ಒಟ್ಟು 10 ಕಡೆಗಳಲ್ಲಿ , 10 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಉ) ಆತ್ಮನಿವೇದನೆ ಪಾಲಿಸಯ್ಯಾ ಪ ಎನ್ನ ಜೀಯಾ ಅ.ಪ. ದಾನಕ್ಕೆ ಲೋಭ ಅಡ್ಡಾಯಿತೋ ಮಾನಕ್ಕೆ ಕೋಪಬೀಜವಂಕುರಿಸಿತೋ ಶ್ವಾನನಂದದಿ ಬಾಳಾಯ್ತೋ 1 ಮೃಗ ತಲೆ ಸಿಕ್ಕುತೊಳಲುವ ತೆರದಿ ಮಾಯಾ ಬಿದ್ದೆನೊ ಭರದಿ 2 ದುರಿತವ ತರಿದು ಕಾಪಾಡೋ ಕರವ ಬಿಡಬ್ಯಾಡೊ 3
--------------
ಹನುಮೇಶವಿಠಲ
ಇಂಥಾ ಬಾಲನೆಲ್ಲು ಕಾಣೆನೊ ಪ ಉದಿಸಿದೇಳನೆ ದಿನದಿ ತ್ರಿದಶರೊಡನೆ ಕೂಡಿ ಮದಮುಖತಾರಕ | ಸದನವನೇರಿ ಕದನವಗೈಯುತ | ಹದವಿಹ ಶಸ್ತ್ರದಿ ಅಧಮ ದೈತ್ಯನ ಯಮ | ಸದನಕಟ್ಟಿರುವಂಥ 1 ಅಸಿತನ ಶಾಪದಿ | ಅಸುರೆಯಾದದಿತಿಯು ನಿಶಿಚರ ತಮನ ವರಿಸಿಕೊಂಡು ಇರಲು | ಅಸುರ ಹರನು ಖಳ | ನನು ಸೆಳೆಯಲಿಕೆನು-ತಿಸುವದಿತಿಗೆ ಪೂರ್ವ | ದೆಸೆಯನಿತ್ತಿರುವಂತಾ 2 ದುರುಳ ರಕ್ಕಸನಾಶಿ | ಧರಣಿಯೊಳ್ತೊಳಲುವ ದೊರೆ ಸುಧರ್ಮನ ಶಾಪ | ಪರಿಹರಿಸುತಲೇ | ನಿರತ ತನ್ನಯನಾಮ | ಸ್ಮರಿಪ ದಾಸರ ಸದಾ ಪೊರೆಯೆ ಪಾವಂಜೆಯೊಳು | ಸ್ಥಿರವಾಗಿನಿಂತ ತಾ 3
--------------
ಬೆಳ್ಳೆ ದಾಸಪ್ಪಯ್ಯ
ಇಲ್ಲದ ಪದಾರ್ಥಕ್ಕೆ ಏನೇನೋ ಹೆಸರು ಬಿಡಿ ಪ ಬಲ್ಲೆ ಇವೆಲ್ಲಾ ನಾನೆಂಬುವರು ದುರ್ಜನರು | ನಿಜ ಅ.ಪ ನಾವೇ ದೇವರ ಮಾಡಿದೆವೋ ದೇವರು ನಮ್ಮನು ಮಾಡಿದನೋ ಭಾವಿಸಿ ನೋಡಿದರೆ ದೈವ ನಾವಲ್ಲದ್ಯಾರು 1 ವಿಷ್ಣು ಈಶ್ವರನು ಬ್ರಹ್ಮ ಎಲ್ಲಿರುವರು ನಾವೆ ವಿಶ್ವವ್ಯಾಪಕರು ವಿವಿಧ ರೂಪವಾಗಿಹೆವು 2 ಸರ್ವವೂ ಸುಳ್ಳವನಿಗೆ 3 ಬೆಳಕಿಗೆ ಕತ್ತಲು ವೈರಿ ಕತ್ತಲಿಗೆ ಬೆಳಕು ಶತ್ರು ಹೊಳವಿಗಿಂತಲೂ ಕತ್ತಲೆಯೇ ಲೇಸು ನಮಗೆ 4 ಪರಿಯಲಿ ನಿರುತ ಸಂಸಾರ ಚಕ್ರದಿ ದುರುಳರು ತೊಳಲುವರು 5
--------------
ಗುರುರಾಮವಿಠಲ
ಉಗಾಭೋಗ ಏನೇನು ಪಾಟು ಬಿದ್ದರು ಮುನ್ನ ಕರ್ಮ ಬೆಂಬಿಡದಿರೆ ಶ್ರೀನಿವಾಸನÉ ನಿನ್ನಲನುಗಾಲ ಧ್ಯಾನಿಸಲೇಕೊ ಸ್ವಾಮಿ ನೀನೊಲಿದ ಮೇಲೆ ಪೂರ್ವಾಜಿತ ಕರ್ಮ ವೇನು ಮಾಡಬಲ್ಲದು ಹೀನ ಮಾನವರಿದನರಿಯದೆ ನಾನಾ ಪ್ರಕಾರದಿ ತೊಳಲುವರು ಶ್ವಾನನಂದದಿ ಭವದೊಳಗೆ ನಿನ್ನ ಮರೆದು ಏನು ಕಷ್ಟ ಬಂದರೂ ಬರಲಿ ನಾ ನಿನ್ನ ಮರೆಯೆನೊ ದೇವರದೇವ ಸಾನುರಾಗದಿ ಸಲಹೆನ್ನ ಶ್ರೀನಿಧಿ ರಂಗೇಶವಿಠಲ
--------------
ರಂಗೇಶವಿಠಲದಾಸರು
ಕಷ್ಟ ತನುವಿನಲಿ ಹುಟ್ಟಿ ತೊಳಲುವಂಥಎಷ್ಟೆಂದು ತಾಳುವೆನೊ ಶ್ರೀರಂಗ ಪ ಅಷ್ಟರೊಳೆಂದೆನ್ನ ಅವಗುಣವೆಣಿಸದೆ ಕಷ್ಟ ಪಡಿಸುವುದೇನು ಶ್ರೀರಂಗ ಅ ನರಜನ್ಮವನು ಎತ್ತಿ ನರಕದೊಳಗೆ ಸುತ್ತಿಗುರಿ ಗೊತ್ತು ಕಾಣೆನಯ್ಯ ಶ್ರೀರಂಗಪರಮಪಾತಕನಾಗಿ ಹರಿ ನಿಮ್ಮ ಸ್ಮರಣೆಯನುಮರೆದು ಪಾಮರನಾದೆ ಶ್ರೀರಂಗ1 ಮಂದ ದು-ರ್ಮತಿಗೆ ಮರುಳಾದೆನೊ ಶ್ರೀರಂಗಅತುಳ ಪ್ರಪಂಚಕ್ಕೆ ಹಿತನಾಗಿ ದುಷ್ಟ ಸಂ-ಗತಿಯ ನಾನರಿದಿದ್ದೆನೊ ಶ್ರೀರಂಗ 2 ಮಿತಿಮೀರಿ ಮನ ಹರಿ ಪದವ ನೆನೆಯದೆ ಪರಸತಿಯರಿಗಳುಪಿದೆನೊ ಶ್ರೀರಂಗಕೃತಬುದ್ಧಿಯೊಳು ಉನ್ನತನಾಗಿ ತಾನೆರೆದುಸ್ತುತಿ ಮಾಡಿಕೊಂಡಿದ್ದೆನೈ ಶ್ರೀರಂಗ 3 ಆಶಾಪಾಶಗಳೆಂಬ ದೇಹಕ್ಕೆ ಸಿಲ್ಕಿ ಸ-ದ್ವಾಸನೆಯನು ಬಿಟ್ಟೆನು ಶ್ರೀರಂಗಮೋಸದಿಂದಾತ್ಮಘಾತುಕನಾಗಿ ಅಪರಾಧವೇಸೊಂದು ಮಾಡಿದೆನಯ್ಯ ಶ್ರೀರಂಗ 4 ಈಸಲಾರದೆ ಹೊಳೆಯಲಿ ಕಾಸಲಾರದೆ ಒಲೆಯಲಿಸೋಸುತ್ತ ಕುಳಿತಿಹೆನು ಶ್ರೀರಂಗವಾಸುಕಿ ಶಯನ ನೆಲೆಯಾದಿಕೇಶವ ನಿಮ್ಮಾಶ್ರಿತದಾಸರ ದಾಸನಯ್ಯ ಶ್ರೀರಂಗ 5
--------------
ಕನಕದಾಸ
ಗುರುಗಳ ನೆರೆ ನಂಬಿರೊ ಪರಿಪಾಲಿಪ ಗುರುಗಳ ನೆರೆ ನಂಬಿರೊ ಪ ಪರಿ ಅಘದೊಳು ತೊಳಲುವ ಮನು ಜರ ಬವಣೆಗಳರಿತು ಸಜ್ಜನರ ಪಾಲಿಸುವಂಥ ಅ.ಪ ಚಿಂತೆಯೆಲ್ಲವು ನೀಗಿಸಿ ಮನಸಿಗೆ ಬಹು ಸಂತೋಷವನು ಸೂಚಿಸಿ ಪಾದ ಚಿಂತನೆ ಮಾಡುವ ಅಂತರಂಗದ ಭಕ್ತರೊಡನೆ ಮೆರೆವ ದಿವ್ಯ1 ಬೆಟ್ಟದೊಡೆಯನ ಪೂಜಿಸಿ ಭಕುತರ ಮನ ದಿಷ್ಟಗಳನು ಸಲ್ಲಿಸಿ ಸೃಷ್ಟಿಕರ್ತನ ಗುಣ ಸ್ವಚ್ಛ ತಿಳಿದು ಸರ್ವ ಕಷ್ಟಗಳ್ಹರಿಸಿ ಸಂತುಷ್ಟಿಪಡಿಸುವಂಥ 2 ಸರಿಯುಂಟೆ ಧರೆಯೊಳಗೆ ಗುರುಗಳ ಪೋಲ್ವ ನರರುಂಟೆ ಭುವಿಯೊಳಗೆ ಸಿರಿ ಉರಗಾದ್ರಿವಸ ವಿಠ್ಠಲದಾಸರ ಕೂಡಿ ವರಗಳ ಕೊಡುವಂಥ ಪರಮ ಸಾತ್ವಿಕರಾದ 3 ಪರಮ ಮಂಗಳ ಮೂರ್ತಿಯ ರೂಪವ ಹಗ ಲಿರುಳು ಧ್ಯಾನವ ಮಾಳ್ಪರ ಪರಮ ಗುರುಗಳ ಪರಮ ಪ್ರೀತಿಯ ಪಡೆದಂಥ ಉರಗಾದ್ರಿವಾಸ ವಿಠ್ಠಲದಾಸರೆಂಬಂಥ4 ಕರುಣದಿ ಸಲಹುವರು ಭಕ್ತರನೆಲ್ಲ ಕರೆದು ಬೋಧನೆ ಮಾಳ್ಪರು ವರ ಕಮಲನಾಭ ವಿಠ್ಠಲನ ಭಜಿಸುತ್ತ ಸಿರಿ ಶ್ರೀನಿವಾಸನ ನಿರುತ ಪೂಜಿಸುವಂಥ 5
--------------
ನಿಡಗುರುಕಿ ಜೀವೂಬಾಯಿ
ಗುರುರಾಯಾ ದೊಡ್ಡವನೈ ಬಲು ಪರೋಪಕಾರಿ | ಪರಿ | ಪರಗತಿಯ ಸಾಧಕರಾಗುವ ಸಹಕಾರಿ | ಬೋಧ ಸುಧೆಯ ಉದಾರಿ | ಯುಕ್ತಿಯ ದೋರುವ ದಾರಿ 1 ಹಲವು ಶಾಸ್ತ್ರದ ಮಾತುಗಳ ಕೇಳಿ ಮುಂಗಾಣದೆ | ತೊಳಲುವ ಮನ ಸಂಶಯವಾ ವಂದು ಮಾತಿನಿಂದೆ | ಕಳೆದನು ದೃಢ ನೆಲೆಗೊಳಿಸಿ ಸ್ವಾನುಭವದಿಂದೆ | ಭವ ತಮ ಮೂಲದಿಂದಲೇ | ಬೆಳಗವ ದೋರುವ ತಂದೇ2 ಮೂಢ ಪಾಮರ ಮಂದಧಿಯನಾನೆಂದರಿಯೆನು | ನೋಡಿ ಕರುಣ ಕಟಾಕ್ಷದಲಿ ಮುಂದಕ ಕರೆದನು | ನೀಡಿ ಅಭಯ ಹಸ್ತವನು ರೂಢಿಯೊಳು ನಂದನೆನಿಸಿದನು | ಮಹಿಪತಿ ತ್ಯಾಜವಿತ್ತನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರಜಾಕ್ಷನಿನ್ನೂರಿಗೆ ಪೋಗುವ ದಾರಿಯ ತೋರಯ್ಯ ಪ ತೊಳಲುವೆ ದಾರಿಯ ಕಾಣದೆ ಅ.ಪ. ಜನ್ಮಾಂತರಕೃತ ಕರ್ಮಗಳೆಂಬುವ ಹೆಮ್ಮರಗಳು ಬೆಳೆದು ಧರ್ಮನಿರೋಧವಿ ಕರ್ಮದ ಬಳ್ಳಿಯು ಬಿಂಮನೆ ಬಿಗಿವಡೆದು ಲಮ್ಮಗೊಡವುಹರಿ 1 ಮೀರಿಬರಲುಘನ ಚೋರರು ಕಾದಿಹರಾರುಮಂದಿ ಮುಳಿದು ಸಾರಿ ಬಾಯಾರಿಸುತಿರ್ಪವು 2 ದಾಂಟುವೊಡರಿದು ಧನಕನಕಾದಿಗಳೆನಿಪ ಪಿಶಾಚಗಳನವರತವು ಬಿಡವು ಪೋಲುತ ನಮ್ಮನು ಬಾಧಿಸುತಿರುವರು3 ಕ್ಷುದ್ರವಿಷಯಗಳು ಛಿದ್ರವಹುಡುಕುವ ವಧ್ರುಗದೇಹದೊಳು? ಕದ್ರುಸುತರವೋಲುಪದ್ರವಗೈವವಭದ್ರದ ಭೀತಿಗಳೂ ಜರೆಯೆಂಬುದ್ರಿಕ್ತಾಂಗನೆ4 ನರಿಗಳ ಪರಿಯಲಿ ನರಳುವರೆಲ್ಲರು ನರಕಗಳನುಭವಿಸಿ ವರದ ವಿಠಲನಿಜ ಚರಣವೆ ನಂಬಿದೆ 5
--------------
ಸರಗೂರು ವೆಂಕಟವರದಾರ್ಯರು
ಭವ ಸಂಕಟ ಪರಿಹರಿಸೊ ಕಿಂಕರನೆಂದೆನಿಸೊ ಪ ಶಂಕೆಯಿಲ್ಲದೆ ಪಾದಪಂಕಜ ಪೂಜಿಸಲೂಮಂಕುಮತಿಯ ಕಳೆವಾ ಅಕಳಂಕನೆಂದೆನಿಸುವಾ ಅ.ಪ. ಕಲಿಯುಗದೊಳು ಕಲಿ ಬಾಧೆಗೆ ಒಳಗಾಗಿ ಬಹುವಿಧವಾಗಿಒಲಿಸದೆ ವರಗುರು ಹಿರಿಯರ ನಿಂದಿಸುತಾ ವೇಳೆಗಳೆಯುತಾಗಳಿಸಿದೆ ಪಾಪವ ಚರಿಸುತ ಧರೆಯೊಳಗೆ ತೊಳಲುವೆ ತಮದೊಳಗೇಘಳಿಲನೆ ರಕ್ಷಿಸೊ ಬಾಲಕರನು ದೇವಾ ಎನ್ನಯ ಕುಲದೈವಾ 1 ಸಾಧನೆಗೋಸುಗ ಮೇದಿನಿಗೆ ಬಂದು ಸಾಧಿಸದೆ ಬಂದುಶೋಧಿಸುವೆನು ಪುರುಷಾರ್ಥದ ಮಾರ್ಗವನು ಮೋದವ ಪೊಂದುವೆನುಭೇದವ ತಿಳಿಯದೆ ಹಾದಿಯ ತಪ್ಪಿರುವೆ ಖೇದವ ಪುಡುತಿರುವೆಸಾದರದಲಿ ತವ ಪಾದದಿ ಧ್ಯಾನವನು ಒದಗಿಸಬೇಕಿನ್ನು 2 ಮಂದ ತಾಪ ಬಿಡಿಸೊ ಕರುಣವ ತೋರಿಸೊಆರು ಮೂರು ವಿಧ ಭಕ್ತಿಯನೆ ಈಯೋ ಕರಪಿಡಿದು ಕಾಯೋಸಾರುವ ಭಕುತರ ಧೀರ ವೃಂದದೊಳಗೆ ಸೇರಿಸೊ ಜವದೊಳಗೆಧಾರುಣೀಶ ತಂದೆವರದವಿಠಲನೆ ಶರಣೆಂಬೆನು ನಾನೇ 3
--------------
ಸಿರಿಗುರುತಂದೆವರದವಿಠಲರು
ಕರುಣಿಸಿನ್ನಾದರೆ ರಂಗ ಸುರಾರಿಭಂಗಕರುಣಿಸಿನ್ನಾದರೆ ರಂಗ ಪ.ಹುಳು ಹಕ್ಕಿ ನಾಯಿ ನರಿ ಗಿಡ ಹುಲ್ಲು ಮುಳ್ಳುಗಳಜನ್ಮವಾಂತು ನಾ ಬಳಲಿದೆ ರಂಗನೆಲೆಗಾಣೆನಿನ್ನು ಮಾನಿಸನಾಗಿ ವೃಥನಾದೆಗುಳದ ಹಣ್ಣಿಗೆ ಸೊರಗಲ್ಯಾಕೊ ರಂಗ 1ತುದಿಮೊದಲಿಗೆ ಮದ ಮತ್ಸರದಿಂ ಬೇಗುದಿಗೊಂಡು ನಿನ್ನಂಘ್ರಿ ಮರೆದೆನೊ ರಂಗಪದುಮನಾಭನೆ ನನ್ನ ಹೊರೆಯಲಾರೆಯಹುಲ್ಲೆವದನಕ್ಕೆ ಮುಳ್ಳ ಕಡಿವಾಣ್ಯಾಕೊ ರಂಗ 2ಮಲೆತವನಾದರೊದಿಯೊ ನಿನ್ನಂಗಣದೊಳುತೊಳಲುವ ನಾಯಿಗೆ ಕ್ಲೇಶವು ಸಲ್ಲ ರಂಗಹಲವು ದುಷ್ಕøತ ನಿನ್ನ ನಾಮ ಘೋಷಣೆಯಲ್ಲಿನಿಲ್ಲಬಲ್ಲವೆ ಪ್ರಸನ್ವೆಂಕಟ ರಂಗ 3
--------------
ಪ್ರಸನ್ನವೆಂಕಟದಾಸರು