ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಕೂಡಿದೆ ಎನ್ನ ಮನದ ಪ್ರೀಯರ ಪ ಚರಣ ಕಮಲವು ಕಾಣುತಾಕ್ಷಣಹರುಷವಾಯ್ತು ಪೂರ್ಣ ಎನ್ನ ಮನಸಿಗೆ |ಶರಧಿ ಎಬ್ಬಿದ ಪರಿಯ ಎನ್ನೊಳುಪರಮ ಚಿದ್ಘನಾನಂದ ತುಳುಕಿತು 1 ಅಮಿತ ಸುಖವನುಭಾಲಲೋಚನನೆ ಬಲ್ಲ ಇದರ ಬಗೆಯನು |ಕೀಳ ಜನರಿದನೇನು ಬಲ್ಲರುಹಾಳ ಬದುಕುವದಿಂದೇತರದಿವರ ಜನ್ಮವು 2 ಪಾದ ಮೂರ್ತಿ ಜ್ಞಾನಬೋಧನೊಡೆಯನೀವನು 3
--------------
ಜ್ಞಾನಬೋದಕರು
ಏನೆಂದೀದೇಹ್ಯವನು ನಂಬಿದಿ ಮನವೆ ನೀ ಏನೆಂದೀ ದೇಹ್ಯವನು ನಂಬಿದಿ ಪ ಏನೆಂದು ನಂಬಿದ್ಯೋ ಆನಂದದ್ಹಿಗ್ಗುತ ಕ್ಷೀಣವಾಗೊಂದುದಿನ ಮಣ್ಣು ಗೂಡುವುದರಿತು ಅ.ಪ ತಳಕ್ಹಾಕಿ ಜೋಡಿಸಿ ಹಲವು ನರಗಳಿಂದ ಬಲವಾಗಿಬಿಗಿದ ಈ ಎಲುವಿನ ಹಂದರ 1 ರೋಗಕ್ಕೆ ಇದು ತವರಾಗಿ ಒಂದಿನ ನಾಶ ವಾಗಿ ತಾ ಕೈಬಿಟ್ಟು ಪೋಗುವ ಮಂಟಪ 2 ಹಲವು ವಿಧದಿ ಮಜ್ಜ ಮಲ ಮೂತ್ರ ಬಲುಹೇಯ ಕುಂಡಲ 3 ಬಿಲದ್ವಾರ ಒಂಬತ್ತು ತುಳುಕಿತುಂಬ್ಹರಿಯುತ ತೊಳೆಯದಿರಲು ನಿಮಿಷ ಹೊಲಸಿಕ್ಕಿ ನಾರುವುದು 4 ತಂದೆ ಶ್ರೀರಾಮನಂ ಹೊಂದಿ ಭಜಿಸದೆ ಗಾಢ ಅಂಧಕಾರದಿ ಬಿದ್ದು ನಂದಿಪೋಗುವ ತನು 5
--------------
ರಾಮದಾಸರು