ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಯ ಭೀಮಸೇನ ಪ. ಜಯ ಭೀಮಸೇನ ದುರ್ಜಯ ಪರಾಕ್ರಮ ಧೀರಾದಯಾಪಯೋನಿಧಿಯೆ ನಿರ್ಭಯ ವೈಷ್ಣವಾಗ್ರಣಿಅ.ಪ. ಅಂಬ ಪಾವಕ ದೀನೋದ್ಧಾರಿ1 ವೃಕೋದರ ವಿಷ್ಣುಸೇವಕ ವಿಜ್ಞಾನಾಂಬುಧಿಬಕಮದಧ್ವಂಸಿ ಜಟಾಸುರಾಂತಕ ಹಿಡಿಂ-ಬಕಾಸುರಗರ್ವಪರ್ವತ ಪವಿಧರ ಹಿಡಿಂಬಕಿ ಚಿತ್ತಕುಮುದಕೋರಕ ಪೂರ್ಣೋಡುಪರಾಜಅಕಳಂಕ ಧನುರಾಗಮಾಚಾರ್ಯ ನಿಪುಣ ಕೀ-ಚಕ ಬಲ ನಿರ್ಮೂಲನ ದ್ರೋಣಾದಿ ಸೈ-ನ್ಯ ಕುಮನ ಅಸುಹರಣ ಧಾರ್ತರಾಷ್ಟ್ರನಿಕರವಾರಣ ವಿದಾರಣ ಪಂಚವದನಾ 2 ಮಣಿಮಯರಥವೇರಿ ಫಣಿಕೇತನನನುಜನುನೆಣನು ದುರ್ಗುಣನು ಮಾರ್ಗಣಗಣದಿಂದಲಿರಣಾಂಗಣದಿ ನಿನ್ನ ಸೆಣಸಲಾಕ್ಷಣ ನೋಡಿತೃಣಮಾಡಿ ಗದೆಯಿಂದ ಹಣಿದು ಹಣೆಯ ಮೆಟ್ಟಿಪಣದಿ ನುಡಿದವರ ರಣವ ತಿದ್ದಿ ಅತ್ಯು-ಲ್ಬಣದಿಂದವಗೆ ಲಂಘಿಸಿ ವಕ್ಷದಿ ರಕ್ತಕೊಣನ ಶಸ್ತ್ರದಿ ನಿರ್ಮಿಸಿ ಕದಡಿಗೂಡಿರಣದೊಳೊಪ್ಪಿದ್ಯೊ ನಿನಗೆಣೆಯಿಲ್ಲವೆನಿಸಿ 3 ಮದ್ದಾನೆ ರೂಪ ಧರಿಸಿ ಮಾಯದಲಿ ಬಂದಾರುದ್ರಾನ ಯುದ್ಧದಿ ಗೆದ್ದುವೋಡಿಸಲಾಗಕೃದ್ಧನಾಗಿ ವ್ಯಾಘ್ರಸಿಂಹರೂಪದಿ ಬರೆಗುದ್ದಿ ಕೆಡಹಿ ವೇಗಕೆ ದಾರಿ ಕಟ್ಟಿದೆಯಿದ್ಧರೆಯೊಳು ನಿಮಗೆಣೆಯಾರು ಮಹಾಬಲಿಮದ್ರಾಧಿಪತಿಯ ಅಂಬರಕಟ್ಟಿ ರಾಜಸೂ-ಯಾಧ್ವರದಲಿ ಮಾಗಧನ ಸಂಹರಿಸಿದತಿಶುದ್ಧ ಸ್ವಭಾವ ಶೂರ ಸತತ ಸಾಧ್ಯಸಿದ್ಧೇಶನಿಲ ಕುಮಾರ ನಮಿಪೆಯೆನ್ನಉದ್ಧರಿಸುವುದಯ್ಯ ಶುದ್ಧ ಮನೋಹರ 4 ಸೂತ್ರ ಅಮಿತ ರೂಪ ಸದ್ಗುಣಗಣಧಾಮ ವೀರಪ್ರತಾಪ ಭಕುತಿ ಜ್ಞಾನಕಾಮಿತಾರ್ಥಗಳಿತ್ತು ಪೊರೆಯಯ್ಯ ಅಸುವ 5
--------------
ಗೋಪಾಲದಾಸರು
ಜಯರಾಯ ಭವಹರಣ ಪಾಲಿಸೆಮ್ಮ ಪ ಜಯದೇವಿಪ್ರತಿ | ರೂಪ ಗುಣಕ್ರಿಯ ರತಯತಿಯೆ ಅ.ಪ. ಅಮರೇಶ ಸ್ವರ್ಗಪದ ತೃಣಮಾಡಿ ಕ್ಷಿತಿಯಲಿ ಪಾದ ಸೇವೆಗಾಗಿ ಅಮಿತ ಭಾಗ್ಯವಿದೆಂದು ಪಶುವಾಗಿ ನೀನಿಂದು ಕಮಲ ಮಧು ಸೇವಿಸಿದೆ 1 ತೃತಿ ಈಶರೆನಿಸುವ ಅಗ್ನಿ ಗರುಡ ಮಹರುದ್ರ ಪ್ರತಿ ಕ್ಷಣದಿ ಅತಿ ಭಕುತಿ ಭಾರದಿಂದ ನತಿಸಿ ಸೇವಿಪ ಪರಮ ಗುರುಚರಣವಾಶ್ರೈಸಿ ದತಿ ಸುಕೃತನಿಧಿ ನಮ್ಮ ಅತಿದಯದಿ ಈಕ್ಷಿಪುದು 2 ಶ್ರೀ ಭೂಮಿ ದುರ್ಗೇಶನ ಮತ ಮಂಗಳ ಮೂರ್ತಿ ಶೋಭನಾಂತ ಗುಣಕ್ರಿಯ ನಿವಹಗಳನು ಅದ್ಭುತದಿ ಧರಿಸಿಹಾ ಮಧ್ವಕೃತ ಗ್ರಂಥಗಳ ಸದ್ಭಕ್ತಿಯಲಿ ಪೊತ್ತೆ ಸೌಭಾಗ್ಯನಿಧಿ ಗುರುವೆ 3 ಪವಮಾನರಾಯನಾ ಕೃಪೆಯೆಷ್ಟೊ ನಿನ್ನಲ್ಲಿ ಅವನಿಯೊಳು ಸಿದ್ಧಾಂತ ಗ್ರಂಥಗಳ ಟೀಕೆ ಕವಿಶ್ರೇಷ್ಠನಿರಲಾಗಿ ನಿನ್ನಿಂದ ರಚಿಸಿದ ತ್ರಿ ಭುವನ ಮಾನ್ಯನೆ ಧನ್ಯ ಧನ್ಯತೆಲಿ ಪೊರೆ ಎಮ್ಮ 4 ಪಾರ್ಥನಾದಂದು ಶ್ರೀ ಯದುಪತಿಯ ಸಖ್ಯವನು ಪೂರ್ತಿಪೊಂದಿದೆ ಸರ್ವ ಪುರುಷಾರ್ಥವೆಂದು ಸ್ವಾರ್ಥಮತಿಯ ಹರಿಯ ಒಲಿಸಿದಾ ಮಹಾನಿಪುಣ ಪಾದ ಪಾಂಶು ರಕ್ಷಿಸಲೆನ್ನ 5 ದೇವಕೀಸುತ ನಿನ್ನ ಸಖನೆಂದು ಪವಮಾನ ದೇವ ನಿನ್ನಲ್ಲಿ ಮಾಡಿದ ಪರಮ ಪ್ರೀತಿ ಪತಿ ದಾಸ್ಯ ಪೂರ್ಣಪ್ರದ ಆರೂಢ ಕೇವಲಾ ಕೃಪೆ ಮಾಡು ಹರಿದಾಸ ಮಣಿಗುರುವೆ 6 ಭಾರತೀಪತಿಗೊಡೆಯ ಜಯೇಶವಿಠಲನ ವೈರಾಗ್ಯ ಸಿದ್ಧಿಯಲಿ ಏಕಾಂತ ಪೊಂದಿ ಭವ ತರಣ ಸತ್ಪಾತ್ರ ವೃಷ್ಟಿ ಹರಿಗುರುಗಳೊಲಿವಂತೆ 7
--------------
ಜಯೇಶವಿಠಲ