ಒಟ್ಟು 41 ಕಡೆಗಳಲ್ಲಿ , 25 ದಾಸರು , 41 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಭೂಮಿದುರ್ಗ ಮತ್ತೇಭೇಂದ್ರಿಗಮನೆ ಸ್ವ ರ್ಣಾಭ ಗಾತ್ರೆ ಸುಚರಿತ್ರೆ | ಸುಚರಿತ್ರೆ ಶ್ರೀ ಪದ್ಮ ನಾಭನ್ನ ಜಾಯೆ ವರವೀಯೆ 1 232 ದರಹಸಿತವದನೆ ಸುಂದರಿ ಕಮಲ ಸದನೆ ನಿ ವಿಧಿ ವಿಧಿ ಮಾತೆ ಲೋಕಸುಂ ದರಿಯೆ ನೀ ನೋಡೆ ದಯಮಾಡೆ 2 233 ತ್ರಿಗುಣಾಭಿಮಾನಿ ಎನ್ನವ ಗುಣದ ರಾಶಿಗಳ ವರವೀಯೆ ನಿನ್ನ ಪಾದ ಯುಗಳಕ್ಕೆ ನಮಿಪೆ ಜಗದಂಬೆ 3 234 ಪ್ರಳಯ ಕಾಲದಲಿ ಪತಿ ಮಲಗ ಬೇಕೆನುತ ವಟ ದೆಲೆಯಾಗಿ ಹರಿಯ ಒಲಿಸಿದಿ | ಒಲಿಸಿದಿ ಜಗದ ಮಂ ಗಳ ದೇವಿ ನಮಗೆ ದಯವಾಗೆ 4 235 ತಂತು ಪಟದಂತೆ ಜಗದಂತರ್ಬಹಿರದಲ್ಲಿ ಕಾಂತಮೊಡಗೂಡಿ ನೆಲೆಸಿಪ್ಪೆ | ನೆಲೆಸಿಪ್ಪೆ ನೀನೆ ನ್ನಂತರಂಗದಲಿ ನೆಲೆಗೊಳ್ಳೆ 5 236 ಈಶಕೋಟಿ ಪ್ರವಿಷ್ಟೆ ಈಶ ಭಿನ್ನಳೆ ಸರ್ವ ದೋಷವರ್ಜಿತಳೆ ವರದೇಶ | ವರದೇಶ ಪತಿದೊಡನೆ ವಾಸವಾಗೆನ್ನ ಮನದಲ್ಲಿ 6 237 ಆನಂದಮಯಿ ಹರಿಗೆ ನಾನಾಭರಣವಾದೆ ಪಾನೀಯವಾದೆ ಪಟವಾದೆ | ಪಟವಾದೆ ಪಂಕಜ ಪಾಣಿ ನೀನೆಮಗೆ ದಯವಾಗೆ 7 238ಮಹದಾದಿ ತತ್ವಗಳ ವಹಿಸಿ ನಿನ್ನುದರದೊಳು ದ್ರುಹಿಣಾಂಡ ಪಡೆದೆ ಪತಿಯಿಂದ | ಪತಿಯಿಂದ ಶ್ರೀಲಕ್ಷ್ಮಿ ಮಹಮಹಿಮಳೆ ಎಮಗೆ ದಯವಾಗೆ 8 238 ಆವ ಬ್ರಹ್ಮಾದಿ ದೇವರೆಲ್ಲರು ತವ ಕೃ ಪಾವ ಲೋಕನದಿ ಕೃತಕೃತ್ಯ | ಕೃತಕೃತ್ಯರಾಗಿ ಹರಿ ದೇವಿ ನಾ ಬಯಸುವುದು ಅರಿದಲ್ಲ 9 240 ಪಕ್ಷೀಂದ್ರವಾಹನನ ವಕ್ಷಸ್ಥಳವಾಗಿ ಅಕ್ಷಯಜ್ಞಾನಿ ಸುಖಪೂರ್ಣೆ | ಸುಖಪೂರ್ಣೆ ಕಮಲದ ಳಾಕ್ಷಿ ನೋಡೆನ್ನ ದಯದಿಂದ 10 241 ಹಲವು ಮಾತ್ಯಾಕೆ ಶ್ರೀಲಲನೆ ಶ್ರೀಜಗನ್ನಾಥ ವಿ ಮನದಲ್ಲಿ ವಾಸವಾಗೆಲ್ಲ ಕಾಲದಲಿ ಅವಿಯೋಗಿ 11
--------------
ಜಗನ್ನಾಥದಾಸರು
(ಆ) ಲಕ್ಷ್ಮೀಸ್ತುತಿಗಳು ಶಂಬರಾರಿ ಜನನಿ ಪ ಬೆಂಬಿಡದೆನ್ನ ಹೃದಂಬುಜದೊಳಗವ ಲಂಬಿಸಿ ಸಲಹು ಮದಂಬೆ ಸನಾತನಿ ಅ.ಪ ಅಂಬುಜಮುಖಿ ಚಿಕುರೆ ಶರ ಕುಂಭಪಯೋಧರೆ ಬಿಂಬಫಲಾಧರೆ 1 ಕರ್ಣದೊಳೆಸೆವ ಸುವರ್ಣವಿಡಿದ ಪೊಸ ರನ್ನದೊಡವೆಗಳ ಮನ್ನಿಸುವಂತಿದೆ ರನ್ನೆ ಗುಣಾರ್ಣವೆ 2 ನೀಲಭುಜಗವೇಣಿ ಲೀಲೆಯಿಂದ ಶಾರ್ದೂಲ ಮಹೀಂದ್ರದೊ ಳಾಲಯಗೈದಲಮೇಲಮಂಗಾಮಣಿ 3
--------------
ವೆಂಕಟವರದಾರ್ಯರು
(ಬಪ್ಪನಾಡಿನ ಪಂಚದುರ್ಗೆ) ಮಂಗಲಂ ಶ್ರೀಪಂಚದುರ್ಗೆಗೆ ಜಯ ಮಂಗಲಾರತಿಯೆತ್ತಿ ಶ್ರೀಮಹೇಶ್ವರಿಗೆಪ. ಶಂಕರನಂಕಾಲಂಕಾರಿಗೆ ಕುಂಕುಮಬೊಟ್ಟಕಸ್ತೂರಿ ಲಲಾಟೆಗೆ ಪಂಕಜಗಂಧಿ ಶ್ರೀಪಾರ್ವತಿಗೆ1 ಕೋಕಿಲಗಾನೆಗೆ ಕೋಕಪಯೋಜೆಗೆ ಶ್ರೀಕಂಠನರ್ಧಾಂಗಿ ಶ್ರೀಗೌರಿಗೆ ಏಕದಂತನ ಜನನಿಗೆ ಜಗದಂಬೆಗೆ ಲೋಕನಾಯಕಿ ಶ್ರೀಮಹಾಕಾಳಿಗೆ2 ಕಂಜದಳಾಕ್ಷಿಗೆ ಕಲಧೌತಗಾತ್ರೆಗೆ ಕುಂಜರಗಮನೆ ಕಂಧರಜಾತೆಗೆ ಮಂಜೀರನೂಪುರರಣಿತಪದಾಬ್ಜೆಗೆ ನಂಜುಂಡನ ಮನಮಂಜುಳೆಗೆ3 ಅಂಗಜರೂಪೆಗೆ ಮಂಗಲದಾತೆಗೆ ಭೃಂಗಕುಂತಳೆ ಸರ್ವಮಂಗಲೆಗೆ ಬಂಗಾರಮಕುಟೋತ್ತಮಾಂಗದಿ ಧರಿಸಿದ ಸಂಗೀತಲೋಲೆಗೆ ಶರ್ವಾಣಿಗೆ4 ರೂಢಿಗಧಿಕ ಬಪ್ಪನಾಡಿಗೊಡತಿಯಾಗಿ ಮೂಡಿತೋರಿದ ಶ್ರೀಮುಕಾಂಬಿಕೆಗೆ ಕ್ರೋಡಾವತಾರ ಲಕ್ಷ್ಮೀನಾರಾಯಣ ಸೊಸೆ ಬೇಡಿದಿಷ್ಟವನೀವ ಸರ್ವೇಶೆಗೆ5
--------------
ತುಪಾಕಿ ವೆಂಕಟರಮಣಾಚಾರ್ಯ
ಅಧ್ಯಾಯ ಮೂರು ಪದ ಸಾವಿರ ಬುಧರÀರನೆಲ್ಲ ಮೀರಿ ಪರಮೇಶ್ವರಗೆ ಹಾರ ಹಾಕುವೆನೆಂದು ಪಾರಿಜಾತದ ಕುಸುಮ ಪಾರ್ವತಿಯು ತಾತರಿಸಿ ಪೂರ್ವದಲಿ ಮಾಡಿದಳ ಪೂರ್ವ ಮಾಲೆಯ ಭಕ್ತಿಪೂರ್ವಕವಾಗಿ ಚಾರುತರವಾಗಿಹ ಅಲಂಕಾರಗಳ ನಿಟ್ಟು ಶೃಂಗಾರ ಭರಿತಳು ಆಗಿ ಪಾರಿಜಾತದ ಹೂವಿನ ಹಾರಕೈಯಲಿ ಪಿಡಿದು ಚಾರು ಸಖಿಯಲ್ಲಿ 1 ಚಂದ್ರವದನೆಯ ಬಹಳ ಛಂದಾದ ಮುಖನೋಡಿ ಚಂದ್ರಮನು ಇದುಕಾಂತಿ ನಂದು ಒಯ್ದಳು ಈಕೆ ಮುಂದಿವಳನೊಯ್ಯಬೇಕೆಂದು ಕುಚಗಳ ಕಂಡು ಇಂದ್ರ ತಾ ಯನ ನಾ ಗೇಂದ್ರನ ಶಿರವೆಂದ ಮುಂದದರ ಸೊಂಡೆ ಇದು ಯೆಂದು ಕರಗಳಿಗೆಂದಾ ಮಂದಗತಿ ಮತ್ತಾದರರಿಂದ ನಡಗಿಯ ಕಂಡು ಸುಂದರಿಯ ಆಹುಬ್ಬು ಕರಿದರ್ಪ ತಾ ಕಂಡು 2 ಎರಳೆ ನೋಟವ ಕಂಡು ಎರಳೆವಾಹನ ನುಡಿದ ಯರವಿಂದವಯವಕ್ಹಿಗ್ಗಿ ಹೊರಳು ವಳು ಯಂತೆಂದು ಕೊರಳವನು ಕಂಡು ಹರಿ ಕರದಲೊಪ್ಪುವಯೆನ್ನ ವರಪಾಂಚಜನ್ಯವಿದು ಸರಿಯೆಂದು ನುಡಿದಾ ಗುರುಳು ಗೂದಲದವಳ ಹೆರಳವನು ನೋಡಿಹರಿ ಇರುಳ ಮಲಗುವಯನ್ನ ಸರಳ ಹಾಸಿಗೆಯೆಂದು ಸುರರು ಎಲ್ಲರು ಪರಿ ಪರಿಯಿಂದ ನುಡಿದರನುಸರಿಸಿಯಿದರಂತೆ 3 ಪದ ಮುಂದೆ ಆ ಪಾರ್ವತಿ ಬಂದು ಕುಳಿತಳಲ್ಲೆ ಬಂದ ಶಿವನು ತಾ ಬಾಲಕನಾಗಿ 1 ಲೀಲೆಯಿಂದಲಿ ತೊಡೆಯ ಮೇಲೆ ಮಲಗಿದನಾಗ ಬಾಲೆ ಹೀಗೆಂದಳು ಎಲ್ಲರಿಗೆ 2 ಮುನ್ನೆತ್ತಿದವರಿಗ್ಹಾಕುವೆ ಮಾಲೆ 3 ಅಂದಮಾತನು ಕೇಳಿ ಇಂದ್ರ ಬಂದನು ಆಗ ಮುಂದೆ ಆ ಬಾಲನೆತ್ತುವೆನೆಂದು4 ಚನ್ನಿಗನಂತಾದ್ರೀಶನ ಹಿಂದಕೆ ಮಾಡಿ ಸಣ್ಣ ಬಾಲನ ತಾ ಮುಂದಕೆ ಕರೆದಾ 5 ಪದ ಸಣ್ಣಬಾಲನೇ ಬಾರೋ ಹಣ್ಣು ಕೊಡುವೆ ನಿನಗಿನ್ನು ಕೈತಾರೋ ಪ ಚಂಡು ಬೊಗರಿ ಗೋಲಿಗುಂಡು ನಾ ಕೊಡುವೆ ಬೆಂಡು ಬತ್ತಾಸವ ಕೊಂಡು ನಾ ಕೊಡುವೆ 1 ಚಿಣಿಕೋಲು ಮತ್ತೆ ಈಕ್ಷಣ ತಂದು ಕೊಡುವೆ ಮನಸಿಗೊಪ್ಪುವ ಚಿಂತಾಮಣಿ ತಂದು ಕೊಡುವೆ 2 ನಡಿಯೋ ನಿನಗೆ ದೊಡ್ಡ ಗುಡಿಯ ತೋರಿಸುವೆ ಒಡೆಯ ನಂತಾದ್ರೀಶನಡಿಯ ತೋರಿಸುವೆ 3 ಪದ್ಯ ಮತ್ತೇ ಮತ್ತೀಪರಿಯ ಒತ್ತಿ ಒದರಿದರೇನು ವ್ಯರ್ಥ ಬಾಲನು ಕಣ್ಣೆತ್ತಿ ನೋಡಲುವಲ್ಲ ಒತ್ತಿ ತೋಳುಗಳ್ಹಿಡಿದು ಎತ್ತಿನೋಡಿದನಾಗ ಯತ್ನದಿಂದಲ್ಲಿಯೆ ತಿತ್ತಿದಮ್ಮನೆ ದಣಿದು ಮತ್ತ ದೇವೇಂದ್ರ ಬಲು ಮೆತ್ತಗಾದ ವ್ಯರ್ಥ ಈ ಬಾಲಕನ ಎತ್ತಿ ನಗೆಗೀಡು ಈವತ್ತು ಆಯಿತು ಎಂದು ವೃತ್ರಾರಿ ತಾ ಮುಂದೆ ಅತ್ಯಂತ ಕೋಪದಲಿ ಎತ್ತಿದನು ವಜ್ರವನು ಎತ್ತಿದಾ ಕೈಬರದೆ ಮತ್ತಲ್ಲಿ ನಿಂತಿಹುದು ಚಿತ್ರದಲ್ಲಿಯ ಗೊಂಬೆ ಹಸ್ತದಂತೆ 1 ಪದ ಆಯಿತು ಈ ಪರಿಯು ದೇಹಕೆ ಆಯಾಸವೇ ಸರಿಯ ಪ ಮತ್ತೆ ಅಗ್ನಿಯು ಅಲ್ಲೆ ಬಾಲನ ಎತ್ತದೆ ದಣಿವುತಲೆ ಶಕ್ತಿ ಎತ್ತಿದ ಮೇಲೆ ಮತ್ತಾ ಶಕ್ತಿ ನಿಂತಿತು ಅಲ್ಲೆ1 ದಂಡಧರನು ಆಗ ಯೆತ್ತದೆ ಭಂಡಾದನು ಬೇಗ ದಂಡ ನೆತ್ತಿದನಾಗ ಎತ್ತಿದ ದಂಡ ನಿಂತಿತುಹಾಗೆ 2 ಮತ್ತೆ ನೈರತಿ ಅಲ್ಲೆ ಬಾಲನ ಎತ್ತದೆ ದಣಿವುತಲೆ ಕತ್ತಿಯೆತ್ತಿದ ಮೇಲೆ ಮುಂದಾ ಕತ್ತಿನಿಂತಿತು ಅಲ್ಲೆ 3 ಪಾಶಧರನು ಆಗ ಬಹು ಕಾಸೋಸಿ ಬಿಟ್ಟು ಬೇಗ ಪಾಶವೆತ್ತಿದನಾಗ ಮುಂದಾ ಪಾಶನಿಂತಿತು ಹಾಗೆ 4 ವಾಯು ಬಂದನಲ್ಲೆ ಬಳಲಿದ ಕಾಯಕ್ಲೇಶದಲ್ಲೆ ಕಯ್ಯನೆತ್ತಿದ ಮೇಲೆ ಮತ್ತಾಕೈಯು ನಿಂತಿತು ಅಲ್ಲೆ 5 ಸತ್ವರ ಬರವುತಲೆ ಕುಬೇರ ನಿಸ್ಸತ್ವನಾದನಲ್ಲೆ ಶಸ್ತ್ರಯೆತ್ತಿದ ಮೇಲೆ ಮುಂದಾ ಶಸ್ತ್ರ ನಿಂತಿತು ಅಲ್ಲೆ 6 ಶೂಲಧರನು ಅಲ್ಲೆ ಮತ್ತಾ ಬಾಲನಯೆತ್ತದಲೆ ಶೂಲನೆತ್ತಿದ ಮೇಲೆ ಮುಂದಾಶೂಲ ನಿಂತಿತು ಅಲ್ಲೆ7 ಬುಧಜನಕನು ಅಲ್ಲೆಬರವುತ ಗದಗದ ನಡುಗುತಲೆ ಗದೆಯನೆತ್ತಿದ ಮೇಲೆ ಮುಂದಾಗದೆಯು ನಿಂತಿತು ಅಲ್ಲೆ8 ಗೋಣನಲ್ಲಾಡುವ ತಲೆಯತ್ತಿದ ಹರಿ ತಾನು ಚಕ್ರವು ಮೇಲೆಖೂನದಿ ಅದು ಅಲ್ಲೆ ಆಯಿತು ಗೋಣವು ತಿರುವುತಲೆ 9 ಅಲ್ಲೆ ಪೂಷಣ ಬೇಗ ಕರಕರ ಹಲ್ಲು ತಿಂದನಾಗ ಹಲ್ಲು ಬಿದ್ದವಾಗ ತೋರಿದ ಎಲ್ಲ ದೇವತೆಗಳಿಗೆ 10 ಕೂಸನೆತ್ತದಾಗಿ ಎಲ್ಲರು ಮೋಸವಾದರು ಹೋಗಿ ಆ ಸ್ವಯಂವರಕಾಗಿ ಅನಂತಾದ್ರೀಶನ ಸಹಿತಾಗಿ 11 ಪದ್ಯ ಅಂಬುಜೋದ್ಭವ ತಾನು ಸ್ತಂಭಿತಾಗಿಸುರ ಕ ದಂಬವನು ಕಾಣುತಲೆ ಸಾಂಬನ ಮಹಿಮೆಯಿದು ಅಂಬಿಕೆಯ ತೊಡೆಯ ತಲೆಗಿಂಬು ಮಾಡಿಹ ಬಾಲ ಸಾಂಬನಿವನಹದೆಂದು ಸಂಭವಿಸಿದಾಗ ನಂಬಿ ಸ್ತುತಿ ಮಾಡಿದನು ಸ್ತಂಭೀತರು ಎಂದೆನಿಸಿ ಕೊಂಬುವರು ಎಲ್ಲಾರು ನಂಬಿ ಸ್ತುತಿಸಿದರು ಆ ಸಾಂಬಗೀಪರಿಯು ಪದ ಸಾಂಬಸದಾಸಿವನೆ ರಕ್ಷಿಸು ಬಾಲಕನೇ ಸಾಂಬಸದಾಶಿವನೆಂಬುವ ಬಾಲಕ ನೆಂಬುವದರಿಯದೆ ಸ್ತಂಭಿತರಾದೆವು ನಂಬಿಗೆ ತಿಳಿಯದೆ ನಂಬಿದೆವೋ ಜಗ ದಂಬೆಯ ತೊಡೆ ತಲೆ ಗಿಂಬು ಇಟ್ಟವನೆ ಪ ಪಟುತರನಾದಂಥವನೆ ತಿಳಿಯದೋ ನಿನ್ನ ಘಟಿತ ಘಟನೆ ಹರನೆ ಸ್ಫಟಿಕ ಸನ್ನಿಭ ಧೂರ್ಜಟಿಯೆ ನಿನಗೆ ಸಂ ಘಟಿತಳಾದ ಈ ಕುಟಿಲ ಕುಂತಳೆಯು ಹಟದಲಿ ಗೆಲವುದುವ ಹಟವೊಂದಿದು ಈ ಸ್ಪುಟವಾಯಿತು ಸಂಕಟ ಪರಿಹರಿಸು 1 ಸರ್ವರನೆಲ್ಲಾ ತರಿಸಿ ಸರಸ ಮಾಡಿದೆಯೊ ಗರ್ವವ ಪರಿಹರಿಸಿ ಉರ್ವಿಯೊಳಗೆ ನಿನಗಿರ್ವರಾರು ಸರಿ ಸರ್ವರನ್ನು ಮೀರಿರುವ ದೇವನೆ ಸರ್ವಪ್ರಕಾರದಿ ಸರ್ವರ ಅವಯವ ಪೂರ್ವದಂತಾಗಲಿ ಪಾರ್ವತಿಪ್ರಿಯನೇ 2 ಭೋ ಶಿಶುವರ ರೂಪ ಬೇಗನೆ ಬಿಡು ಈ ಸಮಯಕ್ಕೆ ಕೋಪ ಈ ಶಶಿವದನೆಯ ಆಶೆಗೆ ವ್ಯರ್ಥದಿ ಮೋಸಹೋಗಿ ಕಾಸೋಸಿ ಬಟ್ಟೆವು ಘಾತಿ ಮಾಡಬೇಡಾಸೆಯ ಪೂರಿಸು ಶ್ರೀ ಅನಂತಾದ್ರೀಶ ಪ್ರಿಯನೆ 3 ಪದ್ಯ ವಿರಳಾಟ ಈ ಸ್ತುತಿಗೆ ಮರುಳಾಗಿ ತಾನು ಗರಳ ಗೊರಲಿಸಾ ಮೂರುತಿಯ ಸರಳ ಮಾಡೆಲ್ಲವರು ಗುರುಳು ಗೂದಲದವ ಸರಳಾದವ ತೊಡೆಯಲ್ಲಿ ಹೊರಳೆದ್ದು ತೋರಿಸಿದ ಸರಳ ನಿಜರೂಪ ವಿರಳೆ ನೋಟದಲಿರುವ ತರಳೆ ಆ ಪಾರ್ವತಿಯು ಹೊರಳಿ ನೋಡುತಲೆದ್ದು ಹರಳಿನುಂಗರ ಕೈಯ್ಯ ಹೆರಳಿನೊಳಗಿರುವಂಥ ಅರಳಿದ್ಹೂವಿನ ದಿವ್ಯ ಸರಳ ಮಾಲೆಯ ಅವನ ಕೊರಳಿಗ್ಹಾಕಿದಳು 1 ಗಂಭೀರ ವಾದ್ಯಗಳೇಳು ಸಾರಿ ನುಡಿದವು ಆಗ ಸಾವಿರಬುಧರ ಎಲ್ಲ ವೃಷ್ಟಿಸೂರಿಮಾಡಿದರು ಚಾರ್ವನಂತಾದ್ರಿಯಲ್ಲಿರುವ ದೇವನ ಬಿಟ್ಟು ಸಾರ ಪರಮೇಶ್ವರಗೆ ಹಾರ ಹಾಕುವೆನೆಂಬ ಪಾರ್ವತಿಯ ಅಭಿಲಾಷೆ ಪೂರ್ಣವಾದಲ್ಲೆ ಸಂಪೂರ್ಣ ಸಾಂಬ ಮೂರುತಿಯ ದಯೆಯಿಂದ ಮೂರು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಂಬೆ ಶಿರಿ ವಿಹಾರಾ | ಜಗದಂಬೆ ಶಿರಿ ವಿಹಾರಾ | ಜಯ | ಶ್ರೀ ಬಿಂಬ ಪ್ರಾಣಾದಿ ರೂಪಿ ಬಹುರೂಪಿ ಪ ಜನಿತ ಪಾದ | ಶ್ರೀ ಕುಮದಾಪ್ತ ಕುಲಜ | ಭೋಸುದೀಪ್ತ ಅನಂತ ಅಚಿಂತ್ಯ 5Àುಹಿಮೋಪೇತ ಸುವ್ಯಾಪ್ತಅ.ಪ. ತುಂಬಿದಾಂಗ | ಸಿಂಧುಜೆ ಶಿರಿ ಸು | zs5iÁ | ಪ್ರತಿಬಿಂಬ ನೆನಿಪ | ಜಂಭಾರಿಯಾ | ಪ್ರೇಮಾ | ಸ್ಪದಕಂಬುಧರ ಘನ | ಶ್ಯಾಮಾ ವರ್ಣ ಸ | ನ್ನಾಮಾಜಾಂಬೂನದ | ದಾಮಧರ ಸು | ವೇಷಾ | ದು-ರ್ಗಾಂಬೆ ರಮಣ | ಭಕುತ ಸಂ | ತೋಷಾ | ನೀ-ಲಾಂಬುದಾಭ | ಸತಿರಕ್ಷಕ | ದಯೆ ಭೂಷಾ | ಭೂಮಾಂಬೆ ಸುತನ | ಹರಣ ಹರ ಸು | ವಿಶೇಷಾ | ಶ್ರೀಅಂಬುಜನಾಭ ಗೋವಿಂದ | ಅಂಬೆಯ ಅಗ್ರಜ ಮುಕುಂದನಂಬೀದವರನು ಕಾವ | ಗುರು ಗೋವಿಂದ ವಿಠಲ 1
--------------
ಗುರುಗೋವಿಂದವಿಠಲರು
ಆನಂದಾನಂತ ವಿಠಲ ನೀನಿವನ ಸಲಹೊ ಪ ಜ್ಞಾನಿಜನ ಸುಪ್ರೀಯ ನೀನೆಂದು ಭಿನ್ನವಿಪೆ ಅ.ಪ. ಪ್ರಾಚೀನ ದುಷ್ಕರ್ಮ ನಿಚಯದಿಂದಲಿ ಬಳಲಿಸ್ವೋಚಿತ ಸುಕರ್ಮಕ್ಕೆ ಅವಕಾಶ ವಿರದೇ |ವಾಚಿಸುತಲೀ ನಿನ್ನ ನಾಮಾಮೃತವ ಸವ್ಯಸಾಚಿ ಸಖನೇ ನಿನ್ನ ಮೊರೆಯ ಹೊಕ್ಕವನಾ 1 ಕರ್ಮ ಆಧೀನ ನಿನದಲ್ಲೆ |ನೀದಯದಿ ಸಂಚಿತವ ಮೋದದಲಿ ಕಳೆದು |ವೇದಗಮ್ಯನೆ ಹರಿಯೆ ಭೇದಮತ ಸುಜ್ಞಾನ ಭೋದಗೈವುದು ಎಂದು ಪ್ರಾರ್ಥಿಸುವೆ ನಿನ್ನಾ 2 ಮಂತ್ರನಿಲಯರ ನಿರುತ ಸ್ವಾಂತದಲಿ ಭಜಿಸುತ್ತಸಂತ್ರಸ್ತಸಜ್ಜನರ ಪೊರೆಯೆ ಮೊರೆಯಿಡುತ |ಭ್ರಾಂತ ಮಾಯಾತ್ಮ ತೊರೆದು ಅಂತರಂಗದಿ ಮಧ್ವಅಂತರಾತ್ಮನ ಭಜಿಪ ಸಂತದಾಸನ್ನಾ 3 ಅಂಬರ ಸುವಾಣಿಯಿಂದಂಬೆ ರಮಣನು ರುದ್ರಬಿಂಬ ನರಹರಿ ನೀನೆ ಇಂಬಿನಂಕಿತವನಂಬಿ ಬಂದಿಹಗಿತ್ತು ಸಂಭ್ರಮದಿ ಕರುಣಿಸಿಹೆಬಿಂಬ ಕ್ರಿಯ ಸುಜ್ಞಾನ ತುಂಬು ಇವನಲ್ಲೀ 4 ದೋಷದೂರನೆ ಹರಿಯೆ ದಾಸನ ಸದ್‍ಹೃದಯ ದಾಶಯದಿ ತವರೂಪ ಲೇಸು ತೋರೆಂಬಾ |ಮೀಸಲು ಪ್ರಾರ್ಥನೆಯ ಸಲಿಸೆಂದು ಭಿನ್ನವಿಪೆವಾಸುಕೀ ಶಯನ ಗುರು ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಕಮಲ ಸಂಭವೆ ಹಿಮನಗಜಾರಮಣ ಸನ್ನುತೆ ತಮರಿಪು ಶತ ಸಮಸನ್ನಿಭೆ ಇಭ ಇಂದಿರೆ ಶೋಭಾನೆ ಪ ಶೃಂಗಾರ ತರಂಗ ಹೆಳಲಾ ಬಂಗಾರವ ಪೊಂಗ್ಲಾದಿಗೆ ಬಲಿ ವಂಗನೆ ಶಿರೋಮಂಗಳ ಮಡಿ ಜಡ ಜಂಗಮ ವ್ಯಾಪ್ತಿ ಅಂಗಜ ಶರ ಕಂಗಳೆ ದ್ವಿಜೋ ತ್ತುಂಗಮ ರಂಗನ ನಿಜ ಅ ರ್ಧಾಂಗಿನಿಯೆ ಬಾ ಹಸಿಯ ಜಗುಲೀಗೆ 1 ಪೊಸುಕುಸುಮ ಶಿರಸದಲೊಪ್ಪುವ ನೊಸಲಲಿ ರಂಜಿಸುವ ಕಸ್ತೂರಿ ದಿಶದುಂಬಿದ ಬಿಸಿಜಾನನ ಪ್ರಭೆ ಎಸೆವ ಕಂಧರ ಕಕ್ಕಜ ಕುಚಕು ಪ್ಪುಸದಲ್ಲತಿ ಶೋಭಿಸುತಿಹ ಪವಳ ದಾ ಸರವ ತೂಗುವ ಅಸಮೇ ಬಾ ಹಸೆಯ ಜಗುಲೀಗೆ 2 ಕರಿಸೊಂಡಿಲುತೆರ ಚತುರಕರ ವರ ಅಭಯಸರಸಿಜಯುಗಧರ ಜಠರಾ ವರತ್ರಿವಳಿ ಗಂಭೀರನಾಭಿ ಕ ಟಸೂತರೆ ಹೇಮಾಂಬರೆ ಚರಣಂದಿಗಿ ಸಪಳಿ ಪೊಂಗೆಜ್ಜೆಯಾ ಮೆರೆಯುತ ಸರಸಳೆ ಬಾಹಸಿಯ ಜಗುಲೀಗೆ 3 ಮೃಗಲಾಂಛನೆ ಮಿಗೆ ಶೋಭಿಪ ಪದ ನಖ ಪಂಕ್ತಿಗಳೊಪ್ಪುವ ಗತ ಅಗಣಿತ ಮಹಿಮಳೆ ಸುಗುಣ ಸಂಪನ್ನೆ ಭಗವಂತನ ಜಘನದಿ ಪೊಳೆಯುತ ಖಗರಾಜನ ಪೆಗಲನೇರಿ ಅಮ ರ ಗಣವ ಚಿರ ಬಾ ಹಸಿಯ ಜಗಲೀಗೆ 4 ಅಂಭೃಣಿ ಸ್ವಾಯಂಭೂ ಸುರ ನಿಕು ರುಂಬಕರ ಅಂಬುಜ ಪೂಜಿತೆ ನಂಬಿದ ಜನರ್ಹಂಬಲಿಸುವ ಫಲ ಸಂಭ್ರಮದಿ ಕೊಡುವಾ ಗಂಭೀರಾ ಸು ಖಾಂಬೋಧಿ ಹರಿ ನಿತಂಬೆ ಪ ಯಾಂಬೋಧಿ ಸುತೆ ಜಗದಂಬೆ ಬಾ ಹಸಿಯ ಜಗುಲೀಗೆ 5 ಮಾಯೆ ನಾರಾಯಣಿ ಶ್ರೀ ಭೂ ಕೃತಿ ಆಯತಾಕ್ಷಳೆ ಕಾಯಜನ ತಾಯೆ ಶರಣೆ ಪ್ರಿಯ ಪಾವನ್ನೆ ವಾಯುಭುಕು ಶಾಯಿ ಅಮರಾಧೇಯಾ ಜಗನ್ನಾಥವಿಠಲನ ಜಾಯೆ ಬಾ ಹಸಿಯ ಜಗುಲೀಗೆ 6
--------------
ಜಗನ್ನಾಥದಾಸರು
ಕುಂದಣಾರುತಿ ತಾರೆ ಸಖಿ | ಸಿಂಧುನಂದನೆಗಿಂದು ಮುಖಿ ಪ ವಿಧಿ ಮಾತೆಗೆ ವರದಾತೆಗೆ | ಕೃತಿಲೀಲೆ ನುತಿನೀಲೆ ರುಕ್ಮಿಣಿಗೆ 1 ಜಂಭಾರಿ ವಂದಿತೆ ಶ್ರೀರಂಬೆಗೆ ಜಗದಂಬೆಗೆ | ಸುನೀತಾಂಬೆಗೆ | ಅಂಬುಜ ಮಂದಿರ ಅಂಭ್ರಣಿಗೆ 2 ಶ್ರೀ ಶಾಮಸುಂದರನರ್ಧಾಂಗಿಗೆ ಶುಭಾಂಗಿಗೆ | ದಯಾಪಾಂಗೆಗೆ | ಭೂಸುರ ಸುಚರಿತ ಭಾರ್ಗವಿಗೆ 3
--------------
ಶಾಮಸುಂದರ ವಿಠಲ
ಜಯ ಜಯತು ಕಾಮಾಕ್ಷಿ ಜಯ ಜಯ ವಿಶಾಲಕ್ಷಿ ಪ ಜಯ ಜಯತು ಮೀನಾಕ್ಷಿ ಜಯತು ಹರಿಣಾಕ್ಷಿ ಅ.ಪ ಸತಿ ಜಯ ಕೃಪಾಪೂರ್ಣಾಕ್ಷಿ ಜಯ ಜಯತು ಕಮಲಾಕ್ಷಿ ಜಯ ಚಂಚಲಾಕ್ಷಿ 1 ಜಯ ಜಯ ಸ್ವರ್ಣಾಂಬೇ ಜಯತು ಚಾಮುಂಡಾಂಬೆ ಜಯತು ಜಯ ಜಗದಂಬೆ ಜಯತು ದುರ್ಗಾಂಬೆ 2 ಜಯತು ಜಯ ಶಶಿಬಿಂಬೆ ಜಯತು ವರ ಗಿರಿಜಾಂಬೆ ನಿತ್ಯ ಶುಭ ಮಂಗಳಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತೋರಿಸೋ ಶ್ರೀಹರಿ ನಿನ್ನ ತೋರಿಸೋ ಪ ತೋರಿಸೋ ಹರಿ ವಿಶ್ವಮಯ ನಿನ್ನರೂಪವ ತಾರಿಸೋ ಭವಸಾಗರದಿಂದಲೆನ್ನನು ಅ.ಪ ಜಲ ಭೂ ಖೇಚರ ಪ್ರಾಣಿವರ್ಗಗಳೊಳು ನೆಲಸಿ ಅವ್ಯಕ್ತನಾಗಿಹ ನಿನ್ನ ರೂಪವ 1 ತೃಣ ಲತೆ ತರು ವನಸ್ಪತಿ ವರ್ಗಗಳೊಳು ಅಣಗಿ ಅವ್ಯಕ್ತನಾಗಿಹ ನಿನ್ನ ಮೂರ್ತಿಯ2 ಪಂಚಭೂತ ತನ್ಮಾತ್ರಂಗಳೊಳಡಗಿ ಪ್ರ ಪಂಚಕವ್ಯಕ್ತನಾಗಿಹ ನಿನ್ನ ಮೂರ್ತಿಯ 3 ಭೂತಜಾಲದ ಹೃತ್ಪೀಠದಿ ಮಂಡಿಸಿ ರಥಿಕನಾಗಿ ದೇಹರಥವ ಚಾಲಿಪ ನಿನ್ನ 4 ತಾರಾಗಣದಿ ಚಂದ್ರ ಸೂರ್ಯಾದಿಗ್ರಹ ಪರಿ ವಾರದೊಳಡಗಿ ಜ್ಯೋತಿರ್ಮಯನಹ ನಿನ್ನ 5 ತಳಿರೆಲೆ ಹೂ ಹೀಚು ಕಾಯಿ ಧಾನ್ಯಂಗಳ ಬೆಳೆಸಿ ಶೋಭಿಪ ದಿವ್ಯ ವಿವಿಧರೂಪಂಗಳ 6 ಅಂಗ ಪ್ರತ್ಯಂಗ ಕರಣಗಳೊಳಡಗಿಹ ಮಂಗಳಮಯ ಚತುರ್ಮೂರ್ತಿಗಳಿರವನು 7 ಅಜಭವ ಸುರಮುಖ್ಯ ದೇವಗಣದೊಳಿಪ್ಪ ಸುಜನರಂತರ್ಯಾಮಿ ಚರಪ್ರತಿಮೆಗಳನ್ನು 8 ಅಂಬುಜಾಂಬಕಿ ಜಗದಂಬೆ ಸಿತಾಪತಿ ಬಿಂಬಮೂರುತಿ ರಘುರಾಮವಿಠಲ ನಿನ್ನ9
--------------
ರಘುರಾಮವಿಠಲದಾಸರು
ದಯಮಾಡು ದಯಮಾಡು ಶಾರದಾಂಬೇ ನಯ ನೀತಿ ಕಲೆ ಭಾಗ್ಯ ಘನ ಕುಟುಂಬೇ ಪ ಜಯ ವಿಜಯ ಯಶಭೋಗ ಶ್ರೀಕರಾಂಬೇ ಭಯ ಭೀತಿ ಪರಿಹಾರೆ ವರಕದಂಬೆ ಅ.ಪ ಫಣಿ ಕಲ್ಯಾಣಿ ಸರಸಗುಣಿ ಗೀರ್ವಾಣಿ ವೀಣಾಪಾಣಿ 1 ಸಾರತರ ಶುಕವಾಣಿ ನೀರೇಜ ಮೃದುಪಾಣಿ ಭೂರಿದಯೆ ಸುಶ್ರೋಣಿ ದೇವಿ ಶುಭವಾಣಿ 2 ಸಕಲ ಲೋಕಖ್ಯಾತೆ ಸಕಲ ಜಗಸನ್ನುತೇ ಸಕಲ ಜಗವಂದಿತೇ ಸಕಲ ಶುಭಗೀತೇ ಸಕಲ ವೈಭವದಾತೇ ಸಕಲ ಸದ್ಗುಣ ಲಸಿತೇ ಸಕಲ ಸನ್ನುತೇ ಮಾಂಗಿರೀಶ ವಿನುತೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಂಬಿದೆನು ಜಗದಂಬೆ ನಿನ್ನನು ಪಾಲಿಸು ಸರ್ವಾ- ರಂಭಸೂತ್ರಳೆ ಇಂಬುದೋರಿನ್ನು ಪ. ಅಂಬುಜಾಂಬಕಿ ಶುಂಭಮರ್ದಿನಿ ಕಂಬುಗ್ರೀವೆ ಹೇರಂಬ ಜನನಿ ಶೋ- ಣಾಂಬರಾವೃತೆ ಶಂಭುಪ್ರಿಯೆ ದಯಾ- ಲಂಬೆ ಸುರನಿಕುರುಂಬಸನ್ನುತೆ ಅ.ಪ. ಕ್ರೂರದೈತ್ಯವಿದಾರೆ ಮಹದಾಕಾರೆ ಮಂಗಲೇ ವಿಶ್ವಾ- ಧಾರೆ ಕಲ್ಮಷದೂರೆ ಕದನಕಠೋರೆ ನಿಶ್ಚಲೆ ಪಾರಾ- ವಾರ ಸಮಗಂಭೀರೆ ಸುಗುಣವಿಹಾರೆ ನಿರ್ಮಲೆ ರತಿಶೃಂ- ಗಾರೆ ರಿಪುಸಂಹಾರೆ ತುಂಬುರು ನಾರದಾದಿಮುನೀಂದ್ರ ನುತಚರ- ಸೂರಿಜನ ಸುಮನೋರಥಪ್ರದೆ 1 ವಿಶಾಲಸುಗುಣಯುತೆ ಮುನಿಜನ- ಲೋಲತರುಣಮರಾಳೆ ಸಚ್ಚರಿತೆ ನವಮಣಿ ಮಾಲೆ ಮನ್ಮಥಲೀಲೆ ರಿಪುಶಿರಶೂಲೆ ಸಚ್ಚರಿತೆ ಹಿಮಗಿರಿ- ಬಾಲೆ ನೀಲತಮಾಲವರ್ಣೆ ಕ- ರಾಳಸುರಗಿ ಕಪಾಲಧರೆ ಸುಜ- ನಾಳಿಪಾಲನಶೀಲೆ ಹಿಮಕರಮೌಳಿಶೋಭಿತೆ ಕಾಳಿಕಾಂಬಿಕೆÉ2 ಶೋಕಮೋಹಾನಾನೀಕದೂರೆ ಪಿನಾಕಿಸುಪ್ರೀತೆ ಕೋಟಿ ದಿ- ಪರಾಕು ಶರಣಜನೈಕಹಿತದಾತೆ ಸುರನರ- ಲೋಕಮಾತೆ ನಿರಾಕುಲಿತೆ ಸುವಿವೇಕಗುಣವ್ರಾತೆ ಮಾನಸ- ವಾಕುಕಾಯದಿಂದ ಗೈದಾ ನೇಕ ದುರಿತವ ದೂರಗೈದು ರ- ಮಾಳಕಳತ್ರನ ಪಾದಭಕುತಿಯ ನೀ ಕರುಣಿಸು ಕೃಪಾಕರೇಶ್ವರಿ3 ಈಶೆ ಪಾಪವಿನಾಶೆ ಮಣಿಗಣಭೂರಿಪ್ರದೆ ಶಕ್ತಿವಿ- ಲಾಸೆ ವಿಗತವಿಶೇಷೆ ಕೃತಜಯಘೋಷೆ ಸರ್ವವಿದೆ ಮನ್ಮನ- ದಾಸೆಗಳ ಪೂರೈಸು ಸಜನರ ಪೋಷೆ ಕುಂದರದೆ ಶಂಕರೋ- ಲ್ಲಾಸೆ ಯೋಗೀಶಾಶಯಸ್ಥಿತೆ ವಾಸವಾರ್ಚಿತೆ ಶ್ರೀಸರಸ್ವತಿ ದೋಷರಹಿತೆ ಮಹೇಶೆ ಸುಗುಣರಾಶಿ ಸುರತತಿದಾಸಜನಯುತೆ4 ಸಾಮಗಾನಪ್ರೇಮೆ ರಾಕ್ಷಸ ಭೀಮೆ ರುದ್ರಾಣಿ ಅರಳ- ಗ್ರಾಮದೇವತೆ ಕ್ಷೇಮದಾಯಿನಿ ತಾಮರಸಪಾಣಿ ಪಶುಪತಿ- ವಾಮಭಾಗ ಲಲಾಮೆ ಮಂಗಲಧಾಮೆ ಫಣಿವೇಣಿ ಜಯಜಯ ಶ್ರೀಮಹಾಲಕ್ಷ್ಮಿ ನಾರಾಯಣಿ ರಾಮನಾಮಾಸಕ್ತೆ ಕವಿಜನ- ಸೋಮಶೇಖರಿ5
--------------
ತುಪಾಕಿ ವೆಂಕಟರಮಣಾಚಾರ್ಯ
ನಮಿಸುವೇಂ ಜಗದಂಬೆ ನಿನ್ನಂ ಮುದದಿಂ ದೃಢದಿಂ ಮನವಾರೆ ನಾಂ ಪ ಉದಯಾದ್ರಿಯೊಳುದಿಸಿದ ನಾರೈ ಮನಿದೆ ಬಂದೇಂ ಬಳಿಸಂದೇಂ ಪದುಳದಿ ನಿಂದೇಂ ಅ.ಪ ಮೂಡಿದ ಕತ್ತಲೆಯೋಡಿÉಸಿ ಭರದಿಂ ನೋಡೆಚಿರಂ, ನಾಡೆಜಗಂ ಬೆಳಗಲಿ ಬೆಳಕಿಂ 1 ಭಾಮಿನಿಯರು ಸದ್ಭಾವನೆಯಿಂದಲಿ ದೇವಿಯ ಸಂಸೇವಿಸಿವೊಲ್ ತಾ ವರವಂ2 ಶೇಷಗಿರೀಶನ ದಾಸರು ನಾವೆನೆ ಭಾಷಾನಿಧಿಯಂ ಬಲಗೊಂಡಾಂ ಬೇಡುತ ನಲವಿಂ3
--------------
ನಂಜನಗೂಡು ತಿರುಮಲಾಂಬಾ
ನಲಿದೈತಾರೆಂಬೆ ಹೇ ಜಗದಂಬೆ ನಾಂ ಬೇಡಿಕೊಂಬೆ ಪ. ಒಲಿದೈತರೆ ನೀ ನಲವೇರುತ ನಾ ನಲಿದಾರಾಧಿಪೆ ಎನ್ನೊಲಿದಂಬೇ ಅ.ಪ. ಸಿಂಧುನಂದನೆ ಅರವಿಂದನಯನೆ ಇಂದುಸೋದರಿ ಸಿಂಧುರಗಮನೆ ಸುಗುಣಾಭರಣೆ ವಂದಿಪೆ ಶರದಿಂದುವದನೆ ಸುರ ವಂದಿತಚರಣೆ 1 ಅಂದಿಗೆ ಕಾಲುಂಗುರ ಘಲಿರೆನೆ ಇಂದಿರೆ ತವಪದದ್ವಂದ್ವವ ತೋರಿ ವಂದಿಸುವೆನ್ನೀಮಂದಿರ ಮಧ್ಯದಿ ಎಂದೆಂದಿಗು ನೆಲೆಸಿರು ನಂದಿನೀ ಜನನೀ 2 ಕ್ಷೀರಾಂಬುಧಿ ತನಯೆ ಸೌಭಾಗ್ಯದ ನಿಧಿಯೆ ಕ್ಷೀರಾಬ್ಧಿಶಯನನ ಜಾಯೆ ಸಾರಸನಿಲಯೆ ವಂದಿಪೆ ತಾಯೆ ಬಾರೆಂದು ಕೈಪಿಡಿದೆಮ್ಮನು ಕಾಯಿ 3 ಸರಸಿಜಾಸನೆ ಸ್ಮರಮುಖ ಜನನಿಯೆ ಸುರನರಪೂಜಿತೆ ನಾರದ ಗೇಯೆ ಸಾರಗುಣಭರಿತೆ ಸರಸಿಜಪಾಣಿಯೆ ಶ್ರೀರಮಣೀ ಪರಿಪಾಲಿಸು ಜನನಿ 4 ಸೆರಗೊಡ್ಡಿ ಬೇಡುವೆ ಶ್ರೀನಾರೀ ನಿನ್ನೆಡೆ ಸಾರೀ ಪರತರ ಸುಖ ಸಂಪದವನು ಕೋರೀ ಪೊರೆ ಮೈದೋರಿ 5 ಪರಿಪರಿ ವಿಧದಾ ಸಿರಿಸಂಪತ್ತಿಯೋಳ್ ಗುರುದೈವಂಗಳ ಸೇವಾವೃತ್ತಿಯೋಳಿರೆ ಕರುಣಿಸು ದೃಢತರ ಭಕ್ತಿಯನೆಮಗೀಗಳ್ ವರಶೇಷಗಿರೀಶನ ಮಡದಿಯೆ ಮುದದೋಳ್ 6
--------------
ನಂಜನಗೂಡು ತಿರುಮಲಾಂಬಾ
ನಲಿನಲಿದು ಬಾ ತ್ರಿಜಗದಾಂಬೆ ಪ. ಮಾನಸದೊಳು ಸುಜ್ಞಾನಬೋಧಳಾಗಿ ಆತನದೇವಕದಂಬೆ ಅ.ಪ. ವಿದ್ಯಾ ಬುದ್ಧಿ ವಿನಯ ಮಂಗಳಗಳ ಸಾಧ್ವಿ ನಿನ್ನಲಿ ಬೇಡಿಕೊಂಬೆ 1 ನಲಿದೆನ್ನಯ ಜಿಹ್ವಾಗ್ರದಿ ನೆಲಸುತ ಸುಲಭದೋರೆಯೆ ಸುಲಲಿತವ ಶಿವೆ 2 ಧೀರ ಲಕ್ಷ್ಮೀನಾರಾಯಣಾಶ್ರಿತೆ- ಪರಮೇಷ್ಠಿಪರಿರಂಭೆ 3
--------------
ತುಪಾಕಿ ವೆಂಕಟರಮಣಾಚಾರ್ಯ