ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಕ್ತವತ್ಸಲ ಹರಿ ಎಂಬ ಬಿರುದು ನಿನ ಗಿತ್ತವರ್ಯಾರಯ್ಯಾ ಹೇ ಜೀಯಾ ಪ ತತ್ತರಿಸುತಲಿಹರು ಈ ಜಗದೊಳು ಅ.ಪ ಪರಿಪರಿಯಲಿ ನಿನ್ನ ಮೊರೆಯ ಹೊಕ್ಕಿರುವ ಪರಮ ಸುಜನರುಗಳು ಈ ಧರೆಯೊಳು ಒರಳಿಗೊಡ್ಡಿರುವ ಶಿರಗಳುಳ್ಳವರಂತೆ ದುರುಳರ ಭಯದಿಂದ ನರಳುತಿರೆ 1 ವಾಸಕೆ ಗೃಹವಿಲ್ಲ ಲೇಶ ಸುಖಕೆ ಅವ ಕಾಶ ಇವರಿಗಿಲ್ಲ ಈ ಭುವಿಯೊಳು ಶ್ರೀಶನಾಗಿರೆ ನಿನ್ನ ದಾಸರೊಳಗೆ ಪರಿ ಹಾಸ ಮಾಡುತಲಿಹೆಯೋ ಜಗದೀಶ 2 ಪರಿ ಘನ್ನಬಿರುದುಗಳು ಇನ್ನು ಉಳಿವುದೆಂತೋ ನಾ ಕಾಣೆ ಸನ್ನುತಿಸುವವರಿಗೆ ಇನ್ನಾದರು ಸುಖ ವನ್ನು ನೀ ದಯಮಾಡೋ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಭವ ನೋವಾ ಪ ಹರಿಯೆ ಪರದೈವ ವೆಂ | ಮೊರೆಯುತಿಹ ಬಾಲಕನಪರಿ ಪರೀ ಹಿಂಸಿಸಲು | ಪರಿಚರರಿಗ್ವೊರೆಯೇತರಳ ಪ್ರಹ್ಲಾದವನ | ಕರದೊಯ್ದು ಕಬ್ಬಿಯಲಿಹೊರದೂಡಿ ಪರಿಶಿಲೆಯ | ಶಿರದ ಮೇಲಿಡಲೂ 1 ವರಹ ಲಕ್ಷ್ಮೀನರ | ಹರಿಯ ರೂಪದಲಿಂದಭಾರವಾದ್ ಶಿಲೆಯ ನೊ | ತ್ತರಿಸುತಲಿ ನೀನೂವರ ಭಕ್ತನನು ಕಾಯ್ದೆ | ಸರುವ ವ್ಯಾಪಕ ದೇವಕರುಣಿಸು ಗುಣಾನಂತ | ವರಲಕ್ಷ್ಮಿಕಾಂತ 2 ಪರಿ ಪರಿಯ ಹಿಂಸೆಗಳಿಗೆರವು ಮಾಡುವೆ ಗುರೂ | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಭವ ಭಯಂಕರ ಪ ಶಂಕರ ತ್ವತ್ಪದ ಪಂಕಜದಲಿ ಮನ ಶಂಕೆಯಿಲ್ಲದೆ ಕೊಟ್ಟು ಕಿಂಕರನನು ಪೊರೆ 1 ಮೃತ್ಯುಪಾಶಕೆ ಸಿಕ್ಕಿ ತತ್ತರಿಸುತಲಿದ್ದ ಭಕ್ತನ ಸಲಹಿದ ಮೃತ್ಯುಂಜಯ ಸಲಹೆನ್ನ 2 ವಿಷವು ಆವರಿಸಲು ತ್ರಿದಶರು ಬೇಡಲು ನಸುನಗುಗಲಿ ವಿಷ ಧರಿಸಿದ ಸದಾಶಿವ 3 ಶಿವಶಿವಾವಲ್ಲಭ ಭವಾಭವ ಪ್ರಭವನೆ ಭುವನ ಪವಿತ್ರನೆ ಭವಹರ ಸಲಹೆನ್ನ 4 ಅಂಬಿಕನಾಥನೆ ನಂಬಿದೆ ನಿನ್ನನೆ ಶಂಭುವೆ ಭಕ್ತನ ಬೆಂಬಿಡದೆಲೆ ಪೊರೆ 5 ಅಷ್ಟ ವಿಭೂತದ ಅಷ್ಟಮೂರ್ತಿಯೆ ಪದ ಮುಟ್ಟಿ ಭಜಿಪ ಮನ ಕೊಟ್ಟು ರಕ್ಷಿಸು 6 ದಿಗಂಬರ ದಯಾಕರ ಭಗೀರಥ ಹಿತಕರ ಅಘಹರ ಮೃಗಧರ ಹಗರಣಗೊಳಿಸಿದೆ 7 ವಿಘ್ನಪ ಜನಕನೆ ಅಜ್ಞತೆ ಬಿಡಿಸಯ್ಯ ಸುಜ್ಞನೆ ಭವಾಂಬುಧಿ ಮಗ್ನನನುದ್ಧರಿಸಯ್ 8 ಲಕುಮಿಕಾಂತನ ಪ್ರಿಯಸÀಖನೆ ಶ್ರೀಕಂಠನೆಭಕುತಿ ಭಾಗ್ಯವನೀಯೊ ಶಕುತ ಬಿಡದೆ ಕಾಯೊ 9
--------------
ಲಕ್ಷ್ಮೀನಾರಯಣರಾಯರು