ಒಟ್ಟು 3 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋ ಸಚ್ಚಿದಾನಂದನೆ ಜೋ ಜೋ ದೇವಕಿಕಂದನೆ ಜೋಜೋ ಬ್ರಹ್ಮಾದಿವಂದ್ಯನೆ ಧ್ರುವ ಹುಟ್ಟಿ ಬಂದು ನಿಜದೋರಿದೆ ಖೂನ ಮುಟ್ಟಿ ಬೀರುವ ಸುಚಿನ್ನಸಾಧನ ಇಟ್ಟ ಕಾವಲಿ ಹಾಕಿದೆ ಮೌನ ಮೆಟ್ಟಿಮರ್ದಿಸಿ ಬಂದೆ ಮಾವನ 1 ಮಾಡಬಂದೆ ನೀ ಧರ್ಮಸ್ಥಾಪನಿಯ ನೋಡಬಂದೆನಿಷ್ಟ ಜನರಾರ್ಚನಿಯ ಆಡಬಂದೆ ನಂದಯಶೋದೆ ಮನಿಯ ನೀಡಬಂದೆ ನಿಜಸುಖಸಾಧನಿಯ 2 ಶಿಷ್ಟಜನರಿಗಾಗಿ ಸಹಾಕಾರಿ ಸೃಷ್ಟಿಯೊಳು ತೋರಬಂದೆ ಶ್ರೀಹರಿ ದುಷ್ಟ ಜನರ ಮರ್ದಿಸುವಾವತಾರಿ ಕಂಸಾರಿ 3 ದೇವಾದಿಗಳ ಮಗುಟಮಣಿಯೆ ಭಾವಿಸಲಳವಲ್ಲ ಸದ್ಗುಣಿಯೆ ಕಾವ ದೈವ ನೀನೆ ಕೃಷ್ಣ ಕರುಣೆಯೆ ದೇವಕಿ ಗರ್ಭನಿಧಾನದ ಖಣಿಯೆ 4 ಬಲವಾಗಿ ಎನಗಬಂದೆ ಸರ್ವೇಶ ಒಲಿದು ಭಾನುಕೋಟಿತೇಜಪ್ರಕಾಶ ಫಲವ ನೀಡಿ ತೋರಬಂದೆ ಸಂತೋಷ ಸಲಹಬಂದೆ ಮಹಿಪತಿ ಪ್ರಾಣೇಶ 5 ಮನೋಹರ ಮಾಡುವ ನೀನೆ ಸಹಕಾರಿ ಅನುದಿನ ಲೆವಕಲ ನೀನೆ ಮುರಾರಿ 6 ಅನೆ ಕಾಯಲಿಪರಿ ನೀನೆ ಉದಾರಿ ಅನಾಥರಿಗೊಲುವ ನೀನೆ ಶ್ರೀಹರಿ 7 ಪತಿತ ಪಾವನ ಪೂರ್ಣ ನೀನೆ ನಿಶ್ಚಯ ಹಿತದಾಯಕ ನೀನಹುದೊ ಮಹಿಪತಿಯ 8
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀಹರಿ ಸ್ತುತಿ ಆವಕಡೆಯಿಂದ ಬಂದೆ ವಾಜಿವದನನೆಭಾವಿಸುವ ವಾದಿರಾಜಮುನಿಯ ಕಾಣುತ ಪ. ನೇವರಿಸಿ ಮೈಯ ತಡವಿ ನೇಹದಿಂದಲಿ ಮೇಲುನೈವೇದ್ಯವನ್ನು ಇತ್ತು ಭಜಿಸುವೆ ಅ.ಪ. ಭಕುತಿಕಡಲೆ ಜ್ಞಾನವೈರಾಗ್ಯಬೆಲ್ಲದಮುಕುತಿ ಆನಂದಸುಖದ ಕ್ಷೀರಲಡ್ಡಿಗೆಯುಕುತಿ ಧ್ಯಾನಕೊಟ್ಟು ನೀನು ಎಲ್ಲಮಾತಲಿಶಕುತಿ ಸಂತೋಷ ಮಹಿಮೆ ತೋರಬಂದೆಯ 1 ಹೆತ್ತತುಪ್ಪ ಸಕ್ಕರೆಯ ಮಡ್ಡಿಮುದ್ದೆಯತುತ್ತುಮಾಡಿ ಕೊಡಲು ಅದನು ಮೆಲುತ ಮೆಚ್ಚುತಅತ್ಯಂತ ಸಂತೋಷ ನೀನು ಆಟತೋರುತಭೃತ್ಯ ವಾದಿರಾಜಮುನಿಯ ಸಲಹಬಂದೆಯ 2 ಫಲವ ಕೊಟ್ಟು ರಕ್ಷಿಸಿದಿ ವಾಜಿವದನನೆನಿಲುವೋ ಜ್ಞಾನಭಕ್ತಿಯನ್ನು ನೀಡಬಂದೆಯಸುಲಭ ಸುಮುಖ ಸುಪ್ರಸನ್ನ ಹಯವದನನೆಚೆಲುವ ಚಿನ್ಮಯಮೂರ್ತಿ ನಮ್ಮ ಸಲಹ ಬಂದೆಯ 3
--------------
ವಾದಿರಾಜ