ಒಟ್ಟು 4 ಕಡೆಗಳಲ್ಲಿ , 2 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದಕರಮಾದ ಇಂದಿರಾರ್ಯ ತವ ಧ್ಯಾನಾನಂದೆನಗೆ ದಯಪಾಲಿಸು ಪ ನೊಂದೆ ಭವದೊಳು ಬಿದ್ದು ಮಂದನಾಗಿ ತಿಳಿಯದೆ ಅಂದಮಾದ ತವ ಮಹಿಮೆಯ ದೇವ ಅ.ಪ ಕಾಣುವ ಜಗವೆಲ್ಲ ಏನೆಂಬ ನಿಜತವನು ನಾನರಿಯದೊರಲುತಿಹೆನು ನಾನಿಲ್ಲದಮೊದಲು ಏನಿತ್ತು ಎಂಬುದನು ನಾನೆಂತು ತಿಳಿಯುವೆನು ನಾನು ಯಾರೆಂಬ ನಿಜ ಖೂನವರಿಯದೆ ಬಲು ಹೀನತೆಗೆ ಬಂದಿದ್ದೆನು ನೀನೆ ಸ್ವತಂತ್ರಖಿಲ ದೀನಗರಿವಿಕೆ ನೀಡಿ ಜ್ಞಾನದಿಂ ಪೊರೆ ದಯದಿ ಜವದಿ 1 ಎಲ್ಲಿರ್ದೆಮೊದಲು ನಾನೆಲ್ಲಿಂದ ಬಂದೆ ಮ ತ್ತೆಲ್ಲಿಗೆ ಪೋಗುವೆನು ಎಲ್ಲಿರುವೆ ಈಗ ನಾನೆಲ್ಲಿಂದ ನುಡಿಯುವೆನು ಎಲ್ಲಿಗೆ ಕೊಡುವೆನು ಎಲ್ಲನಿಂದಿದರೊಳಗೆ ಇಲ್ಲದ್ದು ಕಲ್ಪಿಸಿ ಎಲ್ಲಿಂದ ಕಾಂಬುವೆನು ಎಲ್ಲಿಟ್ಟಿರುವಿದರ ಸಲ್ಲಲಿತ ಸೂತ್ರವನು ಪುಲ್ಲನಾಭ ದಯಪಾಲಿಸು ತಿಳಿಸು 2 ಆರೊಂದುಗೇಣಿನಾಪಾರ ಸೂತ್ರದಗೊಂಬೆ ಆರಿಂದಲಾಗಿಹ್ಯದು ಸೋರುತಿಹ್ಯ ಒಂಬತ್ತು ದ್ವಾರಹಚ್ಚಲು ಇದರ ಕಾರಣವೇನಿಹ್ಯದು ತೋರುವುವು ಇದರೊಳಗೆ ಮೂರುವಿಧಮಾಗಿ ಆರಸಾಕ್ಷದಕ್ಕಿಹ್ಯದು ತೋರದೇನೇನಿದರ ತಾರತಮ್ಯಜ್ಞಾನ ಸುವಿ ಚಾರ ಎನಗೊಲಿದು ತಿಳುಹು ಸಲಹು 3 ಕಾಲು ಕಯ್ಯಿಗಳಾಡಿ ಬೀಳುವೇಳುವ ಮೂಲ ಕೀಲಿಯೆಲ್ಲಿರುತಿಹ್ಯದು ಜ್ಯಾಲದಂದದಿ ಹರಕು ಚೀಲದೊಳು ತುಂಬಿರುವ ಗಾಳ್ಯೆಂತುನಿಂತಿಹ್ಯದು ಕಾಲಮಹಿಮ ನೀ ಗೈದ ಮೇಲುಯಂತ್ರದಿ ಇಂದ್ರ ಜಾಲವೇ ತುಂಬಿಹ್ಯದು ಕಾಲಚಕ್ರನ ಮಹ ದಾಳಿಯನು ಗೆಲಿಸಿ ತವ ಲೀಲೆಯೊಳೆನ್ನಾಡಿಸು ಪಾಲಿಸು 4 ಬಂಧರೂಪಕಮಾದ ದಂದುಗದ ಭವವು ದಾ ರಿಂದಲುತ್ಪತ್ತಿ ಯಾಯ್ತು ಸತಿ ಸುತರು ಬಂಧಬಳಗ ಎ ಲ್ಲಿಂದ ಬಂದಿವಗೆ ಜೊತೆಗೂಡಿತು ಒಂದಕ್ಕೊಂದರ ಸಂಬಂಧವೇ ಇಲ್ಲಿವಗೆ ಬಂಧ ಮತ್ತೆಲ್ಲೊದಗಿತು ನಿಂದುನೋಡಲು ಸಕಲ ತಂದೆ ಶ್ರೀರಾಮ ನಿನ್ನಿಂದ ಕಂಡು ನಿನ್ನೊಳೈಕ್ಯ ಮಾಯ ಖರೆಯ 5
--------------
ರಾಮದಾಸರು
ಇದು ಎಂಥ ಸವಿ ಇಹ್ಯದು ಶ್ರೀಹರಿ ನಾಮ ಮಧುಗಿಂತ ಮಧುವಿಹ್ಯದು ಪ ಅಧಮ ಮನಸೇ ನೀನು ಸ್ವಾದ ಸವಿದುನೋಡೋ ಅಧಿಕ ಅಮೃತಕಿಂತ ಮಾಧುರ್ಯ ತುಂಬಿಹ್ಯದು ಅ.ಪ ಸುಧೆಗಿಂತ ಸುಧೆಯಿಹ್ಯದು ಮೃಷ್ಟಾನ್ನದ ಮೃದುಗಿಂತ ಮೃದುವಿಹ್ಯದು ವದನದೊಳಿಟ್ಟರೆ ವಿಧವಿಧದ್ಹಸುತೃಷೆ ಸದೆದು ಸದಮಲಸುಖ ಒದಗಿಸಿ ಕೊಡುವುದು 1 ಶುಚಿಗಿಂತ ಶುಚಿಯಿಹ್ಯದು ಹೆಚ್ಚಿಗೆ ಹೆಚ್ಚು ರುಚಿಗಿಂತ ರುಚಿಯಿದ್ಯದೋ ಉಚ್ಚಿಷ್ಟರಾಗದೆ ಬಚ್ಚಿಟ್ಟು ಸುರಿವರ್ಗೆ ನಿಶ್ಚಲಸುಖಪದ ಮೆಚ್ಚಿ ತಾ ಕೊಡುವುದು 2 ಶಾಶ್ವತಸುಖವೀಯ್ವುದೋ ಭವರೋಗ ಕೌಷಧ ಮಾಗಿಹ್ಯದೋ ದಾಸಜನರಿಗನುಮೇಷ ಸವಿಯುದೋರಿ ಪೋಷಿಸುತಿರುವುದು ಶ್ರೀಶ ಶ್ರೀರಾಮನಾಮ 3
--------------
ರಾಮದಾಸರು
ಇದೇವೆ ಗುರು ಘನ ಮಹಿಮೆ ಧ್ರುವ ಅಧ್ಯಾತ್ಮದಾನಂದದ ನೆಲೆನಿಭ ಮಹಾತ್ಮರು ಬಲ್ಲರು ಖೂನ ಹೊಳೆಯುತಿಹ್ಯದು ಅನುದಿನ ಚಿಂತಾಯಕ ಗುರು ಘನ ಪ್ರತಾಪವು ತುಂಬಿಹ್ಯದು ಪರಿಪೂರ್ಣ ಶುದ್ಧಾಂತ್ಮದ ಸೂತ್ರಾಂತ್ರದ ಗತಿಗಳ ಮೂಢಾತ್ಮರು ಬಲ್ಲವೇನ 1 ಮಹಿಮರು ಮನಿಮನಿಗಿಲ್ಲ ಮಹಿಮಾನಂದದನು ಸಂಧಾನ ಪರಮವಿರಕ್ತನೇ ಬಲ್ಲ ಜೀವನ್ಮುಕ್ತಾಗುವ ಗತಿ ಮಾರ್ಗವು ಎಂದಿಗೆ ದೊರೆವದಿದೆಲ್ಲ ಪೂರ್ವಕಲ್ಪನೆಯಲ್ಲ ಮಿಕ್ಕಿನಾ ನರಗುರಿಗಳಿಗಿದು ಇಲ್ಲ 2 ಹುರಳಿಲ್ಲದ ಕರ್ಮಾಚರಣೆಯೊಳು ಮರುಳಾದರು ಜನವೆಲ್ಲ ಸರ್ವರಿಗಾವುದಲ್ಲ ಪೂರ್ವಾ ಪಾರ ಮಹಾಗುರು ಯೋಗಮಾರ್ಗವು ಸ್ತುತಿಸಲೆನಗಳವಲ್ಲ ಸರ್ವಮಯವೆಲ್ಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನಿದ್ದೀತೇನಿದ್ದೀತೋ ಈ ನಾಮದಲ್ಲೇನಿದ್ದೀತೇನಿದ್ದೀತೋ ಪಏನಿದ್ದೀತೇನಿದ್ದೀತೇನ ಪೇಳಲಿ ನಾಜಾನಕೀಶನ ನಾಮ ಹಾನಿಮಾಡದೆ ಕಾಯ್ವುದೇ ಅ.ಪಜ್ಞಾನ ಕೊಡುವುದಲ್ಲೋ ಅಜ್ಞಾನ ಖೂನಕ್ಕುಳಿಸದಿರೆಲೋಸಾನುರಾಗದಿ ನಿಜಜ್ಞಾನ ಬೋಧಿಸಿ ಮಹಹೀನ ಬವಣೆಕಳೆದಾನಂದ ಕೊಡುವುದು 1ನರಕಕ್ಹೋಗುವನನ್ನು ಭರದಿಕರುಣಿಸಿ ಪದವನ್ನುಕರುಣದಿತ್ತು ಹರಿಶರಣರೊಳಾಡಿಸಿಪರಮಪರತರವೆನಿಪ ಸ್ಥಿರಸುಖ ಪಾಲಿಸಿತು2ಜರಮರಣಳಿಯುವುದು ಅದರೊಳ್ಕರುಣವೆ ತುಂಬಿಹ್ಯದುದುರಿತದಿ ಸಿಲ್ಕೆಲ್ಲಿ ಕರೆದರು ಅಲ್ಲಿಗೆತ್ವರಿತದೊದಗಿ ಬಂದು ನಿರುತದಿಂ ಸಲಹುವುದು 3ಭವಬಾಧೆ ಕಳೆಯುವುದುಜವನ ಭಯವೆ ತಪ್ಪಿಸುತಿಹ್ಯದುದಿವರಾತ್ರಿ ಎನ್ನದೆ ನಯದಿ ಭಜಿಪರೊಳುದಯದಿ ನಿಂತು ತಾನೆ ಜಯವ ನೀಡುವುದು 4ಅಂತ್ಯಪಾರಿಲ್ಲ ಕಾಣೋ ಶ್ರೀರಾಮನಾಮದ್ದೆಂಥ ಶಕ್ತಿಯೇನೋಚಿಂತಿಪ ಭಕ್ತರ ಅಂತರಂಗವನರಿತುಸಂತಸ ನೀಡಿ ಮುಕ್ತಿಸಂಪದ ಕೊಡುವುದು 5
--------------
ರಾಮದಾಸರು