ಒಟ್ಟು 120 ಕಡೆಗಳಲ್ಲಿ , 41 ದಾಸರು , 104 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ಮೊರೆಯ ಕೇ¼ಬಾರದೆ ಹೇ ಶ್ರೀನಿವಾಸ ಪ ಎನ್ನ ಮೊರೆಯ ಕೇಳದಿರೆ ಎನ್ನನಿವರು ಬದುÀಕಿಸರು ಇನ್ನು ಮಾಡಲೇನು ಎಂದು ನಿನ್ನ ಪದಕೆ ಸಾರಿದೆನು ಅ.ಪ ಇಬ್ಬರ್ರಮಣ ನಿನ್ನ ಪಾದ ಉಬ್ಬಿಮನದಿ ಭಜಿಪ ಎನಗೆ ಮಬ್ಬುಗವಿದು ತಾವು ಎನ್ನ ಮೊಬ್ಬಿನೊಳಗೆ ಕೆಡವಿದರೊ 1 ಅನ್ಯವಾರ್ತೆಬಿಟ್ಟು ನಾನು ನಿನ್ನ ಗುಣವ ಕೇಳ್ವೆನೆನಲು ನಿನ್ನವಾರ್ತೆಬಿಡಿಸಿ ತಾವು ಅನ್ಯವಾರ್ತೆ ಕೇಳಿಸೋರು 2 ನಿನ್ನ ನಾಮಸ್ತೋತ್ರಗಳು ಮನ್ನದಿಂದ ಪಠಿಪೆನೆನಲು ಎನ್ನ ಮಾತುಸಾಗಗೊಡದೆ ತಮ್ಮ ಮಾತು ಸಾಗಿಸುವರು 3 ನಿನ್ನ ಪಾದಕಮಲಗಂಧವನ್ನು ಗ್ರಹಿಪೆನೆನಲು ಎನಗೆ ಚೆನ್ನಗಂಧ ಬಿಡಿಸಿ ತಾವು ಘನ್ನದುರ್ಗಂಧ ಕೊಡುವರೋ 4 ನಿನ್ನಭಜಕರಂಗಸಂಗವನ್ನು ಮಾಳ್ಪೆನೆನಲು ಅದ ನನ್ನು ಬಿಡಿಸಿ ಪರರಾದವನ್ನು ತೇರ ಕೂಡಿಸೋರು 5 ನಿನ್ನ ಚಕ್ರ ಶಿಲಾಸ್ಪರ್ಶವನ್ನು ಮಾಳ್ಪೆನೆನಲು ಅದ ನನ್ನು ಬಿಡಿಸಿ ನೀಚÀಜನಾರನ್ನು ಸ್ಪರ್ಶಮಾಡಿಸೋರು 6 ನಿನ್ನ ಮನಿಗೆ ಬರುವ ಎನ್ನ ಚೆÉನ್ನವಾಗಿ ಕರೆದು ತಾವು ಅನ್ಯಮನಿಗೆ ವೈದು ಬಹಳ ಬನ್ನಬಡಿಸುವರಯ್ಯಾ 7 ಅನ್ಯಮನಿಗೆ ಪೋಗದಲೆ ಎನ್ನ ಮನೆಯ ಒಳಗೆ ನಾನು ಅನ್ನವಸನ ದಿಂದ ಇರಲು ಅನ್ಯಸದನಕೆಳದು ವೈವ 8 ಕಠಿಣ ಜನರು ಅªರು ಬಹÀಳ ಸಟೆಯುಅಲ್ಲವೆನ್ನ ಮಾತು ಥಟನೆ ಗುರುಜಗನ್ನಾಥವಿಠಲರೇಯ ಲಾಲಿಸೀಗ 9
--------------
ಗುರುಜಗನ್ನಾಥದಾಸರು
ಗಜಮುಖ ಗಣಪನಂಬುಜಪಾದಕ್ಕೆರಗುವೆ ನಿಜವಾದ ವರವ ನಾ ಬೇಡಿಕೊಂಬೆ ಅಜನರಸಿಗೆ ಅತಿ ಭಕ್ತಿಂದೆ ಭಜಿಸುವೆ ತ್ರಿಜಗವಂದಿತನ ಕತೆಯ ಪೇಳ್ವೆನು 1 ಗೋಕುಲದೊಳಗೆಲ್ಲ ಗೋಪಾಂಗನೇರು ಕೂಡಿ ಏಕವಾಗಿ ಮಾತನಾಡಿಕೊಂಡು ತಾವು ಅ- ನೇಕ ಸಂಭ್ರಮದಿಂದ ಆಡಿ ನೀರಾಟವ ಬೇಕಾದೂಟವನುಂಡು ಬರುವೋಣೆಂದು 2 ಘೃತ ಪರಮಾನ್ನವು ಚಕ್ಕುಲಿ ಗಿಲುಗಂಜಿ ಗುಳ್ಳೋರಿಗೆ ಬುಂದ್ಯ ಭಕ್ಷ್ಯ ಮಂಡಿಗೆ ಫೇಣಿ ಬುತ್ತಿ ಚಿತ್ರಾನ್ನ ಹಪ್ಪಳ ಸಂಡಿಗಂಬೋಡುಪ್ಪಿನಕಾಯಿಗಳು 3 ಕೇಸರಿ ಕುಂಕುಮರಿಷಿಣ ಅಚ್ಚಮಲ್ಲಿಗೆ ಶಾವಂತಿಗೆ ಸರವು ದಿವ್ಯ ಕರ್ಪೂರದಡಿಕೆ ಯಾಲಕ್ಕಿ ಎಲೆಯ ಸುಣ್ಣ ಪತ್ರೆ ಲವಂಗ ತಬಕಿಲೆ ತಂದರು 4 ಹೆರಳು ಬಂಗಾರ ರಾಗಟೆ ಗೊಂಡ್ಯ ಕ್ಯಾದಿಗೆ ಅರಳು ಮಲ್ಲಿಗೆ ಸಂಪಿಗೆ ಮುಡಿದು ದಿವ್ಯ ಕೊರಳ ಕಟ್ಟಾಣಿ ಸರಿಗೆ ಚಂದ್ರಹಾರ ಪು- ತ್ಥಳಿ ಪಚ್ಚಪದಕಗಳ್ಹೊಳೆಯುತಲಿ 5 ಕಡಗ ಕಂಕಣ ದ್ವಾರ್ಯ ನಾಗಮುರಿಗೆ ವಂಕಿ ಬಿಡಿಮುತ್ತಿನ ಗೊಂಡ್ಯ ಬಾಜುಬಂದು ದೊಡ್ಡ ವಾಲೆ ಸರಪಳಿ ಮುತ್ತು ಬು- ಗುಡಿ ಚಂದರ ಬಾಳ್ಯ ಹೊಳೆಯುತಲಿ 6 ಮುದ್ದು ಮೋರೆಗೆ ತಕ್ಕ ಮುಕುರ್ಯ ಬುಲಾಕನಿಟ್ಟ ವ- ಜ್ರದ್ಹರಳು ಬಲಮೂಗಿನಲಿ ದಿವ್ಯ ತಿದ್ದಿ ಮುಂಗುರುಳು ಮುತ್ತಿನ ಬೊಟ್ಟು ಕುಂಕುಮ ಪದ್ಮದ್ಹೂವಿನ ಕುಬುಸಗಳ ತೊಟ್ಟು 7 ಹರದಿಯರೆಲ್ಲರು ಪರಮ ಸುಭ್ರಮದಿಂದ ಜರದ ಪೀತಾಂಬರ್ವಜ್ಜರದ ಪಟ್ಟಿನಿಟ್ಟು ಪರಿ ಬಣ್ಣ ಸೀರೆಗಳುಟ್ಟು ಕಾಲ- ಲಿ ರುಳಿ ಕಾಲುಂಗರ ಗೆಜ್ಜೆ ಪೈಜಣವು 8 ಚೆಲ್ವೆಯರೆಲ್ಲರು ಉಲ್ಲಾಸದಿಂದಲಿ ಘುಲ್ಲು ಘಲ್ಲೆಂದು ಹೆಜ್ಜನಿಡುತ ತಾವು ಮಲ್ಲೆ ಮಲ್ಲಿಗೆ ಪುನ್ನಾಗ ಸಂಪಿಗೆ ತೋಟ ಅಲ್ಲಲ್ಲೆ ನಿಂತು ನೋಡುತ ಬಂದರು 9 ಕುಂದ ಮಂದಾರ ಸುಗಂಧಿಕ ದವನವು ಬಂಗಾರದಂಥ ಕ್ಯಾದಿಗೆಯಮಲ ಚೊಕ್ಕ ದುಂಡುಮಲ್ಲಿಗೆ ಪಾರಿಜಾತ ತಾವರೆಮೊಗ್ಗು ಚೆಂದ ಚೆಂದದ ಶಾವಂತಿಗೆ ವನವು 10 ಹತ್ತಿ ಆಲದ ಮರ ಅಡಕೆ ತೆಂಗಿನ ಮರ ಅ- ಶ್ವತ್ಥ ಕಪಿತ್ಥ ಕಿತ್ತಳೆ ಹಲಸು ನೋಡು- ತ್ತತ್ತಿ ದ್ರಾಕ್ಷಿ ನೀರಲ ನಿಂಬೆ ದಾಳಿಂಬ್ರ ಪಕ್ವಾದ ಜಂಬು ಸೀತಾಫಲವು 11 ಎಲೆದೋಟದೊಳಗೆ ಯಾಲಕ್ಕಿಗೊನೆಯು ನೋಡೆ ಕಳಿತ ಮಾವಿನ ಹಣ್ಣು ಕದಳೀ ಫಲ ಬೋರೆ ಶ್ರೀತುಳಸಿ ವನಗಳಲ್ಲೆ ಅರಿಷಿಣಂಜೂರಿ ಔದುಂಬ್ರ ಫಲ 12 ಚಕೋರ ಚಾತಕ ಗಿಳಿ ಚಕ್ರವಾಕ ಪಕ್ಷಿ ಗಿಳಿಹಿಂಡು ಗಂಡೆರಳೆ ಗರುಡ ಹಂಸವು ನೋಡೆ ಹರಿ ಬ್ರಹ್ಮ ತಂದೆ ಮಕ್ಕಳು ಏರೋವಾಹನವು 13 ಕಸ್ತೂರಿಮೃಗ ಪುನುಗಿನ ಬೆಕ್ಕು ಪಾರ್ವಾಳ ಜಕ್ವಕ್ಕಿ ಕೊಳಲ್ಹಕ್ಕಿ ಸಾರಂಗವು ಚಾರಿ ಕುಕ್ಕುಟ ಭೈರುಂಡ ಎಡಖಗ ಬಲಕ್ಕಾಗಿ ಕೊಟ್ಟವು ಶಕುನ ಜಲಕ್ರೀಡೆಗೆ 14 ಕಾಳಿಮರ್ದನ ಕೃಷ್ಣ ಹಾರಿದ ಮಡುವಿದು ಕಾಳಿಂಗನೋಡಿಸಿ ಕಳೆದ ವಿಷ ಕೆಟ್ಟ ನೋಡೆ ಅಮೃತಕೆ ಮಿಗಿಲಾಗಿದೆ ಈ ಜಲ ಏನು ಪುಣ್ಯ ಮಾಡಿದ್ದಳೊ ಯಮುನಾ 15 ನೀಲ ಮಾಣಿಕ್ಯ ಮುತ್ತು ಕೂಡಿಸಿದಂತೆ ತ್ರಿವೇಣಿ ಆ- ದಳು ತಾ ಪ್ರಯಾಗದಲಿ ತ್ರಿವೇಣಿ ಭಾಗೀರಥಿ ಸರಸ್ವತಿ ಕೂಡಿ ಸಂಗಮಳಾಗಿ ಪೋಗೋಳು ಕಾಶಿ ಪಟ್ಟಣಕೆ 16 ಕಮಲಸಖನ ಪುತ್ರಿ ಕಾಮಿತ ಫಲಕೊಟ್ಟು ವರುಣನರ್ಧಾಂಗಿ ನೀ ವರವ ಕೊಡೆ ತಾಯೆ ಯಮಧರ್ಮರಾಯನ ಭಗಿನಿ ನಿಮ್ಮ ಸ್ನಾನ- ಫಲಕೊಟ್ಟು ಪಾಲಿಸೀಗೆಂದೆನುತ 17 ನೋಡುತ ನಗುತ ಮಾತಾಡುತ ನಿಂತರು ಓಡುತಾವೆ ಜಲ ಸೆಳವಿನಿಂದ ಆಹ ಮಾಡುವೋಣ್ಹ್ಯಾಗೆ ಸ್ನಾನವ ನಾವು ಎನುತಲಿ ಜೋಡಿಸಿ ತಮ್ಮ ್ಹಸ್ತ ಮುಗಿದರಾಗ 18 ಉಟ್ಟ ಸೀರೆಗಳನು ಬಿಟ್ಟು ಕುಪ್ಪಸ ಕಟ್ಟಿ ಇಟ್ಟರು ಉಸುಕಿನ ಮಿಟ್ಟಿಯಲ್ಲೇ ತಾವು ಮಿತ್ರೆಯರೆಲ್ಲ ತಮ್ಮ ಸ್ತನಗಳ್ಹಿಡಕೊಂಡು ಥಟ್ಟನೆ ಇಳಿದರು ನದಿಯೊಳಗೆ 19 ವಾರಿಗೆ ಗೆಳೆತೇರು ವರ ಮೋಹನಾಂಗೇರು ಮೋರೆಗೆ ಅರಿಷಿಣ ಕುಂಕುಮ್ಹಚ್ಚಿ ತಮ್ಮ ನೀರಜಾಕ್ಷಿಯರೆಲ್ಲ ನಿರ್ಮಲವಾಗಿದ್ದ ನೀರೊಳು ನಿಂತು ಮೈ ತೊಳೆದರಾಗ 20 ಭಾರಿ ಸೆಳವಿನೊಳು ಬತ್ತಲೋಲ್ಯಾಡುತ ಸಾರಸಮುಖಿಯರು ಸರಸದಿಂದ ಚೆಲ್ಲೆ ದ್ವಾರ್ಯ ಕಂಕಣಕರ ಬೊಗಸೆಲಿಂದ ನೀರು ತುಂಬಿ ಚೆಲ್ಲ್ಯಾಡುತಲಿ 21 ಸರ್ಪನಂಥ ಹೆರಳೊಲಿವುತ ನೀರೊಳು ಮುತ್ತಿನ ಸರಪದಕ್ಹೊಳೆಯುತಲಿ ಬುಕ್ಕ್ಹಿಟ್ಟು ಗಂಧ ಮಲ್ಲಿಗೆ ಪಾರಿಜಾತವು ತೆಪ್ಪದಂದದಲಿ ತೇಲಾಡುತಿರೆ22 ಅಂಬುಜಮುಖಿಯರು ಸಂಭ್ರಮದಿಂದಲಿ
--------------
ಹರಪನಹಳ್ಳಿಭೀಮವ್ವ
ಸಿಂಧು ಶಯನ ಬಾರೆಲೋ - ಮಂದರೋದ್ಧಾರೀಇಂದಿರೆಯರಸ ಮುಕುಂದನೇ ಪ ಮಾಧವ ಹೇ ದಯಾಂಬುಧೆ - ವಂದಿಸುವೆ ತ್ವತ್ಪಾದ ದ್ವಂದ್ವಕೇ ಅ.ಪ. ಹೃದಯ ಮಧ್ಯದಿ ಮಂಟಪಾ - ಬುಧ ಜನ ವಂದ್ಯಸಿದ್ಧವಾಗಿಹುವು - ಮಾಧವಾ |ಸಿದ್ಧ ಸಾಧನ ಪವನ - ಉದಾನಾದಿಗಳೆಲ್ಲಹೆದ್ವಾರಗಳ ಕಾದಿಹರೋ ||ಮಧು ವಿರೋಧಿಯೆ ನಿನ್ನ ಪದ - ಸದ್ವನಜ ಕೀರುತಿ ಸುಧೆಯ ಸವಿಯುವಮುದವ ಕರುಣಿಸು ಶ್ರೀದ ನರಹರಿ - ಹೃದಯ ಸದನಕೆ ವದಗಿ ಬೇಗ 1 ಚಿತ್ತ ಸಿಂಹಾಸನವೂ - ಚಿತ್ತ ಜನಯ್ಯಾಸ್ತೋತ್ರ ರತುನ ಖಚಿತವೂ ||ಉತ್ತಮ ಮತಿ ಸುದತೇರೂ - ಛತ್ರಿ ಚಾಮರಗಳಎತ್ತಿ ಬೀಸುತಲಿಹರೋ ||ಕೃತ್ತಿವಾಸನ ಸಖನೆ ಪರಮ ಸು - ಹೃತ್ತಮೋತ್ತಮ ಚಿತ್ಸುಖ ಪ್ರದಚಿತ್ತವಿಸು ಚಿತ್ತಾಖ್ಯ ಪೀಠಕೆ - ಸತ್ಯಕಾಮ ಶರಣ್ಯ ಶಾಶ್ವತ 2 ಭವ ಪಿತ ತೋಯ ಜಾಕ್ಷನೆ -ದಾಯ ನಿನ್ನದು ಎನ್ನ ಗತಿಗೇ ಪ್ರೇರ್ಯ ಪ್ರೇರಕ ಶ್ರೀಗುರು - ಗೋವಿಂದ ವಿಠಲನೆ ಕಾಯೊ ಬೇಗ 3
--------------
ಗುರುಗೋವಿಂದವಿಠಲರು
* ಎಂಥಾದ್ದೊ ಶ್ರೀ ತಿರುಪತಿ | ಎಂಥಾದ್ದೊ ಪ. ಎಂಥಾದ್ದೊ ತಿರುಪತಿ ಕ್ಷೇತ್ರ | ಸ ತ್ಪಾಂಥರಿಗಿಲ್ಲಿ ಸುಗಾತ್ರ | ಆಹ ಕಂತುಪಿತನು ಇಲ್ಲಿ ನಿಂತು ಭಕ್ತರಿಗೆಲ್ಲ ಸಂತಸಪಡಿಸುವನಂತಾದ್ರಿನಿಲಯ ನಿನ್ನೆಂದಾದ್ದೊ ಅ.ಪ. ನಾಗಾದ್ರಿಗಿರಿಯ ಮೆಟ್ಟುಗಳು | ಅ ಯೊಗ್ಯರಿಗಿದು ದುರ್ಲಭಗಳು | ಅಲ್ಲಿ ಭಾಗವತರ ಸಮ್ಮೇಳಗಳು | ಶಿರ ಬಾಗಿ ವಂದಿಪರು ಜನರುಗಳು | ಆಹ ಪೋಗುತ ಗಾಳಿಗೋಪುರವ ಕಂಡೆರಗಿ ಮುಂ ದ್ಯಾಗುತ ಸಜ್ಜನ ನೀಗುವರು ದುಃಖ1 ಹರಿಮಂದಿರ ಮಹಾದ್ವಾರ | ಬಹು ಜ ನರು ಕೂಡಿಹರು ವಿಸ್ತಾರ | ಬೀದಿ ನಡೆದು ಪದ್ರಕ್ಷಿಣಾಕಾರ | ಭೂ ವರಹನ ಸ್ವಾಮಿ ಕಾಸಾರ | ಆಹ ಹರುಷದಿಂದಶ್ವತ್ಥ ತರುವ ಕಂಡೆರಗಿ ಹರಿ ದರುಶನಕಾಗಿ ಹಾರೈಸುವ ಜನತತಿ 2 ಸ್ವಾಮಿಪುಷ್ಕರಣಿಯ ಸ್ನಾನ | ಮನ ಕಾನಂದಪ್ರದ ಸುಜ್ಞಾನ | ಭಾನು ತಾನುದಿಸುವನು ಮುಂದಿನ | ಸುಖ ಕೇನೆಂಬೆ ಹರಿಯ ದರ್ಶನ | ಆಹ ನೀನೆ ಗತಿಯೆಂದು ನಂಬಿದವರ ಪೊರೆವ ಭಾನುಪ್ರಕಾಶ ಹಣ ಕಾಣೀಕೆ ಕೈಕೊಂಬ 3 ಗರುಡ ಸ್ಥಂಭವನೆ ಕಾಣುತ್ತ | ಬಾಗಿ ಕರಮುಗಿದು ಒಳದ್ವಾರ ಪೊಗುತ | ವಿಮಾನ ಗಿರಿ ಶ್ರೀನಿವಾಸಗೆರಗುತ್ತ | ಬಂದು ವರ ತೊಟ್ಟಿ ತೀರ್ಥ ಕೊಳ್ಳುತ್ತ | ಆಹಾ ತರತರದ ಕಾಣಿಕೆ ಕೊಪ್ಪರಿಗೆಗೆ ಸುರಿಯುತ್ತ ನಿರುತ ನೀ ಸಲಹೆಂದು ಮೊರೆಯಿಡೆ ಭಕ್ತರು 4 ಗರುಡನ ಎದುರೊಳು ನಿಂದು | ಸ್ವಾಮಿ ಗರುವ ರಹಿತ ತಾ ಬಂದು | ಬಂದ ವರಭಕ್ತರನೆ ಕಾಯ್ವ ಬಿರುದು | ಇಂಥ ಹರಿಗೆ ಅಮೃತೋದಕವೆರೆದು | ಆಹಾ ಜರಿಯ ಪೀತಾಂಬರ ಉಡಿಸಿ ಸರ್ವಾಭರಣ ಹರಿಗೆ ಶೃಂಗರಿಸಿಪ್ಪ ಪರಿಯ ವರ್ಣಿಸಲಳವೆ 5 ಶಿರದಲಿ ಪೊಳೆವ ಕಿರೀಟ | ಕ ಸ್ತೂರಿ ತಿಲಕವು ಸುಲಲಾಟ | ಸುರ ನರರ ಪಾಲಿಪ ವಾರೆ ನೋಟ | ಕರ್ಣದಿ ಕುಂಡಲ ಮಾಟ | ಆಹ ವರ ಸಂಪಿಗೆಯ ಪೋಲ್ವ ನಾಸಿಕದ ಕದಪುಗಳ್ ಮೆರೆಯೆ ಕನ್ನಡಿಯಂತೆ ಮುಗುಳು ನಗೆಯ ಚೆಲ್ವ 6 ಸಿರಿವತ್ಸ ಕೌಸ್ತುಭಹಾರ | ಕಂಠ ಕರಶಂಖ ಚಕ್ರವಪಾರ | ಸುರ ನರರಿಗಭಯ ತೋರ್ಪಧೀರ | ಕರ ದ್ವರವ ಕೊಡುವಂಥ ಉದಾರ | ಆಹ ತರತರದ ಪುಷ್ಪಗಳ್ ನವರತ್ನ ತುಳಸಿಯ ಮೆರೆವೊ ಹಾರಗಳನು ಧರಿಸಿರ್ಪ ಗಂಭೀರ 7 ವಕ್ಷಸ್ಥಳದಲ್ಲಿ ಲಕುಮಿ | ಹರಿ ಅವನಿ | ಜಗ ರಕ್ಷಿಪ ಮಮಕುಲಸ್ವಾಮಿ | ಸರ್ವ ಸಾಕ್ಷಿಯಾಗಿದ್ದು ತಾ ಪ್ರೇಮಿ | ಆಹ ಪಕ್ಷಿವಾಹನ ಸುರಾಧ್ಯಕ್ಷ ಖಳ ಶಿಕ್ಷ ಪಕ್ಷವಹಿಸಿ ಸುರರ ರಕ್ಷಿಪ ಸರ್ವದ 8 ನಡುವಿನ ನಾಭಿ ವಡ್ಯಾಣ | ಮೇಲೆ ಕುಂದಣ | ನೆರೆ ಪಿಡಿದುಟ್ಟ ಪೀತಾಂಬ್ರವರ್ಣ | ಕಾ ಲ್ಕಡಗ ರುಳಿಯು ಗೆಜ್ಜೆ ಪೂರ್ಣ | ಆಹ ಮಡದಿಯರುಭಯದಿ ಪರಿಶೋಭಿಸುತಿರೆ ಪಾದ ದೃಢಭಕ್ತರನೆ ಪೊರೆವ 9 ನೋಟಕತಿ ಚಲುವ ಗಂಭೀರ | ಭಕ್ತ ಕೂಟದಿ ಮೆರೆಯುತಪಾರ | ಉತ್ಸ ಸಾರ | ಭೋಕ್ತ ಸಾಟಿರಹಿತ ಬರುವ ಧೀರ | ಆಹ ಕೋಟಿದೇವತೆಗಳ ನೋಟದಿಂ ಪೊರೆಯುವ ದಾಟಿಸುವ ಭವನಾಟಕಧರದೇವ 10 ಮಚ್ಛಾದ್ಯನೇಕ ಅವತಾರ | ಬಹು ಇಚ್ಛೆಯಿಂದಲಿ ಭಜಿಸುವರ | ಕಾಯ್ವ ಮೆಚ್ಚುತ ಮನದಲಿ ನಾರ | ಸಿಂಹ ಸ್ವೇಚ್ಛೆÉ್ಛಯಿಂ ಮೆರೆವ ಜಗತ್ಸಾರ | ಆಹ ತುಚ್ಛಕರು ವಸನ ಬಿಚ್ಚಿ ಸೆಳೆಯುತಿರೆ ಇಚ್ಛೆಯರಿತು ಲಲನೆ ರಕ್ಷಿಸೆನಲು ಪೊರೆದ 11 ಎಲ್ಲೆಲ್ಲಿ ನೋಡಲು ಭಕ್ತ | ಜನ ರಲ್ಲಲ್ಲಿ ನೆರೆಯುತ ಮುಕ್ತಾ | ಧೀಶ ನಲ್ಲದಿನ್ನಿಲ್ಲೆಂದು ಸ್ತುತಿಸುತ್ತ | ಶ್ರೀಶ ಇಲ್ಲೆ ಬಾರೆಂದು ಕರೆಯುತ್ತ | ಆಹ ಸೊಲ್ಲು ಲಾಲಿಸೊ ಎನಲು ಬಲ್ಲಿದ ಭಕ್ತರ ಸೊಲ್ಲಿಗೆ ಒಲಿಯುವ 12 ಬುತ್ತಿ ಪೊಂಗಲು ಮಾರುವರು | ಜನ ರರ್ಥಿಯಿಂದದನು ಕೊಂಬುವರು | ಗೀತ ನೃತ್ಯ ವಾದ್ಯಗಳಿಂ ಕುಣಿಯುವರು | ಅನ್ನ ಅರ್ಥಿಯಿಂ ದಾನ ಮಾಡುವರು | ಆಹ ಎತ್ತ ನೋಡಲು ಮನಕತ್ಯಂತ ಆನಂದ ನಿತ್ಯ ಉತ್ಸವಗಳು ಸತ್ಯಾತ್ಮ ಕೈಗೊಂಬ 13 ಇಂತು ಮೆರೆವೊ ಕ್ಷೇತ್ರ ಘನವು | ನೋಡಿ ನಿಂತು ವರ್ಣಿಸಲಸದಲವು | ಜಗ ದಂತರಾತ್ಮಕನ ವೈಭವವು | ಗುರು ಅಂತರ್ಯಾಮಿ ಶ್ರೀನಿಧಿಯು | ಆಹ ಇಂತು ಬ್ರಹ್ಮೋತ್ಸವ ನಿಂತು ರಥದಿ ಬರುವ ಕಂತುಪಿತ ಶ್ರೀ ಭೂಮಿಕಾಂತೇರ ಒಡಗೂಡಿ14 ಶ್ರೀಪತಿ ಜಲದೊಳಾಡೀದ | ಕೂರ್ಮ ರೂಪದಿಂ ಗಿರಿಯನೆತ್ತಿದ | ಬಹು ಪಾಪಿ ಕನಕಾಕ್ಷನ ಕೊಂದ | ನೃಹರಿ ರೂಪ ವಾಮನ ಭೃಗುಜನಾದ | ಆಹ ಚಾಪಖಂಡನ ಕೃಷ್ಣಚರಿಸಿ ಬತ್ತಲೆ ಕಲ್ಕಿ ಗೋಪಾಲಕೃಷ್ಣವಿಠ್ಠಲನ ಮಹಾಕ್ಷೇತ್ರ15
--------------
ಅಂಬಾಬಾಯಿ
(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು
(ಆ) ಲಕ್ಷ್ಮೀಸ್ತುತಿಗಳು ನಾರಿಮಣಿಯೆ ನಿನ್ನಾಣೆ ನಾಕಾಣೆ ಕರತಂದು ತೊರೆ ಚೆಲ್ವ ರಂಗನಾ ಪ ಕರತಂದು ತೋರೆ ಮಧ್ಯರಂಗನಾ ಅ.ಪ ಪಾರವಾರನೆಂಬ ಧೀರ ಭವದೂರನೊ ಬಾರದ ಮನಸೆನ್ನ ಸೂರೆಗೊಳ್ಳುತಿದೇ 1 ಮೀರಿದ ಹದ್ದಿಗೆ ಹಾರಿಬಂದಾ ಗಿಣಿಯು ದಾರಿಯ ತಪ್ಪಿ ಹಿಂತಿರುಗಿದಂತೆ ಮಾರನಯ್ಯನ ಪಾದತೋರಿ ಪೋಗಿಯು ತಾ ತೇರಮೇಲೇರಿದ ಸಾರುವ ಬಾರೆ 2 ಉರಗೇಂದ್ರಶಯನನೆ ಸರಿಗಾಣೆ ರಮಣಿ ಶ್ರೀ ನರಗೆ ಸಾರಥಿಯಾಗಿ ಮೆರೆವ ಶ್ರೀ ಪರಮಾತ್ಮ ನಿರುತಿಹ ನೀನೋಗಿ ಕರತಾರೆ ಕಾಮಿನೀ3
--------------
ಚನ್ನಪಟ್ಟಣದ ಅಹೋಬಲದಾಸರು
(ಕುಮಟಾದಲ್ಲಿಯ ಶಾಂತೇರಿ ಕಾಮಾಕ್ಷಿ) ಶಾಂತೇರಿ ಕಾಮಾಕ್ಷಿ ತಾಯೇ ಅ- ನಂತಪರಾಧವ ಕ್ಷಮಿಸು ಮಹಮಾಯೇ ಪ. ಸರ್ವಭೂತಹೃದಯಕಮಲ ನಿವಾಸಿನಿ ಶರ್ವರೀಶಭೂಷೆ ಸಲಹು ಜಗದೀಶೆ1 ಮೂಲ ಪ್ರಕೃತಿ ನೀನೆ ಮುನಿದು ನಿಂತರೆನ್ನ ಪಾಲಿಸುವವರ್ಯಾರು ಪರಮ ಪಾವನ್ನೆ2 ನಿನ್ನಾಧೀನವು ನಿಖಿಲ ಬ್ರಹ್ಮಾಂಡವು ಮನ್ನಿಸು ಮಹಾದೇವಿ ಭಕ್ತಸಂಜೀವಿ3 ಗೋವೆಯಿಂದ ಬಂದೆ ಗೋವಿಂದಭಗಿನಿ ಸೇವಕಜನರಿಂದ ಸೇವೆ ಕೈಕೊಂಬೆ4 ಪೃಥ್ವಿಗುತ್ತಮ ಕುಮಟಕ್ಷೇತ್ರನಿವಾಸಿನಿ ಕರ್ತ ಲಕ್ಷ್ಮೀನಾರಾಯಣೀಕಲ್ಯಾಣಿ5
--------------
ತುಪಾಕಿ ವೆಂಕಟರಮಣಾಚಾರ್ಯ
3. ಎಲ್ಲ ಆಳ್ವಾರರು ಆಳ್ವಾರ್ ತಿರುವಡಿಗಳೆ ಶರಣೆನ್ನುತ ಬಾಳ್ವರು ಭಜಿಪುದು ಬಕುತಿಯಲಿ ಪ ಕೇಳ್ವರು ಕಥೆಗಳ ಮಮತೆಯಿಂದಲಿ ಮಾಳ್ವರು ಮನೆ ವೈಕುಂಠದಲಿ ಅ.ಪ ಮೊದಲಿನ ಮೂವರು ಮಾಧವನೆನುತ್ತ ಪದುಮನಾಭನೊಡನಾಡಿದರು ಅದುಭುತ ಮಹಿಮಾ ತಿರುಮೊಳಿಶಯ್ಯರ ಮುದದಿಂ ಶಿವ ಕೊಂಡಾಡಿದನು 1 ಮಧುರಕವಿಗಳು ನಮ್ಮಾಳ್ವಾರರ ಪದಗಳ ಪೂಜಿಸಿ ಹಾಡಿದರು ತದುಪರಿ ತಿರುವಾಯ್ಮೊಳಿಯನು ಅವರಿಂ ದಧಿಕರಿಸುತ ಹಿತವೆಸಗಿದರು 2 ಪೆರಿಯಾಳ್ವಾರರು ಹರಿಯನು ಪಾಡುತ ವರವೇದಕೆ ತಾವ್ ಮೊದಲಿಗರು ಪರಮಪಾವನೆ ಗೋದಾದೇವಿಯು ದೊರೆ ಶ್ರೀರಂಗನ ಕೈವಿಡಿದಳ್ 3 ಪೆರಿಯ ತಿರುಮೊಳಿಯ ತಿರುಮಂಗೈಯ್ಯರು ತಿರುಪ್ಪಾಣ ವಿಪ್ರನಾರಾಯಣ ತಿರುವನಂತಪುರದ ಕುಲಶೇಖರರು ಸಿರಿಯರಸನ ತೇರ ಮಾಡಿದರು 4 ಪರಮಾತ್ಮನ ಸನ್ನಿಧಿಯಿಂದಲ್ಲಿಗೆ ತೆರಳುತ ಮಹಿಮೆಯ ತೋರಿದರು ನಿರುತ ದೇವರೆಡೆ ಪೂಜೆಗೊಂಬರು ವರಜಾಜೀಶನ ಸೇವಕರು 5
--------------
ಶಾಮಶರ್ಮರು
5. ವಿಶಿಷ್ಟ ಗೀತೆಗಳು ಭ್ರಮರಗೀತೆ 92 ಭೃಂಗಾ ನಿನ್ನಟ್ಟಿದನೇ ಶ್ರೀರಂಗ ಮಧುರೆಲಿ ನಿಂದುಅಂಗಜಲುಬ್ಧಕ ಪೂಗೋಲಂಗಳ ತಡೆಯನಿಕ್ಕಿಅಂಗನೇರೆಂಬೋ ಹುಲ್ಲೆ ಮೃಗಂಗಳಿಗೆ ಗುರಿಯೆಚ್ಚುಹಿಂಗಿಸುತೈಧಾನೆ ಅಸುವ ಹೇ ಕಿತವಾ ಪ ನಿನ್ನ ನೋಡೆ ನಮ್ಮ ಅಚ್ಯುತನ್ನ ಕಂಡಂತಾಯಿತಯ್ಯಚನ್ನಿಗರರಸ ಕುಶಲೋನ್ನತಿಯೊಳಹನೇನೋಚಿಣ್ಣತನ ಮೊದಲಾಗವನ್ನ ಕಿತವ ಬಲ್ಲೆವೋಗನ್ನಗಾರ ಚಿತ್ತ ಚೋರನ್ನ ಶ್ರೀ ಹರಿಯಾಮನ್ನಣೆಗೆ ಮೆಚ್ಚಿ ತನುವನ್ನೊಪ್ಪಿಸಿದ ಮುಗುದೆವೆಣ್ಣುಗಳ ವಿರಹಾಬ್ಧಿಯನ್ನೆ ದಾಟಿಸುವೆನೆಂದುತನ್ನ ನೇಹವೆಂಬೋ ನಾವೆಯನ್ನೇರಿಸಿ ಮೋಸದಿನಡುನೀರೊಳು ತೊರೆದ್ಹೋದನೆ ಹೇ ಕಿತವಾ 1 ತಮ್ಮ ನಂದಗೋಪ ಯಶೋದಮ್ಮನ ಕಂಡುಬಾರೆಂದುರಮ್ಮ್ಮೆಯ ರಮಣ ನಿನ್ನನೊಮ್ಮೆ ಕಳುಹಿದನೈಸೆಹಮ್ಮುಗೆಟ್ಟಾರಮ್ಮಣೇರಿಂದುಮ್ಮಳಿಸುವೆವೊ ವೃಥಾನಮ್ಮ ಹಂಬಲಿನ್ನೇನವಗೆ ಶ್ರೀ ಹರಿಗೆಹೊಮ್ಮೇಲಟ್ಟದಲಂಚೆಯಗಮ್ಮನೇರ ಕುಚದ ಕುಂ-ಕುಮ್ಮ ಕಸ್ತೂರಿಯ ಕರದಿಮ್ಮನದಿ ಸಿಲುಕಿದಂಗೆಕಮ್ಮಗೋಲನ ಬಾಣಂಗಳುಮ್ಮಳಿ ನೋಯಿಸುತಿವೆಸುಮ್ಮನೆ ಬಾಹೋದು ಸುಲಭವೆ ಹೇ ಕಿತವಾ2 ಮಧುವೈರಿ ಮೇದಿನಿ ನಿಟ್ಟಿಸಲಾಗಮೃದುವಾಕ್ಯದೊಳೆಮ್ಮಪ್ಪಿ ಅಧರಾಮೃತ ಭೋಜನಕ್ಕೊದಗುವ ಸತತ ಸನ್ನದ್ಧ ನಮ್ಮನಗಲಿ ಕಲ್ಲೆದೆಯಾದನೆಂತೋ ಕೃಪಾಳು ಹೇ ಕಿತವಾ 3 ಮಜ್ಜನ ಸಾಯುಜ್ಯ ಸುಖವತ್ತಲಿಪ್ಪುದೂ ಶ್ರೀ ಹರಿಯಅಬ್ಜಭವ ಮುನಿಜನ ಪೂಜ್ಯನಗಲಿದ ಮ್ಯಾಲೆನಿರ್ಜೀವಿಗಳಾಗಿ ಕಣ್ಣ ಕಜ್ಜಲ ಕಲಕಿಕೊಂಡುಲಜ್ಜೆಗೆಟ್ಟು ತನುಲತೆ ಜರ್ಝರಿತದಿ ಜೀವಿಸೆವಜ್ಜರೆದೆಯಲ್ಲವೆ ನಮ್ಮದು ಹೇ ಕಿತವಾ 4 ಕೌಸ್ತುಭ ವೈಜಯಂತಿ ಮಾಲೆಶ್ರೀ ತುಲಸಿ ಘಮಘಮಿಸುತ್ತಲಿಹ ವನಮಾಲೆರತುನ ಕಂಕಣ ಭುಜಕೀರ್ತಿಯಿಂದೊಪ್ಪುವ ಪುರುಷೋತ್ತಮನ್ನ ಬಣ್ಣಿಪರುಂಟೇ ಹೇ ಕಿತವಾ 5 ಉತ್ಪಲ ಶ್ಯಾಮಲ ಮುದವೆತ್ತ ಬಾವನ್ನವದೀಡಿಅತ್ಯಮಲ ಪೊನ್ನಂಬರ ಸುತ್ತಿದಮತ್ತಾ ನೂಪುರ ಝಣತ್ಕಾರದಿ ಮಿಂಚಿಯೆಮ್ಮಚಿತ್ತಶಿಖಿಗೆ ಪೀಯೂಷಸಿಕ್ತ ಮೇಘದಂತೆ ಒಪ್ಪುವ ಶ್ರೀಹರಿಯಹೆತ್ತ ತಾಯಿ ಆಪ್ತ ಬಂಧು ಗೋತ್ರ ಗತಿ ನೀನೆ ನಮ್ಮ ಚಿತ್ತವೆಂದು ನಂಬಿ ತನ್ನ ಹತ್ತಿಲಿ ಸಾರಿದವರಒತ್ತಿ ತಾಂ ರಥವನೇರಿ ಸತ್ವರ ಬರುವೆನೆಂದುಮತ್ತಕ್ರೂರನೊಡನೈದಿದ ಹೇ ಕಿತವಾ 6 ಲಕ್ಷುಮಿರಮಣನವ ಸೂಕ್ಷುಮ ಗೊಲ್ಲತೇರಾವುಕುಕ್ಷಿಯೊಳು ಬೊಮ್ಮಾಂಡವವಗೆ ಮಕ್ಷಿಕಗಳಂತಿಪ್ಪೆವುಮೋಕ್ಷದರಸನು ಅವ ಗೋಕ್ಷೀರದಿ ತೃಪ್ತರಾವುಲಕ್ಷಿಸುವದೆಂತೋ ಎಮ್ಮನು ಶ್ರೀ ಹರಿಯುರಕ್ಷಿಸಲುದಿಸಿ ಜನರಕ್ಷಣೆಗೆ ಪಾಲÉ್ಬಣ್ಣೆಯಭಕ್ಷಿಸಿ ನಿರುತ ನಮ್ಮ ಅಕ್ಷಿಗೆ ಹಬ್ಬವನುಣಿಸಿಈ ಕ್ಷೋಣಿ ಚರಾಚರ ದೀಕ್ಷಿಗೆ ನರರ ಸಾಮ್ಯವಕ್ಷ(ಮ)ಣರಾದೆವೊ ಮೂರ್ಖರೋ ಹೇ ಕಿತವಾ 7 ಸಿರಿ ಮಂದರೋದ್ಧರನಂಘ್ರಿಯಪೊಂದುವ ಭಾಗ್ಯಕ್ಕೆಣೆ ಉಂಟೆ ಶ್ರೀಹರಿಯಅಂದೆಮ್ಮೊಳು ರಾಸಕ್ರೀಡೆಯಿಂದ ಬಂದಪರಾಧವ-ನೊಂದನೆಣಿಸದೆ ಸಲಹೆಂದು ಬಿನ್ನೈಸಿ ಸಾಷ್ಟಾಂಗದಿಂದವಂದಿಪೆವೋ ಭಕ್ತ ಬಂಧುವಿಗೆ ನಮ್ಮ ಹೃದಯ ಮಂದಿರದೊಳೆಂದೆಂದಿರೆಂದು ಹೇ ಕಿತವಾ 8 ಹೆಂಗಳೇರೊಂದಾಗಿ ಅಂತರಂಗದರಸನಾಡಿದಮಂಗಳಚರಿತೆಯನ್ನು ಸಂಗೀತದಿಂ ಪೊಗಳುತ್ತಕಂಗಳಶ್ರುಗಳೆವುತ್ತ ಇಂಗಿತಜ್ಞ ದೇವ-ನಂಗಸಂಗದ ಸುಖವ ನೆನೆದು ಶ್ರೀಹರಿಯಮಂಗಳ ವೇದಸ್ತೇಯಾರಿ ಶೃಂಗಾರ ಕೂರವ ನಮ್ಮಪೊಂಗಣ್ಣನ ಸೀಳ್ದ ನರಸಿಂಗ ವಟು ಭಾರ್ಗವನೆಅಂಗದ ಪಾರ್ಥ ಕಂಬುತುರಂಗಪ ರಂಗವಿಠಲತುಂಗ ಮಹಿಮ ನಮೋ ಎಂಬೆವೋ ಹೇ ಕಿತವಾ 9
--------------
ಶ್ರೀಪಾದರಾಜರು
6. ತಾತ್ವಿಕ ಪದಗಳು ಇಲ್ಲವಲ್ಲಾ ಏ ಹರಿಯೆ ಪ ಗಂಧಾರದೊಳು ---ಕೊದ ಪಶುವಂತೆ ಹಿಂದೂ ಮುಂದು ತಿರುಗಿ ತಿರುಗಿ ಬಳಲುವದೊಂದೆ ಅ.ಪ ಕೆಲವು ದಿನವು ಮೇಘದೊಳು ಕೂಡಿ ಅಲ್ಲಿ ಜಾರಿಬೀಳುತಾ ಪರಿಪರಿಯಲ್ಲಿ ಇನ್ನೂ ಚಲನೆಯಿಂದ ಮೇಘ ಜಲದಾರಿಗಳಿಂದ ನೆಲದೊಳಗೆ ಹೊಕ್ಕು ನರಳಾಡುತಾ ಒಲಿದು ಔಷಧಿಗಳ ವಶವಾಗಿ ಧಾನ್ಯದೊಳು ಕಲೆತು ಪಚನೆಯಿಂದ ಬಳಲುತ ನೀ ಅಲ್ಲಿ ಪಕ್ವಾನ್ನಗಳಿಂದ ಪುರುಷನುದರ ಸೇರಿ ನಲಿದಾಡುತಲಿ ಹೋಗೆ ಕೆಲವು ಕಾಲಾದಲ್ಲಿ 1 ಸ್ತ್ರೀ ಪುರುಷ ಸಂಯೋಗದಿಂದ ಸ್ತ್ರೀ ಗರ್ಭದಲಿ ವ್ಯಾಪಿಸಿ ಕೊಂಡಿಯ ರೂಪತೋರುತ ನೀ ತಾಪವು ಬಡುತಾಲಿ ತಾಯಿ ಉದರದಲ್ಲಿ ಪರಿ ನವಮಾಸ ಪರಿಯಂತರದಲಿ ಪರಿ ಮಾಡಿದ ಹಿಂದಿನ ದೋಷಗಳಿಂದ ತನ್ನೊಳು ತನು ತಪಿಸುತಲಿ ದೀಪವಿಲ್ಲದೆ ಗುಡಿಯೊಳಗಿನ ದೇವರಂತೆ ಕೂಪದೊಳಗೆ ಬಿದ್ದು ಕಷ್ಟವ ಪಡುತಲಿ 2 ಎಂದೆಂದು ಬಯಲಿಗೆ ಹೊರಡುವೆಯೆನುತಾಲಿ ಸಂದೇಹ ಪಡುತಾಲಿ ಸರ್ವದಲಿ ಸಂಧಿಸಿಕಾಲದಿ ತಂದೆ ತಾಯಿಗಳಿಗೆ ತನಯನಾಗಿ ಹುಟ್ಟಿ ತೋರುತಲಿ ಕಂದನಾಗಿ ಅತಿ ಕಡುಮೋಹ ತೋರುತ ಸಂದುಹೋಯಿತು ಕಾಲಸ----ದಿನವೂ ಮುಂದು ಗಾಣದೆ ಬಾಲಪ್ರಾಯದ ಹಮ್ಮಿಲಿ ಅಂದದಿ ಆಟಪಾಟಗಳಿಂದ -------ದಿನಾ 3 ವಾರಕಾಂತೇರ ಸಂಗವುದ್ಯೋಗ ವ್ಯವ- ಹಾರ ದೈನಂದಿನ ಕೆಲವು ಕಾಲಾಯಿತು ಕ್ರೂರ ಚೋರ ದುಷ್ಟ ವ್ಯಾಪಾರಗಳ ಕೂಡಿ ಮೀರಿ ಗರ್ವದಲಿನ್ನೂ ಮೈಯ ಸ್ಮರಣೆದಪ್ಪಿ ಕಾಲ ಕೆಲವಾಯಿತು ಪಾರಗಾಣದೆ ಪ್ರಪಂಚದೊಳಗೆ ಬಿದ್ದು ಹೊರಟು ಬಿಡುತಾಲಿ ಹೋಯಿತು ಕೆಲವು ಕಾಲ4 ಸತಿಸುತರ ಸಂಪತ್ತು ಅತಿಮೋಹ ವ್ಯಾಸಂಗ ಕಾಲ ಸಂದು ಹೋಯಿತು ಮಂದ ಬುದ್ಧಿಲಿ ವಾರ್ಧಿಕದಿ ಹಿತಗಳು ತಪ್ಪಿ ಮಾನ ಹೀನನಾಗಿ ಗತಿಯು ಕಾಣದೆ ಘೋರ ಕಷ್ಟಕ್ಕೊಳಗಾಗಿ ಮತಿಯಲ್ಲಿ ಹರಿನಾಮ ಮರೆದು ಹೋಗಿ ಪತಿ ಹೆನ್ನೆ ವಿಠ್ಠಲನ ಪ್ರೀತಿಯ ಪಡೆಯದೆ ಅತಿ ಘೋರತಮಸಿ ಗರ್ಹಾನು ಆಗೊ ಕಾಲಾಯಿತು 5
--------------
ಹೆನ್ನೆರಂಗದಾಸರು
ಅಮ್ಮಮ್ಮ ಗೋಪಿಯೆನೆ ಏನೆಂಬೆ ಪರ ಬೊಮ್ಮ ಮಗನೆಂಬೊ ಧೈರ್ಯಕೆ ಪ. ಬೊಮ್ಮನಯ್ಯನ ಸಿರಿರಮ್ಮೆ ಪತಿಯ ಘನ ಪೆರ್ಮೆ ಗುಣಗಣನಿಲಯನ ಅ.ಪ. ಹೊಳೆವ ಶ್ರೀರೂಪು ವಟಪತ್ರದಲ್ಲಿ ಪ್ರಳಯಜಲಧಿಯ ಶಯನನ ಸೆಳೆಮಂಚದ ಮ್ಯಾಲೆ ಮಗ್ಗುಲೊಳಿಟ್ಟು ತನ್ನ ಗೋಪಿ 1 ಚರಾಚರಂಗಳ ಸೃಷ್ಟಿ ಸ್ವಯಿಚ್ಛೆಯಿಂದ ಪುರುಷರೂಪವ ಧರಿಸಿದ ಪರಮಮಂಗಳ ಮೂರುತಿಯ ತನ್ನ ಗೋಪಿ 2 ಕತ್ತಲೆಯನು ನುಂಗಿ ತತ್ವಂಗಳನು ಕೊಂಡು ಮತ್ತೆ ಬೊಮ್ಮಾಂಡದೊಳಗೆ ಪೊಕ್ಕು ತತ್ವಸಾರದಿಂದೊಪ್ಪುವ ಕೊಮರನ ಗೋಪಿ 3 ಅದಭ್ರಸೃಷ್ಟಿಗಳಿಗಗೋಚರನಾದ ಆದಿಮೂರುತಿ ¸ಚ್ಚಿದಾನಂದನ ಸದಾ ತನಯನೆಂದೆತ್ತಿ ಮುದ್ದಿಸಿ ಸುಖ ಗೋಪಿ 4 ಚತುರುಭುಜ ಶಂಖ ಚಕ್ರ ಗದೆ ಪದುಮ ಸುತಪ ಪ್ರಶ್ನೆಗೆ ವರವಿತ್ತ ಶ್ರುತಿಶಿರೋಮಣಿಯೆಂದರಿಯದೆ ತಾ ಗೋಪಿ 5 ಬೊಮ್ಮಕಲುಷಾನಂತ ಸಹಸ್ರಗಳ ನಿಮಿಷಮಾತ್ರದಿ ಪಡೆದನ ಬೊಮ್ಮಾಂಡವೆ ತನ್ನ ರೋಮಕೂಪದಲ್ಲಿಪ್ಪ್ಪ ರನ್ನವೆ ಮಗನೆಂದಳೆ ಗೋಪಿ6 ಅನ್ನಂತ ರವಿತೇಜಕಿರೀಟದ ಅನ್ನಘ್ರ್ಯ ಸರ್ವಾಭರಣ ಪೊನ್ನ ವಸ್ತ್ರವನ್ನುಟ್ಟ ಅದ್ಭ್ಬುತ ಬಾಲಕನ ಗೋಪಿ 7 ಅನ್ನಂತಾನಂತ ಜೀವಗಣಗಳು ಅನ್ನಂತಾನಂತ ಕರ್ಮಗಳು ಅನ್ನಂತಾನಂತ ಗಾಯತ್ರಿಗೆ ಕÀರ್ತೃ ವಿಷ್ಣು ಗೋಪಿ 8 ಅನ್ನಂತಾಸನ ಶ್ವೇತದ್ವೀಪ ವೈಕುಂಠ ದನ್ನವರತ ವಾಸವಾಗಿಪ್ಪನ ಅನ್ನಿಮಿಷರ ಯೋಚನೆಗೆ ಒಲಿದನ ಗೋಪಿ 9 ಧರ್ಮದÀ ವೃದ್ಧಿಗೆ ಧರ್ಮದ ಹಾನಿಗೆ ತನ್ನಿಚ್ಛೆಯಲವತರಿಸಿದ ಮಮ ಪ್ರಾಣಾಹಿ ಪಾಂಡವನೆನಿಸಿದ ಗೋಪಿ 10 ಉದ್ದಾಮ ಕಾಂಚೀದಾಮ ಕಂಕಣ ಶ್ರೀ- ಮುದ್ರೆಯ ಶ್ರೀವತ್ಸಕೌಸ್ತುಭಧರನ ಮಧ್ವಮುನಿಗೆ ತಾನೊಲಿದು ಬಂದನ ಗೋಪಿ 11 ಸರಸಿಜಬೊಮ್ಮಾಂಡ ಒಡೆದಾಗ ವಿರಿಂಚಿ ತೊಳೆದ ಪಾದೋದಕವ ಹರ ಸೇವಿಸಲಾಗ ಶಿವನ ಮಾಡಿದ ಹರಿಯ ಮಗನೆಂದಳೆ [ಗೋಪಿ] 12 ದೇವಕಿ ಉದರದಲ್ಲಿದ್ದಾಗ ಬ್ರಹ್ಮಾದಿ ದೇವರಿಂದಲ್ಲಿ ಕೀರ್ತಿಸಿಕೊಂಡು ಭಾವಕಿ ದೇವಕಿ ವಸುದೇವನಲ್ಲಿ ಪಿತೃ ಗೋಪಿ 13 ಶಿಶುರೂಪವ ತೋರಿದ ಬೊಮ್ಮನ ಕಂಡು ವಸುದೇವಗೆ ನದಿ ಎಡೆ ಬಿಡೆ ಸಾಸಿರನಾಮ ಚಿತ್ರವಾಗಿದ್ದ ಜಗ- ಗೋಪಿ 14 ಪಾಲಗಡಲಲ್ಲಿ ಪವಡಿಸಿಪ್ಪನ ಕಾಲಮೇಲೆ ಮಲಗಿಸಿಕೊಂಡು ನೀಲಮೇಘಶ್ಯಾಮಯೆಂದು ಬಣ್ಣಿಸುತಲಿ ಗೋಪಿ 15 ಆದಿದೇವನು ಬ್ರಹ್ಮಸೂತ್ರವ ಕಲ್ಪಿಸಿ ವೇದ ವಿಭಾಗವ ಮಾಡಿದನ ಆದರದಿಂತುಂತೆಂದು ಕಲಿಸಿ ಸಂ ಗೋಪಿ 16 ಭಾನುಶತಕೋಟಿತೇಜಪ್ರಕಾಶನ್ನ ಆನಂದವನೆ ನೋಡಿ ಮನ ಉಬ್ಬಿ ಆನಂದನಿಧಿಯ ತೊಡೆಯ ಮ್ಯಾಲೆಯಿಟ್ಟು ಗೋಪಿ 17 ಶೃಂಗಾರನಿಧಿಯನ್ನು ಬಾಯೆಂದು ಕರೆದು ರ- ಥಾಂಗಪಾಣಿಯನೆ ಎತ್ತಿಕೊಂಡು ತಿಂಗಳನೋಡಯ್ಯ ಕಂದ ಎಂದಾತನ ಗೋಪಿ 18 ಸನ್ನಕಾದಿಗಳಯ್ಯನ ಪಿತನ ಕರೆ ದೆನ್ನ ಮಾಣಿಕವೆಯೆಂದಪ್ಪಿಕೊಂಡು ಹೊನ್ನ ತಾ ಗುಬ್ಬಿಯೆಂದಾಡು ಎನ್ನಯ್ಯನೆ ಗೋಪಿ 19 ಗಂಭೀರವಾರಿಧಿಗೆ ಅಂಬಾ ಹೂಡಿದ ತೋಳು ಇಂದಿರೆಯನೆ ಅಪ್ಪಿದ ತೋಳು ಶಂಭರಾರಿಯ ಪಿತ ತೋಳನ್ನಾಡೈ ಎಂದು ಗೋಪಿ 20 ಪಾದ ಉ- ದ್ದಂಡ ಬಲಿಯಮೆಟ್ಟಿದ ಪಾದ ಪುಂಡರೀಕಾಯತವಾದ ಪಾದದಿ ಪ್ರ- ಗೋಪಿ 21 ನಿತ್ಯತೃಪ್ತನು ಹಸ್ತ (ಸಿದ?) ನೆಂದೆನುತಲೆ ಇತ್ತ ಬಾ ಹೊರೀಯೆಂದಾದರಿಸಿ ಹೊತ್ತಾರಿಂದಮ್ಮೆ ಉಣ್ಣದಿರಲು ಹೊಟ್ಟೆ ಗೋಪಿ 22 ಅಮ್ಮೆ ಉಂಬುವ ಪುಟ್ಟ ಬಾಯ ಮುದ್ದಿನ ಮಾ ರಮ್ಮೆಯನರಸುವನಚ್ಚರಿಯ ಅಮ್ಮೆ ನೋಡಿ ನಗುವ ಮುದ್ದು ಬಾಲಕನ ಪರ ಗೋಪಿ 23 ತಾಯ ಮೊಗವ ನೋಡುತ್ತಾಕಳಿಸುತ ಬಾಯಲ್ಲೀರೇಳುಲೋಕವ ತೋರೆ ಆಯತೆ ನೋಡಿ ಮರಳಿ ಕಂಗೆಟ್ಟು ವಿಶ್ವ- ಗೋಪಿ 24 ಜ್ಞಾನಘನನ ವಿಶ್ವತೋನಯನನ ಆನಂದಚರಿತ್ರನ ಅವ್ಯಕ್ತನ ಜ್ಞಾನಿಗಳ ಹೃತ್ಕಮಲದೊಳಿಹನ ಕಣ್ಣಮುಚ್ಚಿ ಗೋಪಿ 25 ಹಾಲ ಹರವಿಯ ಒಡೆದು ಬಂದು ಗೋ- ಪಾಲ ನೀನೆಲ್ಲಿಗೆ ಪೋದೆಯೆಂದು ಕಾಲಕರ್ಮಂಗಳಿಗೆ ಕಾರಣವಾದೋನ ಗೋಪಿ 26 ಜಗದುದರ ಜಂಘಿಸುತ ಅಡಿಯಿಡೆ ಮೃಗಲೋಚನೆ ಮೈಮರೆದಿರೆ ಅಗಣಿತಮಹಿಮನು ಚರಿಸುತ ಬರ ಗೋಪಿ 27 ಆಮ್ಮಹಾ ಮತ್ತಿಯ ಮರನ ಮುರಿದು ಸುರರು ಜಯವೆನ್ನೆ ಶ್ರೀಮಣಿ ಶಿವರಿಂದ ಕೀರ್ತಿಸಿಕೊಂಬ ಗೋಪಿ 28 ಕತ್ತಲೆಯೊಳಗಿದ್ದು ಅಂಜಿದ ಮಗನೆಂದು ಶ್ರುತಿಮಂತ್ರಗಳಿಂದುಚ್ಚರಿಸಿ ಮೃತ್ಯುಂಜಯನ ಪಿರಿಯನೆತ್ತಿಕೊಂಡು ಗೋಪಿ 29 ಶೇಷಶಾಯಿಯ ಹಾಸಿ ಮಲಗಿಸಿ ಚಾರು- ವೇಷನ್ನ ನಿದ್ರಿಗೈಸುವೆನೆಂದು ಸಾಸಿರಮುಖಭೂಷಣನ ಪಾಡುತ್ತ ಸಂ- ತೋಷದಿ ಮೈಮರೆದಳೆ ಗೋಪಿ30 ತ್ರಿಗುಣಾತೀತನ್ನ ಪೊಂದೊಟ್ಟಿಲೊಳ್ಮಲಗಿಸಿ ಜೋಗುಳ ಪಾಡುವ ಯಶೋದೆÉಯ ಎಸೆವ ನೀಲವಸ್ತ್ರನು ಪಾಡೆನ್ನೆ ಕೃಷ್ಣ ಅನು- ಗೋಪಿ 31 ಹರಿಯ ಹೊರಿಸುವಳಲ್ಯಲ್ಲಿ ನಿಮ್ಮಣ್ಣ ವರ ಸಿಂಹಾಸನವಾಗಿಪ್ಪನೆಂದು ಸಿರಿಯಕೂಡೇಕಾಂತದಲಿಪ್ಪನ್ನ ಗೋಪಿ 32 ಪಾದ ನಿಮ್ಮಣ್ಣನ ಶಿರದಲೊಪ್ಪಿದೆÀಯೆಲೆ ಕಂದ ಸುರವರರ ಭಾಗ್ಯನಿಧಿಯೆ ಬಲರಾಮ ಗೋಪಿ 33 ಕಣ್ಣಮುಚ್ಚಿದ ಕೃಷ್ಣನೆಂದು ತೊಟ್ಟಿಲ ಬಿಟ್ಟು ಪುಣ್ಯಾಂಗನೆ ಮೈಮರೆದಿರೆ ಅಣ್ಣ ಆಶನು ಬೆಣ್ಣೆಯ ಕಳಹೋದ ಚಿಣ್ಣನ ಕಾಣೆನೆಂದಳೆ ಗೋಪಿ34 ನೀಲಾಂಬರನ ಬೆನ್ನ ಮೆಟ್ಟಿ ನೆಲವಿನ ಮ್ಯಾಲಿನ ಬೆಣ್ಣೆಯ ಮೆಲ್ಲೆ ಕೃಷ್ಣ ಬಾಲಕಿಯರು ಕೂಡಿ ಕಳ್ಳ ಸಿಕ್ಕಿದನೆಂದು ಗೋಪಿ 35 ಹುಟ್ಟ್ಟದ ಬೆಳೆಯದ ಹಸುಳೆ ಅಣ್ಣನ ಬೆನ್ನ ಮೆಟ್ಟಿ ನೆಲವು ಜಗ್ಗಿದನೆಂದು ರಟ್ಟು ಮಾಡಿದಿರೆಲ್ಲ ನೋಡಿರವ್ವಾ ಎನ್ನ ಗೋಪಿ 36 ಕಂದನ ಎತ್ತಿಕೊಂಡು ರಾಜ್ಯದಂಗನೆಯರ ಮಂದಿರವನೆ ಪೊಕ್ಕು ಬರುತಿರೆ ಒಂದೊಂದು ಕೌತುಕವನೆ ಕಂಡಾನಂದ ಗೋಪಿ 37 ಶಶಿಮುಖಿಯಂಗಳದ ಹಾಲಹಳ್ಳ ಮೊಸರ ಮಡುವು ಬಾಗಿಲ ಮುಂದೆ ಪ್ರಸಾದವೆಲ್ಲ ಬೆಣ್ಣೆ ಫಲಿತವಾಗಿರೆ ಗೋಪಿ 38 ವಾರಿಧಿಯೊಳಗಿದ್ದ ಪನ್ನಗಶಾಯಿಯ ತೇರ ಮೇಲೆ ಇದ್ದ ಬಾಲಕನ ಮೂರುತಿ ಒಂದೆಂಬೋ ಅ- ಗೋಪಿ 39 ದ್ರೌಪದಿಗಕ್ಷಯವಿತ್ತನ ಗುರು ಸಾಂ- ದೀಪಗೆ ಸುತನ ತಂದಿತ್ತನ ಪ್ರೀತಿಯಿಂದಲಿ ಯಜ್ಞಪತ್ಯರಿಗೊಲಿದ ಸುಪ್ರ- ಗೋಪಿ 40 ಘಾತಪುತ್ರರ ಆರು ಮಂದಿಯ ತರಹೇಳಿ ಮಾತೆಯೆಚ್ಚರಿಸೆ ಅಂಗೀಕರಿಸಿ ಅತಿ ಬೇಗದಿಂದಣ್ಣನ ತಂದು ತೋರಿದ ಅ- ಗೋಪಿ 41 ಭಕುತ ಶ್ರುತದೇವ ಬಹುಳಾಶ್ವರಾಯಗೊಲಿ ದೇಕ ಕಾಲದಿ ರೂಪೆರಡಾಗಿ ಆ ಕರುಣಾಬ್ಧಿಯ ಮಾಯಾರೂಪಿÀನ ಪರಿ- ಗೋಪಿ 42 ಪೂತನಿ ಶಕಟವತ್ಸಾಸುರ ವೃಷಭÀನ ಪಾತಕಿ ಚಾಣೂರ ಕುಂಜರನ ಘಾತಿಸಿ ಕಂಸನ್ನ ರಂಟೆಯಾಡಿದ ಬಲು ಭೂತನ್ನ ಮಗನೆಂದಳೆ ಗೋಪಿ43 ಬಾಲತನದಲ್ಲಿ ಸಖನಾಗಿ ಬಂದು ಕು- ಚೇಲ ತಂದವಲಕ್ಕಿಯ ಧರಿಸಿ ಮೇಲುತನದಿಂದ ಸೌಭಾಗ್ಯವಿತ್ತ ಶ್ರೀ ಲೋಲನ್ನ ಮಗನೆಂದಳೆ ಗೋಪಿ&ಟಿbsಠಿ
--------------
ವಾದಿರಾಜ
ಅಲ್ಪದೇಹವು ಹುಟ್ಟಿ ಮಾಯ ಕಲ್ಪನೆಗೊಳಗಾಗಿ ಸ್ವಲ್ಪವನ (ಸ್ವಲ್ಪವು) ಶ್ರೀಹರಿ ನಾಮಸ್ಮರಿಸಿ ಸದ್ಗತಿ ಕಾಣುವ ಸಾಧನೆ ಇಲ್ಲದ್ಹೋಯಿತು ಪ ಜನುಮ ಜನುಮದಲಿ ಸಂಸಾರ ಜಲಧಿಯೊಳಗೆ ಮುಳುಗಿ ಘನ ಪುರುಷನ ಮಹಿಮೆ ಕಾಣದೆ ಗಾಢಾಂಧ ಕಾರದಲಿ ದಿನಗಳ ಕಳೆದು ದೇವರ ಭಜಿಸದೆ ಜನುಮಗಳಳಿದೂ ಚರಿಸುವದಾಯಿತು 1 ಭ್ರಾಂತಿಯ ಘನವಾಗಿ ಪ್ರಪಂಚ ಬದ್ಧನಾಗಿ ಕಾಂತೇರ ಮೋಹಕ್ಕೆ ಸಿಲುಕಿ ಕಾಲವುಕಳೆದಿನ್ನು ಚಿಂತನೆ ಮಾಡದೆ ಮುಕ್ತಿ ಸೇರದಂತಾಯಿತು 2 ಪನ್ನಗಶಯನನ್ನಾ ಪರಿಪರಿ ಭಕುತಿಲಿ ಮನದಿಂದ ವರ್ಣಿಸಿ ಜಿವ್ಹದಲಿ ಹರಿಪದವನ್ನೇ ಕಾಣದಲೆ ಇನ್ನು ಶ್ರೀ ವ್ಯರ್ಥವು ಹೋಯಿತು 3
--------------
ಹೆನ್ನೆರಂಗದಾಸರು
ಆರು ಬಂದರು ಸಖಿ ತೇರಿನ ಬೀದಿಲೆಮಾರಜನಕನ ಸಾರುತ ಹೊಗಳುವರಾರೆ ಕರಿಪುರದಲಿ ಬಂದವರಾರೆ ಪ. ದುಷ್ಟ ದೈತ್ಯರ ಶಿರವ ಕುಟ್ಟಿ ತಮಸ್ಸಿಗೆ ಹಾಕಿಅಟ್ಟಹಾಸದಿಂದ ಭೇರಿ ಘಟ್ಯಾಗಿ ಹೊಯಿಸುವರಾರೆ1 ಕ್ರೂರ ದೈತ್ಯರ ಶಿರವ ಸೇರಿಸಿ ತಮಸ್ಸಿಗೆ ಭೋರೆಂಬೊ ತುತ್ತೂರಿ ಕಾಳಿ ಹಿಡಿಸುವರಾರೆ 2 ವೆಂಕಟನ ದ್ವೇಷಿಗೆ ಸಂಕಟ ಬಿಡದೆಂದುಡಂಕರದಿಂದಲೆ ಡಂಕಿಯ ಹೊಯಿಸುವರಾರೆ 3 ಖೂಳ ದೈತ್ಯರ ಶಿರವ ಸೀಳಿ ತಮಸಿಗೆ ಹಾಕಿಭಾಳಾ ರೌಸದಿಂದ ಕಾಳಿಯ ಹಿಡಿಸುವರಾರೆ4 ಭಾಗವತರ ಸುಖ ಹೀಗೆ ಉನ್ನತ ಎಂದು ಈಗ ತೋರುತ ಭರದಿ ನಾಗಸ್ವರ ಹಿಡಿಸುವರಾರೆ5 ಅಂಬುಜನಾಭನ ನಂಬಲು ಸುಖವಿತ್ತು ಬಂಬಂಬೆನುತ ಶಂಖವ ಸಂಭ್ರಮದಿ ಹಿಡಿಸುವರಾರೆ 6 ನಿರ್ಜರ ಹಂಸನೀ ಹೌದೆಂದು ಸಂಶಯ ಬಿಡಿಸುತ ಕಂಸಾಳೆ ಹೊಯ್ಸುವರಾರೆ7 ಎಷ್ಟೆಷ್ಟು ಕಾಲಕ್ಕೂ ಕೃಷ್ಣಗೆ ದೊರೆ ಎಂದುಶ್ರೇಷ್ಠಾದ ಜಾಂಗುಟಿ ಫಟ್ಯಾಗಿ ಹೊಯಿಸುವರಾರೆ8 ಕಬ್ಬು ಬಿಲ್ಲಿನಯ ಒಬ್ಬ ಜಗದೀಶನೆಂದುಅಬ್ಬರದಿ ಕರಣೆ ನಿರ್ಭಯದಿ ಹಿಡಿಸುವರಾರೆ9 ಮಿತಿಯಿಲ್ಲದೆ ಶೃತಿ ಸಾರುವ ಮಧ್ವಮvವೆÉ ಅಧಿಕವೆಂದು ಶೃತಿಯನೆÉ ಹಿಡಿಸುವರಾರೆ 10 ತಂದೆ ರಾಮೇಶನ ಹೊಂದಲು ಸುಖವೆಂದು ಸುಂದರ ಕೊಳಲನೆ ಮುಂದೆ ಊದಿಸುವರಾರೆ 11
--------------
ಗಲಗಲಿಅವ್ವನವರು
ಆವ ಕುಲವೊ ರಂಗ ಅರಿಯಬಾರದು ಪ. ಆವ ಕುಲವೆಂದರಿಯಬಾರದು ಗೋವುಕಾವ ಗೊಲ್ಲನಂತೆಪಾರಿಜಾತದ ವೃಕ್ಷÀವ ಸತ್ಯಭಾಮೆಗೆ ತಂದಿತ್ತನಂತೆ ಅ.ಪ. ಗೋಕುಲದಲ್ಲಿ ಪುಟ್ಟಿದನಂತೆ ಗೋವಳರೊಡನೆ ಆಡಿದನಂತೆತಾ ಕೊಳಲನೂದಿ ಮೃಗಪಕ್ಷ್ಷಿಗಳ ಮರುಳುಮಾಡಿದ ದೇವನಂತೆ 1 ಕಾಲಲ್ಲಿ ಶಕಟನ ಒದ್ದನಂತೆ ಗೂಳಿಯ ಕೊಂಬ ಕಿತ್ತನಂತೆಕಾಳಿಂಗನ ಹೆಡೆಯ ತುಳಿದು ಬಾಲೇರಿಗೊಲಿದ ದೇವನಂತೆ2 ಗೊಲ್ಲತೇರ ಮನೆಗಳಲ್ಲಿ ಕಳ್ಳತನವ ಮಾಡಿದನಂತೆಮೆಲ್ಲನೆ ಪೂತನಿ ಅಸುವ ಹೀರಿ ಬಲ್ಲಿದ ಕಂಸನ ಕೊಂದನಂತೆ 3 ಸರ್ಪ ತನ್ನ ಹಾಸಿಗೆಯಂತೆ ಪಕ್ಷಿ ತನ್ನ ವಾಹನವಂತೆÀರ್ಪಭೂಷಣ ಮೊಮ್ಮಗನಂತೆ ಮುದ್ದುಮುಖದ ದೇವನಂತೆ4 ತರಳತನದಿ ಒರಳನೆಳೆದು ಮರನ ಕೆಡಹಿ ಮತ್ತವರ ಸಲಹಿದುರುಳ ರಕ್ಕಸರನು ಕೊಂದ ಚೆಲುವ ಹಯವದನನಂತೆ 5
--------------
ವಾದಿರಾಜ
ಇಂದಿರಾರಮಣನ ಮಂದಿರದಲ್ಲೆ ನಾ- ರಂದ ತಾ ಬರುತಿರಲು ಕಂಡು ಕೃಷ್ಣನು ಕರೆತಂದು ಮನ್ನಿಸಿ ಬಂದಕಾರಣವೇನೆಂದನು 1 ಕಾರಣವೇನುಂಟು ಕಾರಣಪುರುಷನ ಕಾಣಬೇಕೆಂದೆನುತ ಕಾಮಿಸಿಬಂದೆನೊ ಕೊರಳ ತುಳಸಿ ಮಾಲೆ ನೀಡೊ ನೀ ಎನಗೆಂದನು2 ಏನು ಬೇಡಿದರು ನಾ ಕÉೂಡುವೆನು ನಾರಂದ ಪ್ರಾಣಪದಕ ತುಳಸಿ ನೀಡಲಾರೆನೊ ಮುತ್ತಿನ್ಹಾರವ ಕೊಡುವೆ- ನೆಂದು ಹೇಳುತಿದ್ದನು ಹರಿಯು 3 ನೀಡದಿದ್ದರೆ ನಾನು ಬೇಡಿ ಬಿಡುವನಲ್ಲ ನೋಡಿಕೋಯೆಂದೆನುತ ಆಡಿದ ಮಾತು ತಪ್ಪುವರುಂಟೆ ಶ್ರೀಕೃಷ್ಣ ಹೋಗಿಬರುವೆನೆಂದನು 4 ಸತ್ಯಭಾಮೆಯ ಮನೆ ಹೊಕ್ಕನು ನಾರಂದ ಹೆತ್ತಮ್ಮ ಕೇಳೆನುತ ಸುತ್ತಿಬಂದೆನು ಸುರಲೋಕದ ವಾರ್ತೆಯ ವಿಸ್ತರಿಸ್ಹೇಳುವೆನು 5 ಇಂದ್ರಲೋಕದಲಿ ದೇವೇಂದ್ರ ಶಚಿಯ ಕೂಡ್ಯಾ ನಂದದಿ ಕುಳಿತಿದ್ದನೆ ಅ- ಲ್ಲಿಂದ ಕೈಲಾಸ ಮಾರುದ್ರ ಪಾರ್ವತಿದೇವಿ ಚೆಂದವನ್ವರಣಿಸಲೆ 6 ಸತ್ಯಲೋಕದಿ ಸರಸ್ವತಿ ಕೂಡಿ ಬ್ರಹ್ಮ ಭಾ ಳುತ್ಸವದಿಂದಿದ್ದನೆ ಹಸ್ತಿನಾವತಿಯ ಪಾಂಡವರು ದ್ರೌಪದಿದೇವಿ ಅರ್ಥಿಯ ನೋಡಿ ಬಂದೆ 7 ದ್ವಾರಾವತಿಗೆ ಬಂದೆ ದೇವಿ ನಿಮ್ಮರಸನು ನಾರಿ ರುಕ್ಮಿಣಿ ಸಹಿತ ಭಾಳ ಸಂಭ್ರಮದಿಂದ ಕುಳಿತಿದ್ದ ಕಣ್ಹಬ್ಬವಾಗಿ ನಾ ಬಂದೆನಿಲ್ಲೆ 8 ಕರೆದು ರುಕ್ಮಿಣಿ ಕರದಿಂದೆ ಆಲಂಗಿಸಿ ತೊಡೆಯಮ್ಯಾಲಿಟ್ಟಿದ್ದನೆ ಅರಳುಮಲ್ಲಿಗೆ ತುರುವಿ(ಬೀ) ನಲ್ಲಿಟ್ಟು ನಿನಗಿನ್ನು ಸರಿಯಿಲ್ಲವೆಂತೆಂಬನೆ 9 ಹಾರಪದಕ ಇಬ್ಬರಿಟ್ಟಾಭರಣ ಬ್ಯಾರೆ ಬ್ಯಾರಾಗಿ ತೋರವಲ್ಲೆ ಸೂರ್ಯಚಂದ್ರರು ಕೂಡಿದಂಥ ಮುಖವು ನೋಡಿ ನಾ ಬೆರಗಾಗಿದ್ದೆನೆ 10 ಸತ್ಯಭಾಮೆಯೆ ನಿನ್ನ ಹೆತ್ತ ತಾಯಿತಂದೆ ಮಿರ್ತಾಗಿದ್ದರೆ ನಿನಗೆ ಕೊಟ್ಟರೀ ಕಪಟನಾಟಕ ದಯಹೀನಗಿ- ನ್ನೆಷ್ಟು ನಾ ಸೈರಿಸಲೆ 11 ಒಂದೊಂದು ಗುಣಗಳ ವರಣಿಸಲಿಕ್ಕೆ ಹ ನ್ನೊಂದೊ (ದ್ವ?) ರುಷವು ಸಾಲದೆ ಕಂಡು ಬಂದ್ವಾರ್ತೆಯ ಖರೆಯ ನಾ ಹೇಳುವೆ ಸಂದೇಹ ಮಾಡದಿರೆ 12 ಕೇಳಿ ಸತ್ಯಭಾಮೆ ತಾಳಲಾರದೆ ಮುನಿ ಪಾದದ ಮ್ಯಾಲೆ ಬಿದ್ದು ಹೇಳಿ ಉಪಾಯ ಮುಂದಕೆ ಪೋಗೊ ಶ್ರೀ- ಕೃಷ್ಣ ತಾನೊಲಿದಿರುವಂದದಿ13 ದಾನವಾಂತಕÀನ ನೀ ದಾನವÀ ಮಾಡಲು ದಾವಜನ್ಮಕÀು ನಿನ್ನನು ತಾನಗಲದೆ ಮುಂದೆ ಸೇರಿಕೊಂಡಿರುವೊ ಉಪಾಯ ಹೇಳುವೆನೆಂದನು 14 ರಂಗರಾಯನ ಕರೆತಂದುಕೊಟ್ಟವರಿಗೆ ಹಿಂಗದೆ ಸೌಭಾಗ್ಯವ ಎಂದೆಂದಿಗವರ ರಕ್ಷಿಸುವೋನೆಂದೆನುತಲಿ ಅಂಗನೆಯರನಟ್ಟಿದಳು 15 ದೂತೇರ ಸಹಿತಾಗಿ ಬಂದು ತಾ ಭರದಿಂದೆ ಪ್ರೀತಿಲೆ ಸತ್ಯಭಾಮ ಮಾತುಳಾಂತಕ ನಮ್ಮ ಮನೆಗೆ ಬಾರೆನುತ ಶ್ರೀ- ನಾಥನೆಯೇಳೆಂದಳು16 ಮಡದಿ ರುಕ್ಮಿಣಿ ಭಾಮೆ ಮಂದಿರಕ್ಕೊ ್ಹೀಗುವೆ ಕಡುಕೋಪ ಮಾಡದಿರೆ ತಡೆಯದೆ ನಾಳೆ ಬರುವೆನೆಂದು ಶ್ರೀಕೃಷ್ಣ ಗ- ರುಡನ ಹೆಗಲೇರಿದ 17 ವಾರಕಾಂತೆಯರು ಬಾಜಾರ ಮಧ್ಯದಿ ಸೋಳಸಾವಿರ ಸತಿಯರನೆ ವಾರೆನೋಟದಿ ನೋಡಿ ನಗುತ ಸತ್ಯಭಾಮೆ ಬಾಗಿಲ ಮುಂದಿಳಿದ 18 ಎದುರಿಗೆ ನಿಂತು ತಾ ಚೆದುರೆ ಸತ್ಯಭಾಮೆ ಪದುಮ ಪಾದಕೆ ಎರಗಿ ಮುದದಿಂದ ಮುದ್ದು ಶ್ರೀಕೃಷ್ಣನ ಮುಂಗೈಯ್ಯ ಪಿಡಿದು ತಾ ನಡೆದಳಾಗ 19 ಕೃಷ್ಣರಾಯನೆ ನಿನ್ನ ಕೊಟ್ಟೇನು ದಾ ನವ ಬಿಟ್ಟೆನ್ನ ಅಗಲದಂತೆ ಸತ್ಯಭಾಮೆಯ ನೋಡಿ ನಗುತ ಈ ಕಾರ್ಯ ಅ- ಗತ್ಯಮಾಡೆಂದೆನುತ 20 ಎರೆದು ಪೀತಾಂಬರವುಡಿಸಿ ಮಾಣ Âಕ್ಯದ ಆ- ಭರಣವ ತಂದಿಟ್ಟಳು ತರಿಸಿ ತಾಂಬೂಲ ದಕ್ಷಿಣೆಯನ್ನು ಬ್ರಾಂಬರ ಕÀರೆಸಿದಳಾಕ್ಷಣದಿ 21 ಆಚಾರ್ಯ ನೀವ್ ಬನ್ನಿ ವಾಸುದೇವನ ದಾನ ಈ ಕ್ಷಣದಲ್ಲೆ ಕೊಡುವೆ ನಾಶರಹಿತ ನಮ್ಮ ಮನೆಯೊಳಗಿರಲಿಕ್ಕೆ ಗ್ರಾಚಾರವೇನೆಂದರು 22 ವಿದ್ಯಾರ್ಥಿಗಳು ಬನ್ನಿ ಮುದ್ದು ಶ್ರೀಕೃಷ್ಣನ ವಿಧ್ಯುಕ್ತದಲಿ ಕೊಡುವೆ ಮೂರ್ಜಗದೊಡೆಯ ತಾ ಮಂದಭಾಗ್ಯರ ಮನೇಲಿದ್ದಾನ್ಯಾತಕೆ ಎಂದಾರೆ 23 ಭಟ್ಟರೆ ನೀವ್ ಬನ್ನಿ ಸೃಷ್ಟಿಪತಿಯ ದಾನ ಕೊಟ್ಟು ಬಿಡುವೆನೆಂದಳು ಅಷ್ಟದರಿದ್ರರಿಗಾಲಕ್ಷ್ಮೀವಲ್ಲಭ ದಕ್ಕುವೋನಲ್ಲೆಂದರು 24 ಯತಿಗಳೆ ನೀವ್ ಬನ್ನಿ ಪೃಥಿವಿಗೊಡೆಯ (ನನು) ಹಿತದಿ ದಾನವ ಕೊಡುವೆ ಗತಿಯಿಲ್ಲ ನಮಗೆ ಶ್ರೀಪತಿ ಸಲಹÀಲು ನಿನ್ನ ಪತಿ ಬ್ಯಾಡ ನಮಗೆಂದರು&
--------------
ಹರಪನಹಳ್ಳಿಭೀಮವ್ವ