ಒಟ್ಟು 107 ಕಡೆಗಳಲ್ಲಿ , 42 ದಾಸರು , 97 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೃಷ್ಟ ಅದೃಷ್ಟದ ಬಲವು ನೊಡಿ ವಿಸ್ತಾರ ಸೃಷ್ಟಿಯಲಿ ಮುಟ್ಟಿ ಮುದ್ರಿಸಿದ ವಾಕ್ಯಂಗಳು ಕೇಳಿ ಆತ್ಮನಿಷ್ಠ ಜನರು 1 ದೃಷ್ಟಿ ಪುರುಷನ ಸೈನ್ಯಗಳು ಕೇಳಿ ಚಿತ್ತದಲಿ ಮಾನವರು ಅಜ್ಞಾನವೆಂಬಾಶ ಗತಿಯು ಮಾಯಾಮೋಹಕವೆಂಬ ಸುತರು 2 ಬಂಟ ಜನರು ಪ್ರಪಂಚ ಸೈನ್ಯಾಧಿಪತಿ ಸುಖ ದು:ಖದಳ ಭಾರಗಳು3 ಚಂಚಲವಂಚಲಶ್ವಗಳು ಅಹಂ ಮಮತಾ ಗಜಗಳು ಅವಸ್ಥೆಗಳು ಕಾಲಾಳುಗಳು ಮನ್ನೆವಾರರು ಕರಣಗಳು4 ಮೆರೆಯುತಿಹರು ಪಂಚೇಂದ್ರಿಯಗಳು ಸೂಸುತಲಿಹ ಬೇಹಿನವರು ಮೊದಲಾದ ದಶವಾಯುಗಳು 5 ಸುತ್ತಲಿಹ ಪರಿವಾರಗಳು ಸಪ್ತವ್ಯಸನ ಭೂಷಣಂಗಳು ಪಂಚಾಗ್ನಿಗಳು ಪಂಜಿನವರು ಅಷ್ಟಮದವು ಕಾವಲಿಗಳು 6 ಮೂರು ಪರಿಯ ತ್ರಿಗುಣಗಳು ಸೈನ್ಯದ ಪಾರುಪತ್ಯದವರು ಜಾಗ್ರಸ್ವಪ್ನ ಸುಷುಪ್ತಿಗಳು ಛತ್ರ ಚಾಮರ ಭೂಷಣಗಳು 7 ಸಪ್ತಧಾತುದ ಸುಖಾಸನವು ಪಂಚಾತ್ಮಗಳು ನಿಶ್ಯಾನಿಗಳು ತಾಮಸವೆಂಬ ಭೇರಿಗಳು ಅಹಂಕಾರವು ಕಹಳೆಗಳು 8 ಪರಿ ಚಂದ ಚಂದದಲಿ ಇಳಿದಿಹ ಸೈನ್ಯ ಭಾರಗಳು 9 ಜನನ ಮರಣದ ಮಂಟಪವು ಕಟ್ಟಿಹರು ವಿಸ್ತಾರದಲಿ ಚಿಂತಿ ಮುಪ್ಪಳಿಯು ಭ್ರಾಂತಿಗಳಲಿ ಸ್ಥಿತಿ ಸ್ಥಳಲಿಹ ದ್ವಾರಗಳು 10 ದುರ್ಮೋಹ ಬಲದಲಿ ತನುವೆಂಬ ದುರ್ಗಬಲದಲಿ ಕದನ ಮಾಡುವರನುದಿನದಲಿ 11 ಇನ್ನು ಅದೃಷ್ಟದ ಬಲವು ಕೇಳಿ ಚೆನ್ನಾಗಿ ಮನದಲಿ ಸಮ್ಯಜ್ಞಾನೆಂಬಾಶಗತಿಯ ಜ್ಞಾನ ವೈರಾಗ್ಯಸುತರು 12 ಬಂಟ ಜನರು ಬೋಧ ಸೈನ್ಯಾಧಿಪತಿಯ ದೃಢ ನಿಶ್ಚಯ ದಳ ಭಾರಗಳು 13 ನಿರ್ಮಳ ನಿಶ್ಚಳಶ್ವಗಳು ವಿವೇಕವೆಂಬ ಗಜಗಳು ಮಗುಟ ವರ್ಧನರು 14 ಶೂರತನದ ಪ್ರರಾಕ್ರಮರು ಸ್ಮರಣೆ ಚಿಂತನೆ ಧ್ಯಾನಗಳು ಸೂಸುತಲಿಹ ಬೇಹಿನವರು ಯೋಚನೆ ಅವಲೋಕನೆಗಳು 15 ಸುತ್ತಲಿಹ ಪರಿವಾರಗಳು ರತಿಪ್ರೇಮ ಸದ್ಭಾವನೆಗಳು ಲಯ ಲಕ್ಷ್ಯಗಳು ಪಂಜಿನವರು ಮೌನ್ಯ ಮೋನವೆ ಕಾವಲಿಗಳು 16 ನಾದ ಬಿಂದು ಕಳೆಯಗಳು ಸೈನ್ಯದ ಪಾರುಪತ್ಯವರು ಅನಿಮಿಷ ಛತ್ರ ಚಾಮರವು ಏಕಾಕಾರವೆ ನಿಶ್ಯಾನಿಗಳು 17 ಅನುಭವ ಸುಖಾಸನಗಳು ತೂರ್ಯಾವಸ್ಥೆಯ ಭೂಷಣಗಳು ಆನಂದಮಯವೆ ಭೇರಿಗಳು ನಿಶ್ಚಿಂತವೆ ಕಹಳೆಗಳು 18 ಸುಜ್ಞಾನದ ಮೊದಲಾದ ಅಂಗಡಿಯು ಇಳಿದಿಹ ಸಾಲವರಿಯಲಿ ಚಂದ ಚಂದ ಶೃಂಗಾರದಲಿ ಇಳಿದಿಹ ಸೈನ್ಯ ಭಾರಗಳು 19 ಸದ್ಗತಿ ಮುಕ್ತಿ ಮಂಟಪವು ಹೊಳೆಯುತಿಹದು ಸ್ಯೆನ್ಯದೊಳಲಿ ಶೋಭಿಸುವದು ಶೃಂಗಾರದಲಿ 20 ನಿರಾಶವೆಂಬ ಪ್ಯಾಟಿಯಲಿ ಇಳಿದಿಹದು ಸಂತೋಷದಲಿ ದೃಷ್ಟಿ ಪುರುಷನ ಅಟ್ಟಲೆಯ ಕೇಳಿ ನಡೆಯಿತು ಮಾರ್ಬಲವು 21 ಧಿಮಿ ಧಿಮಿಗುಡುತ ನಾದ ಮಾಡಿದರಾನಂದಲ ಗ್ಹೇಳೆನಿಸುತ್ತ ಕಹಳೆಗಳು ಭೋರ್ಗರೆಯುತಲಿ ನಡೆದರು 22 ನಡೆವರು ಅತಿಶಯ ಶೀಘ್ರದಲಿ ಬಾಣ ಬಾಣಗಳು ಮಾಡುತಲಿ ದಣಿದಣಿಸುತಲಿ ನಡೆದರು 23 ತುಂಬಿದ ಸೈನ್ಯ ಭಾರಗಳು ಉಬ್ಬು ಕೊಬ್ಬಿ ನಡೆದವು ನಗುತ ಗೆಲವಿಂದಶ್ವಗಳು ಏರಿ ಹಾರಿಸುತ ನಡೆದರು 24 ಮಗುಟ ವರ್ಧನರು ನಡೆದರು ಅತಿ ಹರುಷದಲಿ ಕಾಲಾಳುಗಳು ಮುಂದೆ ಮಾಡಿ ನಡೆಯಿತು ದಳ ಭಾರಗಳು 25 ಶೂರತನದ ಪರಾಕ್ರಮರು ಮುಂದಾಗಿ ಬ್ಯಾಗೆ ನಡೆದರು ಅಬ್ಬರಿಸುತಲಿ ಮಾರ್ಬಲವು ನಡೆಯಿತವರ ಸೈನ್ಯ ಮ್ಯಾಲೆ 26 ವಿವೇಕವೆಂಬ ಗಜಗಳು ವಾಲ್ಯಾಡುತಲಿ ನಡೆದರು ರಗಡಿಸುತ ಡೋಲಿಸುತಲಿ ನಡೆದರು ಪರಚಕ್ರ ಮ್ಯಾಲೆ 27 ನಡೆವ ಮಾರ್ಬಲದ ಧೂಳಿಗಳು ಮುಸುಕಿತು ಸುವಾಸನೆಗಳು ಗರ್ಜಿಸುವ ಧ್ವನಿಗೇಳಿ ಹೆದರಿತು ಶತ್ರು ಮಾರ್ಬಲವು 28 ಕಂಡು ದೃಷ್ಟರ ಸೈನ್ಯದವರು ಸಿದ್ದವಾದರು ಸಮಸ್ತದಲಿ ತಮ್ಮ ತಮ್ಮೊಳು ಹಾಕ್ಯಾಡುತಲಿ ನಡೆದುಬಂದರು ಸನ್ಮುಖಕೆ 29 ಚಿಂತಿಸುತಲಿ ಪರಾಕ್ರಮರು ಬಂದರು ವೀರ ಕಾಳಗಕೆ ಕಾಳಿ ಭೇರಿಗಳು ಬಾರಿಸುತ ಬಂದರು ಮಹಾಜನರು 30 ಕೂಗಿ ಚೀರುತ ಒದರುತಲಿ ಬಂದು ನಿಂದರು ಪರಾಕ್ರಮರು ಅಹಂ ಮಮತಾ ಗಜಗಳು ನಡೆದು ಬಂದವು ಎದುರಾಗ 31 ಕಾಲಾಳು ಸಹ ಕೂಡಿಕೊಂಡು ರಚಿಸಿ ಬಂದರಶ್ವಗಳು ಕೂಡಿತು ಉಭಯ ದಳವು 32 ಸುವಾಸನೆ ಧೂಳಿಯೊಳಗೆ ಅಡಗಿತು ದುರ್ವಾಸನೆಯು ಅಹಂ ಮಮತಾ ಗಜಗಳು ಕಂಡು ಓಡಿದವು ಹಿಂದಾಗಿ33 ಬೆನ್ನಟ್ಟಿ ವಿವೇಕ ಗಜವು ಹೊಡೆದು ಕೆಡವಿದವು ಧರೆಗೆ ಅವಸ್ಥೆಗಳು ಕಾಲಾಳುಗಳು ಜಗಳ ಮಾಡಿದವು ನಿಮಿಷವು 34 ವಿಚಾರ ಕಾಲಾಳು ಮುಂದೆ ಓಡಿದರು ದೆಸೆದೆಸೆಗೆ ಚಂಚಳವೆಂಚಳಶ್ವಗಳು ಏರಿ ಬಂದರು ರಾವುತರು 35 ಯುದ್ದಮಾಡಿದರರಗಳಿಗೆಯು ಶುದ್ಧಿ ಇಲ್ಲದೆ ಓಡಿದರು ನಿರ್ಮಳ ನಿಶ್ಚಳಶ್ವಗಳು ಏರಿ ಬೆನ್ನಟ್ಟಿ ನಡೆದರು 36 ಚಂಚಳ ವೆಂಚಳಶ್ವಗಳ್ಹರಿಗಡೆದರು ಕಾಲು ಬಲ ರಾಹುತರ ಸಹವಾಗಿ ಕಡೆದೊಟ್ಟಿದರು ಶಿರಸವನು 37 ವೀರರು ಕಾಮಕ್ರೋಧಗಳು ಬಂದರು ಅತಿಶಯಉಗ್ರದಲಿ ಶಮೆ ದಮೆ ವೀರಗಳೊಡನೆ ಕಾದಿ ಮಡಿದರು ಆ ಕ್ಷಣದಲಿ 38 ಬಂಟ ಜನರು ಬಂದರು ಸಿಟ್ಟು ಕೋಪದಲಿ ಭಾವ ಭಕ್ತಿಯ ಬಂಟರೊಡನೆ ಕಾದಿ ಕಾಲಾಳು ಮಡಿದರು 39 ಪ್ರಪಂಚ ಸೈನ್ಯಾಧಿಪತಿಯ ಕೈಸೆರೆಯಲಿ ಹಿಡಿದರು ಬೋಧ ಸೈನ್ಯಾಧಿಪತಿಯು ನಾದಘೋಷವು ಮಾಡಿಸಿದನು 40 ಉಲ್ಹಾಸವೆಂಬ ಸರವರಿಯು ಹಚ್ಚಿಸಿದರು ಸೈನ್ಯದೊಳಲ್ಲಿ ದಯ ಕರುಣ ಭಾಂಡಾರಗಳು ಒಡೆದು ಧರ್ಮ ಮಾಡಿದರು 41 ಪಂಚೇಂದ್ರಿಯಗಳ ಪರಾಕ್ರಮರ ಹಿಡಿದು ಕಟ್ಟಿದರು ಪಾಶದಲಿ ಸ್ಮರಣಿ ಚಿಂತನೆ ಪರಾಕ್ರಮರು ಉಬ್ಬಿದರು ಹರುಷದಲಿ 42 ದಶವಾಯುಗಳ ಬೇಹಿನವರ ಹಿಡಿದು ಬಂಧನವ ಮಾಡಿದರು ಅವಲೋಕನೆ ಬೇಹಿನವರ ಸದ್ಬ್ರಹ್ಮದಲಿ ಸುಖಿಸಿದರು 43 ಸಪ್ತವ್ಯಸನ ಪರಿವಾರಗಳು ರತಿಪ್ರೇಮರೊಡನೆ ಕೂಡಿದರು ಪಂಚಾಗ್ನಿಗಳು ಪಂಜಿನವರು ಪಂಚ ಪಾಲದಿ ಅಡಗಿದರು 44 ಲಯ ಲಕ್ಷಗಳು ಪಂಜಿನವರು ಸಂಜೀವದಂತೆ ಹೊಳೆವರು ಅಷ್ಟಮದವು ಕಾವಲಿಗಳು ಅಡಗಿದವು ಸ್ಥಳ ಸ್ಥಳಲಿ 45 ಮೌನ್ಯ ಮೋನವೆ ಕಾವಲೆಗಳು ತಾವೆ ತಾವಾಗಿ ದೋರಿದರು ತ್ರಿಗುಣರ ಪಾರುಪತ್ಯದವರು ಒಂದು ಸ್ಥಳದಲಿರಿಸಿದರು 46 ನಾದ ಬಿಂದು ಕಳೆಯಗಳು ಮುಟ್ಟಿ ಪಾರುಪತ್ಯ ಮಾಡುವರು ಶತ್ರುರಾಘನ ಭೂಷಣಗಳು ಸೆಳೆದುಕೊಂಡರು ಗಳಿಗೆಯೊಳು 47 ಅವಿದ್ಯ ಮೊದಲಾದಾಗದರಿಂದ ಚೋಳಿಯು ಮಾಡಿದರು ಜನನ ಮರಣದ ಮಂಪಟವು ಸುಟ್ಟು ಸಂಹಾರ ಮಾಡಿದರು 48 ಚಿಂತೆ ಭ್ರಾಂತಿಯ ದ್ವಾರಗಳು ಕಿತ್ತಿ ಬೀಸಾಟಿದರು ಆಶಾಪ್ಯಾಟಿಗೆ ಧಾಳಿನಿಕ್ಕಿ ಲೂಟಿಸಿದರು ನಿಮಿಷದಲಿ 49 ತನು ದುರ್ಗ ವಶಮಾಡಿಕೊಂಡು ಇಳಿಯಿತು ಸೈನ್ಯ ಸುಖದಲಿ ಸದ್ಗತಿ ಮುಕ್ತಿ ಮಂಟಪವು ಕೊಟ್ಟರು ಅಚಲದಲಿ 50 ಯೋಗ ಭೋಗದ ದ್ವಾರದಿಂದ ನಡೆದರು ಮಹಾ ಭಕ್ತಜನರು ಮನ್ನೆವಾರರು ಕರಣಗಳು ಅಭಯವ ಕೊಂಡು ನಡೆದರು 51 ಅಜ್ಞಾನವೆಂಬಾಶಾಗತಿಯು ಮುಕ್ತವಾದಳು ಸುಜ್ಞಾನz ಮಾಯವಾದರು ವೈರಾಗ್ಯದಲಿ52 ದೃಷ್ಟ ಪುರುಷನ ತಂದಿನ್ನು ಇಟ್ಟುಕೊಂಡರು ತಮ್ಮೊಳಲಿ ತನು ದುರ್ಗ ವಶಮಾಡಿಕೊಂಡು ಮುಂದೆನಡೆದರಾನಂದದಲಿ 53 ಅಧಾರ ಪುರ ಬೆನ್ನಮಾಡಿ ನಡೆದರು ಬ್ರಹ್ಮಾಂಡಪುರಕೆ ವಿಘ್ನಹರನ ಬಲಗೊಂಡು ಮ್ಯಾಲೆ ಮಣಿಪುರಕೆ ನಡೆದರು 54 ಅನಾಹತಪುರ ದಾಟಿ ಮುಂದೆ ನಡೆದರು ವಿಶುದ್ಧ ಪುರಕೆ ಸ್ಥಳ ಸ್ಥಳ ಹರುಷ ನೋಡುತಲಿ ನಡೆದರಗ್ನಿ ಚಕ್ರಪುರಕೆ 55 ಮ್ಯಾಲಿಹ ಬ್ರಹ್ಮಾಂಡ ಪುರವು ಹೊಳೆಯುತಿಹದು ಪರಿಪರಿಲಿ ಸಹಸ್ರದಳ ಕಮಲಗಲು ಥಳಥಳಿಸುವದದರೊಳು 56 ಘನ ಬೆಳಗಿನ ಪ್ರಭೆಯುಗಳು ಹೊಳಯುತಿಹುದು ಕಿರಣಗಳು ಹರಿ ಬ್ರಹ್ಮಾದಿಗಳು ವಂದಿಸುವ ಸ್ಥಳ ನೋಡಿ ಗುರು ಕರುಣದಲಿ 57 ಪಿಂಡ ಬ್ರಹ್ಮಾಂಡೈಕ್ಯಪುರದಿ ಒಳಗಿಹ ಹಂಸಾತ್ಮಗತಿಯು ಸಹಸ್ರ ರವಿಕೋಟಿ ತೇಜ ಭಾಸುವಾ ವಸ್ತುಗತಿಯು 58 ವಿಶ್ವ ವ್ಯಾಪಕನೆಂಬ ಸ್ಥಿತಿಯು ಮಹಿಮಾನಂದ ಸ್ಫೂರ್ತಿಯು 59 ದೃಷ್ಟಾದೃಷ್ಟಗತಿಯು ದೋರಿದ ಗುರು ಸದೃಷ್ಟದಲಿ ಗುರು ಕರುಣದ ಕಟಾಕ್ಷದಲಿ ಬೆರೆಯಿತು ಮನ ಹರುಷದಲಿ 60 ಕಂಡು ಮಹಿಪತಿಯ ಜೀವನವು ಧನ್ಯವಾಯಿತು ದೃಷ್ಟದಲಿ ಪರಮಾನಂದ ಸುಪಥದಲಿ ಜೀವನ ಮುಕ್ತ್ಯದರಲ್ಲಿ 61
--------------
ಕಾಖಂಡಕಿ ಶ್ರೀ ಮಹಿಪತಿರಾಯರು
(ಬಪ್ಪನಾಡ ದುರ್ಗಾಪರಮೇಶ್ವರಿ) ಬಪ್ಪನಾಡ ಭದ್ರಕಾಳಿ ತಪ್ಪು ಕ್ಷಮಿಸಿ ಸಲಹಮ್ಮ ನ- ಮ್ಮಪ್ಪ ಶ್ರೀನಿವಾಸ ದೇವನಪ್ಪುತಾನಂದಾಬ್ಧಿಗಿಳಿದ ಪ. ಸರಸಿಜಾಸನಾದಿ ದೇವ ವರರ ನೀನೆ ಸಲಹುವಿ ದುರುಳ ಜನರ ತರಿದು ಭೂಮಿ ಭರವನೆಲ್ಲ ಇಳುಹುವಿ ಚರಿಯ ತೋರ್ಪಮಾಯೆ ಅಲ್ಯ- ಲ್ಲಿರುವ ಶತ್ರು ಪುಂಜವ ಕತ್ತರಿಪದೇನಾಶ್ಚರ್ಯ ತಾಯೆ 1 ಶಂಬರಾರಿ ಪಿತನಪಾದ ನಂಬಿಕೊಂಡ ರಾತಿಯ ಅಂಬೆ ನಿನ್ನ ಕರುಣದಿಂದ ಸಂಭವಿಸಿದ ಖ್ಯಾತಿಯ ಡಂಬತನದ ಶುಂಭ ನೀಶುಂಭ ದಮನೆ ಶಕ್ತಿ ನಿನ- ಗೆಂಬುದೇನು ದಾಸದಾಸನೆಂಬದರಿತು ಸಲಹು ದೇವಿ 2 ಮೂಢಮತದಿ ಮುಂದೆ ಹೋಗಿ ಮಾಡಿದಂಥ ಕುಂದನು ಪ್ರ- ಹುಡೆ ಕ್ಷಮಿಸಬೇಕೆಂದಿಂದು ಓಡಿ ಬಂದು ನಿಂದೆನು ಮೂಡಲಾದ್ರಿವಾಸನಡಿಯ ಪಾಡುವನೆಂದೆನ್ನನು ಕಾ- ಪಾಡಿ ಕಡೆಹಾಯಿಸುವದೆಂದು ಬೇಡಿಕೊಂಬೆ ಭಯಹರಾಂಬೆ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಮನೆಬಾಗಿಲ ಮೇಲೆ ಶ್ರೀನಿವಾಸ ಮೂರ್ತಿ) ಮಾಧವ ನಿಧಿಗಿರಿನಾಯಕ ಪದಕಮಲಾಶ್ರಿತ ಪರುಷಸುಖದಾಯಕ ಪ. ಬಲಿಯ ದೃಢಕೆ ಮೆಚ್ಚಿ ಬಾಗಿಲ ಕಾಯ್ದನಿ- ರ್ಮಲ ಕರುಣಾಮೃತ ವಾರಿಧೆ ಸುಲಭದಿ ಮುಂದಿನ ವಲಭಿತ್ಪದವನು ಸಲಿಸುತ ನೀನೀ ನಿಲಯದಿ ಸೇರಿದಿ 1 ಮಾಕಳತ್ರ ಮಮತಾನರಮೋಹ ನಿ- ರಾಕರಿಸಖಿಳ ಸುಖಾಕರನೆ ಸ್ವೀಕರಿಸೆನ್ನಯ ಸರ್ವ ಸಮರ್ಪಣ ಬೇಕು ಸರ್ವದಾ ತ್ವಜನ ತರ್ಪಣ 2 ಭೂರಮೇಶ ಗೃಹದ್ವಾರದಿ ನೀ ನೆಲೆ- ದೋರಲು ದುರಿತವು ಸೇರದಲೆ ದೂರೋಡುವದೆಂದರಿತು ನಂಬಿದೆನು ನೀರಜಾರಮಣ ಶೇಷ ಗಿರೀಶ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಮಹಿಷಿ ಅಶ್ವತ್ಥನಾರಾಯಣ ದೇವರು) ತಪ್ಪಾ ಕ್ಷಮಿಸು ಕಲ್ಪತರುರೂಪ ತವಪಾದ- ಕೊಪ್ಪಿಸಿದೆನು ಯೆನ್ನನು ಅಪ್ಪಳಿಸಖಿಳಾಂತರಾಯವತಿದಯದಿ ತಿ- ಮ್ಮಪ್ಪರಾಜನೆ ನೀನೆಂದರಿತು ಬಂದಿರುವೆನು ಪ. ಮಂಗಲ ಮಹಿಮೆ ಮಾತಂಗ ವರದ ಶುಭ ತುಂಗಾತೀರದಿ ನಿಂದು ತಾರಕನೆಂದು ಭವ ಭಯ ಭಂಗದ ಮಹಿಮನೆಂದರಿತು ಬಂದಿಹೆನಿಂದು ಅಂಗದಾದಿ ದೇವೇಂದ್ರ ಸಂಸ್ತುತ ತುಂಗಬಲ ಹನುಮತ್ಪ್ರತಿಷ್ಠಿತ ಅಂಗುಟಾಗ್ರದೊಳಖಿಳಪಾವನ ಗಂಗೆಯನು ಪಡದಾದಿ ಪುರುಷ 1 ಪಾವಕ ದಿಋಖ(?) ದೇವ ಸತ್ಸುಖಗಣ ಭಾವನ ಭಜಕೇಷ್ಟಸಿದ್ಧಿದನೇ ಮಾವನ ಮಗನೊಳಗುಸುರಿದ ನುಡಿಯನು ಕಾವೆನಿಂದಿರುವಿಲ್ಲಿ ಕರುಣಾವಾರಿಧಿ ಕೃಷ್ಣಾ ಈ ವಸುಂಧರೆಯಲ್ಲಿ ಘಟಿಸುವ ನೋವುಗಳ ಸಂಬಂಧಗೊಳಿಸದೆ ಶ್ರೀವನಿತೆಯೊಡಗೂಡಿ ನಿನ್ನ ಕ- ರಾವಲಂಬನವಿತ್ತು ಕರುಣಿಸು 2 ತ್ರಿವಿಧ ತಾಪಗಳು ಭರಿಸಲಾರದೆ ವಂದು ನೆವನದಿಂದಲಿ ಬಂದು ನುಡಿದೆನಿಂದು ಪವಮಾನವಂದಿತ ಪತಿತ ಪಾವನನೆ ನೀ- ವಹಿಸಿ ರಕ್ಷಿಪುದೆಂದು ಒರೆವೆನು ಗುಣಸಿಂಧು ವಿರಿಂಚಿ ರಮಾ ವರಪ್ರದ ಭಾರ ನಿನ್ನಲಿರಿಸಿದವನನು ತವಕದಲಿ ಕಾಪಾಡು ವೆಂಕಟ ಮಹಿಷಿ ಕ್ಷೇತ್ರ ಪಾಲನ3
--------------
ತುಪಾಕಿ ವೆಂಕಟರಮಣಾಚಾರ್ಯ
(ಷೋಡಶೋಪಚಾರ ಪೂಜಾ ಕೀರ್ತನೆಗಳು) ಧ್ಯಾನಿಸಲರಿಯೆ ನಿನ್ನ ಶ್ರೀನಿವಾಸ ಪ ಧ್ಯಾನಿಸಲರಿಯೆನು ದೀನಮಂದಾರ ನಿ- ತ್ಯಾನಂದ ಮೂರ್ತಿಯಂದರಿತು ಹೃದಯದೊಳು ಅ.ಪ ಕ್ರಮದಿ ಪ್ರತ್ಯಾಹಾರದಿ ಭ್ರಮಗೊಳಿಸುವ ಮನವ ನಿಲಿಸಿಧಾರಣೆಯನು- ಪಮ ಸಮಾಧಿಯಲಿ ಹಂಮಮಯಂಬುವದು ಬಿಟ್ಟು 1 ಪರಿಪರಿಶಾಸ್ತ್ರ ವೇದ ಪುರಾಣಗಳ ತರತಮ ಭೇದಾಭೇದದರುವಿಗೆ ಸಾಕ್ಷಿಯಾ- ಚರಣಕಮಲವರಿತು 2 ಮದಮತ್ಸರಾದಿಗಳು ಕೂಡಿಯನ್ನನು ಬಾಧಿಸುತಿಪ್ಪವು ಅನುದಿನವು ಸದಮಲಾತ್ಮಕ ಶ್ರವಣ ಮನನಗಳರಿಯೆ ಮೋ- ಹದ ಕೂಪದಲ್ಲಿ ಬಿದ್ದೆ ಗುರುರಾಮ ವಿಠಲನೆ 3
--------------
ಗುರುರಾಮವಿಠಲ
ಅಧ್ಯಾಯ ಐದು ಶ್ರೀ ಕಾಲಿಯ ಫಣಾರ್ಪಿತ ಪಾದಾಂಬುಜಾಯನಮ ಶ್ರೀ ಗುರುಭ್ಯೋನಮಃ ಪದ, ರಾಗ ಸೌರಾಷ್ಟ ತಾಳ ತಿವಿಡೆ ಸ್ವರ ಋಷಭ ಬಿಡದೆ ಕೃಷ್ಣನ ಅಪ್ಪಿ ತಾಯಿಯು ನಡದಳಾ ಗೃಹಕಾರ್ಯದಲ್ಲೆ ನಡೆದವನು ಜೋಡ್ಯರಡು ಮತ್ತೀ ಗಿಡಗಳಿದ್ದಲ್ಲೇ ನಡೆದವುಗಳ ಮತ್ತವು ತಡದು ಅಡ್ಡಾಯಿತು ಊಲೂಬಲ ಕಡಕಡೆನುತಲಿ ಕಡದು ಬಿದ್ದವುಗಿಡಗಳವು ಎರಡು|| 1 ಪತಿತ ವೃಕ್ಷಗಳಿಂದ ಹೊರಟರು ಅತಿಸುರೂಪರು ಅತಿ ಮದೋನ್ಮತ್ತರು ಕುಬೇರನ ಸುತರು ಮಂಚೆವರು| ಪೃಥಿವಿಯಲಿ ತರುಜನ್ಮಕೊಂಡರು ಪ್ರಥಮ ನಳಕೂಬರನು ಎನಿಸುವ ದ್ವಿತಿಯ ಮಣಿಗ್ರಿವಾ|| 2 ವೃಕ್ಷ ಜನ್ಮದಿ ಮುಕ್ತರಾದರಧೋಕ್ಷಜನ ದಯದಿಂದ ಇಬ್ಬರು ವೃಕ್ಷ ಶಬ್ದವ ಕೇಳಿ ನೆರೆದರು ಆ ಕ್ಷಣಕೆ ಜನರು ಲಕ್ಷ್ಮಿ ಇಲ್ಯಲ್ಲರಿಗೆ ಹರಿ ಪುತ್ಯಕ್ಷ ಅಲ್ಲಿರಲು|| 3 ತನ್ನ ಮಗನಾಟವನು ತಿಳಿಯದೆ ಚನ್ನಿಗನು ಆನಂದಗೋಪನು ಮುನ್ನವನು ಕರಕೊಂಡು ನಡಿದನು ಕಣ್ಣಿಯನು ಬಿಟ್ಟಿ|| ಆದಾವೆಂದು ಚಿಂತಿಸಿ ತನ್ನ ಮನದೊಳಗೆ 4 ಹೂಡಿ ಭಂಡಿಗಳನ್ನು ಮರುದಿನ ಮಾಡಿಸಿದ್ಧವು ಎಲ್ಲರಿಂದಲಿ ಕೂಡಿ ವೃಂದಾವನಕ ಪೋಗುತ ಮಾಡಿದಾಶ್ರಯವು | ನೋಡಿ ಆ ವೃಂದಾವನ ಸ್ಥಳ ಗಾಢ ಹರುಷದಲಿ ಬಾಲರೆಲ್ಲರು ಕೂಡಿದರು ಕುಣಿದಾಡಿದರು ಙಡ್ಯಾಡಿದರು ಅಲ್ಲೆ5 ಸ್ವಚ್ಛ ಯಮುನಾ ತೀರದಲಿ ತನ್ನಿಚ್ಛಿಯಿಂದ ವಿಚಾರ ಮಾಡುವ ವತ್ಸಗಳ ಕಾಯುವನು ತಾ ಶ್ರೀ ವತ್ಸಲಾಂಧನನು| ವಂತ್ಸರೂಪದಿ ಬಂದ ಅಸುರನ ಪುಚ್ಛ ಹಿಂಗಾಲ್ಹಿಡದು ತಿರಿಗಿಸಿ ಉತ್ಸವದಿ ಮ್ಯಾಲೊಗೆದ ಬಿದ್ದಾವತ್ಸಹತವಾಗಿ|| 6 ನಳಿನನಾಭನು ಮುಂದ ಆತರಗಳಿಗೆ ತಾ ನೀರಕುಡಿಸಿ ತೀರದ ಮಳಲಿನೂಳಗಾಡುವನು ಮತ್ತಾ ಗೆಳೆಯರನ ಕೂಡಿ| ಖಳ ಅಸುರ ಬಕಪಕ್ಷಿ ರೂಪದಿ ಸುಳದು ಮೆಲ್ಲನೆ ಬಂದು ಬಾಲಕರೂಳಗಿರುವ ಕೃಷ್ಣನ್ನ ತಾ ಬಾಯ್ವಳಗ ನುಂಗಿದನು||7 ಸುಡುವ ಕೃಷ್ಣನ ಉಂಡು ದಕ್ಕಿಸಿಕೊಳದೆ ಘಾಬರಿಗೊಂಡು ಕಾರಿದನು| ತುಂಡು ಮಾಡಿಯೊಗದಾ||8 ಘಾಸಿ ಆಗದೆ ಉಳದನೆಂದು ತೀಸವಾಗ್ಯಲ್ಲಾರು ಬಹಳುಲ್ಹಾಸವನು ಬಟ್ಟು ಏಸುಕಾಲಕೆ ಬಿಡದೆ ನಮ್ಮನ್ನು ಘಾಸಿಮಾಡದೆ ಗುರು ಅನಂತಾದ್ರೇಶ ರಕ್ಷಿಸುವೋನು ಎಂದು ಆ ಸಮಯದಲ್ಲಿ 9 ಪದ್ಯ ಸಾಧು ಹಿತಕರ ಕೃಷ್ಣಯಾದವರಲ್ಯವ ತರಿಸಿ ಐದು ವರ್ಷಾದ ಮ್ಯಾಲ್ಕಾಯ್ದನು ಆಕಳುಗಳನು ಆದರದಿ ಮತ್ತು ರಾಮಾದಿಗಳಕೂಡಿ ಬೇಕಾದ ಆಟಗಳಾಡಿ ಅನುಸರಿಸಿ ಆ ಧೇನುಕಗಳ ಕೂಡಿ ಸ್ವಾದು ಫಲಗಳು ಕೋಮಲಾದ ತೃಣ ಇದ್ದಲ್ಲೆ ಆದಿಯಲಿ ಬಲರಾಮ ಹಾದಿಯನು ಮಾಡಿ ಮುಂಧೋದ ಆ ಸ್ಥಳಕ್ಕೆ || 1 ನೋಡ್ಯಲ್ಲೆ ತಾಳಾಖ್ಯ ಪ್ರೌಢ ವೃಕ್ಷಗಳನ್ನು ಆ ಫಳಗಳನ್ನು ಪ್ರೌಢಫಲಗಳು ನೋಡಿ ಅಬ್ಬರದಿಂದ ಓಡಿ ಬಂದನು ಅಸುರ ಕೂಡಿ ತನ್ನವರಿಂದ ಕಾಡ ಖರರೂಪಿ ಅವ ಮಾಡಿ ಕ್ರೂರಧ್ವನಿಯ ಮಾಡಿದನು ಮೂಢಧೇನುಕನು 2 ಖಡುಕೋಪದಲಿ ರಾಮ ಹಿಡಿದು ಹಿಂಗಾಲುಗಳ ತಡಿಯದಲೆ ತಿರಿವ್ಯಾಡಿ ಗಿಡದ ಮ್ಯಾಲೊಗದ ಆ ಗಿಡಕ ಭಾರಾಗ್ಯವನು ಗಿಡಸಹಿತ ಪ್ರಾಣ ವನು ಬಿಡುತಲೆ ಬಿದ್ದನು ತೆಳಗೆ ತಡವು ಇಲ್ಲದಲೆ| ಬಿಡದೆ ವಸುದೇವಜರು ಬಿಡಿ ಮೆಂದಿಗಳ ಕೊಂಡು ಖಡು ಹರುಷದಿಂದಲ್ಲೆ ಬಿಡದೆ ಗೋಪಾಲರಿಂದೊಡಗೂಡಿ ಎಲ್ಲಾರು ಖಡು ರುಚಿಕರಾಗಿರುವ ಗಿಡದ ಫಲಗಳ ತಿಂದು ನಡದರಾಲಯಕೆ|| 3 ಬಂದು ದಿನದಲಿ ದಿವಿಜವಂದಿತನು ಶ್ರೀ ಕೃಷ್ಣವಂದಿಸ್ಯಗ್ರಜಗ ಅವನ ಮಂದಿರದಲಿಟ್ಟು ಬಹು ಛಂದವಾಗಿರುವ ಕಾಳಿಂದಿಯಾ ತೀರದಲಿ ಬಂದÀ ಗೋಗೋಪಾಲ ವೃಂದವನು ಕಾಲಂದಿಯಲಿ ವಿಷಜಲವು ಛಂದಾಗಿ ಕುಡದುಮರಣ ಬದಿಕಿಸಿದ ಗೋವಿಂದ ಎಲ್ಲಾರನಾ|| 4 ಚಾರು ಕಾಲಿಂದಿಯಲಿ ನೀರು ವಿಷವಾದಕ್ಕೆ ಕಾರಣ ಹುಡುಕುವೆನೆಂದ ಶೌರಿಸುತ ಶ್ರೀಕೃಷ್ಣಸಾರ ಕಡಹಾಲ ಮರನೇರಿ ಆ ಮಡಿವಿನಲಿ ಹಾರಿದಾಕ್ಷಣಕ್ಕೆ ಉಕ್ಕೇರಿದಳು ಸಾರ ಮದಗಜದಂತೆ ನೀರೊಳಗೆ ಗಡಬಡಿಸಿ ಸಾರ ಸರ್ಪನ ಹಿಡಿದ ಕ್ರೂರನವ ಮೈಮ್ಯಾಲೇರಿ ಕಚ್ಚುತ ತನ್ನ ಶರೀರಪಾಶದಿ ಹರಿ ಶರೀರ ಸುತ್ತಿದನು||5 ದುಷ್ಟಾಹಿಯಿಂದ ನಿಶ್ಚೇಷ್ಟನಾದನು ಕೃಷ್ಣದೃಷ್ಟಿಯಿಂದಲಿ ನೋಡಿ ಅಷ್ಟು ಗೋಗಳು ಮತ್ತೆ ಅಷ್ಟೆಗೋಪಾಲಕರು ಕಷ್ಟವನು ಬಟ್ಟು ಉತ್ಕøಷ್ಟ ತಾಪದಲೆ ನಿಶ್ಬೇಷ್ಟರಾದರು ಅಲ್ಲೆ ಕಾಷ್ಟಮೂರ್ತಿಗಳಂತೆ ಸ್ಪಷ್ಟತೋರಿದರು| ಗೋಷ್ಟದಲಿ ಮತ್ತೆಲ್ಲ ದುಷಚಿನ್ಹವು ಕಂಡು ಶೇಷ್ಠ ನಂದಾದಿಗಳು ಕÀಷ್ಟದನು ಬಟ್ಟಸಂತುಷ್ಟರಾಮನ ಕೂಡಿ ಅಷ್ಟೂರು ನಡದರಾ ವೃಷ್ಣಿಕುಲ ತಿಲಕ ಶ್ರೀಕೃಷ್ಣ ಇದ್ದಲ್ಲೆ||6 ಮುಂದವನ ತಾಯಿ ಆಕಂದನಾ ಕಂಡು ಕಾಳಿಂದಿಯಲಿ ಧುಮುಕಬೇಕೆಂದು ಧಾವಿಸಲಾಗಿ ಮಂದಗಮನಿಯರೆಲ್ಲ ಹಿಂದಕ್ಕ ಸರಿಸಿದರು ನಂದಗೋಪನ ಹಿಡಿದು ಹಿಂದಕ್ಕ ಸರಿಸಿದನು óಛಂದದಲಿ ರೋಹಿಣಿಯ ಕಂದ ಬಲರಾಮಾ| ಮುಂದೆರಡು ಫಳಿಗಿ ಮ್ಯಾಲೆ ಛಂದಾಗಿ ಎಚ್ಚÀ್ಚರಿಕಿಯಿಂದ ಸರ್ಪನ ಹಿಡಿದು ಹಿಂದೊತ್ತಿ ಹೆಡಿಮೇಲೆ ಛóಂದಾಗಿ ಮಂದ ಹಾಸ್ಯದಿ ನಗುತ ನಂದಸುತ ಕುಣಿದ ಆನಂದದಿಂದಾ|| 7 ಪದ, ರಾಗ:ಆನಂದ ಭೈರವಿ ಆದಿತಾಳ ರಂಗ ಕುಣಿದ ಕಾಳಿಂಗನ ಹೆಡಿಮ್ಯಾಲ ಕಂಗಳಿಂದಲಿ ನೋಡಿ ಹಿಂಗದೆ ಸುರಕಿಲ್ಲ ಸಂಗೀತ ಸಹಿತ ಸಾರಂಗ ಮೃದಂಗ ತಾಲಂಗಳ ನುಡಿಸಿದರು ಹಿಂಗದಲೆ||ಪ ಹಿಂಗದೆ ಯಮುನಿ ತರಂಗಗಳಿಂದಲೆ ಮಂಗಳಾಂಗನ ಪಾದಂಗಳ ತೊಳುವಳು | ಅಂಗಾಲಿಲ್ಯವನು ಕಾಳಿಂಗನ ಮರ್ದಿಸಿ ಮಂಗಳ ಕೂಡುವ ಜಗಂಗಳಿಗೆ | ಮಂಗಳಕರ ಪುಷ್ಟಂಗಳ ದೃಷ್ಟಿಯ ರಂಗಗ ಮಾಳ್ಪರು ಹಿಂಗದೆ ದಿವಿಜರು ಭೃಂಗಕೋಕಿಲ ಮಯೂರಂಗಳು ಮಾಳ್ಪವು ರಂಗನ ಸಂಗಾತ ಸಂಗೀತವು|| 1 ಮುನ್ನಾಗಿ ಬಹುವರ್ಷ ತನ್ನ ಸಂದರ್ಶನವನ್ನು ಬಯಸುವಂಥ ಮಾನ್ಯಾದ ಮುನಿಗಳಿಗೆ ಚೆನ್ನಾಗಿ ಶ್ರೀಹರಿ ತನ್ನ ಕೃಷ್ಣರೂಪವನ್ನು ತೋರಿಸುತ ಪ್ರಸನ್ನನಾಗಿ| ಉನ್ನತವಾಗಿಹ ಪನ್ನಗಾಧೀಶನ ಉನ್ನತವಾಗಿಹ ಘನ್ನ ಹೆಡಿಗಳಲ್ಲಿ| ರನ್ನದಂಥೊಳುವಂಥಾ ತನ್ನ ಪಾದಗಳಟ್ಟು ತನ್ನಂಗಡ ಧಿನ್ನಂ ಗಡ ಧಿಕ್ಕಡ ಥೌ ಎಂದು|| 2 ಎಂತು ವರ್ಣಿಸಲಿ ಅನಂತ ಮಹಿಮಿಯು ಎಂಥವರಿಗೆ ಬಹಿರಂತವ್ರ್ಯಾಪತನಾಗ್ಯನಂತ ಪ್ರಾಣಿಗಳಲ್ಲಿ ನಿಂತಿರುವಾ| ಅಂತ್ಹತ್ತಗುಡದೆ ತನ್ನಂತೆ ತಾ ಕುಣಿದಾಡುವಂಥದಗನ್ಯ ದೃಷ್ಟಾಂತವೆಂಬುದಿಲ್ಲ ಇಂಥ ಎಲ್ಲರು ಭ್ರಾಂತರಾಗಿ|| 3 ಆರ್ಯಾ ಪದ, ರಾಗ :ಜಾಂಗಲಾ ಶ್ರೀ ಪತಿಯೇ ನಮ್ಮ ಪ್ರಾಣಪತಿಯ ಪಾಲಿಸು ಶ್ರೀ ಪತಿಯೆ|| ಪ ಪತಿಯು ಪಾವಿತನಾದ ಹಿತವಾಯಿತು||1 ಫಣಿಯ ಫಣಗಳಲ್ಲಿ ಪ್ರಣಯದಲಿ ಕಾಲಿಟ್ಟ ಶುಣಿಕುಣಿ ದಾಡಿದ್ದು ಗುಣವಾಯಿತು|| 2 ಮುದ್ದು ಮುಖದ ಅನಂತಾದ್ರೀಶ ದುಃಖ ಸಮುದ್ರದಿಂದ ನಮ್ಮನ್ನು ಉದ್ಧಾರ ಮಾಡು 3 ಆರ್ಯಾ ಕೃಷ್ಣ ವೇಣಿಯರ ಕಷ್ಟನೋಡಿ ಶ್ರೀ ಕೃಷ್ಣ ಅವನ ಬಿಟ್ಟನುಬ್ಯಾಗೆ| ಕೃಷ್ಣನೇ ಸಾಕ್ಷಾದ್ದಿಷ್ಣುನೆಂದು ಆ ಕೃಷಸರ್ಪ ನುಡಿದನು ಹೀಂಗೆ|| 3 ಭಕುತಿಯ ಕೊಡು ಮೋಹನಾ|| ಪ ಚನ್ನಾಗಿಕೊಡು ನೀನಿನ್ನಲ್ಲಿ ಧ್ಯಾನಾ||1 ಲೋಕನಾಥನೆ ನಿನ್ನ ತೋಕನೆಂದರಿತು|| 2 ಹರಿಯೆ ಅನಂತಾದ್ರಿ ದೊರಿಯೆ ಎಂದೆಂದು|| 3 ಆರ್ಯಾ ಕಾಳಿಯ ನುಡಿಯನು ಕೇಳುತ ಶ್ರೀ ಪತಿ ಭಾಳ ಪ್ರೇಮದಲಿ ಹೀಗೆಂದಾ | ಹೇಳುವೆ ಕಾಳಿಯ ಕೇಳ್ಯನ್ನಯ ವಚನಾ ಏಳು ಶೀಘ್ರದಲಿ ಇಲ್ಲಿಂದಾ|| 1
--------------
ಅನಂತಾದ್ರೀಶ - ಕಥನಕಾವ್ಯಗಳು
ಅನ್ಯರವಗುಣವ ಪೇಳುವನು ಬಲ್ಲವನೊ ಪ ಭಿನ್ನವಿಲ್ಲದ ನರನೇನ ಪೇಳುವನು ಅ.ಪ ಅನ್ಯರಿಂದಲು ಹೀನ ತಾನಾಗದಿಹನೆ 1 ದುರಿತವನು ತಾನೆ ಹೊರುವವನೆಂಥ ಮರುಳ 2 ಧರೆಯೊಳವನಿಂದಧಿಕ ಪಾಪಿ ಯಾರಿಹರು 3 ದೊರಕುವದು ಎಂದರಿತು ನಡೆವನೆ ಪುಣ್ಯಾತ್ಮ4 ಪೊರೆಯುವ ಸದಾನಂದ ಸುಖದಿ ಪರಮಾತ್ಮ 5
--------------
ಸದಾನಂದರು
ಅಂಬಾ ಮೈದೋರು ಶಾರದಾಂಬಾನಂಬಿದೆ ನಿನ್ನ ಅಂಬಾ ಮೈದೋರು ಶಾರದಾಂಬಾಪತಾಯೆ ಕಮಲಾಸನಜಾಯೆ ನ'ುಸಿದೆ ನಿನ್ನತಾಯೆ ಬಿಡದೆನ್ನನಸೂಯೆ ರಾಗಾದಿಗಳಿಂನೋಯೆ ನೋಡದಿಹರೆ ಮಾಯೆ ಬೇಡಿದವರ'ೀಯೆ ಪಾಪಕರ್ಮಗಳು ಬೇಯೆ ದಾರಿದ್ರವುಸೀಯೆ ಸರ್ವಲೋಕಪ್ರಿಯೆ ಕೃಪಾಲಯೆ 1ಮರತು ನಿನ್ನ ಧ್ಯಾನವ ಬೆರತು ಸತಿಸುತರೊಳು ಕರ್ಮಕಾಮ್ಯವ ಮಾಡಿ ಮರೆತು ಪೋಗಿ ಸುಖವುನರತು ಮೈಯೆಲ್ಲ ಮೋಹತೊರದ ನೊಂದೆನಿದಕೆಹೊರತು ನಾನಿನಿಸು ಪಾಪ ಬರತು ಪೋಗಲಿದರಿತು ಭಕ್ತಿಯ ಭಕ್ತ ಸರಿತೂಕದವನೆ ನೀನು2ಬಂದು ಚಿಕನಾಗಪುರದಿ ನಿಂದು ವರವೆಂಕಟಗಿರಿಚಿಬಂಧು ವಾಸುದೇವಾರ್ಯನೆಂದು ಜನರ ದುರಿತದಂದುಗವಳಿದು ಬಾರೆಂದು ಕರೆದು ಜ್ಞಾನಸಿಂಧು'ನೊಳು ಗೀತಾರ್ಥ'ದೊಂದು ನಿನಗೆ ಸಾಕೆಂದು ಧನ್ಯತೆಯನು ಹೊಂದುಯೆನಿಸಲೆಂದೆಂದೂ 3
--------------
ತಿಮ್ಮಪ್ಪದಾಸರು
ಆತನೇ ಪರಮಾತ್ಮ ಪರತತ್ತ್ವ ಪ್ರಣವನೆಂ-ದರಿತು ಪೂಜಿಸಬಾರದೆಆತನಾ ಪದತೋಯ ಶಿರಸಾ ವಹಿಸಿ ಪಾನ-ದಿಂದಧಿಕರಾದರು - ಜೀವಿಗಳು ಮನುಜ ಪ ದಾನಮುಖದಲಿ ಬಲಿಯ ಬೇಡಿ ಭುವನವನೊಂದುಪದದಿ ಅಳೆದವನಾವನುಮಾನದಾನವನ ನಾಲ್ಮೈಯ ಮುಡಿಗಟ್ಟಿವನಮಾನ ಉಳುಹಿದನಾವನುಮಾನ ಮರುಳಾದವನ ಮರ್ದಿಸಿದ ಬ್ರಹ್ಮಹತ್ಯೆಮಹಿಗೆ ಇಳುಹಿದನಾವನುಭಾನು ಮೊದಲಾದಖಿಳ ಬ್ರಹ್ಮಾಂಡಗಳಿಗೊಂದುಪಾದ ಹೊದಿಸಿದನಾವನು ? 1 ಕೊಟ್ಟ ವರಗಳನೆಲ್ಲ ಕೊಡಹಿ ಬಹು ದನುಜರನುಕುಟ್ಟಿ ಹಾಕಿದನಾವನುದಿಟ್ಟವರ ಕಾಲಾಂಣ(?) ಕಟ್ಟಿ ಮುನಿ ದೈವಗಳ ಪಟ್ಟದರಸು ಅದಾವನುಬೆಟ್ಟದಾತ್ಮಜೆ ಬೆನಕ ಪೆಸರ್ಗೊಂಡು ತನ ನಾಮಗುಟ್ಟಿನಲಿ ನೆನೆಸಿದುದಾವನುಗಟ್ಟಿಯಾಗಿ ಮುನಿಪೆಣ್ಗೆ ಕೊಟ್ಟಿದ್ದ ಶಾಪವನುಬಿಟ್ಟೋಡಿಸಿದನಾವನು ? 2 ಅಖಿಳ ಮಹಿ ನಟಿಸುವ ಮಹಾತ್ಮಕನಾದ ಸಾತ್ತ್ವಿಕನಾವನುಆದಿಯಲಿ ಜಗಂಗಳಿರದಂದು ವಟಪತ್ರಶಯನನಾದ ಮೂಲವದಾವನುಆದಿಕೇಶವ ದೈವವಲ್ಲದಿನ್ನಿಲ್ಲವೆಂದುಆಗಮವು ನುಡಿವುದಾವನನು ? 3
--------------
ಕನಕದಾಸ
ಆತ್ಮನಿವೇದನೆ ನೆಂತು ಪೂಜಿಸಿದೆನೈ ನೀರಜಾಕ್ಷ ಪ ಕಂತುಪಿತ ಎನ್ನ ನೀ ಕಾಯ್ವೆಯೆಂತೊ ಕಮಲಾಕ್ಷ ಅ.ಪ ಗಂಗೆಯುದಕದಿ ಮಿಂದು ಸಿಂಗರದ ಮಡಿಯುಟ್ಟು ಮಂಗಳದ ನಾಮ ಮುದ್ರೆಗಳ ಧರಿಸೀ ಅಂಗಕರಣಗಳ ಶೋಧಿಸಿ ನ್ಯಾಸ ಮಂತ್ರದಿಂ ದಂತ ರಂಗದಿ ಬಿಂಬಮೂರ್ತಿಯ ಚಿಂತಿಸಿದೆನೇ1 ನಿರ್ಮಲೋದಕದಿಂದ ಅಭಿಷೇಚನವ ಗೈದು ನಿರ್ಮಾಲ್ಯ ತೀರ್ಥವನು ಸೇವಿಸಿದೆನೇ ಮರ್ಮವರಿತಾದಿಮೂರ್ತಿಯೆ ನಿನ್ನ ಬಿಂಬವನು ನಿರ್ಮಲಾಂತಃಕರಣ ಪೀಠದಲಿ ನಿಲಿಸಿದೆನೇ 2 ಶುಭ್ರವಸ್ತ್ರಗಳ ಪರಿಮಳ ಗಂಧ ಪುಷ್ಪಗಳ ನಘ್ರ್ಯ ತುಳಸಿಗಳನರ್ಪಿಸಿ ನಲಿದೆನೇ ಅರ್ಭಕನು ನಾ ಕನಕರತ್ನಾಭರಣಗಳನು ಅಬ್ಧಿ ತನಯಳರಮಣ ನಿನಗೆ ಅರ್ಪಿಸಿದೆನೇ 3 ಧೂಪದೀಪಗಳಿಂದ ವಾದ್ಯ ವೈಭವದಿಂದ ರಾತ್ಮನೆಂದರಿತು ನೈವೇದ್ಯವರ್ಪಿಸಿದೆನೇ 4 ವಿವಿಧ ಖಾದ್ಯಗಳಲ್ಲಿ ವಿವಿಧ ರಸ ರೂಪದಲಿ ವಿವಿಧ ಸಾನ್ನಿಧ್ಯಗಳ ಧ್ಯಾನಿಸಿದೆನೇ ಭವರೋಗಪೀಡಿತನು ನಾ ನಿನ್ನ ಹವಣರಿತು ಸುವಿಹಿತ ವಿಧಿಯಂತೆ ಪೂಜಿಸುವ ಪರಿಯೆಂತೋ5 ಸರ್ವಶಕ್ತನು ನೀನು ಸರ್ವಜ್ಞಪತಿ ನೀನು ಸರ್ವದಾ ತೃಪ್ತನೋ ನಿಗಮವೇದ್ಯಾ ಸರ್ವಭೂತಾಂತರ್ಗತನು ನಿನಗೆ ಉಣಬಡಿಸೆ ಗರ್ವಿಶಠನಜ್ಞತಮನೆನಗೆ ವಶವೇ 6 ವೇದಶಾಸ್ತ್ರಗಳ ಗಂಧವನರಿಯೆ ಹರಿಯೆ ನಿನ ಸಾದರದಿ ನಮಿಪೆ ಪೊರೆ ರಘುರಾಮವಿಠಲ 7
--------------
ರಘುರಾಮವಿಠಲದಾಸರು
ಆವಳಿಗೆ ಪೆಣ್ಣೆಂದು ನುಡಿಯುವರೊ ನರರು ಅವಳೆ ಮುರಿದುತಿನ್ವ ರಕ್ಕಸ್ಯೆಂದೆನ್ನಿರೊ ಪ ಮುದ್ದು ಮುಖವನೆ ತೋರಿ ಬುದ್ಧಿನಾಶನ ಗೈದು ಶುದ್ಧಪದ್ಧತಿ ಕೆಡಿಸಿ ಇದ್ದಾಸ್ತಿಯಳಿದು ಬದ್ಧನೆನಿಸಿ ಮುಂದೆ ಬೇಡಿದ್ದು ಕೊಡದಿರೆ ಬಿಡದೆ ಒದ್ದು ನೂಕ್ವದರಿಯದೆ ಶುದ್ಧ ಮೂರ್ಖರಾಗಿ1 ತಂದೆ ತಾಯಿನಗಲಿಸಿ ಬಂಧುಬಳಗ ದೂರೆನಿಸಿ ಮಂದಿ ಮಕ್ಕಳೊಂದುಗಳಿಗೆ ಹೊಂದಿಇರಗೊಡದೆ ತಂದದ್ದೆಲ್ಲ ತಿಂದು ನಿಂದೆಯಾಡುತ ಯಮನ ಬಂಧಕ್ಕಟ್ಟುವುದರಿಯದೆ ಮಂದಮತಿಗಳಾಗಿ 2 ತನುಮನಧನ ಸೆಳೆದು ಘನತೆನಾಶಿಸಿ ಮುಂದೆ ಬಿನುಗರಲಿ ಬಿನುಗೆನಿಸಿ ತಿನುವುದೊಂದಿನದಿ ಮನದರಿತು ನೋಡದಿರು ಘನಮುಕ್ತಿಯನ್ನು ಕೊಡುವ ವನಜಾಕ್ಷ ಶ್ರೀರಾಮನಂ ಘನನೆಂದರಿಯದಲೆ 3
--------------
ರಾಮದಾಸರು
ಇದಕು ಸಮ್ಮತನಾಗೆಲೋ ನೀ ನದಕುನು ಸಮ್ಮತನಾಗೆಲೊ ಪ ಇದು ಅದು ಎಂಬುದರ್ವಿಧವ ತಿಳಿದು ನೀ ನೆದಕುನು ಸಮ್ಮತನಾಗೆಲೊ ಅ.ಪ ಕಡುಸಿರಿಯೆಂಬುದು ಮರವೆಕುಣಿ ಬಡತನವೆಂಬುದು ಅರಿವಿನಮನೆ ಒಡೆತನವೆಂಬುದು ಪಾಪದ ಗೋಣು ದುಡಿತವೆಂಬುವುದು ಜ್ಞಾನದ ಖನಿ ದೃಢದಿಂದರಿದು ಹುಡುಕಾಡಿದರೋ ಳ್ಹಿಡಕೋ ನಿನಗೆ ಹಿತವಾವುದು ನೋಡಿ1 ಕೆಟ್ಟ ಸಂಸಾರ ಹೇಯಮೂತ್ರ ಕುಣಿ ನಿಷ್ಠೆ ಭಕ್ತಿ ಆನಂದಾಮೃತ ಖಣಿ ದುಷ್ಟಜನರ ಸಂಗ ನರಕಕುಣಿ ಶಿಷ್ಟ ಸಜ್ಜನಸಂಗ ಮುಕ್ತಿಮನೆ ನಿಷ್ಠೆಯಿಂದರಿತು ಇಷ್ಟರೊಳಗೆ ನೀ ಇಷ್ಟಕೆ ಬಂದದ್ದು ಹಿಡಕೋ ನೋಡಿ 2 ನರರ ಸೇವೆ ಮಹ ದುರಿತಬೇರು ಶರಣರ ಸೇವೆ ಸ್ಥಿರಸುಖದ ತವರು ಬರಿದೆ ಕೆಡದೆ ಹರಿಚರಣ ಕೋರು ಮರುಳು ಗುಣಗಳೆಲ್ಲ ತರಿದು ತೂರು ಧೀರ ಶ್ರೀರಾಮನ ಚಾರುಚರಣ ಸೇರಿ ಪರಮಪದವಿಯೊಳು ಲೋಲ್ಯಾಡು 3
--------------
ರಾಮದಾಸರು
ಇಂದಿರಾ ರಮಣ ಗೋವಿಂದನಾ ಜ್ಞೆಯ ಪಡೆದು ಬಂದಿರುವ ದಾಸರಿವರು ಪ ಇಂದು ಧರ್ಮದಿ ಹರಿಯ ಬಾಂಧವರ ಗೃಹ ಸ್ವರ್ಣ ಮಂದಿರವಾಗುವುದೆಂದು ಸಂದೇಶ ಕಳಿಸಿರುವ ಅ.ಪ ಸತ್ವ ರಜ ತಮ ಭೇದವಿಹುದು ದಾನಗಳಲ್ಲಿ ಕರ್ತವ್ಯವೆಂದರಿತು ಭಕ್ತಿಯಿಂದ ಉತ್ತಮೋತ್ತಮ ದೇಶ ಪಾತ್ರ ಕಾಲಗಳರಿತು ಪ್ರತ್ಯುಪಕೃತಿಯ ಗಣಿಸದಿತ್ತ ದಾನವೇ ಶ್ರೇಷ್ಠ 1 ಶ್ರಾವಣದ ಶನಿವಾರ ಶ್ರೀ ವ್ಯಾಸರಾಜರ ಮಾಧವ ದೇಶಕಾಲ ಪಾತ್ರ ಈ ವಿಧದ ಯೋಗವಿನ್ಯಾವ ಜನಗಳಿಗುಂಟು ನೀವು ನೀಡುವ ದಾನ ಕಾವುದಾಪತ್ತಿನಲಿ 2 ಒಂದು ಹಿಡಿಯವಲಕ್ಕಿ ತಂದಿತಾ ಬ್ರಾಹ್ಮಣಗೆ ಎಂದೂ ಕೇಳದ ಸಕಲ ಸೌಭಾಗ್ಯವ ಇಂದು ನೀಡಿರಿ ಮಿತ್ರ ಬಾಂಧವರೆ ದೇವಕಿಯ ಕಂದನ ಪ್ರಸನ್ನತೆಯ ಬಂದು ಪಡೆಯಲಿಬಹುದು 3
--------------
ವಿದ್ಯಾಪ್ರಸನ್ನತೀರ್ಥರು
ಇಂದಿರೇಶ ನಿನ್ನ ಚರಣದ್ವಂಧ್ವವನ್ನು ಬಿಡೆನೊ ಕರುಣಾ ನೊಂದಿರುವೆನೊ ಮನದಿ ಬಹಳ ಹಿಂದುಮುಂದು ತೋರದಿಹುದು ಬಂಧು ಬಳಗವೆಲ್ಲ ನೀನೆ ಎಂದಿಹೆನೊ ಅರವಿಂದಲೋಚನ ಅ.ಪ ಊರು ಊರು ಸುತ್ತಿ ದಣಿದು ಸಾರರಹಿತ ಶಾಸ್ತ್ರಗಳ ವಿ ಕಾಲ ಕಳೆದೆನೋ ಉದಾರಚರಿತ ಭೂರಿ ಕರಣದಿಂದ ನಿನ್ನ ಚಾರುಚರಣ ಸೇವೆ ರುಚಿಯು ತೋರಿ ಮನಕೆ ಸಂತಸದಿ ಮುರಾರಿ ಎನಗೆ ಗತಿಯೆನುತಲಿ 1 ದುರಿತ ಸ್ತೋಮಗಳಲಿ ಮುಳುಗಿ ಬಳಲಿದೆನೊ ನಿಸ್ಸೀಮ ಮಹಿಮ ನಾಮಸ್ಮರಣ ಮಾತ್ರದಿಂದ ಪಾಮರ ಜನರುಗಳ ಯೋಗ ಕ್ಷೇಮ ವಹಿಸಿ ಪೊರೆಯುವಂಥ ಕಾಮಧೇನು ನೀನೆಂದರಿತು 2 ಮಾತಿನಲ್ಲಿ ಮಲ್ಲರೆಂದು ಖ್ಯಾತಿ ಪಡೆದ ಜನಗಳಿರಲು ಯಾತರವನು ಇವನು ಎನ್ನದಿರು ದೂತ ಪ್ರಸನ್ನನೇ ಸೋತು ವಿವಿಧ ಕಾರ್ಯಗಳಲಿ ಆತುರದಲಿ ನಿನ್ನ ಪರಮ ಪ್ರೀತಿಯ ಪಡೆಯುವುದೇ ದೊಡ್ಡ ನೀತಿಯೆಂದು ಅರಿತು ಸತತ 3
--------------
ವಿದ್ಯಾಪ್ರಸನ್ನತೀರ್ಥರು
ಈಗಿದ್ದ ಇರವೇ ಮನುಜರಿಗೆ ಈಗಿದ್ದ ಇರವೇ ? ಪ ಮಾಯಾಪ್ರಪÀಂಚದ ಬಲೆಯ ಪಾಶಕ್ಕೆ ಸಿಕ್ಕಿ ಕಾಯದೊಳಿಹ ಪರಮಾತ್ಮನನರಿಯದೆ ಅ.ಪ. ನರರ ಯೋನಿಗೆ ಬಂದು ನಡತೆ ಸಜ್ಜನರೆಂದು ಬರಿಯ ಬನ್ನಣೆಯೊಳು ಬೆರೆತಿಹರಲ್ಲದೆ ಶರೀರ ಸುಖವನ್ನೆಲ್ಲ ಮರೆತು ತನ್ನಾತ್ಮನೊಳಿರುವ ಸುಖವು ತಾನು ಬಯಸಬೇಕಲ್ಲದೆ ಈಗಿದ್ದ 1 ಮಂದಮತಿಗಳಾಗಿ ಮಮತೆಮಾರ್ಗಕೆ ತಾಗಿ ಅಂದಣದೈಶ್ವರ್ಯ ಬಯಸುವವರಲ್ಲದೆ ಹೊಂದಿಸಿ ಸಚ್ಚಿದಾನಂದ ಬ್ರಹ್ಮದಿಮನ ಬಂದಾಗಿ ನಲಿಸಿ ವಿರಕ್ತಿಯ ಬಂದಿಯೊಳ್ಬಲಿಸಿ ನಿಂದು ನಿಜದ ನಿರುಪಮನೆ ನಿತ್ಯಾತ್ಮನೆ ಎಂದು ಕುಂದದೆ ಸಹಜಾನಂದನಾಗದ ಮೇಲೆ ಈಗಿದ್ದ 2 ಪರಮಪುರುಷರಾದ ಪ್ರಹುಢ ಸಂತರ ಪಾದ ಸ್ಮರಣೆಯ ನಿರುತ ಮಾಡಿರಬೇಕಲ್ಲದೆ ಪರತತ್ವಮಯನಾದ ಗುರುಮಹಾರಾಯನ ಕರುಣವ ಪಡೆದು ಕಣ್ಣಿನೊಳು ಶ್ರೀ ಚರಣವ ಪಿಡಿದು ಬರಿಯಮಾತಲ್ಲವೆಂದರಿತು ಪೂರ್ಣ ಬ್ರಹ್ಮ ಗುರುವಿಮಲಾನಂದ ಭರಿತನಾಗದ ಮೇಲೆ ಈಗಿದ್ದ 3
--------------
ಭಟಕಳ ಅಪ್ಪಯ್ಯ