ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತ್ರಿವಿಕ್ರಮರಾಯನ ನಂಬಿರೊಭುವನದೊಳ್ ಭಾಗ್ಯವ ತುಂಬಿರೊಸವೆಯದ ಸುಖವ ಮೇಲುಂಬಿರೊ ವಾ-ಸವನ ಮನ್ನಣೆಯ ಕೈಕೊಂಬಿರೊ ಪ. ವಾದಿರಾಜಗೊಲಿದುಬಂದನ ಚೆಲ್ವಸೋದೆಯ ಪುರದಲ್ಲಿ ನಿಂದನಸಾಧಿಸಿ ಖಳರನು ಕೊಂದನ ತನ್ನಸೇರ್ದಜನರ ಬಾಳ್ ಬಾಳೆಂದನ 1 ಕಾಲಿಂದ ಬೊಮ್ಮಾಂಡ ಒಡೆದನ ಪುಣ್ಯ-ಶೀಲೆ ಗಂಗೆಯನು ಪಡೆದನಪಾಲಸಾಗರವನ್ನು ಕಡೆದನ ಶ್ರುತಿ-ಜಾಲ ಗದೆಯಿಂದ ಹೊಡೆದನ 2 ಇಂದಿರಾದೇವಿಯ ಗಂಡನ ಸುರಸಂದೋಹದೊಳು ಪ್ರಚಂಡನಇಂದ್ರಾದಿ ಗಿರಿವಜ್ರದಂಡನ ಮುನಿವೃಂದಾರವಿಂದಮಾರ್ತಾಂಡನ3 ಕಂಬುಕಂಧರ ಮಂಜುಳಗಾತ್ರನವೃಂದಾರಕರಿಗೆ ನೇತ್ರನ ಜಗಕಿಂದೇ ಸುಪವಿತ್ರನ 4 ವನಿತೆಯರರ್ಥಿಯ ಸಲಿಸದೆ ಮನೆಮನೆವಾರ್ತೆಯ ಹಂಬಲಿಸದೆದಿನ ದಿನ ಪಾಪವ ಗಳಿಸದೆ ಅಂತ-ಕನ ಭಟರಿಂದೆಮ್ಮ ಕೊಲಿಸದೆ 5 ಹರಿಭಕುತರೊಳೆಂದೆಂದಾಡಿರೊ ನರ-ಹರಿಯ ನಾಮಗಳನು ಪಾಡಿರೊಹರಿಯರ್ಚನೆಯನು ಮಾಡಿರೊ ಶ್ರೀ-ಹರಿಯ ಮೂರುತಿಯ ನೋಡಿರೊ 6 ದೂರಕ್ಕೆ ದೂರನು ದಾವನ ಹ-ತ್ತಿರ ಬಂದ ಭಕುತರ ಕಾವನ ಆರಾಧಿಸಲು ಫಲವೀವನ ಹ-ತ್ತಿರ ಸೇರುವ ಭಾವ ದಾವನ 7 ಕಾಮದೇವನ ಪೆತ್ತ ಕರುಣಿಯ ಸುತ್ತಸೇವಿಪರಘತಮ ತರಣಿಯ- - - - - - - - - - - - - - - - - - - -8 ಜಯಿಸಿ ಕಂಸನೆಂಬ ಮಾವನ ಭಯವಿತ್ತು ಭಕುತ ಸಂಜೀವನಹಯವದನನಾಗಿ ಪಾವನ ಶ್ರು-ತಿಯ ತಂದ ದೇವರದೇವನ 9
--------------
ವಾದಿರಾಜ
ಯಶೋದೆ ನಿನ್ನ ಮಗಗಿದು ಥರವೇವಸುಧೆಯೊಳಗಿಂಥ ಶಿಶುವಿಲ್ಲವೇ ಪಪೆಟ್ಟಿಗೆಯೊಳುತುಂಬಿರೊಟ್ಟಿಯ ದೇವರು |ಇಟ್ಟನೆ ಕಚ್ಚಿನ ಚಟ್ಟಿಗೆಯೊಳು 1ಸಡಗರದಿಂದ ಬೆಣ್ಣೆ ಗಡಿಗೆ ಕಾಯಲಿಟ್ಟರೆ |ಬಡಧಾನ ಕೇದಿಗೆ ಪಡಿಯೊಳಗೆ2ಆ ಸಣ್ಣ ಕರು ತೊಟ್ಟಿಲ ಹಾಸಿಕೆಯೊಳಗಿಟ್ಟು |ಕೂಸು ಸೋರಿಯೊಳಿಟ್ಟುಘಾಸಿಮಾಳ್ಪ 3ಚಿನ್ನಗುಣಲಿಟ್ಟರೆ ಅನ್ನದೊಳಗಿಟ್ಟನೆ |ಸುಣ್ಣದಕಲ್ಲು ಏನ್ಮಣ್ಣು ಹೇಳಲಿ 4ನಿದ್ರೆಯೊಳಿರೆ ಸೀರೆ ಒದ್ದಲ್ಲಿ ಬೆಣ್ಣೆಯ |ಮುದ್ದೀನಿಡುವನಿದು ಮುದ್ದುಯೇನೆ 5ಬೆಕ್ಕಾನಲ್ಲಿಗೆಹಚ್ಚಿಇಕ್ಕಿಸಿ ಚಪ್ಪಾಳೆ |ಇಕ್ಕಿಸುವನೆಹಿಂಡುಚಿಕ್ಕವರನ್ನಾ 6ನನ್ನ ಪ್ರಾಣೇಶ ವಿಠಲನ್ನಾಟ ಈ ಊರೊಳು |ಘನ್ನವಾಯಿತು ಬಿಡಿಸಿನ್ನು ಮಾತ್ರ 7
--------------
ಪ್ರಾಣೇಶದಾಸರು
ಸಾರಿಗೆಯ ಮಾಡೋಣ ಸಜ್ಜನರು ಬನ್ನಿರೋನಾರಾಯಣನ ದಿವ್ಯನಾಮ ಭಾರಿ ಕೊಂಬ ಬನ್ನಿರೋ ಪ.ಹೃದಯವೆಂಬ ಚೀಲದೊಳಗೆ ಹರಿಯ ನಾಮ ಹೊನ್ನಹಾಕಿತುದಿ ನಾಲಿಗೆಯಿಂದ ತೆಗದು ವೆಚ್ಚವನ್ನು ಮಾಡಿರೊ 1ಙ್ಞÕನವೆಂಬ ಎತ್ತಿನಲ್ಲಿ ಕರುಣವೆಂಬ ಗೋಣಿಹಾಕಿದಾನ - ಧರ್ಮವೆಂಬ ದವಸ ಸರಕುಗಳ ತುಂಬಿರೊ 2ನೇಮ - ನಿತ್ಯವೆಂಬ ಗಟ್ಟಿ ನಡುವಿನಲ್ಲಿ ಬಿಗಿದು ಸುತ್ತಿಪ್ರೇಮವೆಂಬ ಚೊಕ್ಕ ಬುತ್ತಿ ಸೆರಗಿನಲ್ಲಿ ಕಟ್ಟಿರೋ 3ಕಾವಲಿಗರೈವರನ್ನು ಕಾಣದಂತೆ ಟಕ್ಕುದೋರಿಭಾವವೆಂಬ ಮಾರ್ಗದಲ್ಲಿ ಬೇಗ ಬೇಗ ಬನ್ನಿರೊ 4
--------------
ಪುರಂದರದಾಸರು
ಹರಿಯ ಚರಣವೆಂಬ ಸುರಧೇನವನುಗುರುಬೋಧೆಯೆಂಬ ಕಣ್ಣಿಯಲಿ ಕಟ್ಟಿರಯ್ಯಪ.ಭಕುತಿಯೆಂಬ ಕರುವನೆ ಬಿಟ್ಟು ನಿರುತ ವಿರಕುತಿಯೆಂಬ ಚೆನ್ನದಳಿಯ ಹಾಕಿ ||ಯುಕುತವಾದ ನಿತ್ಯಕಾಯ ಚರಿಗೆಯೊಳುಮುಕುತಿನಾಮಾಮೃತ ಕರೆದುಕೊಳ್ಳಿರಯ್ಯ 1ಕಾಮ ಕ್ರೋಧ ಲೋಭ, ಮೋಹ ಮದ ಮತ್ಸರಗಳೆಂಬಹಮ್ಮೆಂಬ ಕುರುಳನೆ ತಾಳಿ ಹಾಕಿ ||ತಾಮಸ ಜ್ಞಾನಾಗ್ನಿ ಪುಟಗೈದು ಇಂದ್ರಿಯನೇಮದ ನೀರ ಬೆರಸಿ ಕಾಯಲಿಡರೊ 2ಶಾಂತಗುಣವೆಂಬ ಹದನರಿತು ಆರಿಸಿ ಮತ್ತೆಭ್ರಾಂತಮನ ಮಜ್ಜಿಗೆಯ ಹೆಪ್ಪನಿಕ್ಕಿ ||ಕಾಂತವಿಷ್ಣು ಮಾಯಾಮಂಥದಿ ಶೋಧಿಸಿ ಸಿ -ದ್ಧಾಂತವೆಂಬ ಕಡೆಗೋಲ ನೇಣನೆ ಪಿಡಿದು 3ಪರಬೊಮ್ಮನೆನಿಪ ಬೆಣ್ಣೆಯ ಮುದ್ದಿಯನೆ ತೆಗೆದುಶರಣಮಣಿಯೆಂಬ ತುಪ್ಪವನೆ ಕಾಯಿಸಿ ||ಮರಣವೆಂಬ ನೊರೆ ತೆಗೆದೊಗೆದು ಅಮೃತವನಿರುತ ಹೃದಯವೆಂಬ ಕೊಡವನೆ ತುಂಬಿರೊ 4ಅನವರತ ಹರಿಸ್ಮರಣೆಯೆಂಬ ಬೀಸೂರಿಗೆಅನುವಾಗಿ ಕುಳಿತುಂಡು ಸುಖದಿ ತೇಗಿ ||ಚಿನುಮಯ ಚಿದಾನಂದ ಪುರಂದರವಿಠಲನಅನುದಿನ ನೆನೆ ನೆನೆದು ಸುಖಿಯಾಗಿರಯ್ಯ 5
--------------
ಪುರಂದರದಾಸರು