ಒಟ್ಟು 6 ಕಡೆಗಳಲ್ಲಿ , 6 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಸುರ ಬಾಧಿಸುತಿರಲು ಋಷಿಗಳು ಸ್ತುತಿ ಮಾಡೆ ದಶರಥನ ಗರ್ಭದಲಿ ಜನಿಸಿ ಬಂದೆ 1 ಶಿಶುವಾಗಿ ಕೌಸಲೆಗೆ ಬಾಲಲೀಲೆಯ ತೋರ್ದು ಕುಶಲದಿಂ ನಾಲ್ವರ ಕೂಡೆ ಬೆಳೆದೆ 2 ಅಸುರರನೆ ಬಡಿದಟ್ಟಿ ಋಷಿಯ ಯಾಗವ ಕಾಯ್ದು ವಸುಧೆಯೊಳು ಶಿಲೆಯನ್ನು ಸತಿಯ ಮಾಡಿ 3 ಮಿಥಿಲ ಪಟ್ಟಣಕೈದಿ ಮೃಡನ ಧನುವನೆ ಮುರಿದು ಕರವ ಪಿಡಿದು 4 ಪಥದೊಳಗೆ ಬರುತ ಭಾರ್ಗವರೊಡನೆ ಹೋರಾಡಿ ದಶರಥಗೆ ಏಕೀಭಾವವನೆ ತೋರಿ 5 ಪರಮ ಹರುಷದಲಿ ಸಾಕೇತನಗರಿಗೆ ಬಂದು ಕಿರಿಯ ಮಾತೆಯ ಕಠಿಣ ನುಡಿ ಕೇಳಿ 6 ಚಿತ್ರಕೂಟಕೆ ಬಂದು ಕೃತ್ಯವೆಲ್ಲವ ನಡೆಸಿ ಭ್ರಾತೃ ಭರತನಿಗೆ ಪಾದುಕೆಯನಿತ್ತು 7 ವನದೊಳಗೆ ಸಂಚರಿಸಿ ಘನ ಕಾರ್ಯಗಳ ಮಾಡಿ ಹನುಮನ ಕಳುಹಿ ಮುದ್ರಿಕೆಯ ಕೊಡಲು 8 ಮಿತ್ರೆ ಜಾನಕಿಗರುಹಿ ರತ್ನ ಕೊಂಡು ಬರಲು ಶರಧಿ ಕಟ್ಟಿ 9 ದುಷ್ಟ ರಾಕ್ಷಸ ಕುಲವ ಕುಟ್ಟಿ ಬೇರನೆ ಸವರಿ ಸೃಷ್ಟಿಸುತೆ ಜಾನಕಿಯ ಅಗ್ನಿ ಹೊಗಿಸಿ 10 ಪಟ್ಟಣಕೆ ಬಂದು ಭರತನಿಗೆ ಪೇಳೆ ಅಷ್ಟಗಂಗೆ ಉದಕವನೆ ತಂದು 11 ಅಷ್ಟಋಷಿಗಳು ಎಲ್ಲ ಕೂಡಿ ಕೊಂಡು ಪಟ್ಟಾಭಿಷೇಕವನು ಮಾಡುತಿರಲಂದು 12 ಸೃಷ್ಟಿಯೊಳು ಜಗನ್ನಾಥವಿಠಲನಿಗೆ ಪುಷ್ಪ ವೃಷ್ಟಿಗಳನ್ನು ಕರೆದರಾಗ13
--------------
ಜಗನ್ನಾಥದಾಸರು
ಪತಿ ಎನಿಸಿ | ವೀಣೆಯನು ಪಿಡಿಯುತ್ತಲೀ ||ಕ್ಷೋಣಿ ಬೆಳಗಾವಿ ಬ್ರಾಹ್ಮಣ | ಶ್ರೇಣಿಯಲಿ ನೀ ನಿಂತೆಯೋ ||ಕಾಣೆನೊ ನಿನಗೆಣೆಯ | ಕಾಣೆ ಕರುಣಿಗಳರಸ ಜ್ಞಾನಿ ಜನ ಮನೊವಾಂಛಿತಾ |ಮಾಣದಲೆ ನೀ ನೀವೆ | ಪ್ರಾಣ ಪದಕನೆ ಹನುಮಜ್ಞಾನ ಭಕುತಿಯ ಬೇಡುವೇ 1 ವಾತ ವ್ರಾತ ಕಿನ್ನಣೆಯುಂಟೆಮಾತುಳಾರಿಯ ದೂತ ಜಯೆ ಜಾತಾ ||ಸೋತು ಬಲು ಭವದೊಳಗೆ | ಆರ್ತನಾಗುತ ನಿನ್ನ ಕಾತುರೆತಲಿಂ ಪ್ರಾರ್ಥಿಪೇ 2 ವೃಂದಾವನಾರ್ಯರಿಂದ್ವಂದಿತವು ಎಂದೆನಿಪ ವೃಂದಾವನಿಲ್ಲಿ ಇಹುದೂ |ವೃಂದಾರ ಕೇಂದ್ರ ಜನ | ಬಂದಿಲ್ಲಿ ರಾಜರ |ವೃಂದಾವನರ್ಚಿಸುವರೋ |ನಂದನನು ದಶರಥಗೆ | ನಂದನನು ದೇವಕಿಗೆ | ನಂದನನು ಸತ್ಯವತಿಗೇ |ಒಂದೊಂದು ಹಯಶೀರ್ಷ | ಅಂದರೂಪಗಳಿಂದ ನಂದನನು ಭಕ್ತ ಜನಕೇ 3 ಜೀವಾಂತರಂಗದಲಿ | ಜೀವಾಂತರಾತ್ಮನನ ದ್ವೈವಿಧ್ಯ ರೂಪ ಸೇವಾ |ತಾವಕದಿ ನೀ ಮಾತರಿಶ್ವಾಖ್ಯನೆಂದೆನಿಸಿ ಸೇವಿಸುವೆ ಘರ್ಮೋಕ್ತದಿ ||ಜೀವ ಸಕಲೋತ್ತಮನೆ | ದಾವ ಶಿಖಿ ಭವವನಕೆದೇವ ಬಲಿಭುಜ ಮಾರುತೀ |ದೇವಾದಿ ವಂದ್ಯ ಗುರು | ಗೋವಿಂದ ವಿಠ್ಠಲನಭಾವದಲಿ ತೋರಿ ಪೊರೆಯೊ 4
--------------
ಗುರುಗೋವಿಂದವಿಠಲರು
ಮನುಜಾವತಾರ ಶ್ರೀ ರಾಮನೆಂಬುದು ನಿಜವೆಮುನಿಮನಕೆ ನಿಲುಕದವನುಅನುಪಮನು ನಿಜಜನರನುದ್ಧರಿಸಬೇಕೆಂದುತನುವಿಡಿದು ತೋರಿಸಿದನು ತಾನು ಪದಶರಥಗೆ ಸುತನೆಂಬುದದು ವರವನಿತ್ತುದಕೆಸಸಿನೆ ಬಿಡೆ ಮುಕ್ತಿ ಪಥಕೆಎಸೆದು ವನದೊಳು ಹೊಳೆದುದದು ಮುನಿಗಳೆಲ್ಲರಿಗೆವಶವಾದನೆಂಬ ನೆವಕೆಶಶಿಮುಖಿಯನಗಲಿದುದು ನಿಜ ಭಕ್ತ ರಾವಣನಅಸುರ ಜನ್ಮದ ಭಂಗಕೆಕುಸುಮಶರ ವಶನಾದ ವಾಲಿ ವಧೆಯವನಘವನಶಿಸಿ ನಿಜವೀವದಕ್ಕೆ ನಿಲುಕೆ1ಸುಗ್ರೀವ ಮೊದಲಾದ ವಾನರರ ನೆರಹಿದುದುಸ್ವರ್ಗದವರವರಾಗಲುದುರ್ಗತಿಸ್ಥ ಕಬಂಧ ಮೊದಲಾದವರ ಶಾಪನುಗ್ಗುನುಸಿಯಾಗುತಿರಲುದುರ್ಗರೂಪದ ಮೋಕ್ಷ ಭಜಕರಿಗೆ ವಶವೆಂದುಮಾರ್ಗ ಸೇತುವ ತೋರಲುನುಗ್ಗಿ ಲಂಕಾದ್ವೀಪದೊತ್ತಿನಲಿ ನಿಂದು ಅಪವರ್ಗಧಸಿಗೆಯ ಮಾಡಲು ಕೊಡಲು 2ಕರುಣರಸವೇ ಬಾಣವೆಣಿಸೆ ಪುಷ್ಪಸಮಾನದುರಿತ ಮಾರ್ಜನ ಪಾವನಧರಣಿಯೊಳಗಿರಲೇಕೆ ಪುರವರಕೆ ಬಾಯೆಂದುಕರೆವ ಪರಿಯವರ ಗಾನಧುರದಿ ಸಾಕ್ಷಾತ್ಕಾರಿಪ ಛಲವಿಡಿದ ರಾವಣನುನೆರೆ ತನ್ನ ತಿಳಿದ ಜಾಣತಿರುಪತಿಯ ವೆಂಕಟನು ಸಕಲರಿಗೆ ಮುಕ್ತಿಯನುಕರುಣದಿಂ ಕರೆದಿತ್ತನು ತಾನು 3 ಓಂ ವತ್ಸ ವಾಟೀಚರಾಯ ನಮಃ
--------------
ತಿಮ್ಮಪ್ಪದಾಸರು
ಲಾಲಿ ರಘುಕುಲತಿಲಕ ಲಾವಣ್ಯ ಗುಣಧಾಮ ಪ. ವಿನುತ ಲಾಲಿ ಸುಜನರ ಪಾಲ ಅ.ಪ. ಅಸುರ ಕುಲ ಬಾಧಿಸಲು ವಸುದೇವ ಸುತ ರಕ್ಷ ಹಸನಾಗಿ ಪ್ರಾರ್ಥಿಸಲು ನಿನ್ನ ದೇವತೆಗಳಾಗ ವಸುಧೆ ಭಾರವ ಇಳುಹೆ ಶಿಶುವಾಗಿ ದಶರಥಗೆ ದಶ ದಿಗ್ವಲಯ ಬೆಳಗೆ ದಶಮ ಬಲರಾಮ 1 ಶಿವನ ಧನುವನು ಮುರಿಯೆ ಅವನಿಜೆಯು ಹಾರವನು ಜವದಿ ಹಾಕಲು ಪರಶುರಾಮನ ಗರ್ವ ತವಕದಲಿ ಮುರಿದಯೋಧ್ಯೆಯ ಪಾವನ ಮಾಡೆಂ ದವನಿ ಜಾಲವು ಕೂಗೆ ಸವಿಗಾನದಿಂದ 2 ಮಾತೆ ವಾಕ್ಯವ ಕೇಳಿ ಸೀತೆ ಸಹಿತಲೆ ವನಕೆ ಆತ ಲಕ್ಷ್ಮಣನೊಡನೆನೀತನೀ ತೆರಳೆ ದೂತ ರಾವಣನ ಹತವಾತಸುತ ದೂತ ಸಹ ಖ್ಯಾತಿಲಯೋಧ್ಯೆಗೆ ಬಂದ ಶ್ರೀನಾಥ ಶ್ರೀ ಶ್ರೀನಿವಾಸಾ ಲಾಲಿ 3
--------------
ಸರಸ್ವತಿ ಬಾಯಿ
ಶ್ರೀರಾಮ ನಿನ್ನ ಪದಕೆರಗಿ ನಮಿಸಿವೆನು ತೋರೆನಗೆ ನಿಜರೂಪ ಪರಿವಾರ ಸಹಿತ ಪ. ಶ್ರೀ ಗುರುಗಳಿಗೆರಗಿ ಅವರ ಕರುಣಾಬಲದಿ ಈಗ ಈ ಜನ್ಮದಲಿ ನಿನ್ನ ಭಜಿಪೆ ನಾಗಶಯನನೆ ನಿನ್ನ ಜನ್ಮಕರ್ಮದ ದಿನದಿ ಬೇಗ ಬಂದೆನ್ನೊಳಗೆ ನೆಲಸಿದೆಯೊ ದೇವ 1 ನಿನ್ನ ದರುಶನಕೆಂದು ಘನ್ನ ಯೋಗಿಗಳು ಬರೆ ಮನ್ನಿಸೆ ಇರುತಿರಲು ದ್ವಾರಪಾಲಕರು ಇನ್ನವರ ಶಾಪದಲಿ ದೈತ್ಯಕುಲದಲಿ ಜನಿಸೆ ಮುನ್ನವರ ಪೊರೆಯಲು ಭೂಮಿಯೊಳು ಬಂದೆ 2 ದಶರಥಗೆ ಸುತನಾಗಿ ತಾಟಕಿಯ ಸಂಹರಿಸಿ ಅನುಜ ಕುಶಲದಿಂದಲಿ ಶಿಲೆಯ ಹೆಣ್ಣುಗೈಯುತ ಬಂದು ಶಶಿಮುಖಿ ಸೀತೆಯನು ಕರಪಿಡಿದ ದೇವ 3 ಧನುವ ಮುರಿದುದ ಕೇಳೀ ಜಮದಗ್ನಿ ಕುವರನು ನಿನ ಸಂಗಡದಲಿ ಕಾಳಗಕೆ ಬರಲು ದನುಜರಿಗೆ ಭ್ರಮೆಗೊಳಿಸಿ ಕನಲುತಿಬ್ಬರು ಕಾದಿ ಘನಬಲ ಗೆಲಿದಂಥ ಅನುಗುಣನೆ ರಾಮ 4 ಅನುಜ ಸೀತೆ ಸಹಿತದಿ ವನಕೆ ಪ್ರೀತಿಯಿಂದಲಿ ಪೋದೆ ನೀತಿಯನು ತಿಳಿದು ಪಾತಕವ ಹರಿಸುವ ಪರಮ ಪಾವನ ಮೂರ್ತಿ ಈ ತೆರದ ಲೀಲೆಯನು ತೋರಿದೆಯೊ ಜಗಕೆ 5 ಕಂಡು ಮಾಯಾಮೃಗವ ಅಂಡಲೆದು ಅದರೊಡನೆ ಭಂಡ ರಾವಣ ಬಂದು ಭಿಕ್ಷುಕನ ತೆರದಿ ಲಂಡನತದಲಿ ಸೀತೆಯನು ಕದ್ದು ಓಡಲು ಕಂಡು ನಿರ್ಜನ ಗೃಹವ ಬೆಂಡಾದ ರಾಮ 6 ಅನುಜನೊಡನೆ ವನವ ಅಲೆದಲೆದು ಕಂಗೆಟ್ಟು ಘನ ಪಕ್ಷಿಯಿಂದಲಿ ವಾರ್ತೆ ತಿಳಿದು ಹನುಮ ಸುಗ್ರೀವರಿಗೆ ಒಲಿದು ವಾಲಿಯ ಕೊಂದು ವನಿತೆ ಸೀತೆಯನರಸೆ ವಾನರರ ಕಳುಹಿದೆ 7 ಹನುಮನಿಂದಲಿ ಸುಟ್ಟು ದನುಜಪುರ ಉಂಗುರವ ವನಿತೆ ಸೀತೆಗೆ ಕೊಟ್ಟು ವಾರ್ತೆ ತರಿಸಿ ವನಧಿಗೆ ಸೇತುವೆಯ ಕಟ್ಟಿ ವಾನರರೊಡನೆ ದನುಜ ರಾವಣ ಸಹಿತ ರಕ್ಕಸರ ಕೊಂದೆ 8 ಅಗ್ನಿಯಿಂ ಸೀತೆಯನು ಶುದ್ಧಳೆನಿಸಿ ಗ್ರಹಿಸಿ ವಿಘ್ನವಿಲ್ಲದ ಪದ ವಿಭೀಷಣಗಿತ್ತು ಮಗ್ನನಾಗಿರೆ ಭರತ ನಿನ್ನ ಪದಧ್ಯಾನದಲಿ ಅಗ್ನಿಸಖಸುತನೊಡನೆ ವಾರ್ತೆ ಕಳುಹಿಸಿದೆ 9 ಬಂದೆದುರುಗೊಳ್ಳೆ ಭರತನು ಸಕಲ ಪರಿವಾರ ಬಂದಯೋಧ್ಯೆಗೆ ಸಕಲ ಸನ್ನಾಹದಿ ಅಂದು ಸಿಂಹಾಸನದಿ ಪಟ್ಟಾಭಿಷೇಕವಗೊಂಡು ಬಂದ ಭಕ್ತರಿಗೆ ಇಷ್ಟ್ಟಾರ್ಥ ಸಲಿಸಿದೆಯೊ 10 ಕೊಟ್ಟು ಕಪಿಗೆ ಬ್ರಹ್ಮಪಟ್ಟದ ಪದವಿಯನು ಶ್ರೇಷ್ಠನೆನಿಸಿದೆಯೊ ಜಗಕೆ ಬೆಟ್ಟದೊಡೆಯ ಇಷ್ಟ ಶ್ರೀ ಗೋಪಾಲಕೃಷ್ಣವಿಠ್ಠಲ ಎನಗೆಕೆಟ್ಟ ಸಂಸೃತಿ ಬಿಡಿಸಿ ಕೊಟ್ಟಭಯ ಸಲಹೊ 11
--------------
ಅಂಬಾಬಾಯಿ
ಶ್ರೀ ಆಂಗೀರಸ ನಾಮ ಸಂವತ್ಸರ ಸ್ತೋತ್ರ149ಶ್ರೀ ಲಕ್ಷ್ಮೀ ಭೂಮಾ ನೃಸಿಂಹನ್ನ ಆರಾಧಿಸಿಶೀಲ ಉದ್ಭಕ್ತಿಯಲಿ ಸ್ತುತಿಸುವ ಶನೈಶ್ಚರಇಳೆಯಲ್ಲಿ ವಿಂಧ್ಯಾಚಲ ದಕ್ಷಿಣ ದೇಶದಲಿ ಹೊಳೆಯುತಿಹÀರಾಜನಾಗಿ ಆಂಗೀರಸ ಸಂವತ್ಸರದಿ ತಂ ನಮೋ ಪಸೂರ್ಯಛಾಯಾಸೂನುಸೂರಿಸಾಧುಗಳಿಗೆಕಾರ್ಯಾನುಕೂಲ ಸರ್ವೇಷ್ಟ ಪೂರೈಸುವನುಕ್ರಿಯಾ ರೂಪದಿ ವಿಷ್ಣುವರವಾಯು ದೇವನೊಳು ಇರುತಸಂವತ್ಸರ ನಾಯಕರೋಳು ಕ್ರಿಯೆಗಳ ಮಾಡಿಸುವ 1ನರಹರಿಯ ಒಲುಮೆ ಶನಿರಾಜನಲಿ ಬಹು ಉಂಟುನರಕ್ಷೇಮೋಪಾಯ ಅಂದು ದಶರಥಗೆ ಪೇಳಿದ ಪಾದ್ಮದಿಹರಿನಾಮೋಚ್ಛಾರಣೆ, ಶನಿಕೃತ ನೃಹರಿ ಸ್ತೋತ್ರ ಪಠಣದಿಪಾರುಗಾಣುವರು ಸಾಧು ಸಜ್ಜನ ಭಕ್ತರು 2ಅನಂದಮಯ ಹರಿಯು ಆಂಗೀರಸ ಸಂವತ್ಸರದಿಜನರಿಗೆ ಯೋಗ್ಯತಾನುಸಾರ ಸುಖವನ್ನೇಈವಜನರಿಗೆ ಆದಿಯಲಿ ಸುಕ್ಷೇಮ ಕಾಲವು ಕಥೆಯಲ್ಲಿ ದುರ್ಭಿಕ್ಷನೂತನ ವಸ್ತು ಉತ್ಪತ್ತಿ, ಧಾನ್ಯಾದಿಗಳು ಸಮೃದ್ಧಿ ಇದ್ದರೂ ಕ್ಷಾಮ 3ಬ್ರಹ್ಮಪಾರ ಸ್ತೋತ್ರವ ಕಂಡು ಋಷಿಗೆ ಉಪದೇಶಿಸಿದಬ್ರಾಹ್ಮಣೌಷಧಿ ಪತಿಯು ಸುಧಾಮೂರ್ತಿ ಚಂದ್ರಮಹಿಗೆ ಅಹ್ಲಾದವ ನೀವನು ಮಂತ್ರಿಸ್ಥಾನವ ವಹಿಸಿಅಜಸ್ಪತಿ, ಬೃಹಸ್ಪತಿ, ಶನಿಕುಜಗೋಪಾಲಸರ್ವರಿಗೂ ನಮೋ ನಮೋ 4ರಸನೆ ಲೋಲ್ಯಾಟವಾಹನಆಟೋಪ ಹೆಚ್ಚಿದರೂರಸನೆ ಸಹ ಭಕ್ತಿಯೂ ಸಹ ಹೆಚ್ಚುವುದು ಮದುವೆ ಜನನ ಕಡಿಮೆಶಾಸ್ತ್ರ, ವಿಜ್ಞಾನ, ವಿಷ್ಣು ಸಹಸ್ರನಾಮ ಪ್ರತಿಪಾದ್ಯಸರಸಿಜಾನನತಾತಪ್ರಸನ್ನ ಶ್ರೀನಿವಾಸನಲಿ ಶರಣು ಶರಣಾದೆ5ಶ್ರೀ ಲಕ್ಷ್ಮೀ ಭೂಮಾ ನೃಸಿಂಹನ್ನ ಆರಾಧಿಸಿಶೀಲ ಉದ್ಭಕ್ತಿಯಲಿ ಸ್ತುತಿಸುವ ಶನೈಶ್ಚರಇಳೆಯಲ್ಲಿ ವಿಂಧ್ಯಾಚಲ ದಕ್ಷಿಣ ದೇಶದಲಿ ಹೊಳೆಯುತಿಹರಾಜನಾಗಿ ಆಂಗೀರಸ ಸಂವತ್ಸರದಿ ತಂ ನಮೋ ಪ
--------------
ಪ್ರಸನ್ನ ಶ್ರೀನಿವಾಸದಾಸರು