ಒಟ್ಟು 83 ಕಡೆಗಳಲ್ಲಿ , 26 ದಾಸರು , 59 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಶ್ರೀ ವಿಷ್ಣುತೀರ್ಥರು) ಮೋದ ಬೀರುತ ತಾ ಮೋದಪುರಕೆ ಬಂದವನ್ಯಾರೆಪೇಳಮ್ಮಯ್ಯಾ ಪ ಶುಕಮುನಿ ಪೇಳಿದ ಶಾಸ್ತ್ರದ ಸಾರವ ಸುರಿಸಿದ ಧೀರ ಶ್ರೀ ವಿಷ್ಣುತೀರ್ಥಾರ್ಯ ಕಾಣಮ್ಮಾಅ.ಪ. ಶುದ್ಧವೃತ್ತಿಗಳಿಂದನುಭೋಗಿಪನ್ಯಾರೆ ಪೇಳಮ್ಮಯ್ಯಾ ಶುದ್ಧ ಜೀವರತಾ ಬುದ್ಧಿ ಭೇದಿಪನ್ಯಾರೆ ಪೇಳಮ್ಮಯ್ಯಾ ಶುದ್ಧ ಶೂನ್ಯರುಪದ್ರವ ಬಿಡಿಸುವನ್ಯಾರೆ ಪೇಳಮ್ಮಯ್ಯಾ ಶುದ್ಧ ಶೃತಿ ಸ್ಮøತಿ ಪದ್ಧತಿ ತಪ್ಪದೆ ಇರುವೋ ಯತೀಶ್ವರರೇ 1 ಮರೆಪೊಕ್ಕವರನು ಮರೆಯದೆ ಪೊರೆವನದಾರೆ ಪೇಳಮ್ಮಯ್ಯಾ ಮೋರೆಯ ತೋರೆಂದು ಮಾರನಯ್ಯ ಮುರಾರಿಗೆ ಪೇಳ್ವವನಾರೆ ಪೇಳಮ್ಮಯ್ಯಾ ಮೋರೆ ಮೋಹಿಸಿ ಮೂಲೋಕವ ಸುತ್ತಿದನ್ಯಾರೆ ಪೇಳಮ್ಮಯ್ಯಾ ಮೋರೆ ಒಂದು ಮೂರು ಕಣ್ಣುಳ್ಳ ಬೊಮ್ಮನ ಪ್ರೀತಿಯ ಮಗನಮ್ಮ 2 ಬಂದು ಸೇವಿಸೆ ಘನ ಬಂಧನ ಬಿಡಿಸುವನ್ಯಾರೆ ಪೇಳಮ್ಮಯ್ಯಾ ಹಿಂದು ಮುಂದು ತನ್ನ ನಂಬಿದವರ ಮನಮಂದಿರ ದಿಪ್ಪುವನ್ಯಾರೆ ಪೇಳಮ್ಮಯ್ಯಾ ಇಂದುಧರ ಖಳವೃಂದ ಮೋಹನ ಗುರು ನಂದಿವಾಹನನೇ ಪೇಳಮ್ಮಯ್ಯಾ ಇಂದಿರೇಶ ತಂದೆವರದಗೋಪಾಲವಿಠಲನ ಸೇವಿಪ ನೀಲಕಂಠ ಕಾಣಮ್ಮಾ 3
--------------
ತಂದೆವರದಗೋಪಾಲವಿಠಲರು
ಅರಿತು ನೀ ಸಾಧಿಸು ಘನಪರಮಾರ್ಥಾ ಪ ಭೇದವರ್ಜಿತನಾಗಿ ಸ್ವಾದ ಸೇವಿಸಬೇಕು ಪಾದ ತೀರ್ಥಾ 1 ಭಕ್ತಿಭಾವಾರ್ಥ ವಿರಕ್ತಿಯಿಂದಾಗಬೇಕು ಮುಕ್ತಿಮಾನಿನಿಗೆ ತಾಂ ಕರ್ತಾ 2 ವರಸಚ್ಚಿದಾನಂದ ಬ್ರಹ್ಮದಿಂದೆಸೆವ ಗುರುವಿಮಲಾನಂದ ಸಮರ್ಥಾ 3
--------------
ಭಟಕಳ ಅಪ್ಪಯ್ಯ
ಆದಿಯಲಿ ಮಧುಕೈಟಬರನು ಸಂಹರಿಸಿದಂಥ ಶೂರನೆ ವೇದವನು ಕದ್ದೊಯ್ದ ದಾನವನೊಳು ಕಾದಿಗೆದ್ದ ಧೀರನೆ 1 ಹದಿನಾರು ಸಾವಿರ ಗೋಪಿಯನಾಳಿದಾಮಿತ ಬಲವಂತನೆ ಕದನಕೊದಗಿದಸುರರನ್ನು ಸದೆ ಬಡಿದ ಪ್ರಖ್ಯಾತನೆ 2 ಸಾಧು ಸಜ್ಜನರ ಸಂತಾಪ ಕಳೆದಾಮೋದ ತೀರ್ಥಾರಾಧ್ಯನೆ ಆದಿದೈವಿಕಾದಿ ಈತಿ ಬಾಧೆ ಕಳೆಯೊ ರಂಗೇಶವಿಠಲನೆ 3
--------------
ರಂಗೇಶವಿಠಲದಾಸರು
ಆವ ಭಯವಿಲ್ಲ ಪರಾವರೇಶನ ಸಕಲ ಪ ಭಾವಜ್ಞ ಜನರಿಗಿನ್ನು ಅ.ಪ. ದೇಶಕಾಲೋಚಿತ ಧರ್ಮ ಗಿರ್ಮಗಳು ಸ ನ್ಯಾಸ ಮೊದಲಾದಾಶ್ರಮೋಚಿತ ಸುಕರ್ಮಗಳು ಮಾಸೋಪವಾಸ ವ್ರತ ನೇಮ ಗೀಮಗಳು ಸದ್ ಪ್ರದೋಷನ ಧ್ಯಾಯಗೀಯ ಶ್ವಾಸ ಬಂಧನ ಉಪನ್ಯಾಸ ತೀರ್ಥಾಟನೆ ರ ಮೇಶನ ಗುಣಗಳಟ್ಟಹಾಸದಲಿ ನೆನೆವುತ ನಿ ರಾಶೆಯಿಂದಿಪ್ಪ ಹರಿದಾಸ ದಾಸರಿಗೆ 1 ಸ್ನಾನ ಜಪ ದೇವತಾರ್ಚನೆ ವೈಶ್ಯದೇವ ಬಲಿ ವಿಧಿ ನಿಷೇಧಗಳು ವಿ ಸಂಹನನ ವೈರಾಗ್ಯ ಶಕ್ತಿ ಶ್ರೀನಿವಾಸನ ಪರಮ ವಿಮಲ ಲೋಕೈಕ ಕ ಲ್ಯಾಣ ಗುಣ ರೂಪ ಕ್ರಿಯೆಗಳನು ಜಡ ಚೇತನದಿ ಧೇನಿಸುತ ಮನದಿ ಹಿಗ್ಗುತ ತುತಿಸಿ ನಲಿವ ಸುಮ ಹಾನು ಭಾವರಿಗೆ ಈರೇಳು ಲೋಕದೊಳು ಇನ್ನು2 ಮಲಿನರಾಗಿಹರು ನೋಳ್ಪರಿಗೆ ಪ್ರತಿ ದಿನದಲ್ಲಿ ಸುಲಭರಂತಿಹರು ದುರ್ಗಮರಾಗಿ ತೋರುವರು ಅಳುವರೊಮ್ಮೊಮ್ಮೆ ಪರವಶರಾಗಿ ಮೈ ಮರೆದು ನಲಿವರೊಮ್ಮೊಮ್ಮೆ ನಗುತಾ ಜಲಜಾಕ್ಷನಮಲ ಮಂಗಳ ಗುಣವ ಕೇಳಿ ಗಂ ಟಲ ಶಿರಗಳುಬ್ಬಿ ಚಪ್ಪಳೆಗಳಂ ಬಾರಿಸುತ ಮುಳುಗಿ ಸುಖ ವನಧಿಯೊಳು ತನು ಪುಳಕೋತ್ಪವದಿ ಇಳೆಯೊಳಗೆ ಸಂಚರಿಪ ಕಲುಷವರ್ಜಿತಂಗೆ 3 ನೋಡುವುದೆ ಹರಿಮೂರ್ತಿ ಕೇಳುವುದೆ ಹರಿಕೀರ್ತಿ ಆಡುವುದೆ ಹರಿವಾರ್ತೆ ಮಾಡುವುದೆ ಹರಿಪೂಜೆ ನೀಡುವುದೆ ಅವಧಾನ ಬೇಡುವುದೆ ಪುರುಷಾರ್ಥ ಕೂಡುವುದೆ ಸಾಯುಜ್ಯವು ದಾಡಿಯಿಂದಲಿ ದನುಜರಳಿದು ಧರಣಿಯನು ತಂದ ಕ್ರೋಢರೂಪನೆ ಲೋಕಕ್ಕೆಲ್ಲ ಆನಂದ ನಾಡಾಡ ದೈವದಂತಿವನಲ್ಲವೆಂದು ಕೊಂ ಡಾಡುತವನಿಯೊಳು ಸಂಚರಿಸುವ ವಿಪಶ್ಚಿತರಿಗೆ 4 ಕುಟಿಲರಹಿತನು ಧರ್ಮಾರ್ಥ ಮುಕುತಿ ಸಂ ಸುರನದಿ ಮುಖ್ಯ ತೀರ್ಥ ವೆಂ ಕಟ ಶೈಲ ಮೊದಲಾದ ಕ್ಷೇತ್ರದಲಿ ಸತ್ಕರ್ಮ ಹಟದಿಂದ ಮಾಳ್ಪರೆಲ್ಲಾ ವಟ ಪತ್ರಶಯನನೊಲುಮೆಯನೆ ಬಯಸುವ ಜಾಂಡ ಕಟಹದ್ಭಹಿವ್ರ್ಯಾಪ್ತನಾದ ಶ್ರೀ ಜಗನ್ನಾಥ ವಿಠಲನಾವ ದೇಶದಿ ಕಾಲದಲ್ಲಿ ಪಾ ಸಟೆಯಿಲ್ಲವೆನುತ ಲಾಲಿಸುತಿಪ್ಪರಿಗೆ5
--------------
ಜಗನ್ನಾಥದಾಸರು
ಈಡುಗಾಣೆನಯ್ಯ ಜಗದೊಳಗೆ ಪ. ಬೇಡಿದಭೀಷ್ಟಗಳ ಕೊಡುವ ಹನುಮ ಭೀಮ ಮಧ್ವರಾಯ ಅ.ಪ. ಅಷ್ಟದಿಕ್ಕಲಿ ಭೂಪರಾಳಿದ ದುಷ್ಟರಾವಣನ್ನ ಪುರವ ದೃಷ್ಟಿಸಿ ನೋಡಿ ಸಮರದಲಿ ಪ್ರಹಾರವನೆ ಕೊಡಲು ಕಷ್ಟದಿ ಮೂಛ್ರ್ಯಕೃತನಾಗಿಯೆದೆ ಹಿಟ್ಟಾಗಿಸನಂತಕಂದಿಸಿಯೆ ಕಂಗೆಟ್ಟು ಹತ್ತು ದಿಸೆಗೆ ಓಡಿಸಿದ್ಯೊ ದಿಟ್ಟನಾಗಿ ನಿರಂತರದಿ ಹನುಮಾ 1 ನಾರದ ಅಯೋಧ್ಯದಿ ಪೇಳಲು ಶ್ರೀ ರಾವಣ ಸೈನ್ಯಗಳ ಓಡಿಸಿ ವಾರಿಧಿಗಳ ದಾಟಿ ಬೇಗ ನೂರುತಲೆ ಅಸುರನ ಪಟ್ಟಣದ ದ್ವಾರ ಬಂಧಿಸಿ ಸಕಲದ್ವೀಪದಲ್ಲಿದ್ದ ಕ್ರೂರ ಅಸುರನ್ನ ಕಾಲಲೊದ್ದು ವರ ವಿಭೀಷಣ ಸುಗ್ರೀವರ ಪುಚ್ಛದಲಿ ತರುಬಿದಿಯೊ ಸಮರ್ಥ ಹನುಮಾ 2 ರುದ್ರ ಬ್ರಹ್ಮರ ವರದಲವಧ್ಯನಾದ ಜರಾಸಂಧನಾ ಖಳರ ಸೀಳಿದ್ಯೊ ನೃಪರ ನಿಂದೆ ಯುದ್ಧದಲಿ ದುರ್ಯೋಧನನ ಕೊಂದ ಪ್ರಸಿದ್ಧ ಭೀಮರಾಯ ನಿಮಗೆ3 ವಾದಿಗಜಕೆ ಮೃಗೇಂದ್ರ ವಾದಿವಾರುಧಿ ಬಡಿವ ಮಾಯಾ ವಜ್ರ ಭೇದ ಮತಾಂಬುಧಿಗೆ ಚಂದ್ರ ಮೋದತೀರ್ಥಾನಂದಗೆ ಕೃಷ್ಣಾ ಅಷ್ಟವಾಳುಕ ಮುಷ್ಟಿ ತಂದೆ ಸಾಧುಜನರಿಗೆ ತತ್ವಬೋಧಿಸಿದೆ ಮೇದಿನಿಯೊಳು ಮಧ್ವರಾಯ ನಿಮಗೆ 4 ಇಂದುಮುಖಿ ಸೀತೆಗೆ ಮುದ್ರಿಕೆಯನಿತ್ತು ವಂದಿಸಿ ರಾಮಕಥೆಯ ಪೇಳಿದೆ ಅಂದು ರೋಮಕೋಟಿ ಶಿವರಮಾಡಿ ಪುರುಷಮೃಗವನೆ ತಂದೆ ಚಂದದಿಂ ಮಣಿಮಂತನ ಕೊಂದು ಸೌಗಂಧಿಕವ ತಂದೆ ನಂದತೀರ್ಥರಾದ ಅಚಲಾನಂದ ವಿಠಲನ ದಾಸ ನಿಮಗೆ5
--------------
ಅಚಲಾನಂದದಾಸ
ಏನೆಂಬೆ ನಿಮ್ಮ ಕರುಣವು ದೇವವರ್ಯ, ಶ್ರೀಮ- ಪ ದಾನಂದತೀರ್ಥಾರ್ಯ ಹರಿಕಾರ್ಯಧುರ್ಯ ಅ.ಪ. ವಾರಿಧಿಯ ಗೋಷ್ಪಾದ ನೀರಂತೆ ದಾಟ್ಯಂದುಮಾರು ಮಲೆತಾಕ್ಷನನು ಮುರಿದು ಮೆರೆದೆಸಾರಿ ಬಹ ರಕ್ಕಸರ ಮುರಿದÉೂಟ್ಟಿ ನೀನಿಂದುಮೇರೆಯಿಲ್ಲದ ಭವಾಂಬುಧಿಯ ದಾಟಿಸಿದೆ 1 ದಾನವನಶೋಕವನ ಕಿತ್ತು ಈಡ್ಯಾಡಂದುಶ್ರೀನಾಥಗೆನುತ ಲಂಕೆಯನುರುಪಿದೆಮಾನವರ ಶೋಕವನ ಬೇರೊರಸೆ ಕಿತ್ತಿಂದುದಾನವರಿಹ ಪುರವ ಪೂರೈಸಿ ಮೆರೆದೆ 2 ಬೇಗ ಸಂಜೀವನವ ತಂದಿತ್ತು ಪೊರೆದ್ಯಂದುನಾಗಪಾಶದಿ ನೊಂದ ಕಪಿಕಟಕವಈಗ ಹರಿಭಕುತಿ ಸುಧೆಯ ನೆರೆದು ಪಾಲಿಸಿದೆರಾಗದಿಂ ಭವಪಾಶಬದ್ಧ ಜನರುಗಳನ್ನು 3 ಭವಾಬ್ಧಿ ಮಗ್ನ ಜನಗಳನಿಂದು 4 ಹತ್ತು ದಿಕ್ಕನು ಗೆಲಿದು ರಾಜಸೂಯದಿ ಅಂದುಚಿತ್ತೈಸಿ ಹರಿಗಗ್ರ ಪೂಜೆಯನು ಮಾಡಿದೆಹತ್ತೆರಡು ಮತ್ತೊಂದು ದುರ್ಭಾಷ್ಯ ಜರಿದಿಂದು ಬಿತ್ತರಿಸಿದೆ ಭಾಷ್ಯದಿಂದಗ್ರಪೂಜೆಯನು 5 ದ್ರೌಪದಿಯ ಸಂತವಿಟ್ಟಂದು ಮುಡಿ ಪಿಡಿದೆಳೆದಪಾಪಿ ದುಶ್ಶಾಸನನ ಬಸುರನ್ನು ಬಗೆದೆಪಾಪಿ ಜನರುಗಳೆಳೆಯೆ ವೇದಾಂತ ದೇವಿಯರಶ್ರೀಪತಿಗೆ ಸೇರಿಸಿದೆ ಭಾವವರಿದಿಂದು 6 ಅಂದು ಕಲಿಯಂಶ ದುರ್ಯೋಧನನ ಸಂದುಗಳಕುಂದದೆ ಮುರಿದೆ ಗದೆಯಿಂದ ಸದೆದುಇಂದು ಕಲಿಯನನೇಕ ಶಾಸ್ತ್ರ ಶಸ್ತ್ರಗಳಿಂದಕೊಂದೆಳೆದೆ ಹರಿಯ ಮನ್ನೆಯದಾಳು ಭಳಿರೆ 7 ಶ್ರುತಿಪಂಕಜಗಳರಳೆ ಅಜ್ಞಾನ ತತಿಯೋಡೆಗತಿಗಳಡಗೆ ಮಿಥ್ಯವಾದಿ ಖಳರಕುಮತಗಳು ಮುರಿಯೆ ಸತ್ಪಥವು ಕಾಣಿಸಲುವಿತತವಾಯಿತು ನಿನ್ನ ಪ್ರಭೆ ಸೂರ್ಯನಂತೆ 8 ಜ್ಞಾನಚಂದ್ರಿಕೆ ಪೊಳೆಯೆ ಭಕ್ತಿವಾರಿಧಿಯುಕ್ಕೆಮನ ಚಕೋರವು ವಿಷ್ಣುಪದದಿ ನಲಿಯೆದೀನ ಜನ ಭಯವಡಗೆ ತಾಪತ್ರಯಗಳೋಡೆಆನಂದತೀರ್ಥೇಂದು ಶ್ರೀ ಕೃಷ್ಣ ತಾ ಮೆಚ್ಚೆ 9
--------------
ವ್ಯಾಸರಾಯರು
ಕಂಡ ಕಂಡದ್ದು ಅದು ಔಷಧವಲ್ಲವೋ ಗಿಂಡಿ ಗಿಂಡೀದು ಅದು ತೀರ್ಥವಲ್ಲವೋ ಪ ಮೂರು ವರ್ಗಂಗಳಿಗೆ ಆರು ವೈರಿಗಳು ತೋರುತ್ತಿರುವÀರೆಂತೋ ಬೇರೆಯಾಗಿ 1 ಈ ರೀತಿಯಿಲ್ಲದೆ ಬೇರೊಂದು ತಿಳಿವರೆ ಮೂರು ವಿಧ ಬೇವÀರಿಗಾರು ಫಲಪ್ರದರು 2 ಮಾರಜನಕ ಹರಿ ಪಾರ್ವತೀಧವರಿವರು ಬೇರೆ ಎಂಬರಿತೆವೊ ಬಾರದೆ ಸರಿಯಾಗಿ 3 ಇಳೆಯ ಮೇಲಿರುತಿಹ ಜಲಾಶಯಗಳು ಬಳಿಕೆಗೋಸುಗ ತಾವಿಳದಿಹವಲ್ಲದೆ 4 ನಳಿನನಾಭನ ಪೂಜಾಗಳಿಗೆ ಬಾಂಬೊಳೆಯ ಮೈಲೆನಿಪದಲ್ಲದೆ ಮಿಕ್ಕಿಸಲು ಉಂಟೆ 5 ಚಿತ್ತಶುದ್ಧಿಯನೈದಿ ಉತ್ತಮ ಜಲದಿ ಮಿಂದು ಚಿತ್ತಜÀ್ಹನೈಯನ ಮಜ್ಜನಗೈಯಲು ಹತ್ತಾವತಾರನ ಮತ್ತೆ ಪೂಜೆಯ ಗೈದು ಉತ್ತಮ ಪದ ಸೇವಿಪುದೇ ತೀರ್ಥಾ 6 ಶಿರಿವರ ಪದಜಲ ವರ ತುಲಸೀದಲ ಬೆರೆÀಸಿ ಪಾವÀನ ಗೈಯೆ ಇರುವುದೆ ರೋಗವು ಉರಗಶಯನ ಶ್ರೀ ನರಸಿಂಹ ವಿಠಲನು ಪರಮ ವೈದ್ಯನು ತನ್ನ ಶರಣರಿಗೇ 7
--------------
ನರಸಿಂಹವಿಠಲರು
ಕರುಣಿಸೋ ಶಾಸ್ತ್ರಾರ್ಥ ಮದ್ಗುರು ಶ್ರೀ ವಿಷ್ಣುತೀರ್ಥಾ ಪ ಭವರೋಗ ಭೇಷಜನೆ ಬಹುಬಾಧೆ ಬಡುವೆನೊ ಭಾರತೀಶನ ಮುಖ್ಯ ಪ್ರೀತಿಪಾತ್ರಾ 1 ಶ್ರೀನಾಥ ನಿನ್ನಂಥ ದಾತರನು ನಾಕಾಣೆ ಅವನಿಯೊಳಗೆಲ್ಲ ಅರಸಿ ನೋಡಲು 2 ಪರಮ ಭಾಗವತರಿಗೆ ಮುಖ್ಯ ಹಿತಕರ್ತ ನೀನೆ ಧ್ವರಿಯೇ ಧರಿಯ ರಮಣ ತಂದೆವರದಗೋಪಾಲವಿಠಲನ ಮರಿಯೇ 3
--------------
ತಂದೆವರದಗೋಪಾಲವಿಠಲರು
ಗಣಪತಿ ಶಾರದೆಗೆರಗಿದೆ ಇಂದೇ | ಇಬ್ಬರ ಹೃದಯದಿ ಕರುಣದಿ ಬಂದೆ | ನುಡಿಸಿದರ್ವಚನವ ಒಂದೊಂದು ತಂದೆ | ಕೇಳಿರಿ ಜನರೆಲ್ಲಾ ಕಿವಿಗೊಟ್ಟು ಬಂದೆ 1 ನರನಾಗಿ ಬಂದು ನೀ ಮಾಡಿದಿ ಏನಾ | ತಿಳಿಯದೆ ಬೊಗಳುವಿಯಾತಕೆ ಶ್ವಾನಾ | ಎಳ್ಳಷ್ಟು ಇಲ್ಲದೆ ಹೋಯಿತು ಜ್ಞಾನಾ | ಇನ್ನಾದರೂ ಮಾಡೊ ಸದ್ಗುರುವಿನ ಧ್ಯಾನಾ2 ಮಾಡಲಿಲ್ಲಾ ಪುಟ್ಟಿ ನೀ ದಾನ ಧರ್ಮಾ | ಮಾಡಿದಿ ತಿಳಿಯದೆ ನೀ ಕೆಟ್ಟ ಕರ್ಮಾ | ಆಡಿದಿ ನೀ ಸಾಧುಸಂತರಿಗೊರ್ಮಾ | ನೋಡಿಕೊ ನಿನಗಿಲ್ಲದಾಯ್ತು ಶರ್ಮಾ 3 ಮಾಡಿದ ಬದುಕನು ಸುಮ್ಮನೆ ಕಳೆದೆ | ಮಾಡುವಾಗ ಬಹು ನಿಜವೆಂದು ತಿಳಿದೆ | ನೋಡದೆ ಪೂರ್ವದ ಸುಕೃತವನಳಿದೆ | ರೂಢಿಯೊಳಗೆ ಪಾಮರನಾಗಿ ಬೆಳೆದೆ 4 ಮಾಡುವ ಕರ್ಮಕೆ ಮನವೇ ಸಾಕ್ಷೀ | ಮಾಡುವಿ ಜಪ ನಿನಗ್ಯಾಕೀ ರುದ್ರಾಕ್ಷೀ | ಮಾಡಿದನೇ ಗುರು ಹೀಗೆಂದು ದೀಕ್ಷಾ | ಆಡಲ್ಯಾತಕೊ ನಾಳೆ ಆದೀತೋ ಶಿಕ್ಷಾ 5 ಹುಣಶಿ ಹಣ್ಣ ಹಚ್ಚಿ ಬೆಳಗಿದಿ ಗಿಂಡೀ | ಎಣಕೀ ಶರಣ ಮಾಡಿ ಅಲ್ಲೇನು ಕಂಡೀ | ಸಂತರ ನಿಂದಾ ಬಲು ಮಾಡಿ ಉಂಡೀ | ಅಂತರಂಗದಿ ಇರು ಛೇ ಹುಚ್ಚ ಮುಂಡೀ 6 ಹಗಲೂ ಇರುಳೂ ಎದ್ದುಂಬುವಿ ಕೂಳೂ | ಕೂಳಿಗೆ ಆದಿ ನೀ ಒಬ್ಬರ ಆಳೂ | ಬಲು ಮಂದಿ ಮನೆಯನು ಮಾಡಿದಿ ಹಾಳೂ |ಏನು ಪುಣ್ಯ ಬಂದದ ಅದನಾರ ಹೇಳು 7 ಹಗಲೂ ಇರುಳೂ ಎದ್ದು ಮಾಡಿದಿ ಬದಕಾ | ಮಾಡುತ ಮಾಡುತ ಆದೆಲ್ಲೊ ಮುದುಕಾ | ಸಾಯುವ ತನಕಾ ಬಿಡಲಿಲ್ಲೊ ಚುದಕಾ | ಸತ್ತಮೇಲೆ ನೀ ಆಗುವಿ ಶುನಕಾ 8 ಏನೇನಿಲ್ಲದೆ ಹೋಯಿತು ಬುದ್ಧೀ | ಶಾಸ್ತ್ರ ಪುರಾಣದಿ ಕೇಳಿಲ್ಲ ಸುದ್ದೀ | ಇರುಳ ಕಂಡ ಕುಣಿ ಹಗಲ್ಯಾಕೆ ಬಿದ್ದೀ | ಮರುಳಾದ್ಯಾ ಯಮ ನಾಳೆ ಕೊಂದಾನೊ ಗುದ್ದೀ 9 ಸಂಸಾರ ನಂಬಿದಿ ನಿಜದಲಿ ಹ್ಯಾಂಗ | ಸದ್ಗುರು ಪಾದವ ನಂಬೋ ನೀ ಹಾಂಗ || ಸಂಶಯಾ ಅದಕಂಜಿ ಬಿಟ್ಟರೆ ಈಗ |ಕಾಂಶಿಲಿ ಬಡಿದಾರು ತಿಳಿದೀತು ಆಗ 10 ಬೆಳಕಿನೊಳಗ ಒಂದು ನೋಡುವ ಕಣ್ಣು | ಕತ್ತಲಿಯೊಳ ಗೊಂದು ಕಾಂಬುವ ಕಣ್ಣು | ಕತ್ತಲಿ ಬೆಳಕನ್ನು ನೋಡುವ ಕಣ್ಣು | ಅದ ಬಿಟ್ಟು ಏನ ನೋಡುತಿ ಮಣ್ಣು 11 ಅನುದಿನ ಶಾಸ್ತ್ರ ಪುರಾಣಾ | ಅದರೊಳಗಿನ ಮಾತ ತಿಳಿಯದೆ ಕೋಣಾ || ಅರ್ಥವ ಹೇಳುವಿ ಮಂದಿಗೆ ಜಾಣಾ | ರುವ್ವಿಯ ಬೇಡಲು ಹೋಯಿತು ಪ್ರಾಣಾ12 ಕಂಡರೆ ನೋಡುವಿ ಹೆರವರ ಹೆಣ್ಣು | ಚೆಲುವೆಂದೂ ಇಟ್ಟೆಲ್ಲೊ ಆಕೆಗೆ ಕಣ್ಣೂ | ಆದರೆ ಹತ್ತ್ಯಾವೊ ಆಕೆಯ ಹುಣ್ಣು | ಕಡೆಯಲಿ ಬಿದ್ದಿತು ಬಾಯಲಿ ಮಣ್ಣು 13 ನಿತ್ಯ ತೆಗೆದುಕೊಳ್ಳುವಿ ದೇವರ ತೀರ್ಥಾ | ಮತ್ತಿನ್ನು ಬಿಡಲಿಲ್ಲ ಮನದ ಸ್ವಾರ್ಥಾ || ಕತ್ತೆಯ ಹಾಂಗ ನೀನೊದರುವಿ ವ್ಯರ್ಥಾ | ಎಂದೆಂದಿಗೂ ದೊರೆಯದು ಆ ಪರಮಾರ್ಥಾ 14 ತನುವು ನಾನೆಂಬುವಿ ತನುವಿದು ತೊಗಲು | ತನುವಿಗೆ ಅವ ನೋಡು ಒಂಬತ್ತು ಹುಗಲು | ಚಿಂತಿ ಮಾಡುವದ್ಯಾಕೊ ಹಗಲೂ ಇರುಳೂ | ನಿನ್ನಾಧೀನವು ಹೀಗೆಂದು ಇರಲು 15 ದೂರ ಹೋಗದಿನ್ನು ಆಗದು ಕಾಶೀ | ದೂರ ಮಾಡಿ ಕಳಿ ನೀನು ಮೂರಾಶಿ | ತೀರದು ಶಿವಯೋಗ ಪುಣ್ಯ ರಾಶಿ | ಸೇರುವಿ ಸಾಯುಜ್ಯದಲಿ ಮಿರಾಶಿ 16 ಮಾಯಾ ಮಾಯಾ ಮಾಯಾ | ದುಡ್ಡಿನಂತೆ ಮಾಡೊ ಮನಕೆ ನಿರ್ಮಾಯಾ 17 ಮೀಶಿಯ ಹುರಿ ಮಾಡಿ ಮೇಲಕೆ ನೋಡಿ | ಕಾಲಾಗ ಸಿಕ್ಕವು ಮೋಹದ ಬೇಡಿ || ಮಾಡಬಾರದಂಥ ಕೆಲ್ಸವ ಮಾಡಿ | ಸಿಕ್ಕಿದೆಲ್ಲೊ ಗಾಂಡೂ ಇನ್ನೆತ್ತ ಓಡೀ 18 ಪಾದ ದೊರೆವುದಿನ್ನೆಲ್ಲಿ 19 ಕಾಮನ ಸುಡುವುದು ನೋಡು ಹೀಂಗಲ್ಲಾ | ಕಾಮನ ಶಿವ ಸುಟ್ಟರವ ಸಾಯಲಿಲ್ಲ || ಕಾಮನು ಸುಡುವ ಮೂರು ಲೋಕವನೆಲ್ಲ | ಕಾಮರಹಿತ ಭವತಾರಕ ಬಲ್ಲ 20 ಕಟ್ಟಿದಿ ಮನೆಯನು ನೀ ಬಲು ಛಂದಾ | ಬಿಟ್ಟು ಹೋಗುತಿ ಇದದಾವಂದಾ || ತೊಟ್ಟಿಲೊಳಗೆ ಇದ್ದ ಹೇಳಿದ ಕಂದಾ | ಎಷ್ಟಂತ ಹೇಳಲಿ ನೀ ಮತಿಮಂದಾ 21 ಪಾತಕ ಬರುವದು ಬಿಡಬ್ಯಾಡ ವಾಜಿ | ನೀತಿಯಿಂದಲಿ ಮಾಡು ನೀ ಗುರು ಪೂಜಿ | ಯಾತನ ಬಡಿಸುವ ನಾಳಿನ ಪಾಜಿ 22 ಒದರುವಿ ಯಾತಕೆ ಬಾಯನು ಕಿಸ್ತು | ಬೆದರ ಬೇಡಾದುದಕೆನ್ನು ಅಸ್ತು || ಚತುರ ತನದಲಿ ಸಾಧಿಸು ನೀ ವಸ್ತು |ಆದರಿಂದಲಾಗುವದು ಆ ಮನ ಸ್ವಸ್ತು 23 ಪಾತಕ ಬರುವದು ತಿಳಿಯದೆ ಕೋಳಿ || ನೀತಿಯಿಂದಲಿ ತತ್ತ್ವ್ವ ಮಾತನು ಕೇಳಿ | ಘಾತಕ ಯಮ ನಾಳೆ ಬರುವನು ದಾಳಿ 24 ಭವ ಬಿಟ್ಟಿ | ಮಾಡದೆ ದಾನ ಧರ್ಮವ ಕೆಟ್ಟೀ || ಮಾಡಿದುದೆಲ್ಲಾ ನೀ ಜೋಕಿಲಿ ಇಟ್ಟಿ | ಮಾಡಲು ಬಾಧೆಯ ನೀ ಬಾಯ ಬಿಟ್ಟಿ 25 ನೆನೆದರೆ ದೃಢದಲಿ ರಾಮ ನಾಮ | ತನುವಿದು ಮುಂದೆ ಬಾರದು ನೇಮ || ಮನದೊಳು ಪುಟ್ಟಿತು ತಾನೆ ನಿಷ್ಕಾಮ | ಘನಸುಖ ತೋರಿತು ಅದು ಸಾರ್ವಭೌಮ 26 ಹುಟ್ಟಿ ಹುಟ್ಟಿ ನೀ ಯಾತಕೆ ಸತ್ತೀ | ಹುಟ್ಟುತ ಸಾವುತ ನಿತ್ಯದಿ ಅತ್ತೀ || ಹುಟ್ಟು ಸಾವನ್ನು ಕಳೆಯಲೊ ಕತ್ತೀ | ಕೆಟ್ಟಿಯೊ ಇನ್ನಾರ ಬೆಳಿ ಧರ್ಮಾ ಬಿತ್ತೀ 27 ಶಾಸ್ತ್ರ ಪುರಾಣವ ಓದುವಿ ಬರಿದೇ | ಉತ್ತಮ ಸ್ತ್ರೀಯರ ಕಂಡು ನೀ ಕರೆದೆ || ನಿನ್ನೊಳು ತಿಳಿದು ನೀ ನೋಡುದು ಮರೆದೇ | ಸಾಧು ಸಂತರುಗಳ ಸೇವೆಗೆ ಮರೆದೆ 28 ಪಡಿ ಜೋಳಕೊಬ್ಬರ ಅಡಿಗಳ ಹಿಡಿವೆ | ಕೊಡುವದಿಲ್ಲೆಂದರೆ ದವಡಿಯ ಕಡಿವೆ || ಕೊಟ್ಟರೆ ಮನದೊಳು ಸಂತೋಷ ಪಡುವೆ | ಕೆಟ್ಟ ಮಾರ್ಗದಿಂದ ಕಡೆ ತನಕಾ ನಡಿವೆ 29 ಭವ ಪರಿಹರಿಸುವದಿದು ಏನು ಅರಿದು || ಭವದೊಳು ಬಿಟ್ಟರು ನಾಮವ ಮರೆದು | ಭವಕಿನ್ನು ಕರಸ್ಯಾರೊ ಆತನ ಬರದು 30 ಮಾಡಿದೆ ಏನು ಬದುಕನು ಹೇಳು | ಮಾಡಿದುದೆಲ್ಲಾ ತಿಂದೆಲ್ಲಾ ಕೂಳು || ಕೂಳಿಗಾಗಿ ಆದಿ ಒಬ್ಬರ ಆಳು | ನೋಡಿ ಏನು ಸದ್ಗತಿಯ ಹೇಳು 31 ಮನದೊಳು ಗಳಿಸಿದಿ ಕೆಂಚೀ ಹೊನ್ನು | ಗಳಿಸಿದವರು ಏನು ಒಯ್ದಾರು ಇನ್ನು || ಬಿಟ್ಟು ಹೋದರು ಹ್ಯಾಂಗ ಬಲ್ಲೆಲ್ಲಾ ನೀನು | ನಿಷ್ಠೆಯಿಂದಲಿ ಒಮ್ಮೆ ಹರಗುರು ಎನ್ನು 32 ಮಾಡಲಿಲ್ಲ ಒಂದು ನರನಾಗಿ ಯೋಗಾ | ಮಾಡುವಿ ಸುಖವೆಂದು ಸ್ತ್ರೀಯರ ಭೋೀಗಾ | ಆಡಲ್ಯಾಕೆ ಆಯುಷ್ಯ ಹಾರಿತು ಬೇಗಾ | ನೋಡಿಕೊಳ್ಳೊ ಇನ್ನು ತಿಳಿದೀತು ಈಗಾ 33 ಪರಿ ಸಂಸಾರ ಯುಕ್ತಿ | ಮಾಡಲು ಒಲ್ಲ್ಯೋ ಶ್ರೀ ಗುರು ಭಕ್ತಿ || ಹೋಯಿತೊ ದೇಹದೋಳ್ ನಿನ್ನ ಶಕ್ತಿ | ಸಾಧಿಸಲರಿಯೊ ನೀ ಜೀವನ್ಮುಕ್ತಿ 34 ಅನುದಿನ ವೇದಾ | ಸಾಧಿಸಿ ತಿಳಿಯದೆ ಜೀವಶಿವ ಭೇದಾ || ಕಾದಾಡಿ ಕೊಂಬುವದು ಸುಮ್ಮನೆ ವಾದಾ |ಬ್ಯಾಡಿನ್ನು ಶೋಧಿಸು ನಿನ್ನೊಳು ಬೋಧಾ 35 ಭವ ಬೀಜವ ಕೊಂಬೆ 36 ಮಾಯಾ ಮರವನು ತ್ಯಜಿಸು || ಧ್ಯಾನ ಮುದ್ರೆಯೋಳ್ ಮನವನು ನಿಲಿಸು | ಜಗವಿದು ನಿಜವೇ ನೋಡೆಲು ಕನಸು 37 ರೂಪದೊಳಗಿಲ್ಲಾ ಗುಣವೊಂದು ತೃಣವು | ಗುಣದೊಳಗಿಲ್ಲವು ರೂಪದ ಅಣುವು || ರೂಪ ನಾಮಕ್ರಿಯಾ ಆದೀತು ಹೆಣವು | ಆ ಪರಬ್ರಹ್ಮನೆ ತಿಳಿಯಿನ್ನು ಪ್ರಣವು 38 ಪಾದ | ಅರಿತು ಪೂಜಿಸಿದವ ಪರಶಿವನಾದ || ಅನುಭವಿ ಬಲ್ಲನು ಆ ಸುಖ ಸ್ವಾದ | ತನ್ನೊಳು ಆಲಿಸುತಲಿ ನಿಂತ ನಾದ 39
--------------
ಭಾವತರಕರು
ಚಾರು ಶ್ರೀ ಕುಶನದಿ ತೀರದಲ್ಲಿರುತಿಹನ್ಯಾರೆ ಪೇಳಮ್ಮಯ್ಯ ಸಾರಯತೀಶ್ವರ ಧೀರ ಸುಗುಣಗಂಭೀರ ವಿಷ್ಣುತೀರ್ಥಾರ್ಯಕಾಣಮ್ಮಾ ಪ ಇವನಾರೆ ಪೇಳಮ್ಮಯ್ಯ ವೃಂದಾವನದಲಿ ಬಂದಿರುವರು ಮತ್ತಲ್ಲಿ ನೋಡಮ್ಮಯ್ಯಾ ಗಂಧಾಕ್ಷತ ನೋಡಮ್ಮಯ್ಯ ವಿಷ್ಣು ತೀರ್ಥಾರ್ಯ ಕಾಣಮ್ಮಾ 1 ಬೆನ್ಹಿಂದೆ ನೋಡಮ್ಮಯ್ಯ ಇಹನೂ ನೋಡಮ್ಮಯ್ಯ ತೀರದಲ್ಲಿಹನಮ್ಮಾ ತೀರ್ಥಾರ್ಯ ಕಾಣಮ್ಮಾ 2 ನೋಡಮ್ಮಯ್ಯಾ ನೋಡಮ್ಮಯ್ಯ ಪುರವಾಸಾ ಕಾಣಮ್ಮ ವಿಷ್ಣು ತೀರ್ಥಾರ್ಯ ಕಾಣಮ್ಮ 3
--------------
ಅನಂತಾದ್ರೀಶರು
ಜೋ ಜೋ ಜೋ ಜೋ ಗೋಪಿಯ ಕಂದಾಜೋ ಜೋ ಜೋ ಜೋ ಸಚ್ಚಿದಾನಂದಾಜೋ ಜೋ ಜೋ ಜೋ ಮಲಗೋ ಮುಕುಂದಾಜೋ ಜೋ ಇಂದಿರಾರಮಣ ಗೋ'ಂದಾ ಜೋ ಜೋ ಪಅಣುರೇಣು ತೃಣಕಾಷ್ಠ ಪರಿಪೂರ್ಣ ಜೋ ಜೋಪ್ರಣತಕಾಮದ ಪದ್ಮಜಾರ್ಜಿತ ಜೋ ಜೋಜಾಣೆರುಕ್ಮಿಣಿಯರಸಿ ಶ್ರೀಕೃಷ್ಣ ಜೋ ಜೋಜಾನಕಿ ಜೀವನ ಶ್ರೀರಾಮ ಜೋ ಜೋ 1ಸ್ಟೃಸ್ಥಿತಿಲಯ ಕಾರಣ ಜೋ ಜೋಇಟ್ಟಿಗೆ ಮೇಲ್ನಿಂತ 'ಠ್ಠಲ ಜೋ ಜೋಬೆಟ್ಟದ ತಿಮ್ಮಪ್ಪ ಶೆಟ್ಟಿಯೆ ಜೋ ಜೋದಿಟ್ಟ ಶ್ರೀ ಉಡುಪಿಯ ಕೃಷ್ಣನೆ ಜೋ ಜೋ 2ಜೋ ಜೋ ಶ್ರೀರಾಮದೂತ ಹನುಮಂತಾಜೋ ಜೋ ಜೋ ಭೀಮ ದ್ರೌಪದಿಕಾಂತಾಜೋ ಜೋಯತಿವರ ಆನಂದತೀರ್ಥಾಜೋ ಜೋ ಮೂರಾವತಾರ 'ಖ್ಯಾತ ಜೋ ಜೋ 3ಜೋ ಜೋ ಮಧ್ವ ಸಂತಾನ ಮುನಿವೃಂದಾಜೋ ಜೋ ಪ್ರಲ್ಹಾದ ವ್ಯಾಸ ರಾಜೇಂದ್ರಾಜೋ ಜೋ ಗುರುಸಾರ್ವಭೌಮಯತೀಂದ್ರಾಭೂಪತಿ'ಠ್ಠಲನ ಮೋಹದಕಂದಾ ಜೋ ಜೋ 4
--------------
ಭೂಪತಿ ವಿಠಲರು
ಜ್ಞಾನದ ನಡಿಬ್ಯಾರೆ ತತ್ವಜ್ಞಾನದ ನಡಿ ಬ್ಯಾರೆ ಧ್ರುವ ದೇಹದಂಡನೆ ಮಾಡಿದರೇನು ಬಾಹ್ಯಾರಂಜನೆ ದೋರಿದರೇನು 1 ಶಬ್ದ ಜ್ಞಾನ ಸೂರಾಡಿದರೇನು ಲಭ್ದಾ ಲಬ್ಧೇಲಾಡಿದರೇನು 2 ರಿದ್ದಿ ಸಿದ್ದಿಯ ದೋರಿದರೇನು ಗೆದ್ದು ಮಂತ್ರಾಂತ್ರಸೋಲಿಪರೇನು 3 ಗೀರ್ವಾಣ ಆಡಿದರೇನು ಭೂತ ಭವಿಷ್ಯ ಹೇಳಾಡಿದರೇನು 4 ವ್ರತ ತಪ ತೀರ್ಥಾಶ್ರೈಸಿದರೇನು ಕೃತ ಕೋಟ್ಯಜ್ಞಾವ ಮಾಡಿದರೇನು 5 ಯೋಗಾಯೋಗಾಚರಿಸಿದರೇನು ಭೋಗ ತ್ಯಾಗ ಮಾಡಿದರೇನು6 ಏನು ಸಾಧನೆ ಮಾಡಿದಫಲವೇನು ಖೂನ ದೋರದೆ ಮಹಿಪತಿಗುರುತಾನು7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತುಳಸಿ ದೇವಿ ನಮಿಸಿ ಬೇಡುವೇ | ನಿಮ್ಮ ಪಾದಒಲುಮೆಯಿಂದ ಭಜಿಸಿ ಪಾಡುವೇ ಪ ತಾಪ ಅ.ಪ. ಹರಿಯ ನಯನಧಾರೆ ಸಂಭವೇ | ಕಾಯೆ ತಾಯಿಸಿರಿಯ ರಮಣ ನಮಿತ ಪ್ರೀಯಳೇ ||ವರ ಸುವರ್ಣ ಪುಷ್ಪವಮಿತ | ಎರ5Àಮಿಸಿ ಬೇಡಿದಾರುಹರಿಯು ಒಪ್ಪ ನಿಮ್ಮದಳ | ವಿರಹಿತವಾದ ಪೂಜೆಯನ್ನ 1 ಸರಸಿಜಾಕ್ಷಿ ನಿನ್ನ ಮೃತ್ತಿಕಾ | ಫಾಲದಲ್ಲಿಧರಿಸುವರ ಅಘಕೆ ಪಾವಕಾ ||ಕರಣ ತೀರ್ಥಾದಿಗ¼5 | ವರದಳಗಳ್ ದ್ವಿನವಗಳನ್ನಧರಿಪ ಜನರ ಭಿ್ಟ5ವಿತ್ತು | ಘೋರ ಪಾಪವನ್ನು ಕಳೆವೆ 2 ಸುಜನ ತ್ರಿವಿಧ ತಾಪ 3
--------------
ಗುರುಗೋವಿಂದವಿಠಲರು
ದಾನಿಗಳೊಳು ಪ್ರತಿಗಾಣೆನೊ ನಿನಗೆಸ ನ್ಮೌವಿ ಶ್ರೀ ಸುಶೀಲೇಂದ್ರ | ನೀನೇವೆ ಗತಿ ಎಂದ ದೀನರ ಮನೋಭೀಷ್ಟ ಸಾನುರಾಗದಿ ಕೊಡುವಿ | ಕೈಪಿಡಿಯುವಿ ಪ ಶ್ರೀಸುವೃತೀಂದ್ರ ಸುಯಮೀಂದ್ರಗಳಿಂದಲಿ ಸ | ನ್ಯಾಸತ್ವ ಸ್ವೀಕರಿಸಿ ಪತಿ ಮೂಲ | ದಾಶರಥಿಯ ಪಾದ ಲೇಸಾಗಿ ಒಲಿಸಿದೆ ನೀ | ಸುಜ್ಞಾನಿ 1 ಕರಿವರದನ ಪೂರ್ವ ಕರುಣ ಪಡೆದು ದಿವಾ ಕರನಂತೆ ರಾಜಿಸುತ | ಗುರುರಾಘವೇಣದ್ರಾಖ್ಯ | ಸುರಧೇನುವಿಗೆ ಪುಟ್ಟ ಕರುವೆನಿಸುತ ಮೆರದಿ ಭೂವಲಯದಿ 2 ಮೋದತೀರ್ಥಾಗಮ ಸಾಧು ಸಜ್ಜನರಿಂದ ಶೋಧಿಸಿ ಬಹುವಿಧಧಿ ಪಂಚಭೇದ | ಶಿಷ್ಯರಿಗೆಲ್ಲ ಬೋಧಿಸುತಲಿ ಪೊರೆದಿ ದಯಾಂಬುಧಿ 3 ಸಿಂಧುತೀರದಿ ನೆಲಸಿ ಮಂದ ಜನರಿಗೆ | ಕ ರ್ಮಂದಿ ಪವರಗಳನು | ನೀಡುವಿ ನೀನು 4 ಶ್ರೀ ಶಾಮಸುಂದರ ವಿಠಲ ವಾಸಿಸುವ | ಕಾ ಪ್ಯಾಸನ ವರಕ್ಷೇತ್ರದಿ | ದೇಶ ದೇಶದಿ ಬಂದ | ಭೂಸುರರಿಗೆ ಧನ ರಾಶಿ ಸೂರೆ ಮಾಡಿದಿ | ಸನ್ಮೋಹದದಿ 5
--------------
ಶಾಮಸುಂದರ ವಿಠಲ
ದಾಸರಾಯ ವಿಜಯದಾಸರಾಯ | ದೋಷವೆಣಿಸದೆ ಸದಾ ಪೋಷಿಸು ಕರುಣದಿ ಪ ಸಕಲಜಗತ್ತಿಗೆ ಲಕುಮೀಶಪರೆನೆಂದು ಮಖವಾಚರಿಪ ಮುನಿ ನಿಕರಕೆÉ ಸಾರಿದ 1 ಜ್ಞಾನಿ ಶಿರೋಮಣಿ ಧೇನುಪಾಲಾರ್ಯರ | ಮಾನಸ ಕುಮುದಕೆÉ ಏಣಾಂಕನೆನಿಸಿದ 2 ಮುದ ತೀರ್ಥಾಗಮ ಮರ್ಮ ಮಧುರ ಕನ್ನಡದಲಿ ವಿಧ ವಿಧ ರಚಿಸಿದ ಸದಮಲ ಸುಚರಿತ್ರ 3 ಬೇಸಿಗೆ ಬಿಸಲೊಳು ರಾಸಭ ತೃಷೆಯಿಂದ | ಷಾಸಿಯಾಗಿರೆ ಜಲಪ್ರಾಶನಗೈಸಿದ ದಾಸರಾಯ 4 ನಿಷ್ಟೆಯಿಂದಲಿ ಮನ ಮುಟ್ಟಿ ಭಜಿಪರಿಗೆ ಇಷ್ಟಾರ್ಥಗರೆಯುವ ಪುಟ್ಟ ಬದರಿವಾಸ 5 ಪೊರೆವ ಚಿಪ್ಪಶಿಖರನಿಲಯ 6 ಪಾಮರನಾದೆನಗೆ ಶಾಮಸುಂಧದರ ಸ್ವಾಮಿ ನಾಮಾಮೃತಪಾನ ಪ್ರೇಮದಿ ನೀಡಯ್ಯ ದಾಸರಾಯಾ 7
--------------
ಶಾಮಸುಂದರ ವಿಠಲ