ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

2. ನಮ್ಮಾಳ್ವಾರ್ ವಕುಳಾಭರಣನೆ ಶರಣೆಂಬೆ ಸಕಲ ಬಂಧು ನೀ ಸಲಹೆಂಬ ಪ ನಿಖಿಲ ಲೋಕಿಗರ ಶಿಶುನಡೆನೂಕಿದೆ ಅಕಳಂಕನೆ ಶಠಗೋಪ ನೀನಾದೆ ಅ.ಪ ನಾಥನಾಯಕಿಯೆ ಕಾರಿಕುಮಾರ ಪೂತನೆ ಸೇನಾಪತಿಯವತಾರ ಪಾತಕಹರ ತಾಮ್ರಪರ್ಣಿತೀರ ಕೀರ್ತಿ ಪಡೆದ ಸುರಪೂಜ್ಯನುದಾರ 1 ಪದುಮ ಪವಿತ್ರನಂದದ ಪ್ರಭೆನೋಡಿ ಮಧುರಕವಿಯು ಬರೆ ಮುದಗೂಡಿ ಅದುಭುತ ಮಂತ್ರವನೊರೆದೆ ಹರಿಯಪಾಡಿ ಸದಮಲ ಸೇವಕನಲಿ ಮನೆಮಾಡಿ2 ಹದಿನಾರು ವರುಷಾಹಾರವಿಲ್ಲದೆ ಬದಿರಾಂಧ ಮೂಕನಾದ ಮುನಿ ವಿಧಿ ಪಿತನದುಭುತಧ್ಯಾನ ಮೈಗೂಡಿ ಸುಧೀಂದ್ರ ಶುಭದ ಅಮೃತಪದ 3 ನಾಥಗೊಲಿದು ತಿರುವಾಯ್ಮೊಳಿಯನು ಪ್ರೀತಿಯೊಳುಪದೇಶವ ಗೈದು ಪಾತಕ ಹರಿಸುತ ಪರಿಸರ ಪೊರೆಯುತ ದಾತಾರಂ ಸುಖದಾತಾರಂ 4 ಮಧುರಾಪೀಠವು ನೀರೊಳು ಮುಳುಗಲು ವಿಧಿಯಿಲ್ಲದೆ ಪಂಡಿತರೊರಲಿ ಅಧಿಕರಿಸುತ ತವ ಪದಗಳಿಗೆರಗೆ ಮಧುರವಾಣಿಯಿಂ ಹಾಡಿದ 5 ಹತ್ತಾಳ್ವಾರರ ಶರೀರವಾಗಿ ಪೆತ್ತಿಹ ಪರಮೌದಾರ ಮುನಿ ಎತ್ತಲು ಹರಿಗುರು ಸರ್ವೋತ್ತಮರೆನು ತುತ್ತುಮಪದವಿಯ ಮಾರ್ಗವತೋರಿದ6 ಆದಿವೈಷ್ಣವ ದೀಕ್ಷಾಚಾರ್ಯ ವೇದವ ದ್ರಾವಿಡದೊಳು ಪೇಳ್ದೆ ಶ್ರೀಧರಸನ್ನಿಧಿಯೊಳಗಿದ ಪಠಿಸಲು ಸಾದರದೊಲಿವಂ ಜಾಜೀಶಂ 7
--------------
ಶಾಮಶರ್ಮರು
3. ಎಲ್ಲ ಆಳ್ವಾರರು ಆಳ್ವಾರ್ ತಿರುವಡಿಗಳೆ ಶರಣೆನ್ನುತ ಬಾಳ್ವರು ಭಜಿಪುದು ಬಕುತಿಯಲಿ ಪ ಕೇಳ್ವರು ಕಥೆಗಳ ಮಮತೆಯಿಂದಲಿ ಮಾಳ್ವರು ಮನೆ ವೈಕುಂಠದಲಿ ಅ.ಪ ಮೊದಲಿನ ಮೂವರು ಮಾಧವನೆನುತ್ತ ಪದುಮನಾಭನೊಡನಾಡಿದರು ಅದುಭುತ ಮಹಿಮಾ ತಿರುಮೊಳಿಶಯ್ಯರ ಮುದದಿಂ ಶಿವ ಕೊಂಡಾಡಿದನು 1 ಮಧುರಕವಿಗಳು ನಮ್ಮಾಳ್ವಾರರ ಪದಗಳ ಪೂಜಿಸಿ ಹಾಡಿದರು ತದುಪರಿ ತಿರುವಾಯ್ಮೊಳಿಯನು ಅವರಿಂ ದಧಿಕರಿಸುತ ಹಿತವೆಸಗಿದರು 2 ಪೆರಿಯಾಳ್ವಾರರು ಹರಿಯನು ಪಾಡುತ ವರವೇದಕೆ ತಾವ್ ಮೊದಲಿಗರು ಪರಮಪಾವನೆ ಗೋದಾದೇವಿಯು ದೊರೆ ಶ್ರೀರಂಗನ ಕೈವಿಡಿದಳ್ 3 ಪೆರಿಯ ತಿರುಮೊಳಿಯ ತಿರುಮಂಗೈಯ್ಯರು ತಿರುಪ್ಪಾಣ ವಿಪ್ರನಾರಾಯಣ ತಿರುವನಂತಪುರದ ಕುಲಶೇಖರರು ಸಿರಿಯರಸನ ತೇರ ಮಾಡಿದರು 4 ಪರಮಾತ್ಮನ ಸನ್ನಿಧಿಯಿಂದಲ್ಲಿಗೆ ತೆರಳುತ ಮಹಿಮೆಯ ತೋರಿದರು ನಿರುತ ದೇವರೆಡೆ ಪೂಜೆಗೊಂಬರು ವರಜಾಜೀಶನ ಸೇವಕರು 5
--------------
ಶಾಮಶರ್ಮರು