ಒಟ್ಟು 905 ಕಡೆಗಳಲ್ಲಿ , 62 ದಾಸರು , 868 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನ್ಯವನರಿಯೆನು ಮತ್ತೆಂದು ಅನ್ಯವ ಅರಿಯೆನುನಿನ್ನ ಕಾಂಬೆ ಕಂಡದನೆಲ್ಲ ನಿರ್ವಿಕಾರ ಬಗಳೆ ಕೇಳು ಪ ತನ್ನ ಹೆಂಡತಿಯನೀಗ ತನ್ನ ಸುತನು ರಮಿಸುತಿರಲುಭಿನ್ನದಿಂದ ಕಂಡೆನಾದರೆ ಮೆಚ್ಚಬೇಡಎನ್ನಲಿ ಇಚ್ಚೆ ಬೇಡ ಹೊನ್ನುರನ್ನವು ಮುಂದೆ ಇರಲು ಹರಿದುದಾದರೆಎನ್ನ ಚಿತ್ತ ನಿನ್ನ ಮೇಲೆ ಎನಗೆ ಆಣೆ ಸತ್ಯ-ವೆನ್ನು ಇದು ತಪ್ಪದೆನ್ನು 1 ಪಡೆದ ತಾಯಿ ತಾನು ಹೋಗಿಕಂಡವನ ಕೂಡುತಿರಲುಮಿಡುಕು ಹುಟ್ಟಿತಾದರೆ ನಾನು ಸತ್ಯ ಬಿಟ್ಟೆ-ನಾದರೆ ನೀನು ದೊರೆವುದೆಂತು ನಿನ್ನ ಕರುಣವೆಂತು2 ತಂದೆ ಕೆಡಹಿ ಕೊರಳನೀಗ ನಂದನನನು ಕೊರೆಯುತಿರಲುಎಂದೆನಾದರೆ ಮನದಿ ಇವನ ಜ್ಞಾನಿಯಲ್ಲವು ನಾನು ಏನು ಅಲ್ಲವುಸುಂದರವ ಚಿದಾನಂದ ಬಗಳೆ ಎಂದು ಕಾಣದಿರಲುಎಂದು ಎಂದಿಗೆ ನಿನ್ನ ಚರಣ ಭಕ್ತನಲ್ಲವುನಾನು ಮುಕ್ತನಲ್ಲವು 3
--------------
ಚಿದಾನಂದ ಅವಧೂತರು
ಉಗ್ರ ನರಸಿಂಹ ಜ್ವಾಲಾ ಉಗ್ರನರಸಿಂಹಶೀಘ್ರದಿ ಬಂದು ಪ್ರಹ್ಲಾದನ ಮೊರೆಯನುಕೇಳ್ವ ಅಸುರನ ಸೀಳ್ವಾ ಪ ಫಳ ಫಳಯೆನುತಾರ್ಭಟಿಸುತ ಕುಂಭದ ಲೊಡೆದು ಕೋಪವ ಝಡಿದು ಛಿಳಿ ಛಿಳಿಛಿಳಿರನೆ ಕಣ್ಣಲಿ ಕೆಂಗಿಡಿಯುಗುಳೇ ದಿವಿಜರು ಪೊಗಳೇಭಳಿ ಭಳಿ ಭಳಿರೆಂದಬ್ಬರಿಸುತ ದುಂದುಭಿ-ಯೊದರೇ ಅಸುರರು ಬೆದರೇಝಳಪಿಸಿ ಖಡುಗದಿ ರಕ್ಕಸ ಬಲವನು ತರಿದಾ ಶಿಶುವನು ಪೊರೆದಾ 1 ಭುಗು ಭುಗಲೆನೆ ನಾಸಿಕದಿ ಉಸುರ್ಹೊಗೆ ಹೊರಟು ಖಳನುದ್ದುರುಟುಜಿಗಿ ಜಿಗಿದವನನು ಕೆಡಹಿ ತೊಡೆಯೊಳಗಿಟ್ಟು ರೋಷವ ತೊಟ್ಟುಬಗೆದುದರವ ರಕ್ತವ ನೊಕ್ಕುಡಿತೆಯಲಿ ಸುರಿದು ತಾ ಚಪ್ಪರಿದುಸೊಗಸು ಉರಕೆ ಕರುಳ ಮಾಲೆಯ ಹಾಕಿದ ದೇವ ಭಕ್ತರಕಾಯ್ವ2 ಹಿರಣ್ಯಕಶಿಪನ ಹತ ಮಾಡಿದ ಭಕ್ತ ಪ್ರಹ್ಲಾದನಿಗೆ ಆಹ್ಲಾದದವರವನು ಪಾಲಿಸಿ ಸುರರನು ಪೊರೆದುಕರುಣದಿ ಸುರಿದು ಧರಣಿಯೊಳಗೆ ಪೆ-ಸರಾಗಿಹ ಅಹೋಬಲ ಸ್ಥಳದಿ ನೀನಾ ನೆಲದಿಗುರು ಚಿದಾನಂದ ಅವಧೂತರೆನಿಪ ದಾತಾ ಸಜ್ಜನ ಪ್ರೀತಾ 3
--------------
ಚಿದಾನಂದ ಅವಧೂತರು
ರಕ್ಷಿಸೊ ಎನ್ನ ರಕ್ಷಿಸೋ ಪ ರಕ್ಷಿಸು ಎನ್ನನು ಅಕ್ಷಯಗುಣಪೂರ್ಣ ಲಕ್ಷುಮಿರಮಣನೆ ಪಕ್ಷಿವಾಹನನೇ ಅ.ಪ ಪಾದವಿಲ್ಲದೆ ಜಲದೊಳು ಮುಳುಗಾಡಿ ವೇದಚೋರಕನನ್ನು ಸೀಳಿ ಬೀಸಾಡಿ ವೇದಾಚಲದೊಳು ನಿಂತು ಕೈ ನೀಡಿ ಸಾಧು ಸಜ್ಜನಪಾಲ ನೀ ದಯಮಾಡಿ 1 ವಾರಿಧಿ ಮಥನದಿ ಸುರರಿಗೆ ಒಲಿದು ಮೇರು ಮಂದರವನ್ನು ನೀ ಹೊತ್ತೆ ಒಲಿದು ವಾರಿಜಾಕ್ಷನೆ ವೈಕುಂಠದಿಂದಿಳಿದು ಊರಿದೆ ಚರಣವ ಗಿರಿಯೊಳು ನಲಿದು 2 ಧರಣಿಯ ಒಯ್ದ ದಾನವಗಾಗಿ ನೀನು ಹರಣದ ಸೂಕರನಂತಾದುದೇನು ಚರಣ ಸೇವಕರಿಗೆ ನೀ ಕಾಮಧೇನು ಕರುಣದಿ ಸಲಹೆನ್ನ ನಂಬಿದೆ ನಾನು 3 ತರಳನು ಕರೆಯೆ ಕಂಬದೊಳುದಿಸಿದೆಯೊ ದುರುಳ ದಾನವರ ಪ್ರಾಣವ ವಧಿಸಿದೆಯೊ ಕರಳಮಾಲೆಯ ಕೊರಳೊಳು ಧರಿಸಿದೆಯೊ ಮರಳಿ ಬಂದವ ಫಣಿಗಿರಿಯನೇರಿದೆಯೊ 4 ಕೋಮಲ ರೂಪದಿ ಭೂಮಿಯನಳೆದೆ ಆ ಮಹಾಬಲಿಯ ಪಾತಾಳಕ್ಕೆ ತುಳಿದೆ ಸ್ವಾಮಿ ಪುಷ್ಕರಣಿಯ ತೀರದಿ ಬೆಳೆದೆ ಪ್ರೇಮದಿ ಭಕ್ತರ ಕಾಮಿಸಿ ಪೊರೆದೆ 5 ತಾತನಪ್ಪಣೆಯಿಂದ ಮಾತೆಗೆ ಮುನಿದೆ ಜಾತಿಕ್ಷತ್ರಿಯರ ವಿಘಾತಿಸಿ ತರಿದೆ ನೂತನವಾಗಿಹ ನಾಮದಿ ಮೆರೆದೆ ಧಾತುಗೆಟ್ಟೆನು ಸ್ವಧೈರ್ಯಗಳಿರದೆ 6 ದಶರಥನುದರದಿ ಶಿಶುವಾಗಿ ಬಂದೆ ವಸುಮತಿ ತನುಜೆಯ ಕುಶಲದಿ ತಂದೆ ಅಸುರರ ಹೆಸರನುಳಿಸದೆ ನೀ ಕೊಂದೆ ಕುಸುಮನಾಭನೆ ಶೇಷಗಿರಿಯಲ್ಲಿ ನಿಂದೆ 7 ಮಧುರೆಯೊಳುದಿಸಿ ಗೋಕುಲದಲ್ಲಿ ಬೆಳೆದೆ ಉದಧಿಯ ಮಧ್ಯದಿ ದುರ್ಗವ ಬಲಿದೆ ಹದಿನಾರು ಸಾವಿರ ಸತಿಯರ ನೆರೆದೆ ಉದಯವಾದೆಯೊ ವೇದಗಿರಿಯೊಳು ನಲಿದೆ 8 ಶಶಿಮುಖಿಯರನು ಮೋಹಿಸುವಂಥ ಬಗೆಗೆ ವ್ಯಸನವ ಬಿಡುವುದುಚಿತವೇನೊ ನಿನಗೆ ವಸುಧೆಗುತ್ತಮವಾಗಿ ಎಸೆವಂಥ ಗಿರಿಯೊಳು ಹಸನಾಗಿ ನಿಂತಿಹ ಚರಣ ಸನ್ನಿಧಿಯೊಳು 9 ವಾಜಿಯನೇರಿಯೆ ನೇಜಿಯ ಪಿಡಿದೆ ಮಾಜುವ ಕಲಿಯನ್ನು ಕಡೆಯೊಳು ಕಡಿದೆ ಮೂಜಗದೊಡೆಯನ ಮನದೊಳು ಇಡುವೆ ಮಾಜ ಬೇಡೆಲೊ ವೇಂಕಟೇಶ ಎನ್ನೊಡವೆ 10 ಹತ್ತವತಾರದ ವಿಸ್ತಾರದಿಂದ ಕರ್ತು ವರಾಹತಿಮ್ಮಪ್ಪನು ನಿಂದ ಭೃತ್ಯವತ್ಸಲನಾಗಿ ಭೂಮಿಗೆ ಬಂದ ಅರ್ಥಿಯೋಳ್ಭಕ್ತರ ಸಲಹುವೆನೆಂದ 11
--------------
ವರಹತಿಮ್ಮಪ್ಪ
ರಂಗನಾಡಿದನೊ ಮನ್ನಾರಿ ಕೃಷ್ಣನಾಡಿದನೊ | ಶೃಂಗಾರದಿಂದ ಗೋಪಾಂಗನೆಯ ಕೂಡ | ತುಂಗ ವಿಲಾಸ ತಾ ರಂಗ ಕೇಳಿಯಲಿ | ಸಂಗೀತ ಪಾಡುತ ಸಾಂಗೋಪಾಂಗದಿಂದಾ ಪ ಹೊಳಿಯ ಜನಕೋಕುಳಿಯ ಕಲಿಸಿ | ಗೆಳೆಯರೊಂದಾಗೆ ಕಳೆಯೆವೇರುತ್ತ | ಅಳಿಯ ಗರುಳಬಲಿಯರರಸಿ | ಇಳಿಯಾಳಗೋಕುಳಿ ವಸಂತವಾ | ಹಳೆಯ ಬೊಮ್ಮನ ಬಳಿಯವಿಡಿದು | ಪಳಿಯ ಚಲುವ ತಿಳಿಯಗೊಡದೆ 1 ಸಕ್ಕರೆದುಟಿ ಹೆಮ್ಮಕ್ಕಳು ಯೆಲ್ಲರು | ನಕ್ಕು ಕೈಯ ಹೊಯಿದ | ಕ್ಕರದಿಂದ ತಾ | ವರ್ಕರಾಗಿ ನಿಂದೂ ತೆಕ್ರ್ಕೊರಂಗಯೆಂದು | ಜಿರ್ಕೊಳವಿಲಿಂದಲಿಕ್ಕಿದರು | ಸೊಕ್ಕಿದಾ ನೆಡಸಿ ಹೊಕ್ಕು ಎರಗಿದಂ | ತೊಕ್ಕಟರಾಗಿ ದೇವಕ್ಕಿ ತನುಜನ ಸಿಕ್ಕಿಸಿಕೊಂಡರು | ಅಕ್ಕಟಾಬ್ಜಗಬ್ಧಿ ಉಕ್ಕಿದಂತೆ ಮನ | ಉಕ್ಕುತಲಿ 2 ನಾರಿಯರಿಂದ ಉತ್ತರವ ಲಾಲಿಸಿ | ತುಂಬಿ ಅ | ಪಾರನಾರಿ ಪರಿವಾರದವರ ಶರೀರವ ಮೇಲೆ | ವಿ | ಸ್ತಾರವಾಗಿ ಕಾರಿ ವಾರಿದನು ನೀರೆರದಂತಾಗೆ | ಆರೊಂದು ಬುದ್ಧಿಗೆ ಮೀರಿತಿದೊ ಎಂದು | ವಾರುಣಿಪತಿ ಪಂಕೇರುಹಾಭವ ಕಂ || ದರವ ಬಾಗಿಸಿ ಸಾರಿದರು 3 ಮೃಗ ಧ್ವನಿದೆಗೆದು ಪಾಡಲು | ನಗ ಬೆವರಿ ಪನ್ನಂಗ ನೋಡಾಗಲು | ಅಗಣಿತ ಮುನಿ ಚಿಗಿದು ಪಾಡಲು | ನಗ ಬೆವರಿ ಪನ್ನಂಗ ನೋಡಾಗಲು | ಅಗಣಿತ ಮುನಿ ಚಿಗಿದು ಪಾಡಲು ಪೊಗಳ ಬಗೆಯಿಂದ | ಮಣಿ ತಾರೆಗಳು ಚಂದ್ರ ನಗುತ ತಮ್ಮ ಪಥಗಳು ನಿಲಿಸಿ | ಮಂಗಳಕರವ ಮುಗಿದು ಸೋಜಿಗ ಜಗದೊಳಗಿದು ಮಿಗಿಲೆನುತಲಿ 4 ದುಂದುಭಿ ಮೊರಿಯೆ ಧಂ ಧಂ ಧಳಾ ಎಂದು | ವೃಂದಾರಕ ವೃಂದ ಚಂದದಿ ಪೂಮಳೆಯಂದುಗರಿಯಲು | ಚಂದಣಗಂದಿಯ ಒಂದಾಗಿ ನಿಂದರು ವಂದಿಸುತ | ಮಂದಹಾಸನಖ ದುಂದುಭಿ ಓಕಳಿಂದಲೆರಾರೈಪಾ ಸಿಂಧು ಮೆರೆದ ನಾರಂದವರದ ವಿಜಯವಿಠ್ಠಲ | ಪುರಂದರದಾಸರ ಮುಂದಾಡಿz ||5
--------------
ವಿಜಯದಾಸ
ವಾರಿಜನಾಭನ ವನಜಾಂಘ್ರಿಗಳಿಗೆ ಕರವ ಕೊಂಡಾಡುವೆ ಪದವ 1 ದೇವದೈತ್ಯರು ಕೂಡಿ ಪಾಲಾಂಬುಧಿಯಲ್ಲಿ ಮೇರು ಮಂದರವ ಕಡೆಗೋಲು ಮಾಡಿದರು2 ವಾಸುಕಿ ಶರಧಿ ಮಧ್ಯದಲಿ ಹರಿ ಕೂರುಮನಾಗಿ ಮಂದರವನೆತ್ತಿದನು3 ಕಾಲಕೂಟ ವಿಷವಾಯು ಪಾನಮಾಡುತಲಿ ಮಹದೇವ ಕೋಪದಿ ನುಂಗಿ ನೀಲಕಂಠೆನಿಸೆ 4 ಕೌಸ್ತುಭ ಕಾಮಧೇನು ಸುರತರುವು ಹಸ್ತಿ ತೇಜಿಯು ಕಲ್ಪವೃಕ್ಷ ಸುಧೆ ಉದಿಸೆ 5 ಸಿಂಧು ಮಥನವ ಮಾಡಲು ಶ್ರೀದೇವಿ ಜನಿಸೆ ಮಂದಾರಮಾಲೆ ಕೈಯಿಂದಲಿ ಪಿಡಿದು 6 ಅರ್ಕಚಂದ್ರರ ಕಾಂತಿಗಧಿಕಾದ ಮುಖವು ದಿಕ್ಕು ದಿಕ್ಕಿಗೆ ಮಿಂಚಿನಂತೆ ಹೊಳೆಯುತಲಿ 7 ವಜ್ರಾಭರಣವು ಕಾಲಗೆಜ್ಜೆ ಸರಪಳಿಯು ಮಲ್ಲಿಗೆ ಕುಸುಮಗಳೊಂದೊಂದ್ಹೆಜ್ಜೆಗುದುರುತಲಿ 8 ಕುಡಿಹುಬ್ಬು ಕಡೆಗಣ್ಣ ನೋಡುತಲಿ ನಡೆದು ಬಂದಳು ತಾ ಬಡನಡುವಿನ ಒಯ್ಯಾರಿ 9 ಅತಿಹಾಸ್ಯಗಳಿಂದ ದೇವತೆಗಳ ಮಧ್ಯೆ ಈ ಪತಿ ಎಲ್ಲಿಹನೋ ತಾ 10 ಅರ್ಕನ್ವಲ್ಲೆನೆ ಅಗ್ನಿಯಂತೆ ಸುಡುತಿರುವನ ಶಕ್ರನ ಒಲ್ಲೆ ಮೈಯೆಲ್ಲ ಕಣ್ಣವಗೆ 11 ಸೋಮನ ಒಲ್ಲೆ ಕಳೆಗುಂದಿ ತಿರುಗುವನ ಪಾವನ ನಮ್ಮ ಗಾಳಿರೂಪದವನ12 ರುದ್ರನ್ವಲ್ಲೆನೆ ರುಂಡಮಾಲೆ ಹಾಕುವನ ಮುದಿಹದ್ದಿನಂದದಲಿ ಗರುಡ ಹಾರ್ಯಾಡುವನಲ್ಲೆ 13 ಶೇಷನ ಒಲ್ಲೆ ವಿಷದ ದೇಹದವನ ಗ- ಣೇಶನ್ವಲ್ಲೆನೆ ಡೊಳ್ಳು ಹೊಟ್ಟೆ ಗಜಮುಖನ 14 ಬ್ರಹ್ಮ ನಾಲಕು ಮೋರೆಗುಮ್ಮನಂತಿರುವ ಯಮ- ಧರ್ಮನ ಒಲ್ಲೆ ನಿಷ್ಕರುಣ ಘಾತಕನ 15 ಸುರಜನರ ನೋಡಿ ಗಾಬರ್ಯಾಗುವೆನು 16 ಮಂದ ಹಾಸ್ಯಗಳಿಂದ ಮಾತನಾಡುತಲಿ ಇಂದಿರೆಪತಿ ಪಾದಾರವಿಂದ ನೋಡುತಲಿ 17 ಗುಣದಲಿ ಗಂಭೀರ ಮಣಿಕೋಟಿತೇಜ ಎಣಿಕಿಲ್ಲದ ಚೆಲುವ ನೋಡೆನ್ನ ಪ್ರಾಣನಾಥ 18 ಹದಿನಾಲ್ಕು ಲೋಕ ತನ್ನುದರದಲ್ಲಿರುವ ಪದುಮಾಕ್ಷಗ್ವನಮಾಲೆ ಮುದದಿಂದ್ಹಾಕುವೆನು 19 ಕರ ವೈಜಯಂತಿ ಸರ ಮಣಿ ನಾ ಇರುತಿರೆ ವಕ್ಷಸ್ಥಳವು 20 ಶ್ಯಾಮವರ್ಣನ ಮುದ್ದು ಕಾಮನಜನಕ ಪ್ರೇಮದಿಂದ್ವೊಲಿವೆ ನಾ ಕಾಮಿಸಿ ಹರಿಯ 21 ಕಮಲಮುಖಿ ಬ್ಯಾಗ ಕಮಲಾಕ್ಷನ್ನ ನೋಡಿ ಕಮಲಮಾಲೆಯ ತಾ ಕಂದರದಲ್ಹಾಕಿದಳು 22 ಅಂಗನೆ ರಚಿಸಿ ತಾ ನಿಂತಳು ನಗುತ 23 ರತ್ನ ಮಂಟಪ ಚಿನ್ನ ಚಿತ್ರ ಪೀಠದಲಿ ಲಕ್ಷ್ಮೀನಾರಾಯಣರು ಒಪ್ಪಿ ಕುಳಿತಿರಲು 24 ಸಾಗರರಾಜ ತನ್ನ ಭಾಗೀರಥಿ ಕೂಡಿ ಸಿರಿ ಧಾರೆಯನೆರೆದ 25 ಅಚ್ಚುತ ಲಕುಮಿಗೆ ಕಟ್ಟಿದ ನಗುತ 26 ಮೇಲು ಕರಿಮಣಿ ಮಂಗಳ ಸೂತ್ರವ ಪಿಡಿದು ಶ್ರೀ ಲೋಲ ಲಕುಮಿಗೆ ತಾ ಕಟ್ಟಿದ ನಗುತ 27 ವಂಕಿ ಕಂಕಣ ಮುತ್ತಿನ ಪಂಚಾಳಿಪದಕ ಪಂಕಜಮುಖಿಗೆ ಅಲಂಕರಿಸಿದರು 28 ಸರಿಗೆ ಸರಗಳು ನಾಗಮುರಿಗೆ ಕಟ್ಟಾಣಿ ವರಮಾಲಕ್ಷುಮಿಯ ಸಿರಿಮುಡಿಗೆ ಮಲ್ಲಿಗೆಯ 29 ನಡುವಿನ್ವೊಡ್ಯಾಣ ಹೊಸ ಬಿಡಿಮುತ್ತಿನ ದಂಡೆ ಸಿರಿ ಪರಮಾತ್ಮನ ತೊಡೆಯಲ್ಲೊಪ್ಪಿರಲು 30 ಇಂದಿರೆ ಮುಖವ ಆ- ನಂದ ಬಾಷ್ಪಗಳು ಕಣ್ಣಿಂದಲುದುರಿದವು 31 ರಂಗನ ಕಂಗಳ ಬಿಂದು ಮಾತ್ರದಲಿ ಅಂಗನೆ ತುಳಸಿ ತಾನವತರಿಸಿದಳು32 ಪಚ್ಚದಂತ್ಹೊಳೆವೊ ಶ್ರೀ ತುಳಸಿ ದೇವಿಯರ ಅಚ್ಚುತ ತನ್ನಂಕದಲ್ಲಿ ಧರಿಸಿದನು 33 ಮಂಗಳಾಷ್ಟಕ ಹೇಳುತ ಇಂದ್ರಾದಿ ಸುರರು ರಂಗ ಲಕ್ಷುಮಿಗೆ ಲಗ್ನವ ಮಾಡಿಸಿದರು 34 ಅಂತರಿಕ್ಷದಿ ಭೇರಿನಾದ ಸುರತರುವು ನಿಂತು ಕರೆದಿತು ದಿವ್ಯ ಸಂಪಿಗೆ ಮಳೆಯ 35 ಲಾಜಾಹೋಮವ ಮಾಡಿ ಭೂಮವನುಂಡು ನಾಗಶಯನಗೆ ನಾಗೋಲಿ ಮಾಡಿದರು 36 ಸಿಂಧುರಾಜನ ರಾಣಿಗೆ ಸಿಂಧೂಪವನಿತ್ತು ಗಜ ಚೆಂದದಿ ಬರೆದು 37 ಚೆಲುವೆ ನೀ ಬೇಕಾದರೆ ಹಿಡಿಯೆಂದನು ರಂಗ 38 ಅಚ್ಚುತ ಎನ್ನಾನೆ ಲೆಕ್ಕಿಲ್ಲದ್ಹಣವ ಕೊಟ್ಟರೆ ಕೊಡುವೆನೆಂದಳು ಲಕ್ಷುಮಿ ನಗುತ 39 ತುಂಬಿ ಮರದ ಬಾಗಿನವ ಸಿರಿ ತಾ ಋಷಿಪತ್ನೇರನೆ ಕರೆದು40 ತುಂಬಿ ಮರದ ಬಾಗಿನವ ಹರದಿ ಕೊಟ್ಟಳು ತಾ ಋಷಿಪತ್ನೇರನೆ ಕರೆದು 41 ಕುಂದಣದ್ಹೊನ್ನಕೂಸಿನ ತೊಟ್ಟಿಲೊಳಿಟ್ಟು ಕಂದನಾಡಿಸಿ ಜೋಜೋ ಎಂದು ಪಾಡಿದರು42 ಕರಿ ಎಂದನು ರಂಗ 43 ಸುರದೇವತೆಗಳಿಗೆ ಸುಧೆ ಎರೆಯಬೇಕಿನ್ನು ಕರಿ ಎಂದಳು ಲಕ್ಷ್ಮಿ 44 ಹೆಣ್ಣನೊಪ್ಪಿಸಿಕೊಟ್ಟು ಚಿನ್ನದಾರತಿಯ ಕರ್ನೆ(ನ್ಯ?) ಸರಸ್ವತಿ ಭಾರತಿ ಬೆಳಗಿದರಾಗ 45 ಈರೇಳು ಲೋಕದೊಡೆಯನು ನೀನಾಗೆಂದು ಬಹುಜನರ್ಹರಸ್ಯೆರೆದರು ಮಂತ್ರಾಕ್ಷತೆಯ 46 ಪೀತಾಂಬರಧಾರಿ ತನ್ನ ಪ್ರೀತ್ಯುಳ್ಳಜನಕೆ ಮಾತುಳಾಂತಕ ಮಾಮನೆ ಪ್ರಸ್ತ ಮಾಡಿದನು 47 ಸಾಲು ಕುಡಿಎಲೆ ಹಾಕಿ ಮೇಲು ಮಂಡಿಗೆಯ ಹಾಲು ಸಕ್ಕರೆ ಶಾಖ ಪಾಕ ಬಡಿಸಿದರು 48 ಎಣ್ಣೋರಿಗೆ ಫೇಣಿ ಪರಮಾನ್ನ ಶಾಲ್ಯಾನ್ನ ಸಣ್ಣಶ್ಯಾವಿಗೆ ತುಪ್ಪವನ್ನು ಬಡಿಸಿದರು 49 ಏಕಾಪೋಶನ ಹಾಕಿದ ಶೀಕಾಂತಾಮೃತವ ಆ ಕಾಲದಿ ಸುರರುಂಡು ತೃಪ್ತರಾಗಿಹರು 50 ಅಮೃತ ಮಥನವ ಕೇಳಿದ ಜನಕೆ
--------------
ಹರಪನಹಳ್ಳಿಭೀಮವ್ವ
* ಇದೆ ಇದೆ ಉಡುಪಿಪುರ ನಮ್ಮ ಪದುಮನಾಭನು ನೆಲೆಸಿರುವ ಮಂದಿರ ಪ. ಬಂದ ಆಯಾಸಗಳೊಂದು ಕಾಣಿಸದಿನ್ನು ಸಿಂಧು ತಡಿಯಲಿಪ್ಪ ಪಟ್ಟಣ ನೋಡೆ ಸುಂದರ ಗೋಪುರ ಅಂದವಾಗಿಹ ಬೀದಿ ಬಂದೆವೆ ಗುರು ಹಿರಿಯರ ಕೃಪೆಯಿಂದ 1 ಮೊದಲೆ ತೋರುವುದು ಶ್ರೀ ರಾಘವೇಂದ್ರ ಮಠ ಅದರ ಬದಿಯಲ್ಲೆ ಕೃಷ್ಣಪುರ ಮಠವು ಅದರೆದರಲ್ಲೆ ಶಿರೂರು ಶ್ರೀಗಳ ಮಠ ಎದುರೆ ಕಾಣುವುದೆ ಕನಕ ಮಂಟಪವು 2 ಕಿಂಡಿಯಲ್ಲಿ ನೋಡಿ ಪುಂಡರಿಕಾಕ್ಷನ ಕಂಡು ವಂದಿಸಿ ಮಹಾದ್ವಾರಕೆ ಬನ್ನಿ ಮಂಡೆ ಬಾಗಿಸಿ ಬನ್ನಿ ಮಹಾಪ್ರದಕ್ಷಿಣಿಗಾಗಿ ಕಂಡು ಸಾಗಿರಿ ಮುಂದೆ ಕಾಣೂರು ಮಠವ 3 ಎರಡನೆಯ ಬೀದಿಯಲಿ ಬಲದ ಮಹಾದ್ವಾರ ಗಿರಿಜೆಯರಸ ಚಂದ್ರೇಶ್ವರನ ಗುಡಿ ಎರಗಿ ಮುಂದ್ವರಿಯೆ ಎಡದಲ್ಲಿ ಸೋದೆಯ ಮಠ ಅ ದರ ಪಕ್ಕವೆ ಪುತ್ತಿಗೆ ಮಠ ನೋಡಿ 4 ಬರಬರುತ ಬೀದಿ ಎರಡು ಪಕ್ಕಗಳಲ್ಲಿ ಇರುವ ಅಂಗಡಿ ಸಾಲು ವ್ಯಾಸಾದಿ ಮಠಗಳ್ ನಿರರುತಿ ಕೋಣದಿ ಆದಮಾರು ಮಠ ಅ ದರ ಪಕ್ಕವೆ ಪೇಜಾವರ ಮಠವೆನ್ನಿ 5 ಮುಂದೆ ಒಂದೆರಡ್ಹೆಜ್ಜೆಯಿಂದ ಬರಲು ಅಲ್ಲಿ ಸುಂದರವಾದ ಪಲಿಮಾರು ಮಠ ಅಂದ ನೋಡುತ ಸಾಗಲರ್ಧ ಪ್ರಥಮ ಬೀದಿಯಿಂದ ಬಲಗಡೆ ತಿರುಗೆ ಅನಂತೇಶ್ವರ 6 ಚತುರ ಬೀದಿಯ ಮಧ್ಯೆ ರಾಜಿಸುತಿಹ ಗುಡಿ ಅತಿ ಉನ್ನತವಾದ ಗರುಡಸ್ಥಂಭ ಪ್ರಥಮ ಪ್ರದಕ್ಷಿಣೆ ದ್ವಾರ ದರ್ಶನಗಳು ಗತಿಸಿ ಪೋದುವು ನಮ್ಮ ಪಾಪರಾಶಿಗಳು 7 ನಡೆಯಿರಿ ನಡೆಯಿರಿ ಕೃಷ್ಣನ ಮಠದೆಡೆ ಬಡಿಯುತಲಿಹರು ನಗಾರಿಗಳು ತಡೆಯದೆ ತೆಗೆವರು ಮಹಾದ್ವಾರವೀಗಲೆ ಒಡೆಯ ಕೃಷ್ಣನ ನೋಡ ಬಲ್ಲಿರೆಲ್ಲ 8 ಬೆಳಗು ಝಾವದ ನಾಲ್ಕು ತಾಸಿನ ಭೇರಿಯು ಒಳಗೆ ಪೋಗಿರಿ ಎಂದು ಕೂಗುತಿದೆ ಬಲು ಬೇಗ ಸ್ನಾನ ಮಾಡುತ ಮಧ್ವಸರಸಿನೋಳ್ ಚಲುವ ಕೃಷ್ಣನ ನೋಡ ಬನ್ನಿರೆಲ್ಲ 9 ಮುನಿವರರೆದ್ದು ಸ್ನಾನವಗೈದು ಉಷಃಕಾಲ ಘನಪೂಜೆಗೈದು ಪೊಂಗಲು ದೋಸೆಯ ಮುನಿವರದಗೆ ನೈವೇದ್ಯವರ್ಪಿಸಿ ತಮ್ಮ ಮನದಣಿಸುತ್ತಲಾನಂದಿಪರು 10 ಬಾಲತೊಡಿಗೆಯನಿಟ್ಟ ಬಾಲರೂಪನ ನೋಡಿ ನೀಲಮೇಘಶ್ಯಾಮ ನಿರ್ಮಲಾತ್ಮ ಆಲಯದೆಡಬಲ ಗರುಡ ಮುಖ್ಯಪ್ರಾಣ ಓಲೈಸೆ ಗೋಪಾಲಕೃಷ್ಣವಿಠಲನ 11
--------------
ಅಂಬಾಬಾಯಿ
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
(ಅನಂತಚತುರ್ದಶಿಯ ದಿನದ ಪ್ರಾರ್ಥನೆ) ಪದ್ಮನಾಭ ಪರಿಪಾಲಿಸು ದಯದಿಂದ ಪದ್ಮಜಾದಿ ವಂದ್ಯ ಪರಮ ದಯಾಳೊ ಪದ್ಮಿಯಳರಸ ಹೃತ್ಪದ್ಮನಾಮಕ ಸ್ವರ್ಣ ಸದ್ಮ ವೃತ್ತಿಪದಪದ್ಮವ ತೋರೊ ಪ. ಚಿಂತಿತದಾಯಕ ಸಂತರ ಕುಲದೈವ ಕಂತು ಜನನಿಯೊಡಗೂಡಿ ನೀನು ನಿಂತು ಎನ್ನಲಿ ಕೃಪೆ ಮಾಡೆಂದು ನಮಿಪೆ ಧು- ರಂತ ಮಹಿಮ ನಿನ್ನ ಚರಣಾಬ್ಜಯುಗಲಾ 1 ಆದಿ ಮಧ್ಯಾಂತವಿದೂರ ನಿನ್ನಲಿ ಮಹ ದಾದಿ ತತ್ವಗಳೆಲ್ಲ ನಿಂತಿಹವು ಆದಿ ಭೌತಿಕ ಮೊದಲಾದ ತಾಪಗಳನ್ನು ಶ್ರೀದ ನೀ ಬಿಡಿಸಲು ಸದರವಾಗಿಹವು 2 ಒಂದರಿಂದೊಂದಾದರಿಂದ ಮೂರು ಮೂರ್ತಿ ಇಂದಿರೆ ಸಹಿತಾವಿರ್ಭೂತನಾಗಿ ಮುಂದಿನ ಮಹದಾದಿ ತತ್ವವ ನಿರ್ಮಿಸಿ ನಿಂದನಂತಾಸಂತರೂಪನಾದವನೆ 3 ಭವ ಚಕ್ರದೊಳು ತಂದು ನವ ನವ ಕರ್ಮಗಳನೆ ಮಾಡಿಸಿ ಅವರ ಯೋಗ್ಯತೆ ಮೀರದಲೆ ಫಲಗಳನಿತ್ತು ನಿತ್ಯ ತೃಪ್ತನಾಗಿರುವಿ 4 ಮಛ್ವಾದ್ಯನಂತವತಾರಗಳನೆ ಮಾಡಿ ಸ್ವೇಚ್ಛೆಯಿಂದ ಸುಜನರ ಸಲಹಿ ಕುಚ್ಛಿತ ಜನರಿಗೆ ತುಚ್ಛಗತಿಯನೀವೆ ಸ್ವಚ್ಛ ಬ್ರಮ್ಹಾದಿಕ ವಿವ್ಛಾ(?)ವಿಷಯನೆ 5 ನಾನಾವತಾರದಿ ನಂಬಿದ ಸುರರಿಗೆ ಆನಂದವಿತ್ತು ರಕ್ಷಿಪೆ ಕರುಣದಿ ದಾನವರಿಗೆ ಅಧ:ಸ್ಥಾನವ ನೀಡುವಿ ಮಾನವರನು ಮಧ್ಯಗತರ ಮಾಡಿಸುವಿ 6 ಹಿಂದೆ ಮುಂದಿನ ಭವದಂದವ ತಿಳಿಯದ ಮಂದಾಗ್ರೇಸರ ನಾನಾದೆಂಬುದನು ಅಂಧಕರಾರಣ್ಯದಿಂದ ಮೂಢನಾದಂ ದಿಂದ ಬಿನ್ನೈಪೆನು ಇಂದಿರಾಧವನೆ 7 ಮಾಡುವ ಕರ್ಮವು ನೋಡುವ ವಿಷಯಗ- ಳಾಡುವ ಮಾತು ಬೇಡುವ ಸೌಖ್ಯವು ನೀಡುವ ದಾನವೋಲ್ಯಾಡುವ ಚರ್ಯವ ನೋಡಲು ತಾಮಸ ಪ್ರಹುಡನಾಗಿಹೆನು 8 ಆದರು ನಿನ್ನಯ ಪಾದಾರವಿಂದ ವಿ- ನೋದ ಕಥಾಮೃತ ಪಾನದೊಳು ಸ್ವಾದ ಲೇಶದಾದರ ತೋರ್ಪದ- ನಾದಿ ಮೂರುತಿ ನೀನೆ ತಿಳಿಸಬೇಕದನೂ 9 ಇದರಿಂದಲೇ ಮುಂದೆ ಮದನನಯ್ಯನೆ ನಿನ್ನ ಪದವ ಕಾಣುವೆನೆನುತೊದರುವೆನು ಹೃದಯ ಮಂಟಪದಿ ನೀ ಹುದುಗಿರುವುದರಿಂದ ಕದವ ತೆರೆದು ತೋರೊ ವಿಧಿಭವವಿನುತಾ 10 ಕನ್ನೆ ಸುಶೀಲೆಯ ಕರಸೂತ್ರ ರೂಪದ ನಿನ್ನ ತಿಳಿಯದೆ ಕೌಂಡಿಣ್ಯನಂದು ಮನ್ನಿಸದಿರೆ ಮದ ಮೋಹಗಳೋಡಿಸಿ ನಿನ್ನ ರೂಪವ ತೋರ್ದ ನಿಜಪೂರ್ಣ ಸುಖದಾ 11 ಬ್ರಹ್ಮಾದಿಗಳನೆಲ್ಲ ನಿರ್ಮಿಸಿ ರಕ್ಷಿಸಿ ತಮ್ಮ ತಾವರಿಂiÀiದ ನಿಮ್ಮ ಸ್ತುತಿಪರೆ ಕು- ಕರ್ಮಿ ನಾನೆಂದಿಗಾದರೂ ಶಕ್ತನಹುದೆ 12 ಅದು ಕಾರಣದಿಂದ ಪದುಮನಾಭ ನಿನ್ನ ಪದ ಕಮಲಗಳಲಿ ರತಿಯನಿತ್ತು ಸದರದಿ ಸಲಹಯ್ಯ ವಿಧುಶೇಖರಾರ್ಚಿತ ಮದನನಯ್ಯ ಮರುದಾದಿ ವಂದಿತನೆ 13 ದೋಷರಾಶಿಗವಕಾಶನಾದರೂ ಯೆನ್ನ ಶ್ರೀಶ ನಿನ್ನ ದಾಸದಾಸನೆಂದು ಘೋಷವಾದುದರಿಂದ ಪೋಷಿಸಬೇಕಯ್ಯ ಶೇಷಗಿರೀಶ ಸರ್ವೇಶ ನೀ ದಯದಿ 14
--------------
ತುಪಾಕಿ ವೆಂಕಟರಮಣಾಚಾರ್ಯ
(ಊ) ಯತಿವರರು ಶ್ರೀ ಜಯತೀರ್ಥರು ಎದುರಾರೊ ಗುರುವೆ ಸಮರಾರೊ ಪ ಮದನ ಗೋಪಾಲನ ಪ್ರಿಯ ಜಯರಾಯ ಅ.ಪ ಕಡು ಗರ್ಜಿಸುವ ಕೇಸರಿಯಂತೆ ನಿಮ್ಮ ವಾದಗಡಣೆಯ ಕೇಳುತ ನುಡಿ ಮುಂದೋಡದೆಗಡಗಡ ನಡುಗುತ ಮಾಯ್ಗೋ ಮಾಯ್ಗಳುಅಡವಿಯೋಳಡÀÀಗೋರು ನಿಮ್ಮ ಭೀತಿಯಲಿ 1 ಕುಟಿಲ ಮತಗಳೆಂಬೊ ಚಟುಲಂಧಕಾರಕ್ಕೆಪಟುತರ ತತ್ವ ಪ್ರಕಾಶಿಕೆಂತೆಂಬಚಟುಲಾ ತಪದಿಂದ ಖಂಡಿಸಿ ತೇಜೋ-ತ್ಕಟದಿ ಮೆರೆದೆ ಬುಧಕಟಕಾಬ್ಜ ಮಿತ್ರ2 ಅಮಿತ ದ್ವಿಜಾವಳಿ ಕುಮುದಗಳರಳಿಸಿವಿಮತರ ಮುಖ ಕಮಲಂಗಳ ಬಾಡಿಸಿಸ್ವಮತರÀ ಹೃತ್ಸಂತಾಪಗಳೋಡಿಸಿವಿಮಲ ಸುಕೀರ್ತಿಯ ಪಡೆದೆಯೊ ಚಂದ್ರ 3 ವೇದ ಶಾಸ್ತ್ರಗಳೆಂಬೊ ಶೃಂಗಗಳಿಂದ ಸು-ಧಾದಿ ಗ್ರಂಥಗಳೆಂಬೊ ಸ್ತನದಿಂದೊಪ್ಪುತ ತತ್ವಬೋಧನೆಯೆಂಬ ದುಗ್ಧ ಶಿಷ್ಯವತ್ಸಂಗಳಿಗೆಆದರದಲಿ ಕೊಟ್ಟ ಯತಿಸುರಧೇನು 4 ವ್ಯಾಸ ಸೂತ್ರಗಳೆಂಬ ಮಂದರವನು ವೇದರಾಸಿಯೆಂಬ ವಾರಾಶಿಯೊಳಿಟ್ಟುಶ್ರೀ ಸರ್ವಜ್ಞರ ವಾಕ್ಯ ಪಾಶದಿ ಸುತ್ತಿಭಾಸುರ ನ್ಯಾಯಸುಧಾ ಪಡೆದೆ ಯತೀಂದ್ರ5 ವನಜನಾಭನ ಗುಣಮಣಿಗಳು ಸರ್ವಜ್ಞಮುನಿಕೃತ ಗ್ರಂಥಗಳವನಿಯೊಳಡಗಿರೆ ಸ-ಜ್ಜನರಿಗೆ ಟೀಕಾಂಜನದಿಂದ ತೋರಿಸಿಘನ ಸುಖಸಾಧನ ಮಾಡಿದ್ಯೊ ಧೀರ 6 ಅರ್ಥಿಮಂದಾರ ವೇದಾರ್ಥ ವಿಚಾರ ಸ-ಮರ್ಥ ಶ್ರೀಕೃಷ್ಣ ಪಾದಾಂಬುಜಲೋಲ ಪ್ರ-ತ್ಯರ್ಥಿ ಮತ್ತೇಭಕಂಠೀರವಕ್ಷೋಭ್ಯ-ತೀರ್ಥಕರ ಜಾತ ಜಯತೀರ್ಥ ಯತೀಂದ್ರ 7
--------------
ವ್ಯಾಸರಾಯರು
(ಕಾರ್ತೀಕ ದಾಮೋದರನನ್ನು ನೆನೆದು) ಗೋವಿಂದ ಪಾಲಯ ಗೋಪಾಲ ಬಾಲ ಗೋಪಗಣೇಡಿತಗುಣ ವರುಣಾಲಯ ಪ. ದೀನ ದಯಾಪರ ದಿತಿಜವಿದಾರ ನಾನಾವತಾರ ನಂಬುವರಿಗಾಧಾರ ಏನು ತಪ್ಪಿದ್ದರು ಕ್ಷಮಿಸು ರಮಾವರ 1 ಭೂಧರ ಬಲಭದ್ರ ಸೋದರವೇಷ ಆದರದಲಿ ನಿನ್ನ ಪೊಗಳುವೆ ಶ್ರೀಶ ಶ್ರೀದ ಕಾರ್ತೀಕ ದಾಮೋದರ ಹಾಸ 2 ಪರಮ ಪಾವನ ಶೇಷಗಿರಿವರ ಮೂರ್ತೆ ನೀನರಿಯೆಯಾ ದಾಸರ ಮನದಿರವಾರ್ತೆ ಪರಿಹರಿಸಾರ್ತಿಯ ಪದ್ಮಜನುತಕೀರ್ತೆ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಧನ್ವಂತ್ರಿಯ ಪ್ರಾರ್ಥನೆ) ವೇದ ವೇದ್ಯ ವೈದ್ಯನಾದನು ಭಕ್ತಜನ್ಮಾದಿ ವ್ಯಾಧಿಗಳನ್ನು ಬಾಧಿಸಿ ದುಗ್ಧ ಮಹೋದಧಿ ಮಥಿಸಿದ ಸಮಯದಿ ಪಾರಿಜಾ ತೋದಯವಾದ ಮೇಲಾದರದಿ ಪ. ಧೀರದಿತೆಯಸುರಾರಿ ನಾಯಕರೆಲ್ಲ ಸೇರಿ ಕ್ಷೀರಾಂಬುಧಿ ತೀರದ ತಡೆಗಾಗಿ ಭಾರಿ ಮಂದರವೆತ್ತಿ ತಾರಲಾರದೆ ಮಧ್ಯ ದಾರಿಯೊಳಗೆ ಬಿದ್ದು ಚೀರಲಂದು ನೀರದನಿಭ ಕೃಪೆದೋರಿ ಬಂದಲ್ಲಿ ಸ- ರ್ಪಾರಿಯ ಶಿರದ ಮೇಲೇರಿಸಿ ಗಿರಿಯ ಗಂ- ಭೀರ ರವದಿ ಮುಂದೆ ಸಾರಿದ ಸುರಮೋದ- ಕಾರಿ ಸಂಸ್ಕøತಿ ಭಯವಾರಣನು 1 ಅಮರದೈತ್ಯರ ಭುಜ ಭ್ರಮಣೆಗೆ ನಿಲ್ಲದ ಕ್ಷಮೆಯಧರನ ಕಂಡು ಸುಮನಸ ಗಣಕಾಗಿ ಕಮಠಾವತಾರದಿಂದಮಿತಭಾರವ ಲಕ್ಷ್ಮೀ ರಮಣ ಬೆಂಬನಿಂದಲಾಕ್ರಮಿಸಿದ್ದನೂ ಕ್ಷಮೆಯಿಂತು ತೋರಿ ಸಂಭ್ರಮದಿಂದ ಸುರಕಲ್ಪ- ದ್ರುಮಕಂಠರತ್ನ ಚಂದ್ರಮ ಮುಖ್ಯರುದಿಸಲು ರಮೆಯೊಂದು ರೂಪದಿ ನಮಿಸುತ್ತ ಬರೆ ತನ್ನ ರಮಣೀಯ ಮದುವಿಯಾ ಕ್ರಮವ ತೋರಿ 2 ಇಂತು ವಿವಾಹದನಂತರದಲಿ ಶ್ರೀ- ಕಾಂತನು ದೇವರ್ಕಳಂತವರಿತು ನಿ- ಬೋಧ ಚಿನ್ಮಯನು ನಿರ್ಭಯದಿ ಧ- ನ್ವಂತರಿಯಾದುದನೆಂತೆಂಬೆನು ಕಂತುಕೋಟಿಯ ಗೆಲುವಂತೆ ಸಕಲ ಸುಜ ನಾಂತರ್ಬಹಿರ್ಗತ ಸಂತಾಪಗಳ ಬಲ- ವಂತದಿಂದಲಿ ಕಳವಂಥ ಮೂರುತಿಯಾಗಿ ನಿಖಿಳ ವೇದಾಂತೇಶನು 3 ಕುಂಡಲ ಹಾರ ವನರುಹಾಂಬಕ ವಲ್ಲುಹಾಸ ಕೌಸ್ತುಭಧರ ಕರಿ ಕರೋರುತರ ಕ್ಷಣಿತ ಕಿಂಕಿಣಿ ಕಾಂಚೀವರ ಮಂಜೀರಾ ಸುನಸ ಸುಂದರದಂತ ಶುಭನೀಲಕೇಶಾಂತ ವನಜ ಸಂಭವನೀಗರುಹುತಾಯುರ್ವೇದಾಂತ ನೆನೆಸುವವರಪಮೃತ್ಯುಹಾರಿ ರೂಪವ ತೋರಿ ವಿನಯದಿ ವಿಬುಧಾರ ಸೇರಿದನು 4 ಪಾತಕ ಸಂಘಾಧಾರದಿಂದ್ಯಮಪರಿ ವಾರವೆಂದೆನಿಪತ್ತಿ ಸಾರವ ಸ್ಮಾರಕ್ಷಯೋರಗಜ್ವರಕಫ ಗೂರು ಪ್ರಮೇಹಾದಿ ವಾರಕ ವರಸುಖ ಕಾರಕನು ಥೋರ ಕರದಿ ಸುಧಾಪೂರಿತ ಕಲಶವ ತೋರಿ ದಾನವ ಮೋಹಕಾರಿ ನಾರಾಯಣಿ ಸ್ತ್ರೀ ರೂಪದಿಂದ ದೈತ್ಯಾರಿಗಳಿಗೆ ಕೊಟ್ಟ ಧೀರ ವೆಂಕಟ ಶಿಖರಾರೂಢನು 5
--------------
ತುಪಾಕಿ ವೆಂಕಟರಮಣಾಚಾರ್ಯ
(ಭಕ್ತಿ ಎಂಬ ಸ್ತ್ರೀಯ ವರ್ಣನೆ) ಸೇರಿರೊ ನವ ನಾರಿಕುಂಜರನನ್ನು ಧೀರಲಕ್ಷ್ಮೀವರನು ಮಂಟಪವೇರಿ ಮುಂದಕೆ ಬರುವನು ಪ. ಶ್ರವಣ ಕೀರ್ತನ ಸ್ಮರಣ ಸೇವನ ಪೂಜ ಪ್ರ- ಣವ ದಾಸ್ಯ ಸಖತ್ವ ಸರ್ವವ ವಹಿಪ ನವವಿಧ ಭಕುತಿಯ1 ದೂರ ನಿಂತರೆ ತೋರದು ಸರಿಯಾಗಿ ಸಾರಗೈಯಲು ಸಾಧನೆಗಳಿಂದಾರು ಮೂರಾಗಿರುವುದು 2 ಜೋಲುವಾ ಸೊಂಡಿಲೆಂಬುದೆ ಸುಜ್ಞಾನ ಕಾಲುಗಳೆ ಪುರುಷಾರ್ಥವೆನಿಪವು ಬಾಲ ಸದ್ಗುಣಭಾವವು 3 ಭಕ್ತಿ ಭುಕ್ತಿಗಳೆರಡು ನೇತ್ರಗಳು ವಿ- ರಕ್ತಿಯುದರವು ವಿಷ್ಣು ಗಾಥಾಸಕ್ತಿ ಸಕಲೇಂದ್ರಿಯಗಳು 4 ನಿತ್ಯ ನಿರ್ಮಲ ಚರಿತ ಲಕ್ಷ್ಮೀಶನ ಭೃತ್ಯಪಾದ ರಜಸ್ಸಮೂಹವನೆತ್ತಿ ನಾಲ್ದೆಸೆ ಸುರಿವದು 5 ಹತ್ತಿರೆಂದಿಗು ಸೇರಲೀಯದು ದು- ದುರಿತ ಕೂಪದಿ ಒತ್ತಿ ಕೆಡುಹುವ ವಹಿಲವು 6 ಛಲಕೆ ಮೆಚ್ಚುತ ನಲಿವುದು ಮನದಲಿ ಚೆಲುವ ಶೇಷಗಿರೀಂದ್ರನಾಥನ ವಲಿಸಿ ಕೊಂಡಿಲ್ಲಿಳಿವುದು 7
--------------
ತುಪಾಕಿ ವೆಂಕಟರಮಣಾಚಾರ್ಯ
(ಸಂತತಿ ಪ್ರಯುಕ್ತ ಪ್ರಾರ್ಥನೆ) ಪರಮ ಪಾವನ ರೂಪ ಪಾಲಿಸು ಕುಲದೀಪ ಪರಿಹರಿಸಖಿಳತಾಪ ದುರಿತರಾಶಿಗಳೆಲ್ಲ ತರಿದು ತ್ವತ್ಪದ ಸೇವಾ- ದರವಿತ್ತು ಸಲಹುವ ಕರುಣಿ ವೆಂಕಟಭೂಪ ಪ. ಮಾತಾ ಪಿತರು ನೀನೆ ಮಹದೇವಿಯರಸನೆ ಪಾತಕ ಪರಿಹಾರನೆ ಭೂತ ಭಾವನ ಭುವನೈಕಾಧಿಪತಿ ಜಗ- ನ್ನಾಥದಾಸರು ತೋರ್ದ ರೀತಿಯ ತಿಳಿಸುವೆ 1 ನಿನ್ನ ಪಾದಾಂಬುಜ ಸೇರಿದ ದಾಸರ ಇನ್ನು ನೀ ಬಿಡಲಾರದೆ ಉನ್ನತ ಸುಖಗಳ ತನ್ನಂತೆ ಪಾಲಿಪ ಘನತೆ ತೋರ್ಪ ಪ್ರಸನ್ನ ವರದರಾಜ 2 ಮಾಧವ ಮನೆ ಮೊದಲಾದುದೆಲ್ಲವು ನಿನ್ನ ಪಾದಕರ್ಪಿಸಿದೆನಿಂದು ನೀ ದಯಾಂಬುಧಿಶೇಷ ಭೂಧರಪತಿ ಮಂಗ ಳೋದಯಕರ ಸಂಪದಾದಿ ಪೂರಣಗೈವ 3
--------------
ತುಪಾಕಿ ವೆಂಕಟರಮಣಾಚಾರ್ಯ
* ನೆರದು ಗೋಪಿಯರೆಲ್ಲಾರು ಕೃಷ್ಣಯ್ಯನ ಶೆರಗಪಿಡಿದುಕೊಂಡು ಅರುಹಿದರತಿ ಬೇಗದಿ ಪ. ಹಾಲು ಕರವುತಿರಲು ತೊಲೆಗೆ ನಿಚ್ಚಣಿಕೆಯ ಹಾಕದೆ ಸುರಿದಾನು ನೆಲವಿನ ಪಾಲ್ಮೊಸರಾ 1 ಅಂಮೈಯ್ಯಾ ಇಲ್ಲಾ ಕಾಣೆ ಇವಳು ಯಂನ್ನಾ ಸುಂಮ್ಮಾನೆ ದೂರುವಳು ಹುಂಮ್ಮಿಂದ ನಾನವಳ ಅಟ್ಟಕ್ಕೆ ನೆಗವೊರೆ ಬೊಮ್ಮ ಜಟ್ಟಿಗನೆ ನಾನು 2 ಮತ್ತೊರ್ವಳಿಂತೆಂದಳು ನಿಂನಮಗ ಹತ್ತಿ ಗವಾಕ್ಷಿಯಿಂದಾ ಬಚ್ಚಿಟ್ಟ ಬೆಣ್ಣೆಯನೆಲ್ಲಾವ ಮೆದ್ದಾನು ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆಯ ಮೆಲ್ವಾರೆ ಇವನ ಹೊಟ್ಟೆ ಕೆರೆಭಾವಿಯೇನೆ ಅಮ್ಮಾ ಹುಡುಗರಿಗೆ ಎಂದು ಬಚ್ಚಿಟ್ಟ ಬೆಣ್ಣೆಯನೆಲ್ಲಾ ಹೊಡೆದರವರ ಮಕ್ಕಳು 4 ಮಲಗೋಮಂಚದ ಮೇಲೆ ನಾ ಮಲಗೀರೆ ಮೊರೆವ ಹಾವನು ಪಿಡಿದು ಅರಿಯದಂತೆ ಬಂದು ಮುಸುಕಿ- ನೊಳಗಿಟ್ಟು ಅರಿಯಾದೆ ಹೋದನಂಮಾ 5 ಹರನಡುಗುವ ಹಾವನು ನಾ ಪಿಡಿವಾರೆ ತರಳಾನು ತಡೆಕಾರನೆ ಹರಕೆಯ ಹೊತ್ತುದವಪ್ಪಿಸದಿದ್ದರೆ ಗುರುತು ತೋರÀಲು ಬಂತೇನೊ 6 ಮಕ್ಕಳ ಪಡೆದವರುಯಿಲ್ಲದ ಕಳ ವಿಕ್ಕಲಿ ಬಹುದೆ ಕೃಷ್ಣಗೆ ಸಿಕ್ಕಿದ ತಪ್ಪು ಸಹಿತವೆ ತಂದರೆ ನಾನು ತಕ್ಕ ಬುದ್ದಿಯ ಪೇಳುವೆ 7 ಅಣುಮಯರೂಪ ಕಾಣೆ ನಿಂನಯ ಮಗ ಚಿನುಮಯ ರೂಪ ಕಾಣೆ ಚಿನುಮಯ ರೂಪ ಹೆಳ ವನಕಟ್ಟೆ ಆದಿಕೇಶವ ರಂಗನೆ8
--------------
ಹೆಳವನಕಟ್ಟೆ ಗಿರಿಯಮ್ಮ
4. ಧನ್ವಂತರಿ ಶ್ರೀಪತಿಯೆ ಧನ್ವಂತರಿಯ ರೂಪವಾಂತೆ ತಾಪತ್ರಯವ ಹರಿಸೆ ಭಕ್ತರ್ಗೆ ನೋಂತೆ ಪ ಸುರರು ದಾನವರೆಲ್ಲ ಕ್ಷೀರ ಸಾಗರವನ್ನು ವರಗಿರಿ ಮಂದರವ ಕಡೆಗೋಲ ಮಾಡಿ ಧರಣಿಧರ ವಾಸುಕಿಯ ಹಗ್ಗಗೈಯುತ ಮಥಿಸೆ ಸಿರಿರತ್ನ ಧೇನು ತರು ಲಕ್ಷ್ಮಿಯರು ಬರಲು 1 ಶ್ರೀರಮಣಿ ಕೌಸ್ತುಭಗಳನ್ನು ನೀಧರಿಸುತ್ತ ಕಾರುಣ್ಯದಿಂ ಕಾಮಧೇನುವಂ ಮುನಿಗಳಿಗೆ ಪಾರಿಜಾತಸ್ವರ್ಗ ಸಂಪಾದವಗೈಯುತ್ತ ಸಾರಸೌಖ್ಯದ ಸುಧಾರಕನಾಗಿ ತೋರ್ದೆ 2 ಅಮರರಿಗೆ ನೀನೊಲಿಯತಮೃತವನು ಕರೆದಿತ್ತು ಕಮಲ ಸರಸಲಿಹೆ ಆಯುರ್ವೇದವನ್ನೊರೆದೆ ಕಮಲಲೋಚನ ಕೃಪೆಯೊಳಾರೋಗ್ಯಗಳ ನಮಗೀಯುತಾಬಾಲವೃದ್ಧರಂ ಸಲಹೊ 3 ದೇವ ನೂತನಪುರಿಯ ದೇವ ಶ್ರೀಮೂರುತಿಯ ಭಾವದಿಂ ಸನ್ನಿಧಿಯೊಳಾನಿನ್ನನುತಿಸೀ ಕಾವುದೆನುತಲಿ ಸತತ ಶ್ರೀದ ನಮಿಸುವೆ ಮಹಿತ ಜೀವ ಜೀವರಿಗೆಲ್ಲ ಸಿರಿಯೀವನಲ್ಲ 4 ಜಯಮಕ್ಕೆ ವೈದ್ಯೇಶನಾಮಾಯಕೆ ಜಯವುತಾನಾಗಲೀ ಓಷಧೀಲತೆಗಳಿಗೆ ಜಯ ಜಯವು ಗೋಗಳಿಗೆ ವೈದ್ಯವೃಂದಕ್ಕೆ 5
--------------
ಶಾಮಶರ್ಮರು