ಒಟ್ಟು 14 ಕಡೆಗಳಲ್ಲಿ , 9 ದಾಸರು , 13 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋವಿಂದ ನಿನ್ನಾನಂದದಲ್ಲಿಡೋ ಗೋವಿಂದ ಪ ಗೋವಿಂದ ಹೃದಯಾರವಿಂದದಲ್ಲಿ ಇಂದೂ ಮುಂದೂ ಚರಣಾರವಿಂದ ತೋರೊ ಅ.ಪ ಬೆಟ್ಟದ ದರುಶನ ಲಾಭವು ಕಷ್ಟ ಪಟ್ಟರು ದೊರೆಯಲಸಾಧ್ಯವು ನೋಡೆ ಸುಟ್ಟು ಹೋಗುವುದಘರಾಶಿಯು ಪಟ್ಟ ಶ್ರಮವು ಇಷ್ಟಾರ್ಥವು ದಿಟ್ಟ ಮನವ ಕೊಟ್ಟು ಅಟ್ಟುರಿಯ ಕಳೆದು ಮೆಟ್ಟು ಮೆಟ್ಟಲನೇರಿ ದಿಟ್ಟಿಪರೋ ನಿನ್ನ1 ಪದುಮಜಾಂಡ ಕೋಟಿ ನಾಯಕ ದೇವ ಶ್ರೀದ ಸೃಷ್ಟಾದ್ಯಷ್ಟ ಕರ್ತೃ ನೀನೆ ಆದ್ಯಂತ ಜಗದಾಧಾರಕ ಅಂತರಾತ್ಮಕ ವಿಶ್ವವ್ಯಾಪಕ ಆದಿಮೂಲ ಚತುಷ್ಪಾದ ಎಂದೆನಿಸಿ ತ್ರಿ- ಪಾದ ಇಳೆಯೊಳಿಟ್ಟೆ 2 ಸದಮಲಾತ್ಮಕನೇ ದೇವ ಸರ್ವದಾ ಎಲ್ಲಾ ಹದಿನಾಲ್ಕು ಲೋಕವ ಧರಿಸಿದೆ ದಿವ್ಯ ನೆಲೆಸಿದೆ ಸರ್ವರ ಹೃದಯದ ಪದುಮದಲಿ ಪೊಳೆದು ತ್ರಿಜಗವಂದಿತನಾಗಿ ಮೇದಿನಿಯೊಳು ಮೆರೆಯುತಿಹೆ 3 ಧ್ವಜವಜ್ರಾಂಕುಶಯುಕ್ತಲಾಂಛನ ದೆÉೀವ ಅಬ್ಜಭವಾರಾಧ್ಯ ಚರಣದಿವ್ಯ- ಅಬ್ಜಸಖಕೋಟಿಕಿರಣ ಪಾದಾಭರಣದಿಂದ ಕಿರಣಾ ತಾ ಝಗಝಗಿಸುತ್ತ ನೂಪುರ ಕಾಲಂದಿಗೆ ಗೆಜ್ಜೆ ಸಜ್ಜುಗೊಂಡಿಹ ಮೂರ್ಜಗದೊಡೆಯನೆ ಹರಿ 4 ತಟಿತಕೋಟಿನಿಭಸಮಕಾಯ ಕಟಿಯ ದಿವ್ಯರತ್ನಖಚಿತದಟ್ಟಿಯಾ ತೊಟ್ಟ ಪಟ್ಟೆಪೀತಾಂಬರ ಬಟ್ಟೆಯಾ ಸೊಂಟಪಟ್ಟಿಯ ಇಟ್ಟ ಪರಿಯಾ ಅಟ್ಟಹಾಸದಿ ನಿಂದ ಸೃಷ್ಟಿಗೊಡೆಯ ಮನೋ- ಭೀಷ್ಟದಾಯಕ ಬೆಟ್ಟದೊಡೆಯನೆ 5 ಕರಚತುಷ್ಟಯದಲ್ಲಿ ಮೆರಯುವಾ ಶ್ರೀ ಸು- ದರ್ಶನ ಶಂಖದಿಂದಿರುವಾ ದೀನ ಶರಣಜನರಿಗಭಯ ಹಸ್ತವಾ ಕರೆದು ನೀಡುವ ಕಾಮಿತಾರ್ಥವ ಪರಿಪರಿ ಭಾಪುರಿ ಭುಜಗಾಭರಣಾದಿಗಳ ಧರಿಸಿರುತ ಭಕ್ತಜನರಘ ಹರಿಸುವಾ6 ವಕ್ಷಸ್ಥಳದಲ್ಲಿ ಶ್ರೀವತ್ಸವೂ ಕಂಠ ದಕ್ಷಿಣದಲ್ಲಿ ತೋರ ನಕ್ಷತ್ರದಂತಿಹ ಹಾರವೂ ಕುಕ್ಷಿ ಅಂದವೂ ಮೋಕ್ಷದಾತೃವು ಅಕ್ಷರ ವಾಚ್ಯತ್ರ್ಯಕ್ಷಾದಿ ಸುರವಂದ್ಯ ಈ ಕ್ಷಿತಿಗಿಳಿದು ಪ್ರತ್ಯಕ್ಷನಾಗಿ ನಿಂದೆ 7 ಮಂದಹಾಸಮುಖ ಅರವಿಂದ ದಂತ ಚಂದಕರ್ಣಕುಂಡಲದಿಂದ ಕೆಂದುಟಿಯಿಂದ ಒಪ್ಪುವ ಚೆಂದ ಪೊಂದಿ ಮಕುಟ ಸರ್ವಾಲಂಕಾರ ಪರಿಪೂರ್u ಬಂಧ ಮೋಚನ ಹರಿ ಶ್ರೀ ವೇಂಕಟೇಶನೆ 8 ಪರಿಪರಿ ಮುಕ್ತಜೀವರುಗಳು ಇಲ್ಲಿ ಪರಿವಾರ ತರುಲತೆ ಶಿಲೆಗಳು ಇನ್ನು ವಿರಜೆ ಮೊದಲಾದ ಸರ್ವತೀರ್ಥವು ಸ್ವಾಮಿ ತೀರ್ಥವೂ ಮೋಕ್ಷದಾತೃವೂ ಭವ ಶಕ್ರಾದಿನುತಉರಗಾದ್ರಿವಾಸವಿಠಲ ಜಗದೀಶನೆ 9
--------------
ಉರಗಾದ್ರಿವಾಸವಿಠಲದಾಸರು
ತೀರ್ಥವು ಬೇಡಾ ಕ್ಷೇತ್ರವು ಬೇಡಾ ಜಪ ತಪ ಯೋಗವು ಬೇಡಾ ಪ ಪರ ಉಪಕಾರ ಶಾಸ್ತ್ರ ಪುರಾಣಗಳು ಬೇಡಾ | ಸ್ವಾಮಿ ಸದ್ಗುರು ಭವತಾರಕನ ಭಜಕರ ಪಾದವ ನೀ ಬಿಡಬೇಡಾ 1 ಸತ್ಯವು ಸಂಸಾರವು ಜಗವಿದು ಮಾಡೆಂಬರು ನೋಡೀಜನರು | ಮಿಥ್ಯವು ಸರ್ವವು ಜಗದೀಶನನು ತಿಳಿಯೆಂಬುವರಾ ಸಜ್ಜನರು || ಜಾಗ್ರದಿ ಸ್ವಪ್ನದಿ ಬಳಲುತ ನಲಿವುತ ಚರಿಸುವರಾ ಕಾರ್ಮಿಕರು | ತುರ್ಯಾವಸ್ಥೆಯೋಳ್ ಮರೆದು ತಮ್ಮನು ಇರುತಿಹರಾ ಸಾಧುವರು2 ಸಾರ ನಿವೃತ್ತಿಯ ಅರಿವುದೆ ಜೀವನ್ಮುಕ್ತಿ || ಇದರ ಹಂಚಿಕೆ ಮಾಡುತ್ತಿಹುದೇ ಅದುವೆ ಶಾಸ್ತ್ರದ ಯುಕುತೀ | ಸದಮಲ ಬೋಧಾನಂದವೆ ಬಲಿದರೆ ನಿಜವೇ ತಾ ಅವ್ಯಕ್ತಿ 3 ಅನುದಿನ ಮೂರ್ತಿ ಭವತಾರಕ ಭಜಕರ ಕೇಳೋ ನಿನ್ನ ಖೂನಾ 4 ಸಂಸಾರವ ಸದ್ಧರ್ಮದಲಿ ಸಾಧು ಸಂತರಂತೆ ನೀ ಮಾಡೊ | ಸಂಶಯವಳಿದು ಸರ್ವವು ಶಿವನೆಂದರಿದು ಅವರೊಳು ಕೂಡೊ | ಸತ್ತು ಹುಟ್ಟುವ ಕಟ್ಟಳೆಗಳನು ಕಿತ್ತಿ ಈಡ್ಯಾಡೊ | ನಿತ್ಯದಿ ಭವತಾರಕನ ಭಜಕರ ಸಂಗದಲಿ ಲೋಲ್ಯಾಡೊ 5 ಗುರು ವರನಲಿ ಸತ್ಪುರುಷರ ಬಳಿಯಲಿ ಅರಸಬಾರದು ಇಷ್ಟಾ | ಕುಲ ವಯ ಕ್ರಿಯಾ ಕರ್ಮವ ತಾಪತ್ರಯಗಳನೆಣಿಸುವ ಭ್ರಷ್ಟಾ | ಅನುಭವ ಜ್ಞಾನದಿ ಬೋಧದಿ ಲಕ್ಷ್ಯವೀಕ್ಷಿಸುವವನೆ ಶ್ರೇಷ್ಠಾ | ಇನಿತನು ಬಿಟ್ಟು ನಿಂದಿಸುವವನೆ ಭವದಲಿ ಬಡುವನು ಕಷ್ಟಾ 6 ಮೂರ್ತಿ ಭವತಾರಕ ಭಜಕರ ಸೂರ್ಯನ ಬಲ್ಲದೆ ಗೂಗಿ 7 ಭವ ದೋಷವು ಅಳಿವಹುದೇ? | ಗುರು ಭವತಾರಕ ಭಜಕರ ಬೋಧವು ಧರೆಯೊಳು ನರರಿಗೆ ಇಹುದೇ ? 8 ಮಾತು ಸತ್ಯವಾದರೆ ಆತಗೆ ಶಿವನೆನು- ತಿಹರೀ ಜಗ ಜನರೂ | ಭೂತಭವಿಷ್ಯತ್ ಹೇಳಲು ಭಕ್ತಿಯೊಳಾತಗೆ ನಡಕೊಂಬುವರೂ | ಭೂತಳದೊಳು ಭವತಾರಕ ಭಕ್ತರ ನೀತಿ ಮರೆತ ಪಾಮರರೂ | ನೂತನ ಖ್ಯಾತಿಯ ಕೊಂಡಾಡುತ ಬಹು ಪಾತಕಕೆಳಿ ಎಂಬುವರೂ 9 ಕರ ಭವ ಮೂರ್ತಿ ಭವತಾರಕ ಭಜಕರು ಇದ್ದ ಸ್ಥಿತಿಯನರಿಯರು 10 ಆಡುವರಾಟವ ಬಾಲರ ಮನೆಯಲಿ ಮಾಡುತ ಬ್ರಹ್ಮಾಂಡವನೂ |ನೋಡರು ಹಿರಿಯರು ಸಟೆಯೆಂದೇ ದಿಟ ಮಾಡುವರಿಹದಾಟವನೂ | ಪಾಡಲ್ಲೆನುತಲಿ ತಿಳಿದವರೊಳು ಬೇಡುವರಾ ನಾಕವನೂ | ರೂಢಿಯೊಳಗೆ ಭವತಾರಕ ಭಜಕರು ನೋಡರು ಪುಸಿಯೆಂದದನೂ 11 ನಿತ್ಯ ಪೂರ್ಣ ಭವತಾರಕನಂಘ್ರಿಯ ಹೊಂದದೆ ತಿಳಿಯದು ಗುಟ್ಟೂ 12 ಸಂಚಿತ ಪ್ರಾರಬ್ಧ ಕ್ರಿಯಮಾಣಾ ಜನರಿಗೆ ಬರೆದನು ಬ್ರಹ್ಮಾ | ಮುಂಚೆ ಶಿರವನು ನೀಗಿದಾ ಬರದವರಾರೊ ಆತಗೆ ತಮ್ಮಾ | ಮಿಂಚಿನಂತೆ ಜೀವನಕೆ ತಗಲುವಾ ಮಾಡುವ ಕರ್ಮಾ ಧರ್ಮಾ | ಹಂಚಿಕೆ ತಿಳಿಯದೆ ನುಡಿವರು ಮರುಳರು ವಂಚನೆ ಬಿಡು ಇದು ವರ್ಮಾ 13 ದೇವ ನೈವೇದ್ಯವು ಖೊಬ್ಬರಿ ಸಕ್ಕರಿ ಪನಿವಾರವು ನೋಡಿ | ಆವ ಕುಲದವನಾದರೂ ಏನು | ಇಲ್ಲದ ಹಂಚಿಕೆ ಮಾಡೀ ಭಾವಿಸಿ ಮೃಷ್ಟಾನ್ನವನಿಟ್ಟರೂ ಕುಲಧರ್ಮದಲ್ಲಿ ನೋಡೀ | ಕೇವಲ ಭವತಾರಕನ ಭಜಕರ ಮುಂದೆ ರಹಸ್ಯವ ಮಾಡೀ 14
--------------
ಭಾವತರಕರು
ದೂರಕ್ಕೆ ದೂರನೆಂದು ಹೆರೆ ಸಾರಲಿ ಬೇಡಸಾರಿಗೆ ಸಾರಿ ನಮ್ಮ ಕೃಷ್ಣನ್ನ ಸಾರಿರೈಯ ಪ ಅನಂತ ಜನುಮದೊಳೊಂದೆ ಜನುಮಅನಂತ ಕ್ಷಣದೊಳಗೊಂದೆ ಕ್ಷಣಅನಂತ ನಾಮದೊಳೊಂದೇ ನಾಮವಮುನಮುಟ್ಟಿ ನೆನೆದರೆ ಬೆನ್ಹತ್ತಿ ಬಿಡನೈಯ 1 ಅನಂತರೂಪದೊಳೊಂದೆ ರೂಪಅನಂತ ಗುಣದೊಳಗೊಂದೆ ಗುಣಅನಂತ ಜೀವರೊಳಗಾವನಾದರುಂ ಕನಸಿಲಿ ನೆನೆದರೆ ಋಣಿಯಾಗಿಪ್ಪನೈಯ 2 ಒಂದೆ ಹೂವು ಒಂದೆ ಫಲವೊಂದೆಬಿಂದು ಜಲವೊಂದೆ ತುಳಸಿಒಂದೇ ವಂದನೆಯೊಂದೆ ಪ್ರದಕ್ಷಿಣೆಒಂದನರ್ಪಸಿದೊಡಂ ಕುಂದದಾನಂದವೀವನೈ 3 ಹರಿ ಚಿನ್ಹಾಂಕನ ಹರಿದಿನದುಪವಾಸನೆರೆಯೂಧ್ರ್ವ ಪುಂಡ್ರ ತುಳಸಿಮಾಲೆಹರಿಯುತ್ಸವ ಸೇವೆ ಹರಿದಾಸರ ಸಂಗದುರಿತಾಬ್ಧಿಗೆ ಕುಂಭಸಂಭವನಲ್ಲವೆ 4 ಹರಿಪಾದ ತೀರ್ಥವು ಹರಿಯ ನಿರ್ಮಾಲ್ಯವುಹರಿ ಆರತಿ ಧೂಪ ಶೇಷಂಗಳುಹರಿಯ ಪ್ರಸಾದ ಶಂಖೋದಕ ಪ್ರತ್ಯೇಕದುರಿತ ರಾಸಿಗಳನ್ನು ಸೋಕಲು ಸುಡದೆ 5 ಒಮ್ಮೆ ಪಾಡಿದಡಂ ಒಮ್ಮೆ ಪೊಗಳಿದೊಡಂಒಮ್ಮೆ ಬೇಡಿದಡಂ ಒಮ್ಮೆ ನೋಡಿದಡಂಒಮ್ಮೆ ಸಾರಿದಡಂ ಮತ್ತೊಮ್ಮೆ ಕರೆದಡಂನಮ್ಮಾತನಿವನೆಂದು ಕೈಯ ನೀಡುವನೈಯ 6 ತನ್ನಲ್ಲಿಪ್ಪನಾಗಿ ದೂರನಲ್ಲ ನರಹೊನ್ನು ಬೇಡ ಲಕುವಿರಮಣಗೆ ಅನ್ಯವ್ಯಾತಕ್ಕೆ ಈ ಪರಿಪೂರ್ಣಾನಂದಗೆನಿನ್ನವನೆಂದರೆ ತನ್ನನೀವನು ಕೃಷ್ಣ7
--------------
ವ್ಯಾಸರಾಯರು
ನಡೆಯೇ ತೀರ್ಥವು ನುಡಿ ಪ್ರಸಾದವುಕೊಡುವುದೇ ತಾನೀಗನುಗ್ರಹವುಹಿಡಿವುದೇ ತತ್ವವು ಬಿಡುವುದೇ ವೈರಾಗ್ಯದೃಢದಲಿ ತನ್ನ ತಿಳಿದಾ ಮಹಾತ್ಮನಾ ಪ ಮೆಟ್ಟಿದ್ದೆ ಕಾಶಿಯು ಮಲಗಿದ್ದೆ ಶ್ರೀ ಶೈಲದಿಟ್ಟಾಗಿ ಕುಳಿತುದೇ ಕುರುಕ್ಷೇತ್ರವುಘಟ್ಟಿಯಾಗಿಹುದೇ ಗಯವೀಗ ಗೋಕರ್ಣಮುಟ್ಟಿಯೇ ತನ್ನತಾ ತಿಳಿದ ಮಹಾತ್ಮನಾ 1 ಉಂಡದ್ದೆ ಕೇದಾರ ಉಟ್ಟಿದ್ದೆ ಶ್ರೀ ಬದರಿಕಂಡದ್ದೆ ಕಂಚಿ ಕಾಳಹಸ್ತಿಮಂಡೆಗೆರಕೊಂಡುದೇ ಮೈಲಾರ ಮಧುರೆಯುಖಂಡಿಸಿ ತನ್ನತಾ ತಿಳಿದ ಮಹಾತ್ಮನಾ 2 ಸುಧಾ ಶರಧಿಯು ಆತ ಸಾಕ್ಷಾತ್ತು ದೈವವುವಿಧ ವಿಧದ ಜಗ ತಾನೆಯಾದಾತನುಮದಕಾಮ ಕ್ರೋಧ ಪಾಶ ಶೋಕ ವರ್ಜಿತಚಿದಾನಂದ ಗುರುವೇ ತಾನಾದ ಮಹಾತ್ಮನಾ 3
--------------
ಚಿದಾನಂದ ಅವಧೂತರು
ನದಿಗಳ ಸ್ತೋತ್ರ ಕಾವೇರಿ ಕಲುಷ ಸಂಹರಳೆ ಕಾವೇರಿ ಪ ವಿಧಿ ಸುತೆ ನಮ್ಮ | ಕಾವುದು ಬಿಡದಲೆ ಅ.ಪ. ಅಮಿತಾಭ ಕವೇರ ನೃಪನು | ಪುಣ್ಯಶಮದಮದಿಂದಯುತನು | ಸಾರಿಹಿಮನಗ ತಪ್ಪಲುಗಳನು | ದಿವ್ಯಸಮಶತದಶ ವರ್ಷಗಳನು | ಆಹಸುಮನ ಸೋತ್ತಮನಾದ | ಬೊಮ್ಮನ ಧೇನಿಸಿಅಮಮಸುಘೋರವು | ವಿಮಲ ತಪವ ಗೈದ 1 ಬೊಮ್ಮ | ಅಚ್ಚ್ಯುತ ಮಾಯ ತನ್‍ಇಚ್ಛೆಯ ಸುತೆ ನಿನ | ಮೆಚ್ಚು ಪುತ್ರಿಯಹಳು 2 ಸ್ಮರಣೆ ಮಾತ್ರದಿ ವಿಷ್ಣುಮಾಯಾ | ದಿವ್ಯತರುಣಿ ರೂಪದಿ ಬ್ರಹ್ಮರಾಯ | ನೆದುರುಕರವ ಮುಗಿದು ಪೇಳು ಜೀಯಾ | ಎನೆಬರೆದನಾ5ದು ಕವೇರ್ಕನ್ಯಾ | ಆಹಸರಿತು ರೂಪದಿ ಮೋಕ್ಷ | ವg್ವ5ರ ವಹುದು ನೀಸರುವ ತೀರಥ ಮಯಿ | ಪರಿವುದು ಈ ಪರಿ 3 ಎರಡು ಅಂಶವು ನಿನಗಿಹುದೂ | ಒಂದುಸರಿತಾಗಿ ಪ್ರವಹಿಸುವೂದು | ಮತ್ತೆತರುಣಿ ರೂಪದಿ ಪತ್ನಿಯಹುದು | ಮುನಿವರ ಕುಂಭ ಸಂಭವಗಹುದು | ಆಹಕರೆಸಿ ಲೋಪಾಮುದ್ರೆ | ಮೆರೆವುದು | ಪತಿವ್ರತೆಶಿರೋಮಣಿ ಎನಿಸಿ ನೀ | ಮೆರೆವುದು ಭುವಿಯಲ್ಲಿ 4 ವರವಿತ್ತು ಮರೆಯಾಗೆ ಅಜನು | ನೃಪವರ ಸುತೆಯೊಡನೆ ಪೊರಟನು | ಕಾಲಕರ ಮರತನದಿ ಕಳೆದಾನು | ಮುಂದೆವ್ಯೆರಾಗ್ಯದಿಂ ಪೇಳಿದಾನು | ಆಹಪರಿಶುದ್ಧನಿಹೆ ನಿನ್ನ | ದರುಶನ ಮಾತ್ರದಿಪರಮ ನಿಷ್ಕಾಮದ | ಕರ್ಮವನೆಸಗುತ್ತ 5 ಹರಿಧ್ಯಾನದೊಳು ಬಲುರತ | ನಿರೆನರಪತಿ ಹರಿಲೋಕ ಗತ | ನಾಗೆತರುಣಿ ಕಾವೇರಿಯು ಸ್ಥಿತ | ಘೋರವರ ತಪವನ್ನು ಗೈಯ್ಯುತ್ತ | ಆಹಇg5ರಲೀ ಪರಿ ಪರಿ ಪರಿ ಬೇಡಿದಳ್ 6 ಸರಿದ್ರೂಪಳಾಗಿನ್ನು ಪರಿದೂ | ಹರಿಶರಣರ ಪಾಪವ ತರಿದೂ | ಮತ್ತೆಸರುವರ ತಾಪವ ಕಳೆದೂ | ಇನ್ನುಸರಿತು ಗಂಗಾದಿಗೆ ಹಿರಿದೂ | ಆಹವರ ಕೀರ್ತಿಯಿಂದಲಿ | ಮೆರೆಯುತ ಲೋಕೋಪಕರಳೆನಿಸಿ ಪ್ರವಹಿಸಿ | ಶರಧಿಯ ಸೇರ್ವಂಥ 7 ಸ್ಮರಣೆ ಮಾತ್ರದಿ ಪಾಪನಾಶಾ | ಮಾಳ್ಪಗಿರಿಯುಂಟು ಸಹ್ಯ ಆದ್ರೀಶ | ಅಲ್ಲಿತರು ರೂಪಮಲಕ ದೊಳ್ವಾಸಾ | ನಿನ್ನಚರಣ ಕಮಲವ ವಾಣೀಶಾ | ಆಹವಿರಜೆ ಪುಣ್ಯದ ಜಲ | ವರ ಕಂಬುವಿಲಿ ತುಂಬಿಎರದಭಿಷೇಚಿಸೆ | ಪರಿವುದದರ ಸಹ 8 ವರ ದತ್ತಾತ್ರೇಯ ನೆಂದೆನಿಸಿ | ತವಶಿರ ಸ್ಥಾನದಲ್ಲಿ ವಾಸೀಸಿ | ಎನ್ನಶರಣರ ಅಘಗಳ ಹರಿಸೀ | ನಿನ್ನವರ ದಕ್ಷಗಂಗೆಂದು ಕರೆಸೀ | ಆಹವರ ತವೋತ್ಸಂಗದಿ | ಶಿರವಿಟ್ಟು ಮಲಗುತ್ತಸರಿದ್ವರಳೆನಿಸುತ್ತ | ಮೆರೆಸುವೆ ನಿನ್ನನು 9 ಮಂಗಳ ಜಪತಪ ಸ್ನಾನ | ಮಿಕ್ಕಗಂಗಾದಿ ತೀರ್ಥಾನುಷ್ಠಾನ | ನಾಲ್ಕ್ಯುಗಂಗಳೊಳಗೆ ಮಾಳ್ಪ ನಾನಾ | ಕರ್‍ಮಂಗಳ್ತವೋತ್ಸುಂಗ ಶಿರಸ್ಥಾನ | ಆಹಮಂಗಳಾಮಲಕ ಜಲಂಗಳಿಗ ಸಮ ಕ-ಳೆಂಗಳ್ಷೋಡಶಕ್ಕೊಂದಂಗ ಸರಿ ಬರೆದು 10 ದಾತ | ತನ್ನಕಾಮಂಡುಲಿನೊಳ್ ನಿನ್ನ ಧೃತ | ಆಹನೇಮದಿಂದೊಂದಂಶ | ಲೋಪಾ ಮುದ್ರೆಯು ಆಗಿಆ ಮಹ ಮುನಿಯನ್ನ | ಪ್ರೇಮದಿ ವರಿಸುವೆ 11 ವರವಿತ್ತು ಮರೆಯಾಗೆ ಹರಿಯು | ಅತ್ತವರ ಮುನಿ ತಪಸಿನ ಧಗೆಯು | ಕಂಡುಸುರಜೇಷ್ಠ ಅವನೆದುರು ಹೊಳೆಯು | ಆಗಬರೆದನು ಜೀವನ ಧೊರೆಯು | ಆಹಹೊರಲಾರದವ ತಾನು | ವರ ಸನ್ಯಾಸದಿ ಮನವಿರಸಿರುವುದು ನಿರಾ | ಕರಿಸುತ್ತ ಪೇಳ್ದನು 12 ಚಕ್ರಧರ | ತುಂಬಿದ ಮನದಿಂದಹಂಬಲಿಸಿ ಕೈಗೊಂಡು | ಬೆಂಬಿಡದೆ ಸಲಹುವ 13 ಮುನಿವರಗಸ್ತ್ಯನು ಅಜನ | ಮಾತಮನವಿಟ್ಟು ಕೇಳುತ್ತ ವಚನ | ಪೇಳ್ದಅನುಕೂಲ ಭಾರ್ಯಳಾಳ್ವುದನ | ಯೋಗಅನುಕೂಲಿಸುವುದೆಂಬ ಹದನ | ಆಹವನಜ ಗರ್ಭನು ತನ್ನ | ತನುಜೆಯ ಸುಕನ್ಯಾಮಣಿಯ ಕಾವೇರಿಯ | ವಿನಯದಿ ವರಿಸೆಂದ 14 ನಗ ಶೃಂಗದಿರಿಸುತ್ತಮಿಗೆ ಚೆಲ್ವ ಸರಿತಾಗಿ | ಪೋಗಲನುಗ್ರಹಿಸು 15 ಮೋದ ತಾಳುತ್ತಸುಗುಣೆಯ ಬೆಸಸೀದ | ನಗು ಮುಖದಿಂದಲಿ 16 ಹೊರ ಮುಖಳಾದಳ್ ಕಾವೇರಿ | ಮುನಿವರನ ಸತ್ಕರಿಸಲು ನಾರಿ | ದ್ವಿಜವರ ಪೇಳೆ ಬ್ರಹ್ಮಗನುಸಾರಿ | ಆಕೆವರಗಳ ಬೇಡಲು ಭಾರಿ | ಆಹಸುರಜೇಷ್ಠ ನ್ವೊರೆದಂತೆ | ವರಗಳ ನೀಯಲುಸುರಕನ್ಯಾಮಣಿಯಾಗ | ವರಿಸಿದಳಾ ಮುನಿಯ 17 ವಾಹನ ಪತ್ನಿ ಸೇರಿ | ಶಿರಿಕಂಸಾರಿ ಗರುಡನ್ನ ಏರಿ | ಕ್ರತುಧ್ವಂಸಿ ಉಮಾ ನಂದಿ ಏರಿ | ಇಂದ್ರಶಂಸಿ ಸೈರಾವತನೇರಿ | ಆಹಸಾಂಶರು ಯೋಗ್ಯ ನಿರಂಶರು ಸೇರಿ ಪ್ರ-ಶಂಸನ ಗೈಯುತ್ತ ವೈವಾಹ ನಡೆಸಿದರ್ 18 ಮದುವೆ ವೈಭವ ಪೇಳಲಾರೆ | ಜಗದುದಯಾದಿ ನಡೆಪರಿಹಾರೆ | ಹರಿಮುದ ಪೊಂದಲಿನ್ನೆದುರ್ಯಾರೆ | ಎಲ್ಲರ್ವೊದಗಿ ಆಶೀರ್ವದಿಶ್ಯಾರೆ | ಆಹವಿಧ ವಿಧ ದುಡುಗೊರೆ | ಅದ ಪೇಳಲಳವಲ್ಲಅದುಭುತ ಜರುಗಿತು | ಉದ್ವಾಹ ಕಾರ್ಯವು 19 ಗಮನ | ಮತ್ತೆಕಾವೇರಿ ಸಹ ಮುನಿ ಹಿಮನ | ಕೇಳ್ಕೆಭಾವಿಸುತಲ್ಲೆ ಕೆಲದಿನ | ಆಹಆವಾಸಿಸಿರೆ ಋಷಿ | ಸಾರ್ವರ ಮನ ತಿಳಿದುಆಹ್ವಾನ ವಿತ್ತಳು | ಸಹ್ಯಾದ್ರಿ ಸನಿಯಕ್ಕೆ 20 ಗಮನ | ಆಹಇಂಬಿಟ್ಟನ್ನೊಂದಂಶ | ಲೋಪಾಮುದ್ರೆಯು ಕುಂಭಸಂಭವ ಸಹ ಸಹ್ಯ ಅದ್ರಿಗೆ ಗಮಿಸಿದಳ್ 21 ಉತ್ತರ ಹಿಮನಗ ಬಿಡುತ | ವನಸುತ್ತುತ ವಿಂಧ್ಯ ಮೀರುತ್ತ | ಹಾಂಗೆಉತ್ತಮ ಸಹ್ಯಾಚಲೇರುತ್ತ | ಅಲ್ಯುನ್ನತ್ತ ಬ್ರಹ್ಮಗಿರಿ ಸಾರುತ್ತ | ಆಹಉತ್ತಮ ಕ್ಷೇತ್ರದಿ ಜತ್ತಾಗಿ ಕಮಂಡಲಒತ್ತಟ್ಟಿಗಿರಿಸುತ್ತ ಪತ್ನಿಗೆ ಬೆಸಸಿದರ್ 22 ಕಾಲ ಮುದದಿ ಕರಕದಿಂದಅದುಭೂತವೆನೆ ಸರಿದ್ವರಳಾಗಿ ಪ್ರವಹಿಸು 23 ಪರಿ ಕಾಲ ಸಮೀಪವಾಗಲು ಸುರಪ 24 ಹರಿ ಮನೋಭಾವಾನು ಸಾರಿ | ಮಳೆಗರೆಯಲನ್ಯತರುವ ಸಾರಿ | ಶಿಷ್ಯರುಗಳಾಶ್ರಯಿಸಲು ಮೀರಿ | ಕುಂಡಸರುವೆ ತೀರಥಗಳು ಉಸುರಿ | ಆಹಪರ್ವ ಕಾಲವು ಇದು | ಪೊರಮಡು ಕಾವೇರಿಪರಿವೆವು ನಿನ ಪಿಂತೆ | ತೀರ್ಥಗಳಗ್ರಣಿಯೆ 25 ವಿಧಿ ಬಂದ ಹಂಸವನೇರಿ | ಆವಮುದದಿಂದ ವನಗಳ್ ಸಂಚಾರಿ | ಇನ್ನುಅದುಭೂತಾಮಿತ ತೀರ್ಥ ಗಿರಿ | ಕಂಡುಒದಗಿ ಕರಕದ ಜಲ ಭಾರಿ | ಆಹಮುದದಿ ಮೀಯುತ ಜಪ ಅದುಭೂತಾಷ್ಟಾಕ್ಷರಪದುಮ ಸಂಭವ ಹರಿಧ್ಯಾನದಿ ರತನಾದ 26 ಮಂದ ಮಾರುತ ಬೀಸೆ ವಿಮಲ | ಧಾತ್ರಿಗಂಧ ವೆಂದೆನುತಲಿ ಬಹಳ | ಮುದದಿಂದೆಚ್ಚರಗೊಂಡು ಕಂಗಳ | ಮುಂದೆಸುಂದರಾಮಲಕಾ ಕೃತಿಗಳ | ಆಹಎಂದು ಕಾಣದ ದೃಶ್ಯ | ವೆಂದೆನುತಲಿ ಮನದಿಂದ ಧೇನಿಸೆ ಅದು | ಛಂದದಿ ಮರೆಯಾಯ್ತು27 ಸಿರಿ ಹರಿಯು | ಸಿರಿವತ್ಸಾಂಕಿತನು ಬಾಹು ದ್ವಿದ್ವಯು | ಇಂದಮೆಚು5Àೂಪವ ತೋರೆ ವಿಧಿಯು | ಆಹ |ಸಚ್ಚರಿತೆಯ ಪಾಡೆ | ನಿಚ್ಚಳಾಮಲಕದಉಚ್ಚರೂಪವ ಕಂಡು | ಅರ್ಚಿಸಿದನು ಬಹಳ 28 ಗಾತ್ರ ಪಾದ | ಬಿಸಜಗಳ್ವಂದಿಸಿಬಿಸಜ ಸಂಭವ ಗೈದ | ಅಸಮ ಸಂಪೂಜೆಯ 29 ಧಾತಾ ಸ್ವ ಕುಂಡಿಕಾಸ್ಥಿತ | ವಿಮಲ ತೀರ್ಥವು ವಿರಜೆಯಿಂ ಹೃತ | ಶಂಖಪೂರ್ತಿಸಿ ಪೂಜಾ ಪದಾರ್ಥ | ಪ್ರೋಕ್ಷಿಸಿಪೂತಾತ್ಮಾಮಲಕದಿ ಸ್ಥಿv5 ಆಹಶ್ರೀ ತರುಣೀಶನ | ದತ್ತಾತ್ರೇಯನ ರೂಪಖ್ಯಾತ ಪೂಜಿಸುತಿರಲಶರೀರ ವಾಕ್ಕಾಯ್ತು 30 ಪರಿ ಗೈಯ್ಯುವ ಭಾಮಾ ಮಣಿಕುರಿತು ಪೇಳಿತು ವಾಣಿ ನೇಮ | ನೀನುಶರಧೀ ಸೇರುವ ಮನೋ ಕಾಮಾ | ಆಹಪರಿಪೂರ್ಣವಹುದೀಗ | ವರ ತುಲಾಪರ್ವದಿಶರತ್ಕಾಲ ಮುಕ್ತಿದ | ಪರಿವುದು ಕಾವೇರಿ31 ತತುಕ್ಷಣ ಮುನಿಯ ಕಮಂಡ್ಲು | ದೊಳುಸ್ಥಿತ ಸರ್ವ ತೀರ್ಥಮಾನಿಗಳೂ | ಪೇಳೆತುತುಕಾಲ ಕವೇರ ತನುಜಳೂ | ಶೀಘ್ರಉತು ಪತ್ತಿ ತಾಳಿ ಪರಿದಾಳೂ | ಆಹಇತರ ತೀರಥಗಳು | ಸರಿತು ರೂಪದಿ ಹಿಂದೆಅತಿ ತ್ವರೆಯಲಿ ಪ್ರವ | ಹಿತರಾಗಿ ಪೋದರು 32 ಋಷಿವರ್ಯ ಸ್ನಾನವ ಮಾಡಿ | ಪರಿಕ್ಷಿಸಲಾಗ ವಿಸ್ಮಯ ಕೂಡಿ | ಶಿಷ್ಯರಿಗುಸರಲಾಕ್ಷೇಪದ ನುಡಿ | ಅವರುಸಿರಿದರ್ ಮಳೆಯ ಗಡಿಬಿಡಿ | ಆಹರಸ ರೂಪದಲಿ ಪರಿವ | ಅಸಮ ಪತ್ನಿಯ ಕೂಗೆಋಷಿಗೆ ಶಾಂತಿಯ ಸೊಲ್ಲ | ಒಸೆದು ಪೇಳಿದಳವಳೂ 33 ಸುರವರ ಪೂಜ್ಯ ಧಾತ್ರಿಯು | ಇನ್ನುತರುವು ಆ ಮಲಕದ ಬಳಿಯು | ತೀರ್ಥವರ ಶಂಖ ಸಂಜ್ಞಿತ ತಿಳಿಯು | ಇಲ್ಲಿವಿರಜೆಯ ದೊಂದಿಹ ಕಳೆಯು | ಆಹವರ ನಭೊ ಗಂಗೆಯು | ಸರಿ ಸಹ್ಯಾಮಲಕವುವರಣಿಸಲಳವಲ್ಲ | ಸರಿದ್ವರ ಮಹಿಮೆಯ 34 ಕೈವಲ್ಯ | ದಾತನ ಒಲಿಮೆಯು 35 ಗಂಗಾನದೀಗಗಳು ತಮ್ಮ | ಪಾಪಹಿಂಗಿಸಲೋಸುಗವಮ್ಮ | ತುಲಾಮಂಗಳ ಮಾಸದಲಮ್ಮ | ಒಂದುತಿಂಗಳಿಹರಿಲ್ಲಿ ಸಂಭ್ರಮ್ಮಾ | ಆಹಗಂಗೆ ದಕ್ಷಿಣಾಖ್ಯೆ | ಮಂಗಳೆ ಜನಗಳಘಂಗಳ ಕಳೆಯುತ್ತ | ತುಂಗೋಪಕಾರಿಯೆ 36 ಕಾವೇರಿ ಪ್ರವಹಿಸಿ ಭರತ | ವರ್ಷಪಾವಿಸುತಿಹಳು ತಾ ನಿರುತ | ಬಂದುಸೇವಿಸೂವರ ಪಾಪ ತ್ವರಿತ | ದೂರಗೈವಳೆಂಬುವದೆ ನಿಶ್ಚಿತ | ಆಹಈ ವಿಧ ಮಹಿಮೆಯ ಓವಿ | ಪಾಲಿಸಿದನು |ಶ್ರೀವರ ಶ್ರೀ ಗುರು | ಗೋವಿಂದ ವಿಠಲಯ್ಯ 37
--------------
ಗುರುಗೋವಿಂದವಿಠಲರು
ನಿನ್ನಬಿಟ್ಟನ್ಯಬಲ ಮುನ್ನಿಲ್ಲಸ್ವಾಮಿ ಎನ್ನಯ್ಯ ವಿಶ್ವೇಶ ಪನ್ನಂಗಶಾಯಿ ಪ ಇನಚಂದ್ರ ಮಂಗಳಬುಧಗುರು ಭಾರ್ಗವ ಶನಿರಾಹುಕೇತು ನವಮಹರ್ದಶನು ನೀನೆ ಘನನಿಮ್ಮ ಮಹಿಮೆಯಿಂ ವಿಧವಿಧದಿ ಸೃಷ್ಟಿಗೈ ದೊನರುಹ ಭುವನಂಗಳಾಳುವವ ನೀನೆ 1 ನಕ್ಷತ್ರಯೋಗಾದಿಕರಣಂಗಳು ನೀನೆ ಪಕ್ಷಮಾಸ ಸರ್ವಕಾಲ ವಾರ ತಿಥಿ ನೀನೆ ಸುಕ್ಷೇತ್ರಯಾತ್ರ ಮಹಪುಣ್ಯತೀರ್ಥವು ನೀನೆ ಸಾಕ್ಷಾತ ನಿಖಿಲ ಶುಭಮುಹೂರ್ತಗಳು ನೀನೆ 2 ಪರಮವೇದ ಪುಣ್ಯಪುರಾಣಕಥೆ ನೀನೆ ವರ ನಿಖಿಲ ಶಾಸ್ತ್ರರ್ಥ ಮೂಲವಿಧಿ ನೀನೆ ಚರಣದಾಸರ ಪ್ರಾಣಪದಕ ಶ್ರೀರಾಮಯ್ಯ ಸ್ಥಿರಮೋಕ್ಷ ಪಾಲಿಪ ಶ್ರೀಗುರುವು ನೀನೆ 3
--------------
ರಾಮದಾಸರು
ಬೇಡಿದವರಿಗೆ ದೊರೆವುದೇನೆಲೊ ಸಜ್ಜನರ ಸಂಗ ಬೇಡಿದವರಿಗೆ ದೊರೆವುದೇನೆಲೊ ಪ ಬೇಡಿದವರಿಗೆ ದೊರೆವುದೇನೆಲೊ ಗಾಢಮಹಿಮನ ಭಕ್ತರಾವಾಸ ಸುಕೃತ ಫಲವು ಕೂಡಿಬಂದ ಕೋವಿದರಿಗಲ್ಲದೆ ಅ.ಪ ದೃಢಕರಡಿಯಿಟ್ಟ ಭುವನವೆ ಕ್ಷೇತ್ರ ದೃಢಕ ಜನರಡಿಯೇ ಸುಯಾತ್ರಾ ಸಿದ್ಧ್ದಾಂತ ಮಾತಿದು ದೃಢಕರಾಡಿದ ಮಾತೆ ನಿಜಮಂತ್ರ ಇದೆ ಮೂಲಶಾಸ್ತ್ರ ದೃಢಕರು ನಿಂತ ಸ್ಥಳವೆ ಬದರಿ ದೃಢಕರು ಕೂತಸ್ಥಾನ ಮಧುರೆ ದೃಢಕರೊಟನಾಟ ಲಭ್ಯವೆಂದರೆ ಪಡೆದ ಪುಣ್ಯ ಮಹಭಾಗ್ಯಗಲ್ಲದೆ 1 ಭಕ್ತ ಜನಮಿಂದದೆ ತೀರ್ಥವು ನಿಖಿಲರರಿವುದೆ ಭಕ್ತ ಜನರುಂಡಸ್ಥಳ ಸಿರಿಯಾವಾಸವು ದೊರೆಯದಾರಿಗೆ ಭಕ್ತ ದರ್ಶನ ಪರಮ ಮಂಗಲವೋ ಶುಭಕೆ ಶುಭಕರವು ಭಕ್ತಜನರಿಹ್ಯ ಸಭೆಯೆ ಹರಿಸಭೆ ಭಕ್ತರೊಪ್ಪಿಗೆ ಹರಿಯ ಒಪ್ಪಿಗೆ ಮೃತ್ಯುದೂರ ಮಾಳ್ಪ ಸರ್ವೋತ್ತಮನ ಭಕ್ತರ ಪ್ರೇಮದೊಲುಮೆ 2 ದಾಸರ್ವಾಸವೆ ಕಾಶಿಕೇಂದ್ರವು ಸತ್ಯ ಸತ್ಯವಿದು ದಾಸರಿರುವುದೆ ಪರಮ ವೈಕುಂಠವು ಮತ್ರ್ಯರರಿವುದೆ ದಾಸಗಿತ್ತದ್ದು ಹರಿಗೆ ಅರ್ಪಣವು ಪರಮ ಸುಖಕರವು ದಾಸರೊರ್ಣವು ತೀರದಾರಿಗೆ ಶ್ರೀಶ ಶ್ರೀರಾಮನಡಿಯಕಮಲ ದಾಸರಿಜನರಡಿ ಪಿಡಿದು ಸುಸಹ ವಾಸದಿರುವುದೆ ಮುಕ್ತಿಸಂಪದ3
--------------
ರಾಮದಾಸರು
ಮಾರ್ಗದರ್ಶಕೆ ದೇವಿ ಮಾರ್ಗ ತೋರಮ್ಮ |ಸರ್ವ ಪೂರ್ವದಿ ಕವ್ಯ ಬಾಲನೆಂಬನ ಮಗಳೇ ಪ ಹರಿದೀಕ್ಷೆ ಹರಿತತ್ವ ನಿರ್ಣಯಾದಿಗಳಿರುವನರರು ಕಲಿಯುಗದಲ್ಲಿ ದುರ್ಲಭರು ಎಂದು |ಪರಿಪರಿಯ ಚಿತ್ರಿಸುತ ಸದ್ಬೋಧ ಮಾಡಿರುವೆಹರಿ ಪದಾಬ್ಜದಿ ಭಕುತಿ ಎಷ್ಟಿಹುದೊ ನಿನ್ನಲ್ಲಿ 1 ಶೇಷಾಚಲಕೆ ಬಂದು ಆ ಸುತೀರ್ಥವು ಕಪಿಲಲೇಸಾಗಿ ಮಜ್ಜನವಗೈದು ತಪವಾ |ಸಾಸಿರೊರ್ಷವು ದಿವ್ಯ ಏಕ ಚಿತ್ತದಿ ಗೈದುಭಾಸುರ ಸ್ತೋತ್ರದಿ ಹರಿಯ ತೋಷಿಸಿದೇ 2 ತಂದೆ ತಾಯಿಯು ನೀನು ಬಂಧು ಬಳಗವು ನೀನುಎಂದೆಂದಿU5ಭ್ರಾತ ವಲ್ಲಭನು ನೀನೇ |ಇಂದಿರೇಶನ ಹೊರತು ಮಂದಿ ಬೇರಿಲ್ಲೆನಗೆಎಂದು ನೀತುತಿಸಿ ಹರಿ ಸಂದರ್ಶನವ ಪಡೆದೇ 3 ದ್ವಾಪರದಲಾ ಕವ್ಯ 5À್ನಜಿತು ನೃಪನಾಗೆರೂಪಲಾವಣ್ಯಾತಿಶಯಗಳಿ5 |ಭೂಪ ಕುವರಿಯು ಆಗಿ ನೀಲಾಖ್ಯೆ ಎನಿಸುತ್ತಶ್ರೀ ಪತಿಯ ಕೈ ಪಿಡಿಯೆ ಮನವ ನೀ ಮಾಡ್ಡೇ 4 ದೈತ್ಯ ಸಪ್ತಕರೇವೆ ಗೂಳಿಗಳು ತಾವಾಗಿಸತ್ಯ ಹರಿ ದ್ವೇಷವನೆ ಸಾಧಿಸುವೆವೆಂದೂನಿತ್ಯ ಪುಷ್ಟಾಂಗದಲಿ ಬೆಳೆಯುತ್ತ ನೃಪನಲ್ಲಿಕೃತ್ಯ ಸ್ವಯಂವರ ಕೇಳಿ ಹರ್ಷಿತರು ಆಗೀ 5 ವಿಪರೀತ ಮತಿಯುಳ್ಳ ಅಪರಿಮಿತ ಬಲತೋರ್ವಸಪುತ ಗೂಳಿಗಳನ್ನೆ ಆರು ಬಂಧಿಪರೋ |ನೃಪನೆಂದ ಸುತೆ ನೀಲೆ ಕನ್ಯೆ ಕೊಡುವೆನು ಅವಗೆನೃಪ ನಿಂತು ಪಣತೊಟ್ಟ ಕೌತುಕವ ಕೇಳೀ 6 ಆರು ಬಂದವರೆಲ್ಲ ಹೋರಿಗಳ ಪಿಡಿಯಲ್ಕೆವೀರ್ಯ ಸಾಲದೆ ಮರಳಿ ಹೋಗುತಿರಲೂ |ಮಾರ ಪಿತ ಶಿರಿ ಕೃಷ್ಣ ಹೋರಿ ನಾಸಿಕಗಳಿಗೆದಾರಗಳ ಬಿಗಿಯುತ್ತೆ ಬಂಧವನ ಗೈದಾ 7 ದೇವಿ ಸುಂದರಿ ನೀಲೆ ದಿವ್ಯ ಹಾರವ ಪಿಡಿದು ದೇವ ದೇವೇಶ ಶಿರಿ ಕೃಷ್ಣ ಕಂಠದಲೀಹಾವ ಭಾವದಿ ಬಂದು ಅರ್ಪಿಸಲು ತಕ್ಷಣದಿದೇವ ವಾದ್ಯವು ಮೊರೆಯೆ ಪೂವ ಮಳೆ ಬಿತ್ತು8 ಕೃಷ್ಣ ಮಡದಿಯರಾರು ಮಂದಿಯೊಳು ನೀಲಾಖ್ಯೆಲಗ್ನದುತ್ಸವ ಕೇಳ್ದ ಭಕುತ ಜನರಾ |ಭಗ್ನ ಗೈಸುತ ಪಾಪ ಮಗ್ನವಾಹುದು ಮನವುಕೃಷ್ಣ ಗುರು ಗೋವಿಂದ ವಿಠಲ ಪದದಲ್ಲೀ 9
--------------
ಗುರುಗೋವಿಂದವಿಠಲರು
ಶ್ರೀ ಬದರಿ ಬದರೀಯಾ | ಯಾತ್ರೆಯಾ ಮಾಡಿ | ಬದರೀಯಾ ಪ ಬದರಿಯ ಯಾತ್ರೆಯ ಮಾಡಿ | ನಿಮ್ಮಮುದ ಶಾಶ್ವತವನ್ನೆ ಬೇಡಿ | ಆಹಸದಮಲ ದೇಹದಾಲಯವೆ | ಸದಾಶ್ರಿತ್ಹಿಮಾಲಯಹೃದಯ ಮಧ್ಯದಲೀಹ | ಬದರೀನಾಥನ ನೋಡೀ ಅ.ಪ. ಶ್ವೇತ | ದ್ವೀಪಾದ್ಯಾಲಯಗಳಸುಪದ ತೀರ್ಥವು ಸ | ರಿತ್ಪ್ರವರಾದಿ ಚಿಂತಿಸಿ 1 ತನುಮನ ಧನಗಳಾಶೆಯ | ತೊರೆದುಮನ ಆದಿಕರಣಗಳ್ಹರಿಯ | ಪಾದವನಜದಲ್ಲಿಡೆ ಅದು ಅಭಯ | ಸುದತಿಮಣಿ ಸಹ ಪೋಗೋದೆ ಹೃದಯ | ಆಹವನ ಭುವನ ಚರಿಸಿ ಸತ್ಪಾ | ವನ ಕ್ಷೇತ್ರಗಳಮಣಿದು ಸರ್ವತೀರ್ಥ | ಸ್ನಾನಾದಿ ಗೈಯುತ 2 ಸಿಂಧು ಮಾಧವ ಸಿರಿ ಕೃಷ್ಣನ ನೆನೆದು 3 ಶೌರಿ ಪಾಂಡುರಂಗರಾರಾಧನೆಯ ಗೈದು | ತೋರುತ ಮುದವನು 4 ಶಾರದ ನಾಡೀಲಿ ಗಂಡಕೀ ಮತ್ತೆಚಾರು ಲಂಬುಶಿಖಿ ಗೋಮತಿ | ಆ ಗಾಂ-ಧಾರಿಯೊಳಗೆ ಮಾರುಧೃತಿ | ನೆನೆಚಾರು ಶಂಕಿನಿ ನಾಡಿ ತಪತೀ | ಆಹವೀರ ರಾಮಾ ಮಧು | ವೈರಿಯು ಶ್ರೀರಂಗನಾರಾಯಣನ ರೂಪ | ಸಾರುತ ತಪತೀಲಿ 5 ಸಿರಿ ಮಾಧವನ ನೆನೆಯೆಪರಿಹರಿಸುತ ಪಾಪ ಸರುವಾಭೀಷ್ಟವ ನೀವ 6 ಸ್ತವರನದಲೀಪರಿ ಮಿಂದು | ದೇಹಪವಿತರವಾಯಿತು ಎಂದು | ಕ್ಷೇತ್ರಸರ್ವವ ಸ್ತುತಿಸುತ ಮುಂದೆ | ಪೋಗೆಭವರಹಿತ ಹರಿದ್ವಾರ ಅಂದು | ಆಹಭುವನ ಪಾವನ ಗಂಗಾ | ಪ್ರವಹಮೀಯುತ ಮತ್ತೆಭವಹರ ಹರಿನಾಮ | ಶ್ರವಣ ಮನನಗೈದೂ 7 ಸೂರ್ಯ ಪ್ರಭೆ ನೇತ್ರಎಸೆವೊ ಲಲಾಟದಿ | ಹೃದಯ ದೋಳ್ವಿಕಾಲ 8 ಹೇಮ ಧಾಮ | ಕಂಡುನೀಗೊ ನೀ ದೇಹದ ಶ್ರಮ | ಓಡಿಪಂಚ ರೂಪಗಳನೆ ತಂದು | ಆಹಪಂಚ ನಾಡಿಯ ಮಧ್ಯ | ಮಿಂಚಿಪ ಗೃಹದಿ ವಿ-ರಂಚಿ ಪಿತನ ನೋಡಿ | ಸಂಚಿತಾದಿಯ ಕಳೆ 9 ಕಮಲ ಮಧ್ಯ | ಮುದದಲರ್ಚಿಸುತಲಿ 10
--------------
ಗುರುಗೋವಿಂದವಿಠಲರು
ಪಾಹಿಪಾಹಿಜಿತಮಾರ |ಪಾಹಿಸುಬೋಧೇಂದ್ರಸಮೀರ||ಮಹಾ ಮತಾಬ್ಧೀಂದು ದೀನಾಮರ |ಮಹಿಜ, ಸುಹಿತ, ಮಹಿತ ಪನಿರ್ಮಲಾತ್ಮ ಸದ್ಗುರು ಧೀರ |ಕರ್ಮವಿಷಯಾಪೇಕ್ಷಾ ದೂರ ||ಧರ್ಮಾಸಕ್ತ ಲೋಕೋದ್ಧಾರಶರ್ಮಸು |ಶರ್ಮಾದ ಭರ್ಮಾಂಗ ಮರ್ಮಜÕ 1ಅರ್ಕಮಹಿಮನೆ ಧೀಮಂತ |ಅರ್ಕಜನೊಲಿದಾನೀ ಶಾಂತ ||ಮರ್ಕಟದುರ್ವಾದಿಧ್ವಾಂತಅರ್ಕಕು |ತರ್ಕ ಸಂಪರ್ಕಾಹ ಅರ್ಕಾಭ ಪಾಹಿ 2ತೀರ್ಥ ಪಾಲಾ ಭಕ್ತಾಧೀನ |ತೀರ್ಥಾಂಘ್ರಿ ಪ್ರಾಣೇಶ ವಿಠಲನ ||ತೀರ್ಥದೂತ ನೀನಿದ್ದ ಸ್ಠಾನ ತೀರ್ಥವು |ತೀರ್ಥಪ ತೀರ್ಥಪ ತೀರ್ಥ ಮಾಂ ಪಾಹಿ 3
--------------
ಪ್ರಾಣೇಶದಾಸರು
ಭಾವಿಸಮೀರಶ್ರೀ ವಾದಿರಾಜ ಸ್ವಾಮಿ ಸ್ತೋತ್ರ108ಪಾಲಿಸೋ ಗುರುರಾಜ ಪಾಲಿಸೋಪಾಲಿಸೋಗುರುವಾದಿರಾಜ || ಪೊಗಳ-ಲಳವೇ ನಿನ್‍ಮಹಿಮೆ ಮಹೋಜ || ಅಹಹಂಸಹಯಾಸ್ಯವರಾಹಕೇಶವ ಪ್ರಿಯಹಂಸಾರೂಡ್ಯನೆ ನಮೋ ಶರಣು ಮಾಂಪಾಹಿ ಪವಾಗ್ವಿಭವನು ಗುರುವರ್ಯ || ಮಹಾಯೋಗಿವರನು ಯತಿವರ್ಯ || ಶಿರಿವಾಗೀಶಕರಪದ್ಮದುದಯ || ನಾಗಿಜಗತ್ತಲ್ಲಿ ಮಾಡಿ ದಿಗ್ವಿಜಯ || ಅಹಜಗವನಳೆದಮೂರ್ತಿತರಿಸಿ ನಿಲ್ಲಿರಿಸಿಪೊಗಳೆ ಮುಕ್ಕಣ್ಣಾದಿ ಸುರರೇಬಲ್ಲರು 1ಜೀವೋತ್ತಮವಿದ್ಯುತ್ಪತಿಯ ||ನಿತ್ಯಅವೇಶಯುತ ವ್ಯಾಸರಾಯ || ಮುನಿಸರ್ವಾಭೌಮರ ಸೇರಿ ದಿವ್ಯ || ವಾದಮಾಧ್ವ ವೈದಿಕ ಬ್ರಹ್ಮವಿದ್ಯ || ಅಹಸುವಿಚಾರ ಪ್ರವಚನರತನಾಗಿ ಭುವಿತತ್ವವಶ್ರುತಿಯುಕ್ತಿ ಯುಕ್ತದಿ ಬೋಧಿಸಿದ2ಕೂರ್ಮತೀರ್ಥವು ಧವಳಗಂಗೆ || ಅದರನಿರ್ಮಲ ಲಲಿತತರಂಗ|| ಲಿಪ್ತಚರ್ಮ ತೊಳೆದು ಪಾಪಭಂಗ || ಮಾಡಿಧರ್ಮ ಆಚರಣೆ ನಿಸ್ಸಂಗ || ಅಹ ||ಬುದ್ದಿಯ ಒದಗಿಸಿಗುರುಸೇವಾರತಿಯಿತ್ತುಮಧ್ವಾಂತರ್ಗತ ಶ್ರೀಶನಲಿ ಭಕ್ತಿ ತೋರ್ಪುದು 3ಧವಳಗಂಗೆಗೆ ಪೂರ್ವಾದೇಶ || ದಲ್ಲಿದೇವದೇವೋತ್ತಮ ವ್ಯಾಸ || ದೇವಅವಲೋಕಿಸುತ ಇಹ ಪಂಚ || ವೃಂದಾವನಮಧ್ಯದಲ್ಲಿ ಪ್ರವೇಶ || ಅಹ ||ಮಾಡಿದಿರಿ ತ್ರಿವಿಕ್ರಮನನಂತ ಗುಣಕ್ರಿಯದೃಢಧ್ಯಾನೋಪಾಸನ ಮಾಳ್ಪಮಹಂತ4ಪೂರ್ಣೇಂದು ಪೋಲುವ ಮುಖವ ||ಕಮಲಕರ್ಣಿಕೆವರ್ಣದಿ ಪೊಳೆವ ||ಗಾತ್ರಪೂರ್ಣಲಕ್ಷಣ ಸಂಯುತವ || ದಿವ್ಯಫಣಿಯಲ್ಲಿ ಪುಂಡ್ರವು ಊಧ್ರ್ವ || ಅಹಪೀತ ಸುವರ್ಣ ಸುರೇಶ್ಮಿವಸನಉಟ್ಟಪದ್ಮಜ ಪಾದಾರ್ಹನೆ ನಿನ್ನ ಕಂಡೆ ನಾ ಶರಣು 5ಗುರುವಾದಿರಾಜ ನಿನ್ ದೂತ || ವೀರಭದ್ರನೋಪಮ ಬಲವಂತ || ಬಾಧೆವಿದ್ರಾವ ಕ್ಷಣದಿ ಮಾಳ್ಪಂತ || ಅತಿಶೂರ ಅದ್ಬುತ ಶಕ್ತಿಮಂತ || ಅಹ ||ನಾರಾಯಣಾಹ್ವಯ ಭೂತರಾಜನು ಎನ್ನಸಂರಕ್ಷಿಸುವ ಗುರುರಾಜ ನಿನ್ ದಯದಿ 6ಒಡೆಯ ಶ್ರೀಪತಿಹಯವದನ || ತಾನೇಕಡಲೆ ಮಡ್ಡಿಯನ್ನು ನಿನ್ನ || ಕೈಯಿಂದಉಂಡದ್ದು ಚತುರ್ದೇಶಭುವನ|| ಖ್ಯಾತಿಈಡಿಲ್ಲ ಸ್ಮರಿಸೆಪಾವನ್ನ|| ಅಹ ||ಕುಸುಮಜಪಿತ ಉಕ್ತಅಭಯಪ್ರಸನ್ನ ಶ್ರೀನಿವಾಸನ್ನೊಲಿಸೋ ಎನಗೆ 7 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಭೇದ ಮುಕ್ತಾವಲಿ (ಕೋಲು ಹಾಡು)ಕೋಲು ಮುಕ್ತಿಮಾರ್ಗದ ಕೋಲು ದುಷ್ಟಶಾಸನಕೋಲು ಸುಖತೀರ್ಥಯತಿರಾಯನ ಕರದಂಡುಕೋಲು ಕೋಲೆನ್ನ ಕೋಲೆ ಪ.ಶ್ರೀದೇವಹೂತಿಜಾಜನಂಘ್ರಿಗೆ ನಮಿಸುವೆಶ್ರೀದೇವಿ ಪದಕೆ ಎರಗುವೆ ಕೋಲೆಶ್ರೀದೇವಿ ಪದಕೆ ಎರಗುವೆ ಮುಖ್ಯಗುರುವಾದಜವಾಯುರೊಂದಿಪೆ ಕೋಲೆ 1ವಾಣಿ ಭಾರತಿದೇವಿ ಗರುಡ ಮಹೇಶಾನಂತಜ್ಞಾನದಾತರಿಗೆ ನಮೋ ಎಂಬೆ ಕೋಲೆಜ್ಞಾನದಾತರಿಗೆ ನಮೋ ಎಂಬೆ ಶ್ರೀವಿಷ್ಣುಮಾನುನೆರಾರ್ವರ ಶರಣೆಂಬೆ ಕೋಲೆ 2ಗರುಡನ ರಂಭೆವಾರುಣಿಗಿರಿಜೇರಿಗೊಮ್ಮೆಕರಗಳ ಮುಗಿದು ಸ್ಮರಿಸುವೆ ಕೋಲೆಕರಗಳ ಮುಗಿದು ಸ್ಮರಿಸುವೆ ಇಂದ್ರ ಕಾಮವರಪ್ರಾಣಾನಿರುದ್ಧರ ಬಲಗೊಂಬೆÉ ಕೋಲೆ3ಇಂದ್ರಾಣಿರತಿಮುಖ್ಯರಾದ ತಾರತಮ್ಯದವೃಂದಾರಕಋಷಿನೃಪರನು ಕೋಲೆವೃಂದಾರಕಋಷಿನೃಪರಮನುಷ್ಯೋತ್ತಮರಂ ಧ್ಯಾನಿಸುವೆ ಮನದಲಿ ಕೋಲೆ 4ಏನೂ ಇಲ್ಲೆಂಬನ ಹಾನಿಗೆ ಕಡೆಯಿಲ್ಲತಾನೀಶನೆಂದು ನುಡಿದವ ಕೋಲೆತಾನೀಶನೆಂದು ನುಡಿದವ ತಮಸನುತಾನುಂಬ ತನ್ನ ಬಳಗದಿ ಕೋಲೆ 5ಹರಿಯ ಗುಣಕೆ ಎಣಿಕೆನಿಟ್ಟವ ಕೆಟ್ಟವಹರಿನಿರ್ಗುಣೆಂಬ ಡಂಬರ ಕೋಲೆಹರಿನಿರ್ಗುಣೆಂಬ ಡಂಬರ ಸಂಗದಿಧರೆಯ ಸಜ್ಜನರು ಮತಿಗೆಡಲಿ ಕೋಲೆ 6ಕ್ಷೀರಾಂಬುಧಿಮನೆಯ ವಾಸುದೇವನ ಆಜ್ಞಾಧಾರಿಯೆನಿಪ ವಾಯುದೇವನು ಕೋಲೆ ಆಜ್ಞಾಧಾರಿಯೆನಿಪ ವಾಯುದೇವನು ಮೊದಲಿಗೆವೀರ ಹನುಮ ಭೀಮನಾದನು ಕೋಲೆ 7ಮೂರನೆ ಅವತಾರಿ ಮಧ್ವರಾಯನು ಮುಕ್ತಿದಾರಿಯ ತನ್ನವರಿಗೆಲ್ಲ ಕೋಲೆ ಮುಕ್ತಿದಾರಿಯ ತನ್ನವರಿಗೆಲ್ಲ ತೋರಿದುದಾರಿಯ ಪದವ ಹೊಂದಿದೆ ಕೋಲೆ 8ಗುರುಮಧ್ವ ಎನ್ನ ಮಾತೆ ಗುರುಮಧ್ವನೆನ್ನತಾತಗುರುಮಧ್ವನಾಥ ಸಖಭ್ರಾತ ಕೋಲೆಗುರುಮಧ್ವನಾಥ ಸಖಭ್ರಾತನೆಂದವರಿಗೊಲಿವನು ಗತಿಯ ಕೊಡುವನು ಕೋಲೆ 9ಸುಖತೀರ್ಥರಾಯನ ಹಿತವಾಕ್ಯಕೆಣೆಯಿಲ್ಲಶುಕತಾತ ಸಮನ ದೈವಿಲ್ಲ ಕೋಲೆಶುಕತಾತ ಸಮನ ದೈವಿಲ್ಲವೆಂದವರಭಕುತಿಯ ಬೇಡಿ ಬಯಸಿದೆ ಕೋಲೆ 10ಭಕುತ್ಯೆಂಬ ಮುಯ್ಯವ ಹರಿಪಾದಕರ್ಪಿಸಿದಅಕಳಂಕ ಮಧ್ವ ಮುನಿರಾಯ ಕೋಲೆಅಕಳಂಕ ಮಧ್ವಮುನಿರಾಯನಂಘ್ರಿಗೆಸಕಳ ಭಾರವ ಒಪ್ಪಿಸಿದೆನು ಕೋಲೆ 11ವಿಶಿಷ್ಠ ಸ್ವರೂಪಾನಂದರ್ಭಾವ ಮೋಕ್ಷ ಸುವಾಸಿನೇರೆಲ್ಲರೊಂದಾಗಿ ಕೋಲೆ ಸುವಾಸಿನೇರೆಲ್ಲರೊಂದಾಗಿ ಹೋಗುವಹೇಸಿ ನಾರೇರ ಗೆಲ್ಲುವ ಕೋಲೆ 12ನಮ್ಮ ಮುತ್ತಯ್ಯನಾದ ಮರುತರಾಯನ ಕೀರ್ತಿನಿರ್ಮಲ ಬುಧರಿಗಮೃತವು ಕೋಲೆನಿರ್ಮಲ ಬುಧರಿಗಮೃತವು ಧರೆಯೊಳುಹಮ್ಮಿನ ಖಳರಿಗೆದೆಗಿಚ್ಚು ಕೋಲೆ 13ಮುತ್ತಯ್ನಂಶದ ಒಳಗೊಬ್ಬ ಜನಿಸಿದಹೆತ್ತಯ್ನಮ್ಮ ಜಯರಾಯ ಕೋಲೆಹೆತ್ತಯ್ನಮ್ಮ ಜಯರಾಯ ತನ್ನ ಬಂಧುಮೊತ್ತದಿ ರಾಜ್ಯವಾಳಿದ ಕೋಲೆ 14ಜಯರಾಯ ಸಂತತಿಯ ಮಕ್ಕಳು ನಾವೀಗಜಯನವಭೇರಿ ಹೊಯಿಸುತ ಕೋಲೆಜಯನವಭೇರಿ ಹೊಯಿಸುತ ರವದ ಜಾಗಟೆಯ ಬಿರುದಲಿ ಬರುತೇವೆ ಕೋಲೆ 15ಬಯಲು ಮಾತಿನವ ಕಡೆಗಾಗಿ ತತ್ವವಿನಯ ವಾಕ್ಯ ನಿಮಗೆ ಸೊಗಸಲ್ಲ ಕೋಲೆ ವಿನಯವಾಕ್ಯ ನಿಮಗೆ ಸೊಗಸಲ್ಲ ಕೇಳಿದರೆಭಯಬಿಟ್ಟುಕೇಳಿಕವಿಯರು ಕೋಲೆ16ಲೌಕಿಕ ಮಾತಿನಂತಲ್ಲ ಮುಯ್ಯದ ಹಾಡುವೈಕುಂಠಪತಿಯ ಅರಮನೆಯ ಕೋಲೆವೈಕುಂಠಪತಿಯ ಅರಮನೆಯಾಸ್ಥಾನದಏಕಾಂತ ನಾರೇರೊಪ್ಪಿದ್ದು ಕೋಲೆ 17ಹಾದಿ ಬೀದಿಯ ಜನರ ಮೆಚ್ಚಿನ ಮುಯ್ಯಲ್ಲಮಾಧವನ ಶ್ವೇತದ್ವೀಪದ ಕೋಲೆಮಾಧವನ ಶ್ವೇತದ್ವೀಪದ ಮಂದಿರದಿಶ್ರೀದೇವಿಯಮ್ಮ ಕೇಳ್ವಳು ಕೋಲೆ 18ಭ್ರಾಂತಜನರಿಗೆ ವಿಶ್ರಾಂತಿದೋರದು ಮುಯ್ಯಾನಂತಾಸನದ ಅನಂತನ ಕೋಲೆ ಅನಂತಾಸನದ ಅನಂತನ ಮಡದಿ ಶ್ರೀಕಾಂತೆ ನಮ್ಮವ್ವ ಕೇಳ್ವಳು ಕೋಲೆ 19ಹಾಡುತ ಬರುತೇವೆ ಹರಸುತ ಬರುತೇವೆರೂಢಿಯ ಸಾಧುಜನರನು ಕೋಲೆರೂಢಿಯ ಸಾಧುಜನರ ಗುಣಂಗಳ ಕೊಂಡಾಡುತ ನಾವು ಬರುತೇವೆ ಕೋಲೆ 20ದರ್ಶನರಾಯರು ಮೂವತ್ತೇಳು ಮಂದಿಅರಸರು ನಮ್ಮ ಹಿರಿಯರು ಕೋಲೆಅರಸರು ನಮ್ಮ ಹಿರಿಯರ ಮಹಿಮೆ ಉಚ್ಚರಿಸುತ ನಾವು ಬರುತೇವೆ ಕೋಲೆ 21ನಮ್ಮ ತವರಿಗೆ ಕೀರ್ತಿತಂದ ಕನ್ಯೇರು ನಾವುನಮ್ಮ ನೆಳಲಿಗಂಜಿ ನಡೆದೇವು ಕೋಲೆನಮ್ಮ ನೆಳಲಿಗಂಜಿ ನಡೆದೇವು ದುರುಳೇರಉನ್ಮತ್ತನಮಗೆ ಎಣಿಕಿಲ್ಲ ಕೋಲೆ22ಜ್ಞಾನದೀವಟಿಗೆ ಬೆಳಗಲೆ ಬರುತೇವೆಜ್ಞಾನ ಕತ್ತಲೆಯ ಬೆದರಿಸಿ ಕೋಲೆ ಅಜ್ಞಾನ ಕತ್ತಲೆಯ ಬೆದರಿಸಿ ಬರುವಾಗಹೀನ ಬುಧ್ಯರು ಮೋರೆ ತೆಗೆದಾರು ಕೋಲೆ 23ನಮ್ಮಯ್ಯನಾಸ್ಥಾನ ಬಣ್ಣಿಸಲಳವಲ್ಲನಿರ್ಮಳಾತ್ಮಕರು ಸಚಿವರು ಕೋಲೆನಿರ್ಮಳಾತ್ಮಕರು ಸಚಿವರು ಪರಿವಾರಧರ್ಮಶೀಲರು ವಿರತರು ಕೋಲೆ 24ಎತ್ತ ನೋಡಲಿ ನವಭಕ್ತಿರತ್ನದ ಬೆಳಗುಚಿತ್ರ ಮಂಟಪಕೆ ಎಣಿಕಿಲ್ಲ ಕೋಲೆಚಿತ್ರ ಮಂಟಪಕೆ ಎಣಿಕಿಲ್ಲ ಶಂಖಚಕ್ರಒತ್ತಿಡಿದವು ಭಿತ್ತಿಲಿ ಕೋಲೆ 25ಬ್ರಹ್ಮಸೂತ್ರದ ವಜ್ರಕಂಬದಿ ಕುಳಿತಿಹಬ್ರಹ್ಮಜÕಪರಮ ಹಂಸವು ಕೋಲೆಬ್ರಹ್ಮಜÕ ಪರಮಹಂಸವು ಪುಣ್ಯಶ್ಲೋಕಧರ್ಮಜÕರಾಯ ಗಿಳಿವಿಂಡು ಕೋಲೆ 26ಮ್ಯಾಗೆ ಮ್ಯಾಗೊಪ್ಪುವ ಸದ್ಗ್ರಂಥದುಪ್ಪರಿಗೇಲಿಕೂಗುವ ಸಾಮಕೋಗಿಲೆ ಕೋಲೆಕೂಗುವ ಸಾಮಕೋಗಿಲೆ ನವಿಲ್ಗಳುನಾಗಪಾಲಕಗೆ ಅತಿಪ್ರೀತಿ ಕೋಲೆ 27ಕಡುಭಕ್ತಿಪತಾಕೆ ಹರಿನಿಷ್ಠೆ ಕಳಸವುಕೊಡುವಅಭಯಛತ್ರ ಸಾಲ್ಗಳು ಕೋಲೆಕೊಡುವಅಭಯಛತ್ರ ಸಾಲ್ಗಳು ಶ್ರೀ ತುಲಸಿನಡುವೆ ಪ್ರಣತ ತೋರಣಗಳು ಕೋಲೆ 28ತಪವೆಂಬ ತಪಿತದರ ಮೈಸಿರಿಯನೃಪಜಯರಾಯನೆಸೆದನು ಕೋಲೆನೃಪಜಯರಾಯನೆಸೆದಾ ಸಿಂಹಾಸನದಿಶಶಿತೇಜದಂತೆ ಹೊಳೆದನು ಕೋಲೆ29ಆನೆಗಳೆಣಿಕಿಲ್ಲ ಕುದುರೆಯ ಗಣನ್ಯಿಲ್ಲಕಾಲಾಳು ರಥಕೆ ಮಿತಿಯಿಲ್ಲ ಕೋಲೆಕಾಲಾಳು ರಥಕೆ ಮಿತಿಯಿಲ್ಲ ಅನ್ಯೋಕ್ತಿಜಾಣೆ ದಾಸೇರಿಗೆ ಕಡೆಯಿಲ್ಲ ಕೋಲೆ 30ಕುವಿದ್ಯಾರಣ್ಯವ ಸವರಿ ಬೇಟ್ಯಾಡಿದಕೋವಿದನಮ್ಮ ಹಡೆದಪ್ಪ ಕೋಲೆಕೋವಿದನಮ್ಮ ಹಡೆದಪ್ಪ ರಚಿಸಿದದೇವವನಗಳ ವರ್ಣಿಪೆ ಕೋಲೆ 31ತತ್ವಪ್ರಕಾಶದ್ದಾಳಿಂಬೆ ಸುಧಾರಸಬಿತ್ತಿದ ಕಬ್ಬಮೋಘ ಮಾವು ಕೋಲೆಬಿತ್ತಿದ ಕಬ್ಬಮೋಘ ಮಾವು ಪದ್ಯಮಾಲೆಉತ್ತತ್ತಿ ತೆಂಗು ಹಲಸನ್ನು ಕೋಲೆ 32ಹತ್ತು ಪ್ರಕರಣ ದಾಟಿತೆಂಬೊ ದ್ರಾಕ್ಷದಸುತ್ತಿದ ಬಳ್ಳಿಮಂಟಪ ಕೋಲೆಸುತ್ತಿದ ಬಳ್ಳಿಮಂಟಪದಿ ಶುದ್ಧಮತ್ಯೌನ ಕೂಡಪ್ಪ ನಲಿದನು ಕೋಲೆ 33ದೇಶ ದೇಶದೊಳಿದ್ದದುರ್ವಾದಿಪೋಕರಘಾಸಿಸಿ ಜಯಪತ್ರ ದ್ರವ್ಯವ ಕೋಲೆಘಾಸಿಸಿ ಜಯಪತ್ರ ದ್ರವ್ಯವ ತಂದು ಮಧ್ವೇಶಗರ್ಪಿಸಿದ ಮುದದಿಂದ ಕೋಲೆ 34ಬಂಧು ಸುದರ್ಶನರಾಯರ ಒಡಗೂಡಿಮಂದಿರದೊಳಗಾನಂದಿಪ ಕೋಲೆಮಂದಿರದೊಳಗಾನಂದಿಪ ಶ್ರುತವೇಷತಂದೆಯನೇನ ಹೊಗಳುವೆ ಕೋಲೆ 35ಇಪ್ಪತ್ತೈದು ತತ್ವ ನಾಣ್ಯದಿ ರಾಮನಾಮಸುಪ್ಪಾಣಿಮುದ್ರೆ ನಡೆಸುವ ಕೋಲೆಸುಪ್ಪಾಣಿಮುದ್ರೆ ನಡೆಸುವ ತನ್ನವರಿಗೆತಪ್ತ ಮುದ್ರೆ ಕುರುಹಿಟ್ಟನು ಕೋಲೆ 36ಭೇದಿಸಿ ನೋಡಿರೊ ಭೇದವ ತಿಳಿಯಿರೊಮಾಧವಜೀವ ಜಡರೊಳು ಕೋಲೆಮಾಧವಜೀವ ಜಡರೊಳು ಎನುತಲಿಬೋಧಿಸಿದನು ಹಿತಮಾರ್ಗ ಕೋಲೆ 37ತನ್ನ ಹೊಂದಿದರಿಗೆ ಪ್ರೌಢವೃತ್ತಿಯನು ಶ್ರೀಮನ್ನಾಮಾಮೃತವನುಣಿಸುವ ಕೋಲೆ ಶ್ರೀಮನ್ನಾಮಾಮೃತವನುಣಿಸುವ ಹೊರೆವನುಉನ್ನತ ಮಹಿಮ ಜಯರಾಯ ಕೋಲೆ 38ಆವಾಗಸೂತ್ರಾರ್ಥ ನಿಸ್ಸಾಳ ವ್ಯಾಖ್ಯಾನತೀವಿದ ಶ್ರುತಿಯ ಕಹಳೆಯು ಕೋಲೆತೀವಿದ ಶ್ರುತಿಯ ಕಹಳೆ ಧ್ವನಿಯುಂಟುಶ್ರೀವ್ಯಾಸ ರಾಮಾರ್ಚನೆಯುಂಟು ಕೋಲೆ 39ಅಚ್ಚ ಸಾತ್ವಿಕನಾದ ರಾಜಾಧಿರಾಜನಹೆಚ್ಚಿನಸತಿಶುದ್ಧಮತಿಯಮ್ಮ ಕೋಲೆಹೆಚ್ಚಿನಸತಿಶುದ್ಧ ಮತಿಯಮ್ಮ ನಮ್ಮಮ್ಮನಿಚ್ಚನಮ್ಮನು ಹೊರೆವಳು40ತಾಯಿ ತಂದೇರ ಹಾಡಿ ದಣಿಯದು ನಮ್ಮ ಮನಭಯವು ಅದರಲ್ಲಿರುವುದು ಕೋಲೆಭಯವು ಅದರಲ್ಲಿರುವುದು ಶುಭಗುಣಬಾಯಿ ಮಾತಿಗೆ ತೀರವು ಕೋಲೆ 41ಬಂದೆವು ಬೀಗರ ಮನೆಗಿಂದೆ ಮುಯ್ಯವತಂದೇವು ಬಾಲೇರೊಡಗೂಡಿ ಕೋಲೆತಂದೇವು ಬಾಲೇರೊಡಗೂಡಿ ಬೀಗರಅಂದವ ಹೇಳಲಳವಲ್ಲ ಕೋಲೆ 42ಬಹುಕಾಲದ್ಹಿರಿಯರು ಬಾಳಿದ ಮನೆಯಿದುವಿವರಿಸಿ ನೋಡಲರಿಯದೆ ಕೋಲೆವಿವರಿಸಿ ನೋಡಲರಿಯದೆ ಕೆಡಿಸಿದರುಧವಳಾರವೆಲ್ಲ ಮಲಿನವು ಕೋಲೆ 43ಬೀಗರಿದ್ದ ಮನೆಯನೆತ್ತೆತ್ತ ನೋಡಲುಬಾಗಿಲು ಬಯಲು ಬರೆಹುಯಿಲು ಕೋಲೆಬಾಗಿಲು ಬಯಲು ಬರೆಹುಯಿಲು ನಮ್ಮವರುಹ್ಯಾಗೆಂತು ಹೆಣ್ಣು ಕೇಳುವರು ಕೋಲೆ 44ಸಂಖ್ಯಾವಿದನೆಂಬಾತ ಮಾವನಾತನ ರಾಣಿಬಿಂಕದ ಬೌದ್ಧದೇವ್ಯತ್ತಿ ಕೋಲೆಬಿಂಕದ ಬೌದ್ಧದೇವ್ಯತ್ತಿ ಭಾಟ್ಟ ನಿ:ಶಂಕ ಚಾರ್ವಾಕಭಾವಮೈದುನರು ಕೋಲೆ45ಮಿಥ್ಯನಮ್ಮತ್ತಿಗೆಮಾಯೆನಮ್ಮ ನಾದಿನಿಸುತ್ತಿನ ಬಳಗಕೆಣಿಕಿಲ್ಲ ಕೋಲೆಸುತ್ತಿನ ಬಳಗಕೆಣಿಕಿಲ್ಲ ಕೆಣಕಿದರೆಮತ್ತೇನಾದರು ಹುರುಳಿಲ್ಲ ಕೋಲೆ 46ಇಪ್ಪತ್ತೊಂದು ಮಂದಿ ಹೆಸರಾದವರ ಕೂಡಬಹುಕಾಲ ಕಜ್ಜವು ನಮಗುಂಟು ಕೋಲೆಬಹುಕಾಲ ಕಜ್ಜವು ನಮಗುಂಟು ಹಾಲಿಗೆಹೆಪ್ಪನೆರೆದಂತೆ ಹಿತಮಾತು ಕೋಲೆ 47ಅಂಗಳದೊಳು ಬಂದು ತಿಳಿದೇವು ಅತ್ತಿಗೇರಶೃಂಗಾರಗರತಿ ಸಿರಿಯನು ಕೋಲೆಶೃಂಗಾರಗರತಿ ಸಿರಿಯನು ಕಾಣುತಹಿಂಗದೆ ನಿಂತು ನುಡಿಬೇಕು ಕೋಲೆ 48ತಂಗಳೆಂಜಲು ಎಂಬೊ ಅಂಜಿಕೆ ತಮಗಿಲ್ಲಮಂಗಳಧಾತು ಕಾಣೆವು ಕೋಲೆಮಂಗಳಧಾತು ಕಾಣೆವು ಅತ್ತಿಗೇರುತಿಂಗಳಸ್ನಾನ ಅರಿಯರು ಕೋಲೆ 49ದಾವಮೂಲೆಲಿ ಬೂದಿ ಮನೆಗಸ ನೋಡಿರೆಭಾವಿ ಅತ್ತೆಯಕೆಲಸವ ಕೋಲೆಭಾವಿ ಅತ್ತೆಯ ಕೆಲಸಕೆ ಮೆಚ್ಚಿದೆವುನಾವೇನುಡುಗೊರೆಯ ಕೊಡಬೇಕು ಕೋಲೆ 50ಮಿಥ್ಯಾವಾದದಲಿ ನಮ್ಮತ್ತಿಗೆ ಬಲುಜಾಣೆಹೆತ್ತವ್ರನೆಲ್ಲ ಹುಸಿಯೆಂದು ಕೋಲೆಹೆತ್ತವ್ರನೆಲ್ಲ ಹುಸಿಯೆಂದು ಶಿವನೊಬ್ಬಸತ್ಯ ತಾನೆಂದು ನುಡಿವಳು ಕೋಲೆ 51ಕಚ್ಚೆ ಹಾಕಿದವರಿಗೆ ವಿಪ್ರರೆಂದ್ಹೆಸರಿಟ್ಟುನಿಚ್ಚಗೆಳತೇರ ಒಡಗೂಡಿ ಕೋಲೆನಿಚ್ಚಗೆಳತೇರ ಒಡಗೂಡಿ ಗೆಳೆತನಹೆಚ್ಚಾಗಿ ನಡೆಸುತಿಹಳು ಕೋಲೆ 52ದೊಡ್ಡಾಕಿ ನಾನೆಂದು ಅಡ್ಡಡ್ಡ ನಡೆವಳುದೊಡ್ಡವರ ಕಂಡರೋಡೋಳು ಕೋಲೆದೊಡ್ಡವರ ಕಂಡರೋಡೋಳು ನಡುಮನೆದೊಡ್ಡಿಗೆ ತಾನು ಹಿರಿಯಳೆ ಕೋಲೆ 53ಮಾಯಿನ ದನಿನೋಡಿ ಮಾವನ ಕಿರಿಮಗಳುಬಾಯಿ ಬಡಕಿಯು ಬಹುಭಾಷಿ ಕೋಲೆಬಾಯಿ ಬಡಕಿಯು ಬಹುಭಾಷಿ ವೆಡ್ಡಗೊಂಡನಾಯಿಯ ತೆರದಿ ಬಲುಕೋಪಿ ಕೋಲೆ 54ತಾಯಿ ತಂದೆಯರಿಗೆ ಗುಣವಂತೆ ಮಗಳೀಕೆನೋಯಿಯ ನುಡಿವಳುಂಡುಟ್ಟು ಕೋಲೆನೋಯಿಯ ನುಡಿವಳುಂಡುಟ್ಟು ಆ ಕ್ಷಣಬಾಯಾರುವಲ್ಲಿ ಬಲ್ಲಿದಳು ಕೋಲೆ 55ಮಹಾತ್ತುಮರ ಮಟಾಮಾಯ ಮಾಡುವ ಶಕ್ತಿಮಹಾಢಾಳಿಕಿಯ ಬಲ್ಲಳು ಕೋಲೆಮಹಾಢಾಳಿಕಿಯ ಬಲ್ಲಳು ಆ ಬುಧರಮಾಯಿ ಅಭದ್ರೆಘನಕ್ಷುದ್ರೆ ಕೋಲೆ56ತನ್ನ ಬದಿಯ ತನ್ನೆರೆಹೊರೆಯವರನುತನ್ನಂತೆ ಮಾಡಿಕೊಂಡಳು ಕೋಲೆತನ್ನಂತೆ ಮಾಡಿಕೊಂಡಳು ಮನದಲಿಉನ್ಮತ್ತವೃತ್ತಿಕಲಿಸೋಳು ಕೋಲೆ57ಪ್ರಸ್ತವ ಮಾಡುವ ಮನೆಯೊಳು ಹೋಗುವಳುಅಸ್ತವ್ಯಸ್ತದಲಿ ಬಲುಬೇಗ ಕೋಲೆಅಸ್ತವ್ಯಸ್ತದಲಿ ಬಲುಬೇಗ ಷಡ್ರಸನ್ನಹಸ್ತಲಾಘವದಿ ಕೆಡಿಸುವಳು ಕೋಲೆ 58ಒಳ್ಳೆ ಶಾಲ್ಯೋದನ ಭಕ್ಷ್ಷ್ಯಭೋಜನದೊಳುಕೊಳ್ಳಿಯಿಕ್ಕಿ ಕೆಡಿಸುವಳು ಕೋಲೆಕೊಳ್ಳಿಯಿಕ್ಕಿ ಕೆಡಿಸುವಳು ಪದಾರ್ಥವನೆಲ್ಲ ಏಕಾಕಾರ ಮಾಡುವಳು ಕೋಲೆ 59ಅತ್ತಿಗೆನಾದಿನೇರ ಗೋಡೆಯ ಮೇಲಿನಚಿತ್ತಾರದ ಗೊಂಬಿ ನೋಡಿರೆ ಕೋಲೆಚಿತ್ತಾರದ ಗೊಂಬಿ ನೋಡಿರೆ ಅಖಂಡಮತ್ತೆ ಭೇದಗಳು ತಿಳಿಯವು ಕೋಲೆ 60ಕಂಬ ಬೋದುಗಳೊಂದೆ ಕೆಳಮೇಲು ಕಟ್ಟು ಒಂದೆಅಂಬುಜಮದ್ದುಗುಣಿಕೊಂದೆ ಕೋಲೆಅಂಬುಜಮದ್ದುಗುಣಿಕೊಂದೆ ತುಲಸಿ ಕದಂಬವು ಎಕ್ಕೆ ಗಿಡವೊಂದೆ ಕೋಲೆ 61ಕಾಗೆ ಕೋಗಿಲೆ ಒಂದೆ ಗೂಗೆ ನವಿಲು ಒಂದೆನಾಗನೀರೊಳ್ಳಿಯ ಹಾವು ಒಂದೆ ಕೋಲೆನಾಗನೀರೊಳ್ಳಿಯ ಹಾವು ಒಂದೆ ಚಿತ್ತರದಾ ಗಿಳಿಹಿಂಡು ತಿಳಿಯವು ಕೋಲೆ 62ಕುದುರೆ ಕತ್ತೆಯ ಬಣ್ಣ ಆನೆ ಹಂದಿಯ ಬಣ್ಣಮದಹುಲಿಗೆ ನಾಯಿ ಬಣ್ಣವು ಕೋಲೆಮದಹುಲಿಗೆ ನಾಯಿ ಬಣ್ಣ ಒರ್ಸಿಟ್ಟಿಹಚದುರೆಯ ಕೈಗೆ ಕಡಗವು ಕೋಲೆ 63ಅತ್ತಿಗೆನಾದಿನೇರ ಚಿತ್ತಾರ ಬಲುಘನಮತ್ತೆ ತೀರದ ಗುಣಗಳು ಕೋಲೆಮತ್ತೆ ತೀರದ ಗುಣಗಳುಭಾವಮೈದುನರೆತ್ತೋಡಿದರು ಸುಳುಹಿಲ್ಲ ಕೋಲೆ 64ಗುರುಗಳ ಭಯವಿಲ್ಲ ಹಿರಿಯರ ಸ್ಮರಣಿಲ್ಲಹರಿಯೆ ತಾವೆಂದು ಬೆರೆತರು ಕೋಲೆಹರಿಯೆ ತಾವೆಂದು ಬೆರೆತರು ದಿಂಡೇರಿಗೊರೆವರು ತಮ್ಮ ಬುದ್ಧಿಯ ಕೋಲೆ 65ಲಗಳಿಯ ಕೋಣಗೆ ಲಘ್ವಾದ ಕೆಲಸೆತ್ತಜಗದೀಶನೆತ್ತ ತಾವೆತ್ತ ಕೋಲೆಜಗದೀಶನೆತ್ತ ತಾವೆತ್ತ ಭಾವರನಗೆಗೇಡು ನೋಡಿ ನಗುತೇವೆ ಕೋಲೆ 66ಹೆಗಲ ಕಾವಡಿಯವಗೆ ಹಗಲು ದೀವಟಿಗೇಕೆಮಿಗಿಲಾದ ಬಿರುದು ತಮಗೇಕೆ ಕೋಲೆಮಿಗಿಲಾದ ಬಿರುದು ತಮಗೇಕೆ ಮೈದುನರಮೊಗ ನೋಡಿದರೆ ಹೊಗೆಗೆಂಡ ಕೋಲೆ 67ಪಂಚದೇವನ ಪೂಜೆ ಮಾಡುವರೊಂದಾಗಿಹಿಂಚು ಮುಂಚುಗಳ ಅರಿಯರು ಕೋಲೆಹಿಂಚು ಮುಂಚುಗಳ ಅರಿಯರು ಬರಿದೆ ಪ್ರಪಂಚವ ಬಿಟ್ಟೆವೆನಿಸುವರು ಕೋಲೆ 68ಹಿಂಡುಬಾಂಧವರು ತಮ್ಮೊಳು ತಾವೆ ಕೊಂಡಾಡಿಮಂಡಿಕೆಸೂತ್ರಹರಕೊಂಡು ಕೋಲೆಮಂಡಿಕೆಸೂತ್ರಹರಕೊಂಡು ಕೊಂಡಾಡಿಮಂಡೆಯ ಬಿಟ್ಟು ತಿರುಗೋರು ಕೋಲೆ 69ಇವರ ಲೆಕ್ಕದೊಳಗೆ ಹರಿಶಿವನೊಬ್ಬನೆರವಿಗಣನಾಥನೊಬ್ಬನೆ ಕೋಲೆರವಿಗಣನಾಥನೊಬ್ಬನೆ ಎಲ್ಲೆಲ್ಲಿದಿವಿ ದೇವರೊಳಗೆ ಬೇರಿಲ್ಲ ಕೋಲೆ 70ವಿಧಿನಿಷಿದ್ಧಗಳಿಲ್ಲಪೋಕಮತದೊಳುಉದರ ತುಂಬಿದರೆ ಸಮದೃಷ್ಟಿ ಕೋಲೆಉದರ ತುಂಬಿದರೆ ಸಮದೃಷ್ಟಿ ಹರಿವ್ರತಮೊದಲಿಗಿಂದಿಗೆ ಸೊಗಸವು ಕೋಲೆ 71ಬದನೆ ನುಗ್ಗೆಯ ಕಾಯಿ ಸಲೆ ತೊಂಡೆ ತುಪ್ಹೀರೆಮೃದು ಮೂಲಂಗಿ ಗಜ್ಜರಿಗಳು ಕೋಲೆಮೃದು ಮೂಲಂಗಿ ಗಜ್ಜರಿಗಳು ಇವರಿಗೆಮುದದೂಟ ಆತ್ಮಾರಾಮನ ತೃಪ್ತಿ ಕೋಲೆ 72ಬಸಳೆ ಸಬ್ಬಸೆ ಸೊಪ್ಪು ಹುಳಿ ಚುಕ್ಕದ ಗೂಡೆಹಸನಾದ ಪುಂಡಿ ಬಲುಪ್ರೀತಿ ಕೋಲೆಹಸನಾದ ಪುಂಡಿ ಬಲುಪ್ರೀತಿಹಸಿವಿಗೆ ದೊರೆಯ ಪರಲೋಕ ಕೋಲೆ 73ಮಡಿ ಮೈಲಿಗೆಯು ಒಂದೆ ಸ್ನಾನಪಾನಗಳೊಂದೆಹುಡುಗ ಹಿರಿಯರ ಬಳಿಕೊಂದೆ ಕೋಲೆಹುಡುಗ ಹಿರಿಯರ ಬಳಿಕೊಂದೆನುಡಿಬೇರೆ ಪೋಕರ ನಡೆಬೇರೆ ಕೋಲೆ 74ನಮ್ಮ ನಗೆಯೊಳಗೆ ಉನ್ನತ ಸುಖವುಂಟುರಮ್ಮೆಯ ರಮಣ ಕರುಣಿಪ ಕೋಲೆರಮ್ಮೆಯ ರಮಣ ಕರುಣಿಪ ಒಡಲ್ಹೊಕ್ಕುನಮ್ಮವರಾಗಿ ಸುಖಿಯಾಗಿ ಕೋಲೆ 75ನಿಮ್ಮ ಹಿರಿಯರೆಲ್ಲ ನಮ್ಮ ಮನೆಯ ಹೊಕ್ಕುಧರ್ಮಾರ್ಥ ಸೂರೆಗೊಂಡರು ಕೋಲೆಧರ್ಮಾರ್ಥ ಸೂರೆಗೊಂಡರು ಜಗವರಿಯೆನಿರ್ಮಳರಾಗಿ ಸುಖಿಯಾಗಿ 76ಮಾವನೊಳಗೆ ನಮ್ಮ ನಗೆಯಿಲ್ಲ ಬೌದ್ಧದೇವೀರ ಕೂಡ ಸರಸಿಲ್ಲ ಕೋಲೆದೇವೀರ ಕೂಡ ಸರಸಿಲ್ಲ ಹಿರಿಯರುತಾವವರ ಗೆದ್ದು ನಗುವರು ಕೋಲೆ 77ನಿಪುಣೆಂದೆನಿಸುವಿರಿ ಚಪಳೆರೆಂದೆನಿಸುವಿರಿಅಪರಾತ್ರೆ ಆಯಿತು ಬಂದೀಗ ಕೋಲೆಅಪರಾತ್ರೆ ಆಯಿತು ಬಂದೀಗ ನಮಗಿನ್ನುಉಪಚಾರವುಂಟೊ ಗತಿಯಿಲ್ಲೊ ಕೋಲೆ 78ಮೋರೆ ತೋರದಿದ್ದರೆ ಮನೆಯೊಳಗಿರಿ ನೀವುಜಾರುತೇವೆ ನಮ್ಮ ಮನೆಗೀಗೆ ಕೋಲೆಜಾರುತೇವೆ ನಮ್ಮ ಮನೆಗೀಗೆ ಬೀದಿಲಿತೂರುತೇವೆ ನಿಮ್ಮ ಕರುಳನು ಕೋಲೆ 79ಈಪರಿನಾರೇರ ಹಿತವಾದ ನಗೆಗಳಕೋಪವ ಬಿಟ್ಟು ಕೇಳುತ ಕೋಲೆಕೋಪವ ಬಿಟ್ಟು ಕೇಳುತ ಬಂದು ಸವಿi್ಞಪಕ ಕೈಯವಿಡಿದರು ಕೋಲೆ 80ರತ್ನಗಂಬಳಿ ಹಾಸಿ ಒಳ್ಳೇರ ಮಕ್ಕಳೆಂದುಉತ್ತಮಗುಣವ ಕೊಂಡಾಡಿ ಕೋಲೆಉತ್ತಮ ಗುಣವ ಕೊಂಡಾಡಿ ಕುಳ್ಳಿರಿಸಿಚಿತ್ತಕೆ ಸುಖವ ಕೊಟ್ಟರು ಕೋಲೆ 81ಶ್ರೀಕಾಂತನರಮನೆಯ ಹೊಂದಿದವರು ನೀವುಏಕಾಂತ ಭಕ್ತಿ ಬಲ್ಲವರು ಕೋಲೆಏಕಾಂತ ಭಕ್ತಿ ಬಲ್ಲವರು ನಮ್ಮ ನೀವೆ ಕೂಡಿಕೊಳ್ಳಿ ದೂರ್ಯಾಕೆ ಕೋಲೆ 82ಸುಖದೂಟಸವಿಯನು ಅರಿಯದೆ ಕೆಟ್ಟೆವುಸುಖತೀರ್ಥಗುರುವು ನಮಗಾಗಿ ಕೋಲೆಸುಖತೀರ್ಥಗುರುವು ನಮಗಾಗಿ ಪರಲೋಕಸುಖ ಸೂರೆಗೊಂಡು ಬದುಕೇವು ಕೋಲೆ 83ಐದು ಭೇದವನರಿತು ನಡೆದೇವು ನಾವಿಪ್ಪತ್ತೈದು ತತ್ವಗಳ ತಿಳಿದೇವು ಕೋಲೆ ಇಪ್ಪತ್ತೈದು ತತ್ವಗಳ ತಿಳಿದೇವು ಮೇಲೆ ಮತ್ತೈದು ಮುಕ್ತಿಯ ಪಡೆದೇವು ಕೋಲೆ 84ಮುದ್ರೆ ಇಲ್ಲದ ನಾಣ್ಯ ಶುದ್ಧಲ್ಲ ಜಗದೊಳುಮುದ್ರಾಂಕರಾಗಿ ಬದುಕೇವು ಕೋಲೆಮುದ್ರಾಂಕರಾಗಿ ಬದುಕೇವು ಮಲೆತವರಗೆದ್ದೇವು ವಾಕ್ಯ ಬಲದಲ್ಲಿ ಕೋಲೆ 85ಇಂತೆಂಬ ನುಡಿಗೇಳಿ ಅಪಾರಾನಂದದಲ್ಲಿಕಾಂತೆಯರೆಲ್ಲ ಒಂದಾಗಿ ಕೋಲೆಕಾಂತೆಯರೆಲ್ಲ ಒಂದಾಗಿ ಮನದಿ ವಿಶ್ರಾಂತರಾದರು ತಮತಮಗೆ ಕೋಲೆ 86ಗುರುಭಕ್ತಿ ಅರಿಷಿಣ ಹರಿಭಕ್ತಿ ಕುಂಕುಮಪರಮಾರ್ಥ ಜ್ಞಾನಾಂಜನವನು ಕೋಲೆಪರಮಾರ್ಥ ಜ್ಞಾನಾಂಜನವನು ಇಟ್ಟರುಹರಿನಿರ್ಮಾಲ್ಯದ ಪುಷ್ಪ ಮುಡಿದರು ಕೋಲೆ 87ಸಸ್ಯ ಸಾರಾವಳಿಯ ಸೀರೆಯ ತೆಗೆದರುಅತ್ತಿಗೆಯವರ ಮನಮೆಚ್ಚು ಕೋಲೆಅತ್ತಿಗೆಯವರ ಮನಮೆಚ್ಚಿನುಡುಗೊರೆಅರ್ಥಿಲಿ ಕೊಟ್ಟು ನಲಿದರು ಕೋಲೆ 88ಮಾಧವಪ್ರತಿಷ್ಠಾನ ಪೇಟೆಯೊಳುದಿಸಿದಮಾದಳದ ಹಣ್ಣು ಬಣ್ಣದ ಕೋಲೆಮಾದಳದ ಹಣ್ಣು ಬಣ್ಣದ ಸೀರೆಯನಾದಿನಿ ಜಾಣೆಗಿತ್ತರು ಕೋಲೆ 89ಅಚ್ಚ ಬಂಗಾರದ ಶಂಖಚಕ್ರಂಗಳಅಚ್ಚನೆತ್ತಿದ ನಯವಾದ ಕೋಲೆಅಚ್ಚನೆತ್ತಿದ ನಯವಾದ ಬೇರೆ ಬೇರೆಹಚ್ಚಡಗಳು ಬಾವರಿಗಿತ್ತು ಕೋಲೆ 90ಭೇದ ಭೇದದ ಬಣ್ಣ ಬಗೆ ಬಗೆ ಚಿತ್ರದನಾದ ಸಮುದ್ರದ ಪೇಟೆಯ ಕೋಲೆನಾದ ಸಮುದ್ರದ ಪೇಟೆಯ ವಲ್ಲಿಗಳುಮೈದುನ ಜಾಣರುಡುಗೊರೆ ಕೋಲೆ 91ಹಿರಿಯ ಕಿರಿಯರ ನೋಡಿ ಮಾನ್ಯಾಮಾನ್ಯನ ನೋಡಿತರತಮ ಭಾವದುಪಚಾರ ಕೋಲೆತರತಮ ಭಾವದುಪಚಾರ ಮಾಡಿದರುಹರಿಗುರು ಮೆಚ್ಚಿ ನಲಿವಂತೆ ಕೋಲೆ 92ಈ ಪರಿಯಲಿವರ ಮನಮುಟ್ಟಿ ಮನ್ನಿಸಿಸುಗಂಧ ಪರಿಮಳ ದ್ರವ್ಯವ ಕೋಲೆಸುಗಂಧ ಪರಿಮಳ ದ್ರವ್ಯವ ಚೆಲ್ಲಾಡಿಶ್ರೀಪತಿಗವರರ್ಪಿಸಿ ಮುದದಿಂದ ಕೋಲೆ 93ಪರಸ ಮುಟ್ಟಿದ ಮೇಲೆ ಲೋಹ ಚಿನ್ನಾಗದೆಸುರನದಿಮುಟ್ಟಿ ಸಗರರ ಕೋಲೆಸುರನದಿಮುಟ್ಟಿ ಸಗರರುದ್ಧಾರಾದಂತೆಕರಗಿತುಅವರಮನಮೈಲಿಗೆ94ಶುಭಭರಿತಾದ ತಾಂಬೂಲ ಕೈಕೊಂಡುಶುಭವಾಕ್ಯ ನುಡಿದು ನಡೆವಾಗ ಕೋಲೆಶುಭವಾಕ್ಯ ನುಡಿದು ನಡೆವಾಗ ಬೀಗರುಅಬಲೇರಿಗೆ ಕೈಯ ಮುಗಿದರು ಕೋಲೆ 95ನಾಳೆ ನಿಮ್ಮಾಜÕ ಬರೆ ಮುಯ್ಯ ತರುವೆಆಳವಾಡದಿರಮ್ಮ ನಮ್ಮನು ಕೋಲೆಆಳವಾಡದಿರಮ್ಮ ನಮ್ಮನು ನೀವೀಗಏಳಿಲ ಮಾಡದಿರಿ ಕಂಡ್ಯಾ ಕೋಲೆ &ಟಿ;, bsಠಿ; 96ಹೀಗೆಂದ ಮಾತಿಗೆ ನುಡಿದರು ಹರಿಹರಿಭಾಗವತರೆಲ್ಲ ಧರೆಯೊಳು ಕೋಲೆಭಾಗವತರೆಲ್ಲ ಧರೆಯೊಳು ನಮ್ಮವರುಶ್ರೀಗಂಧ ಕರ್ಪೂರಕೆ ಮೈತ್ರವು 97ಅಪ್ಪ ಜಯತೀರ್ಥಗೆ ಹೆತ್ತವ್ವ ಶುದ್ಧಮತಿಗೆಒಪ್ಪುವ ಬಂಧು ಬಳಗಕೆ ಕೋಲೆಒಪ್ಪುವ ಬಂಧು ಬಳಗಕೆ ನಿಮ್ಮಗುಣಒಪ್ಪಣೆ ಹೇಳೇವು ಕೋಲೆ ಗನೀವು ಬಂದಾಕ್ಷಣ ಶ್ರೀವ್ಯಾಸರಾಯರನೈವೇದ್ಯ ತೀರ್ಥವು ಲಭ್ಯವು ಕೋಲೆನೈವೇದ್ಯ ತೀರ್ಥವು ಲಭ್ಯವು ನಮ್ಮಪ್ಪನಾವ ಪರಿಯಲಿ ಒಲಿಸೇವು ಕೋಲೆ 9ಮೆಲ್ಲನೆ ಹೊರವಂಟು ಫುಲ್ಲಭವ ಕೀರ್ತಿಸೊಲ್ಲುಸೊಲ್ಲಿಗೆ ಉಗ್ಗಡಿಸುತ ಕೋಲೆಸೊಲ್ಲುಸೊಲ್ಲಿಗೆ ಉಗ್ಗಡಿಸುತ ಹಾರುವಾಗಕ್ಷುಲ್ಲರ ಮನಕೆ ದಣಿವಾಯ್ತು ಕೋಲೆ 100ಮನೆ ಮುಟ್ಟಿ ಬಂದರು ಗುರುಪಾದ ಕಂಡರುಜನನಿಗೆ ಕೈಯ ಮುಗಿದರು ಕೋಲೆಜನನಿಗೆ ಕೈಯ ಮುಗಿದರುಕೈವಲ್ಯಕ್ಕನುಮಾನವಿಲ್ಲದೆ ನಡೆವರು ಕೋಲೆ 101ಧರೆಯ ಸಜ್ಜನರಿಗೆ ಸಕ್ಕರೆ ಸವಿಗಿಂತಉರೆ ಕಾಯ್ದ ಹಾಲ ಕೆನೆಗಿಂತ ಕೋಲೆಉರೆ ಕಾಯ್ದ ಹಾಲ ಕೆನೆಗಿಂತ ಸವಿಯುಂಟುಗುರುಭಕ್ತಿ ಉಂಟು ಪರವುಂಟು ಕೋಲೆ 102ಅಲ್ಪ ಕನ್ನಡದ ನುಡಿಯೆನ್ನಲಾಗದುಫಣಿತಲ್ಪನ ಪ್ರಿಯಗುರುಮಹಿಮೆ ಕೋಲೆಫಣಿತಲ್ಪನ ಪ್ರಿಯಗುರುಮಹಿಮೆ ನೋಡುವುದುತಪ್ಪನಾರಿಸದೆ ಶಿಷ್ಟರು ಕೋಲೆ 103ಜನ್ಮ ಜನ್ಮ ಬ್ರಹ್ಮ ವಾಯೂರೆ ಗುರುಗಳುರಮ್ಮೆಯ ರಮಣ ಮನೆದೈವ ಕೋಲೆರಮ್ಮೆಯ ರಮಣ ಮನೆದೈವವಾಗಲಿಶ್ರೀಮಧ್ವಾಚಾರ್ಯರು ಕೋಲೆ 104ಪ್ರಸನ್ನವೆಂಕಟಪತಿ ನಾಮದುಚ್ಚಾರಣೇಲಿಅಶುಭಕೋಟಿಗಳು ಉಳುಹಿಲ್ಲ ಕೋಲೆಅಶುಭ ಕೋಟಿಗಳು ಉಳುಹಿಲ್ಲ ಶುಭಮಸ್ತುಕುಶಲಾಯುರಾರೋಗ್ಯವಾಹುದು ಕೋಲೆ 105
--------------
ಪ್ರಸನ್ನವೆಂಕಟದಾಸರು
ಶ್ರೀವಿಭವಸಂವತ್ಸರ ಸ್ತೋತ್ರ146ರಾಜ ರಾಜೇಶ್ವರ ಉಪೇಂದ್ರನಿಗೆ ನಮೋ ಎಂಬೆಭ್ರಾಜ ಲಕ್ಷ್ಮಿ ಭೂಮ ನಾರಸಿಂಹನಿಗೂ ಆನಮಿಪೆ ಪರಾಜಿಸುವವಿಭವನಾಮ ಸಂವತ್ಸರ ನಿಯಾಮಿಕ ಏಕಾತ್ಮನಲ್ಲಿನಿಜ ಭಕ್ತಿಯಿಂದ ಸ್ತುತಿಪರನ್ನ ಸಂರಕ್ಷಿಪ ಶ್ರೀಹರಿಯು 1ಭಾಸ್ಕರೋದಯದಲ್ಲಿ ಪ್ರಭವಾಸಿತ ಪಕ್ಷ ನಂತರವಿಭವಸಿತ ಪ್ರತಿಸತ್ಊಶನ ಶುಕ್ರಭಾರ್ಗವವಾಸರವು ನಮೋ ಎಂಬೆಶುಕ್ರನಿಗೆ ನಮ್ಮ ಹಿತಕಾಯ್ವಿ 2ದಿನೋದಯದಿವಿಭವಸಂವತ್ಸರಸಿತಪಕ್ಷದ್ವಿತಿಯೇಯು ಸೌರವಾಸರವುರಾಜಶನೈಶ್ಚರಗೂ ಮಂತ್ರಿಬುಧಮೊದಲಾದವರಿಗೂನಮೋ ಎಂಬೆ ದಯವಾಗಲಿ 3ಊದ ಕೊರತೆ ಅತಿ ಉಷ್ಣ ಸಸ್ಯಸಾಂದು ರಾಜರಾಜರಾಜ ಜನ ಮನಸ್ತಾಪಜನಕಾಷ್ಟ ನೀದಯದಿ ಪರಿಹರಿಸಿ ಸಲಹೋಕೃಪಾನಿಧಿಯೇ ನರಹರಿಯೇ 4ಧವಳಗಂಗೆಗೆ ಅಪ್ರಸಿದ್ಧ ಹೆಸರು ಕೂರ್ಮತೀರ್ಥವುಎಂದುಂಟು ಅದು ಪ್ರಾಮಾಣಿಕ ಎಂದುತಿಳಿಯುವುದು ವಿಭವದಲಿ ನೀರಿನ ಮಟ್ಟ ಸ್ವಲ್ಪಕಾಲ ತಗ್ಗುವಾಗ 5ಸಂವತ್ಸರ ನಿಯಾಮಕಹರಿರೂಪಗಳ ಸೋಚಿತಆಚರಣೆ ಸಹ ಸಂಸ್ಮರಿಸಿಕುಲ ಇಷ್ಟದೇವರ ಮತ್ತು ಗುರುಗಳ ನೆನೆದು ಭಕ್ತಿಮಾಳ್ಪಜನರಿಗೆ ಸುಖಕಾಲ 6ಕಮಲಸಂಭವ ಪಿತ ಕಮಲಾಲಯಪತಿಅಮಲಪೂರ್ಣಾನಂದಾದಿಗುಣ ನಿಧಿಯುಸುಮನಸರೊಡೆಯ ಶ್ರೀ ಪ್ರಸನ್ನ ಶ್ರೀನಿವಾಸನುತನ್ನ ಭಕ್ತರಿಗೆಈವಸುಕ್ಷೇಮವನು ಸರ್ವದಾ7
--------------
ಪ್ರಸನ್ನ ಶ್ರೀನಿವಾಸದಾಸರು