ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಡೆಯಿಲ್ಲದೀ ಭವಾಂಬುಧಿಯ ದಾಂಟುವೊಡೆ ಜಗ ದೊಡೆಯ ಶ್ರೀಕೃಷ್ಣನೊಬ್ಬನ ನಂಬು ಮರುಳೆ ಪ ನೆಲೆಯಾದುದಿಲ್ಲ ತಾಯುದರ ಬಾಲತ್ವವಿದು ನೆಲೆಯಾದುದಿಲ್ಲ ಜವ್ವನವೆಂಬುದೂ ನೆಲೆಯಾದುದಿಲ್ಲ ಜರೆಯು ಚಕ್ಷುರಾಜಿಗಳು ಒಡಲು ನಿನಗೆ ಮರುಳೆ 1 ಹುಟ್ಟಿದನಳಿದನೇಕೆ ಜೀವ ನಿಜ ಜನನಿಯಲಿ ಹೊಟ್ಟೆಯಲಿ ಹೊತ್ತು ಹೆತ್ತುದಕೈಸಲೆ ಕೊಟ್ಟುಕೊಂಡುದಕೆ ಪಡೆದಿತ್ತು ಸುತರೆಂದೆನಿಸಿ ನೆಟ್ಟನೈದುವರು ನಿನಗೇನಹರು ಮರುಳೆ 2 ನೀನಳಿದ ಬಳಿದ ಸತಿಸುತರಿಗೇನ್ಹೇಳುವೆ ಏನಹರು ನಿನಗವರು ಮೃತವಾದ ಬಳಿಕಾ ದೀನನಹೆ ಬಯಲಮಮತೆಗಳೆಂದು ತಿಳಿದುಕೊ ನೀನೆತ್ತಲವರೆತ್ತಲಿಹರವರು ಮರುಳೆ 3 ಮಗನಾವ ತಂದೆಯಾವನು ಜೀವ ಜೀವರಿಗೆ ಮಗನು ತಂದೆಯು ಕರ್ಮವಾಸನೆಗಳಾ ಬಗೆಯಿಂದಲೀಶ್ವರನು ಜೀವಕೋಟಿಗಳ ಸೃಜಿಸೆ ಜಗದೊಳಾಡುವರು ನಿನಗೇನಹರು ಮರುಳೆ 4 ಅತಿಭಕ್ತನೆಂದು ವೈಕುಂಠ ವೇಲಾಪುರದ ಪತಿ ಅರ್ಜುನಗೆ ನಿರೂಪಿಸಿದರ್ಥವ ಮತಿಗೆಟ್ಟು ಬಿಟ್ಟು ನಾನಾ ದೈವದಡಿಗಳಿಗಾ ನತನಾಗಿ ಸಂಸಾರಿಯ[ಹೆ] ಇದೇಕೆ ಮರುಳೆ 5
--------------
ಬೇಲೂರು ವೈಕುಂಠದಾಸರು
ನೊಂದೆ ನಾ ಹರಿಯೆನ್ನದೆ ಪ ವೈರಿ ಷಡ್ವರ್ಗದಾಟಗಳಿಂದ ನೊಂದೆ ನಾ ಹರಿಯೆನ್ನದೆ ಅ ಮಾಸ ತಾಯುದರದಲಿಸಂದೇಹವಿಲ್ಲ ನವಮಾಸ ಮಲ ಮೂತ್ರದೊಳುಒಂದಾಗಿ ನಿಂದು ಕುದಿಕುದಿದು ಹುಟ್ಟಿಬಂದೆ ಎಂಬತ್ತು ನಾಲುಕು ಲಕ್ಷ ಯೋನಿಯೊಳುನೊಂದೆ ಮುನ್ನೂರ ಅರವತ್ತು ಬೇನೆಗಳಿಂದಒಂದು ಕ್ಷಣವೂ ಯಮನ ಬಾಧೆ ತಾಳಲಾರೆನುಹಿಂದೆಗೆಯದಿರು ಇಂಬಿತ್ತು ಕಾಯೊ ಮುರಾರಿ 1 ಎಲುವುಗಳ ಗಳ ಮಾಡಿ ಬಲು ನರಂಗಳ ಬಿಗಿದುಚೆಲುವ ತೊಗಲಂ ಪೊದಿಸಿ ಮಜ್ಜೆ ಮಾಂಸವ ತುಂಬಿಹೊಲೆ ಗೂಡಿನೊಳು ಪೊಗಿಸಿ ತಲೆ ಹುಳಕ ನಾಯಂತೆಅಲೆದು ಮನೆಮನೆಯೆದುರು ಉಚ್ಚಿಷ್ಟವನು ತಿಂದುಕಳವು ಹಾದರ ಪಂಚಪಾತಕಂಗಳ ಮಾಡಿನೆಲೆಯಿಲ್ಲದಧಿಕತರ ನರಕದೊಳಗಾಳ್ದೆನೈಒಲಿದು ಬಂದು ರಕ್ಷಿಸು ನಾಗವೈರಿ ವಾಹನನೆನಳಿನ ಲೋಚನನೆ ನೀ ಎನ್ನ ಕೈ ಬಿಡದೆ 2 ಹುಟ್ಟುವಾಗಲೆ ಜಾತಕರ್ಮ ಷೋಡಶವೆಂಬಕಟ್ಟಳೆಯ ದಿವಸದಲಿ ನಂಟರಿಷ್ಟರು ಕೂಡಿಕಟ್ಟಿ ಮುಂಜಿಯ, ಹರುಷದಲಿ ಮದುವೆ ಮಾಡಿ ಉಂ-ಡುಟ್ಟು ಹಾಡಿ ಹರಸಿದರು ನೂರ್ಕಾಲ ಬದುಕೆಂದುಬಿಟ್ಟು ಪ್ರಾಣಂ ಪೋಗೆ ಪೆಣನೆಂದು ಮೂಲೆಯೊಳುಕಟ್ಟಿ ಕುಳ್ಳಿರಿಸಿ ಹೊಟ್ಟೆಯ ಹೊಯ್ದುಕೊಂಡಳುತಸುಟ್ಟು ಸುಡುಗಾಡಿನಲಿ ಪಿಂಡಗಳನಿಕ್ಕಿ ಬಲುಕಟ್ಟಳೆಯ ಕಾಣಿಸಿದರಯ್ಯ ಹರಿಯೆ 3 ಹಲವು ಜನುಮದಿ ತಾಯಿ ಎನಗಿತ್ತ ಮೊಲೆಹಾಲುನಲಿನಲಿದು ಉಂಬಾಗ ನೆಲಕೆ ಬಿದ್ದುದ ಕೂಡಿಅಳೆದು ನೋಡಿದರೆ ಕ್ಷೀರಾಂಬುಧಿಗೆ ಎರಡು ಮಡಿಹಲವಾರು ಸಲ ಅತ್ತ ಅಶ್ರುಜಲವನು ಕೂಡಿಅಳೆದು ನೋಡಿದರೆ ಲವಣಾರ್ಣವಕೆ ಮೂರು ಮಡಿಎಲುವುಗಳ ಕೂಡಿದರೆ ಮೇರುವಿಗೆ ನಾಲ್ಕು ಮಡಿಸುಲಿದು ಚರ್ಮವ ಹಾಸಿದರೆ ಧರೆಗೆ ಐದು ಮಡಿನೆಲೆ ಯಾವುದೀ ದೇಹಕೆ ನರಹರಿಯೆ4 ಸತಿ ಇಂದು ಕಾಯ್ವರದಾರುದಂದುಗವನಿದನೆಲ್ಲ ನೀಬಲ್ಲೆ ನಾನರಿಯೆತಂದೆ ನೆಲೆಯಾದಿಕೇಶವನೆ ನಿನ್ನಯ ಪಾದದ್ವಂದ್ವವನು ಎಂದಿಗೂ ಬಿಡೆನು ಬಿಡೆನೊ 5
--------------
ಕನಕದಾಸ