ಒಟ್ಟು 10 ಕಡೆಗಳಲ್ಲಿ , 7 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಎರಡು ಪದ ಪದುಮ ನಾಭನ ಸ್ಮರಿಸಿ ಮುದದಿ ಹಿಮಗಿರೀಂದ್ರನು ಮದುವೆಯಕಾರ್ಯಕೆ ತೊಡಗಿದ ಮಗಳ ಹುಡುಕಿದ 1 ಅಲ್ಲೆ ಮನೆಯೊಳಗಿಲ್ಲ ಎಲ್ಲಿ ಹುಡುಕಿದರಿಲ್ಲ ಅಲ್ಲೆ ಇಲ್ಲೆಂದು ಇಲ್ಲ ಎಲ್ಲೆಲ್ಲಿ ಇಲ್ಲಾ 2 ಘನಹಿಮ ಗಿರೀಂದ್ರ ದಮ್ಮನೆ ದಣಿದು ಮಾತಾಡಿದನು ಮನೆಮನೆಯಲ್ಲಿ ಹುಡುಕಿ ಮನದೊಳು ಮಿಡುಕಿ3 ಮಾನವಂತಿ ಮಗಳೆಲ್ಲೆ ತಾನು ಹೋದಳು ನಾನಿ ನ್ನೇನು ಪಾಯವ ಮಾಡಲಿ ಎಲ್ಲೆ ನೋಡಲಿ 4 ಅಚ್ಯುತಾನಂತಾದ್ರೀಶ ನಿಚ್ಛೆ ತಿಳಯದು ಎಂದು ಎಚ್ಚರಿಲ್ಲದೆ ಬಿದ್ದನು ಮೂರ್ಛಿತನಾದನು 5 ಪದ ಏಳೆಏಳೆಂದು ಆಕಾಲದಲಿ ಆಜನರು ಹೇಳಿ ಎಬ್ಬಿಸಲಾಗ ಏಳಲೊಲ್ಲವನು ಆ ಮೇಲೆ ಹಾ ಇದು ಎಂಥ ವೇಳೆ ಬಂದಿತು ಎಂದು ಬಹಳ ಗಾಬರಿಯಿಂದ ಗಾಳಿ ಹಾಕಿದರು ಶ್ರೀಶೈಲೇಂದ್ರ ತಾನು ಆಮೇಲೆ ಏಳುತ ಮೈಮೇಲೆ ಎಚ್ಚರ ಹುಟ್ಟು ಆಲಯದೊಳಗಿರುವ ಶೇಲಾದ ಮಗಳನ್ನು ಕಾಣದಲೆ ಕಣ್ಣು ಕ ಗ್ಗಾಳಿಗೈಯುತ ಶೋಕ ಬಹಳ ಮಾಡಿದನು 1 ಪದ ಎಲ್ಲಿ ಪೋದಳೆಲ್ಲಿ ಹುಡುಕಲಿ ಮಗಳಿಲ್ಲ ಮನೆಯೊಳೆಲ್ಲಿ ಇರುವಳಲ್ಲಿ ಪೋಗಲಿ ಎಲ್ಲಿ ಪೋದಳೆಲ್ಲಿ ಹುಡುಕಲೆಲ್ಲಿ ಮಗಳು ಇಲ್ಲ ಪ್ರಾಣ ನಿಲ್ಲ ಲೊಲ್ಲದಿಲ್ಲೆ ಮನಸು ಕಲ್ಲುಮಾಡಿಯೆಲ್ಲಾ ಬಿಟ್ಟು ಪ ಚಾರು ಮುಖಿಯ ಯಾರು ಒಯ್ದರೋ ವಿಚಾರ ಮಾಳ್ಪರಾರ ಇಲ್ಲ ಚೋರರೊಯಿದರೋ ಕ್ರೂರದೈತ್ಯ ವರ್ಯರೋ ಉದಾರಗಂಧರ್ವರೋ ಪೂರ್ವವಯದ ಪಾರ್ವತಿಯ ಯಾರು ವೈದಿದಾರು ಮತ್ತೆ1 ಇಂದ್ರತಾನು ಬಂದು ಒಯ್ದನೋ ಆ ಚಂದ್ರ ಮುಖಿಯ ಚಂದ್ರ ಬೇಕೆಂದು ಒಯ್ದನೋ ಮುಂದೆ ಯಾರು ಬಂದು ಒಯ್ದರೆಂದು ತಿಳಿಯದಿಂದು ಎನಗೆ ಬಂದ ತಾಪದಿಂದ ಬಹಳ ಬೆಂದೆನಾರ ಮುಂದೆ ಹೇಳಲಿ 2 ಎಂತು ನಾನು ಚಿಂತೆ ಮಾಡಲಿ ಧೀಮಂತ ಮುನಿಗೆ ನಿಂತು ಏನಂತ ಹೇಳಲಿ ಎಂಥ ಕಷ್ಟ ಬಂತÀು ಈ ಚಿಂತೆಗಿನ್ನು ಪ್ರಾಂತಗಾಣೆ ಪ್ರಾಂತಕಾನಂತ ಗಿರಿಯ ಕಾಂತಗೇನಂತ ಹೇಳಲಿ 3 ಪದ್ಯ ಮುನ್ನಯೀಪರಿ ಶೋಕವನ್ನು ಮಾಡುತಲೆದ್ದು ಘನ್ನ ಆ ಗಿರಿರಾಜ ನಿನ್ನೇನು ಗತಿಯೆಂದು ಕಣ್ಣೀರು ಸುರಿಸುತಲೆ ಹೆಣ್ಣು ಮಗಳನು ನೆನಸಿ ಉಣ್ಣದಲೆ ತಾನು ಅರಣ್ಯದಲಿ ನಡೆದ ಕಣ್ಣಿಟ್ಟು ನಾಕುಕಡೆ ಚನ್ನಾಗಿ ನೋಡಿದನು ಮುನ್ನಲ್ಲೆ ಕುಳಿತಿರುವ ತನ್ನ ಮಗಳನು ಕಂಡು ಕನ್ನಡಿಯ ಪರಿಹೊಳೆವ ಮುನ್ನವಳಗಲ್ಲವನು ಚೆನ್ನಾಗಿ ಪಿಡಿದು ಬಹು ಬಣ್ಣಿಸುತ ನುಡಿದ ಪದ ಪ್ರೀತಿ ಮಗಳೆ ನೀನು ಈ ವನದಲ್ಲಿ ಕೂತ ಕಾರಣವೇನು ಅಮ್ಮಯ್ಯಾ ಪ್ರೀತಿಯ ಮಗಳೆ ಇಲ್ಲೇತಕೆ ಬಂದೆ ನೀ ಪ್ರೀತನಾದ ಶ್ರೀನಾಥ ಮನೆಗೆ ನಡಿ ಪ ಮದುವಿ ನಿಶ್ಚಯವಿಂದು ಮಧುಸೂದನನಿಗೆ ನಾ ಮುದದಿ ನಿನ್ನನ್ನು ಕೊಟ್ಟು ಮದುವೆ ಮಾಡುವೆನು ಮುದದಿ ಮನೆಗೆ ನಡಿ 1 ಮನಸಿನೊಳಗೆ ಮಿಡುಕೀ ಮನೆಯ ಬಿಟ್ಟು ವನವನವÀ ಚರಿಸುವರೇ 2 ಮನೆಗೆ ನಡಿಯೆ ನಿನ್ನ ಮನಸಿನಂತಾಯಿತು ಏಸು ಜನ್ಮಕೆ ಬಂದು ಮಾಡಿದ ಪುಣ್ಯರಾಶಿ ಫಲಿಸಿತಿಂದು ವಾಸುದೇವ ಸರ್ವೇಶ ಅನಂತಾದ್ರೀಶ ನೀನ್ನ ಕೈವಶವಾದನಡಿ 3 ಪದ ಪಡೆದ ತಂದೆಯ ಮಾತು ದೃಢವಾಗಿ ಕೇಳುತಲೆ ಬಿಡದೆ ಆ ನಾರದನ ನುಡಿ ಸ್ಮರಿಸಿ ಪಾರ್ವತಿಯು ಎಡವಿದಾ ಬಟ್ಟುಮ ತ್ತೆಡವಿದಂತೆ ದು:ಖ ಬಡುವುತಲೆ ಮನದಲ್ಲೆ ಮಿಡುಕಿದಳು ತಾನು ಅಡವಿಯಲಿ ನಾ ಬಂದು ಅಡಗಿದರು ಇದು ಎನ್ನ ಬಿಡಲಿಲ್ಲ ಮತ್ತಿನ್ನ ತುಡುಗುತನವು ಯಾಕೆ ನುಡಿಬೇಕೆಂದು ತನ್ನ ಒಡಲೊಳಗಯಿದ್ದದ್ದು ಒಡೆದು ಆಡಿದಳಾಗ ಭಿಡೆಯಬಿಟ್ಟು ಪದ ಅಪ್ಪಯ್ಯ ಒಲ್ಲೆ ನಾ ವಿಷ್ಣುವ ಒಲ್ಲೆನಾ ವಿಷ್ಣುವ ಎಲ್ಲಿ ಹುಡುಕಿ ತಂದಿ ಬಲ್ಲಿದ ಶಿವಯೆನ್ನ ವಲ್ಲಭನಯ್ಯಾ ಪ ಧೀರ ಕೇಳವನ ವಿಚಾರಯೆನ್ಹೇಳಲಿ ನೀರು ಮನೆಯಮಾಡಿ ಭಾರವಗೆಲುವ ಮಣ್ಣು ಮೆಲುವಾ ಬಿಟ್ಟು ಅವದಾವ ಚೆಲುವಾ 1 ನಿತ್ಯ ಕ್ರೂರನಾಗಿ ಮತ್ತೆ ಬಲಿಯ ತಳಕೊತ್ತಿ ತುಳಿದನವ ಕುಹಕ ಕುತ್ತಿಗೆ ಕೊಯಿಕಾ ಅವಗೆಲ್ಲಿ ವಿವೇಕಾ 2 ಶುದ್ಧ ಕೋತಿಯ ಕೂಡಿ ಕದ್ದು ಬೆಣ್ಣೆಯ ಬತ್ತ ಲಿದ್ದು ತೇಜಿಯ ಬಿಟ್ಟು ಅನಂತಾದ್ರಿಯಲ್ಲಿಹನು 3 ಪದ ವನದಲ್ಲೆ ಇರುವ ಆ ವನಜ ಮುಖಿ ಪಾರ್ವತಿಯು ವಿನಯದಿಂದೀಶ್ವರನ ಮನದಲ್ಲೆ ಸ್ಮರಿಸುತ್ತಲೆ ಮನಸಿನ ಭಾವವನ್ನು ಅನುಮಾನ ಬಿಟ್ಟು ತನಗನುಕೂಲವಾಗಿ ಘನ ಹಿಮಾಚಲ ಜನಾರ್ದನಗೆ ಕೊಡಬೇಕೆಂದು ಮನದಲ್ಲೆ ಆತನ ನೆನವುತಲೆ ಭಕ್ತಿಯಲಿ ಮುನಿದಿರುವ ಪಾರ್ವತಿಯ ಮನಸಿನ ಭಾವವನು ಮನಸಿಗೆ ತಾರದಲೆ ಮನೆಗೆ ನಡೆಯೆಂದ 1 ಪದ ಮನೆಗೆ ನಡೆಯೆ ಪಾರ್ವತಿ ನೀನು ಎನ್ನ ಮನಸಿನಂತಾದರೆ ಬರುವೆನು 1 ನಿನ್ನ ಮನೋರಥ ವದುಯೇನು ಬಹು ಮನ್ನಿಸಿ ಶಿವಗೆನ್ನ ಕೊಡು ನೀನು 2 ಹರಿಗೆ ನಿಶ್ಚಯ ಮಾಡಿದೆ ನಾನು ಬಿಡು ಹರಗೆ ನಿಶ್ಚಯ ಮಾಡೆಲೋ ನೀನು 3 ಬಾಲೆ ಕೊಟ್ಟ್ಹಣ್ಣು ತಿರುಗೂದಿಲ್ಲೆ ಶಿಶುಪಾಲನ ರುಕ್ಮಿಣಿ ಬಿಡಲಿಲ್ಲೆ 4 ಗೆದ್ದೊಯ್ದ ಆಕೆಯ ಹರಿ ತಾನು ನಾನು ಗೆದ್ದವರಿಗೆ ಮಾಲೆ ಹಾಕುವೆನು 5 ಯಾವ ಪುರುಷ ನಿನ್ನ ಗೆದ್ದವನು ಮಹದೇವನೆ ನಿಶ್ಚಯ ತಿಳಿ ನೀನು 6 ಗೆದ್ದಿಹ ನಿನ್ನಾನಂತಾದ್ರೀಶಾ ನಿನಗದರ ಚಿಂತೆಯಾಕೋ ಶೈಲೇಶಾ7 ಪದ ಅವನು ಹಿಮವಂತನೆಂಬುವನು ತನ್ನ ಮಗಳು ಆದವಳಿಗೀಪರಿ ನುಡಿದಾ ಶಿವನನಾಮದುವೆ ಆಗುವೆನು ಎಂಬುವೆ ನೀನು ಶಿವನುಯೆಂದೆನಿಸಿಕೊಂಬುವನು ಅವ ಮತ ಎಂಥವನು ಪೇಳೆ ಅವನ ಮಾತನು ಕೇಳಿ ಯುವತಿಮಣಿ ಪಾರ್ವತಿಯು ಶಿವನ ಸ್ಮರಿಸುತ ಮತ್ತೆ ಶಿವನ ಸರಿಯಿಲ್ಲ ಈ ಭುವನದೊಳು ಎಂತೆಂದು ಅವನ ಕೊಂಡಾಡುತಲೆ ಸ್ತವನ ಮಾಡುತ ನುಡಿದಳವನ ಪತಿಯೆಂದು 1 ಪದ ಅವನೆ ಪತಿಯು ಶಿವನು ಎನಿಸುವಾ ಅಪ್ಪಯ್ಯ ಕೇಳೋ ಅವನೆ ಪತಿಯು ಶಿವನು ಎನಿಸುವವನು ಸರ್ವÀಭುವನದೊಡೆಯ ಅವನೆ ಯನಗೊಪ್ಪುವನು ಸತ್ಯ ಅವನೀಶನೆ ಯೆನ್ನವಗರ್ಪಿಸು ಪ ಭಕ್ತಪ್ರಿಯ ತ್ರೀನೇತ್ರನಾಥನು ತಾ ನಿತ್ಯ ನದಿಯ ನೆತ್ತಿಯಲಿ ಪೊತ್ತಿಹಾತನು ಪ್ರಖ್ಯಾತನು ಸತ್ಯಶೀಲಕೃತ್ತಿವಾಸಕ್ಲøಪ್ತ ಅವನೆ ಚಿತ್ತದೊಡೆಯ ಅವಗಗತ್ಯ ಕೊಡುನೀ 1 ಬಂದದುರಿತ ಹಿಂದೆ ಮಾಡುವ ಭಕ್ತಿಂದ ನಡದು ನಡದು ಬಂದವರಿಗಾನಂದ ಮಾಡುವ ದಯಮಾಡುವ ತಂದು ಕೊಡುವ ತಂದೆ ಕೇಳಾನಂದಮೂರುತಿ ನಂದಿವಾಹನ ಚಂದ್ರಶೇಖರ ಅಂಥ ಇಂಥ ಕಾಂತನಲ್ಲವೋ ಭೂಪ್ರಾಂತದೊಳವನಂಥ ದಯಾವಂತರಿಲ್ಲವೋಸುಳ್ಳಲ್ಲವೋ ಕಂತುಪಿತ ಅನಂತಾದ್ರೀಶನಂಥ ಕಪಟವಂತರಿಲ್ಲ ಅಂತರಂಗದ ಕಾಂತ ಶಿವನೇ ಚಿಂತೆಯಾಕ್ಹಿಮವಂತ ಇನ್ನು ಪದ ಇಂಥ ಮಾತನು ಕೇಳಿ ಸಂತೋಷದಲಿ ಹಿಮವಂತ ರಾಜೇಂದ್ರ ತಾನು ಮಾತಾಡಿದನು 1 ಮನೆಗೆ ಬಂದನು ಉದ್ರೇಕದಲ್ಲಿ ಸ್ನೇಹಬದ್ಧಾಗಿ ಸ್ವಯಂವರ ದುದ್ಯೋಗ ಮಾಡಿದನು 2 ಲೇಸಾಗಿ ತಾ ಸರ್ವದೇಶಕ್ಕೆ ದುಂದುಭಿ ಘೋಷವ ಮಾಡಿಸಿದಾ ತೋಷದಿ ಸರ್ವಲೋಕೇಶರನೆಲ್ಲಾ ಕರೆ ಕಳುಹಿದಾ 3 ಇಂದ್ರ ತಾ ಬಂದ ಅಲ್ಲಿಂದ ಅಗ್ನಿಯು ಬಂದಾ ಮುಂದೆ ಆ ಯಮನು ಬಂದಾ ಬಂದಾ ನಿರುತಿಮತ್ತೆ ಬಂದ ವರುಣ ವಾಯು ಬಂದ ಕುಬೇರ ತಾನು 4 ನಿಲ್ಲದೆ ಸ್ವಯಂವರಕೆ ಬಲ್ಲಿದನಂತಾದ್ರಿ ವಲ್ಲಭ ತಾ ಬಂದ ಎಲ್ಲರು ಬಂದರಾಗ 5 ಪದ ಗಿರಿರಾಜ ಮುಂದೆ ಆ ಸುರರಲ್ಲಿ ಬಹುಸ್ನೇಹ ಸುರಿಸುತಲೆ ಆಸನವ ತರಿಸಿ ಎಲ್ಲರನು ಕುಳ್ಳಿರಿಸಿ ಕರಗಳ ಮುಗಿದು ಹರಿ ಮೊದಲು ಮಾಡಿಕೊಂ- ಡ್ಹರುಷದಿಂದಲಿ ಸರ್ವ ಸುರರಿಗರ್ಚಿಸಿದ ಸುರಸಾದ ಈ ಕಥೆಯ ಸರಸಾಗಿ ಕೇಳಿದರೆ ಸುರರು ವೊಲಿವುವರೆಲ್ಲ ಸರಸಿಜಾಕ್ಷಿಯ ಸ್ವಯಂವರಕೆ ಬಂದಿಹ ಸರ್ವ ಸುರರನುಗ್ರಹದಿಂದ ಸರಸರನೆ ಮುಗಿದಿತಿಲ್ಲಿಗೆರಡು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಕೋಲು ಕೋಲೆನ್ನ ಕೋಲೆ ಪ ಅಂಜಾನೆ ಗಿರಿಯಲ್ಲಿ | ಸಂಜೀವರಾಯ ಸಹ ಕಂಜನಾಭನಿರುವ | ಅಂಜಿಕ್ಯಾತಕಮ್ಮ 1 ಮೂಡಲು ಗಿರಿವಾಸ | ನಾಡಿಗೊಡೆಯನೆಂದು ಪಾಡುವವರ ದೋಷ | ಓಡಿಸುವನಮ್ಮ 2 ವೆಂಕಟರಮಣನು | ಕಿಂಕರ ಜನಗಳ ಸಂಕಟಗಳ ಕಳೆವ | ಶಂಕೆ ಇಲ್ಲವಮ್ಮ 3 ಈಶ ಶ್ರೀನಿವಾಸ | ದಾಸ ಜನರ ಪೋಷ ರಾಶಿ ದೋಷ ಸುಟ್ಟು | ಲೇಸುಗೈವನಮ್ಮ 4 ಮತ್ಸ್ಯ ಮೂರುತಿ ತ | ನ್ನಿಚ್ಛೆಯಿಂದಲಿ ಬಲು ತುಚ್ಛ ದೈತ್ಯನನು | ಕೊಚ್ಚಿ ಬಿಸುಟನಮ್ಮ 5 ಅಮಿತ ಭಾರ ಪೊತ್ತು ಸುಮನಸರಿಗಮೃತ | ಮಮತೆಲಿತ್ತನಮ್ಮ 6 ಕ್ರೋಡಾಕಾರನಾಗಿ | ರೂಢಿಚೋರನಾದ ಹೇಡಿ ರಕ್ಕಸನ | ತೀಡಿ ಕೊಂದನಮ್ಮ 7 ಘೋರ ರೂಪ ಕೊಂಡು | ಕ್ರೂರ ರಕ್ಕಸನ ದೋರೆ ಕರುಳಕಿತ್ತು | ಪೋರನ ಪೊರೆದನಮ್ಮ 8 ಪುಟ್ಟ ಪೋರನಾಗಿ | ಬೆಟ್ಟದಂತೆ ಬೆಳೆದು ದಿಟ್ಟ ಬಲಿಯ ಶಿರವ | ಮೆಟ್ಟಿ ತುಳಿದನಮ್ಮ 9 ತಾತನ ನುಡಿ ಕೇಳಿ | ಕಾತರನಾಗದೆ ಮಾತೆಯ ಶಿರವನ್ನು | ತಾ ತರಿದಿಟ್ಟನಮ್ಮ 10 ಸೀತೆಯ ಬಿಡಿಸಲು | ಸೇತುವೆಯನು ಕಟ್ಟಿ ಭೂತನನ್ನು ಕೊಂದು | ಖ್ಯಾತಿಗೊಂಡನಮ್ಮ 11 ದ್ವಾರಕಪತಿ ತಾನು | ನಾರಿ ಪಾಂಚಾಲೆಯು ಕೋರಿದ ಕ್ಷಣದಲ್ಲಿ | ಸೀರೆಯ ನೇದನಮ್ಮ 12 ಚಿತ್ತಜನಯ್ಯನು | ಅತ್ತಿತ್ತ ಅಲೆಯುತ ಬೆತ್ತಲೆ ನಾರಿಯರ | ಮುತ್ತುಗೊಂಡನಮ್ಮ 13 ಜಲಜನಾಭನು ತಾ | ಕಲಿಗಾಲ ಕಡೆಯಲ್ಲಿ ಹಲವು ಪಾಪಿಗಳನು | ಫಲದಿ ಕೊಂದನಮ್ಮ 14 ಮುಟ್ಟಿ ಭಜಿಸುವರಿಗೆ | ಇಷ್ಟವಾದ ವರವಕೊಟ್ಟನು ರಂಗೇಶ | ವಿಠಲ ಕೇಳಮ್ಮ 15
--------------
ರಂಗೇಶವಿಠಲದಾಸರು
ನೆನೆವೆನನುದಿನ ನೀಲನೀರದವರ್ಣನ ಗುಣರನ್ನನಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಪಾಂಗನ ಪ. ದೇವಕೀ ಜಠÀರೋದಯಾಂಬುಧಿಚಂದ್ರನ ಸುಖಸಾಂದ್ರನಗೋವ್ರಜಕೆ ಘನ ಯಮುನೆಯನು ದಾಟಿ ಬಂದನ ಅಲ್ಲಿ ನಿಂದನಮಾವ ಕಳುಹಿದ ಮಾಯಶಠವಿಯ ಕೊಂದನ ಚಿದಾನಂದನ ದೇವರಿಪು ದೈತ್ಯೇಂದ್ರ ಶಕಟನ ಒದ್ದನ ಶ್ರುತಿಸಿದ್ಧನ 1 ಗೋಕುಲದ ಗೋಪಿಯರ ಸಂಚಿತ್ತ ಚೋರನ ಬಹು ಧೀರನ ಅ-ನೇಕ ನಾರಿಯರ್ವಸನವನು ಕದ್ದೊಯ್ದನ ಪುರಗಾಯ್ದನನಾಕಿಯರ ನೋಯಿಪಧೇನುಕ ವತ್ಸವಿಘಾತ ವಿಖ್ಯಾತನಕಾಕುಮತಿ ಕಾಳಿಂಗನ ಫಣ ತುಳಿದನ ಆವಗೊಲಿದನ 2 ಕರ ಪಿಡಿದನ ಸುಧೆಗುಡಿದನಬಾಲ ಭಾಮೆಯರೊಡನೆ ಜಲಕ್ರೀಡೆಗಿಳಿದನ ಅಲ್ಲಿ ನಲಿದನಲೀಲೆಯಲಿ ಲಲನೆಯರಿಗಿಷ್ಟವ ಕೊಟ್ಟನ ಸಂತುಷ್ಟನ 3 ಕ್ರೂರ ಬಕ ಕೇಶಿಗಳನೆಲ್ಲ ಸೀಳ್ದನ ಸುರರಾಳ್ದನ ಅಕ್ರೂರ ಕರೆಯಲು ಹರುಷದಿಂದಲಿ ಬಂದನ ಸುರವಂದ್ಯನಸಾರಿ ಕುಬ್ಜೆಗೆ ಭೂರಿಸಂತಸವಿತ್ತನ ಅತಿಶಕ್ತನವಾರಣವ ಒದ್ದು ಕೆಡಹಿದಾಪ್ರತಿಮಲ್ಲನ ಅತಿಚೆಲ್ವನ4 ಸುಲಭದಿಂದಲಿ ಶಿವನ ಧನುವನು ಮುರಿದನ ನೆರೆಮೆರೆದನಮಲೆತÀ ಮಲ್ಲರ ಮಡುಹಿರಂಗದಿ ನಿಂತನ ಜಯವಂತನಖಳಕುಲಾಗ್ರಣಿ ಕಂಸನೆಂಬನ ಹೊಡೆದನ ಹುಡಿಗೆಡೆದನಬಲದಿ ತಾಯಿತಂದೆ ಬಂಧನ ಕಡಿದನ ಕೀರ್ತಿ ಪಡೆದನ 5 ಭುವನ ಪಟ್ಟವನುಗ್ರಸೇನಗೆ ಕೊಟ್ಟನ ಅತಿ ದಿಟ್ಟನಯುವತಿಯರಿಗುದ್ಧವನ ಕಳುಹಿದ ಜಾಣನ ಸುಪ್ರವೀಣನವಿವಿಧ ವಿದ್ಯಾ ಕಲೆಗಳನ್ನೆಲ್ಲ ಅರಿತನ ಶುಭಚರಿತನ ಜವನ ಶಿಕ್ಷಿಸಿ ದ್ವಿಜನ ಕಂದನ ತಂದನ ಆನಂದನ 6 ಕುಮತಿ ಖಳ ಮಾಗಧನ ಯುದ್ಧದಿ ಗೆದ್ದನ ಅನವದ್ಯನದ್ಯುಮಣಿಸಮ ದ್ವಾರಕೆಯ ರಚಿಸಿದುದಾರನ ಗಂಭೀರನಸುಮತಿ ಮುಚುಕುಂದನೊದ್ದ ಯವನನ ಸುಟ್ಟನ ಅತಿದಿಟ್ಟನವಿಮಲ ಸುಚರಿತ್ರಾಷ್ಟಮಹಿಷಿಯರಾಳ್ದನ ನೆರೆಬಾಳ್ದನ 7 ಮುರನರಕ ಮುಖ್ಯರನು ಚಕ್ರದಿ ತರಿದನ ಕರಿವರದನಸುರತರುವ ಸತಿಗಾಗಿ ತಂದ ಸಮರ್ಥನÀ ಜಗತ್ಕರ್ತನದುರುಳ ಶಿಶುಪಾಲಾದಿ ದೈತ್ಯ ಸಂಹಾರನ ಬಹು ಶೂರನಕುರುಕುಲಕೆ ಲಯವಿತ್ತ ಪಾಂಡವಪ್ರೀಯನ ಕವಿಗೇಯನ 8 ಸಂತತವೀ ಸಾರÀ ಕತೆಯನು ಕೇಳ್ವರ ನೆರೆ ಬಾಳ್ವರಕಂತುಪಿತ ಕಾರುಣ್ಯದಿಂದಲಿ ಹೊರೆವನು ಸುಖಗರೆವನುಇಂತು ಇಳೆಯ ಸುಜನರ ಸಲಹುವ ಕಾಂತನ ಸಿರಿವಂತನಪಂಥವುಳ್ಳ ಪ್ರಸನ್ನ ಹಯವದನ್ನನಮುನಿಮಾನ್ಯನ 9
--------------
ವಾದಿರಾಜ
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಏನ ಮಾಡಲಿ ಮಗನೆ ಏಕೆ ಬೆಳಗಾಯಿತು |ಮಾನಿನಿಯರು ಬಂದುಮಾನಕಳೆಯುವರುಪಹಾಲು, ಮೊಸರು, ಬೆಣ್ಣೆ, ಕದ್ದನೆಂತೆಂಬುವರು |ಮೇಲಿಟ್ಟ ಕೆನೆಯನು ಮೆದ್ದನೆಂಬುವರು ||ಬಾಲರನೆಲ್ಲರ ಬಡಿದನೆಂಬರು ಎಂಥ |ಕಾಳು ಹೆಂಗಸು ಇವನ ಹಡೆದಳೆಂಬುವರೊ 1ಕಟ್ಟಿದ ಕರುಗಳ ಬಿಟ್ಟನೆಂತೆಂಬರೊ |ಮೆಟ್ಟಿ ಸರ್ಪನ ಮೇಲೆ ತುಳಿದನೆಂಬುವರೊ ||ಪುಟ್ಟ ಬಾಲೆಯರ ಮೋಹಿಸಿದನೆಂಬುವರೊ ಎಂಥ |ಕೆಟ್ಟ ಹೆಂಗಸು ಇವನ ಹಡೆದಳೆಂಬುವರೊ 2ಗಂಗಾಜನಕನಿನ್ನ ಜಾರನೆಂತೆಂಬರೊ |ಶೃಂಗಾರ ಮುಖ ನಿನ್ನ ಬರಿದೆ ದೂರುವರೊ ||ಮಂಗಳಮಹಿಮ ಶ್ರೀ ಪುರಂದರವಿಠಲ |ಹಿಂಗದೆ ಎಮ್ಮನು ಸಲಹೆಂತೆಂಬುವರೊ 3
--------------
ಪುರಂದರದಾಸರು
ಏನುಚೋದ್ಯಶ್ರೀನಿಧೆಹರಿಮಾನಿನಿಶ್ರೀದೇವಿ ಭೂದೇವಿರಮಣಪಸೃಷ್ಟಿಕರ್ತನೆಂದು ಪೇಳ್ವರು ಪಾಂಡವರ ಮನೆಯಬಿಟ್ಟಿ ಬಂಡಿಬೋವನೆಂಬೋರು ಪಾಂಚಾಲಿಗೆ ಒದಗಿದಕಷ್ಟಕಳೆದÀು ಪೊರೆದನೆಂಬೊರೊಕೆಟ್ಟದಾನವರ ಅಟ್ಟುಳಿಯ ಕಳೆದುದುಷ್ಟಕಂಸನವಧೆಯ ಸ್ಪಷ್ಟ ಪೇಳುತಿಹರೊ 1ಗಜನ ಸಲಹಿ ಪೊರೆದನೆಂಬೊರೊ ನೆಗಳೆಯನು ಸೀಳಿತ್ರಿಜಗದೊಡೆಯ ಶ್ರೀಶನೆಂಬೊರೊ ಪ್ರಹ್ಲಾದ ಧೃವಗೆನಿಜಸೌಭಾಗ್ಯ ಇತ್ತೆ ಎಂಬೊರೊವಿಜಯಸಾರಥಿಯ ವಿಶ್ವರೂಪ ತೋರಿಸುಜನರನ್ನು ಪೊರೆದ ನಿಜವ ಪೇಳುತಿಹರು 2ವತ್ಸಾಸುರನ ಮಡುಹಿದೆಂಬೊರೊ ಅಡವಿಯಲಿ ಕಾಡ-ಕಿಚ್ಚನುಂಗಿ ಬೆಳೆದಿ ಎಂಬೊರೊ ತಾಯಿಗೆ ಬಾಯೋಳಹೆಚ್ಚಿನ್ವಿಷಯ ತೋರ್ದಿ ಎಂಬೊರೊಕಚ್ಚ ಬಂದ ಘಣಿಯ ಮೆಟ್ಟಿ ತುಳಿದು ಜಲವಸ್ವಚ್ಛಗೈದನೆಂದಾಶ್ಚರ್ಯ ಪೇಳುತಿಹರೊ 3ಕರಡಿ ಮಗಳು ಮಡದಿಯೆಂಬೊರೊ ಪುಷ್ಪವನು ತರಲುತೆರಳಿ ಯುದ್ಧ ಮಾಡ್ದನೆಂಬೊರೊ ದೇವೇಂದ್ರನ ಗೆಲಲುತರುಣಿ ಸಮರಗೈದಳೆಂಬೊರೊಮುರಳಿನಾದದಿಂದ ತರುಣಿಯರ ಮನವಮರುಳುಗೈದನೆಂದು ಪರಿಪರಿ ಪೇಳುವರೊ 4ಕೆಟ್ಟದ್ವಿಜನ ಪೊರೆದಿ ಎಂಬೊರೋ ವನವನವ ಚರಿಸಿಸುಟ್ಟ ದಾಸಗೊಲಿದೆ ಎಂಬೊರೋ ಒಪ್ಪಿಡಿಯ ಗ್ರಾಸವಕೊಟ್ಟದ್ವಿಜನ ಪೊರೆದಿಯೆಂಬೊರೊಅಟ್ಟಹಾಸದಿ ತಂದ ರುಕ್ಮಿಣಿಯ ತನ್ನಪಟ್ಟದರಸಿಯೆಂದು ಸ್ಪಷ್ಟ ಪೇಳುತಿಹರೊ 5ಶಿಲೆಯ ಸತಿಯಗೈದನೆಂಬರೊ ಅಡವಿಗಳ ಚರಿಸಿಬಲುಕಪಿಗಳ ಕೂಡ್ದನೆಂಬೊರೊ ಭಯ ಭಕ್ತಿಗೆ ಮೆಚ್ಚಿಫಲದ ಎಂಜಲ ಸವಿದನೆಂಬೊರೊ ಮೆಚ್ಚಿಸುಲಭದಿಂದ ದೈತ್ಯಕುಲವನೆಲ್ಲ ಸವರಿಛಲದ ದಶಶಿರನ ವಧೆಯ ಪೇಳುತಿಹರೊ 6ಪುಟ್ಟಬ್ರಹ್ಮಚಾರಿ ಎಂಬೋರೊ ಬಲಿರಾಜನ ಬೇಡಿಕೊಟ್ಟದಾನ ಕೊಂಡನೆಂಬೋರೊ ಈರಡಿಯನಳೆದುಮೆಟ್ಟಿ ಸಿರವ ತುಳಿದನೆಂಬೋರೊಎಷ್ಟು ಪೇಳಲಿ ನಿನ್ನ ಶ್ರೇಷ್ಠಗುಣಗಳನ್ನುದಿಟ್ಟ ಕಮಲನಾಭ ವಿಠ್ಠಲ ಸರ್ವೇಶ 7
--------------
ನಿಡಗುರುಕಿ ಜೀವೂಬಾಯಿ
ಹೆಜ್ಜೆಗಳಿವೆ ನೋಡಿರಿ ರಂಗಯ್ಯನಹೆಜ್ಜೆಗಳಿವೆ ನೋಡಿರಿ ಪಹೆಜ್ಜೆಗಳಿವೆ ನೋಡಿರಿ ಮೂರ್ಜಗದÉೂಡೆಯನಅಬ್ಜಭವಾದ್ಯರ ಹೃದ್ಗøಹವಾಸನ ಅ.ಪಮಧುರಾಪುರದಿ ಜನಿಸಿದನ ಬೇಗಮಾವ ಕಂಸನ ಛೇದಿಸಿದನಚದುರೇರಿಗೊಲಿದ ಶ್ರೀಶನ ದಿವ್ಯಮದನಮೋಹನ ಕೃಷ್ಣವಿಧಿಭವಾರಾಧ್ಯನ1ಗೋಕುಲವಾಸನೆಂದೆನಿಪ ದಿವ್ಯನಾಕೇಶವಂದ್ಯ ಸರ್ವೇಶನಭೀಕರ ದೈತ್ಯರ ಸದೆದನ ಸವ್ಯ-ಸಾಚಿಯ ರಥದೊಳು ಏಕಾಂತ ನುಡಿದನ 2ವೇದ ಚೋರನ ಭೇದಿಸಿದನ ಗಿರಿಭಾರಬೆನ್ನಿಲಿ ಪೊತ್ತು ನಿಂತನಆದಿ ದೈತ್ಯನ ಸೀಳಿ ಭೂಮಿಯ ತಂದುಕ್ರೂರ ದೈತ್ಯನ ಕರುಳ್ಹಾರ ಮಾಡಿದ ಹರಿಯ 3ಬಲಿಯ ದಾನವ ಬೇಡಿದನ ಬಲುಛಲದಿ ಕ್ಷತ್ರಿಯರ ಸೋಲಿಸಿದನಲಲನೆಯ ತಂದ ಶ್ರೀವರನಗೊಲ್ಲರ ಕುಲದಲ್ಲಿ ಬೆಳೆದ ಶ್ರೀಚಲುವ ಗೋಪಾಲನ 4ದುಷ್ಟಕಾಳಿಂಗನ ಮದವನಳಿದುಮೆಟ್ಟಿನಾಟ್ಯದಿ ಸಿರದಿ ತುಳಿದನಪುಟ್ಟಪಾದದ ದಿವ್ಯ ಚಲುವನ ಗೋವ್ಗ-ಳಟ್ಟಿ ಹೋಗುವ ನಮ್ಮ ಪುಟ್ಟ ಗೋಪಾಲನ 5ಶಂಖು ಚಕ್ರವು ಗದ ಪದ್ಮವು ಹೊಳೆವÀಕಿಂಕಿಣಿಪೈಜನಿನಾದವುಬಿಂಕದಿ ಊದುವ ಕೊಳಲಗಾನವು ನಿ-ಶ್ಶಂಕೆಯಿಂದಲಿ ಭಕ್ತವೃಂದವ ಪೊರೆದನ 6ಥಳಥಳಿಸುವ ದಿವ್ಯ ತಿಲಕವು ಹೊಳೆಯೆಬರಿಮೈಯ್ಯ ತೋರುತ ನಿಂತನಕುದುರೆಯನೇರುತ್ತ ಬರುವನಸಿರಿಕಮಲನಾಭ ವಿಠ್ಠಲ ಭಕ್ತಪೋಷನ7
--------------
ನಿಡಗುರುಕಿ ಜೀವೂಬಾಯಿ