳೆದೊಯ್ಯಲ್ಯಮ ನಿನ್ನ ತಲೆಯೆತ್ತಿ ನೋಡದಲೆ ನೆಲದಿ ನಿಲ್ಲುವುದು 3 ಭೂಮಿ ನಿನ್ನದು ಎಂದು ನೇಮವನು ಬರಕೊಂಡು ಕೋಮಲ ಮನೆಕಟ್ಟಿ ತಾಮಸದಿ ನಲಿವಿ ಭೂಮಿಯ ರಿಣತೀರಿ ನೀ ಮಡಿದಾಕ್ಷಣ ಬಹಿ ರ್ಭೂಮಿಯೋಳ್ಹುತಿವರೆಲೆ ಪಾಮರ ಮನುಜ 4 ಬಂಧುಬಾಂಧವರೆಲ್ಲ ಹಿಂದೆ ಉಳಿಯುವರು ಮಂದನಾಗದೆ ತಂದೆ ಶ್ರೀರಾಮ ಪಾದಾರವಿಂದಮಂ ನಂಬಿ ಭವಬಂಧವನು ಗೆಲಿಯೊ 5
--------------
ರಾಮದಾಸರು
ಎಂತು ಜೀವಿಸಲಯ್ಯ ಯಾದವೇಶ ಪ ಎನ್ನಸುವಿಗಸು ನೀನು ಭಿನ್ನ ಜ್ಞಾನದಿ ಎನ್ನ ಅ.ಪ ಬನ್ನ ಬಡಿಸುವಿ ಮಾಯ ಜೈಸಲರಿಯೆ ವಿಧಿ ವಾಯು ಶಿವ ಶಕ್ರ ಸುರನಿಕರ ನಿನ್ನಲ್ಲಿ ಸುಖಿಸುವರೊ ಅನ್ನೆಲ್ಲಿ ಅಸತೆಂದು 1 ನೀರಗುಳ್ಳೆಯಂತೆ ಸಂಸೃತಿಯ ಸುಖವೆಂದು ದಾರಿತೋರ್ವವ ನೀನು ಕಣ್ಣುಕಟ್ಟೆ ಆರು ಬಿಚ್ಚುವರಯ್ಯ ಆ ಪಟಲಕಿಕ್ಕಟ್ಟು ವಾರಿಜಾಸನನಯ್ಯ ವಂಚಿಸದೆ ಮೈದೋರು 2 ಕಾಮಾದಿ ಷಡ್ವರ್ಗ ದುಷ್ಕರಣ ದುಮ್ಮಾನದ ತಾಮಸದಿ ಸಿಗಬಿದ್ದು ಪಾಮರಾದೆ ವ್ಯೋಮಕೇಶನ ಮಿತ್ರ ಜಯೇಶವಿಠಲ ನೀ ಮನಸು ಮಾಡಲು ಆತ್ಮಾಪಿ ವೈಕುಂಠ 3
--------------
ಜಯೇಶವಿಠಲ
ಏನಬೇಡಲಿ ನಿನ್ನ ನಾ ಬಯಸಿ ಸ್ವಾಮಿ ಐಹಿಕ ಸುಖ ನಿಖಿಲ ಪುಸಿಯಾಗಿ ಪ ವನಿತೆಯನು ಬೇಡಲೆ ತನಗೆ ಅಲ್ಲದೆ ಮತ್ತೆ ಮನೆತುಂಬ ಮರಿಮಾಡಿ ತಿನಿಸಿಗ್ಹಾಕೆಂದು ಅನುಗಾಲ ಬೆನ್ನ್ಹತ್ತಿ ತಿನುತಿಹ್ಯಳು ಹರಿದ್ಹರಿದು ಬಿನುಗರಲಿ ಬಿನುಗೆನಿಸಿ ಘನತೆಯನು ಕೆಡಿಸಿ 1 ಘನವೆಂದು ನಂಬಿ ನಾ ಧನವನಾಪೇಕ್ಷಿಸಲೆ ಸನುಮತದಿ ಒತ್ತಟ್ಟಕ್ಷಣ ಕೂಡ್ರಗೊಡದೆ ದಣಿವಿಕಿಲ್ಲದೆ ದುಡಿಸಿ ಅಣುಮಾತ್ರ ಸುಖಕೊಡದೆ ಚಿನುಮಯಾತ್ಮನೆ ನಿನ್ನ ನೆನವೆ ಮರೆಸುವುದು 2 ಭೂಮಿಯನು ಬೇಡಲೆ ಸ್ವಾಮಿಯಂತೆ ಸೇವೆಗೊಂಡು ತಾಮಸದಿ ನೂಕಿ ಬಲು ಪಾಮರೆನಿಸುವುದು ಸ್ವಾಮಿಯೆನ್ನಯ ಸಕಲ ಕಾಮಿತ ಕಡಿದು ನಿಮ್ಮ ನಾಮಬಲ ಕರುಣಿಸು ಶ್ರೀರಾಮ ಪ್ರಭುತಂದೆ3
--------------
ರಾಮದಾಸರು
ಧೇನಿಸೂ ಶ್ರೀಹರಿಯ ಮಹಿಮೆ ನೀ ಧೇನಿಸೊ ಪ ಧೇನಿಸು ಶ್ರೀಹರಿಯ ಲೀಲಾ ಸೃಷ್ಟಿ ಮಾನಸದಲಿ ನೆನೆಯೋ ಪರಿಯಾ ||ಆಹಾ|| ತಾನೆ ತನ್ನಯ ಲೀಲಾಜಾಲತನದಿ ತನ್ನ ಆನಂದದೊಳಿಪ್ಪ ಶ್ರೀ ಮುಕುಂದ ನನ್ನ ಅ.ಪ ಮೂಲ ನಾರಾಯಣ ದೇವ ತಾನು ಆಲದೆಲೆಯೊಳು ಲೀಲಾ ತೋರಿ ಬಾಲತನದಿ ತಾ ನಲಿವಾ ಅನೇಕ ಕಾಲ ಪರ್ಯಂತರದಿ ಸರ್ವ ||ಆಹಾ|| ಎಲ್ಲ ಜಗವ ತನ್ನ ಒಡಲೊಳಡಗಿಸಿ ಲೋಲನಾಗಿ ಬಾಲಕ್ರೀಡೆಯಾಡುವಪರಿಯಾ 1 ಇಂತು ಶಯನಗೈದ ಹರಿಯ ಅ- ನಂತ ವೇದಗಳಿಂದ ತ್ವರಿಯಾ ದುರ್ಗ ಸಂತಸದಿಂದ ಸಂಸ್ತುತಿಯ ಮಾಡೆ ಕಂತುಪಿತÀನು ತಾನೆಚ್ಚರಿಯ ||ಆಹಾ|| ಅಂತೆ ತÉೂೀರ್ದ ವಾಸುದೇವಾದಿ ಚತುರಾ- ಸಿರಿ ರೂಪಗಳ ಸಹಿತ 2 ಸಕಲ ರೂಪಗಳ ತನ್ನೊಳೈಕ್ಯಾ ಮಾಡಿ ಸಕಲ ಲಕುಮಿ ರೂಪಗಳಲಿ ಐಕ್ಯಾ ಇಟ್ಟು ಸಕಲ ಮರುತರ್ಗೆ ತನುಮುಖ್ಯಾ ಇತ್ತು ಸಕಲ ಕ್ರೀಡೆಯೊಳು ಸೌಖ್ಯಾ ||ಆಹಾ|| ಲಕುಮಿಯ ಸ್ತುತಿಗೆ ಒಲಿದು ತಾನೇತ- ನ್ನ ಕಡೆಗಣ್ಣಿಂದ ಪಂಚಜೀವರ ನೋಡಿದಾ 3 ಶುದ್ಧಸೃಷ್ಟಿಯೆಂಬುದೊಂದು ಪರಾ- ಧೀನ ವಿಶೇಷವು ಎಂದು ಮತ್ತೆ ಒಂದು ಮಿಶ್ರ ಸೃಷ್ಟಿಯೆಂದು-ಒಂದು ಕೇವಲ ಸೃಷ್ಟಿಯೆಂದೂ ||ಆಹಾ|| ತಮಾಂಧಕಾರವ ಪ್ರಾಶಿಸಿದ ವಿವರಾ 4 ತನ್ನೊಳೈಕ್ಯವಾಗಿದ್ದ ಮಹ ತಾನೆ ಪ್ರಕಟನಾಗಿ ನಿಂದ ಆಗ ಉನ್ನಂತ ಚತುರ ನಾಮದಿಂದ ||ಆಹಾ|| ಜನುಮ ಸ್ಥಿತಿ ಮೃತಿ ಮೋಕ್ಷದನಾಗಿರ್ಪ ಅನಿರುದ್ಧಾದಿ ಚತುರಮೂರ್ತಿಗಳ ವ್ಯಾಪಾರ5 ಪುರುಷನಾಮಕ ಪರಮಾತ್ಮ ತಾ ತರವರಿತು ಘನಮಾಡ್ದ ಮಹಿಮಾ ಸೃಷ್ಟಿ ತರತರ ಮಾಡ್ದ ಮಾಹಾತ್ಮ ||ಆಹಾ|| ಪ್ರಾಕೃತ ವೈಕೃತ ದೇವತೆ ಸುಮಾನ ಈ ಮೂರುವಿಧ ಸೃಷ್ಟಿಯಾನೆಸಗಿದ ಪರಿಯ ನೀ 6 ಮಹದಹಂಕಾರ ತತ್ವ ಪಂಚ ಮಹಭೂತಗಳು ಮನಸ್ತತ್ವ ಇನ್ನು ಮಹದಶೇಂದ್ರಯಗಳ ತತ್ವ ಮತ್ತೆ ಮಹತಾಮಿಶ್ರಾಂಧ ತಾಮಸ ತತ್ವ ||ಆಹಾ|| ಇಹುದು ಈ ಪರಿಯಲ್ಲಿ ಪ್ರಾಕೃತ ಸೃಷ್ಟಿಯು ಮುಹುರ್ಮುಹು ಇದನೆ ಆಲಿಸಿ ನಿನ್ನೊಳು 7 ವೈಕೃತದೋಳು ಸಕಲ ವೃಕ್ಷಾ ತಿರ್ಯಕ್ ಸಕಲ ಪ್ರಾಣಿಗಳ್ ಮನುಜ ಕಕ್ಷಾ ಎಲ್ಲ ವಿಕೃತ ಸೃಷ್ಟಿಯ ಮಾಡ್ದ ಅಧ್ಯಕ್ಷಾ ಇನ್ನು ಸುರಸಮಾನ ಸೃಷ್ಟಿಯ ಅಪೇಕ್ಷಾ ||ಆಹಾ|| ಸಕಲ ಸುರಾಸುರಪ್ಸರ ಗಂಧರ್ವರು ಪಿತೃಗಳು ಯಕ್ಷರಾಕ್ಷಸರ ಪರಿಯವರಾ 8 ಪುನ್ನಾಮ ವಿರಂಚಿ ಬ್ರಹ್ಮಾನು ಅಂದು ಘನ್ನವಾಸುದೇವ ತಾನು ಸೃಷ್ಟಿ ಯನ್ನ ಪ್ರಕಟಮಾಡಿದನು ಮುಂದೆ ಅನಿಲದೇವನು ಸಂಕರುಷಣನ ||ಆಹಾ|| ಅನಿಲನೆ ಸೂತ್ರನಾಮಕವಾಯುವಾಗಿಹ ಭಾವೀ ಬ್ರಹ್ಮನೀತನೆ ನಿತ್ಯಗುರುವೆಂದು 9 ಪ್ರದ್ಯುಮ್ನನಿಂದ ಸರಸ್ವತಿ ಇನ್ನು ಶ್ರಧ್ದಾನಾಮಕಳು ಭಾರತಿ ಸೃಷ್ಟಿ- ಯಾದ ವಿವರ ತಿಳಿಯೊ ಪೂರ್ತೀ ಇದೇ ಪ್ರದ್ಯುಮ್ನನ ಸೃಷ್ಟಿಯ ಕೀರ್ತಿ ||ಆಹಾ|| ಶ್ರದ್ಧಾದೇವಿಯೊಳು ಸೂತ್ರನ ವೀರ್ಯದಿಂ- ದುದ್ಭವಿಸಿದ ಜೀವ ಕಾಲನಾಮಕನು 10 ಈರ ಬ್ರಹ್ಮರಸೃಷ್ಟಿ ಚರಿತ್ರೆ ಚಿತ್ರ ಗಾತ್ರ ತರವೆಲ್ಲ ವಿಚಿತ್ರ ||ಆಹಾ|| ವಿರಂಚಿ ಬ್ರಹ್ಮ ಸರಸ್ವತಿಯಿಂದ ವೈ- ಕಾರಿಕ ರುದ್ರ ಶೇಷಗರುಡರ ನೀ 11 ಸೂತ್ರ ಶ್ರದ್ಧಾ ದೇವೇರಿಂದ ಪವಿ ತ್ರತೈಜಸ ರುದ್ರ ಬಂದಾ ಪ- ಪುತ್ರರಾಗಿಹರತಿ ಚೆಂದಾ ||ಆಹಾ|| ಪುತ್ರನಾದ ತಾಮಸ ರುದ್ರ ಶೇಷಗೆ12 ಪ್ರದ್ಯುಮ್ನ ಸೂಕ್ಷಶರೀರ ಕೊಟ್ಟು ಉದ್ಧಾರ ಮಾಡಿದ ಜೀವರ ಅನಿ ರುದ್ಧನ ಕೈಲಿ ಕೂಡಲವರಾ ಅನಿ ರುಧ್ದನು ಮಾಡ್ದ ವಿಸ್ತಾರಾ ||ಆಹಾ|| ತದಪೇಕ್ಷ ಮೂಲಪ್ರಕೃತಿಯಿಂದ ಗುಣತ್ರಿ- ವಿಧ ಕೊಂಡು ಮಹತ್ತತ್ವ ನಿರ್ಮಿಸಿದಾ 13 ಮಹತ್ತತ್ವದಿಂದಹಂಕಾರ ತತÀ್ತ ್ವ ಮಹದಹಂಕಾರವು ಮೂರುತರ ಇದ- ರೊಳು ಬ್ರಹ್ಮವೈಕಾರಿಕ ಶರೀರವಾಗಿ ಪರಿ ಈ ರೂಪ ವಿವರಾ ||ಆಹಾ|| ಅಹುದು ತೈಜಸದಿಂದ ಶೇಷನ ದೇಹವು ತಾಮಸದಿಂದಲಿ ರುದ್ರ ತಾನಾದನು 14 ಎರಡನೆಯ ಸಾರಿ ಪ್ರದ್ಯುಮ್ನ ಅರ್ಧ ನಾರೀ ರೂಪನಾಗಿ ಇನ್ನು ಎಡದಿ ಸ್ರೀರೂಪ ಜೀವರುಗಳನ್ನು ಬಲದಿ ಪುರುಷ ಜೀವರೆಲ್ಲರನ್ನು ||ಆಹಾ|| ಧರಿಸಿ ಅವರ ದೇಹಗಳನಿತ್ತು ಅ ನಿರುದ್ಧನ ಕೈಯೊಳಿತ್ತ ಪರಿಯನ್ನು 15 ಅದರಂತೆ ಅನಿರುಧ್ದದೇವ ತಾ ನದಕಿಂತ ಸ್ಥೂಲದೇಹವ ಮೂಲ ಪ್ರಕೃತಿಯಿಂದ ಗುಣವಾ ಕೊಂಡು ಅದುಭುತ ಮಹತ್ತತ್ವತೋರ್ವ ||ಆಹಾ|| ಅದುಭುತ ಮಹತ್ತತ್ವದಿಂದಹಂಕಾರ ಉದಿಸಿದ ಪರಿಯನು ಮುದದಿಂದಲಿ ಅರಿತು 16 ಪರಮ ಕರುಣೆಯಲೀ ರುದ್ರನು ಅರ್ಧ ನಾರೀರೂಪ ತಾಳಿ ಇನ್ನೂ ಎಡದಿ ಸುರರಸ್ತ್ರೀಗಳನ್ನು ಬಲದೀ ಸುರಪುರಷರನ್ನೂ ||ಆಹಾ|| ಭರದಿ ಪುಟ್ಟಿಸಿ ಪ್ರದ್ಯುಮ್ನನ ಕೈಲಿತ್ತ ಪರಿಪರಿ ಸೃಷ್ಟಿಯ ಕ್ರಮವರಿತು ನೀನೀಗ 17 ಅನಿರುಧ್ದ ದೇವನು ಜೀವರ ಸ್ಥೂಲ ತನುವ ಕೊಟ್ಟು ಪಾಲಿಪ ತದಭಿ- ಮಾನಿ ಶ್ರೀ ಭೂ ದುರ್ಗಾ ಮಾಡಿ ತಾನೆಲ್ಲರ ಸತತ ಪೊರೆವಾ ||ಆಹಾ|| ಮಹತ್ತತ್ತಾ ್ವಭಿಮಾನಿಗಳೆನಿಸಿದ ದೇವನ18 ಅಹಂಕಾರ ತತ್ತಾ ್ವಭಿಮಾನಿ ಅದಕೆ ಅಹಿಗರುಡರು ಅಭಿಮಾನಿ ಇನ್ನು ಅನಿರುದ್ಧಾದಿ ರೂಪತ್ರಯವು ಇದಕೆ ಇನ್ನು ನಿಯಾಮಕನು ಎನ್ನು ||ಆಹಾ|| ಮಹತ್ತತ್ವಾ ನಿಯಾಮಕ ವಾಸುದೇವನಿಂದ- ನವರತ ಈ ಸೂಕ್ಷ್ಮಪ್ರಮೇಯ ಗ್ರಹಿಸಿ ನೀನು 19 ಮನಸ್ತತ್ವಾಭಿಮಾನಿ ಸುರರಾ ಸೃಷ್ಟಿ ಯನ್ನೆ ವೈಕಾರಿಕದಿಂದಲವರಾ ಮಾಡಿ ಘನ್ನ ತೈಜಸದಿಂದಲಿಂದ್ರಿಯ ತತ್ಪವೆ- ಲ್ಲನೆಸಗಿದಂಥ ವಿವರಾ ||ಆಹಾ|| ಉನ್ನಂತ ತನ್ಮಾತ್ರ ಭೂತಪಂಚಕಗಳ ತಾಮಸದಿಂದಲಿ ಉದಿಸಿದ ಪರಿಯನು 20 ಯುಕ್ತಸ್ಥಾನಾದಿಗಳನ್ನು ಕೊಡೆ ಉತ್ತಮೋತ್ತಮನನ್ನು ತಾವು ಸುತ್ತಿ ಸ್ತುತಿಸಲು ಇನ್ನೂ ||ಆಹಾ|| ತತ್ವದೇವತೆಗಳ ಭಕ್ತಿಗೆ ಒಲಿದು ತತ್ವರೆಲ್ಲರ ತೋರೆ ರೂಪದಿ ಧರಿಸಿಟ್ಟನು21 ರಜಸುವರ್ಣಾತ್ಮಕವಾದ ಘನ ನಿಜ ಐವತ್ತು ಕೋಟಿ ಗಾವುದ ಉಳ್ಳ ಅಜಾಂಡವನ್ನು ತಾ ತೋರ್ದ ತನ್ನ ನಿಜಪತ್ನಿ ಉದರದಿ ಮಾಡ್ದ ||ಆಹಾ|| ಸೃಜಿಸಿ ಬ್ರಹ್ಮಾಂಡದಿ ತತ್ವಗಳೊಡಗೂಡಿ ನಿಜವಾಗಿ ತಾನೊಳ ಪೊಕ್ಕ ವಿರಾಟನ್ನ 22 ಪಾತಾಳಾದಿ ಸಪ್ತಲೋಕ ಕಡೆ ಪರಿಯಂತ ರೂಪ ತಾ ತಾಳಿದ ಆದ್ಯಂತ ಇಂತು ನಿರತನು ಸಚ್ಚಿದಾನಂದ ||ಆಹಾ|| ಇಂತು ವಿರಾಟ ತನ್ನಂತರದೊಳು ತತ್ವರೆಲ್ಲರ ತತ್‍ಸ್ಥಳದೊಳಿಟ್ಟು ಪೊರೆದನ್ನ23 ಸಕಲ ಉದಕ ಶುಷ್ಕದಿಂದ ಇರಲು ತಕ್ಕ ಮುಕ್ತಾಮುಕ್ತರ ಭೇದದಿಂದ ತಕ್ಕ ಸ್ಥಾನವೆ ಕಲ್ಪಿಸಿದ ಚೆಂದಾ ||ಆಹಾ|| ಅಕಳಂಕ ಪುನ್ನಾಮಕನು ಧಾಮತ್ರಯ ಮೊದಲಾದ ನರಕ ಪಂಚಕಗಳ ಮಾಡಿದ 24 ಉದಕ ಶೋಷಣೆಯನ್ನು ಮಾಡಿ ಇನ್ನುಮ- ಹದಹಂಕಾರವ ಕೂಡಿ ಭೂತ ಪಂಚಕವ ಮಿಳನ ಮಾಡಿ ಆಗ ಹದಿನಾಲ್ಕೂದಳಾತ್ಮಕ ಪದ್ಮತೋರಿ ||ಆಹಾ|| ಅದುಭುತ ಪದುಮದಿ ಉದಿಸಿದ ಬ್ರಹ್ಮನು ಚತುರ ನಾಲ್ಕುದಿಕ್ಕು ಮುದದಿಂದ ನೋಡಿದ 25 ಪದುಮದಲಿ ಚತುರಾಸ್ಯನಾಗಿ ಅದು ಭುತÀ ಮಹಿಮೆ ನೋಡುತ ತಾನೆ ಮುದದಿಂದ ಮೊಗತಿರುಗಿಸುತಾ ಅದ ಅದುಭುತ ಶಬ್ದಕೇಳುತ್ತಾ ||ಆಹಾ|| ತದಪೇಕ್ಷ ತಪವನಾಚರಿಸಿ ನಾಳದಿ ಬಂದು ಪದುಮನಾಭನು ತಾನು ಮುದದಿಂದ ನೋಡಿದ 26 ಪರಮಪುರುಷ ಉಕ್ತಿ ಲಾಲಿಸಿ ಮೆಚ್ಚಿ ವರವ ಕೊಟ್ಟು ಪಾಲಿಸಿ ಸೃಷ್ಟಿ ನಿರುತ ಮಾಡಲು ತಾ ಬೆಸಸೀ ತಾನು ಅವನಂತರದೊಳು ನೆಲೆಸೀ ||ಆಹಾ|| ಹೊರಗೂ ಒಳಗೂ ನಿಂತು ಸೃಷ್ಟಿಲೀಲೆಯ ತೋರ್ವ ಉರಗಾದ್ರಿವಾಸವಿಠಲ ವೇಂಕಟೇಶನ್ನ 27
--------------
ಉರಗಾದ್ರಿವಾಸವಿಠಲದಾಸರು
ನಂದನಂದನ ಪದ್ಮಾನಂದನ ವಂದ್ಯನೇ| ತಂದೆ ಮಹಿಪತಿಸುತ ಪ್ರಭುವೇ ಮುಕುಂದ ಕೃಷ್ಣ ಪ ಸಿರಿಯಾ ಸೌಖ್ಯ ದಿಂದುಬ್ಬಿ ಮದದಿಂದ| ಸರಿಯನಗಾರು ಇಲ್ಲೆಂಬ ತಾಮಸದಿಂದ| ಮರದೆನೋ ಹರಿನಿಮ್ಮಾ ಸ್ಮರಣೆಯಾ ಮರವಿಂದ| ತಿರುಗಿ ದಣಿದೆ ನಾನು ನಾನಾಯೋನಿಗಳಿಂದ| ತರಹರಿಸಲಾರೆ ತಾಪತ್ರಯದುಃಖಗಳಿಂದ| ಶಿರಿಕೃಷ್ಣ ಸಲಹೆನ್ನ ಪರಮ ಕರುಣದಿ|1 ಮುನ್ನ ಮಾಡಿದಪರಾಧ ಸಕಲವ ನೀನು ಕ್ಷಮೆಯನುಮಾಡಿ ಚಿನ್ನ ಕಿಂಕರನೆಂದು ದಯದಲಿ ಅಭಯಕರವನು ನೀಡಿ ನಿನ್ನ ಸ್ಮರಣೆಯಕೊಟ್ಟು ಕರುಣ ಕಟಾಕ್ಷದಿಂದಲಿ ನೋಡಿ ಚಿನ್ನ ಶ್ರೀಕೃಷ್ಣ ಭವದಿಂದುದ್ಧರಿಸಯ್ಯಾ ತಾರಿಸಯ್ಯಾ ನೀನು2 ಪತಿತ ಪಾವನ ನೆಂಬಾಬಿರುದು ಸಾರುತಿದೆ ಗತಿಗೆಟ್ಟ ಅಜಮಿಳನ ತಾರಿಸಲಿಲ್ಲವೇ ಪಾಷಾಣ ಉದ್ದರಿಸಲಿಲ್ಲವೇ ಕ್ಷಿತಿಯೊಳೆನ್ನ ತಾರಿಸುವದೊಂದರಿದೇ ಶ್ರೀಕೃಷ್ಣಾ3 ಕರಿರಾಜನಂದದಿ ಹರಿತವಸ್ಮರಣೆ ಮಾಡಲರಿಯೇ ಶರಣ ಪ್ರಲ್ಹಾದನಂತೆ ಕರೆಯ ಬರಿಯೇ ನರೆನಂತೆ ನಾನಿನ್ನ ವಲಿಸಿಕೊಳ್ಳಲರಿಯೇ ತರಳ ಧ್ರುವನಂತೆ ಧ್ಯಾನಿಸಲರಿಯೇ ಶಿರಿಕೃಷ್ಣಾ ಗತಿಯಂಬದುವಿನಾ ಮತ್ತೊಂದರಿಯೇ 4 ನಿನ್ನ ನಾಮವನು ಕೊಂಡಾಡುವೆ ಪೊಗಳುವೆ ಚನ್ನಾಗ್ಯನುದಿನದಲನವರತಾ ತನ್ನಯಕರುವಿಗೆ ಕರುಣಿಪಗೋಪಂತೆ ಎನ್ನ ನೀಸಲಹುದು ಶಿರಿಕೃಷ್ಣರೇಯಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಂಚಾಂಗವನು ಪಾದಪದ್ಮಕೊಪ್ಪಿಸುವೆಪಂಚೇದ್ರಿಯಂಗಳನು ಪಾಲಿಸುವ ವಿಭುವೇ ಪಮೂರು ಗುಣಯುಕ್ತದಲಿ ಮೂಡುವಿಂದ್ರಿಯವೈದುಮೂರು ಮಡಿಯೆನೆ ಪಕ್ಷ ಮೊದಲು ಬಹುದುತೋರೆ ಸತ್ಫಲ ಶುಕ್ಲ ತಾಮಸದಿ ಕೃಷ್ಣವದುಈ ರೀತಿುಂ ಪಕ್ಷವೆರಡೆ ತಿಥಿಯಹುದೂ 1ಪ್ರಕೃತಿಯಹಂಕಾರಗಳು ಪಂಚ ಮಹಭೂತಗಳುವಿಕೃತಿುಂದಿವೆಯೇಳು ವಾರಂಗಳುಸುಕೃತ ದುಷ್ಕøತಗಳಿಗೆ ಸದ್ಮವಹ ತತ್ವಗಳುಪ್ರಕೃತಿಗುಣ ಮೂರು ಸಹ ಪೊಳೆವ ತಾರೆಗಳು 2ಈ ತತ್ವ ಕರ್ಮಗಳಿಗೆಡೆಯಾಗೆ ಯೋಗಗಳುವೋತು ತಿರುಗುವ ಕರಣವವು ಮನಗಳುಪ್ರೀತಿುಂ ತಿರುಪತಿಯ ಪತಿ ನೀನು ನಿರ್ಮಿಸಲುಸೋತಿಹವು ವೆಂಕಟನೆ ಸುಖದಿ ಲಾಲಿಸಲು 3ಓಂ ತೃಣೀಕೃತ ತೃಣೇವರ್ತಾಯ ನಮಃ
--------------
ತಿಮ್ಮಪ್ಪದಾಸರು
ರಕ್ಷಿಸೋಯನ್ನ ರಕ್ಷಿಸೋ ರಕ್ಷಿಸೋ ಬೇಗ ಉಪೇಕ್ಷಿಸದಲೆ ಜಲ ಜಾಕ್ಷ ಯನ್ನ ಮೊರೆ ಪಕ್ಷಿವಾಹನ ದೊರೆ ಪ ವಾರಿಧಿ ಮತ್ಸ್ಯಾವತಾರದಿ ಧರಿಸಿ ಪೊಕ್ಕು ಘೋರದೈತ್ಯನ ಕೊಂದು ಇನ್ನು ಚಾರು ಚರಿತ ವಿಸ್ತಾರ ಶೃತಿಗಳನು ವಾರಿಜಾಸನಗಿತ್ತ ವರದ ಜಗನ್ನಾಥ 1 ವರಕೂರ್ಮನಾಗಿ ಮಂದರಗಿರಿ ಪೊತ್ತು ನಿರ್ಜರರಿಗೆ ಸುಧೆಯನುಣಿಸಿ ಹರುಷದಲಿ ಕರುಣಿಸೋಯಂದರೆ ಕಠಿಣತ್ವ ವಹಿಸುವರೇ ಪರಮ ಪುರುಷ ನೀನು ಭಜಕರ ಕಾಮಧೇನು 2 ಧರೆಯ ಕದ್ದು ಒಯ್ದವನ ಕೋಪದಿ ಘನತರ ಕೋರೆಯಲಿ ಸೆಳದೆ ದನುಜಹರ ವರಾಹನಾದ ಶ್ರೀ ವತ್ಸಲಾಂಛನ ದೇವ ಶರಣಜನ ಮಂದಾರ ಶರನಿಧಿ ಗಂಭೀರ 3 ಗರುಡಗಮನ ಶ್ರೀ ಹರಿ ಸರ್ವೋತ್ತಮನೆಂಬ ತರುಳನ ತಂದೆಯ ತಾಮಸದಿ ಪರಿಪರಿಹಿಂಸೆಯ ಪಡಿಸುತಿರಲು ನರಹರಿ ರೂಪತೋರಿ ಪ್ರಹ್ಲಾದಗೊಲಿದ ಧೊರೆ 4 ಬಲಿಯದಾನವು ಬೇಡಿ ಬ್ರಹ್ಮಾಂಡ ಭಾಂಡವು ಅಳೆದು ಮೂರು ಪಾದದೊಳಗೆ ಮಾಡಿ ತುಳಿದವನ ಪಾತಾಳಕಿಳಿಯಲು ವಾಮನ ಬಲಭೇದಿ ಸನ್ನತ ಪಾಲಿಸೋ ಪ್ರಖ್ಯಾತ 5 ಪರಶುರಾಮ ಬಾಹು ಬಲದಿ ಸಕಲ ರಾಜರನೆಲ್ಲ ಗೆದ್ದು ಸುಸ್ಥಿರ ಮೂರ್ತಿ ಧುರದಿಂದ ಭೂಮಿ ಭೂಸುರರಿಗೇ ಧಾರೆಯ ನೆರೆದ ಶ್ರೀಮದನಂತ ನಿರತದಿ ಭಗವಂತ 6 ಅನಿಮಿಷರೊಡೆಯ ಶರಣು ಶರಣೆನುತ ರಾವಣನನು ಜನು ವಿಭೀಷಣನು ಬರಲು ಘನದಿ ಪಂಕ್ತಿ ಕಂಧರನ ಜಯಿಸಿ ಲಂ- ಇನಕುಲ ಪಾವನ 7 ಬಲದು:ಶಾಸನ ಸೀರಿಸೆಳಿಯೇ ದ್ರೌಪದಿ ಮನದಲಿ ಕಾಮಿತಾರ್ಥ ಫಲದಾಯಕ ಮಾನವ ರಕ್ಷಿಸೆಂದು ಸ್ತುತಿಸಲು ಪೊರೆದೆ ಹಲಧರಾನುಜ ಮುದದಿ 8 ಅಂಗಜ ಪಿತ ತ್ರಿಪುರಾಂಗನೆಯರ ವ್ರತ ಭಂಗಮಾಡಿದೆ ಹಿಂಗದಲೇ ಮಂಗಳಮಹಿಮ ಕೃಪಾಂಗ ಗಂಗೆಯನು ಪಾದ 9 ಚಲುವ ಕುದುರೆಯನೇರಿ ಕಲ್ಕಿಕಯ್ಯೊಳು ಖಂಡೆಯ ಪಿಡಿದು ಝಳಪಿಸುತ ಕಲುಷಾತ್ಮರೆಲ್ಲರ ಖಂಡಿಸಿ ಧರ್ಮವು ಪರಿಪಾಲನೆಮಾಳ್ಪ ಶ್ರೀ ಭೂದುರ್ಗಾಧಿಪಾ 10 ಪಾವನಚರಿತ ಕೃಪಾವನ ರಾಶಿ ಶ್ರೀ ದೇವಕೀಸುತ `ಹೆನ್ನೆಪುರೀಶ’ ದೀನ ದೇವೋತ್ತಮ ದೀನ ಬಾಂಧವ ವೃಂದಾವನ ನಿಲಯಾನಂದ ಸುಂದರಕಾಯಾ 11
--------------
ಹೆನ್ನೆರಂಗದಾಸರು
ದಾಸರ ನಿಂದಿಸಬೇಡಲೊ ಪ್ರಾಣಿ -ಹರಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ದಾಸರ ನಿಂದಿಸಬೇಡ ಪ.ಮೋಸವಾಯಿತೊ ಮನದೊಳು ಗಾಢ |ಲೇಸಾಗಿ ಇದ ತಿಳಕೊ ಮೂಢ ಅಪರಾಮನ ನಿಂದಿಸಿ ರಾವಣ ಕೆಟ್ಟ |ತಮ್ಮಗಾಯಿತು ಸ್ಥಿರಪಟ್ಟ ||ತಾಮಸದಿಂದಲಿ ಕೌರವ ಕೆಟ್ಟ |ಧರ್ಮಗೆ ರಾಜ್ಯವ ಬಿಟ್ಟ 1ಮನದೊಳಗಿನ ವಿಷಯದ ವಿಷ ಬಿಟ್ಟು |ಅನುದಿನ ಹರಿಯ ನೆನೆಯಿರಣ್ಣ ||ಸನಕಾದಿವಂದ್ಯನ ಪೂಜಿಸಿದರೆ ನೀವ್ |ಘನಪದವಿಯ ಕಾಣುವಿರಣ್ಣ2ಕನಕದಾಸನು ಕಬ್ಬಲಿಗನು ಎಂದು |ಅಣಕಿಸಿ ನುಡಿಬೇಡಿರಣ್ಣ |ಜನರಂತೆ ನರನಲ್ಲ ತುಂಬುರನೀತನು |ಜನಕಜೆರಮಣನ ಪಾದಸೇವಕನು 3ಉಡಿಯ ಒಳಗೆ ಕಿಡಿ ಬಿದ್ದರೆ ಅದು ತಾ |ಸುಡದನಕಾ ಬಿಡದಣ್ಣ ||ಬಡವನಾಗಿ ಕೆಡುಬುದ್ದಿಯ ಬಿಟ್ಟು |ನಡೆಯ ಕಂಡು ಪಡೆದುಕೊಳ್ಳಣ್ಣ 4ದೇವಕಿ ಸೆರೆಯನು ಬಿಡಿಸಿದ ದೇವನ |ಸೇವಕರು ನರರೆ ನಿಮಗವರು ||ಭಾವಜನಯ್ಯನ ಪದವ ನೆನೆದರೆ |ಪಾವನ ಮಾಡುವ ಪುರಂದರವಿಠಲ 5
--------------
ಪುರಂದರದಾಸರು
ಸಿದ್ಧಿ ಗಣವರ ಬುದ್ಧಿ ನೀಡೆನ್ನನುದ್ಧಾರಮಾಡು ಬೇಗನೆಬದ್ಧಗುಣಗಳ ತಿದ್ದಿ ಎನಗೆ ಶುದ್ಧಮತಿ ನೀಡು ಬೇಗನೆ ಪವಿಮಲಮನ ಸನಮಿತ ತವಪಾದಕಮಲ ಭಜಿಸುವೆನಭನೆವಿಮಲವಿದ್ಯವ ಕ್ರಮದಿಂ ಪಾಲಿಸು ಹಿಮಜೆಸುತ ಕರಿವರದನೆ 1ಸೋಮಶೇಖರ ಪ್ರೇಮದ ಸುಕುಮಾರ ಸುಮನಸಚಂದ್ರನೆಕಾಮಿತಜನ ಶಾಮಪೂರಿತ ಕೋಮಲಗುಣಸಾಂದ್ರನೆ 2ಕೋಮಲಾಂಗನೆ ಕರ್ಣಕುಂಡಲ ಹೇಮಕಂಕಣಧಾರನೆತಾಮಸದಿ ಗಹಗಹಿಸಿದಾ ಮಹ ಸೋಮನಿಗೆ ಶಾಪವಿತ್ತನೆ 3ಪಾರಬುಧ್ಧಿಲಿ ಸಾರವಿದ್ಯದಧಿಕಾರ ಕುಶಲದಿ ಪಡೆದನೆಗೌರಿಶಂಕರರ್ವಾದ ನಿವಾರಿಸಿದ ಮಹಚದುರನೆ 4ತ್ರಿಕ್ಷೆಯರೊಡಗೂಡಿಭುವನರಥಮಾಡಿಮಣಿಯದ್ಹೋಗ್ವುದು ಕಂಡನೆಘನಕೋಪಾಗ್ರಾದಿ ರಥವನಿಲ್ಲಿಸಿ ತ್ರಿಣಯರಿಂ ಪೂಜೆಗೊಂಡನೆ5ವಿಘ್ನನಾಯಕ ಪ್ರಾಜÕಮೂರುತಿ ಸೂಜÕ ಜನರಾರಾಧನೆಸಂಜೆÕದ್ಹೊಗಳುರ್ವಿಘ್ನ ಛೇದಿಸಿಪ್ರಾಜÕಪದವೀವ ಪ್ರೌಢನೆ6ವರುಷಕೊಂದುಮಾಸಧರೆಯೊಳಿಳಿಯುತಪರಮಪೂಜೆಯ ಕೈಕೊಂಬನೆನರರ ದುರ್ಮತಿ ತರಿದು ಸುಗತಿಯ ನಿರುತಪಥದೋರ್ವ ಧುರೀಣನೆ 7ತಂದೆ ನಿನ್ನನು ಹೊಂದಿ ಭಜಿಪರ ಮಂದಮತಿನಿವಾರನೆಬಂದ ದುರ್ಭವದಂದುಗಂಗಳ ಚಂದದಿಂ ಪರಿಹಾರನೆ 8ಶರಣು ಶರಣು ಶರಣು ಗಣವರ ಶರಣುಕರುಣಾಭರಣನೆಸಿರಿಯರಾಮನ ಚರಿತಪೊಗಳುವ ಪರಮಮತಿದೇ ಗಣಾರ್ಯನೆ 9
--------------
ರಾಮದಾಸರು