ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಷ್ಟು ದಿವಸ ಹೀಗೆ ಕಳೆಯಲೊ ಗೋಪಾಲಕೃಷ್ಣ ಎಷ್ಟು ದಿವಸ ಹೀಗೆ ಕಳೆಯಲೊ ಪ. ಎಷ್ಟು ದಿವಸ ಹೀಗೆ ಎನ್ನ ಸೃಷ್ಟಿಗೊಡೆಯ ಬಳಲಿಸುವೆಯೊ ಕಷ್ಟಪಡಲಾರೆ ಭವದಿ ದೃಷ್ಟಿಯಿಂದ ನೋಡಿ ಸಲಹೋ ಅ.ಪ. ನಾನಾ ಜನ್ಮದಿ ತೊಳಲಿಸಿ ಎನ್ನನು ನೀನೆ ತಂದೆಯೊ ಮಾನವತ್ವದಿ ನಾನು ಎಂಬುದು ಬಿಡಿಸಿ ಈಗ ನೀನೆ ಕರ್ತನೆನಿಸಿ ಕಾಯೋ1 ದೇಹಸ್ಥನೆಂದೆನಿಸಿ ಎನ್ನ ದೇಹ ಮಧ್ಯದಿ ಕಾಣದಿಹರೆ ದೇಹಗಳನು ಧರಿಸಲಾರೆ ದೇಹ ಮೋಹ ಬಿಡಿಸದಿಪ್ಪರೆ 2 ಭೃತ್ಯವತ್ಸಲನೆಂದು ನಿನ್ನ ಭಕ್ತರೆಲ್ಲರು ಕರೆಯುತಿಹರೊ ಪೊತ್ತ ಬಿರುದು ಬಿಡುವರೇನೊ ಭೃತ್ಯಳೆಂದು ಎನ್ನ ಸಲಹೊ3 ಪೋಗುತಿದÉ ದಿವಸ ನೋಡು ಬೇಗ ಬೇಗನೆ ದಯವ ಮಾಡು ಭೋಗದಲಿ ವೈರಾಗ್ಯ ನೀಡು ಭಾಗವತರ ಸಂಗ ಕೊಡು 4 ಕರ್ಮದಲ್ಲಿ ಶ್ರದ್ಧೆಯಿಲ್ಲ ಧರ್ಮದಲ್ಲಿ ಬುದ್ಧಿಯಿಲ್ಲ ನಿರ್ಮಲದ ಜ್ಞಾನವಿಲ್ಲ ನಿರ್ಮಲಾತ್ಮ ಬಲ್ಲೆಯಲ್ಲ 5 ಅಂಧಕಾರದಿ ಎನ್ನನಿರಿಸಿ ಚಂದವೇನೋ ಹೀಗೆ ಮಾಳ್ಪದು ಕರ್ಮ ಸ್ವೀಕರಿಸಿ ಮುಂದೆ ಕರ್ಮವಿಡದೆ ಸಲಹೋ 6 ಅಪಾರ ಜನುಮದಲ್ಲಿನ ಪಾಪ ಸಮೂಹಗಳ ತರಿದು ಶ್ರೀಪಾದ ಸ್ಮರಣೆ ನೀಡೋ ಗೋಪಾಲಕೃಷ್ಣವಿಠಲ 7
--------------
ಅಂಬಾಬಾಯಿ
ತಂದೆ ತಾಯಿಮಿತ್ರನೀನೆ ಬಾಂಧವ ನೀನೆ ನಿನ್ನಿಂದ ಬಳಗಿಲ್ಲೆನಗೆ ಇಂದಿರಾಧವನೆ ಕಾಯೊ ಪ.ಹೊಲೆಯ ರಕ್ತದಿ ರೇತ ನಿಲಿಸಿದನೊರ್ವ ಪಿತನೆಲೆಸಿ ಗರ್ಭದೊಳು ರಕ್ಷಿಸಿದೆ ನೀನುಹಲವು ಯೋನಿಯ ತೋರಿ ತೊಳಲಿಸಿ ತುದಿಯಲ್ಲಿನೆಲೆಗೆ ನಿಲ್ಲಿಸುವಂಥ ಸುಲಭ ಜನಕನಲ್ಲೆ 1ನವಮಾಸ ಧರಿಸಿ ಸ್ತನ್ಯವನುಣಲಿತ್ತಳವ್ವೆತವಕದಿ ನಡೆ ನುಡಿಸುವೆಯೊ ನೀನುಆವ ಕಾಲಕಾಲದಲ್ಲಿ ತವಗರ್ಭದಲ್ಲಿ ಪೊತ್ತುಜೀವಕೆ ಚೈತನ್ಯಾಶನವೀವ ತಾಯಿ ನೀನಲ್ಲವೆ 2ಶ್ರೇಯಸನಾದರಿಸುವ ಪ್ರಿಯಸಖರೆಲ್ಲರು ನಿ:ಶ್ರೇಯಸದಿ ಸುಖಮುದದಾಯಕ ನೀನೆಮಾಯಪಾಶ ಬಂಧನದಿ ನೋಯುವರವರ್ಗಾಬಾಧೆಯನಟ್ಟಿ ಕಳೆವ ಚಿನ್ಮಯಮಿತ್ರನೀನಲ್ಲವೆ3ವಿತ್ತವಿರೆ ಸಹೋದರರಿತ್ತ ಬನ್ನಿ ಕೂಡ್ಯೆಂಬರುವಿತ್ತಶೂನ್ಯನಾದರೆ ನೀನುಪೇಕ್ಷಿಸೆ ಅಯ್ಯಒತ್ತಿ ಬಹದುರಿತವಿಪತ್ತುಗಳ ಸವರಿ ಸುಮುಕ್ತಿಯ ಪದವೀವಾನಿಮಿತ್ತ ಬಂಧು ನೀನಲ್ಲವೆ 4ಸಿರಿಯು ಪೋಗೆ ನಿಲ್ಲರು ಶರೀರ ಸಂಬಂಧಿಗಳಾತುರದ ದಾರಿದ್ರ್ಯ ಪಾಪಹರನು ನೀನೆಕರುಣಿ ಪ್ರಸನ್ನ ವೆಂಕಟರಮಣ ನಿನ್ನ ನಾಮಸ್ಮರಣೆ ಎನ್ನ ಜಿಹ್ವೆಗೆ ಮರೆಯದಿರಲಿ ಕಂಡ್ಯ 5
--------------
ಪ್ರಸನ್ನವೆಂಕಟದಾಸರು
ನನಗೆ ಮನಕೆ ಬಡಿದಾಟೆಳೆದಾಟ ಶ್ರೀಸನಕಾದಿವಂದ್ಯ ಬಿಡಿಸಿ ಕಾಯೊದಾತಪ.ಸಲಿಲಸ್ನಾನವ ಮಾಡಿ ಊಧ್ರ್ವ ತಿಲಕವನಿಟ್ಟುನಳಿನಾಕ್ಷ ನಿನ್ನಂಘ್ರಿ ಜಪಿಸೆಂದರೆಛಲದಿಂದ ವಿಹಿತವಲ್ಲದ ದಾರಿಗೊಯ್ದೆನ್ನತೊಳಲಿಸಿ ನೆಲೆಗಾಣಿಸದೆ ಛಲವಿಡಿದಿದೆ 1ಬೇಡಿಕೊಂಡರೆ ಕೇಳದಾಡಿಕೊಂಡರೆ ಕೇಳದೀಡಾಡಿ `ಬಿಸುಟೆನ್ನ ದಣಿಸುತಿದೆನೋಡುನಾನಾಕ್ರೋಶ ಮಾಡಿದರಂಜದುಬಾಡಿ ಬಳಲಿದೆನೆನ್ನ ಕರುಣಿಲ್ಲವಿದಕೆ 2ಮನಪಶುಕಟ್ಟಲು ಜ್ಞಾನಧಂಗಡವಿಲ್ಲಘನವೈರಾಗ್ಯದ ಕಟ್ಟು ದೃಢವಿಲ್ಲವುಮಿನುಗುವ ಭಕುತ್ಯೆಂಬ ಎಳೆಹುಲ್ಲಿನಾಸಿಲ್ಲನೀನೆ ವಶಮಾಡಿಕೊ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು