ಒಟ್ಟು 61 ಕಡೆಗಳಲ್ಲಿ , 28 ದಾಸರು , 60 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಜೀವ ಲೋಚನ ಹರೇ ಮುರಾರೇ ಮಾಜೀವ ಮೋಹನ ಹರೇ ಮುರಾರೇ ಪ ರಾಜೇಂದ್ರ ನಂದನ ಹರೆ ಮುರಾರೇ ಓ ಜಾನಕೀ ಪ್ರಿಯ ಪಾಹಿ ಖರಾರೇಅ.ಪ ವಾರಾಶಿ ಗಂಭೀರ ಸಾಕೇತಧಾಮ ಮಾರಾರಿ ವಂದಿತ ಲೋಕಾಭಿರಾಮ ಘೋರಾಘಸಂಹಾರ ರಣರಂಗ ಭೀಮ ಶ್ರೀರಾಮ ಜಯರಾಮ ಕಲ್ಯಾಣರಾಮ 1 ಪವನಾತ್ಮಜಾನಂದದಾತಾಪರೇಶ ಭವನಾಶ ಜಗತೀಶ ದೈತೇಯನಾಶ ಸುವಿಲಾಸ ಮಾಂಪಾಹಿ ಶ್ರೀಮಾಂಗಿರೀಶಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
5. ವಿಶಿಷ್ಟ ಗೀತೆಗಳು ಭ್ರಮರಗೀತೆ 92 ಭೃಂಗಾ ನಿನ್ನಟ್ಟಿದನೇ ಶ್ರೀರಂಗ ಮಧುರೆಲಿ ನಿಂದುಅಂಗಜಲುಬ್ಧಕ ಪೂಗೋಲಂಗಳ ತಡೆಯನಿಕ್ಕಿಅಂಗನೇರೆಂಬೋ ಹುಲ್ಲೆ ಮೃಗಂಗಳಿಗೆ ಗುರಿಯೆಚ್ಚುಹಿಂಗಿಸುತೈಧಾನೆ ಅಸುವ ಹೇ ಕಿತವಾ ಪ ನಿನ್ನ ನೋಡೆ ನಮ್ಮ ಅಚ್ಯುತನ್ನ ಕಂಡಂತಾಯಿತಯ್ಯಚನ್ನಿಗರರಸ ಕುಶಲೋನ್ನತಿಯೊಳಹನೇನೋಚಿಣ್ಣತನ ಮೊದಲಾಗವನ್ನ ಕಿತವ ಬಲ್ಲೆವೋಗನ್ನಗಾರ ಚಿತ್ತ ಚೋರನ್ನ ಶ್ರೀ ಹರಿಯಾಮನ್ನಣೆಗೆ ಮೆಚ್ಚಿ ತನುವನ್ನೊಪ್ಪಿಸಿದ ಮುಗುದೆವೆಣ್ಣುಗಳ ವಿರಹಾಬ್ಧಿಯನ್ನೆ ದಾಟಿಸುವೆನೆಂದುತನ್ನ ನೇಹವೆಂಬೋ ನಾವೆಯನ್ನೇರಿಸಿ ಮೋಸದಿನಡುನೀರೊಳು ತೊರೆದ್ಹೋದನೆ ಹೇ ಕಿತವಾ 1 ತಮ್ಮ ನಂದಗೋಪ ಯಶೋದಮ್ಮನ ಕಂಡುಬಾರೆಂದುರಮ್ಮ್ಮೆಯ ರಮಣ ನಿನ್ನನೊಮ್ಮೆ ಕಳುಹಿದನೈಸೆಹಮ್ಮುಗೆಟ್ಟಾರಮ್ಮಣೇರಿಂದುಮ್ಮಳಿಸುವೆವೊ ವೃಥಾನಮ್ಮ ಹಂಬಲಿನ್ನೇನವಗೆ ಶ್ರೀ ಹರಿಗೆಹೊಮ್ಮೇಲಟ್ಟದಲಂಚೆಯಗಮ್ಮನೇರ ಕುಚದ ಕುಂ-ಕುಮ್ಮ ಕಸ್ತೂರಿಯ ಕರದಿಮ್ಮನದಿ ಸಿಲುಕಿದಂಗೆಕಮ್ಮಗೋಲನ ಬಾಣಂಗಳುಮ್ಮಳಿ ನೋಯಿಸುತಿವೆಸುಮ್ಮನೆ ಬಾಹೋದು ಸುಲಭವೆ ಹೇ ಕಿತವಾ2 ಮಧುವೈರಿ ಮೇದಿನಿ ನಿಟ್ಟಿಸಲಾಗಮೃದುವಾಕ್ಯದೊಳೆಮ್ಮಪ್ಪಿ ಅಧರಾಮೃತ ಭೋಜನಕ್ಕೊದಗುವ ಸತತ ಸನ್ನದ್ಧ ನಮ್ಮನಗಲಿ ಕಲ್ಲೆದೆಯಾದನೆಂತೋ ಕೃಪಾಳು ಹೇ ಕಿತವಾ 3 ಮಜ್ಜನ ಸಾಯುಜ್ಯ ಸುಖವತ್ತಲಿಪ್ಪುದೂ ಶ್ರೀ ಹರಿಯಅಬ್ಜಭವ ಮುನಿಜನ ಪೂಜ್ಯನಗಲಿದ ಮ್ಯಾಲೆನಿರ್ಜೀವಿಗಳಾಗಿ ಕಣ್ಣ ಕಜ್ಜಲ ಕಲಕಿಕೊಂಡುಲಜ್ಜೆಗೆಟ್ಟು ತನುಲತೆ ಜರ್ಝರಿತದಿ ಜೀವಿಸೆವಜ್ಜರೆದೆಯಲ್ಲವೆ ನಮ್ಮದು ಹೇ ಕಿತವಾ 4 ಕೌಸ್ತುಭ ವೈಜಯಂತಿ ಮಾಲೆಶ್ರೀ ತುಲಸಿ ಘಮಘಮಿಸುತ್ತಲಿಹ ವನಮಾಲೆರತುನ ಕಂಕಣ ಭುಜಕೀರ್ತಿಯಿಂದೊಪ್ಪುವ ಪುರುಷೋತ್ತಮನ್ನ ಬಣ್ಣಿಪರುಂಟೇ ಹೇ ಕಿತವಾ 5 ಉತ್ಪಲ ಶ್ಯಾಮಲ ಮುದವೆತ್ತ ಬಾವನ್ನವದೀಡಿಅತ್ಯಮಲ ಪೊನ್ನಂಬರ ಸುತ್ತಿದಮತ್ತಾ ನೂಪುರ ಝಣತ್ಕಾರದಿ ಮಿಂಚಿಯೆಮ್ಮಚಿತ್ತಶಿಖಿಗೆ ಪೀಯೂಷಸಿಕ್ತ ಮೇಘದಂತೆ ಒಪ್ಪುವ ಶ್ರೀಹರಿಯಹೆತ್ತ ತಾಯಿ ಆಪ್ತ ಬಂಧು ಗೋತ್ರ ಗತಿ ನೀನೆ ನಮ್ಮ ಚಿತ್ತವೆಂದು ನಂಬಿ ತನ್ನ ಹತ್ತಿಲಿ ಸಾರಿದವರಒತ್ತಿ ತಾಂ ರಥವನೇರಿ ಸತ್ವರ ಬರುವೆನೆಂದುಮತ್ತಕ್ರೂರನೊಡನೈದಿದ ಹೇ ಕಿತವಾ 6 ಲಕ್ಷುಮಿರಮಣನವ ಸೂಕ್ಷುಮ ಗೊಲ್ಲತೇರಾವುಕುಕ್ಷಿಯೊಳು ಬೊಮ್ಮಾಂಡವವಗೆ ಮಕ್ಷಿಕಗಳಂತಿಪ್ಪೆವುಮೋಕ್ಷದರಸನು ಅವ ಗೋಕ್ಷೀರದಿ ತೃಪ್ತರಾವುಲಕ್ಷಿಸುವದೆಂತೋ ಎಮ್ಮನು ಶ್ರೀ ಹರಿಯುರಕ್ಷಿಸಲುದಿಸಿ ಜನರಕ್ಷಣೆಗೆ ಪಾಲÉ್ಬಣ್ಣೆಯಭಕ್ಷಿಸಿ ನಿರುತ ನಮ್ಮ ಅಕ್ಷಿಗೆ ಹಬ್ಬವನುಣಿಸಿಈ ಕ್ಷೋಣಿ ಚರಾಚರ ದೀಕ್ಷಿಗೆ ನರರ ಸಾಮ್ಯವಕ್ಷ(ಮ)ಣರಾದೆವೊ ಮೂರ್ಖರೋ ಹೇ ಕಿತವಾ 7 ಸಿರಿ ಮಂದರೋದ್ಧರನಂಘ್ರಿಯಪೊಂದುವ ಭಾಗ್ಯಕ್ಕೆಣೆ ಉಂಟೆ ಶ್ರೀಹರಿಯಅಂದೆಮ್ಮೊಳು ರಾಸಕ್ರೀಡೆಯಿಂದ ಬಂದಪರಾಧವ-ನೊಂದನೆಣಿಸದೆ ಸಲಹೆಂದು ಬಿನ್ನೈಸಿ ಸಾಷ್ಟಾಂಗದಿಂದವಂದಿಪೆವೋ ಭಕ್ತ ಬಂಧುವಿಗೆ ನಮ್ಮ ಹೃದಯ ಮಂದಿರದೊಳೆಂದೆಂದಿರೆಂದು ಹೇ ಕಿತವಾ 8 ಹೆಂಗಳೇರೊಂದಾಗಿ ಅಂತರಂಗದರಸನಾಡಿದಮಂಗಳಚರಿತೆಯನ್ನು ಸಂಗೀತದಿಂ ಪೊಗಳುತ್ತಕಂಗಳಶ್ರುಗಳೆವುತ್ತ ಇಂಗಿತಜ್ಞ ದೇವ-ನಂಗಸಂಗದ ಸುಖವ ನೆನೆದು ಶ್ರೀಹರಿಯಮಂಗಳ ವೇದಸ್ತೇಯಾರಿ ಶೃಂಗಾರ ಕೂರವ ನಮ್ಮಪೊಂಗಣ್ಣನ ಸೀಳ್ದ ನರಸಿಂಗ ವಟು ಭಾರ್ಗವನೆಅಂಗದ ಪಾರ್ಥ ಕಂಬುತುರಂಗಪ ರಂಗವಿಠಲತುಂಗ ಮಹಿಮ ನಮೋ ಎಂಬೆವೋ ಹೇ ಕಿತವಾ 9
--------------
ಶ್ರೀಪಾದರಾಜರು
ಅಧಿಕಾರಿ ಮೋಕ್ಷಾಧಿಕಾರಿ ಬಲುಗುದಿಗೆಯ ಮಾರಿ ಅನಧಿಕಾರಿ ಪ ಮುರುಕು ಮಾಳಿಗೆಯಲಿರೆ ಮರುಗುತಲ-ವರಿಗೆ ಮನೆಯ ಕೊಡುವನವನಧಿಕಾರಿಮರಗಳ ಕಡಿವನು ಮುಂದುಗಾಣದಲೆಮನೆ ಹೊಗಗೊಡದವ ಅನಧಿಕಾರಿ1 ಕೇಳುತ ತತ್ವವ ಆಲೋಚನೆಮಾಡಿ ಅಂತೆಯ ನಡೆವವನಧಿಕಾರಿಖೂಳರೊಳಾಡುತ ಕುಂಚಿತನೆ ಕುರುಡನವನು ಅನಧಿಕಾರಿ 2 ಪಡೆಯನು ಪಾಪವ ಬಿಡನವ ಸತ್ಯವನುಡಿವ ಸುವಾಕ್ಯವನಧಿಕಾರಿಮಡದಿಯ ಮೋಹಕೆ ಮುಂದುಗಾಣದಲಿಹಮುಡುದಾರನೆನಿಪವ ಅನಧಿಕಾರಿ 3 ತಿಳಿದರ ಸೇವೆಗೆ ತೇಯುವ ತನುವನು ತಗಲನು ನಿಂದ್ಯಕೆ ಅಧಿಕಾರಿತಲೆಯನು ಮಣಿಯನು ಮನದಲಿ ಮೋಸವ ಚಿಂತಿಪನವನು ಅನಧಿಕಾರಿ 4 ಚಿತ್ ಬಿಂದು ಉಕ್ಕುತ ಚಿತ್ಸುಖ ಸವಿದು ಚಿದಾನಂದನಾಗುವನಧಿಕಾರಿಎಡಬಲ ನೋಡುತ ಎತ್ತತ್ತ ಒಲೆವುತ ನಿಂತಿಹನವನು ಅನಧಿಕಾರಿ 5
--------------
ಚಿದಾನಂದ ಅವಧೂತರು
ಅಯ್ಯಾಜಗದಯ್ಯಾ ಪ ಅಯ್ಯಾ ಜಗದಯ್ಯಾ ಜೀಯಾನಂದ ನಿಮ್ಮ ಮಹಿಮೆಯ ಅಜ ಭವಾದಿಗಳಿಗೆ ತಾಯಿಯ ಮರೆವ ಶಿಶುವಿನ ಪರಿದಣಿದೆನಾ ಪ್ರೀಯದಲಿ ಸಲಹವು ಅವಗುಣ ನೋಡದೇ 1 ಧರೆಯೊಳಗ ಸಕಲಪತಿತರನ್ನು ಉದ್ಧರಿಸಲ್ಕೆ ಪರಬೊಮ್ಮತಾನೊಂದು ರೂಪನಾಗಿ ಕರುಣದಿಂದಲಿ ಅವತರಿಸಿದನೆಂದೆನ್ನದೆ ನರನೆಂದು ಬಗೆವವನು ಗುರುತಲ್ಪಕಾ2 ಸಾಕಾರ ನಿಮೈಲನಾಗಿ ಕ್ರೀಡಿಸಿದರೆಯು ಏಕ ಮೇವಾದ್ವಿತಿಯು ಶೃತಿಯೆನುತಿರೇ ಕಾಕು ಬುದ್ದಿಯಲಿ ಪರತರ ವಸ್ತು ನಿಮಗೆಂದ ಧಿಕ ಉಂಟೆಂಬುವ ಸುರಾಪಾನಿಯು 3 ಗಗನದಂದಲಿ ಸಕಲಾತೀತನಾಗಿನೀ ಮಿಗಿಲೆನಿಸಿ ಸಂಸಾರ ಸ್ಥಿತಿಯಲಿರಲು ಅಗಣಿತತೆ ಗುಣಬಂದನವ ಕಲ್ಪಿಸುವ ಜಗದೊಳಗ ಬ್ರಹ್ಮತ್ಯಕಾರನವನು 4 ಎನಗ ತಾರಕ ವಸ್ತು ಇದೆಯೆಂದು ನಿಶ್ಚೈಸಿ ತನು ಮನರ್ಪಿಸಿ ನಿಮ್ಮ ಚರಣಾಬ್ಜಕೆ ಘನನಂಬಿ ಶರಣವನು ಪೊಕ್ಕುನೆಲೆಗೊಂಬುದಕೆ ಅನುಮಾನ ವಿಡಿವವನ ಸ್ವರ್ಣಸ್ತೇಯಾ5 ಇಂತು ಪರಿಯಾದಾ ನಾಲ್ವರ ಸಂಗಡದಲಿ ಅ ತ್ಯಂತ ಹರುಷದ ತಾವ ಬಾಳುತಿಹನು ಅಂತಿಜನ ಸಮನಾದ ಸರ್ವದ್ರೋಹಿಯವನು ಸಂತತ ಬುಧ ಜನರು ಯನುತಿರುವರು 6 ಎಂದೆಂದು ಈ ಪಂಚ ಮಹಾಪಾತಕಿಳಗಳ ಮುಖ ತಂದೆ ತೋರಿದಿರೆನ್ನ ನಯನಗಳಿಗೆ ಎಂದು ಬಿಡದೇ ಕಾಯೋ ಮಹಿಪತಿ ಸುತ ಪ್ರಾಣ ಛಂದದಲಿ ಮಂದಮತಿ ತನ ಹರಸಿಯನ್ನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆದಿದೇವ ಕರಣಕಾರಣ ಪ ಸಾರಸ ಚರಣಾ ಆದಿತೇಯ ವರದಾಭಯ | ದಾತಾ ಪ್ರೀತಾ ಮಾರಮಣಾ ಅ.ಪ ವಾಸುದೇವ ಜೀವ ಜೀವ ಪಾವನತರ ಭಾವಾ ಶ್ರೀ ಸಮೇತ ನೀರಜಾತ ಲೋಚನ ಜಗವಿನುತಾ ಭಾಸಮಾನ ತೇಜವದನ ದಾನವ ಕುಲ ಮಥನ ವಾಸವಾದಿ ನರಹರಿ ಮಾಂಗಿರೀಶ ಶೌರೀ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆದಿಯುಗದಿ ಮಹ ಆದಿದೈತೇಯನೊಬ್ಬ ಮೇದಿನಿಯೊಳ್ ಸ್ವರ್ಣಕಶ್ಯಪು ನಾಮದಿ ಸಾಧಿಸಿ ಬಂದವಗೊಬ್ಬ ಸೋದರ ಸ್ವರ್ಣಾಂಬಕನೆನಿಸಿ ಮೇದಿನಿ ಚೋರನಾಗಿ ಹತನಾದನು ಆದಿಶೇಷನೆ ವಿಷ್ಟಕ್ಸೇನ ತಾ- ನಾದ ಪ್ರಹ್ಲಾದ ಪ್ರಾಣಾವೇಶದಿಂದ ಸೋದರ ಜೀವಾಂಶಾಪಾನಾವಿಷ್ಟ ಸ- ಲ್ಹಾದನಾಮಕ ಮಿತ್ರನಾದ ಕ ಹ್ಲಾದ ವ್ಯಾನಾವೇಶದಿಂದ ಮೋದದಿ ಸೋಮಾಂಶೋದಾನಾಯುತ ನು- ಹ್ಲಾದ ನಾಮಕ ಸಂಭೂತನಾದ ಆದರೈವರಾದೈತ್ಯಗೆ ಪುತ್ರರು ಮೇದಿನಿ ಸುರರುದ್ಧಾರಗೋಸುಗ ಆದಿದೈವ ನಾರೇಯಣ ತಾ ನಾದಿಕಾರಣ ವಿಶ್ವಕರ್ತಾ ಮೋದಾನಂದ ಮೂರುತಿ ಸುಗುಣ ಭೋಧಪೊರ್ಣ ಸರ್ವಜ್ಞ ಸ್ವಾತಂತ್ರ ವೇದಪುರುಷಾದಿ ಜಡಾದಿ ಜಗಕೆ ಆಧಾರ ಹರಿ ಎಂಬ ಜ್ಞಾನವ ಭೋದಿಸಿ ಬೊಮ್ಮಮುಖರು ಹರಿ ಪಾದಸೇವಕರೆನುತ ನಿತ್ಯ ವಾದದಿ ವಾದಿಗಳ ಜಯಸಿದರವರ ಪಾದಸೇವಿಸಿ ಕರುಣಾಪಡೆದು ಆದಿ ಗುರು ಜಗನ್ನಾಥವಿಠಲನ್ನ ಆದರದಲಿ ಭಜಿಪೆ ಪರಮ ಸುಖ ರಾಗ :ಕಲ್ಯಾಣಿ ಅಸುರರ ಜನ್ಮದಿ ಪುಟ್ಟಿದ ಇವರಿಗೆ ಶ್ವಸನನ ಆವೇಶ ಸುರರಾವೇಶ ಬಲದಿ ಅಸಮಙÁ್ಞನ ಭಕುತಿ ವಿರಾಗವು ವಸುಧಿಯ ತಳದಿ ದಿನದಿನದಲ್ಲಿ ಪಸರಿಪ ಸೂರ್ಯನ ಪ್ರಭೆಯಂದದಲಿ ಮಿಸುಪದಕಿದೇ ಕಾರಣ ಉಂಟು ಬಿಸಜಾಂಬಕ ಹರಿಪೇಳಿದ ಇವರಿಗೆ ಅಸುರೇಶ ಹಿರಣ್ಯಕಶಿಪುವಿನಲ್ಲಿ ಶಿಶುಭಾವದಿಂದ ಜನಿಸಲು ಪೋಗಿರಿ ಪುಸಿಯಲ್ಲ ಮಚ್ಛಾಪÀ ಅಸುರಭಾವ ಪ್ರಲ್ಹಾದಾದ್ಯ ರಸಮಮಹಿಮರಾಗೀ ಜನಿಸಿರೆಂದು ಉಸುರಿದ ವಾಕ್ಯವು ಪ್ರಮಾಣ ಸಿದ್ಧವೆನ್ನಿ ವ್ಯಸನzಲೈವರು ಹರಿಯನೆ ಮತ್ತೆ ಬೆಸಗೊಂಡರೀಪರಿ ಪರಿಯಾ ಅಸುರನ ಪತ್ನಿಯ ಬಸಿರೊಳು ಪುಟ್ಟುವುದು ವಶವಲ್ಲವೋ ಸ್ವಾಮಿ ಕುಸುಮನಾಭನೆ ನಿನ್ನ ಅಸಮಲೋಕದ ಸುಖ ವಸುಧಿತಳಾದಲ್ಲಿ ಎಸಗದು ಎಸಗದು ಎಂದಿನಕಾಲಕ್ಕೂ ಮುಸುಕುವದಙÁ್ಞನ ದುಃಖದ ಭವದಲ್ಲಿ ಕಸವಿಸಿಗೊಳುತಾ ಙÁ್ಞನವನೀಗಿ ಬಿಸನಿಲಯನೆ ನಿನ್ನ ದರುಶನವಿಲ್ಲದೆ ಅಸುನಿಲ್ಲುವ ಬಗೆ ಯಾವುದು ಪೇಳೋ ಶಶಿಧರವಂದ್ಯ ಗುರುಜಗನ್ನಾಥ ವಿಠಲ ನಮ್ಮ ವ್ಯಸನವನು ಕಳೆದು ಸುಖವನು ಸಲಿಸೋ ರಾಗ - ಕಾಂಭೋದಿ ತಾಳ - ತ್ರಿವಿಡಿ ಭಕುತವಾಕ್ಯವ ಲಾಲಿಸಿ ತಾನಾಗ ಪರಿ ನುಡಿದನು ವಿಕಳ ಪೊಂದದೆ ನೀವು ತ್ವರಿತಾದಿ ಧರೆಯೊಳು ಸಕಲರು ಜನಿಸಲು ಮುಸಕದಙÁ್ಞನ ಲಕುಮಿ ಭೂಮಿಯ ಸಹಿತ ಇರುವೆನು ನಿಮ್ಮೊಳು ನಿತ್ಯ ಪರಿಪರಿ ಮಹಿಮವ ಪ್ರಕಟಮಾಡುವೆ ಮುಖ್ಯಪ್ರಾಣನಿಪ್ಪನು ಸತತ ಕಕುಲಾತಿ ಯಾಕಿನ್ನು ನಡಿರೆಂದು ಹರಿಯೆಂದ ಉಕುತ ವಾಕ್ಯದಲಿಂದ ದಿತಿಜನಲ್ಲಿ ಸುಕೃತಿಗಳೈವರು ಉದಯವೈದಿದರಾಗ ಮುಕುತಿದಾಯಕ ಗುರುಜಗನ್ನಾಥ ವಿಠಲನೆಂಬ ಭಕುತಿ ಪೂರ್ವಕ ಙÁ್ಞನವೃದ್ಧಿಯೈದಿದರು ರಾಗ - ಆರಭಿ ತಾಳ - ಅಟ್ಟ ಪಿರಿಯ ಪ್ರಲ್ಹಾದನ್ನ - ಕರದು ತೊಡೆಯ ಮೇಲೆ ಇರಿಸಿ ಪ್ರೇಮದಿ ನಿಮ್ಮ - ಗುರುವೇನು ಪೇಳ್ಯಾನೆ ಮರಿಯಾದೆ ಎನಮುಂದೆ - ಅರಹು ಎನಲು ಬಾಲ ಕಿರಿನಗೆ ಮುಖದಿಂದ - ಹರಿಯೆ ಸರ್ವೋತ್ತಮ ಹರಬೊಮ್ಮ ಮುಖರೆಲ್ಲ - ಪರಿವಾರಭೂತರು ಅರಿದಿಪ್ಪೆ ಎನ್ನಯ್ಯ ಸರಸಿಜಜಾಂಡಕ್ಕೆ ಅರಸು ತಾನಾಗಿದ್ದು ಇರುವಾದಿ ಚೇತನ ತರುವಾದಿ ಜಡಮಯ ಸರ್ವಸ್ಥಳದಲ್ಲಿ ನಿರುತದಿ ವ್ಯಾಪಿಸಿ ಇರುತಿಹ ಹರಿ ಎಂದು ಅರಿತ ಮಾನವÀÀನಿಗೆ ದೊರೆವೋನು ನಿಶ್ಚಯ ಅರಿತು ಪೇಳಿದ ತನ್ನ ತರಳಾನ ನುಡಿಕೇಳಿ ಭರದಿಂದ ಕಂಬವ ಕರದಿಂದ ಬಡಿಯಾಲು ನರಮೃಗಾಕಾರದಿ ಹೊರಗೆ ಬಂದಾದೈತ್ಯನು ದರವ ಬಗೆದು ಕರುಳಮಾಲೆಯತಾ ಕೊರಳೊಳು ಧರಿಸಿದ ಚರಜನ ಪರಿಪಾಲ ಬಿರುದು ಬೀರಿದ ನಮ್ಮ ಗುರುಜಗನ್ನಾಥವಿಠಲ ಶರಣರ ಮರೆಯನೋ ಧರಿತಳದೊಳಗೆ ರಾಗ :ಇಚ್ಛಾ :ತಾಳ - ಆದಿ ಈ ತೆರ ಪ್ರಹ್ಹಾದ ಹರಿಪಾದವ ಭಜಿಸಿ ಪ್ರೀತಿಯ ಪಡೆದು ಭೂಸುರಗಣಕೆ ಭೂತಳದೊಳಗೆ ಯತಿಗಳ ಕುಲಕೆ ನಾಥನು ವ್ಯಾಸಮುನಿ ಎನಿಸಿ ಮರಳಿ ಖ್ಯಾತ ಶ್ರೀ ರಾಘವೇಂದ್ರನೆಂದೆನಿಸಿ ಪ್ರೀತಿಯಿಂದಲಿ ಭಕ್ತರ ಪೊರೆಯಲು ನೀತಿ ಭಾವದಲಿ ಯತಿಯಾಶ್ರಮ ಪೊಂದಿ ಸೀತಾಪತಿರಾಮ ಯದುನಾಯಕ ಕೃಷ್ಣ ಭೀತಿಹರ ನರಸಿಂಹ ವ್ಯಾಸರ ಭಜಿಸಿ ದೂತರ ಮನೋರಥ ಪೂರ್ತಿಸಿ ಪೊರೆವನು ದಾತಗುರುಜಗನ್ನಾಥ ವಿಠಲನ್ನ ನೀತ ವಿಭೂತಿಯ ಪಡೆದು ನಿರ್ಭೀತನಾಗಿಹನು ಜತೆ ದೂತಜನರ ಮಹಾಪಾತಕ ಹರನೆನ್ನಿ ಪ್ರೀತಗುರುಜಗನ್ನಾಥವಿಠಲನೊಲಿವ ರಾಗ :ಶಂಕರಾಭರಣ :ತಾಳ :ಏಕ
--------------
ಗುರುಜಗನ್ನಾಥದಾಸರು
ಆನಂದಮಯನಾದೆ ನಾನು ದಿವ್ಯ ಜ್ಞಾನಾಮೃತವನುಂಡು ಪೇಳಲಿನ್ನೇನು ಪ ಶರೀರ ಭ್ರಾಂತಿಗಳನೆಲ್ಲ ಕಳೆದು ಕರ್ಮ ದುರಿತ ಸಂಸಾರ ಆಶಾಪಾಶವಳಿದು ನರನೊಳಗೆ ನರನಾಗಿ ಸುಳಿದು ಸರ್ವ ಪರಿಪೂರ್ಣ ಭರಿತ ತಾನೆಂಬುದು ತಿಳಿದು 1 ಗುರುಕಟಾಕ್ಷದ ನೆಲೆ ನೋಡಿ ತಿರುಗಿ ಬರುವ ಹೋಗುವ ಭ್ರಮೆಗಳನೀಡಾಡಿ ಶರಣರ ಸ್ತೋಮದಿ ಕೂಡಿ ಭವ ಶರಧಿಯ ದಾಟಿ ಹಂಸಾತ್ಮಕನೊಳಾಡಿ ಆನಂದ 2 ಗುರುಚರಣಗಳ ಧ್ಯಾನಿಸುತಾ ಒಡನೆ ಎರಕವಾದಂತೆ ಬೇರೂರಿತು ಚಿತ್ತಾ ವರವಿಮಲಾನಂದ ಗುರುದತ್ತಾತ್ತೇಯನ ಕರುಣಾಸಮುದ್ರದೊಳ್ಬೆರೆದು ನಲಿವುತ್ತಾ ಆನಂದ 3
--------------
ಭಟಕಳ ಅಪ್ಪಯ್ಯ
ಈ ಧರೆಯೊಳಗಿಂಥಾ ಸೊಬಗ ಕಾಣೆನೋ ಪ ಕಂತುಪಿತ ತನ್ನ ಕಾಂತೇಯರೊಡಗೂಡಿ | ನಿಂತು ಮಜ್ಜನಗೊಂಡು ಸಂತಸವಾಂತಪರಿಅ.ಪ ನಂದಾವ್ರಜದಿ ಇಂದ್ರನೂ | ಕುಪಿತನಾಗಿ | ಅಂಧವೃಷ್ಟಿಯ ಕರೆಯಲು | ಸಿಂಧೂಶಯನ ಗಿರಿಯ | ಮಂದಹಾಸದಿ ನೆಗಹಿ | ಸುಂದರ ಗೋವ್ಗಳನೆ | ಚೆಂದಾದಿಂದಲೆ ಪೊರೆಯೆ | ಅಂದು ತೋರಿದುಪಕೃತಿಯ ನೆನೆದು ಗೋ | ವೃಂದಗಳೈ | ತಂದಿಂದಿರೆಯರಸಗೆ | ಮಿಂದು ಮಧುರಕ್ಷೀರಧಾರೆಯ ಕರೆಯಲು | ನಂದಕುವರಾನಂದವ ಬೀರಿದ 1 ಕಿರಿಯರೊಡನೆ ಕೂಡುತ | ಗೋಪಾಲನು | ಮುರಲಿನಾದವ ಗೈಯುತ | ಹರಿಣಾಕ್ಷಿಯರಮನೆ | ಹರುಷದಿಂದಲೇ ಪೊಕ್ಕು | ಪರಿಪರಿ ಲೀಲೆಯಿಂ | ಬೆರಗು ಮಾಡುತಲಿರೆ | ವರ ಧದಿಘೃತ ಭಾಂಡಗಳನೊಡೆದು | ಯದುವರನಾಲೈಸುತ ಬರುವರ ಸುಳಿವನು | ಸರಸದಿ ಕಂಡಾಕ್ಷಣದಿಂದೋಡಲು | ಸುರಿದುದು ಶಿರದಲಿ ದಧೀಘೃತಧಾರೆಯು 2 ಕರುಣಾಸಾಗರ ಹರಿಯು | ಮೋಹದಿ ವರ | ಭೈಷ್ಮಿಭಾಮೇರ ಕೂಡುತಾ | ಭರದಿ ಕುಣಿಯಲವರ ಶಿರದಿ ಮುಡಿದ ಸುರಗೀ | ಅರಳುಮಲ್ಲಿಗೆಯೊಳು | ಸೆರೆಬಿದ್ದ ಮಧುಪಗಳ | ನೆರೆದು ಝೇಂಕರಿಸುತ | ಹರುಷದಿ ಸುರಿಸಲು ಸುರ ಸಂದೋಹವು | ಪರಿ 3 ಅಂಗಳದೊಳು ಆಡುತ | ಮಂಗಳಮೂರ್ತಿ | ಸಂಗಡಿಗರ ಸೇರುತಾ | ಮುಂಗುರುಳ್ಗಳ ಮೇಲೆ | ಕೆಂದೂಳಿಯನೇ ಧರಿಸಿ | ಗೋಪಿ ರಂಗನ್ನಪ್ಪಿದಳು ಮುದದೀ || ಅಂಗನೆ ರುಕ್ಮಿಣಿ ಭಂಗಿಯ ನೋಡಲು | ಅಂಗಜ ಪಿತನನು | ಪಿಂಗದೆ ಬೇಡಲು | ಮಂಗಳಾಂಗಿ ಮನದಿಷ್ಟವ ಸಲಿಸಲು | ಸಿಂಗರಗೊಂಡನು | ಸಕ್ಕರೆ ಸುರಿಸುತೆ 4 ಸುರನದೀ ಜನಕ ತಾನೂ | ಕುಂಜವನದಿ | ಸರಸಿಜಾಕ್ಷೇರ ಕೂಡುತ | ಸರಸವಾಡುತಲಿರೇ | ಪರಮ ಸಂತೋಷದಿ | ತರುಲತೆಗಳು ಹರಿಯ ಚರಣ ಸೇವೆಯಗೈಯ್ದು | ಕದಳಿಗಳುದುರಿಸೆ | ಗಳಿತ ಫಲಂಗಳು | ಸರಸಿಜನಾಭನು ಕರುಣಿಸಿ ಭಕುತರ | ಶಿರಿಯಾಳಪುರದೊಳು ಮೆರೆದನು ವಿಭವದಿ 5 ವ್ಯಾಸರಾಜರ ಪೀಠದೀ | ರಂಜಿಪ ಲಕ್ಷ್ಮೀಶತೀರ್ಥರಿಂ ಸೇವಿಪ ಭವ | ಪರಿಪರಿ ನರಳುವ ದಾಸರ ಸಲಹಲಿನ್ನು | ಸಾಸಿರ ಶಂಖದಿ ಪೂಜೆಯಗೊಳುತಿರೆ | ದೇಶದೇಶದ ಜನರಾಲಿಸಿ ಬರುತಿರೆ | ಶ್ರೀಶಕೇಶವ ತನ್ನ ಮಹಿಮೆಯ ತೋರಿದ 6
--------------
ಶ್ರೀಶ ಕೇಶವದಾಸರು
ಈ ಪರಿಯ ಸೊಬಗಾವ ದೇವರಲಿ ನಾ ಕಾಣೆಗೋಪಿದೇವಿಯ ತನಯ ಗೋಪಾಲ ಬಾಲಗಲ್ಲದೆ ಪ ದೊರೆಯ ತನದಲಿ ನೋಡೆ ಧರಣಿ ಜಾತೆಯ ರಮಣಸಿರಿಯ ತನದಲಿ ನೋಡೆ ಶ್ರೀಕಾಂತನುಹಿರಿಯ ತನದಲಿ ನೋಡೆ ಸರಸಿಜೋದ್ಭವನ ಪಿತನುಗುರುವು ತನದಲಿ ನೋಡೆ ಆದಿಗುರುವು 1 ಪಾವನತ್ವದಿ ನೋಡೆ ದೇವಿ ಗಂಗಾಜನಕದೇವತ್ವದಲಿ ನೋಡೆ ದಿವಿಜರೊಡೆಯಲಾವಣ್ಯದಲಿ ನೋಡೆ ಲೋಕ ಮೋಹನ ಪಿತನುಜವ ಧೈರ್ಯದಲಿ ನೋಡೆ ಅಸುರಾಂತಕ2 ಗಗನದಲಿ ಸಂಚರಿಪ ವೈನತೇಯ ವಾಹನಜಗವನು ಪೊತ್ತಿರ್ಪ ಶೇಷ ಶಯನಕಾಗಿನೆಲೆಯಾದಿಕೇಶವರಾಯಗಲ್ಲದೆಮಿಗಿಲು ದೈವಗಳಿಗೀ ಭಾಗ್ಯಮುಂಟೆ 3
--------------
ಕನಕದಾಸ
ಎಲ್ಲಿದ್ದರು ಕಾಯ್ವ ಯದುಕುಲತಿಲಕ| ಭಕ್ತ ರೆಲ್ಲಿದ್ದರು ಕಾಯ್ವ ಯದುಕುಲತಿಲಕ ಪ ಅಡವಿಯೊಳಿರಲು ಅರಣ್ಯದೊಳಿರಲು ಮಡುವಿನೊಳಿರಲು ಮರದ ಮೇಲಿರಲು ಪೊಡವಿಗೀಶ್ವರ ತಾನು ದೃಢಭಕ್ತನಂ ಬಿಡದೆ ರಕ್ಷಿಸುವ ಯೆಂತೆಂಬೊ ಬಿರುದು 1 ತಂದೆಯ ಬಾಧೆಗೆ ಕಂದ ನಿಮ್ಮನು ಕರೆಯೆ ಬಂದು ಕಂಭದಲಿ ನೀ ಕಾಯ್ದೆ ಗೋವಿಂದಾ ಅಂದು ದ್ರೌಪದಿ ಹಾಯೆಂದು ಬದರಲು ಕೇಳಿ ಆ ನಂದದಿಂದಕ್ಷಯವನಿತ್ತ ರಂಗನು ನೀನು 2 ಭರದೆ ಭಗದತ್ತನು ಅಸ್ತ್ರ ಬಿಡಲು ಕೊರಳ ಚಾಚಿದನಾಗ ಕರುಣಾವಾರಿಧಿಯು ವರುಣಗದೆಯನಾಗ ಮರುಳತನದಿ ಬಿಡೆ ಮರಳಿ ಅವನ ಉರುಳಿಸಿತು ಶೃತಾಯುವು 3 ಸಿಂಧುರಾಜನ ಶಿರವ ಅವನ ತಂದೆ ಕೈಯಲಿ ಹಾಕಿ ಬಂದ ಭಾರವನೆಲ್ಲಾ ಕಾಯ್ದೆ ಗೋವಿಂದ ಕರ್ಣ ಅಪ್ರಮೇಯನು ಭೂಮಿ ಕ್ಷಿಪ್ರದಿಂ ಒತ್ತಿದಾ 4 ಅಂದು ಅರ್ಜುನ ತನ್ನ ಕಂದನೊಡನೆ ಕಾದೆ ಹಿಂದಿನ ವೈರದಿಂ ಶಿರವನ್ನು ಹರಿಯೆ ಬಂದು ಮುಕುಂದ ಸಂಧಿಸಿ ಶಿರವನ್ನು ಆ ಇಂದಿರೆ ರಮಣ5 ಉತ್ತರೆ ಗರ್ಭವು ಬತ್ತಿ ಬೀಳಲು ಆಗ ಉತ್ತಮ ಋಷಿಗಳೆಲ್ಲರ ನೋಡಿ ನಿತ್ಯಬ್ರಹ್ಮಚಾರಿಗಳು ಪಾದದೀ ಮೆಟ್ಟಿದರೆ ಬದುಕುವುದೆಂದನು ಕೃಷ್ಣ 6 ಸನತ್ಕುಮಾರರು ಶೌನಕರು ಮೊದಲಾಗಿ ಪರುಶುರಾಮ ಹನುಮಾದಿಗಳು ಬ್ರಹ್ಮಚರ್ಯವು ನಮಗಿಲ್ಲವೆನುತ ಬ್ರಹ್ಮಚರ್ಯಕ್ಕೆ ಆಧಾರ ನೀನೆನ್ನಲು ವಾಮಪಾದದಿ ತುಳಿದೆಬ್ಬಿಸಿದನು ಶಿಶುವ 7 ಸರಸಿರುಹನಯನಾ ಫಣಿರಾಜಶಯನ ಶರಣಾಗತದುರಿತಾಪಹರಣ ದೈತೇಯಸಂಹರಣ ಗೋವರ್ಧನೋದ್ಧರಣ ಪೀತಾಂಬರಾಭರಣ ಕೌಸ್ತುಭಾಭರಣ 8 ಅಶ್ವತಾಮನ ಅಸ್ತ್ರ ವಿಶ್ವವನು ಸುಡುತಿರೆ ವಿಶ್ವನಾಯಕ ಶಮನ ಮಾಡಿ ಕಾಯ್ದು ಅಸಮಸಾಹಸದಿ ಚಕ್ರವ ಪಿಡಿದು ಗರ್ಭದ ಶಿಶುವನ್ನು ಕಾಯ್ದ ಕುಶಲಿ ವೆಂಕಟಕೃಷ್ಣ 9
--------------
ಯದುಗಿರಿಯಮ್ಮ
ಕಂದನಿಗೆ ಕಾಲಿಲ್ಲವಮ್ಮ, ಪುಟ್ಟಿ-ಪ ದಂದಿಂದ ಈ ಅಂಬೆಗಾಲು ಬಿಡದಮ್ಮ ಅ.ಪ ಮಳೆ ಹೊಳೆ ಕತ್ತಲೊಳು ತರಳ ಮಗ ಬೆದರಿದನೊಕಳೆಯುಳ್ಳ ಮುಖಕೀಗ ಗ್ರಹ ಸೋಕಿತೋಎಳೆಯ ಬೆಳದಿಂಗಳೋಳೆತ್ತಣ ದೃಷ್ಟಿ ತಾಕಿತೊಲಲನೆ ಮೀಸಲ ಹಾಲು ಮೆರೆದೆರೆದ ಪರಿಯೊ 1 ಬೆಣ್ಣೆಯನು ಮೆಲ್ಲುತ ಬೆದರಿ ಬಾಯಾರಿದನೊಉಣ್ಣೆ ಪೂತನಿ ಮೊಲೆಯ ವಿಷ ಸೋಂಕಿತೋಅಣ್ಣ ಪಾಪಿಯ ಭಯಕೆ ಅಂಜಿ ಕಾಲಿಟ್ಟನೊಹೆಣ್ಣು ದೈತೇಯರ ಕಾಲಲಿ ಬಂದ ಸರಕೊ 2 ಧುರವಿಜಯ ಶ್ರೀಕೃಷ್ಣರಾಯಗೆ ನಿಮ್ಮಹರದೇರಂದವ ತೋರಬಂದ ಪರಿಯೋಧರೆಗಧಿಕ ವಿದ್ಯನಗರವಳಿತೆಂದು ಉದಯಗಿರಿಯಿಂದ ಬಂದ ಮುದ್ದು ಬಾಲಕೃಷ್ಣಗೆ 3
--------------
ವ್ಯಾಸರಾಯರು
ಕಂಬುಕಂಧರ ಹರಿಯಪ. ಪಾಲಿತ ಕೌಂತೇಯ ಭಾಗವತ ತನಕಾಗಿ ತಾ ದಯವಗೈದ ಭರದಿಂದ ತೋರ್ವ ಭೋಗಿಶಯನ ಸ- ರಾಗಕಪ್ಪನಿಯೋಗಿಸುವರೆ ಮಹಾಗಿರಿಯಿಂದಲಿ ಸಾಗಿ ಬಂದನ1 ಮಂದವಾರದಿ ಮಿಂದು ಮಡಿಗಳನು ಉಟ್ಟು ಕಾಣಿಕೆಯನಿಟ್ಟು ಮಂದರಾಧರ ನೀನೆ ಗತಿಯೆಂದು ಬಂದು ಕೈಮುಗಿದು ನಿಂದು ವಂದಿಸುತ ಬಲ ಬಂದು ಚರಣದ್ವಂದ್ವಸೇವೆಯ ಕುಂದದರ್ಚಿಸಿ ದಂದುಗವ ಬಿಡಿಸೆಂದು ಪೇಳ್ದರೆ ಮಂದಹಾಸಾನಂದವೀವನು2 ಕಾಸುವೀಸದ ಬಡ್ಡಿ ಭಾಷೆಯನು ಬಿಡನು ನಮ್ಮೊಡೆಯನು ದೇಶದೇಶದಿ ಕಷ್ಟ ತರಿಸುವನು ತಾನು ಭಕ್ತರ ಕಾಯುವನು ಸೂಸಿ ಕರುಣಾರಾಸ ರಾಜ್ಯದ ವಾಸವಾಗಿಹ ಒಕ್ಕಲಿಗರೆಂಬೀ ಸುಮನದಿಂ ಕೇಶವನ ಪದವ3 ಸುಖದಿಂ ಬಾಳುವದು ಪರಿಯ ನೀನರಿಯಾ ನಿನ್ನೊಳಗಿಟ್ಟುಕೊಂಡರೆ ಕೆಟ್ಟು ಹೋಗುವಿ ಒಟ್ಟುಗೂಡಿಸಿ ತಟ್ಟನೆಲ್ಲ ಮುಂದಿಟ್ಟುಯಿರೆ ಕೈಗೊಟ್ಟು ಕಾಯುವ4 ಮಾನನಿಧಿ ಭಕ್ತರನು ಮನ್ನಿಸುವ ನಲಿವ ಕರುಣವ ಗೈವ ಭಾನುಕೋಟಿಪ್ರಕಾಶದಿಂದಿರುವ ಮೆರೆವ ಮಹಾನುಭಾವ ಏನನೆಂಬೆನು ಆದಿ ಶ್ರೀಲಕ್ಷ್ಮೀನಾರಾಯಣ ತಾನೆ ಕಾರ್ಕಳ ಸ್ಥಾನ ರಾಜಧಾನಿಯಲಿ ಮೆರೆವನನವರತದಿ ಶ್ರೀನಿವಾಸನ5
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣದೆನ್ನ ಕರಪಿಡಿ ಕಾಯೋ ಪ ಸಿರಿನಾರಾಯಣ ಶರಣೆಂಬೆ ಅ.ಪ ಮೇಲ್ ಮೇಲ್ ಗುಣಗಾನವ ಮಾಡೆ ಬಾಲ್ಯಮೊದಲು ಮುದಿತನ ದೊಳಗುಂ ಸೌ ಶೀಲ್ಯ ಸ್ತುತಿಪೆ ಶುಕನುಡಿಯಂತೆ 1 ದಶರೂಪಗಳಂ ಧರಿಸುತ ಮರೆಸಲು ವಿಶ್ವವ್ಯಾಪಕಗುರು ತರವೇ ಕೃಷ್ಣನಾಮನಾವೆಯೊಳು ಬಹೇ 2 ವೈನತೇಯನನೊಡಗೊಂಡು ಬಹೆ ನಿನ್ನ ಸೆರಗ ಪಿಡಿಯುತ ಬರುವೆ3 ಸುಮನಸ ಪೂಜಿತ ನಮಿಸುವೆ ನಾಂ ಭ್ರಮೆಗಳ ಬಿಡಿಸುತ ಭವಭಯ ಹರ¸ ಕಮಲನಯನ ಹೆಜ್ಜಾಜೀಶ 4
--------------
ಶಾಮಶರ್ಮರು
ಕರ್ಮ ಮಾಳ್ಪ | ಜಾಣ ಬಾರೋ ಪ ಪಂಚ ರೂಪದಿ ಪ್ರಾ | ಪಂಚ ವ್ಯಾಪ್ತ ಬಾರೋ |ಹಂಚಿಕೇಲಿ ದೈತೇಯರ | ವಂಚಕನೆ ಬಾರೋ1 ಕರ್ಮ | ಗೈವಾಪಾನ ಬಾರೊ |ವಾಯುವ ನೀ ನಿರೋಧಿಸೆ | ಕಾಯ್ವರ್ಯಾರೋ 2 ಭಾರ ಹೊರೆವ || ವ್ಯಾನ ಬಾರೋ |ಪ್ರಾಣ ಪಂಚವ್ಯೂಹ ಮುಖ್ಯ | ವ್ಯಾನ ಬಾರೊ 3 ಉದಕ ಅನ್ನಕ್ಕವಕಾ | ಶುದಾನ ಬಾರೊ |ಮುದದಿ ಶ್ವಾಸಮಂತ್ರ ಜಪ | ಜಾಣ ಬಾರೋ 4 ವೈದಿಕ ಲೌಕಿಕ ಶಬ್ದ | ನುಡಿಸೆ ಬಾರೊ |ಊಧ್ರ್ವಗತಿ ದಾತನೆ | ಉದಾನ ಬಾರೋ 5 ಪಾನ ಅನ್ನಗಳ್ಹಂಚೆ ಸ | ಮಾನ ಬಾರೊ |ಧ್ಯಾನ ವಿಂತು ಈವ ಮುಖ್ಯ | ಪ್ರಾಣ ಬಾರೊ 6 ಕರುಣಸಾಗರ ದೇಹ ವೀಣೆ | ಚರಿಸೆ ಬಾರೊ |ಗುರು ಗೋವಿಂದ ವಿಠಲಾಧಿಷ್ಠಿತ | ಗುರುವೆ ಬಾರೋ 7
--------------
ಗುರುಗೋವಿಂದವಿಠಲರು
ಕಷ್ಟ ಕಷ್ಟವೋ ಕೃಷ್ಣ ದೃಷ್ಟಿಯಲಿ ನೋಡದಿರೆ ತುಷ್ಟಿಪಡಿಸಲು ನಿನ್ನ ನಾನೆಷ್ಟರವನಯ್ಯ ಪ ಭ್ರಷ್ಟನಾಗಿಹೆ ನಾ ಅಷ್ಟಾಂಗಯೋಗವ ತಿಳಿಯೆ ಒಂ- ದಿಷ್ಟು ಭಕುತಿಯ ಕೊಟ್ಟು ಕಡೆಹಾಯಿಸಯ್ಯ ಅ.ಪ ಸತ್ಯ ಅಸ್ತೇಯ ಬ್ರಹ್ಮಚರ್ಯ ಅಹಿಂಸಾ ಧೃತಿ ದಯಾ ಕ್ಷಮಾರ್ಜಿತ ಮಿತಭುಕ್ತವು ನಿತ್ಯ ಬಾಹ್ಯಾಂತರ ಶೌಚಾದಿ ದಶಗುಣ ಯುತವಾದಯಮ ಉಪಾಸನೆಗಳಿನಿತಿಲ್ಲವೋ ದೇವಾ 1 ನಿಯಮ ಮೊದಲಿಲ್ಲ ಜಪತಪ ಸಂತೃಪ್ತಿ ನಿಯತ ಸಿದ್ಧಾಂತ ಶ್ರವಣ ಲಜ್ಜಮತಿಯು ಶ್ರೀಯಃಪತಿಯ ಪೂಜನ ಆಸ್ತಿಕ್ಯವ್ರತ ದಾನೋ- ಪಾಯವಿಲ್ಲದೇ ಕಡೆ ಹಾಯ್ವುದೆಂತಯ್ಯ 2 ಘಾಸಿಯಾಗಿಹುದಯ್ಯ ಷಡ್ವಿಧಾಸನಗಳೂ ಸ್ವಸ್ತಿಕ ಭದ್ರಪದ್ಮ ಅರ್ಧಾಂಗಾಸನದಿ ಸಿದ್ಧ ಪರ್ಯಂಕಗಳೆಂಬ ಆಸನದಿ ಕುಳಿತು ನಾ ಧೇನಿಸಲರಿಯೆ ಹರಿಯೇ 3 ಪ್ರಾಣಾಯಾಮವ ಕ್ರಮವು ರೇಚಕ ಪೂರಕವು ದಣಿವಿಲ್ಲದೆ ಕುಂಭಕದ ಕ್ರಮವಿಲ್ಲ ತ್ರಾಣವಿಲ್ಲವೋ ವಾಯುಬಂಧ ಮಾಡಲರಿಯೆ ಪ್ರಾಣಪತಿ ನಿನ್ನ ಕರುಣವಿಲ್ಲದಾತನಕ 4 ವಿಷಯಾಭಿಲಾಷೆಯಿಂದ್ಹರಿದು ಹೋಯಿತು ಮನಸು ವಿಷಮವಾಗಿಹುದಯ್ಯ ಮತ್ಸಾಧನ ಪ್ರತ್ಯಾಹಾರ ಸಾಧನವಿಲ್ಲ ಕೃಷಿಮಾಡಿ ಸ್ಥಿರಮನದಿ ಧೇನಿಸಲು ನಾನರಿಯೆ 5 ಧಾರಣೋಪಾಯದೊಳು ಅಣುಮಾತ್ರ ನಾನರಿಯೆ ನರಕ್ರಿಮಿಯಾಗಿ ನಾ ಧರೆಯೊಳುಳಿದೆ ಅರಿಯೆ ಬಾಹ್ಯಾಂತರದಿ ಭೂತಪಂಚಕವಿರುವ ಪರಿ ತಿಳಿದು ಪ್ರಾಣವಾಯು ಸಡಿಲಬಿಡಲರಿಯೆ 6 ಧ್ಯಾನಿಸಲು ಏಕಾಗ್ರಚಿತ್ತವೇ ಎನಗಿಲ್ಲ ಸಂಸ್ತುತಿಸೆ ಸಂಪ್ರಜ್ಞಾ ಅಸಂಪ್ರಜ್ಞವೆಂಬ ಘನಸಮಾಧಿಯೊಳ್ ಪರಿವಿಲ್ಲದಲೆ ನಿನ್ನ ಕರುಣವೆಂತಾಗುವುದೋ ಶ್ರೀ ವೇಂಕಟೇಶಾ 7 ಶುದ್ಧವಾದ ದ್ವೈತತ್ರಯ ತಿಳಿಯದಲೆ ಮುಗ್ಧನಾಗಿಹೆ ನಾನಪರಿಶುದ್ಧನೊ ಶಬ್ದಗೋಚರ ನಿನ್ನ ಪರಿಶುದ್ಧ ಭಾವದಿಂ ಬುದ್ಧಿಪೂರ್ವಕ ತಿಳಿಯೆ ಬದ್ಧಪಾಮರನಯ್ಯ 8 ಕರಣತ್ರಯದಲಿ ಮಾಳ್ವ ಕ್ರಿಯೆಗಳೆಲ್ಲವು ಸತತ ಹರಿಯೇ ಬಿಂಬಕ್ರಿಯವ ನಾನರಿಯದೇ ಕರುಣಶರಧಿಯೆ ನೀ ಕೃಪೆಮಾಡಿ ಪೊರೆಯದಿರೆ ಉರಗಾದ್ರಿವಾಸವಿಠಲ ನಿನ್ನ್ಹ್ಹೊರತು ಗತಿಯುಂಟೆ 9
--------------
ಉರಗಾದ್ರಿವಾಸವಿಠಲದಾಸರು