ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಗಮ ಗೋಚರಾನಂತ ಮಹಿಮ ಶ್ರೀದೇವ ಸಗುಣ ನಿರ್ಗುಣನಾಗಿ ತೋರುವ ಸುಗಮಲಿಹ್ಯ ಸುಖದಾಯಕ ಧ್ರುವ ಅಗಣಿತ ಗುಣಗಮ್ಯನುಪಮ ಶ್ರೀನಾಥ ನಿಗಮ ತಂದು ನೀ ಪ್ರಕಟದೋರಿದೆ ನಗವು ಬೆನ್ನಿಲಿ ತಾಳಿದೆ ಮಣಿ ಮಾಧವ ಶ್ರೀ ಕಾಂತ ಜಗವನುಳಹಿದೆ ನೆಗಹಿದಾಡಿಲೆ ಭಗತಗೊಲಿದು ನೀ ಕಾಯಿದೆ 1 ಹರಿ ಸರ್ವೋತ್ತಮ ಪರಮಪುರಷ ಶ್ರೀ ವೇಷ ಧರಿ ಮೂರಡಿ ಮಾಡಿದೆ ನೀ ಪರಶುಧರನಾಗ್ಯಾಡಿದೆ ಪರಿಪರ್ಯಾಡುವಾ ನಂದಸ್ವರೂಪ ಶ್ರೀಧರ ಶರಣ ರಕ್ಷಕನಾಗಿ ನೇಮದಿ ತುರುಗಳನ ನೀ ಕಾಯಿದೆ 2 ಸಾಮಜ ಪ್ರಿಯ ಶ್ರೀನಿಧೆ ಹಯವನು ತೋರುವೆ ಸರಸಿಜೋಧ್ಬವನುತ ಸಿರಿಲೋಲ ಎನ್ನಯ ಅನುದಿನ ಸೂರ್ಯಕೋಟಿ ಪ್ರಕಾಶನೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀಹರಿಸ್ತುತಿ ಈ ಮಹಾಮಹಿಯ ಪ ವೇದವನು ಸಾಧಿಸುತ 1 ಹರುಷದೊಳಾ ಗಿರಿಯನೆತ್ತಿ 2 ಹರಣವನು ಹೀರುತಲಿ 3 ವರ ಪ್ರಹ್ಲಾದನಿಗೊಲಿದು 4 ಈರಡಿಯ ಮಾಡುತಲಿ 5 ಕುಲವನು ತಾನಳಿಸುತಲಿ 6 ಶರಣಶಿಖಾಮಣಿಗೊಲಿದು7 ಸರಸದೊಳಾತುರುಗಳನು 8 ವಧಿಸುತಲಾ ತ್ರಿಪುರರನು 9 ಕಳೆವನು ಭೂಭಾರವನು 10 ಕಿಂಕರರಿ ಗೊಲಿದವನು11
--------------
ವೆಂಕಟ್‍ರಾವ್
ತಾನು ಮಾಡಿದಕರ್ಮ ತನಗಲ್ಲದೆ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಏನ ಮಾಡಿದರು ಹಿಂದಿನ ಕರ್ಮವಲ್ಲದೆ ಪ.ಮರಳಿ ಮರಳಿ ನೀರ ಹೊಕ್ಕು ಹೊರಟರೆ ಇಲ್ಲ |ಹೊರೆ ಹೊತ್ತು ತಲೆಪರಟೆಗಟ್ಟಿದರೂ ಇಲ್ಲ ||ಬರಿಯೆ ಭೂಮಿಯ ಕೆದರಿ ತೋಡಿ ನೋಡಿದರಿಲ್ಲ |ಪರರಿಗೆ ಬಾಯ್ದೆರೆದರೇನೊ ಇಲ್ಲ 1ಬಲಿದ ದೇಹವನಲ್ಪ ಮಾಡಿ ಬೇಡಿದರಿಲ್ಲ |ನೆಲದಿ ಕೊಲೆಗಡುಕ ತಾನಾದರಿಲ್ಲ ||ತಲೆಯಲಿ ಜಡೆಗಟ್ಟಿ ಅಡವಿ ಸೇರಿದರಿಲ್ಲ - |ಕೊಳಲೂದಿ ತುರುಗಳನು ಕಾಯ್ದರಿಲ್ಲ 2ಧೀರತನ ಬಿಟ್ಟು ದಿಗಂಬರನಾದರು ಇಲ್ಲ |ಮೀರಿದ್ದರಾಹುತ ತಾನಾದರಿಲ್ಲ ||ವರದ ಶ್ರೀ ಪುರಂದರವಿಠಲನ ಚರಣವ |ಸ್ಮರಿಸುತಅನುದಿನ ಸುಖಿಯಾಗಿರಯ್ಯ3
--------------
ಪುರಂದರದಾಸರು